Tag: Veerappa Moily

  • ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಏರಿಕೆಯನ್ನ ಸಮರ್ಥಿಸಿಕೊಂಡ ಸಚಿವ ತುಕಾರಂ

    ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಏರಿಕೆಯನ್ನ ಸಮರ್ಥಿಸಿಕೊಂಡ ಸಚಿವ ತುಕಾರಂ

    ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಗಳ ಶುಲ್ಕ ಏರಿಕೆ ಇಂದಿನ ವ್ಯವಸ್ಥೆಗೆ ಅನುಗುಣವಾಗಿದೆ ಎಂದು ಶುಲ್ಕ ಏರಿಕೆ ಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಸಮರ್ಥಿಸಿಕೊಂಡಿದ್ದಾರೆ.

    ಜಿಲ್ಲೆಯ ಜಿಂದಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕಾದಾಗ ಹಣಕಾಸಿನ ಅವಶ್ಯಕತೆ ಇರುತ್ತದೆ. ಹಾಗಾಗಿ ಶುಲ್ಕ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.

    ಇದೇ ವೇಳೆ ಚುನಾವಣೆ ನಂತರ ಜಿಲ್ಲೆಯ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಕಾಲಿಟ್ಟಿಲ್ಲ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಸಚಿವ ತುಕಾರಾಂ, ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ಡಿ.ಕೆ ಶಿವಕುಮಾರ್‍ರವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನನಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದಾರೆ. ಈ ವಿಚಾರಗಳು ಹೈಕಮಾಂಡ್ ತಿರ್ಮಾನಗಳಾಗಿದ್ದು, ಆದರ ಬಗ್ಗೆ ನಾನು ಮಾತನಾಡುವುದಿಲ್ಲ. ಅಲ್ಲದೇ ಪಕ್ಷ ಬಳ್ಳಾರಿಯ ಜವಾಬ್ದಾರಿಯನ್ನು ಕೊಟ್ಟರೆ ನಾನು ನಿರ್ವಹಿಸುವೆ ಎಂದು ಹೇಳುವ ಮೂಲಕ ಬಳ್ಳಾರಿ ಉಸ್ತುವಾರಿ ಸಚಿವನಾಗುವ ಆಸೆಯನ್ನು ಹೊರ ಹಾಕಿದರು.

    ಮೈತ್ರಿ ಸರ್ಕಾರ ಬಗ್ಗೆ ಮಾಜಿ ಸಂಸದ ವೀರಪ್ಪ ಮೊಯ್ಲಿ ಅಸಮಧಾನ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಮೈತ್ರಿಯಲ್ಲಿ ಜತೆಗೂಡಿ ಚುನಾವಣೆ ಎದುರಿಸಿದ್ದೇವೆ. ಪ್ರತ್ಯೇಕ ಚುನಾವಣೆ ಮಾಡಿದ್ದರೆ ಅನುಕೂಲವಾಗುತ್ತೇನೋ, ಜತೆಗೂಡಿ ಚುನಾವಣೆ ನಡೆಸಿದ್ದರಿಂದ ಅನಾನುಕೂಲವಾಗಿದೆ ಎಂಬ ವಿಚಾರಗಳು ಚರ್ಚೆಗೆ ಬರುವುದು ಸಹಜ. ಅಲ್ಲದೆ ವೀರಪ್ಪ ಮೊಯ್ಲಿ ಸಾಹೇಬರು ಹಿರಿಯರು ಅವರು ವಿಶ್ಲೇಷಣೆ ಮಾಡುತ್ತಾರೆ. ಆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಜೆಡಿಎಸ್ ಜೊತೆ ಹೋಗಿ ನಮ್ಮ ಸಮಯ ವೇಸ್ಟ್ ಆಯ್ತು: ಮೊಯ್ಲಿ

