Tag: vedha

  • ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

    ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

    `ಭಜರಂಗಿ’, `ವಜ್ರಕಾಯ’, `ವೇದ’ (Vedha)ಸೂಪರ್ ಹಿಟ್ ಸಿನಿಮಾ ಖ್ಯಾತಿಯ ಎ.ಹರ್ಷ (A. Harsha) ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಾಲಿವುಡ್ (Tollywood) ಸ್ಟಾರ್ ನಟ ಗೋಪಿಚಂದ್ (Gopichand) 31ನೇ ಸಿನಿಮಾಗೆ ಸ್ಯಾಂಡಲ್‌ವುಡ್ ಸ್ಟಾರ್ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇಂದು ಗೋಪಿಚಂದ್ ಹಾಗೂ ಹರ್ಷ ಕಾಂಬಿನೇಶನ್ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದ್ದು, ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್ ವತಿಯಿಂದ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

    ಎ.ಹರ್ಷ ಹೆಣೆದ ಔಟ್ ಅಂಡ್ ಔಟ್ ಆ್ಯಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಹೊಸ ಅವತಾರದಲ್ಲಿ ತೆರೆ ಮೇಲೆ ಗೋಪಿಚಂದ್ ಬರುತ್ತಿದ್ದಾರೆ. ಶಿವಣ್ಣ ನಟನೆಯ `ವೇದ’ ಸೂಪರ್ ಸಕ್ಸಸ್ ನಂತರ ಎ. ಹರ್ಷ ಅವರು ತೆಲುಗಿನ ನಟ ಗೋಪಿಚಂದ್ ಜೊತೆ ಕೈಜೋಡಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬಳಿಕ ಮತ್ತೊಬ್ಬ ಕನ್ನಡತಿ ಜೊತೆ ವಿಜಯ್‌ ದೇವರಕೊಂಡ ರೊಮ್ಯಾನ್ಸ್

    ನಿರ್ಮಾಪಕ ಕೆ.ಕೆ.ರಾಧಾಮೋಹನ್ ಮಾತನಾಡಿ ಗೋಪಿಚಂದ್ ಹಾಗೂ ಎ.ಹರ್ಷ ಜೊತೆ ಸೇರಿ ಸಿನಿಮಾ ಮಾಡುತ್ತಿರೋದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದು ನಮ್ಮ ನಿರ್ಮಾಣ ಸಂಸ್ಥೆಯ 14ನೇ ಸಿನಿಮಾ. ನಿರ್ದೇಶಕರು ಪವರ್ ಫುಲ್ ಸಬ್ಜೆಕ್ಟ್ ಇರುವ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೋಪಿಚಂದ್ ಹೊಸ ಅವತಾರದಲ್ಲಿ ಬರಲಿದ್ದಾರೆ. ಇದೇ ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

    ಸ್ವಾಮಿ.ಜೆ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಸಿನಿಮಾದ ತಾರಾಬಳಗ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

  • ತೆಲುಗಿನ `ವೇದ’ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ತೆಲುಗಿನ `ವೇದ’ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಶಿವರಾಜ್‌ಕುಮಾರ್ (Shivarajkumar) ನಟನೆಯ `ವೇದ’ (Vedha) ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸೂಪರ್ ಹಿಟ್ ಆಗಿದೆ. ಈ ಬೆನ್ನಲ್ಲೇ ಟಾಲಿವುಡ್ (Tollywood) ಅಂಗಳದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿದೆ. ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ಬಾಲಯ್ಯ (Balayya) ಅವರು ಸಾಥ್ ನೀಡಿದ್ದಾರೆ. ಈ ವೇಳೆ ಅಪ್ಪು ಅವರನ್ನ ನೆನೆದು ಶಿವಣ್ಣ-ಬಾಲಯ್ಯ ಭಾವುಕರಾಗಿದ್ದಾರೆ. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

    ಶಿವಣ್ಣ ಕುಟುಂಬದವರಿಗೂ ಮತ್ತು ಬಾಲಯ್ಯ ಕುಟುಂಬಕ್ಕೂ ಸಾಕಷ್ಟು ವರ್ಷಗಳಿಂದ ಒಳ್ಳೆಯ ಒಡನಾಟವಿದೆ. ಸಿನಿಮಾಗೂ ಮೀರಿ ಆತ್ಮೀಯ ಒಡನಾಟವಿದೆ. ಹಾಗೆಯೇ ಸಿನಿಮಾ ಅಂತಾ ಬಂದಾಗ ಒಬ್ಬರ ಚಿತ್ರಕ್ಕೆ ಮತ್ತೊಬ್ಬರು ಸಾಥ್ ನೀಡುತ್ತಾರೆ. ಈಗ ತೆಲುಗಿನಲ್ಲಿ ಅಬ್ಬರಿಸಲು `ವೇದ’ ಅಬ್ಬರಿಸಲು ʻವೇದʼ ಚಿತ್ರ ರೆಡಿಯಾಗಿದೆ. ಇದೇ ಫೆ.9ಕ್ಕೆ ಸಿನಿಮಾ ತೆಲುಗಿನಲ್ಲಿ ಅಬ್ಬರಿಸಲಿದೆ. ಹೀಗಿರುವಾಗ ಶಿವಣ್ಣ ಸಿನಿಮಾ ಪ್ರಚಾರ ಕಾರ್ಯಕ್ರಮ ಬಾಲಯ್ಯ ಅವರು ಭಾಗಿಯಾಗಿ ಶಿವಣ್ಣ ಮತ್ತು ಅವರ ಸಿನಿಮಾವನ್ನ ಹಾಡಿ ಹೊಗಳಿದ್ದಾರೆ.

    `ವೇದ’ ಸಿನಿಮಾ ಕನ್ನಡದಲ್ಲಿ ಹಿಟ್ ಆಗಿದೆ. ತೆಲುಗಿನಲ್ಲೂ ಬರುತ್ತಾ ಇದೆ. ನಿಮಗೂ ಇಷ್ಟವಾಗುತ್ತದೆ. ಸಿನಿಮಾ ಒಳ್ಳೆಯ ಮೆಸೇಜ್ ಇದೆ ನೋಡಿ ಎಂದು ಬಾಲಯ್ಯ ಮನವಿ ಮಾಡಿದ್ದಾರೆ.

    ಈ ವೇಳೆ `ವೇದ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಅಪ್ಪು ಕುರಿತ ವೀಡಿಯೋವೊಂದನ್ನ ತೋರಿಸಲಾಗಿದೆ ಈ ವೇಳೆ ಶಿವಣ್ಣ ಕಣ್ಣೀರಿಟ್ಟಿದ್ದಾರೆ. ಅಪ್ಪು ನೋಡಿ ಕೆಲವೊಮ್ಮೆ ಅಳಬಾರದು ಅಂದುಕೊಳ್ಳುತ್ತೇವೆ. ಆ ಮಗು ಮುಖ ನೋಡಿದರೆ ಎಂತಹವರಿಗೂ ಕಣ್ಣಲ್ಲಿ ನೀರು ಬರುತ್ತದೆ. ಅಪ್ಪುಗಿಂತ (Appu) ನಾನು 13 ವರ್ಷ ದೊಡ್ಡವನು. ಅಪ್ಪುದು ಮಗುವಿನಂತಹ ಮನಸ್ಸು, ಅವನು ಸದಾ ನಮ್ಮೋಂದಿಗೆ ಇದ್ದಾನೆ. ಅವನನ್ನು ಸದಾ ಸೆಲೆಬ್ರೇಟ್ ಮಾಡೋಣ. ನಮ್ಮ ಹೃದಯದಲ್ಲಿ ಸದಾ ಶಾಶ್ವತವಾಗಿ ಇರುತ್ತಾನೆ ಎಂದು ಶಿವಣ್ಣ ಭಾವುಕರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಯಚೂರಿನಲ್ಲಿ ವೇದ‌ ಟೀಸರ್ ಬಿಡುಗಡೆ – ಕಿಕ್ಕಿರಿದು ಸೇರಿದ್ದ ಅಭಿಮಾನಿಗಳು

    ರಾಯಚೂರಿನಲ್ಲಿ ವೇದ‌ ಟೀಸರ್ ಬಿಡುಗಡೆ – ಕಿಕ್ಕಿರಿದು ಸೇರಿದ್ದ ಅಭಿಮಾನಿಗಳು

    ರಾಯಚೂರು: ಉತ್ತರ ಕರ್ನಾಟಕ(North Karnataka) ಭಾಗದ ಸಮಸ್ಯೆಗಳನ್ನು ಈ ಭಾಗದ ಜನ ನಮಗೆ ಹೇಳಿದರೆ ನಾವು‌‌ ಸ್ಪಂದಿಸುತ್ತೇವೆ. ಎಲ್ಲಾ ನಟರು ಬಂದು ನಿಲ್ಲುತ್ತೇವೆ ಎಂದು ನಟ ಶಿವ ರಾಜ್‌ಕುಮಾರ್(Shivaraj Kumar) ಹೇಳಿದ್ದಾರೆ.

    ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ತನ್ನ 125ನೇ ಸಿನಿಮಾ ವೇದ(Vedha) ಚಿತ್ರದ ಎರಡನೇ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ‌ ಶಿವರಾಜ್‌ ಕುಮಾರ್‌ ಮಾತನಾಡಿದರು. ಇದನ್ನೂ ಓದಿ: ಮಂಗಳಗೌರಿ ಕಾವ್ಯಶ್ರೀ ಆಟಕ್ಕೆ ಬ್ರೇಕ್ ಹಾಕಿದ ಬಿಗ್ ಬಾಸ್

    ಇಲ್ಲಿನ ಜನ ನಮ್ಮಲ್ಲಿಗೆ ಬಂದು ಸ್ವೀಟ್ ತಿನ್ನಿಸಿ ಸೆಲ್ಫಿ ತೆಗೆದುಕೊಂಡು ಹೋಗುತ್ತಾರೆ. ಆದರೆ ಸಮಸ್ಯೆ ಹೇಳುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಯಚೂರಿನ ಏಮ್ಸ್ ಹೋರಾಟದ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ ಎಂದರು.

    ಸಿನಿಮಾ ಟೀಸರ್ ಬಿಡುಗಡೆ ಮಾಡಿ ಅಭಿಮಾನಿಗಳೊಂದಿಗೆ ಶಿವಣ್ಣ ಸಂಭ್ರಮಿಸಿದರು. “ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ” ಹಾಡನ್ನ ಹಾಡಿ ಅಭಿಮಾನಿಗಳನ್ನ ರಂಜಿಸಿದರು.

    ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಂಡ ಮೈನವಿರೇಳಿಸುವಂತ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿತು. 15 ಸಾವಿರಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶಿವಣ್ಣನ ಮೇಲಿನ ಅಭಿಮಾನ ಮೆರೆದರು. ಶಿವಣ್ಣನಿಗೆ ಬೆಳ್ಳಿಗದೆ ನೀಡಿ ಅಭಿಮಾನಿಗಳು ಸನ್ಮಾನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಟಾಲಿವುಡ್‌ನತ್ತ `ವೇದ’ ಚಿತ್ರದ ನಾಯಕಿ ಗಾನವಿ ಲಕ್ಷ್ಮಣ

    ಟಾಲಿವುಡ್‌ನತ್ತ `ವೇದ’ ಚಿತ್ರದ ನಾಯಕಿ ಗಾನವಿ ಲಕ್ಷ್ಮಣ

    ಸ್ಯಾಂಡಲ್‌ವುಡ್‌ಗೆ `ಹೀರೊ’ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟ ಗಾನವಿ ಲಕ್ಷ್ಮಣ. ಇದೀಗ ಶಿವರಾಜ್‌ಕುಮಾರ್ 125ನೇ ಸಿನಿಮಾ `ವೇದ’ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಳಿಕ ಟಾಲಿವುಡ್‌ನತ್ತ ಗಾನವಿ ಮುಖ ಮಾಡಿದ್ದಾರೆ.

    ಕಿರುತೆರೆಯ ಸೂಪರ್ ಹಿಟ್ `ಮಗಳು ಜಾನಕಿ’ ಸೀರಿಯಲ್‌ನಿಂದ ಬಣ್ಣದ ಲೋಕಕ್ಕೆ ಪರಿಚಿತರಾದ ನಟಿ, `ನೆನಪಿನ ಹುಡುಗಿಯೇ’ ಅಂತಾ ಹೀರೋ ರಿಷಬ್ ಶೆಟ್ಟಿಗೆ ಹೀರೋಯಿನ್ ಆಗಿ ಗಮನ ಸೆಳೆದರು. ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ವೇದಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. `ವೇದ’ ಚಿತ್ರದ ಜೊತೆಗೆ ತೆಲುಗಿನ ಪ್ರಾಜೆಕ್ಟ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಹರ್ಷ ನಿರ್ದೇಶನದ `ವೇದ’ ಚಿತ್ರ ಇದೊಂದು 1960ರ ದಶಕದ ಕಥೆಯಾಗಿದ್ದು, ಶಿವರಾಜ್‌ಕುಮಾರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. `ವೇದ’ ಚಿತ್ರದಲ್ಲಿ ನಟಿ ಗಾನವಿ ಮೃದು ಸ್ವಭಾದ ಕ್ಯಾರೆಕ್ಟರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯ ಲುಕ್‌ನಲ್ಲಿ ಪುಷ್ಪ ಎಂಬ ಪಾತ್ರಕ್ಕೆ ಗಾನವಿ ಜೀವತುಂಬಿದ್ದಾರೆ. ಹೀರೋ ಚಿತ್ರದ ವಿರುದ್ಧ ಪಾತ್ರದಲ್ಲಿ ಚಾಲೆಂಜಿಂಗ್ ರೋಲ್‌ನಲ್ಲಿ ಈ ನಟಿ ಕಾಣಿಸಿಕೊಂಡಿದ್ದಾರೆ.

    ಚಿಕ್ಕಮಗಳೂರಿನ ಪ್ರತಿಭೆ ಗಾನವಿ ಇದೀಗ `ವೇದ’ ಚಿತ್ರದ ಜೊತೆ ಟಾಲಿವುಡ್‌ನಲ್ಲೂ ಡೆಬ್ಯೂ ಮಾಡ್ತಿದ್ದಾರೆ. ಸ್ಟಾರ್ ನಟ ಜಗಪತಿ ಬಾಬು ಸಿನಿಮಾದಲ್ಲಿ ಆಶಿಶ್ ಗಾಂಧಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರೋ ಗಾನವಿ ಜತೆಗೆ ಮಮತಾ ಮೋಹನ್ ದಾಸ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗಿನ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಸದ್ಯ ಚಿತ್ರದ ಕುರಿತು ಅಪ್‌ಡೇಟ್ ಸಿಗಲಿದೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

    `ವೇದ’ ಚಿತ್ರದ ಪೋಸ್ಟರ್‌ನಲ್ಲಿ ಶಿವಣ್ಣ ಲುಕ್ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. `ವೇದ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ರಿಲೀಸ್ ಮುಂಚೆ ಸಾಕಷ್ಟು ವಿಚಾರಗಳಿಂದ ವೇದ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಾಗುತ್ತಿದೆ.ಚಿತ್ರ ರಿಲೀಸ್ ಆದಮೇಲೆ ಶಿವರಾಜ್‌ಕುಮಾರ್ ಮತ್ತು ಗಾನವಿ ಜೋಡಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡಬಹುದು ಅಂತಾ ಕಾದು ನೋಡಬೇಕಿದೆ.