Tag: veerashaiva

  • ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    – ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ತಳಕು ಹಾಕಬಾರದು

    ಬೆಂಗಳೂರು: ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನ ಬೇರ್ಪಡಿಸಲು ಸಾಧ್ಯವಿಲ್ಲ. ʻವೀರಶೈವ ಲಿಂಗಾಯತರು (Lingayats) ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ, ಅವರು ಸುಧಾರಿಸಿದ್ರೆ, ಕರ್ನಾಟಕ ಉದ್ಧಾರ ಆಗುತ್ತೆʼ ಅಂತ ಸಾಹಿತಿಯೊಬ್ಬರು ಹೇಳ್ತಾರೆ. ಹಾಗಾಗಿ ಎಲ್ಲರ ಉದ್ಧಾರ ಆಗಬೇಕಾದ್ರೆ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯವಶ್ಯಕವಾಗಿದೆ. ಯಾರಾದ್ರೂ ಈ ಧರ್ಮವನ್ನ ಹಾಳು ಮಾಡಲು ಪ್ರಯತ್ನಿಸಿದ್ರೆ, ಇಡೀ ಕರ್ನಾಟಕವೇ ಹಾಳಾಗುತ್ತೆ ಎಂದು ಸಚಿವ ಈಶ್ವರ್‌ ಖಂಡ್ರೆ (Eshwar Khandre) ಹೇಳಿದ್ದಾರೆ.

    ʻಪಬ್ಲಿಕ್‌ ಟಿವಿʼ ಜೊತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆಗೆ ಪ್ರತಕ್ರಿಯಿಸಿದ್ದಾರೆ. ಎಂ.ಬಿ.ಪಾಟೀಲ್ ನನಗೆ ಸ್ನೇಹಿತರು ಅವರ ಬಗ್ಗೆ ಮಾತನಾಡಲ್ಲ. ಯಾರಿಂದಲೂ ವೀರಶೈವ ಲಿಂಗಾಯತ (Veerashaiva Lingayat) ಬೇರೆ ಮಾಡಲು ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದಲೇ ಇದೀವಿ. ಅಲ್ಲದೇ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರನ್ನ ತಳಕು ಹಾಕಬಾರದು. ಈ ಹಿಂದೆಯೂ ಅವರಿಗೆ ಸಂಬಂಧ ಇರಲಿಲ್ಲ, ಈಗಲೂ ಇಲ್ಲ, ನಮ್ಮ ಸರ್ಕಾರಕ್ಕೂ ಇಲ್ಲ. ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯವೇ ಅಂತಿಮ ಎಂದು ಹೇಳಿದ್ದಾರೆ.

    ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ಬೆಂಗಳೂರು: ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ (Veerashaiva Lingayat Religion) ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

    ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

    ಬೆಂಗಳೂರು: ಕಾಂಗ್ರೆಸ್‌ನ ವೀರಶೈವ, ಲಿಂಗಾಯತ (Veerashaiva, Lingayat) ಸಚಿವರಲ್ಲಿ ಮತ್ತೊಮ್ಮೆ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರತ್ಯೇಕ ಲಿಂಗಾಯತ ಧರ್ಮದ (Separate Lingayat Religion) ಕೂಗಿನ ವಿಚಾರದಲ್ಲಿ ಮೂಡಿರುವ ಅಸಮಾಧಾನ ಮತ್ತೊಮ್ಮೆ ಸಚಿವ ಈಶ್ವರ್ ಖಂಡ್ರೆ ವರ್ಸಸ್ ಎಂ.ಬಿ ಪಾಟೀಲ್ ಫೈಟ್ ಜೋರಾಗುವ ಸಾಧ್ಯತೆಯಿದೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು. ವೀರಶೈವರು ಲಿಂಗಾಯತದ ಒಂದು ಭಾಗ ಎಂದು ಎಂಬಿ ಪಾಟೀಲ್‌ (MB Patil) ಹೇಳಿದರೆ ವೀರಶೈವ – ಲಿಂಗಾಯತ ಎರಡೂ ಒಂದೇ ಎಂಬ ವಾದವನ್ನು ಈಶ್ವರ್ ಖಂಡ್ರೆ (Eshwar Khandre) ಪುನರುಚ್ಚರಿಸಿದ್ದಾರೆ.

    2017 ರಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ಇದೇ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿತ್ತು. ಈಗ ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮ ಕೂಗು ಎದ್ದ ಬೆನ್ನಲ್ಲೇ ಮತ್ತೆ ವೀರಶೈವ, ಲಿಂಗಾಯತ ನಾಯಕರ ಮಧ್ಯೆ ಜಟಾಪಟಿ ಜೋರಾಗುವ ಸಾಧ್ಯತೆಯಿದೆ.  ಇದನ್ನೂ ಓದಿ:  ಕೊಪ್ಪಳದ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್

    ಈಶ್ವರ್‌ ಖಂಡ್ರೆ ಹೇಳಿದ್ದೇನು?
    ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಅಭಿಪ್ರಾಯ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡು ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಳು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿವೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ.ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾವರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು.ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ದರಾಗಿದ್ದೇವೆ ಎಂದರು. ಇದನ್ನೂ ಓದಿ: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬಿತ್ತು ಮರ – ಯುವತಿಯ ಮೃತದೇಹ ವಿಕ್ಟೋರಿಯಾಗೆ ರವಾನೆ

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ್ಯ ಪೂರ್ವದಿಂದ ಹಿಡಿದು 2000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ . ಭೌಗೋಳಿಕವಾಗಿ ನಾವೆಲ್ಲರು ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ದ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ‌ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ‌ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಪ್ರತ್ಯೇಕ ಧರ್ಮದ ವಿಚಾರ ಮತ್ರು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದರೂ ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ‌ಕೂಡಾ ನೀವೆಲ್ಲರೂ ಬಂದು ಏನ್ ಹೇಳುತ್ತಿರೋ ಅದನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆಯೇ ವಿನಾ: ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

  • ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆ

    ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆ

    ಹುಬ್ಬಳ್ಳಿ: ರಷ್ಯಾದ (Russia) 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಈಗ ಗಣೇಶನಾಗಿ ಬದಲಾಗಿದ್ದಾನೆ.

    ಈ ಹಿಂದೆ ಉತ್ತರ ಕನ್ನಡ ಗೋಕರ್ಣದಲ್ಲಿ ಸಾವಿರಾರು ಜನರು ಕಾಶಿ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದರು. ಈ ವೇಳೆ ರಷ್ಯಾದ ಮಹಿಳೆಯಾದ ಬಾಲಕನ ತಾಯಿ ಸಹ ವೀರಶೈವ ಧರ್ಮ ಸ್ವೀಕರಿಸಿದ್ದರು. ಬಳಿಕ ಪಾರ್ವತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಅವರು ಚಾಚು ತಪ್ಪದೆ ವೀರಶೈವ ಧರ್ಮವನ್ನು (Veerashaiva) ಪಾಲಿಸುತ್ತಿದ್ದರು. ಅಲ್ಲದೇ ಇಷ್ಟಲಿಂಗ ಪೂಜೆಯನ್ನು ಸಹ ನಿತ್ಯವೂ ನಡೆಸುತ್ತಿದ್ದರು. ಇದರಿಂದ ಮಗ ಕೂಡ ಪ್ರಭಾವಿತನಾಗಿದ್ದು, ಅವರಂತೆ ಇಷ್ಟಲಿಂಗ ಧರಿಸಲು ಬಯಸಿದ್ದ. ಇದನ್ನೂ ಓದಿ: ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

    ಅವನ ಇಷ್ಟದಂತೆ ಪಾಲಕರು ಆತನಿಗೆ ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ. ಬಳಿಕ ಆತನಿಗೆ ಮರು ನಾಮಕರಣಮಾಡಿ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    ರಾಯಚೂರು: ವೀರಶೈವ (Veerashaiva), ಲಿಂಗಾಯತ (Lingayat) ಅಂತಾ ಪ್ರತ್ಯೇಕ ಧರ್ಮ ಅಥವಾ ಒಂದು ಜಾತಿಯಿಲ್ಲ. ವೀರಶೈವ, ಲಿಂಗಾಯತ ಎರಡೂ ಒಂದೇ ಅಂತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಶಂಕರ ಮಹದೇವ ಬಿದರಿ ಸ್ಪಷ್ಟಪಡಿಸಿದ್ದಾರೆ.

    ರಾಯಚೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ (All India Veerashaiva Lingayat Mahasabha) ನಡೆದ ಬಯಲು ಸಿರಿ ಬೆಳಕು ಪ್ರಶಸ್ತಿ ಪ್ರದಾನ ಹಾಗೂ ಮಹಿಳಾ ಕಾನೂನು (Women’s Law) ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪತಿಯ ಕಿರುಕುಳ – ಪ್ರೀತಿಸಿ ಮದುವೆಯಾಗಿದ್ದ ತುಂಬು ಗರ್ಭಿಣಿ ನೇಣಿಗೆ ಶರಣು

    ವೀರಶೈವ, ಲಿಂಗಾಯತ ಎರಡೂ ಒಂದೇ, ವೀರಶೈವ ಮಹಾಸಭೆಯಲ್ಲಿ ಇತ್ತೀಚೆಗೆ ವಿನಂತಿ ಮಾಡಿಕೊಂಡು ಲಿಂಗಾಯತ ಪದವನ್ನ ಕೂಡಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹನಿಟ್ರ್ಯಾಪ್ ಕೇಸ್ – ಪ್ರೀತ್ಸೋ ನೆಪದಲ್ಲಿ ಮಾಯಾಂಗನೆ ಹನಿಟ್ರ್ಯಾಪ್ ಖೆಡ್ಡಕ್ಕೆ ಬಿದ್ದ ಯುವಕ

    ಒಳ್ಳೆಯ ರೀತಿಯಲ್ಲಿ ಒಗ್ಗಟ್ಟಾಗಿದ್ದ ನಮ್ಮ ಸಮಾಜದಲ್ಲಿ ಕೆಲವರು ಚಿಲ್ಲರೆ ವಿಚಾರಗಳು ಹಾಗೂ ತಾತ್ವಿಕ ವಿಚಾರಗಳನ್ನ ತಂದು ಸಮಾಜ ಒಡೆಯುವಂತ ಪ್ರಯತ್ನ ನಡೆಯಿತು. ಇದಕ್ಕಾಗಿ ಮಹಾಸಭಾದಲ್ಲಿ ಲಿಂಗಾಯತ ಪದ ಸೇರಿಸಿದ್ದೇವೆ. ವೀರಶೈವ ಲಿಂಗಾಯತ ಸಮಾಜವನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಆದರೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಅಭಿವೃದ್ಧಿ ಹೊಂದಲು ಪ್ರಯತ್ನಿಸಬೇಕಿದೆ. ಎಲ್ಲರ ಒಗ್ಗಟ್ಟಿನಿಂದ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ಬೆಂಗಳೂರು: ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿಬಂದಿದೆ. ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿಸುತ್ತಿರುವ ಬೆನ್ನಲ್ಲೇ ನಿಗಮಕ್ಕೆ ಲಿಂಗಾಯತ ಎಂಬ ಹೆಸರನ್ನು ಮಾತ್ರ ಬಳಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

    ಬಸವ ಸಮಿತಿಯ ಅರಿವಿನ ಮನೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಲಿಂಗಾಯತ ಸ್ವಾಮೀಜಿಗಳು, ಸರ್ಕಾರದ ನಿರ್ಧಾರವನ್ನು ಜಾಗತಿಕ ಲಿಂಗಾಯತ ಮಹಾಸಭಾದ ಸ್ವಾಗತಿಸುತ್ತದೆ. ಆದರೆ, ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ. ಅಲ್ಲದೆ, ಪ್ರತ್ಯೇಕ ಧರ್ಮ ಮತ್ತು ಹಿಂದುಳಿದ ವರ್ಗದ ವಿಚಾರ ಬೇರೆ. ಹೀಗಾಗಿ ಧರ್ಮದ ಹೋರಾಟ ನಿರಂತರವಾಗಿ ನಡೆಯುತ್ತದೆ. ಲಿಂಗಾಯತ ಅಸ್ಮಿತೆಗಾಗಿ ಹಾಗೂ ಸ್ವಾತಂತ್ರ್ಯ ಧರ್ಮಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‍ಗೆ ಹೋಗಲು ಸಿದ್ಧರಿದ್ದೇವೆ ಎಂದು ಒಕ್ಕೂರಲಿನಿಂದ ತಿಳಿಸಿದ್ದಾರೆ.


    ಸುದ್ದಿಗೋಷ್ಠಿಯಲ್ಲಿ ಗದಗನ ಡಂಬಳ ಮಠದ ಶ್ರೀ ಸಿದ್ದರಾಮ ಸಾಮೀಜಿ, ಬಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ ದೇವರು, ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಮುಂಡರಗಿ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಮಾತೋಶ್ರಿ ಗಂಗಾಮಾತೆ, ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿ ಕಾಂಗ್ರಸ್‍ನ ಕೆಲ ಲಿಂಗಾಯತ ನಾಯಕರ ನಿಲುವನ್ನು ಖಂಡಿಸಿದ್ದಾರೆ.

    ಗದಗ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿರಶೈವ ಲಿಂಗಾಯತ ನಿಗಮ ಮಂಡಳಿ ಸ್ಥಾಪಿಸುವ ಕುರಿತು ಕಾಂಗ್ರೆಸ್ ನಾಯಕರು ಸಭೆ ಮಾಡಿದ್ದು, ಇದಕ್ಕೆ ನಮ್ಮ ತಕರಾರಿಲ್ಲ. ಅದರೆ, ವೀರಶೈವ ಲಿಂಗಾಯತ ಎಂದು ಎಲ್ಲೂ ಇಲ್ಲ ಹೀಗಾಗಿ ಹೆಸರನ್ನು ಲಿಂಗಾಯತ ಎಂದು ಬದಲಿಸಬೇಕು. ವೀರಶೈವ ಎನ್ನುವುದೇ ಇಲ್ಲದಿದ್ದಾಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಎಂಬ ಹೆಸರನ್ನೇಕೆ ಇಡಬೇಕು ಎಂದು ಪ್ರಶ್ನಿಸಿದ್ದಾರೆ.

    ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮುಗಿದ ಅಧ್ಯಾಯ ಎಂದು ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಸುಳ್ಳು ಲಿಂಗಾಯತರ ಹೋರಾಟ ನಿರಂತರವಾಗಿರುತ್ತದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಲಿಂಗಾಯತ ಹೋರಾಟ ಮುಗಿದ ಅಧ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ಹೇಳಿಕೆ ಅಗಿರಬಹುದು. ಅದರೆ, ಸ್ವತಂತ್ರ ಧರ್ಮದ ಹೋರಾಟ ನಮ್ಮ ಅಸ್ಮಿತೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿದ್ದರಾಮ ಸ್ವಾಮೀಜಿ ತಿಳಿಸಿದರು.

    ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಿಗಮ ಮಂಡಳಿ ಸ್ಥಾಪನೆ ಮಾಡಿ ಲಿಂಗಾಯತ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಮುಂದಾಗಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದೆ. ಆದರೆ ಸ್ವತಂತ್ರ ಧರ್ಮದ ಹೋರಾಟಕ್ಕೂ ನಿಗಮ ಮಂಡಳಿ ಸ್ಥಾಪನೆಗೂ ಸಂಬಂಧವಿಲ್ಲ. ಕಾಂಗ್ರಸ್ ಪಕ್ಷದ ಕೆಲ ಲಿಂಗಾಯತ ನಾಯಕರು ಈ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿರುತ್ತದೆ. ನಿಗಮ ಮಂಡಳಿಗೂ ಸಹ ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ ಎಂದು ಸಲಹೆ ನೀಡಿದ್ದಾರೆ.

    ಎಲ್ಲೂ ಉಲ್ಲೇಖವಾಗಿಲ್ಲ
    ಮಂಡಲ್ ವರದಿಯಲ್ಲಿ ಲಿಂಗಾಯತದ ಕುರಿತು ಪ್ರಸ್ತಾಪವಾಗಿಲ್ಲ. 30 ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಕ್ಕೆ ಸೇರಿಸಲಾಗಿತ್ತು. ಉಳಿದ 90 ಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಒತ್ತಡ ನಮ್ಮದಾಗಿದೆ. ಲಿಂಗಾಯತ ಗಾಣಿಗ, ನೇಕಾರ ಲಿಂಗಾಯತ, ಬಡಿಗ ಲಿಂಗಾಯತ ಸೇರಿದಂತೆ 30 ಪಂಗಡಗಳಿಗೆ ಲಿಂಗಾಯತ ಎಂದೇ ಸೇರಿಸಿದ್ದಾರೆ. ಯಾವ ಜಾತಿಯಲ್ಲೂ ವೀರಶೈವ ಲಿಂಗಾಯತ ಎಂದು ಉಲ್ಲೇಖವಾಗಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಸ್ಪಷ್ಟಪಡಿಸಿದ್ದಾರೆ.

    ವೀರಶೈವವನ್ನು ಉಪಪಂಗಡವಾಗಿ ನಾವು ಗೌರವಿಸುತ್ತೇವೆ. ಆದರೆ, ತಾವೇ ಜಾತಿ ಹುಟ್ಟುಹಾಕಿದವರು, ಬಸವಣ್ಣ ಶಿಷ್ಯ ಎಂದರೆ ನಾವು ಒಪ್ಪುವುದಿಲ್ಲ. ಈ ಕುರಿತು ಬಹುತೇಕ ಜನರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದೀಗ ಮತ್ತೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿ ಎಂದರೆ, ಅವರೇನು ಹುಚ್ಚರಾ? 2002ರ ಗೆಜೆಟ್ ನೋಟಿಫಿಕೇಷನ್ ಸರ್ಕಾರ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ಧ. ಈ ಕುರಿತು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ ಎಂದು ಜಾಮದಾರ್ ಮನವಿ ಮಾಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕಾಂಗ್ರೆಸ್‍ಗೆ ಯಾಕ್ರೋ ವೋಟ್ ಹಾಕಿಲ್ಲ- ವೀರಶೈವ ಲಿಂಗಾಯತರಿಗೆ ನಿಂದನೆ

    ಕಾಂಗ್ರೆಸ್‍ಗೆ ಯಾಕ್ರೋ ವೋಟ್ ಹಾಕಿಲ್ಲ- ವೀರಶೈವ ಲಿಂಗಾಯತರಿಗೆ ನಿಂದನೆ

    ದಾವಣಗೆರೆ: ರಾಜ್ಯದಲ್ಲಿ ಎರಡೂ ಹಂತದ ಚುನಾವಣೆ ಮುಗಿದಿದೆ. ಈ ಬೆನ್ನಲ್ಲೇ ಇದೀಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಮುಖಂಡ  ಕ್ಲಾಸ್ ತೆಗೆದುಕೊಂಡಿದ್ದಾರೆ.

    ದಾವಣಗೆರೆ ತಾಲೂಕಿನ ನೇರ್ಲಿಗೆ ಗ್ರಾಮದಲ್ಲಿ ವೈ.ರಾಮಪ್ಪ ಅವರೇ ನಿಂದಿಸಿದ ಕಾಂಗ್ರೆಸ್ ಮುಖಂಡ. ಇವರು ಕಾಂಗ್ರೆಸ್‍ಗೆ ಯಾಕೆ ವೋಟ್ ಹಾಕಿಲ್ಲ ಎಂದು ವೀರಶೈವ ಲಿಂಗಾಯತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಯಾಕೆ ಕೆಲಸ ಮಾಡಲಿಲ್ಲ ಎಂದು ವೀರಶೈವ ಲಿಂಗಾಯತರನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದನ್ನು ಅಲ್ಲೇ ಇದ್ದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೆ ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

    ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ರಾಮಪ್ಪ ವಿರುದ್ಧ ವೀರಶೈವ ಲಿಂಗಾಯತರ ಆಕ್ರೋಶ ಹೊರಹಾಕುತ್ತಿದ್ದಾರೆ.

  • 1871ರ ಜನಗಣತಿ ದಾಖಲೆ ನೀಡಿ ಕೇಂದ್ರ ಸರ್ಕಾರ ನಡೆಯನ್ನ ಪ್ರಶ್ನಿಸಿದ ಲಿಂಗಾಯತ ಮಹಾಸಭಾ

    1871ರ ಜನಗಣತಿ ದಾಖಲೆ ನೀಡಿ ಕೇಂದ್ರ ಸರ್ಕಾರ ನಡೆಯನ್ನ ಪ್ರಶ್ನಿಸಿದ ಲಿಂಗಾಯತ ಮಹಾಸಭಾ

    ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನ ಕೇಂದ್ರ ಸರ್ಕಾರ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹೋರಾಟಕ್ಕೆ ಕರೆ ನೀಡಿದೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಎಂ ಜಾಮದಾರ್, 1871ರಲ್ಲಿ ಮೈಸೂರು ಜನಗಣತಿಯಲ್ಲಿ ಲಿಂಗಾಯತವನ್ನು ಪ್ರತ್ಯೇಕ ಧರ್ಮವೆಂದು ಉಲ್ಲೇಖಿಸಲಾಗಿದೆ. ಅಲ್ಲದೇ ಸಿಖ್, ಜೈನಕ್ಕೂ ಪ್ರತ್ಯೇಕ ಧರ್ಮ ಎಂದು ಘೋಷಣೆ ಮಾಡಲಾಗಿದೆ ಎಂದು ಹೇಳಿ ಕೇಂದ್ರದ ನಡೆಯನ್ನು ಪ್ರಶ್ನಿಸಿದರು.

    ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನ ಈ ಹಿಂದೆಯೇ ಕೇಂದ್ರ ಸರ್ಕಾರ ತಿರಸ್ಕರಿಸಿತ್ತು ಎಂದು ಸರ್ಕಾರ ಪುನರ್ ಉಚ್ಚರಿಸಲಾಗಿದೆ. ಆದರೆ ನಾವು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೆ ಮಾರ್ಚ್ ತಿಂಗಳಿನಲ್ಲಿ, ಹೀಗಿರುವಾಗ ಯಾವ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಹಿಂದೆಯೇ ತಿರಸ್ಕರಿಸಿತ್ತು ಅಂತ ಹೇಳಿದೆ ಎಂದು ಪ್ರಶ್ನಿಸಿದರು.

    ಅಲ್ಪಸಂಖ್ಯಾತ ಆಯೋಗ ಪರಿಶೀಲನೆ ಮಾಡಿದ ಬಳಿಕವೇ ನಾವು ಪ್ರಸ್ತಾವನೆ ಕಳಿಸಿದ್ದು, ಈಗ ಕೇಂದ್ರಕ್ಕೆ ಮತ್ತೊಮ್ಮೆ ಪುನರ್ ಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇವೆ. ಅಲ್ಲಿಯೂ ನ್ಯಾಯ ಸಿಗಲಿಲ್ಲ ಎಂದರೆ ಅಂದ್ರೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದೋಗಿ: ಎಂ.ಬಿ ಪಾಟೀಲರಿಗೆ ಸವಾಲೆಸೆದ ಮಹಿಳೆ

    ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದೋಗಿ: ಎಂ.ಬಿ ಪಾಟೀಲರಿಗೆ ಸವಾಲೆಸೆದ ಮಹಿಳೆ

    ವಿಜಯಪುರ: ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದು ಹೋಗಿ ಅಂತ ದಿವ್ಯಾ ಹಾದರಗಿ ಎಂಬವರು ಸಚಿವ ಎಂ.ಬಿ ಪಾಟೀಲರಿಗೆ ಸವಾಲೆಸೆದಿದ್ದಾರೆ.

    ವಿಜಯಪುರದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು ಯಾರು ಬೇಡ. ನಾವು ಮಹಿಳೆಯರು ಸಾಕು. ಒಂದು ಒನಕೆ ಅಥವಾ ಖಡ್ಗ ಕೊಟ್ರೆ ಸಾಕು ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪಿಸ್ ಪಿಸ್ ಮಾಡುತ್ತೇವೆ ಎಂದು ಎಂ.ಬಿ ಪಾಟೀಲರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

    ಈ ಕೃತ್ಯ ಎಸಗಲು ನಾವು ಹೆದರಲ್ಲ. ನಮ್ಮಲ್ಲಿ ಎಷ್ಟು ಜನರನ್ನು ಬೇಕಾದ್ರೂ ಜೈಲಿಗೆ ಹಾಕಿ. ಪರ್ವಾಗಿಲ್ಲ. ಆದ್ರೆ ನಾವು ಅದನ್ನು ಮಾಡೇ ಮಾಡುತ್ತೇವೆ ಅಂತ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

  • ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

    ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

    ನವದೆಹಲಿ: ಜನಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ 2010ರಲ್ಲಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು 2013ರಲ್ಲಿ ಯಪಿಎ ಸರ್ಕಾರ ತಿರಸ್ಕರಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ.

    ಲಿಂಗಾಯತ ಸಮುದಾಯವು 4 ಕೋಟಿಗೂ ಅಧಿಕ ಸಂಖ್ಯೆಯ ಅನುಯಾಯಿಗಳನ್ನು ಒಳಗೊಂಡಿದ್ದು, ಬೌದ್ಧ, ಸಿಖ್ ಹಾಗೂ ಜೈನ ಧರ್ಮದ ಅನುಯಾಯಿಗಳಿಗಿಂತ ಅಧಿಕ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ. ಹೀಗಾಗಿ ಜಾತಿಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮವನ್ನು ಸೂಚಿಸುವ ಪ್ರತ್ಯೇಕ ಕಾಲಂ, ಸಾಲು ಹಾಗೂ ಕೋಡ್ ಸಂಖ್ಯೆ ನಮೂದಿಸಿ, ಜನಗಣತಿಯ ಅರ್ಜಿ ನಮೂನೆ ಮುದ್ರಿಸುವಂತೆ ವೀರಶೈವ ಮಹಾಸಭಾ ಕೇಳಿಕೊಂಡಿತ್ತು.

    ಈ ಮನವಿಯನ್ನು ತಿರಸ್ಕರಿಸಿದ್ದ ಕಾಂಗ್ರೆಸ್ ನೇತೃತ್ವದ ಯಪಿಎ ಸರ್ಕಾರ ವೀರಶೈವ ಮತ್ತು ಲಿಂಗಾಯತ ಸಮುದಾಯವು ಹಿಂದೂ ಧರ್ಮದ ಒಂದು ಪಂಗಡ ಎಂದು ಹೇಳಿತ್ತು. ಕೇಂದ್ರದ ಗೃಹ ಕಚೇರಿಯ ಕೋರಿಕೆಯ ಮೇರೆಗೆ ಪರಿಶೀಲನೆ ನಡೆಸಿದ್ದ ಭಾರತೀಯ ರಿಜಿಸ್ಟ್ರಾರ್ ಜನರಲ್ ಕಚೇರಿಯು 2013ರ ನವೆಂಬರ್ 14ರಂದು `ವೀರಶೈವ ಮಹಾಸಭಾದ ಪ್ರತ್ಯೇಕ ಧರ್ಮ ಸ್ಥಾನಮಾನದ ಬೇಡಿಕೆಯು ಅತಾರ್ಕಿಕವಾದದ್ದು’ ಎಂದು ಅಭಿಪ್ರಾಯಪಟ್ಟಿತ್ತು.

    ಈ ಸಂಬಂಧ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸುದ್ದಿಗೋಷ್ಠಿ ನಡೆಸಿ, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ 2013ರಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಶಿಫಾರಸನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು ಎಂದು ಹೇಳಿದರು.

    ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶಕ್ಕಾಗಿ ಈ ವಿಷಯವನ್ನು ಬಳಸಿಕೊಳ್ಳುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಅವರು ದೂರಿದರು .