    ಜೆಡಿಎಸ್ ಜೊತೆ ಹೋಗಿ ನಮ್ಮ ಸಮಯ ವೇಸ್ಟ್ ಆಯ್ತು: ಮೊಯ್ಲಿ

    ಚಿಕ್ಕಬಳ್ಳಾಪುರ: ನಮ್ಮ ಕಾರ್ಯಕರ್ತರು ಜೆಡಿಎಸ್ ಜೊತೆ ಹೋಗಿದ್ದಕ್ಕೆ ನಮ್ಮ ಸಮಯ ವ್ಯರ್ಥವಾಯಿತು. ಅವರ ಬೆಂಬಲ ಕೂಡ ನಮಗೆ ಸಿಗಲಿಲ್ಲ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಹೋಗಿ ನಾವು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇವೆ. ಲೋಕಭೆಯಲ್ಲಿ ನಮಗೆ ಕಹಿ ಅನುಭವವಾಗಿದೆ. ಅದು ಮುಂದೆ ಆಗದಂತೆ ನೋಡಿಕೊಳ್ಳಬೇಕು. ನಮ್ಮ ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಎದುರಿಸಬೇಕು. ಮೇಲ್ನೋಟಕ್ಕೆ ಜೆಡಿಎಸ್ ಅವರ ಬೆಂಬಲ ನಮಗೆ ಸಿಗಲಿಲ್ಲ. ಅನೇಕ ಕಡೆ ನಮ್ಮ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಪೋರ್ಟ್ ಮಾಡಲಿಲ್ಲ. ಜೊತೆಗೆ ನಮ್ಮ ಸಮಯವೂ ವ್ಯರ್ಥವಾಯಿತು ಎಂದು ವೀರಪ್ಪಮೊಯ್ಲಿ ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುತ್ತೆ ಅನ್ನೋ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ದೇವೆಗೌಡರು ಇಂದು ಒಂದು ಹೇಳುತ್ತಾರೆ, ನಾಳೆ ಒಂದು ಹೇಳುತ್ತಾರೆ. ಆದರೆ ನಾನು ದೇವೇಗೌಡರ ರೀತಿ ಹೇಳಿಕೆ ಕೊಡಲ್ಲ. ಹೀಗಾಗಿ ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನೂ ನಾನಲ್ಲ ಎಂದು ಮೋಯ್ಲಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

    ಸರ್ಕಾರದ ಬಗ್ಗೆ ಮತದಾರರಿಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಮೈತ್ರಿ ನಂಬಿ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಾಯಿತು. ಆದ್ದರಿಂದ ಮೈತ್ರಿ ಇಲ್ಲವಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತಿತ್ತು. ಸಮ್ಮಿಶ್ರ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದೇ ಇರುವುದು ಸಹ ಸೋಲಿಗೆ ಕಾರಣವಾಗಿದೆ. ಸರ್ಕಾರ ಉಳಿಸಿಕೊಳ್ಳಲು ಕೇವಲ ಹರಸಾಹಸ ಪಡುತ್ತಿದ್ದಾರೆ ಎಂದು ಸರ್ಕಾರದ ಬಗ್ಗೆ ಮೋಯ್ಲಿ ಅಸಾಮಾಧಾನ ವ್ಯಕ್ತಪಡಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಜೆಡಿಎಸ್ ಜೊತೆ ಹೊಂದಾಣಿಕೆ ಸರಿಹೋಗದ್ದಕ್ಕೆ ನನಗೆ ಸೋಲು – ಮೊಯ್ಲಿ

    ಜೆಡಿಎಸ್ ಜೊತೆ ಹೊಂದಾಣಿಕೆ ಸರಿಹೋಗದ್ದಕ್ಕೆ ನನಗೆ ಸೋಲು – ಮೊಯ್ಲಿ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಸರಿಹೋಗಲಿಲ್ಲ ಎಂದು ಮೈತ್ರಿ ಅಭ್ಯರ್ಥಿಯಾಗಿದ್ದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

    ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ಮಾಡುತ್ತೇವೆ. ಚುನಾವಣೆಯಲ್ಲಿ ನಾಯಕರು ಹೊಂದಾಣಿಕೆ ಮಾಡಿಕೊಂಡರೆ ಸರಿಹೋಗುವುದಿಲ್ಲ ತಳಮಟ್ಟದಲ್ಲೂ ಹೊಂದಾಣಿಕೆ ಆಗುವುದು ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಎರಡೂ ಪಕ್ಷಗಳ ನಾಯಕರು ಹೊಂದಾಣಿಕೆಯನ್ನು ಜವಾಬ್ದಾರಿಯಿಂದ ನಿರ್ವಹಿಸಲಿಲ್ಲ. ಸೂಕ್ತ ಹೊಂದಾಣಿಕೆ ಇದ್ದಿದ್ದರೆ ಈ ರೀತಿಯ ಫಲಿತಾಂಶ ಬರುತ್ತಿರಲಿಲ್ಲ. ಸಮನ್ವಯತೆಯ ಕೊರತೆಯೇ ಈ ಫಲಿತಾಂಶಕ್ಕೆ ಮೂಲ ಕಾರಣ. ಸರ್ಕಾರದ ಮಟ್ಟದಲ್ಲಿ ಹೊಂದಾಣಿಕೆ ಆಗಿತ್ತು ಆದರೆ ತಳಮಟ್ಟದಲ್ಲಿ ಹೊಂದಾಣಿಕೆ ಆಗಬೇಕು. ಈ ಕೆಲಸ ಮೊದಲು ಆಗಬೇಕು ಎಂದು ಹೇಳಿದರು.

    ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಮೊಯ್ಲಿ ಅವರು, ಯಡಿಯೂರಪ್ಪ ಅವರ ಅಸ್ತಿತ್ವ ಆಪರೇಷನ್ ಕಮಲದಿಂದಲೇ ಇರೋದು. ಅದಕ್ಕಾಗಿ ಯಡಿಯೂರಪ್ಪ ಯಾವಾಗಲೂ ಆಪರೇಷನ್ ಕಮಲ ಎನ್ನುತ್ತಿರುತ್ತಾರೆ ಎಂದು ಆರೋಪ ಮಾಡಿದರು. ರಾಷ್ಟ್ರ ಮತ್ತು ರಾಜ್ಯದ ದೃಷ್ಟಿಯಿಂದ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರಬೇಕು. ಸರ್ಕಾದದಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಂಡು ಸರ್ಕಾರ ಮುನ್ನಡೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

  • ಜ್ಯೋತಿಷ್ಯ ಹೇಳೋದು ಯಾವಾಗ ಕಲಿತಿದ್ದೀರಿ- ಬಿಎಸ್‍ವೈಗೆ ಮೊಯ್ಲಿ ಟಾಂಗ್

    ಜ್ಯೋತಿಷ್ಯ ಹೇಳೋದು ಯಾವಾಗ ಕಲಿತಿದ್ದೀರಿ- ಬಿಎಸ್‍ವೈಗೆ ಮೊಯ್ಲಿ ಟಾಂಗ್

    ಚಿಕ್ಕಬಳ್ಳಾಪುರ: ಭವಿಷ್ಯ ಹೇಳುವುದನ್ನು ಯಾವಾಗ ಕಲಿತಿದ್ದೀರಿ ಎಂದು ಸಂಸದ ವೀರಪ್ಪ ಮೊಯ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿ ಟಾಂಗ್ ಕೊಟ್ಟಿದ್ದಾರೆ.

    ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಚಿಕ್ಕಬಳ್ಳಾಪುರ ತಾಲೂಕು ಮಂಚನಬಲೆ ಗ್ರಾಮದ ಬೀರೇಶ್ವರ ಜಾತ್ರಾ ಮಹೋತ್ಸವದಲ್ಲಿ ತಿರುಗೇಟು ನೀಡಿದ ವೀರಪ್ಪ ಮೊಯ್ಲಿ ಅವರು, ಬಿಎಸ್‍ವೈ ಅವರದ್ದು ಹುಚ್ಚು ಮಾತುಗಳು. ಮೊದಲು ಯಡಿಯೂರಪ್ಪ ತಲೆಗೆ ಸ್ನಾನ ಮಾಡಿಕೊಂಡು ಸರಿ ಮಾಡಿಕೊಳ್ಳಲಿ ಎಂದರು.

    ಮುಖ್ಯಮಂತ್ರಿಯಾಗಬೇಕು ಎಂಬುದು ಬಿ.ಎಸ್.ಯಡಿಯೂರಪ್ಪನವರ ಗುರಿ. ಆದರೆ ಅವರು ಈ ಜನ್ಮದಲ್ಲಿಯೇ ಸಿಎಂ ಆಗಲ್ಲ. ಯಡಿಯೂರಪ್ಪನವರ ಮಾತಿನಿಂದ ಯಾರೂ ಗಾಬರಿಯಾಗಬೇಕಿಲ್ಲ. ನೂರಕ್ಕೆ ನೂರರಷ್ಟು ನಾನು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಎಸ್‍ವೈ ಹೇಳಿದ್ದೇನು?:
    ಬಿಜೆಪಿ ನಾಯಕರ ಸಭೆಯಲ್ಲಿ ಮಾತನಾಡಿದ್ದ ಬಿ.ಎಸ್.ಯಡಿಯೂರಪ್ಪ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರು ಸೋಲುವು ಖಚಿತ. ಅಷ್ಟೇ ಅಲ್ಲದೆ ಕೋಲಾರ ಕ್ಷೇತ್ರದಲ್ಲಿ ಕೆ.ಎಚ್.ಮುನಿಯಪ್ಪ, ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೋಲುತ್ತಾರೆ ಎಂದು ಹೇಳಿದ್ದರು.

  • ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ರೈಲು ವಿಸ್ತರಣೆ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ರೈಲು ವಿಸ್ತರಣೆ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರ ತೀವ್ರಗತಿಯಲ್ಲಿ ಅಭಿವೃದ್ದಿ ಹೊಂದುತ್ತಿದ್ದು, ಮುಂದಿನ ದಿನಗಳಲ್ಲಿ ಉಪನಗರವಾಗಿ ಚಿಕ್ಕಬಳ್ಳಾಪುರ ಬೆಳೆಯಿಲಿದೆ. ಹೀಗಾಗಿ ಜಿಲ್ಲಾ ಕೇಂದ್ರಕ್ಕೆ ಮೆಟ್ರೋ ರೈಲು ವಿಸ್ತರಣೆ ಮಾಡುವುದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಆಶ್ವಾಸನೆ ನೀಡಿದ್ದಾರೆ.

    ಮತದಾನಕ್ಕೆ ಕೆಲ ದಿನಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ವೀರಪ್ಪ ಮೊಯ್ಲಿ ಅವರು ಬಿಡುವಿಲ್ಲದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ರೋಡ್ ಶೋ ನಡೆಸಿ ಮಾತನಾಡಿದ ವೀರಪ್ಪಮೊಯ್ಲಿ ಅವರು, ಎರಡು ಬಾರಿ ಚಿಕ್ಕಬಳ್ಳಾಪುರದ ಜನ ನನ್ನ ಕೈ ಹಿಡಿದಿದ್ದಾರೆ. ಮುಂದಿನ 5 ವರ್ಷಗಳಲ್ಲಿ ನಾನು ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ರೈಲು ವಿಸ್ತರಣೆ ಮಾಡುವುದಾಗಿ ಆಶ್ವಾಸನೆ ನೀಡಿದರು.

    ಇದಕ್ಕೂ ಮುನ್ನ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಕಾಮಗಾರಿ ಭರದಿಂದ ಸಾಗಿದೆ. ಮತ್ತೊಂದೆಡೆ ಕೃಷ್ಣಾ ನದಿಯ ನೀರನ್ನ ಸಹ ಬಾಗೇಪಲ್ಲಿ ಭಾಗದಿಂದ ಈ ಕ್ಷೇತ್ರಕ್ಕೆ ತರುವುದಾಗಿ ತಿಳಿಸಿದರು. ಅಲ್ಲದೇ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಮಾರ್ಗದಲ್ಲಿ ಕೈಗಾರಿಕಾ ವಲಯ ಗುರುತಿಸಿ, ಈಗಾಗಲೇ ಬಜೆಟ್ ನಲ್ಲಿ ಘೋಷಣೆಯಾಗಿರುವ ಮೊಬೈಲ್ ಬಿಡಿಭಾಗಗಳ ಉತ್ಪಾದನಾ ಘಟಕ ಆರಂಭಿಸುವುದಾಗಿ ಪ್ರಚಾರ ಭಾಷಣದಲ್ಲಿ ಹೇಳಿದರು.

    ಮನೆ ಮನೆಗೆ ಕುಡಿಯುವ ನೀರು, ಹೊಲ ಹೊಲಕ್ಕೆ ಜಲ, ಮನೆ ಮನೆಗೆ ಯುವಕರಿಗೆ ಉದ್ಯೋಗ ನೀಡುವುದೇ ತಮ್ಮ ಸಂಕಲ್ಪ ಎಂದು ವೀರಪ್ಪ ಮೊಯ್ಲಿ ಘೋಷಣೆ ಮಾಡಿದರು. ಇದೆಲ್ಲದರ ನಡುವೆ ಚರ್ಚ್‍ಗಳಿಗೆ ಭೇಟಿ ನೀಡಿದ ವೀರಪ್ಪ ಮೊಯ್ಲಿ ಪ್ರಾರ್ಥನೆ ಸಲ್ಲಿಸಿ, ಮತಯಾಚನೆ ಮಾಡಿದರು.

  • ಧರ್ಮಸ್ಥಳ ಮಂಜುನಾಥನ ಪಾದ ತೊಳೆಯುವ ಪರಿಶುದ್ಧ ನೀರು ಮನೆ ಬಾಗಿಲಿಗೆ ಬರಲಿದೆ: ವೀರಪ್ಪಮೊಯ್ಲಿ

    ಧರ್ಮಸ್ಥಳ ಮಂಜುನಾಥನ ಪಾದ ತೊಳೆಯುವ ಪರಿಶುದ್ಧ ನೀರು ಮನೆ ಬಾಗಿಲಿಗೆ ಬರಲಿದೆ: ವೀರಪ್ಪಮೊಯ್ಲಿ

    ಚಿಕ್ಕಬಳ್ಳಾಪುರ: ಬಿಸ್ಲೆರಿ ಬಾಟಲಿಗಿಂತ ಶುದ್ಧವಾದ ಹಾಗೂ ಧರ್ಮಸ್ಥಳ ಮಂಜುನಾಥನ ಪಾದ ತೊಳೆಯುವಂತಹ ಪರಿಶುದ್ಧ ನೀರು ಮನೆ ಬಾಗಿಲಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಹೇಳಿದ್ದಾರೆ.

    ಎತ್ತಿನಹೊಳೆ ಯೋಜನೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್ ಬಳಿ ಕೇಳಿಕೊಂಡರೂ ನಯಾಪೈಸೆ ಬಿಡುಗಡೆ ಮಾಡಲಿಲ್ಲ. ಆದರೆ ಪುಣ್ಯಾತ್ಮ ಸಿದ್ದರಾಮಯ್ಯ 14 ಸಾವಿರ ಕೋಟಿ ರೂಪಾಯಿ ಹಣ ಮಂಜೂರು ಮಾಡಿದರು. ಹೀಗಾಗಿ ಅಂದಿನಿಂದ ಹಗಲು ರಾತ್ರಿ ಎನ್ನದೆ ಎತ್ತಿನಹೊಳೆ ಯೋಜನೆಯ ಕಾಮಗಾರಿ ಭರದಿಂದ ಸಾಗಿದೆ ಎಂದರು.

    ಕೇವಲ 80 ಕಿ.ಮೀ ನಷ್ಟು ಕೆಲಸ ಮಾತ್ರ ಬಾಕಿ ಇದೆ. ಇನ್ನೂ ಒಂದೆರೆಡು ವರ್ಷದಲ್ಲಿ ಬಿಸ್ಲೆರಿ ಬಾಟಲಿಗಿಂತಲೂ ಶುದ್ಧವಾದ ಹಾಗೂ ಶ್ರೀ ಧರ್ಮಸ್ಥಳದ ಮಂಜುನಾಥನ ಪಾದ ತೊಳೆಯುವಂತಹ ಪರಿಶುದ್ಧವಾದ ನೀರು ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ವೀರಪ್ಪಮೊಯ್ಲಿ ಹೇಳಿದರು.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ತಿಪ್ಪೇನಹಳ್ಳಿ ಗ್ರಾಮದಲ್ಲಿ ವೀರಪ್ಪಮೊಯ್ಲಿ ಚುನಾವಣಾ ಪ್ರಚಾರದ ಸಭೆ ನಡೆಸಿದರು. ಈ ವೇಳೆ ವೀರಪ್ಪಮೊಯಿಗೆ ಶಾಸಕ ಸುಧಾಕರ್ ಸಾಥ್ ನೀಡಿದರು.

  • ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ, ನಿಜವಾದ ಒಕ್ಕಲಿಗ ನಾನು: ವೀರಪ್ಪ ಮೊಯ್ಲಿ

    ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ, ನಿಜವಾದ ಒಕ್ಕಲಿಗ ನಾನು: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಮೂವರನ್ನು ಮಂತ್ರಿ ಮಾಡಿದ್ದೆ. ಹಾಸನದಲ್ಲೂ ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಿದ್ದೆ. ಅಷ್ಟು ಮಟ್ಟದಲ್ಲಿ ಒಕ್ಕಲಿಗ ಶಾಸಕರನ್ನು ಸಚಿವರನ್ನಾಗಿ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

    ಚಿಕ್ಕಬಳಾಪುರ ವಿಧಾನಸಭಾ ಕ್ಷೇತ್ರದ ಮಂಚನಬಲೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ಎಲ್ಲಾ ಕಡೆ ಒಕ್ಕಲಿಗರನ್ನ ಮಂತ್ರಿ ಮಾಡಿದ್ದು ನಾನೇ. ಶಾಸಕ ಡಾ.ಸುಧಾಕರ್ ಅವರನ್ನು ಸಹ ಮಂತ್ರಿ ಮಾಡುವುದು ನಾನೇ. ಹೀಗಾಗಿ ಒಕ್ಕಲಿಗ ಸಮುದಾಯಕ್ಕೆ ಅತಿ ಹೆಚ್ಚು ಕೊಡುಗೆ ಕೊಟ್ಟ ನಾನು ನಿಜವಾದ ಒಕ್ಕಲಿಗ. ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ ಎಂದು ಹೇಳಿದರು.

    ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಜಾತಿ ಹೆಸರಲ್ಲಿ ನನಗೆ ಮತ ನೀಡದಂತೆ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ನೀವು ಜಾತಿ ನೋಡದೇ ನನಗೆ ಮತ ನೀಡಿ. ಈ ಬಾರಿಯೂ ಗೆಲ್ಲಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ಮತದಾರರ ಮನವೊಲಿಸಿದರು.

    ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಸಿಯೇ ನಾನು ಪ್ರಾಣ ಬಿಡುತ್ತೇನೆ ಎಂದು ಪುನರುಚ್ಚರಿಸಿದ ಸಂಸದರು, ಇದಕ್ಕೆ ಅನೇಕ ಮಂದಿ ವಿರೋಧಿಸಿದರು. ಆದರೆ ನಾನು ಹೆದರುವುದಿಲ್ಲ. ಈ ಭಾಗಕ್ಕೆ ನೀರು ಹರಿಸದೆ ಸಾಯುವುದಿಲ್ಲ. ಎತ್ತಿನಹೊಳೆ ಯೋಜನೆಯಿಂದ ಕರಾವಳಿ ಭಾಗದ ಜನರು ನನಗೆ ಕಪ್ಪು ಪತಾಕೆ ಹಾರಿಸಿದರು. ನಾನು ಅವರ ವಿರೋಧ ಕಟ್ಟಿಕೊಂಡೆ. ಯಾಕೆ ಸ್ವಂತ ಊರಿನವರ ವಿರೋಧ ಕಟ್ಟಿಕೊಳ್ಳುತ್ತಿಯಾ ಅಂತ ನನ್ನ ಕೆಲ ಹಿತೈಷಿಗಳು ಹೇಳಿದರು. ಆದರೆ ಎತ್ತಿನಹೊಳೆ ನೀರನ್ನು ಈ ಭಾಗಕ್ಕೆ ಹರಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಜನರಿಗೆ ಮಾತುಕೊಟ್ಟಿದ್ದೇನೆ. ಹೀಗಾಗಿ ಎತ್ತಿನಹೊಳೆ ಕಾಮಗಾರಿ ಐದು ವರ್ಷದಿಂದ ಭರದಿಂದ ಸಾಗುತ್ತಿದೆ. ಅದಕ್ಕೆ ಅಡ್ಡಿಪಡಿಸುವ ಕೆಲಸವನ್ನು ಈಗಲೂ ಮಾಡುತ್ತಿದ್ದಾರೆ. ನಾನು ಧರ್ಮಸ್ಥಳದ ಮಂಜುನಾಥನ ಪಾದ ತೊಳೆಯುವ ಪರಿಶುದ್ಧವಾದಂತಹ ಎತ್ತಿನಹೊಳೆ ನೀರನ್ನು ಹರಿಸಿಯೇ ಸಿದ್ಧ ಎಂದರು.

  • ಘಟಾನುಘಟಿ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ-ಎಲೆಕ್ಷನ್ ಗೆಲ್ಲಲು ದೇವಮೂಲೆಗೆ ಮೊರೆ!

    ಘಟಾನುಘಟಿ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ-ಎಲೆಕ್ಷನ್ ಗೆಲ್ಲಲು ದೇವಮೂಲೆಗೆ ಮೊರೆ!

    ಚಿಕ್ಕಬಳ್ಳಾಪುರ: ಲೋಕಸಭಾ ಅಖಾಡದಲ್ಲಿರೋ ಈ ಇಬ್ಬರು ಘಟಾನುಘಟಿ ನಾಯಕರುಗಳಿಗೆ ಮಾಡು ಇಲ್ಲವೇ ಮಡಿ ಎನ್ನುವಂತಾಗಿದೆ. ಒಬ್ಬರು ಮಂತ್ರಿಯಾಗಿ ಹೆಸರು ಮಾಡಿದ್ರೆ ಮತ್ತೊಬ್ಬರು ಮುಖ್ಯಮಂತ್ರಿಗಳಾಗಿ ಹೆಸರು ಮಾಡಿದವರು. ಈ ಬಾರಿ ಗೆಲ್ಲಲೇ ಬೇಕು ಅಂತ ಹಠಕ್ಕೆ ಬಿದ್ದ ಇವರಿಬ್ಬರೂ ಇದೀಗ ದೇವಮೂಲೆಯ ಮೊರೆ ಹೋಗಿದ್ದಾರೆ.

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಳೆದ ಭಾರಿ ತ್ರಿಕೋನ ಸ್ಪರ್ಧೆ ನಡುವೆಯೂ ಸುಲಭವಾಗಿ ಗೆಲುವು ಸಾಧಿಸಿದ್ದ ಮೊಯ್ಲಿ, ಈ ಬಾರಿ ಜಯಕ್ಕಾಗಿ ಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮೈತ್ರಿ ಕಾರ್ಯಕರ್ತರಲ್ಲಿ ಸಮನ್ವಯ ಮೂಡದ ಕಾರಣ ಮೊಯ್ಲಿ ಏನಾದ್ರು ಮಾಡಿ ಈ ಬಾರಿಯೂ ತಮ್ಮನ್ನು ಗೆಲ್ಲಿಸುವಂತೆ ದೇವರ ಮೊರೆ ಹೋಗಿದ್ದಾರೆ. ಹಾಗಾಗಿ ಬಾಗೇಪಲ್ಲಿ ತಾಲೂಕಿನ ಗೂಳೂರು, ಚಾಕವೇಲು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.

    ತಮ್ಮ ಎದುರಾಳಿ ಅಭ್ಯರ್ಥಿ ದೇವಮೂಲೆಯಿಂದ ಪ್ರಚಾರ ಆರಂಭಿಸಿದ್ದೆ ತಡ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಸಹ, ತಮ್ಮ ಅಪಾರ ಬೆಂಬಲಿಗರ ಜೊತೆ ಬಾಗೇಪಲ್ಲಿಯ ಚಾಕವೇಲು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಅಧಿಕೃತ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಕ್ಷೇತ್ರದ ದೇವಮೂಲೆಯಿಂದ ಈ ಬಾರಿ ಚುನಾವಣಾ ಪ್ರಚಾರ ಮಾಡಿದ್ರೆ ಗೆಲ್ಲುತ್ತೀರಿ ಅಂತ ಪಂಡಿತರು ಹೇಳಿದ್ದರಿಂದ ಈ ಇಬ್ಬರು ನಾಯಕರು ಚಾಚು ತಪ್ಪದೆ ಪಾಲಿಸುತ್ತಿದ್ದಾರೆ. ಇಬ್ಬರು ದೇವಮೂಲೆಯಲ್ಲಿರುವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ.

    ಇಬ್ಬರು ಘಟಾನುಘಟಿ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಲೆಕ್ಕಚಾರ ತಪ್ಪಾಗಬಾರದೆಂಬ ಲೆಕ್ಕದಲ್ಲಿ ಹೋದ ಕಡೆಯೆಲ್ಲಾ ದೇವರ ಮೊರೆ ಹೋಗುತ್ತಿದ್ದಾರೆ.

  • ಕಾಂಗ್ರೆಸ್‍ಗೆ ಮತ ನೀಡಿ ಕುಮಾರಸ್ವಾಮಿ ಸಿಎಂ ಸ್ಥಾನ ಭದ್ರಗೊಳಿಸಿ: ವೀರಪ್ಪ ಮೊಯ್ಲಿ

    ಕಾಂಗ್ರೆಸ್‍ಗೆ ಮತ ನೀಡಿ ಕುಮಾರಸ್ವಾಮಿ ಸಿಎಂ ಸ್ಥಾನ ಭದ್ರಗೊಳಿಸಿ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಕಾಂಗ್ರೆಸ್‍ಗೆ ಮತ ನೀಡಿ ಎಚ್.ಡಿ.ಕುಮಾರಸ್ವಾಮಿ ಅವರ ಸಿಎಂ ಸ್ಥಾನವನ್ನು ಭದ್ರಗೊಳಿಸಿ ಎಂದು ದೋಸ್ತಿ ಸರ್ಕಾರದ ಅಭ್ಯರ್ಥಿ, ಸಂಸದ ವೀರಪ್ಪ ಮೊಯ್ಲಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಬಾಗೇಪಲ್ಲಿ ತಾಲೂಕು ತಿಮ್ಮಂಪಲ್ಲಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹದ್ದಿನ ಕಣ್ಣು ಮುಖ್ಯಮಂತ್ರಿ ಸ್ಥಾನದ ಮೇಲಿದೆ. ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಸಿಎಂ ಆಗುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಕನಸು ಕಾಣುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರನ್ನು ಉಳಿಸಲು ಕಾಂಗ್ರೆಸ್ ಅಭ್ಯರ್ಥಿಯಾದ ನನಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

    ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಕನಸನ್ನು ಸುಳ್ಳು ಮಾಡಲು ಕಾಂಗ್ರೆಸ್‍ಗೆ ಮತ ಹಾಕಿ. ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಅವರಿಗೆ ಮತ ಹಾಕಬೇಡಿ. ಕಾಂಗ್ರೆಸ್ ಅನ್ನು ಬೆಂಬಲಿಸುವ ಮೂಲಕ ಈ ಭಾಗದ ಸಚಿವ ಶಿವಶಂಕರ್ ರೆಡ್ಡಿ ಹಾಗೂ ಕುಮಾರಸ್ವಾಮಿ ಅವರ ಸ್ಥಾನವನ್ನು ಭದ್ರಗೊಳಿಸಿ ಎಂದು ಮತದಾರರಲ್ಲಿ ವಿನಂತಿಸಿಕೊಂಡರು.

  • ಮೊಯ್ಲಿ ಹೆಸರೇ ನಮ್ಮ ಗೆಲುವಿಗೆ ಶ್ರೀರಕ್ಷೆ, ಮೊಯ್ಲಿ ಅಂದ್ರೆ ಸಾಕು ನಾವ್ ಗೆದ್ದು ಬಿಡ್ತೀವಿ: ಸುಧಾಕರ್

    ಮೊಯ್ಲಿ ಹೆಸರೇ ನಮ್ಮ ಗೆಲುವಿಗೆ ಶ್ರೀರಕ್ಷೆ, ಮೊಯ್ಲಿ ಅಂದ್ರೆ ಸಾಕು ನಾವ್ ಗೆದ್ದು ಬಿಡ್ತೀವಿ: ಸುಧಾಕರ್

    ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ ವೀರಪ್ಪ ಮೊಯ್ಲಿ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ಶ್ರಮಿಸಬೇಕು ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ಪಕ್ಷದ ಕಾಂಗ್ರೆಸ್ ಕಚೇರಿಯಲ್ಲಿ ತಮ್ಮ ಬೆಂಬಲಿಗರ ನೇತೃತ್ವದಲ್ಲಿ ಚುನಾವಣಾ ಸಂಬಂಧ ಶಾಸಕ ಸುಧಾಕರ್ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನ ಬೆಂಬಲಿಸಬೇಕು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಾವು ನಮಗೆ ಎಷ್ಟೇ ನೋವಾಗಿದ್ದರೂ, ಕೆಲ ನಾಯಕರಿಂದ ಅವಮಾನ ಆಗಿದ್ರೂ, ಪಕ್ಷಕ್ಕೆ ನಿಷ್ಠೆಯಿಂದ ಇರುತ್ತೇವೆ. ನಾನು ನನ್ನ ಕಾರ್ಯಕರ್ತರು ಮತ್ತು ಬೆಂಬಲಿಗರು ಎಂದೂ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ ಮಾಡಲ್ಲ ಎಂದು ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ.

    ಸೋಮವಾರ ವೀರಪ್ಪ ಮೊಯ್ಲಿ ನಾಮಪತ್ರ ಸಲ್ಲಿಸಲಿದ್ದು, ಅಂದೇ ಬಿಜೆಪಿ ಅಭ್ಯರ್ಥಿ ಸಹ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಂದು ಕಾಂಗ್ರೆಸ್ ಕಾರ್ಯಕರ್ತರು ಸಮಯಕ್ಕೆ ಸರಿಯಾಗಿ ಬರಬೇಕು ಎಂದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ವೀರಪ್ಪ ಮೊಯ್ಲಿ ಅವರೇ ನಮ್ಮ ಶಕ್ತಿ, ಮೊಯ್ಲಿ ಹೆಸರೇ ನಮ್ಮ ಗೆಲುವಿಗೆ ಶ್ರೀರಕ್ಷೆ, ವೀರಪ್ಪ ಮೊಯ್ಲಿ ಅಂದರೆ ಸಾಕು ನಾವ್ ಗೆದ್ದು ಬಿಡುತ್ತೇವೆ. ಅವರ ಹೆಸರೇ ನಮ್ಮನ್ನ ಗೆಲ್ಲಿಸಲಿದೆ ಎಂದರು.

    ಕಳೆದ ವಿಧಾನಸಭಾ ಚುನಾವಣೆ ವೇಳೆ ನಾನು 80 ಸಾವಿರ ಮತಗಳನ್ನ ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ 50 ಸಾವಿರ ಮತಗಳನ್ನ ಪಡೆದಿದ್ದರು. ಸ್ವತಂತ್ರ ಅಭ್ಯರ್ಥಿ ಸಹ 29 ಸಾವಿರ ವೋಟು ಪಡೆದಿದ್ದರು. ಈ ಎಲ್ಲಾ ಮತಗಳು ಈಗ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರಿಗೆ ಸಿಗಬೇಕು. ಚಿಕ್ಕಬಳ್ಳಾಪುರ ವಿಧಾನಸಬಾ ಕ್ಷೇತ್ರದಿಂದಲೇ 1.5 ಲಕ್ಷದ ಮತಗಳನ್ನ ನಾವು ಕೊಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅತಿ ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದರು.