Tag: Veeragase

  • ಹೆಡ್ ಬುಷ್ ವಿವಾದಕ್ಕೆ ನಟ ಚೇತನ್ ಎಂಟ್ರಿ: ಖಡಕ್ ಪ್ರತಿಕ್ರಿಯೆ

    ಹೆಡ್ ಬುಷ್ ವಿವಾದಕ್ಕೆ ನಟ ಚೇತನ್ ಎಂಟ್ರಿ: ಖಡಕ್ ಪ್ರತಿಕ್ರಿಯೆ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್  (Head Bus)ವಿವಾದ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅದರಲ್ಲೂ ಧನಂಜಯ್ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದ್ದು, ‘ನಿಮ್ಮೊಂದಿಗೆ ನಾವಿದ್ದೇವೆ’ ಎನ್ನುವ ಹ್ಯಾಷ್ ಟ್ಯಾಗ್ ಕೂಡ ಟ್ರೆಂಡ್ ಆಗಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲ, ಸಿನಿಮಾ ರಂಗದ ಅನೇಕರು ಧನಂಜಯ್ ಪರ ಧ್ವನಿ ಎತ್ತಿದ್ದಾರೆ.

    ಈ ವಿವಾದದ (Controversy) ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿರುವ ನಟ ಚೇತನ್ (Chetan), ‘ನಾನು ಸಿನಿಮಾ ಅನ್ನು ವೀಕ್ಷಿಸಿದೆ. ಕೆಲವು ವಿಭಾಗಗಳಿಗೆ ಆಕ್ಷೇಪಾರ್ಹ ಎಂದು ಕರೆಯಬಹುದಾದ ಚಲನಚಿತ್ರದ ದೃಶ್ಯಗಳನ್ನು ಕತ್ತರಿಸುವಂತೆ ಒತ್ತಾಯಿಸಲಾಗಿದೆ. ಪ್ರಸ್ತುತ ಬೇಡಿಕೆಗಳು ಸೃಜನಶೀಲ ಸ್ವಾತಂತ್ರ್ಯಗಳಿಗೆ ವಿರುದ್ಧವಾಗಿವೆ. ಸೆನ್ಸಾರ್ ಮಂಡಳಿಯ ಅನುಮತಿ ಪಡೆದ ನಂತರ ಚಿತ್ರ ಮತ್ತು ಚಿತ್ರಣಕ್ಕೆ ಸ್ವಾತಂತ್ರ್ಯ ನೀಡಬೇಕು. ಭಿನ್ನಾಭಿಪ್ರಾಯವು ಪ್ರಜಾಸತ್ತಾತ್ಮಕವಾಗಿದೆ, ಹೊರತು ಬೆದರಿಕೆಗಳಲ್ಲ’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಹೆಡ್ ಬುಷ್ ಸಿನಿಮಾದ ವೀರಗಾಸೆ ವಿವಾದ ಸತತ ಎರಡು ದಿನಗಳಿಂದ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ವೀರಗಾಸೆ ಕಲೆ ಮತ್ತು ವೀರಭದ್ರ ದೇವರಿಗೆ ತಾವು ಅವಮಾನ ಮಾಡಿಲ್ಲ ಎಂದು ಧನಂಜಯ್ (Dolly Dhananjay) ಸೇರಿದಂತೆ ಇಡೀ ಸಿನಿಮಾ ತಂಡ ಹೇಳಿದರೂ, ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡುವಂತೆ ಒತ್ತಾಯಿಸಲಾಗುತ್ತಿದೆ. ನಿನ್ನೆಯಷ್ಟೇ ಧನಂಜಯ್ ಮತ್ತು ನಿರ್ದೇಶಕ ಶೂನ್ಯ ಈ ವಿಚಾರವಾಗಿ ಕ್ಷಮೆ ಕೇಳಿದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ.

    ವೀರಗಾಸೆಗೆ ತಾವು ಅವಮಾನ ಮಾಡಿಲ್ಲದಿದ್ದರೂ, ಕ್ಷಮೆ ಕೇಳಿದ್ದೇವೆ. ಆದರೂ, ವಿವಾದ ಕಾವು ಕಡಿಮೆ ಆಗುತ್ತಿಲ್ಲ. ಸಿನಿಮಾದಿಂದ ದೃಶ್ಯವನ್ನೇ ಕತ್ತರಿಸುವಂತೆ ಒತ್ತಡ ಏರಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಆ ದೃಶ್ಯವನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದು ಸಿನಿಮಾ ಟೀಮ್ ಹೇಳಿಕೊಂಡಿದೆ. ವಿರೋಧಿಸುವವರಿಗಿಂತಲೂ ಅದನ್ನು ಮೆಚ್ಚಿಕೊಂಡವರ ಸಂಖ್ಯೆ ದೊಡ್ಡದಿದೆ ಎನ್ನುವ ಕಾರಣಕ್ಕಾಗಿ ಅದನ್ನು ಸಿನಿಮಾದಲ್ಲಿ ಮುಂದುವರೆಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವೀರಗಾಸೆಗೆ ಈಗಾಗಲೇ ಮಾಸಾಶನ ಕೊಡಲಾಗುತ್ತಿದೆ: ಸಚಿವ ಸುನೀಲ್ ಕುಮಾರ್

    ವೀರಗಾಸೆಗೆ ಈಗಾಗಲೇ ಮಾಸಾಶನ ಕೊಡಲಾಗುತ್ತಿದೆ: ಸಚಿವ ಸುನೀಲ್ ಕುಮಾರ್

    ದೈವ ನರ್ತಕರಿಗೆ ಮಾಸಾಶನ ಘೋಷಿಸಿದ ಬೆನ್ನಲ್ಲೇ, ವೀರಗಾಸೆ ಸೇರಿದಂತೆ ಇತರ ಕಲಾವಿದರಿಗೂ ಮಾಸಾಶನ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಧನಂಜಯ್ (Dhananjay) ನಟನೆಯ ಹೆಡ್ ಬುಸ್ (Head Bush) ಸಿನಿಮಾದಲ್ಲಿ ವೀರಗಾಸೆ ಕಲಾವಿದರಿಗೆ ಅವಮಾನ ಮಾಡಿದ್ದಾರೆ ಎನ್ನುವುದು ವಿವಾದಕ್ಕೆ ಕಾರಣವಾಗಿತ್ತು. ಅದಕ್ಕೆ ಸಚಿವ ಸುನೀಲ್ ಕುಮಾರ್ ಕೂಡ ಪ್ರತಿಕ್ರಿಯಿಸಿದ್ದರು. ಹಾಗಾಗಿ ವೀರಗಾಸೆ ಕಲಾವಿದರಿಗೆ ಮಾಸಾಶನ ಕೊಟ್ಟು ಅವರ ಮೇಲೆ ಪ್ರೀತಿ ತೋರಿಸಿ ಎಂದು ಟ್ರೆಂಡ್ ಮಾಡಲಾಗಿತ್ತು.

    ಈ ಕುರಿತಂತೆ ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar), ‘ಈಗಾಗಲೇ ವೀರಗಾಸೆ, ಕಂಸಾಳೆಯವರಿಗೆ ಮಾಸಾಶನ ಕೊಡಲಾಗ್ತಿದೆ. ಇದರಲ್ಲಿ ಯಾವುದೇ  ಗೊಂದಲ ಬೇಡ.  ದೈವ ನರ್ತಕರನ್ನ ಸೇರಿಸಿರಲಿಲ್ಲ ಈಗ ಸೇರಿಸಿದ್ದೇವೆ.’ ಎಂದಿದ್ದಾರೆ. ಈ ಮೂಲಕ ವೀರಗಾಸೆ, ಕಂಸಾಳೆ ಅವರಿಗೆ ಮಾಸಾಶನ ಕೊಡುತ್ತಿರುವ ಕುರಿತಾದ ವಿವಾದಕ್ಕೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಹೆಡ್ ಬುಶ್ ಸಿನಿಮಾದ ಬಗ್ಗೆಯೂ ಮಾತನಾಡಿರುವ ಸಚಿವರು, ‘ನಾನು ನೋಡಿಲ್ಲ. ವಿವಾದದ ಬಗ್ಗೆ ಕೇಳಿ ತಿಳಿದುಕೊಂಡಿದ್ದೇನೆ. ಮನರಂಜನೆಗಾಗಿ ಸಾಂಸ್ಕೃತಿಕ ಚಟುವಟಿಕೆಗೆ ಅವಮಾನ ಮಾಡೋದು ಬೇಡ. ಸಿನಿಮಾ ಮಾತ್ರ ಅಲ್ಲ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗೆ ಯಾವುದೇ ಅಪಮಾನ ಮಾಡೋದು ಬೇಡ . ಚಿತ್ರ ನಿರ್ದೇಶಕರೇ ಇದನ್ನ ಗಮನಿಸಬೇಕು. ಪುರುಸೋತ್ತು ಸಿಕ್ಕರೆ ಸಿನಿಮಾ ನೋಡ್ತೀನಿ’ ಎಂದಿದ್ದಾರೆ ಸುನಿಲ್ ಕುಮಾರ್.

    ವೀರಗಾಸೆಗೆ (Veeragase) ಅವಮಾನ ಆಗಿದ್ದರೆ, ಅದನ್ನು ಚಿತ್ರತಂಡ ಸರಿಪಡಿಸಿ ಎಂದು ಸಚಿವರು ಟ್ವಿಟ್ ಮಾಡಿ, ತಮ್ಮ ಕಾಳಜಿ ತೋರುತ್ತಿದ್ದಂತೆಯೇ ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದರು. ಸಾವಿರಾರು ಜನರು ಸಚಿವರಿಗೆ ಟ್ವಿಟ್ ಮಾಡಿದ್ದರು. ಅದಕ್ಕೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾದಿಂದ ವೀರಗಾಸೆ ದೃಶ್ಯ ಕತ್ತರಿಸಲ್ಲ ಎಂದ ‘ಹೆಡ್ ಬುಷ್’ ಟೀಮ್

    ಸಿನಿಮಾದಿಂದ ವೀರಗಾಸೆ ದೃಶ್ಯ ಕತ್ತರಿಸಲ್ಲ ಎಂದ ‘ಹೆಡ್ ಬುಷ್’ ಟೀಮ್

    ಹೆಡ್ ಬುಷ್ (Head Bus) ಸಿನಿಮಾದ ವೀರಗಾಸೆ ವಿವಾದ ಸತತ ಎರಡು ದಿನಗಳಿಂದ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ವೀರಗಾಸೆ ಕಲೆ ಮತ್ತು ವೀರಭದ್ರ ದೇವರಿಗೆ ತಾವು ಅವಮಾನ ಮಾಡಿಲ್ಲ ಎಂದು ಧನಂಜಯ್ (Dolly Dhananjay) ಸೇರಿದಂತೆ ಇಡೀ ಸಿನಿಮಾ ತಂಡ ಹೇಳಿದರೂ, ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡುವಂತೆ ಒತ್ತಾಯಿಸಲಾಗುತ್ತಿದೆ. ನಿನ್ನೆಯಷ್ಟೇ ಧನಂಜಯ್ ಮತ್ತು ನಿರ್ದೇಶಕ ಶೂನ್ಯ ಈ ವಿಚಾರವಾಗಿ ಕ್ಷಮೆ ಕೇಳಿದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ.

    ವೀರಗಾಸೆಗೆ (Veeragase) ತಾವು ಅವಮಾನ ಮಾಡಿಲ್ಲದಿದ್ದರೂ, ಕ್ಷಮೆ ಕೇಳಿದ್ದೇವೆ. ಆದರೂ, ವಿವಾದ (Controversy) ಕಾವು ಕಡಿಮೆ ಆಗುತ್ತಿಲ್ಲ. ಸಿನಿಮಾದಿಂದ ದೃಶ್ಯವನ್ನೇ ಕತ್ತರಿಸುವಂತೆ ಒತ್ತಡ ಏರಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಆ ದೃಶ್ಯವನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದು ಸಿನಿಮಾ ಟೀಮ್ ಹೇಳಿಕೊಂಡಿದೆ. ವಿರೋಧಿಸುವವರಿಗಿಂತಲೂ ಅದನ್ನು ಮೆಚ್ಚಿಕೊಂಡವರ ಸಂಖ್ಯೆ ದೊಡ್ಡದಿದೆ ಎನ್ನುವ ಕಾರಣಕ್ಕಾಗಿ ಅದನ್ನು ಸಿನಿಮಾದಲ್ಲಿ ಮುಂದುವರೆಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾದ ವಿವಾದ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಅದರಲ್ಲೂ ಪ್ರಾಂತ್ಯ, ಭಾಷೆಯ ವಿಚಾರವನ್ನು ಇಲ್ಲಿಗೆ ಎಳೆತರಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವ ಸುನೀಲ್ ಕುಮಾರ್ ವೀರಗಾಸೆ ಕುರಿತಾಗಿ ಟ್ವಿಟ್ ಮಾಡುತ್ತಿದ್ದಂತೆಯೇ ಅನೇಕರು ಅವರ ಮೇಲೆ ಮುಗಿ ಬಿದ್ದಿದ್ದಾರೆ. ಕೇವಲ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡಿದ್ದಾರೆ.

    ವೀರಗಾಸೆಗೆ ಅವಮಾನ ಆಗಿದ್ದರೆ, ಅದನ್ನು ಚಿತ್ರತಂಡ ಸರಿಪಡಿಸಿ ಎಂದು ಸಚಿವರು ಟ್ವಿಟ್ ಮಾಡಿ, ತಮ್ಮ ಕಾಳಜಿ ತೋರುತ್ತಿದ್ದಂತೆಯೇ ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಇದರಿಂದಾಗಿ ಸಚಿವರು ಇರಸುಮುರಸು ಎದುರಿಸುವಂತಾಗಿದೆ.

    ಸಾವಿರಾರು ಜನರು ಸಚಿವರಿಗೆ ಟ್ವಿಟ್ ಮಾಡಿ, ಟ್ಯಾಗ್ ಮಾಡಿದ್ದಾರೆ. ಆದರೆ, ಈ ಕುರಿತು ಸುನೀಲ್ ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ, ಭರವಸೆಯನ್ನೂ ಕೊಟ್ಟಿಲ್ಲ. ಸಚಿವರ ಈ ನಡೆ ಭಾರೀ ವಿರೋಧಕ್ಕೂ ಕಾರಣವಾಗಿದೆ. ಡಾಲಿ ಧನಂಜಯ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಮಾಸಾಶನದ ಬಗ್ಗೆ ಮಾತನಾಡಿದ್ದಾರೆ. ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಸರಕಾರ ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ವೀರಗಾಸೆ ವಿವಾದ: ಡಾಲಿ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ ಭಜರಂಗದಳ ಆಕ್ರೋಶ

    ವೀರಗಾಸೆ ವಿವಾದ: ಡಾಲಿ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ ಭಜರಂಗದಳ ಆಕ್ರೋಶ

    ತುಮಕೂರು: ಹೆಡ್ ಬುಷ್ (Headbush) ಸಿನಿಮಾದಲ್ಲಿ (Cinema) ವೀರಗಾಸೆ (Veeragase) ಕುಣಿತಕ್ಕೆ ಅಪಮಾನ ಮಾಡಲಾಗಿದೆ. ಇದರಿಂದ ಹಿಂದೂ ಧರ್ಮಕ್ಕೆ (Hindu Religion) ಅವಮಾನವಾಗಿದೆ ಎಂದು ಆರೋಪಿಸಿ ಭಜರಂಗದಳದ (Bajrang Dal) ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದು ಆಕ್ರೋಶ ಹೊರಹಾಕಿದ ಘಟನೆ ತಿಪಟೂರು ನಗರದ ಲಕ್ಷ್ಮೀ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.

    ಡಾಲಿ ಧನಂಜಯ (Dhananjaya) ಕ್ಷಮೆ ಕೇಳಬೇಕು ಹಾಗೂ ಚಿತ್ರದಿಂದ ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದ್ದಾರೆ. ಇಲ್ಲದಿದ್ದರೇ ಯಾವ ಚಿತ್ರಮಂದಿರಗಳಲ್ಲೂ ಈ ಚಿತ್ರ ಪ್ರದರ್ಶನ ಮಾಡದಂತೆ ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಳಕಿನ ಹಬ್ಬಕ್ಕೆ ‘ಕೆಜಿಎಫ್’ ಬೆಡಗಿಯ ಹೊಸ ಫೋಟೋ ಶೂಟ್

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head bush) ಸಿನಿಮಾದಲ್ಲಿ (Cinema) ಕರಗ ಮತ್ತು ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಿನಿಮಾ ಬೈಕಾಟ್ ಕೂಗು ಒಂದೆಡೆ ಕೇಳಿಬಂದಿದ್ದರೆ, ಮತ್ತೊಂದೆಡೆ ಅಭಿಮಾನಿಗಳು ಡಾಲಿ ಧನಂಜಯ್ ಪರವಾಗಿದ್ದೇವೆ ಎಂಬ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

    ಕನ್ನಡದ ಇತರ ಸ್ಟಾರ್ ನಟ ಜೊತೆಗಿರುವ ಡಾಲಿ ಧನಂಜಯ್ ಫೋಟೋ ಹಾಗೂ ಅವರು ಮಾತನಾಡಿರುವ ವೀಡಿಯೋಗಳ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಹ್ಯಾಷ್ ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಹೆಡ್ ಬುಷ್ ವಿವಾದ : ಸರಕಾರಕ್ಕೆ ತಂದಿಟ್ಟ ಸಂಕಷ್ಟ

    ಹೆಡ್ ಬುಷ್ ವಿವಾದ : ಸರಕಾರಕ್ಕೆ ತಂದಿಟ್ಟ ಸಂಕಷ್ಟ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head Bush) ಸಿನಿಮಾದ ವಿವಾದ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಅದರಲ್ಲೂ ಪ್ರಾಂತ್ಯ, ಭಾಷೆಯ ವಿಚಾರವನ್ನು ಇಲ್ಲಿಗೆ ಎಳೆತರಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar) ವೀರಗಾಸೆ ಕುರಿತಾಗಿ ಟ್ವಿಟ್ ಮಾಡುತ್ತಿದ್ದಂತೆಯೇ ಅನೇಕರು ಅವರ ಮೇಲೆ ಮುಗಿ ಬಿದ್ದಿದ್ದಾರೆ. ಕೇವಲ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡಿದ್ದಾರೆ.

    ವೀರಗಾಸೆಗೆ (Veeragase) ಅವಮಾನ ಆಗಿದ್ದರೆ, ಅದನ್ನು ಚಿತ್ರತಂಡ ಸರಿಪಡಿಸಿ ಎಂದು ಸಚಿವರು ಟ್ವಿಟ್ ಮಾಡಿ, ತಮ್ಮ ಕಾಳಜಿ ತೋರುತ್ತಿದ್ದಂತೆಯೇ ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಇದರಿಂದಾಗಿ ಸಚಿವರು ಇರಸುಮುರಸು ಎದುರಿಸುವಂತಾಗಿದೆ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

    ಸಾವಿರಾರು ಜನರು ಸಚಿವರಿಗೆ ಟ್ವಿಟ್ ಮಾಡಿ, ಟ್ಯಾಗ್ ಮಾಡಿದ್ದಾರೆ. ಆದರೆ, ಈ ಕುರಿತು ಸುನೀಲ್ ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ, ಭರವಸೆಯನ್ನೂ ಕೊಟ್ಟಿಲ್ಲ. ಸಚಿವರ ಈ ನಡೆ ಭಾರೀ ವಿರೋಧಕ್ಕೂ ಕಾರಣವಾಗಿದೆ. ಡಾಲಿ ಧನಂಜಯ್ (Dhananjay) ಕೂಡ ಪತ್ರಿಕಾಗೋಷ್ಠಿಯಲ್ಲಿ ಮಾಸಾಶನದ ಬಗ್ಗೆ ಮಾತನಾಡಿದ್ದಾರೆ. ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಸರಕಾರ ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡತ್ತೋ ಕಾದು ನೋಡಬೇಕು.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಿಷಬ್ ಶೆಟ್ಟಿ (Rishabh Shetty) ದೈವ ಕಟ್ಟುವವರಿಗೆ ಮಾಸಾಶನ ನೀಡಿದಂತೆ ರಾಜ್ಯದ ಇತರ ಕಲಾವಿದರಿಗೂ ಅದನ್ನು ವಿಸ್ತರಿಸಬೇಕು. ಎಲ್ಲ ಕಲಾವಿದರೂ ನನಗೆ ಒಂದೇ. ಈ ಮೂಲಕನ ನಾನೂ ಕೂಡ ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ವೀರಗಾಸೆ, ಕರಗ ವಿವಾದ : ಕ್ಷಮೆ ಕೇಳಿದ ‘ಹೆಡ್ ಬುಷ್’ ಸಿನಿಮಾ ತಂಡ

    ವೀರಗಾಸೆ, ಕರಗ ವಿವಾದ : ಕ್ಷಮೆ ಕೇಳಿದ ‘ಹೆಡ್ ಬುಷ್’ ಸಿನಿಮಾ ತಂಡ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head Bush) ಸಿನಿಮಾ ಎರಡು ಕಾರಣಗಳಿಂದಾಗಿ ವಿವಾದಕ್ಕೆ ತುತ್ತಾಗಿದೆ. ಸಿನಿಮಾದಲ್ಲಿ ಕರಗ (Karaga) ಮತ್ತು ವೀರಗಾಸೆಗೆ (Veeragase) ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಲವರು ದೂರು ಕೂಡ ದಾಖಲಿಸಿದ್ದಾರೆ. ಹೀಗಾಗಿ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿತ್ತು. ಸಿನಿಮಾ ಬೈಕಾಟ್ ಮಾಡಬೇಕು, ದೃಶ್ಯಗಳನ್ನು ಕತ್ತರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿತ್ತು.

    ಎರಡೂ ವಿವಾದಗಳ (Controversy) ಕುರಿತು ಪ್ರತಿಕ್ರಿಯೆ ನೀಡಿದ್ದ ಧನಂಜಯ್ (Dhananjay), ತಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ. ಅವಮಾನ ಕೂಡ ಮಾಡಿಲ್ಲ. ಸಿನಿಮಾ ನೋಡಿದ ನಂತರ ಮಾತನಾಡಿ ಎಂದು ಕೇಳಿಕೊಂಡಿದ್ದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ. ಫಿಲ್ಮ್ ಚೇಂಬರ್ ಗೂ ದೂರು ದಾಖಲಿಸಿದ್ದರು. ಹಾಗಾಗಿ ಇಂದು ತಮ್ಮ ತಂಡದೊಂದಿಗೆ ಪತ್ರಿಕಾಗೋಷ್ಠಿ ಮಾಡಿದ ಧನಂಜಯ್, ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ನಾವು ಯಾರನ್ನೂ ನೋಯಿಸುವ ಉದ್ದೇಶದಿಂದ ಸಿನಿಮಾ ಮಾಡಿಲ್ಲ. ದೇವರ ಬಗ್ಗೆ, ವೀರಗಾಸೆ ಹಾಗೂ ಕರಗದ ಬಗ್ಗೆ ನಮಗೂ ಅಪಾರವಾದ ಅಭಿಮಾನಿ, ಭಕ್ತಿ ಇದೆ. ಆದರೂ, ನಿಮಗೆ ನೋವು ಆಗಿದ್ದರೆ ಕ್ಷಮಿಸಿ ಎಂದು ನಿರ್ದೇಶಕ ಶೂನ್ಯ ಅವರು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಆದರೂ, ಕರಗ ಸಮಿತಿಯ ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೈವ ನರ್ತಕರಿಗೆ ಮಾಸಾಶನ – ವೀರಗಾಸೆ ಕುಣಿತ ಮಾಡುವ ನಮಗೂ ಕೊಡಿ ಪುರವಂತರು ಒತ್ತಾಯ

    ದೈವ ನರ್ತಕರಿಗೆ ಮಾಸಾಶನ – ವೀರಗಾಸೆ ಕುಣಿತ ಮಾಡುವ ನಮಗೂ ಕೊಡಿ ಪುರವಂತರು ಒತ್ತಾಯ

    ಬೆಳಗಾವಿ: ಪುರಾತನ ಕಲೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ಕರ್ನಾಟಕದಲ್ಲಿನ ವೀರಭದ್ರ ಅಥವಾ ವೀರಗಾಸೆ (Veeragase) ಕುಣಿತ ಮಾಡುವವರಿಗೂ ಮಾಸಾಶನ (Pension) ನೀಡುವಂತೆ ಪುರವಂತರು (Puravantharu) ಒತ್ತಾಯಿಸಿದ್ದಾರೆ.

    ಕರಾವಳಿ (Karavali) ಭಾಗದ ದೈವ ನರ್ತಕರಿಗೆ (Daiva Nartaka) ರಾಜ್ಯ ಸರ್ಕಾರದಿಂದ ಮಾಸಾಶನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪುರವಂತರೊಬ್ಬರು, ವೀರಗಾಸೆ ಮಾಡುವ ಪುರವಂತರಿಗೂ ಮಾಸಾಶನ ನೀಡಬೇಕು. ಅನಾದಿ ಕಾಲದಿಂದಲೂ ರಥೋತ್ಸವ, ಗುಗ್ಗಳೋತ್ಸವದಲ್ಲಿ ಪುರವಂತರು ಭಾಗಿಯಾಗುತ್ತಾರೆ. ಪುರಾತನ ಕಲೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕೆಂದು ರಾಜ್ಯ ಸರ್ಕಾರಕ್ಕೆ ವೀರಗಾಸೆ ಮಾಡುವ ಪುರವಂತರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಧನಂಜಯ್ ಸ್ಪಷ್ಟನೆ

    ಗುಗ್ಗಳೋತ್ಸವ, ರಥೋತ್ಸವ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ. ಇದು ಪುರಾತನ ಕಾಲದಿಂದ ಬಂದ ವೀರಭದ್ರ ದೇವರ ಕಲೆಯಾಗಿದೆ. ಉತ್ತರ ಕರ್ನಾಟಕದ ವೀರಗಾಸೆ ಪುರವಂತರಿಗೂ ಸರ್ಕಾರ ಮಾಸಾಶನ ನೀಡಬೇಕು. ಆಯಾ ಊರಿನಲ್ಲಿ ಪುರವಂತರು ಇದ್ದಾರೆ. ಈ ಕಲೆ ನಾಶ ಮಾಡದೇ ಮುಂದುವರಿಸಿದ್ದಾರೆ. ಪ್ರತ್ಯೇಕ ತಾಲೂಕಿನಲ್ಲಿಯೂ ವೀರಗಾಸೆ ಕಲಾವಿದರ ಸಂಘವಿದೆ. ವೀರಗಾಸೆ ಪುರವಂತರ ಕಲೆ ಮೆಚ್ಚಿ ಮಾಸಾಶನ ನೀಡಬೇಕು. ಎಷ್ಟೋ ಜನ 60 ವರ್ಷ ಮೀರಿದ ವೀರಗಾಸೆ ಪುರವಂತರಿದ್ದಾರೆ. ಹೀಗಾಗಿ ಅವರಿಗೂ ಸಹ ಮಾಸಾಶನ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಬೆಳಗಾವಿಯಲ್ಲಿ (Belagavi) ವೀರಗಾಸೆ ಕಲಾವಿದ ಪಂಚಾಕ್ಷರಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳಲ್ಲೂ (Social Media) ವೀರಗಾಸೆ ಕುಣಿತ ಮಾಡುವ ಕಲಾವಿದರಿಗೆ ಬೆಂಬಲ ಕೇಳಿ ಬರುತ್ತಿದ್ದು, ಕರಾವಳಿಯ ದೈವ ನರ್ತಕರಿಗೆ ಮಾಸಾಶನ ನೀಡಿದ್ದಕ್ಕೆ ನಮ್ಮ ಸ್ವಾಗತವಿದೆ. ಉತ್ತರ ಕರ್ನಾಟಕದಲ್ಲಿ ವೀರಭದ್ರ ಅಥವಾ ವೀರಗಾಸೆ ಕುಣಿತ ಮಾಡುವವರಿಗೂ ಮಾಸಾಶನ ನೀಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಹೆಡ್ ಬುಷ್’ ಚಿತ್ರದ ವಿರುದ್ಧ ಕರಗ ಸಮಿತಿಯೂ ಆಕ್ರೋಶ: ಎರಡೆರಡು ವಿವಾದಲ್ಲಿ ಡಾಲಿ

    ‘ಹೆಡ್ ಬುಷ್’ ಚಿತ್ರದ ವಿರುದ್ಧ ಕರಗ ಸಮಿತಿಯೂ ಆಕ್ರೋಶ: ಎರಡೆರಡು ವಿವಾದಲ್ಲಿ ಡಾಲಿ

    ಡಾಲಿ ಧನಂಜಯ್ (Dhananjay) ನಟನೆಯ ಹೆಡ್ ಬುಷ್ (Head Bus) ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಎರಡೆರಡು ವಿವಾದಗಳು ಚಿತ್ರತಂಡಕ್ಕೆ ಅಂಟಿಕೊಂಡಿವೆ. ಈಗಾಗಲೇ ವೀರಗಾಸೆ ಕಲಾವಿದರಿಗೆ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು, ಇದೀಗ ಚಿತ್ರದಲ್ಲಿ ಕರಗ ಆಚರಣೆ ಬಗ್ಗೆ ಮತ್ತು ಕರಗ ಹೊತ್ತವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಕೇಳಿ ಬಂದಿದೆ.

    ಹೆಡ್ ಬುಷ್ ಚಿತ್ರದಲ್ಲಿ ದ್ರೌಪದಮ್ಮನ ಕರಗಕ್ಕೆ ಅವಮಾನ ಮಾಡಲಾಗಿದೆ ಎಂದು ಧರ್ಮರಾಯ ದೇವಸ್ಥಾನ ಅಧ್ಯಕ್ಷ ಸತೀಶ್ ಆರೋಪ ಮಾಡಿದ್ದಾರೆ. ಹಾಗಾಗಿ ಚಿತ್ರದಲ್ಲಿ ಕರಗದ ಬಗ್ಗೆ ತೋರಿಸಲಾದ ಸೀನ್‌ಗಳನ್ನು ತೆಗೆಯುವಂತೆ ಅವರು ಆಗ್ರಹ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಸತೀಶ್, ‘ಸಿನಿಮಾದಲ್ಲಿ ತೋರಿಸಲಾಗಿದ್ದು ನಮ್ಮ ತಿಗಳರ ಪೇಟೆಯ ಕರಗ ಅಲ್ಲ. ಹೆಸರಘಟ್ಟದ ಕರಗವನ್ನು ತೋರಿಸಿ, ತಿಗಳರ ಕರಗ ಎಂದು ತೋರಿಸಲಾಗಿದೆ. ಚಿತ್ರದಲ್ಲಿ ಜುಜುಬಿ ಕರಗ ಅಂತ ಹೆಸರು ಬಳಕೆ ಮಾಡಲಾಗಿದೆ. ಇದು ಸರಿಯಲ್ಲ’ ಎಂದಿದ್ದಾರೆ.

    ಅಷ್ಟೇ ಅಲ್ಲದೇ, ಸಿನಿಮಾದಲ್ಲಿ ಅರ್ಚಕರಾದ ಶಿವಶಂಕರ್ ಎಂಬುವರ ಹೆಸರು ಕೂಡ ದುರ್ಬಳಕೆ ಮಾಡಲಾಗಿದೆ ಎಂದು ಸತೀಶ್ ಆರೋಪಿಸುತ್ತಾರೆ. ಅವರನ್ನು ಏಕವಚನದಲ್ಲಿ ಸಂಬೋಧಿಸುವುದು ಸರಿಯಲ್ಲ ಎಂದಿದ್ದಾರೆ. ಕರಗಕ್ಕೆ (Karaga) ಅನೇಕ ಸಂಪ್ರಯದಾಯಗಳು ಇವೆ. ಅದೆಲ್ಲವನ್ನು ಸಿನಿಮಾದಲ್ಲಿ ಉಲ್ಲಂಘನೆ ಮಾಡಲಾಗಿದೆ. ಇದಕ್ಕಾಗಿ ಇಂದು ನಾವೆಲ್ಲ ಚರ್ಚಿಸಿ ಮೊದಲು ಫಿಲ್ಮ್ ಚೇಂಬರ್‌ಗೆ ದೂರು ನೀಡುತ್ತೇವೆ ಎನ್ನುತ್ತಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಇದೀಗ ವಿವಾದವಾಗಿ ಮಾರ್ಪಟ್ಟಿದೆ.

    ವೀರಗಾಸೆ (Veeragase) ಕಲೆಗೆ ಮತ್ತು ಅದಕ್ಕೆ ಸಂಬಂಧಿಸಿದ ವೀರಭದ್ರ ದೇವರಿಗೆ ಅವಮಾನ ಮಾಡಿದ ನಿರ್ದೇಶಕರು, ಕಲಾವಿದರು ಹಾಗೂ ನಿರ್ಮಾಪಕರು ಕೂಡಲೇ ಕ್ಷಮೆ ಕೇಳಬೇಕು ಹಾಗೂ ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡಬೇಕು ಎಂಬ ಆಗ್ರಹ ಕೂಡ ಕೇಳಿ ಬರುತ್ತಿದೆ. ಈ ಕುರಿತು ನಟ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ. ತಾನೂ ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

    ಧನಂಜಯ್ ಈವರೆಗೂ ಯಾವುದೇ ವಿವಾದಕ್ಕೆ ಒಳಗಾದವರು ಅಲ್ಲ. ಅದರಲ್ಲೂ ಶರಣ ಪರಂಪರೆಯನ್ನು ಓದಿಕೊಂಡು ಬೆಳೆದವರು. ಕಲೆ ಮತ್ತು ಸಂಸ್ಕೃತಿ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ಈ ಕಾರಣದಿಂದಾಗಿಯೇ ಇಂದು ವೀರಗಾಸೆ ಕಲಾವಿದರನ್ನು ಧನಂಜಯ್ ಭೇಟಿ ಮಾಡುತ್ತಿದ್ದಾರೆ. ಅವರೊಂದಿಗೆ ಆ ದೃಶ್ಯದ ಕುರಿತು ವಿವರಣೆಯನ್ನು ಕೊಡಲಿದ್ದಾರೆ. ಆ ದೃಶ್ಯ ಹಾಗೂ ಅದನ್ನು ಸಿನಿಮಾದಲ್ಲಿ ಯಾಕೆ ಆ ರೀತಿ ಅಳವಡಿಸಲಾಗಿದೆ ಎನ್ನುವ ಕುರಿತು ಚರ್ಚಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಧನಂಜಯ್ ಸ್ಪಷ್ಟನೆ

    ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಧನಂಜಯ್ ಸ್ಪಷ್ಟನೆ

    ಗಾಗಲೇ ರಾಜ್ಯಾದ್ಯಂತ ರಿಲೀಸ್ ಆಗಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ (Dhananjay) ನಟನೆಯ ‘ಹೆಡ್ ಬುಷ್’ (head bush) ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಇದೀಗ ವಿವಾದವಾಗಿ (controversy) ಮಾರ್ಪಟ್ಟಿದೆ.

    ವೀರಗಾಸೆ (Veeragase) ಕಲೆಗೆ ಮತ್ತು ಅದಕ್ಕೆ ಸಂಬಂಧಿಸಿದ ವೀರಭದ್ರ ದೇವರಿಗೆ (Veerabhadra God) ಅವಮಾನ ಮಾಡಿದ ನಿರ್ದೇಶಕರು, ಕಲಾವಿದರು ಹಾಗೂ ನಿರ್ಮಾಪಕರು ಕೂಡಲೇ ಕ್ಷಮೆ ಕೇಳಬೇಕು ಹಾಗೂ ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡಬೇಕು ಎಂಬ ಆಗ್ರಹ ಕೂಡ ಕೇಳಿ ಬರುತ್ತಿದೆ. ಈ ಕುರಿತು ನಟ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ. ತಾನೂ ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಧನಂಜಯ್ ಈವರೆಗೂ ಯಾವುದೇ ವಿವಾದಕ್ಕೆ ಒಳಗಾದವರು ಅಲ್ಲ. ಅದರಲ್ಲೂ ಶರಣ ಪರಂಪರೆಯನ್ನು ಓದಿಕೊಂಡು ಬೆಳೆದವರು. ಕಲೆ ಮತ್ತು ಸಂಸ್ಕೃತಿ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ಈ ಕಾರಣದಿಂದಾಗಿಯೇ ಇಂದು ವೀರಗಾಸೆ ಕಲಾವಿದರನ್ನು ಧನಂಜಯ್ ಭೇಟಿ ಮಾಡುತ್ತಿದ್ದಾರೆ. ಅವರೊಂದಿಗೆ ಆ ದೃಶ್ಯದ ಕುರಿತು ವಿವರಣೆಯನ್ನು ಕೊಡಲಿದ್ದಾರೆ. ಆ ದೃಶ್ಯ ಹಾಗೂ ಅದನ್ನು ಸಿನಿಮಾದಲ್ಲಿ ಯಾಕೆ ಆ ರೀತಿ ಅಳವಡಿಸಲಾಗಿದೆ ಎನ್ನುವ ಕುರಿತು ಚರ್ಚಿಸಲಿದ್ದಾರೆ.

    ಇಂದು ವೀರಗಾಸೆ ಕಲಾವಿದರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುತ್ತಿದ್ದೇನೆ. ಕಲಾವಿದರೊಂದಿಗೆ ಚರ್ಚೆ ಮಾಡಿ, ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುತ್ತೇನೆ. ನನಗೂ ವೀರಭದ್ರ ದೇವರ ಮೇಲೆ ಅಪಾರ ಭಕ್ತಿ. ವೀರಗಾಸೆ ಕಲೆಯನ್ನು ತುಂಬಾ ಇಷ್ಟ ಪಡುವವನು. ಹಾಗಾಗಿ ನನ್ನಿಂದ ಯಾವುದೇ ಅವಮಾನ ಆಗುವಂತಹ ಕೆಲಸ ಆಗಲ್ಲ ಎಂದಿದ್ದಾರೆ ಧನಂಜಯ್.

    Live Tv
    [brid partner=56869869 player=32851 video=960834 autoplay=true]