Tag: veerashaiva lingayat

  • ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

    ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

    ದಾವಣಗೆರೆ: 40 ವರ್ಷಗಳ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಶೃಂಗ ಸಮ್ಮೇಳನದಲ್ಲಿ 15 ವರ್ಷಗಳ ನಂತರ ಪಂಚಪೀಠಾಧೀಶರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

    ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ದಾವಣಗೆರೆಯ ರೇಣುಕಾ ಮಂದಿರದಲ್ಲಿ ಶೃಂಗಾ ಸಮ್ಮೇಳನ ಜರುಗಿತು. ಇದೇ ಮೊದಲ ಬಾರಿ ಪಂಚಪೀಠಗಳಾದ ಕೇದಾರ, ರಂಭಾಪುರಿ, ಉಜ್ಜಯಿನಿ, ಕಾಶಿ, ಶ್ರೀಶೈಲ ಪೀಠದ ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಕಂಡು ಬರುವ ಮೂಲಕ ಒಗ್ಗಟ್ಟು ಪ್ರದರ್ಶಿಸುವಂತೆ ಕರೆ ನೀಡಿದರು. ಕಳೆದ 15 ವರ್ಷದ ನಂತರ ಪಂಚಪೀಠಾಧೀಶರು ಒಂದಾಗಿ ಸಮಾವೇಶದಲ್ಲಿ ಭಾಗಿಯಾಗಿ ಉಪಜಾತಿಗಳನ್ನ ಬಳಸುವ ಬದಲು ಅಖಂಡವಾಗಿ ವೀರಶೈವ ಲಿಂಗಾಯತವೆಂದು ಬಳಕೆ ಮಾಡುವಂತೆ ದೇಶದ ಎಲ್ಲಾ ವೀರಶೈವ ಲಿಂಗಾಯತ ಸಮಾಜದ ಜನರಿಗೆ ಕರೆನೀಡಿದರು.ಇದನ್ನೂ ಓದಿ: 1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ

    ಇದೇ ವೇಳೆ ಶ್ರೀಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡೀತಾರಾಧ್ಯ ಶಿವಾಚಾರ್ಯ ಜಗದ್ಗುರು ಮಾತನಾಡಿ, ಇಸ್ಲಾಂ ಧರ್ಮದಲ್ಲಿ 786 ಇದ್ದ ಹಾಗೇ ನಮ್ಮ ಸಮುದಾಯಕ್ಕೆ 856 (8- ಅಷ್ಟಾವರ್ಣ. 5- ಪಂಚಾಚಾರ್ಯ. 6- ಶಟಸ್ಥಳ) ಕೋಡ್ ಇದೆ. ಇಡೀ ವೀರಶೈವ ಸಮಗ್ರ ಸಮುದಾಯವನ್ನು ಒಂದುಗೂಡಿಸುವ ಕೆಲಸವಾಗುತ್ತಿದೆ. ಸರ್ಕಾರಿ ಸೌಲಭ್ಯ ಹಾಗೂ ಮೀಸಲಾತಿಯನ್ನು ಪಡೆದುಕೊಳ್ಳಲು ಉಪಜಾತಿ ಬರೆಸಿ. ಆದರೆ ಜಾತಿ ಮಾತ್ರ ವೀರಶೈವ ಲಿಂಗಾಯತ ಎಂದು ಬರೆಸಿ. ಅದೇ ರೀತಿ ಕೇಂದ್ರ ಸರ್ಕಾರ ಜಾತಿ ಸಮೀಕ್ಷೆಯಲ್ಲಿ ಜಾತಿ ಬದಲು ಸಂಪ್ರದಾಯ. ಉಪಜಾತಿ ಕಾಲಂ ಮಾಡಲು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

    ಬಳಿಕ ರಂಭಾಪುರಿ ಶ್ರೀಗಳು ಮಾತನಾಡಿ, ಬಿಎಸ್ ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದರು. ಆದರೆ ಒಮ್ಮೆ ಕೂಡ ಪೂರ್ಣ ಅವಧಿ ಅಧಿಕಾರ ಮಾಡಲು ಬಿಡಲಿಲ್ಲ, ಇದರಿಂದ ಇಡೀ ಸಮಾಜಕ್ಕೆ ಆಘಾತ ಉಂಟಾಯಿತು. ಜೊತೆಗೆ ಕಳೆದ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಯಿತು. ಅವರನ್ನು ನೆಮ್ಮದಿಯಿಂದ ಇರಲು ಬಿಡಲಿಲ್ಲ, ಕಿರುಕುಳಕೊಟ್ಟರು. ಅವರು ಬಹಳ ನೋವು ಅನುಭವಿಸಿದರು. ಆದ್ದರಿಂದ ಅವರು ಎಲ್ಲೇ ಹೋದರೂ ಹೆಚ್ಚು ಮಾತನಾಡುವುದಿಲ್ಲ. ಇನ್ನು ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ, ಕ್ರಿಯಾಶೀಲರಾಗಿ ಸಂಘಟನೆ ಮಾಡ್ತಿದ್ದಾರೆ. ಅವರ ಮುಂದಿನ ದಿನ ರಾಜಕೀಯ ಜೀವನದಲ್ಲಿ ಉಜ್ವಲವಾಗಲಿದೆ ಎಂದು ಹೇಳಿದರು.

    ಕೇದಾರ ಪೀಠದ ಭೀಮಾಶಂಕರಲಿಂಗ ಸ್ವಾಮೀಜಿ ಮಾತನಾಡಿ, ಜಾತಿಗಣತಿ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಯನ ಆಗಬೇಕಾಗಿದೆ. ಜಾತಿಗಣತಿ ಮಾಡುವ ಯಾವುದೇ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಇದೇ ಕಾರಣಕ್ಕೆ ವೀರಶೈವ ಲಿಂಗಾಯತರು ಒಂದು ಸಮಿತಿ ಮಾಡಿ, ಜಾತಿಗಣತಿ ಯಾವ ಜಾತಿ ಎಂದು ಸರಿಯಾಗಿ ಭರ್ತಿ ಮಾಡಬೇಕು. ಸರ್ಕಾರದ ಸೌಲಭ್ಯಕ್ಕಾಗಿ ಬೇರೆ ಬೇರೆ ಜಾತಿ ಬರೆಸುವುದು ಸರಿಯಲ್ಲ. ಕೇದಾರಕ್ಕೆ ಪ್ರಧಾನಿಗಳು ಬಂದಾಗ ಈ ವಿಚಾರ ಅವರ ಗಮನಕ್ಕೆ ತಂದಿದ್ದೇವೆ. ಲಿಂಗಾಯತ ಮತ್ತು ವೀರಶೈವ ಒಂದೇ ಎಂಬುದನ್ನ ಸ್ಪಷ್ಟಪಡಿಸಲಾಗಿದೆ. ಪಂಚಪೀಠಗಳು ಹಿಂದೇ ಕೂಡಾ ಒಂದೇ ಇದ್ದವು, ಮುಂದೇ ಕೂಡಾ ಒಂದೇ ಆಗಿರುತ್ತವೆ ಎಂದು ಘೋಷಣೆ ಮಾಡಿದರು.

    ಉಜ್ಜಯನಿ ಪೀಠದ ಜಗದ್ಗುರುಗಳು ಮಾತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವ ಕಥೆ ಹೇಳುವ ಮೂಲಕ ಗುರು ವಿರಕ್ತರು ಒಂದಾಗಬೇಕು. ಹಾಗೆಯೇ ವೀರಶೈವ ಲಿಂಗಾಯತರು ಎಲ್ಲಾರೂ ಒಟ್ಟಾಗಿ ಇರಬೇಕಿದೆ. ಸಮಾಜದ ಎಲ್ಲಾ ರಾಜಕೀಯ ಮುಖಂಡರು ಸಮಾಜದ ಒಳಿತಿಗಾಗಿ ಒಂದಾಗಬೇಕಿದೆ. ಸಮಾಜದ ಕೆಲಸಕ್ಕೆ ಪಂಚಾಚಾರ್ಯರು ಕರೆ ಕೊಟ್ಟ ತಕ್ಷಣ ಮುಂದಾಗಬೇಕು. ಮಹಾರಾಷ್ಟ್ರದಲ್ಲಿ ಒಂದೂವರೆ ಕೋಟಿ ಜನರು ವೀರಶೈವ ಲಿಂಗಾಯತರಿದ್ದಾರೆ. ಕರ್ನಾಟಕದಲ್ಲಿ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತರು ಇದ್ದಾರೆ. ಕೇಂದ್ರ ಸರ್ಕಾರ ತರುವ ಜಾತಿಗಣತಿಯಲ್ಲಿ ಮೂರು ಕಾಲಂಗಳನ್ನು ಮಾಡಬೇಕು. ಆಗ ಮಾತ್ರ ಜಾತಿಗಣತಿಯಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಸ್ಪಷ್ಟವಾಗಲಿದೆ ಎಂದರು.ಇದನ್ನೂ ಓದಿ: D-CET ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: KEA

  • ದಶಕಗಳ ನಂತರ ಒಂದೇ ವೇದಿಕೆಯಲ್ಲಿ ಪಂಚಪೀಠದ ಶ್ರೀಗಳು – ಶಕ್ತಿ ಪ್ರದರ್ಶನಕ್ಕೆ ಮುಂದಾದ ವೀರಶೈವ ಲಿಂಗಾಯತರು

    ದಶಕಗಳ ನಂತರ ಒಂದೇ ವೇದಿಕೆಯಲ್ಲಿ ಪಂಚಪೀಠದ ಶ್ರೀಗಳು – ಶಕ್ತಿ ಪ್ರದರ್ಶನಕ್ಕೆ ಮುಂದಾದ ವೀರಶೈವ ಲಿಂಗಾಯತರು

    ದಾವಣಗೆರೆ: ಜು.21 ಹಾಗೂ 22 ರಂದು ವೀರಶೈವ ಪೀಠಾಚಾರ್ಯರ ಶೃಂಗ ಸಭೆ ದಾವಣಗೆರೆಯಲ್ಲಿ (Davanagere) ಆಯೋಜನೆಯಾಗಿದೆ. ಈ ಸಭೆಯಲ್ಲಿ 40 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಪಂಚ ಪೀಠಾಚಾರ್ಯರರು (Pancha Peeta) ಸೇರಲಿದ್ದಾರೆ.

    1967ರಲ್ಲಿ ಮುಕ್ತಿ ಮಂದಿರದಲ್ಲಿ ಕೂಡಿದ್ದ ಪಂಚಪೀಠಗಳ ಶ್ರೀಗಳು ಮತ್ತೆ ನಗರದ ರೇಣುಕಾಮಂದಿರದಲ್ಲಿ ಒಂದಾಗಲಿದ್ದಾರೆ. ಸಮ್ಮೇಳನ, ಸಂಸ್ಕøತಿ ಸಂವರ್ಧನೆಗಾಗಿ ಪಂಚ ಪೀಠಾಚಾರ್ಯರ ಪಾದಯಾತ್ರೆ ನಡೆಸಲಿದ್ದಾರೆ. ರಂಭಾಪುರಿ ಪೀಠ, ಉಜ್ಜೈನಿ ಪೀಠ, ಕೇದಾರಪೀಠ, ಕಾಶಿ ಪೀಠ, ಶ್ರೀ ಶೈಲ ಪೀಠದ ಶ್ರೀಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೇಶದೆಲ್ಲೆಡೆಯಿಂದ 500ಕ್ಕೂ ಅಧಿಕ ಮಠಾಧೀಶರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

    ರಾಜ್ಯದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುನ್ನುಡಿ ಬರೆಯಲು ವೀರಶೈವ ಲಿಂಗಾಯತ (Veerashaiva Lingayat) ಸಮುದಾಯ ಮುಂದಾಗಿದೆ. ಜಾತಿ ಸಮೀಕ್ಷೆ ವಿಚಾರದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಹೆಚ್ಚಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಾತಿ ಗಣತಿ ವೇಳೆ ವೀರಶೈವ ಲಿಂಗಾಯತ ಎಂದು ಬರೆಸುವಂತೆ ಜಾಗೃತಿ ಮೂಡಿಸಲು ವೀರಶೈವ ಲಿಂಗಾಯತ ಮಹಾಸಭಾ ಮುಂದಾಗಿದೆ.

    ಪಂಚಪೀಠದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಶೃಂಗ ಸಮ್ಮೇಳನ ನಡೆಯಲಿದ್ದು, ಪೀಠಾಚಾರ್ಯರು ಹಾಗೂ ಶಿವಾಚಾರ್ಯರನ್ನು ಒಂದೆಡೆ ಸೇರಿಸಿ ಜಾಗೃತಿ ಮೂಡಿಸಲಿದ್ದಾರೆ. ರಾಜ್ಯಾದ್ಯಂತ ಶೃಂಗ ಸಭೆ ಕುತೂಹಲ ಹೆಚ್ಚಿಸಿದೆ.

    25 ಸಾವಿರಕ್ಕೂ ಅಧಿಕ ಜನ ಭಾಗಿಯಾಗಲಿದ್ದಾರೆ. ಊಟ, ವಾಸ್ತವ್ಯ, ಲಿಂಗಪೂಜೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಕೊಪ್ಪಳ | ಮಾಜಿ ಶಾಸಕ ದಡೇಸೂಗುರು ಕಾರಿಗೆ ಕಲ್ಲೆಸೆದ ಕಿಡಿಗೇಡಿಗಳು

  • ಜಾತಿ ಜನಗಣತಿ ಮತ್ತೊಮ್ಮೆ‌ ಮಾಡಬೇಕೆಂಬ ಆಗ್ರಹ ವೀರಶೈವ ನಾಯಕರಲ್ಲಿದೆ: ಈಶ್ವರ್ ಖಂಡ್ರೆ

    ಜಾತಿ ಜನಗಣತಿ ಮತ್ತೊಮ್ಮೆ‌ ಮಾಡಬೇಕೆಂಬ ಆಗ್ರಹ ವೀರಶೈವ ನಾಯಕರಲ್ಲಿದೆ: ಈಶ್ವರ್ ಖಂಡ್ರೆ

    ಬೆಂಗಳೂರು: ಜಾತಿ ಜನಗಣತಿ (Caste Census) ಸರಿಯಾಗಿ ನಡೆದಿಲ್ಲ. ಸಮುದಾಯದ ಗಣತಿ ಮತ್ತೊಮ್ಮೆ‌ ಮಾಡಬೇಕು ಎಂಬ ಆಗ್ರಹ ವೀರಶೈವ (Veerashaiva Lingayat) ನಾಯಕರಲ್ಲಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwara Khandre) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜು ವರದಿಯಲ್ಲಿ (Kantharaj Commission) ಏನಿದೆ ಯಾರಿಗಾದ್ರೂ ಗೊತ್ತಿದೆಯಾ? ಜಾತಿ ಜನಗಣತಿ ಬಗ್ಗೆ ಯಾರದ್ದೂ ವಿರೋಧ ಇಲ್ಲ. ಅದರಲ್ಲಿ ರಾಜಕೀಯವೂ ತರಬಾರದು. ಲಿಂಗಾಯತ ಸಮುದಾಯದ ನಾಯಕರು ವೈಜ್ಞಾನಿಕ ಸಮೀಕ್ಷೆ ಆಗಲಿ ಎಂದು ಹೇಳ್ತಿದ್ದಾರೆ. 2011 ರಲ್ಲಿ ಜನಗಣತಿ ಆಗಿದ್ದು. ಇನ್ನೂ ಜನಗಣತಿ ಆಗಿಲ್ಲ. ಜನಗಣತಿ ಸಮಯದಲ್ಲೇ ಜಾತಿ ಗಣತಿ ಮಾಡಬೇಕು ಎಂಬ ಕೂಗಿದೆ. ಈ ಬಗ್ಗೆ ಸಿಎಂಗೆ ಭೇಟಿ ಮಾಡಿ ಅಭಿಪ್ರಾಯ ತಿಳಿಸಿದ್ದೇವೆ ಎಂದರು.

    ಯಾವ ಸಮುದಾಯಕ್ಕೂ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ವರದಿ ಬಿಡುಗಡೆ ಆಗಬೇಕಾ? ಬೇಡವಾ? ಎಂಬುದನ್ನು ಸಚಿವ ಸಂಪುಟದಲ್ಲಿಯೇ ಚರ್ಚೆ ಮಾಡುತ್ತೇವೆ. ವರದಿ ಕ್ಯಾಬಿನೆಟ್‌ಗೆ ಬಂದ ಬಳಿಕ ಅಲ್ಲಿಯೇ ನನ್ನ ಅಭಿಪ್ರಾಯ ತಿಳಿಸುತ್ತೇನೆ. ಹತ್ತು ವರ್ಷ ವರದಿ ವಿಳಂಬ ಆಗಿದೆ. ಈ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದಿದೆ. ಒಂದು ಸಮುದಾಯದ ಜನಸಂಖ್ಯೆ ವರದಿಯಲ್ಲಿ ಕ್ಷೀಣವಾಗುತ್ತಿದ್ದರೆ ಶಂಕೆ ಬರುವುದಿಲ್ವಾ? ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಮತ್ತೊಮ್ಮೆ ಸಮೀಕ್ಷೆ ಮಾಡಬೇಕು ಎಂಬ ಆಗ್ರಹವಿದೆ ಎಂದಿದ್ದಾರೆ.

  • ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು: ಶಾಮನೂರು

    ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು: ಶಾಮನೂರು

    ದಾವಣಗೆರೆ: ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಸೇರಿಸಬೇಕೆಂದು ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

    ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಎರಡು ಬೇರೆ, ಬೇರೆ ಎಂದು ಎರಡು ಮಾಡಲು ಹೊರಟಿದ್ದವರು, ಈಗ ಕಾಂಗ್ರೆಸ್ ಸೋತು ಸುಣ್ಣ ಆದ ಮೇಲೆ ಎಲ್ಲಾ ಒಂದೇ ಎಂದು ಬರುತ್ತಿದ್ದಾರೆ, ಬರಲಿ ಎಂದು ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸ್ವಪಕ್ಷದವರ ವಿರುದ್ಧ ಗುಡುಗಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು

    ಬಂದರೆ ಜೊತೆಗೆ ಕರೆದುಕೊಂಡು ಹೋಗುತ್ತೇವೆ. ವೀರಶೈವ ಲಿಂಗಾಯಿತ ಎರಡು ಒಂದೇ, ಬೆಂಬಲ ಕೊಟ್ಟರೆ ಎಲ್ಲ ಬಡವರಿಗೆ ಸಹಾಯ ಆಗಲಿದೆ. ಮುಂದೆ ಎಲ್ಲಾ ಸರಿ ಹೋಗುತ್ತದೆ. ಹೀಗಾಗಿ ಎಂಬಿ ಪಾಟೀಲ್ ಈಗ ಎಲ್ಲರನ್ನು ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

    ಜನರು ಅಷ್ಟು ದಡ್ಡರಲ್ಲ, ಎಲ್ಲವನ್ನು ನೋಡುತ್ತಿದ್ದಾರೆ. ಶಿವಾನಂದ ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು. 99 ಉಪ ಪಂಗಡಗಳಿವೆ. ಎಲ್ಲರು ಒಂದೇ, ಅದರಲ್ಲಿ ಜಾಮದಾರ್ ಯಾರು ಎನ್ನುವುದು ಮೊದಲು ನಿರ್ಣಯಿಸಲಿ, ಅಧಿಕಾರದಲ್ಲಿ ಇದ್ದಾಗ ಯಾರಿಗೂ ಸಹಾಯ ಮಾಡಲಿಲ್ಲ, ಈಗ ನೂರೆಂಟು ಮಾತನಾಡುತ್ತಾರೆ ಎಂದು ಶಾಮನೂರು ಕಿಡಿಕಾರಿದ್ದಾರೆ. ಇದನ್ನೂ ಓದಿ:ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್

  • ಲಿಂಗಾಯತ ಮೀಸಲು ಸಿಎಂ ಬ್ರಹ್ಮಾಸ್ತ್ರಕ್ಕೆ ಹೈಕಮಾಂಡ್ ಬ್ರೇಕ್

    ಲಿಂಗಾಯತ ಮೀಸಲು ಸಿಎಂ ಬ್ರಹ್ಮಾಸ್ತ್ರಕ್ಕೆ ಹೈಕಮಾಂಡ್ ಬ್ರೇಕ್

    – ಸಿಎಂಗೆ ದೆಹಲಿ ಬರಲು ತುರ್ತು ಬುಲಾವ್
    – ಒಬಿಸಿ ಅಸ್ತ್ರದಿಂದ ಇಕ್ಕಟ್ಟಿಗೆ ಸಿಲುಕ್ತಾರಾ ಯಡಿಯೂರಪ್ಪ?

    ಬೆಂಗಳೂರು: ವೀರಶೈವ ಲಿಂಗಾಯಗತರಿಗೆ ಓಬಿಸಿ ಸ್ಥಾನಮಾನ ನೀಡುವ ಕುರಿತು ರಾತ್ರಿ ಪ್ರಹಸನ ನಡೆದಿದ್ದು, ಕೇಂದ್ರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇದಕ್ಕೆ ಸಮುದಾಯದವರು ಸಿಎಂ ಮೇಲೆ ಮುಗಿಬಿದ್ದಿದ್ದಾರೆ.

    ಕಳೆದ ರಾತ್ರಿ ಸಿಎಂ ಪಡಸಾಲೆಯಿಂದ ಹೊರಬಿದ್ದ ಒಂದೇ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇವತ್ತಿನ ಸಂಪುಟ ಸಭೆಯಲ್ಲಿ ವೀರಶೈವ ಲಿಂಗಾಯತರಿಗೆ ಓಬಿಸಿ ಸ್ಥಾನಮಾನ ನೀಡಲು ಕೇಂದ್ರಕ್ಕೆ ಸರ್ಕಾರ ಶಿಫಾರಸ್ಸು ಮಾಡಲಿದೆ ಎಂಬ ಸುದ್ದಿಯೂ ಹರಿದಾಡಿತ್ತು. ಸಂಪುಟ ಸಭೆ ಬಳಿಕ ಮುಖ್ಯಮಂತ್ರಿಗಳೇ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಪ್ರಕಟಿಸುತ್ತಾರೆ ಎಂಬ ಮಾಹಿತಿಯೂ ಹೊರಬಿದ್ದಿತ್ತು. ಈ ಮೂಲಕ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡದೇ ಸತಾಯಿಸುತ್ತಿರುವ ಬಿಜೆಪಿ ಹೈಕಮಾಂಡ್‍ಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪೂರಕವಾಗಿ ಲಿಂಗಾಯತ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸುವ ವಿಚಾರವನ್ನು ಇಂದಿನ ಕ್ಯಾಬಿನೆಟ್ ಅಜೆಂಡಾದಲ್ಲಿಯೂ ಸೇರಿಸಲಾಗಿತ್ತು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಎಲ್ಲವೂ ಉಲ್ಟಾ ಆಗಿದೆ.

    ಸಿಎಂ ಯಡಿಯೂರಪ್ಪ ನಡೆಗೆ ಬೆಚ್ಚಿಬಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರೆ ಮಾಡಿ ದೆಹಲಿಗೆ ಬನ್ನಿ ಮಾತಾಡೋಣ. ಅಲ್ಲಿಯವರೆಗೂ ಯಾವುದೇ ಪ್ರಮುಖ ನಿರ್ಣಯ ಕೈಗೊಳ್ಳಬೇಡಿ ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಬೇಕಿದ್ದ ವಿಷಯವನ್ನು ಮುಂದಿನ ಸಭೆಗೆ ಮುಂದೂಡಲಾಯಿತು. ದೆಹಲಿಗೆ ತೆರಳಿ ಅಮಿತ್ ಶಾ ಜೊತೆಗೆ ಚರ್ಚಿಸಿದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಚಿವರಿಗೆ ಹೇಳಿದರು.

    ಲಿಂಗಾಯತರನ್ನು ಓಬಿಸಿಗೆ ಸೇರಿಸುವ ಬಗ್ಗೆ ಇನ್ನೂ ಕಾನೂನಾತ್ಮಕ ಚರ್ಚೆ ಅಗತ್ಯ ಇದೆ ಎಂದು ಅಡ್ವೋಕೇಟ್ ಜನರಲ್ ಕೂಡ ಸಲಹೆ ನೀಡಿದ್ದರಿಂದ ಸಂಪುಟದಲ್ಲೂ ಚರ್ಚೆ ನಡೆಸಿಲ್ಲ. ಸಿಎಂ ಉದ್ದೇಶಿತ ಸುದ್ದಿಗೋಷ್ಟಿಯನ್ನೂ ರದ್ದು ಮಾಡಲಾಯಿತು.

    ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೆಲ ಅಂಶಗಳ ಅಧ್ಯಯನ ನಡೆಸಬೇಕಿದೆ. ಈ ಕಾರಣಕ್ಕೆ ಶಿಫಾರಸು ಮುಂದೂಡಿದ್ದೇವೆ ಅಷ್ಟೇ. ಇದರಲ್ಲಿ ಕೇಂದ್ರದ ಪಾತ್ರವಿಲ್ಲ. ಸಂಪುಟ ಸರ್ಜರಿ ವಿಳಂಬಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸೋಮಣ್ಣ ಸಹ ಡ್ಯಾಮೇಜ್ ಕಂಟ್ರೋಲ್ ಪ್ರಯತ್ನ ನಡೆಸಿದರು. ದೆಹಲಿ ನಾಯಕರೇನು ಮಧ್ಯ ಪ್ರವೇಶ ಮಾಡಿಲ್ಲ. ಸಮುದಾಯಕ್ಕೂ ಆಶಾ ಭಂಗ ಆಗಿಲ್ಲ ಎಂದರು.

    ಸಿಎಂ ಪ್ಲಾನ್ ಏನು?
    ಸದ್ಯ ಹಿಂದುಳಿದ ವರ್ಗ 3ಬಿ ಅಡಿಯಲ್ಲಿ ಶೇ.5ರಷ್ಟು ಮೀಸಲಾತಿ ಇದೆ. ವೀರಶೈವ ಲಿಂಗಾಯತ ಸೇರಿ 42 ಉಪ ಜಾತಿಗಳಿಗೆ ಮೀಸಲಾತಿ ಅನ್ವಯವಾಗಲಿದೆ. ಹೀಗಾಗಿ 2(ಎ)ಗೆ ಸೇರಿಸುವಂತೆ ವೀರಶೈವ ಮುಖಂಡರು ಒತ್ತಡ ಹೇರಿದ್ದರು. ಆದರೆ 2(ಎ)ಗೆ ಸೇರಿಸುವ ಬದಲು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಮೂಲಕ ರಾಜ್ಯ ಮೀಸಲಾತಿ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ಪ್ಲಾನ್ ಮಾಡಲಾಗಿತ್ತು.

    ದಾಳ ಉರುಳಲಿಲ್ಲ ಏಕೆ?
    ಸಿಎಂ ಯಡಿಯೂರಪ್ಪ ನಡೆಯಿಂದ ಆರ್‍ಎಸ್‍ಎಸ್‍ಗೆ ಶಾಕ್ ಆಗಿದೆ. ಹೀಗಾಗಿ ಆರ್‍ಎಸ್‍ಎಸ್ ಕೂಡಲೇ ಹೈಕಮಾಂಡ್ ಗಮನಕ್ಕೆ ತಂದಿದೆ. ಪಕ್ಷ, ಸಂಘದ ಅಜೆಂಡಾದಲ್ಲಿ ಇಲ್ಲದ ವಿಚಾರ ಇದು. ಮೀಸಲಾತಿಯಂತಹ ಪ್ರಮುಖ ವಿಚಾರ ಚರ್ಚೆ ನಡೆದ ಬಳಿಕ ಅನುಷ್ಠಾನವಾಗಬೇಕು. ಈಗ ಲಿಂಗಾಯತರಿಗೆ ಓಬಿಸಿ ಸ್ಥಾನಮಾನ ಕೊಟ್ಟರೆ ಮುಂದೆ ಬೇರೆ ಜಾತಿಗಳು ಪ್ರಶ್ನಿಸಬಹುದು. ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಲು ಹೇಳಿ ಎಂದು ಬಿಜೆಪಿ ಹೈಕಮಾಂಡ್‍ಗೆ ಆರ್‍ಎಸ್‍ಎಸ್ ಪ್ರಮುಖರು ನಿರ್ದೇಶಿಸಿದ್ದಾರೆ.

    ಈ ಬೆನ್ನಲ್ಲೇ ಖುದ್ದು ಅಖಾಡಕ್ಕೆ ಇಳಿದ ಗೃಹ ಸಚಿವ ಅಮಿತ್ ಶಾ, ಬೆಳಗ್ಗೆ ಸಿಎಂ ಯಡಿಯೂರಪ್ಪಗೆ ತುರ್ತು ಕರೆ ಮಾಡಿ, ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಅಲ್ಲದೆ ಯಾವುದೇ ನಿರ್ಣಯ ಕೈಗೊಳ್ಳದಂತೆ ಸೂಚಿಸಿದ್ದಾರೆ. ಇತ್ತ ಶಿಫಾರಸು ವಿಚಾರವಾಗಿ ಎಜಿ ಆಕ್ಷೇಪ ವ್ಯಕ್ತಪಡಿಸಿ, ಇನ್ನಷ್ಟು ಅಧ್ಯಯನ ಅಗತ್ಯತೆ, ಕಾನೂನು ವ್ಯಾಪ್ತಿ ಪರಿಶೀಲನೆ ಹಿನ್ನೆಲೆ ಮುಂದೂಡಲು ಸಲಹೆ ನೀಡಿದ್ದಾರೆ.

    ಬಿಎಸ್‍ವೈ ಮುಂದಿರುವ ಸವಾಲು
    ವೀರಶೈವ ಲಿಂಗಾಯತರನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವ ಬೇಡಿಕೆಗೆ ಬಿಜೆಪಿ ಹೈಕಮಾಂಡ್ ಅಸ್ತು ಎನ್ನದೇ ಇರಬಹುದು. ಅಲ್ಲದೆ ಓಬಿಸಿ ವಿಚಾರದಲ್ಲಿ ಸೈಲೆಂಟಾಗಿರುವಂತೆ ಸೂಚಿಸಬಹುದು. ಇದರಿಂದ ವೀರಶೈವ ಲಿಂಗಾಯತರು ಹೋರಾಟ ಆರಂಭಿಸುತ್ತಾರೆ. ವೀರಶೈವ ಲಿಂಗಾಯತರನ್ನು ಮನವರಿಕೆ ಮಾಡುವ ಸವಾಲು ಎದುರಾಗಲಿದೆ. ಬಳಿಕ ಸಮುದಾಯ ಓಲೈಕೆ ತಂತ್ರವೇ ತಿರುಗುಬಾಣ ಆಗಬಹುದು.

    ನಿರ್ಧಾರದ ಕುರಿತು ಸಿಎಂ ಹಿಂದೆ ಸರಿಯುತ್ತಿದ್ದಂತೆ ವೀರಶೈವ ಲಿಂಗಾಯತ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಇವತ್ತು ಸಿಹಿ ಸುದ್ದಿ ನಿರೀಕ್ಷೆಯಲ್ಲಿದ್ದ ಸಮುದಾಯ ಶಾಕ್ ಆಗಿದೆ. ಕೇಂದ್ರದ ಒತ್ತಡಕ್ಕೆ ಮಣಿದ ಸಿಎಂ ವಿರುದ್ಧ ವೀರಶೈವ ಸ್ವಾಮೀಜಿಗಳು ಸಿಟ್ಟಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ, ಸಿಎಂ ವಿರುದ್ಧ ಗುಡುಗಿದ್ದಾರೆ. ನಿಮ್ಮ ರಾಜಕೀಯ ನಮಗೆ ಗೊತ್ತಿಲ್ಲ. ನಮ್ಮ ಬೇಡಿಕೆ ಈಡೇರಲೇಬೇಕು. ನಾಳೆಯೊಳಗೆ ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲೇಬೇಕು. ಇಲ್ಲದಿದ್ದರೆ ಕೂಡಲಸಂಗಮದಿಂದ ಹೋರಾಟ ತೀವ್ರಗೊಳಿಸುತ್ತೇವೆ. ಒಂದು ತಿಂಗಳು ಪಾದಯಾತ್ರೆ ನಡೆಸಿ ಡಿಸೆಂಬರ್ 23ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

    ಇದರಿಂದ ಸಿಎಂ ಇಕ್ಕಟ್ಟಿಗೆ ಸಿಲುಕಿದಂತೆ ಕಂಡು ಬಂದಿದೆ. ಇನ್ನು ವೀರಶೈವ ಲಿಂಗಾಯತರಿಗೆ ಓಬಿಸಿ ಸ್ಥಾನಮಾನ ನೀಡದಿದ್ದರೆ ರಾಜ್ಯದಲ್ಲಿ ಬೆಂಕಿ ಹತ್ತಬಹದು ಹುಷಾರ್ ಎಂದು ಕಲಬುರಗಿಯ ಸಾರಂಗ ಮಠದ ಶ್ರೀಗಳು ಎಚ್ಚರಿಸಿದ್ದಾರೆ. ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನೋಡಿದರೆ ರಾಜ್ಯದಲ್ಲಿ ಬಿಜೆಪಿ ನಾಮಾವಶೇಷ ಆಗುತ್ತೆ ಎಂದು ಬಿಜೆಪಿ ಹೈಕಮಾಂಡ್‍ಗೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಸಿಲು ಸಚಿವರು, ಶಾಸಕರು ನಿರಾಕರಿಸಿದ್ದಾರೆ.

  • ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಅಚ್ಚರಿ ತಂದಿದೆ: ಸಿದ್ದಗಂಗಾ ಶ್ರೀ

    ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಅಚ್ಚರಿ ತಂದಿದೆ: ಸಿದ್ದಗಂಗಾ ಶ್ರೀ

    ತುಮಕೂರು: ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

    ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಇದರ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಇದ್ದಂತಹ ಹಿಂದುಳಿದವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು.

    ಎಲ್ಲಾ ಸಮಾಜದಲ್ಲೂ ತುಂಬಾ ಬಡವರಿದ್ದಾರೆ. ಬಡತನದ ಶ್ರೇಣಿ ಹೆಚ್ಚಿದೆ. ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು. ಸರ್ಕಾರ ಒತ್ತು ಕೊಡುತ್ತಿದೆ. ಈ ನಡುವೆ ಕೆಲ ಬೆಳವಣಿಗೆಗಳು ನಡೀತಿದೆ. ಇಡೀ ರಾಜ್ಯದ ಅಭಿವೃದ್ಧಿಗೆ ಇಡೀ ಸರ್ಕಾರ ಇರೋದು ಎಂದು ಅಸಮಾಧಾನ ಹೊರಹಾಕಿದರು.

    ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿ ಪ್ರಾಧಿಕಾರ ಮಾಡಿದರೆ ಮುಂದು ಪ್ರತಿಯೊಬ್ಬರೂ ಕೇಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಆದೇಶ

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ಇಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

  • ನಾನು ಕಾಂಗ್ರೆಸ್ಸಿನಲ್ಲೇ ಇರಬೇಕೇ – ಕಾರ್ಯಕರ್ತರ ಬಳಿ ಕೌರವ ಪ್ರಶ್ನೆ

    ನಾನು ಕಾಂಗ್ರೆಸ್ಸಿನಲ್ಲೇ ಇರಬೇಕೇ – ಕಾರ್ಯಕರ್ತರ ಬಳಿ ಕೌರವ ಪ್ರಶ್ನೆ

    ಹಾವೇರಿ: ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದ್ದು ಸತತ ಮೂರು ಬಾರಿ ಎಂಎಲ್‍ಎ ಆಗಿ ಅಯ್ಕೆಯಾಗಿರುವ ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್‍ಗೆ ಸಚಿವ ಸ್ಥಾನ ದೊರಕುತ್ತಿಲ್ಲ. ಇದರಿಂದ ಬೇಸರಗೊಂಡಿರುವ ಪಾಟೀಲ್ ಈಗ ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎಲ್ಲ ಕಡೆ ಚರ್ಚೆಯಾಗುತ್ತಿದೆ.

    ಈ ಹಿಂದೆ ಸಚಿವ ಸ್ಥಾನದ ಸಿಗದೇ ಇರುವ ಕಾರಣ ಬಿ.ಸಿ ಪಾಟೀಲ್ ಅವರು ಮೈತ್ರಿ ಸರ್ಕಾರದ ಮೇಲೆ ನೇರವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈಗ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಮತ್ತೆ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಅವರು ಈಗ ಕಾಂಗ್ರೆಸ್ ಪಕ್ಷದಲ್ಲಿ ಇರಬೇಕಾ? ಬೇಡವೇ ಎಂದು ಕ್ಷೇತ್ರದ ಕಾರ್ಯಕರ್ತರನ್ನು ಮತ್ತು ಕೆಲ ಶಾಸಕರನ್ನು ಕೇಳುತ್ತಿದ್ದಾರೆ ಎನ್ನಲಾಗಿದೆ.

    ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಿಂದ ಮೊದಲ ಬಾರಿ ಜೆಡಿಎಸ್‍ನಿಂದ ಶಾಸಕರಾಗಿದ್ದ ಪಾಟೀಲ್, ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹೀಗೆ ಮೂರು ಬಾರಿ ಎಂಎಲ್‍ಎ ಆಗಿ ಆಯ್ಕೆಯಾಗಿದ್ದರೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬಿ.ಸಿ ಪಾಟೀಲ್, ಸಚಿವ ಸ್ಥಾನ ನೀಡದ ಮೈತ್ರಿ ಸರ್ಕಾರದ ಮೇಲೆ ಮೊದಲಿನಿಂದಲೂ ಅಸಮಾಧಾನಗೊಂಡಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವ ಲಿಂಗಾಯತರಿಗೆ ಕಾಂಗ್ರೆಸ್ ಪಕ್ಷ ಭಾರೀ ಅನ್ಯಾಯ ಮಾಡಿದೆ. ವೀರಶೈವ ಲಿಂಗಾಯತರಿಗೆ ಏಕೆ ಮಂತ್ರಿ ಸ್ಥಾನವನ್ನು ನೀಡಿಲ್ಲ ಎಂದು ಬಹಿರಂಗವಾಗಿ ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ಮೂರು ದಿನಗಳ ಹಿಂದೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದೆ. ರಾಜ್ಯ ಹಾಗೂ ದೇಶದಲ್ಲಿ ಮೋದಿ ಅಲೆಗೆ ಕಾಂಗ್ರೆಸ್ ಧೂಳೀಪಟವಾಗಿದೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಮತ್ತು ಅತೃಪ್ತ ಶಾಸಕರು ಚುರುಕುಗೊಂಡಿದ್ದಾರೆ. ಮತ್ತೆ ರೆಸಾರ್ಟ್ ರಾಜಕಾರಣ ಪ್ರಾರಂಭವಾಗಿದೆ. ಈ ಸಮಯದಲ್ಲೇ ಬಿ.ಸಿ ಪಾಟೀಲ್ ಲೋಕಸಭಾ ಚುನಾವಣೆಯಲ್ಲಿ ವೀರಶೈವ ಲಿಂಗಾಯತರನ್ನು ಕಾಂಗ್ರೆಸ್ ಪಕ್ಷದವರು ಕಡೆಗಣಿಸಿದ್ದಾರೆ. ಆದರ ಪ್ರತಿಫಲ ಲೋಕಸಭಾ ಚುನಾವಣೆಯ ಫಲಿತಾಂಶ ಬಿಜೆಪಿ ಕಡೆಗೆ ಬಂದಿದೆ. ಹಾಗಾಗಿ ಕ್ಷೇತ್ರದ ಜನರ ತೀರ್ಮಾನವನ್ನು ಕೇಳುತ್ತಿದ್ದೇನೆ ಅವರು ಏನೂ ತೀರ್ಮಾನ ನೀಡುತ್ತಾರೆ ನೋಡೋಣ ಎಂದು ಹೇಳಿದ್ದರು. ಆದರೆ ಕೆಲವು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಹೋಗಿ ಎಂದು ಹೇಳಿದ್ದರೆ, ಇನ್ನೂ ಕೆಲವು ಕಾರ್ಯಕರ್ತರು ನಮ್ಮ ಸಿದ್ದಾಂತ ಬೇರೆ ಹಾಗಾಗಿ ಬಿಜೆಪಿ ಹೋಗುವುದು ಬೇಡ ಎಂದು ಸಲಹೆ ನೀಡಿದ್ದಾರಂತೆ.

    ಈ ಎಲ್ಲಾ ವಿದ್ಯಮಾನಗಳು ನೋಡಿದರೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಹೋದರೆ ಬಿ.ಸಿ ಪಾಟೀಲ್ ಬಿಜೆಪಿಗೆ ಹೋಗುತ್ತಾರೆ ಎನ್ನುವ ಗುಸುಗುಸು ಮಾತುಗಳು ಬಹಳ ಚರ್ಚೆ ಆಗುತ್ತಿವೆ. ಆದರೆ ಬಿಸಿ.ಪಾಟೀಲ್ ಮಾತ್ರ ಕಾದುನೋಡುವ ತಂತ್ರ ಅನುಸರಿಸಿ ಅಡ್ಡಗೋಡೆಯ ಮೇಲೆ ದೀಪ ಇಡುವ ಕೆಲಸ ಮಾಡುತ್ತಿದ್ದಾರೆ.

  • ಡಿಕೆಶಿ ತಪ್ಪೊಪ್ಪಿಗೆ ಹೇಳಿಕೆಯೇ ಕಾಂಗ್ರೆಸ್ ಗೆಲುವಿಗೆ ಕಾರಣ : ರಂಭಾಪುರಿ ಶ್ರೀ

    ಡಿಕೆಶಿ ತಪ್ಪೊಪ್ಪಿಗೆ ಹೇಳಿಕೆಯೇ ಕಾಂಗ್ರೆಸ್ ಗೆಲುವಿಗೆ ಕಾರಣ : ರಂಭಾಪುರಿ ಶ್ರೀ

    ರಾಯಚೂರು: ಶೈವ ಲಿಂಗಾಯತ ಒಂದೇ ಧರ್ಮ, ಪ್ರತ್ಯೇಕ ಧರ್ಮ ಮಾಡಲು ಹೋಗಿದ್ದು ತಪ್ಪಾಗಿದೆ ಎಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಕ್ಕೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿದೆ ಎಂದು ರಂಭಾಪುರಿ ಜಗದ್ಗುರು ಶ್ರೀ ಪ್ರಸನ್ನ ವೀರಸೋಮೇಶ್ವರ ಸ್ವಾಮಿಜಿ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಯಲ್ಲಿ ಪ್ರತ್ಯೇಕ ಧರ್ಮ ಮಾಡಲು ಕೆಲವರು ಪ್ರಚೋದಿಸಿದ್ದರು. ಆದರೆ ಈಗಿನ ಸಮ್ಮಿಶ್ರ ಸರ್ಕಾರ ಪ್ರತ್ಯೇಕ ಧರ್ಮದ ಬಗ್ಗೆ ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸ್ಸು ಮಾಡುವ ಸಾಧ್ಯತೆ ಕಡಿಮೆಯಿದೆ. ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಲಿಂಗಾಯತ ಹಾಗು ವೀರಶೈವ ಪ್ರತ್ಯೇಕ ಧರ್ಮ ಮಾಡುವ ಒಲವು ಇಲ್ಲ ಹೇಳಿದ್ದಾರೆ. ಸದ್ಯ ರಾಜ್ಯದ ಕಾಂಗ್ರೆಸ್ ನಾಯಕರು ಕೂಡ ಈ ಕುರಿತು ಕೇಂದ್ರ ನಾಯಕರಿಗೆ ಮನವರಿಗೆ ಮಾಡಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಧರ್ಮ ವಿಭಜನೆ ವಿಚಾರದಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ರಾಜ್ಯ ಸರ್ಕಾರ ಬೆಳೆ ಸಾಲ ಮನ್ನಾ ಘೋಷಣೆ ಮಾಡಿದೆ. ಆದರೆ ವಿಳಂಬ ಮಾಡುತ್ತಿರುವುದು ಸರಿ ಅಲ್ಲ. ವಿಳಂಬದಿಂದಾಗಿ ರೈತರ ಆತ್ಮಹತ್ಯೆಗಳು ಮುಂದುವರಿದಿವೆ. ಕಬ್ಬು ಬೆಳೆಗಾರ ಸಮಸ್ಯೆಯ ಬಗ್ಗೆಯೂ ಸರಕಾರ ಪರಿಹಾರಕ್ಕೆ ಚಿಂತಿಸಬೇಕು ಎಂದರು.

    ಡಿಕೆ ಶಿವಕುಮಾರ್ ಹೇಳಿದ್ದು ಏನು?
    ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶರನ್ನವರಾತ್ರಿ ಅಂಗವಾಗಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ನಡೆದ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತನಾಡಿದರು. ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಯ್ತು. ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ಮೊನ್ನೆ ನಡೆದ ಜನಾಭಿಪ್ರಾಯವೇ ಸಾಕ್ಷಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews 

  • ಸಮ್ಮಿಶ್ರ ಸರ್ಕಾರದ ವಿರುದ್ಧವೇ ಗುಡುಗಿದ ಕೈ ಶಾಸಕ ಶಾಮನೂರು ಶಿವಶಂಕರಪ್ಪ

    ಸಮ್ಮಿಶ್ರ ಸರ್ಕಾರದ ವಿರುದ್ಧವೇ ಗುಡುಗಿದ ಕೈ ಶಾಸಕ ಶಾಮನೂರು ಶಿವಶಂಕರಪ್ಪ

    ದಾವಣಗೆರೆ: ಕೈ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಈಗ ದೋಸ್ತಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರ ವೀರಶೈವ ಲಿಂಗಾಯತ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡಿದೆ. 2 ಕೋಟಿ ಜನರಿದ್ದ ಸಮಾಜ, ಈಗ ಜಾತಿಗಣತಿಯಿಂದ 85 ಸಾವಿರಕ್ಕೆ ಇಳಿಮುಖವಾಗಿದೆ ಎಂದು ಕಿಡಿಕಾರಿದ್ದಾರೆ.

    ಹರಿಹರ ಹೊರವಲಯದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಆಯೋಜಿಸಿದ್ದ ಡಾ.ಮಹಾಂತ ಸ್ವಾಮೀಜಿ ಸ್ಮರಣೋತ್ಸವದಲ್ಲಿ ಮಾತನಾಡಿದ ಅವರು, ವೀರಶೈವ ಸಮಾಜವನ್ನು ತುಳಿಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ನಾನು ಸಚಿವನಾಗಿದ್ದಾಗಲೂ ಸರ್ಕಾರದ ಕ್ರಮ ಖಂಡಿಸಿದ್ದೇನೆ. ನಮ್ಮ ಸಮಾಜವನ್ನು ತುಳಿಯುವ ಯತ್ನಿಸುವ ಯಾವುದೇ ಸರ್ಕಾರವಾದರೂ ಸರಿ, ನಾನು ತರಾಟೆಗೆ ತಗೆದುಕೊಳ್ಳುತ್ತೇನೆ ಎಂದು ಕಿಡಿಕಾರಿದರು.

    ಇತ್ತ ಸಮ್ಮಿಶ್ರ ಸರ್ಕಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎನ್ನುವ ಅಸಮಾಧಾನ ಹೆಚ್ಚಾಗುತ್ತಿದೆ. ಜೊತೆಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಡಿಸಿಎಂ ಹುದ್ದೆ ಕೊಡಲಿಲ್ಲ ಎನ್ನುವ ಹೊಗೆ ಇನ್ನೂ ವೀರಶೈವ ಲಿಂಗಾಯತ ಸಮಾಜದಲ್ಲಿ ಜೀವಂತವಾಗಿದೆ. ಹೀಗಾಗಿ ದೋಸ್ತಿ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಶಾಮನೂರು ಶಿವಶಂಕರಪ್ಪ ಅವರು ವಾಗ್ದಾಳಿ ನಡೆಸುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕುತೂಹಲ ಹುಟ್ಟಿಸಿದೆ ವೀರಶೈವ ಮುಖಂಡರೊಂದಿಗಿನ ಬಿಎಸ್‍ವೈ ಸಭೆ!

    ಕುತೂಹಲ ಹುಟ್ಟಿಸಿದೆ ವೀರಶೈವ ಮುಖಂಡರೊಂದಿಗಿನ ಬಿಎಸ್‍ವೈ ಸಭೆ!

    ಬೆಂಗಳೂರು: ವೀರಶೈವ ಮುಖಂಡರೊಂದಿಗೆ ಬಿಎಸ್ ಯಡಿಯೂರಪ್ಪ ಅವರು ಸಭೆ ನಡೆಸಿದ್ದಾರೆ.

    ಇಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಲಿದ್ದು, ಈ ಬೆನ್ನಲ್ಲೇ ಬಿಎಸ್‍ವೈ ವೀರಶೈವ ಮುಖಂಡರೊಂದಿಗೆ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

    ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಈ ಸಭೆ ನಡೆದಿದೆ. ಸಭೆಯಲ್ಲಿ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ, ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

    ಬಿಎಎಸ್‍ವೈ ಗೆ ಅಭಿನಂದನೆ ಜೊತೆಗೆ ಸಮುದಾಯದ ಮುಂದಿನ ನಡೆ ಹೇಗಿರಬೇಕು ಅನ್ನೋದರ ಬಗ್ಗೆ ಮುಖಂಡರು ಚರ್ಚೆ ನಡೆಸುತ್ತಿದ್ದಾರೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.