Tag: VC

  • ಮಂಡ್ಯ ವಿಸಿ ನಾಲೆಗೆ ಕಾರು ಬಿದ್ದು ಓರ್ವ ಸಾವು

    ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಮಂಡ್ಯದ (Mandya) ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಜರುಗಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

    ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಶಿಫ್ಟ್ ಕಾರು (Swift Car) ಉರುಳಿದೆ. ಇದರಿಂದ ಕಾರು ಸಂಪೂರ್ಣ ಜಖಂ ಆಗಿದೆ. ಈ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಮೃತ ಹಾಗೂ ಗಾಯಗೊಂಡ ವ್ಯಕ್ತಿಯ ವಿಳಾಸ ಇನ್ನೂ ತಿಳಿದು ಬಂದಿಲ್ಲ.

    ಗಾಯಗೊಂಡ ವ್ಯಕ್ತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ವಿಸಿ ನಾಲೆಯ‌ ಹಲವು ಕಡೆ ತಡೆಗೋಡೆ ಇಲ್ಲದ ಕಾರಣ ಇಂತಹ ಘಟನೆಗಳು ಪದೇ ಪದೇ ಜರುಗುತ್ತಿದ್ದು, ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಿದ್ದರೂ ಸಹ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚು ಗಮನವರಿಸುತ್ತಿಲ್ಲ. ಇದನ್ನೂ ಓದಿ: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಮಗಳನ್ನೂ ಎಳೆದಾಡಿದ್ರು!

  • ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್ Rank, ನ್ಯಾಕ್ ಮಾನ್ಯತೆ- ಕುಲಪತಿಗಳಿಗೆ ಡಿಸಿಎಂ ಡೆಡ್‍ಲೈನ್

    ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್ Rank, ನ್ಯಾಕ್ ಮಾನ್ಯತೆ- ಕುಲಪತಿಗಳಿಗೆ ಡಿಸಿಎಂ ಡೆಡ್‍ಲೈನ್

    – ಕ್ರಿಯಾ ಯೋಜನೆ ರೂಪಿಸಲು ಸೂಚನೆ

    ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಕಾಲೇಜುಗಳ ನ್ಯಾಕ್ ಮಾನ್ಯತೆ, ಎನ್‍ಐಆರ್‍ಎಫ್ Rank ಪಡೆಯುವ ಸಂಬಂಧ 15 ದಿನಗಳ ಒಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಡೆಡ್‍ಲೈನ್ ವಿಧಿಸಿದ್ದಾರೆ. ಈ ಮೂಲಕ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವತ್ತ ವೇಗದ ಹೆಜ್ಜೆ ಇಟ್ಟಿದ್ದಾರೆ.

    ಸೋಮವಾರ ನಗರದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿ, ಸುಮಾರು 3 ಗಂಟೆಗೂ ಹೆಚ್ಚು ಸಮಯ ಸಮಾಲೋಚನೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) Rank ಹೊಂದಿರಬೇಕು ಹಾಗೂ ಪ್ರತಿ ಕಾಲೇಜಿಗೂ ನ್ಯಾಕ್ ಮಾನ್ಯತೆ (NAAC Accreditation) ಇರಲೇಬೇಕು ಎಂದರು.

    ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ Rank-ಮಾನ್ಯತೆ ಅಗತ್ಯ ಎಂದು ಕುಲಪತಿಗಳಿಗೆ ಡಿಸಿಎಂ ಸಲಹೆ ನೀಡಿದರು.

    ಮುಂದಿನ 3 ವರ್ಷಗಳಲ್ಲಿ ಯಾವ್ಯಾವ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು, ಎನ್‍ಐಆರ್‍ಎಫ್ Rank, ನ್ಯಾಕ್ ಮಾನ್ಯತೆ ಪಡೆಯಲು ಏನೆಲ್ಲ ಸಿದ್ಧತೆ ನಡೆಸಲಾಗುವುದು ಎಂಬ ವಿವರಗಳನ್ನು ಕ್ರಿಯಾ ಯೋಜನೆಯಲ್ಲಿ ಉಲ್ಲೇಖಿಸಿ ಮುಂದಿನ ಸಭೆಯಲ್ಲಿ ತಿಳಿಸಬೇಕು ಎಂದರು.

    ಎನ್‍ಐಆರ್‍ಎಫ್ Ranking- ನ್ಯಾಕ್ ಮಾನ್ಯತೆಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ. ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಬೇಕಾದರೆ, ಹೆಚ್ಚು ಅನುದಾನ ಪಡೆಯಬೇಕಾದರೆ ಇವು ಅಗತ್ಯ. ಉನ್ನತ ಶಿಕ್ಷಣವನ್ನು ತಳಮಟ್ಟದಿಂದಲೇ ಬಲಿಷ್ಠಗೊಳಿಸಬೇಕಾದರೆ ಇವೆಲ್ಲ ಅಂಶಗಳು ಅಗತ್ಯ ಎಂದು ಹೇಳಿದರು.

    ಸದ್ಯಕ್ಕೆ ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‍ಸಿ)ಯು ಎನ್‍ಐಆರ್‍ಎಫ್ Ranking ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ. ಮುಂದಿನ ಬಾರಿ Ranking ಪಟ್ಟಿ ಸಿದ್ಧವಾಗುವ ಹೊತ್ತಿಗೆ ಮೈಸೂರು ವಿವಿ 20ರೊಳಗಿನ ಸ್ಥಾನಕ್ಕೆ, ಬೆಂಗಳೂರು ವಿವಿ 50ರೊಳಗಿನ ಸ್ಥಾನಕ್ಕೆ ಬರಬೇಕು. ವಿಟಿಯು ಕೂಡ ಇನ್ನೂ ಉತ್ತಮ ಸ್ಥಾನಕ್ಕೆ ಬರಬೇಕು ಎಂದು ಡಿಸಿಎಂ ಕುಲಪತಿಗಳಿಗೆ ತಾಕೀತು ಮಾಡಿದರು. ಅಲ್ಲದೆ ಇದೇ ಪಟ್ಟಿಯಲ್ಲಿ ತುಮಕೂರು ಮತ್ತು ಮಂಗಳೂರು ವಿವಿಗಳು 150ರೊಳಗಿನ ಸ್ಥಾನದಲ್ಲಿವೆ. ಉಳಿದ ಯಾವ ವಿವಿಗಳಿಗೂ ಈ Rank ಸಿಕ್ಕಿಲ್ಲ. ಕೊನೇಯ ಪಕ್ಷ ಅದರ ಚೌಕಟ್ಟಿನೊಳಗೆ ಬಂದಿಲ್ಲ ಎಂದರು.

    ಬೋಧನೆ, ಕಲಿಕೆ, ಸಂಪನ್ಮೂಲ ಸಂಗ್ರಹ, ಸಂಶೋಧನೆ ಮತ್ತು ವೃತ್ತಿಪರತೆ, ಫಲಿತಾಂಶ, ಜನರನ್ನು ತಲುಪುವ ರೀತಿ ಹಾಗೂ ಅದೇ ಜನರನ್ನು ಒಳಗೊಳ್ಳುವ ರೀತಿಯೂ ಸೇರಿದಂತೆ ಪ್ರಮುಖ ಐದು ಅಂಶಗಳನ್ನು ಆಧಾರವಾಗಿ ಇಟ್ಟಿಕೊಂಡು ಎನ್‍ಐಆರ್‍ಎಫ್ Ranking ನೀಡಲಾಗುತ್ತದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    3 ವಿವಿಗಳಿಗೆ ಅರ್ಹತೆಯೇ ಇಲ್ಲ:
    ರಾಜ್ಯದ ಸರ್ಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್‍ಐಆರ್‍ಎಫ್ Ranking ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಎ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿಕೊಂಡಿದ್ದು, ಇನ್ನು 4 ವಿವಿಗಳು ಅರ್ಜಿಯನ್ನೇ ಹಾಕಿಲ್ಲ. 3 ವಿವಿಗಳು ಎನ್‍ಐಆರ್‍ಎಫ್ Ranking ಗೆ ಅರ್ಹತೆಯನ್ನೇ ಹೊಂದಿಲ್ಲ ಎಂದು ಮಾಹಿತಿ ಬಿಚ್ಚಿಟ್ಟರು.

    ರಾಜ್ಯದಲ್ಲಿ ಒಟ್ಟು 430 ಕಾಲೇಜುಗಳಿದ್ದು, ಕೇವಲ 50 ಕಾಲೇಜುಗಳಿಗೆ ಮಾತ್ರ ನ್ಯಾಕ್ ಮಾನ್ಯತೆ ಸಿಕ್ಕಿದೆ. ಕೊನೇ ಪಕ್ಷ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜ್‍ಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕೆನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅಲ್ಲದೆ ಪ್ರತಿ ವಿವಿ ವ್ಯಾಪ್ತಿಯಲ್ಲೂ ಇಬ್ಬರು ನ್ಯಾಕ್ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ಅವರಿಂದ ಕಾಲೇಜುಗಳಿಗೆ ಕಾರ್ಯಾಗಾರ ಮಾಡಿಸಲಾಗುತ್ತಿದೆ. ಎ-ಅದಕ್ಕೂ ಮೇಲ್ಪಟ್ಟು 9 ಕಾಲೇಜ್, ಬಿ-ಎ ಮಟ್ಟದಲ್ಲಿ 170 ಕಾಲೇಜ್‍ಗಳಿವೆ. ಇನ್ನು ನ್ಯಾಕ್ ಮಾನ್ಯತೆಯನ್ನೇ ಪಡೆಯದ 246 ಕಾಲೇಜ್‍ಗಳಿದ್ದು, ಅರ್ಹತೆಯೇ ಇಲ್ಲದ 26 ಕಾಲೇಜುಗಳಿವೆ. ಸದ್ಯ 9 ಕಾಲೇಜುಗಳ ನ್ಯಾಕ್ ಮಾನ್ಯತೆಗೆ ಅರ್ಜಿ ಹಾಕಿಕೊಂಡಿದ್ದರೆ, ಉಳಿದ 167 ಕಾಲೇನುಗಳಿಗೆ ಅರ್ಹತೆಯೇ ಇಲ್ಲದ ಸ್ಥಿತಿ ಇದೆ. ಇದೆಲ್ಲವನ್ನು ಸುಧಾರಿಸಿ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜುಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.

  • ಬೆಂಗ್ಳೂರು ವಿವಿ ಕುಲಪತಿ ಹುದ್ದೆಗೆ ಭಾರೀ ಡಿಮ್ಯಾಂಡ್- 150 ಆಕಾಂಕ್ಷಿಗಳಿಂದ ಅರ್ಜಿ

    ಬೆಂಗ್ಳೂರು ವಿವಿ ಕುಲಪತಿ ಹುದ್ದೆಗೆ ಭಾರೀ ಡಿಮ್ಯಾಂಡ್- 150 ಆಕಾಂಕ್ಷಿಗಳಿಂದ ಅರ್ಜಿ

    -ಶ್ರೀನಿವಾಸ್ ರಾವ್ ದಳವೆ
    ಬೆಂಗಳೂರು: ವಿಶ್ವ ವಿದ್ಯಾಲಯದ ಕುಲಪತಿ ಪೋಸ್ಟ್ ಗೆ ಭಾರೀ ಡಿಮ್ಯಾಂಡ್ ಬಂದಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿಸಿ ಪೋಸ್ಟ್ ಗೆ ಯಾವ ಸಿಎಂ ಪೋಸ್ಟ್ ಗಿಂತಲೂ ಕಡಿಮೆ ಇಲ್ಲ ಅನ್ನುವಷ್ಟು ಮಟ್ಟಿಗೆ ಡಿಮ್ಯಾಂಡ್.

    ಕುಲಪತಿಯಾಗಿದ್ದ ಪ್ರೊ.ತಿಮ್ಮೇಗೌಡರ ಅವಧಿ ಫೆಬ್ರವರಿ ಮೊದಲ ವಾರದಲ್ಲಿ ಮುಗಿದಿದೆ. ಈ ಹುದ್ದೆಗೆ ಈಗ ಹತ್ತಲ್ಲ ಇಪ್ಪತ್ತಲ್ಲ, ಬರೋಬ್ಬರಿ 150 ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ.

    ಯಾಕಿಷ್ಟು ಅರ್ಜಿ ಸಲ್ಲಿಕೆ?: ಕಳೆದ ಜನವರಿಯಲ್ಲಿ ಉನ್ನತ ಶಿಕ್ಷಣ ಇಲಾಖೆ, ಖಾಲಿಯಾಗಲಿರುವ ಬೆಂಗಳೂರು ಹಾಗೂ ಮೈಸೂರು ವಿವಿಗಳ ಕುಲಪತಿ ಹುದ್ದೆಗಾಗಿ ಜಾಹೀರಾತು ನೀಡಿತ್ತು. ಹೀಗಾಗಿ ಇಷ್ಟೊಂದು ಅರ್ಜಿಗಳು ಸಲ್ಲಿಕೆಯಾಗಿವೆ.

    ಯಾಕಿಷ್ಟು ಡಿಮ್ಯಾಂಡ್!: ಬೆಂಗಳೂರು ಹೇಳಿ ಕೇಳಿ ಹೈಟೆಕ್ ಸಿಟಿ, ಯಾವುದಕ್ಕೂ ಕೊರತೆ ಇಲ್ಲ. ಹೀಗಾಗಿ ಹೆಚ್ಚು ಜನ ಇಲ್ಲೆ ಕುಲಪತಿ ಆಗಬೇಕು ಅಂತ ಇಚ್ಛಿಸುತ್ತಾರೆ. ಇದಲ್ಲದೆ ಅತೀ ಹೆಚ್ಚು ಕಾಲೇಜುಗಳು ಬೆಂಗಳೂರು ವಿವಿ ಕೆಳಗೆ ಬರುತ್ತವೆ. ಮಾತ್ರವಲ್ಲ ಸರ್ಕಾರದಿಂದ ಹೆಚ್ಚು ಅನುದಾನ ಬರುತ್ತೆ. ಇಷ್ಟೆಲ್ಲದರ ಜೊತೆ ನೆಮ್ಮದಿಯ ಜೀವನ ಸಿಗುತ್ತೆ. ಹೀಗಾಗಿ ಎಲ್ರಿಗೂ ಬೆಂಗಳೂರು ವಿವಿನೇ ಬೇಕು.

    ಆಯ್ಕೆ ಹೇಗೆ?: ಸದ್ಯ ಆಕಾಂಕ್ಷಿಗಳು ಏನೋ ಅರ್ಜಿ ಸಲ್ಲಿಸಿದ್ದಾರೆ. ವಿಸಿ ನೇಮಕ ಸಂಬಂಧ ಸರ್ಚ್ ಕಮಿಟಿಯನ್ನು ರಚಿಸಲಾಗಿದೆ. ಈ ಕಮಿಟಿ ಸದಸ್ಯರು 150 ಆಕಾಂಕ್ಷಿಗಳ ವಿವರ ನೋಡಿ ಅಂತಿಮವಾಗಿ ಮೂವರ ಹೆಸರು ಫೈನಲ್ ಮಾಡಬೇಕು.