Tag: vegetarian

  • ಶ್ರೀಕೃಷ್ಣನ ಮೇಲಿನ ನಂಬಿಕೆಯಿಂದ ಮಾಂಸಾಹಾರ ತ್ಯಜಿಸಿದ್ರಾ ವೇಗಿ? – ಮಯಾಂಕ್‌ ತಾಯಿ ಹೇಳಿದ್ದೇನು?

    ಶ್ರೀಕೃಷ್ಣನ ಮೇಲಿನ ನಂಬಿಕೆಯಿಂದ ಮಾಂಸಾಹಾರ ತ್ಯಜಿಸಿದ್ರಾ ವೇಗಿ? – ಮಯಾಂಕ್‌ ತಾಯಿ ಹೇಳಿದ್ದೇನು?

    ಬೆಂಗಳೂರು: ಇತ್ತೀಚೆಗಷ್ಟೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಯುವ ವೇಗಿ ಮಯಾಂಕ್‌ ಯಾದವ್‌ (Mayank Yadav) ಅಮೋಘ ಸಾಧನೆ ಮಾಡಿದ್ದಾರೆ. ಇಡೀ ಕ್ರಿಕೆಟ್‌ ಲೋಕವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 156.7 ಕಿಮೀ ವೇಗದಲ್ಲಿ ಬೌಲಿಂಗ್‌ ಮಾಡುವ ಮೂಲಕ ಅತೀ ವೇಗದ ಬೌಲರ್ (Fastest Bowlers) ಎನಿಸಿಕೊಂಡಿದ್ದಾರೆ. ಮಗನ ಸಾಧನೆಯನ್ನು ಕಂಡ ತಾಯಿ ತಮ್ಮ ಖುಷಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಇದೇ ವೇಳೆ ಮಯಾಂಕ್‌ ಯಾದವ್‌ ಅವರ ಫಿಟ್‌ನೆಸ್‌ (Fitness) ಗುಟ್ಟನ್ನೂ ಬಿಟ್ಟುಕೊಟ್ಟಿದ್ದಾರೆ.

    ಮಯಾಂಕ್‌ ತಾಯಿ ಹೇಳಿದ್ದೇನು?
    ಸಂದರ್ಶನವೊಂದರಲ್ಲಿ ಮಾತನಾಡಿದ ಮಯಾಂಕ್‌ ಅವರ ತಾಯಿ ಮಮತಾ ಯಾದವ್‌, ಕಳೆದ 2 ವರ್ಷಗಳಿಂದ ನನ್ನ ಮಗ ಸಸ್ಯಾಹಾರಿಯಾಗಿ ಬದಲಾಗಿದ್ದಾನೆ. ಅದಕ್ಕೂ ಮುನ್ನ ಮಾಂಸಾಹಾರ ಸೇವನೆ ಮಾಡುತ್ತಿದ್ದ. ಪ್ರತಿದಿನ ಡಯಟ್‌ ಚಾರ್ಟ್‌ ಆಧಾರದಲ್ಲಿ ಏನು ಮಾಡಬೇಕು ಅಂತ ಅವನೇ ನಮಗೆ ಹೇಳುತ್ತಾನೆ. ಅವನು ಕೇಳಿದ್ದನ್ನ ನಾವು ಮಾಡಿಕೊಡ್ತೇವೆ. ಮಾಂಸಾಹಾರ ಸೇವಿಸುತ್ತಿದ್ದಾಗ ದಾಲ್, ರೊಟ್ಟಿ, ಅನ್ನ, ಹಾಲು, ತರಕಾರಿಗಳು ಇತ್ಯಾದಿ ಏನನ್ನೂ ತಿನ್ನುತ್ತಿರಲಿಲ್ಲ. ಆದ್ರೆ ಬಳಿಕ ಸಸ್ಯಾಹಾರಕ್ಕೆ (Vegetarian) ಬದಲಾದ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಿಸ್ಟರ್‌-360 ಸೂರ್ಯಕುಮಾರ್‌ ಕಂಬ್ಯಾಕ್‌ – ಮುಂಬೈ ತಂಡಕ್ಕಿನ್ನು ಆನೆ ಬಲ!

    ಮಯಾಂಕ್‌ ಮಾಂಸಾಹಾರ ತ್ಯಜಿಸಿದ್ದೇಕೆ?
    ಮಯಾಂಕ್‌ ಏಕೆ ಮಾಂಸಾಹಾರ ತ್ಯಜಿಸಿದ್ದಾನೆ ಎಂಬುದಕ್ಕೂ ಅವರ ತಾಯಿ ಉತ್ತರ ಕೊಟ್ಟಿದ್ದಾರೆ. ಹೌದು. ಮಯಾಂಕ್‌ ಮಾಂಸಾಹಾರ ತ್ಯಜಿಸಲು ಎರಡು ಮುಖ್ಯ ಕಾರಣಗಳಿವೆ. ಅವರು, ಶ್ರೀಕೃಷ್ಣನಲ್ಲಿ ಅಪಾರ ನಂಬಿಕೆಯಿಟ್ಟಿದ್ದರು ಮತ್ತು ಮಾಂಸಾಹಾರ (Non Veg Food) ದೇಹಕ್ಕೆ ಸರಿಹೊಂದುತ್ತಿರಲಿಲ್ಲ. ಆದ್ರೆ ನಮಗೆ ಅವನ ಕ್ರೀಡೆ ಮತ್ತು ದೇಹಕ್ಕೆ ಅಗತ್ಯವಾದುದ್ದನ್ನೇ ಅವನು ಮಾಡುತ್ತಿದ್ದಾನೆ ಅನ್ನಿಸಿತು ಎಂಬುದಾಗಿ ತಾಯಿ ಮಮತಾ ಹೇಳಿದ್ದಾರೆ. ಇದೇ ವೇಳೆ ಶೀಘ್ರದಲ್ಲೇ ತಮ್ಮ ಮಗ ಟೀಂ ಇಂಡಿಯಾ ಜರ್ಸಿ ಧರಿಸಿ ಆಡುವುದನ್ನು ನೋಡಲು ಬಯಸುತ್ತೇವೆ ಎಂದು ಬಯಕೆ ವ್ಯಕ್ತಪಡಿಸಿದ್ದಾರೆ.

    ಐಪಿಎಲ್‌ನಲ್ಲಿ ಮಯಾಂಕ್‌ ದಾಖಲೆ:
    21 ವರ್ಷ ವಯಸ್ಸಿನ ಮಯಾಂಕ್‌ ಯಾದವ್‌ ಗಂಟೆಗೆ 156.7 ಕಿಮೀ ವೇಗದಲ್ಲಿ ಬೌಲಿಂಗ್‌ ಮಾಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆಯನ್ನೂ ಬರೆದಿದ್ದಾರೆ. 150 ಕಿಮೀಗಿಂತಲೂ ಅಧಿಕ ವೇಗದಲ್ಲಿ ಬೌಲಿಂಗ್‌ ಮಾಡಿದ 4ನೇ ಬೌಲರ್‌ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಯಾಂಕ್‌ ವೇಗಕ್ಕೆ ಐಪಿಎಲ್‌ನಲ್ಲಿ ದಾಖಲೆಗಳು ಪುಡಿ ಪುಡಿ!

    ವೇಗದ ಬೌಲಿಂಗ್‌ ಮಾಡಿದ ಟಾಪ್‌-5 ಆಟಗಾರರು:
    * ಶಾನ್‌ ಟೈಟ್‌ – 2011ರಲ್ಲಿ – 157.7 ಕಿಮೀ
    * ಲಾಕಿ ಫರ್ಗೂಸನ್‌ – 2022ರಲ್ಲಿ – 157.3 ಕಿಮೀ
    * ಉಮ್ರಾನ್‌ ಮಲಿಕ್‌ – 2022ರಲ್ಲಿ – 157.0 ಕಿಮೀ
    * ಮಯಾಂಕ್‌ ಯಾದವ್‌ – 2024ರಲ್ಲಿ – 156.7 ಕಿಮೀ
    * ಅನ್‌ರಿಚ್‌ ನಾರ್ಟೆ – 2020ರಲ್ಲಿ – 156.2 ಕಿಮೀ

  • ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್- ಸ್ವಿಗ್ಗಿ ವಿರುದ್ಧ ದೂರು

    ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್- ಸ್ವಿಗ್ಗಿ ವಿರುದ್ಧ ದೂರು

    ಚೆನ್ನೈ: ವ್ಯಕ್ತಿಯೋರ್ವ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದ ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್‍ಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆತ ಫುಡ್ ಡೆಲಿವರಿ ಕಂಪನಿ ವಿರುದ್ಧ ಕಿಡಿಕಾರಿದ್ದಾರೆ.

    ಕೋ ಶೇಶಾ ಎಂಬ ತಮಿಳು ಗೀತೆ ರಚನಕಾರರು ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿದ್ದಾರೆ. ಶೇಷಾ ಅವರು ಸಸ್ಯಹಾರಿಯಾಗಿದ್ದು, ಗೋಬಿ ಮಂಚೂರಿ ವಿತ್ ಕಾರ್ನ್ ಫ್ರೈಡ್ ರೈಸ್‍ನ್ನು ಆರ್ಡರ್ ಮಾಡಿದ್ದರು. ಆದರೆ ಆ ತಿಂಡಿಯಲ್ಲಿ ಅವರಿಗೆ ಚಿಕನ್ ಪೀಸ್ ಇರುವುದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಅವರು ಸ್ವಿಗ್ಗಿಯು ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಘಟನೆ ಸಂಬಂಧಿಸಿ ಸ್ವಿಗ್ಗಿ ಅವರು ಕ್ಷಮೆಯಾಚಿಸಿ 70 ರೂ. ಪರಿಹಾರವನ್ನು ಅಷ್ಟೇ ನೀಡಿದೆ ಎಂದು ಆರೋಪಿಸಿದ್ದಾರೆ.

    ಘಟನೆಗೆ ಸಂಬಂಧಿಸಿ ಪರ ವಿರೋಧಗಳೆರಡೂ ಚರ್ಚೆ ಆಗುತ್ತಿದ್ದು, ಅನೇಕರು ನಾನ್‍ವೆಜ್ ರೆಸ್ಟೋರೆಂಟ್‍ನಿಂದ ಏಕೆ ಆರ್ಡರ್ ಮಾಡಿದರು. ಈ ರೀತಿ ದೂರು ನೀಡುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು

    ಇತ್ತೀಚೆಗಷ್ಟೇ ಜನಪ್ರಿಯ ರೆಸ್ಟೋರೆಂಟ್‍ನಲ್ಲಿ ಆರ್ಡರ್ ಮಾಡಿದ್ದ ಊಟದಲ್ಲಿ ಹುಳುಗಳು ಕಂಡು ಬಂದಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ರೆಸ್ಟೋರೆಂಟ್ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಅಮೆರಿಕದಲ್ಲಿ ತಿರಂಗಾ ರ‍್ಯಾಲಿ – ಗಮನಸೆಳೆದ ಬಾಬಾ ಬುಲ್ಡೋಜರ್

    Live Tv
    [brid partner=56869869 player=32851 video=960834 autoplay=true]

  • ಮೊಟ್ಟೆ ವಿತರಣೆ ಕೈಬಿಡಿ, ಇಲ್ಲದಿದ್ದರೆ ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಿರಿ: ದಯಾನಂದ ಸ್ವಾಮೀಜಿ

    ಮೊಟ್ಟೆ ವಿತರಣೆ ಕೈಬಿಡಿ, ಇಲ್ಲದಿದ್ದರೆ ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಿರಿ: ದಯಾನಂದ ಸ್ವಾಮೀಜಿ

    ಹುಬ್ಬಳ್ಳಿ: ಶಾಲೆಗಳಲ್ಲಿ ಮತ್ತು ಅಂಗನವಾಡಿಯಲ್ಲಿ ಮೊಟ್ಟೆಗೆ ಬದಲಾಗಿ ಸತ್ವಯುತ-ಸರ್ವಸಮ್ಮತ ಸಸ್ಯಹಾರ ಪದಾರ್ಥ ನೀಡಬೇಕು ಎಂದು ಅಖಿಲ ಭಾರತ ಸಸ್ಯಹಾರಿ ಪ್ರಧಾನ ಸಂಚಾಲಕರಾದ ದಯಾನಂದ ಸ್ವಾಮೀಜಿ ಆಗ್ರಹಿಸಿದರು.

    ನಗರದಲ್ಲಿಂದು ಸುದ್ದಿಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮತ್ತು ಅಂಗನವಾಡಿಗಳಲ್ಲಿನ ಮಕ್ಕಳಿಗೆ – ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಹೆಸರಿನಲ್ಲಿ ಸರ್ಕಾರ ಮೊಟ್ಟೆ ತಿನ್ನಿಸುತ್ತಿರುವುದನ್ನು ಕೈಬಿಟ್ಟು, ಮೊಟ್ಟೆಗಿಂತಲೂ ಅಧಿಕ ಬಹುಪೋಷಕಾಂಶಗಳನ್ನೊಳಗೊಂಡ ಶುದ್ಧ ಸಸ್ಯಹಾರ ಪದಾರ್ಥಗಳನ್ನು ನೀಡಲು ಕೇಳಿಕೊಂಡರು. ಇದನ್ನೂ ಓದಿ: ಇಂತಹ ಕೆಟ್ಟ, ದುರಾಡಳಿತ, ಭ್ರಷ್ಟಾಚಾರದ ಸರ್ಕಾರವನ್ನು ಇದುವರೆಗೂ ನಾನು ನೋಡಿರಲಿಲ್ಲ: ಸಿದ್ದರಾಮಯ್ಯ

    ಮೊಟ್ಟೆ ಮುಕ್ತಗೊಳಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೇ ರಾಜ್ಯದ ಲಿಂಗಾಯತ ಧರ್ಮ, ಜೈನ ಧರ್ಮ ಮುಂತಾದ ಧರ್ಮಗಳ, ಬ್ರಾಹ್ಮಣ, ವೈಶ್ಯ ಸೇರಿದಂತೆ ಸಸ್ಯಾಹಾರಿ ಪರ ಜನತೆಯ ಲಕ್ಷಾಂತರ ಮಕ್ಕಳಿಗೆ ಪ್ರತ್ಯೇಕ ಸಸ್ಯಹಾರಿ ಶಾಲೆ ಮತ್ತು ಅಂಗನವಾಡಿಗಳನ್ನು ತೆರೆಯಬೇಕು. ಈ ಹಕ್ಕೋತ್ತಾಯಿಸಿ ಡಿ.20 ರಂದು ಬೆಳಗ್ಗೆ 10ಕ್ಕೆ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಸಂತ ಸಮಾವೇಶ ಮತ್ತು ವಿಧಾನಸೌಧ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಶಾಲೆಗಳಲ್ಲಿ ಏಕರೂಪತೆ ಪಡೆದುಕೊಳ್ಳಬೇಕಿದ್ದ ಸರ್ಕಾರ ಈ ರೀತಿ ಮಾಡಬಾರದು. ಮೌಲ್ಯ ಆಧಾರಿತ ಶಿಕ್ಷಣ ಕೊಡಿ, ಮೊಟ್ಟೆ ಅಲ್ಲ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಏಕೆ? ಎಲ್ಲರಿಗೂ ಒಂದೇ ತರವಾಗಿ ಸರ್ಕಾರ ನೋಡಬೇಕು. ಮೊಟ್ಟೆಯನ್ನ ಶಾಲೆಯಲ್ಲಿ ತರಲು ಹುನ್ನಾರ ಏನು? ಕಾಂಗ್ರೆಸ್, ಜೆಡಿಎಸ್ ತೆಗೆದಿರುವ ಈ ಯೋಜನೆಯನ್ನ ಬಿಜೆಪಿ ಏಕೆ ತಂದಿದೆ? ಲಿಂಗಾಯತ, ಬ್ರಾಹ್ಮಣ, ಜೈನ ಧರ್ಮದ ಜನರಿಂದ ಮತ ಪಡೆದ ಬಿಜೆಪಿ ಈ ರೀತಿ ಏಕೆ ಮಾಡಿದೆ. ಸಾಮರಸ್ಯ ಬಗ್ಗೆ ಸಾರಿ ಹೇಳುವ, ಆರ್ ಎಸ್ ಎಸ್ ಇದರ ಬಗ್ಗೆ ಏಕೆ ಮಾತಾಡುತ್ತಿಲ್ಲ ಎಂದು ಪ್ರಶ್ನಿಸಿದರು.

    ಈ ಬಗ್ಗೆ ಆರ್ ಎಸ್ ಎಸ್ ಮಾತನಾಡದಿದ್ದರೆ ನಾವು ಸಸ್ಯಾಹಾರಿಗಳು ಮುಂದೆಂದು ಅವರ ಮಾತು ಕೇಳೋದಿಲ್ಲ. ರಾಜ್ಯದ ನೂರಾರು ಶ್ರೀಗಳು ಸಿಎಂ ಗೆ ಮನವಿ ಮಾಡಿದ್ದಾರೆ. ಆದ್ರೂ ಸರ್ಕಾರ ಸ್ವಾಮಿಗಳಿಂದಲೇ ಮೊಟ್ಟೆ ತಿನ್ನಿಸುವ ಹುನ್ನಾರ ಮಾಡುತ್ತಿದೆ. ಇನ್ನೇನಿದ್ರೂ ನಾವು ಯಾರ ಜೊತೆ ಮಾತನಾಡೋದಿಲ್ಲ. ಎಲ್ಲ ಸ್ವಾಮೀಜಿಗಳು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಲಿಂಗಾಯತರಿಂದಲೇ ಸರ್ಕಾರ ಪತನವಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹೆಂಡ್ತಿ ಇಲ್ಲ ಅಂತ ಎರಡನೇ ಮದುವೆ- ಈಕೆಗೆ ಇವನು ನಾಲ್ಕನೆಯವನು!

    ಸುದ್ದಿಗೋಷ್ಠಿಯಲ್ಲಿ ಬಸವಧರ್ಮ ಪೀಠದ ಮಾತೆ ಗಂಗಾದೇವಿ, ಚನ್ನಬಸವನಂದ ