Tag: Veerapa Moyli

  • ಯಡಿಯೂರಪ್ಪಗೆ ಹಣ ವಸೂಲಿ ಮಾಡಿ ಡೆಲ್ಲಿಗೆ ಕಳಿಸೋದು ಕಾಯಕ: ವೀರಪ್ಪ ಮೊಯ್ಲಿ

    ಯಡಿಯೂರಪ್ಪಗೆ ಹಣ ವಸೂಲಿ ಮಾಡಿ ಡೆಲ್ಲಿಗೆ ಕಳಿಸೋದು ಕಾಯಕ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಹಣ ವಸೂಲಿ ಮಾಡಿ ದೆಹಲಿಗೆ ಕಳಿಸುವುದು ಕೆಲಸ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಎಂ. ವೀರಪ್ಪ ಮೊಯ್ಲಿ ಗಂಭೀರ ಆರೋಪ ಮಾಡಿದ್ದಾರೆ.

    ವೀರಪ್ಪ ಮೊಯ್ಲಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಜನರ ಅಭಿವೃದ್ಧಿ ಕಾಂಗ್ರೆಸ್-ಜೆಡಿಎಸ್‍ನಿಂದ ಮಾತ್ರ ಸಾಧ್ಯ. ಆದರೆ ಬಿಜೆಪಿಯ ಯಡಿಯೂರಪ್ಪಗೆ ಹಣ ವಸೂಲಿ ಮಾಡಿ ದೆಹಲಿಗೆ ಕಳಿಸುವುದು ಕಾಯಕ ಎಂದು ಟೀಕೆ ಮಾಡಿದರು.

    ಈಗಾಗಲೇ ದೆಹಲಿಗೆ ಯಡಿಯೂರಪ್ಪ ವರ್ಗಾವಣೆಯ 1,800 ಕೋಟಿ ರೂಪಾಯಿಯ ಡೈರಿ ಸಿಕ್ಕಿದೆ. ಅದನ್ನು ಈಗ ಮೋದಿ ಸರ್ಕಾರ ಅಡಗಿಸಬಹುದು. ಮುಂದೆ ಚುನಾವಣೆ ನಂತರ ಮೇ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಅದನ್ನು ಬಯಲು ಮಾಡ್ತೇವೆ ಎಂದರು.

    ಕಳೆದ ಎರಡು ಬಾರಿ ನೀವು ಸಂಸದರಾಗಿ ಆಯ್ಕೆ ಮಾಡಿದ್ದು, ಈ ಬಾರಿಯೂ ನೀವು ನಮಗೆ ಅವಕಾಶ ಮಾಡಿಕೊಡಿ. ಈ ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರ ಭದ್ರವಾಗಿರಬೇಕು. ಕೇಂದ್ರದಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಬೇಕಿದೆ. ಇದಲ್ಲದೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ನೀವು ನನಗೆ ಮತ ನೀಡಬೇಕಿದೆ. ಮನೆ ಮನೆಯಲ್ಲಿ ಯುವಕ – ಯುವತಿಯರಿಗೆ ಕೆಲಸ, ಹೊಲ, ಹೊಲಕ್ಕೆ ಜಲ, ಮನೆ ಮನೆಗೆ ಕುಡಿಯುವ ನೀರು ಈ ಮೂರು ದೀಕ್ಷೆಗಳನ್ನು ಈಡೇರಿಸಲು ತಾವು ಮತ ನೀಡಬೇಕು ಎಂದು ವೀರಪ್ಪ ಮೊಯ್ಲಿ ತಮ್ಮ ಪ್ರಚಾರ ಭಾಷಣದಲ್ಲಿ ಮನವಿ ಮಾಡಿಕೊಂಡರು.

    ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ, ತೂಬಗರೆ, ಮೇಳೆಕೋಟೆ ಹಾಗೂ ಕಾರಹಳ್ಳಿ ಗ್ರಾಮಗಳಲ್ಲಿ ವೀರಪ್ಪ ಮೊಯ್ಲಿ ಚುನಾವಣಾ ಪ್ರಚಾರ ನಡೆಸಿದ್ದು, ವೀರಯ ಮೊಯ್ಲಿಗೆ ದೇವನಹಳ್ಳಿ ಜೆಡಿಎಸ್ ಶಾಸಕ ನಾರಾಯಣಸ್ವಾಮಿ, ವಸತಿ ಸಚಿವ ಎಂಟಿಬಿ ನಾಗರಾಜ್ ಸಾಥ್ ನೀಡಿದರು.

  • ಬಿಜೆಪಿಯವರು ಮೆಂಟಲ್ಸ್, ನ್ಯೂರೋಸರ್ಜನ್ ಕನ್ಸಲ್ಟ್ ಮಾಡಲಿ: ವೀರಪ್ಪ ಮೊಯ್ಲಿ

    ಬಿಜೆಪಿಯವರು ಮೆಂಟಲ್ಸ್, ನ್ಯೂರೋಸರ್ಜನ್ ಕನ್ಸಲ್ಟ್ ಮಾಡಲಿ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಬಿಜೆಪಿಯವರು ಬಿಜೆಪಿಯವರನ್ನೇ ಆಪರೇಷನ್ ಮಾಡಿಕೊಳ್ಳಬೇಕು. ಬಿಜೆಪಿಯವರ ಮೆಂಟಲ್ ಪರಿಸ್ಥಿತಿ ಸರಿ ಇಲ್ಲ. ನ್ಯೂರೋಸರ್ಜನ್ ಬಳಿ ಕನ್ಸಲ್ಟ್ ಮಾಡಿಕೊಳ್ಳಬೇಕಾದ ಅವಶ್ಯಕತೆ ಬಿಜೆಪಿಯವರಿಗಿದೆ ಅಂತ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಘಟಕ ಉದ್ಘಾಟಿಸಿ ಮಾತನಾಡಿದ ಮೊಯ್ಲಿ ಅವರು ಸದ್ಯದ ರಾಜ್ಯ ರಾಜಕಾರಣ ಬೆಳವಣಿಗೆ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಮೀನು ಹಿಡಿಯಲಿಕ್ಕೆ ಗಾಳ ಹಾಕುತ್ತಲೇ ಇದ್ದಾರೆ. ಒಂದೊಂದು ಕಡೆ ಗಾಳ ಹಾಕುತ್ತಾನೆ ಇದ್ದಾರೆ. ಆದರೆ ಬಿಜೆಪಿಯವರ ಗಾಳಕ್ಕೆ ಮೀನುಗಳೇ ಸಿಗುತ್ತಿಲ್ಲ ಎಂದರು.

    ಅಲ್ಲದೇ ಈಗ ಸಂಕಾಂತ್ರಿ ಶುಭಾಶಯ ಹೇಳುವಾಗ ಅವರಿಗೂ ಕೂಡ ಸಂಕ್ರಾಂತಿಗೆ ಈ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಹೇಳುತ್ತೇನೆ. ಸಂಕ್ರಾಂತಿ ನಂತರವೂ 5 ವರ್ಷ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುತ್ತೆ. ಆದರೆ ಸಮ್ಮಿಶ್ರ ಸರ್ಕಾರ ಅಲುಗಾಡಿಸುವ ಪ್ರಯತ್ನ ಮಾಡಿದರೆ, ಅದು ಅವರಿಗೆ ಅಘಾತವಾಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಅಲ್ಲದೇ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂಬ ಮೋದಿ ಅವರ ಹೇಳಿಕೆಗೆ ವೀರಪ್ಪ ಮೊಯ್ಲಿ ಅವರು, “ಪ್ರಧಾನಿ ಆಗಿದ್ದವರು ಒಬ್ಬ ಮುಖ್ಯಮಂತ್ರಿ ಮೇಲೆ ಆ ರೀತಿ ಕಮೆಂಟ್ ಮಾಡಿದ್ದರಿಂದ ಇದು ವೈಯಕ್ತಿಕ ಟೀಕೆ ಆಗುವುದಿಲ್ಲ. ನಮ್ಮ ಸಂವಿಧಾನಕ್ಕೆ ಮಾಡಿದ ಟೀಕೆ ಇದು. ಪ್ರಧಾನಿ ಅವರು ಅಂತಹ ಟೀಕೆಯನ್ನು ಮುಖ್ಯಮಂತ್ರಿಗೆ ಮಾಡಿರುವುದು ಇಡೀ ರಾಜ್ಯಕ್ಕೆ ಅವಮಾನ. ಇದು ಕೇವಲ ಮುಖ್ಯಮಂತ್ರಿಗೆ ಅವಮಾನ ಅಲ್ಲ, ಇಡೀ ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ” ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv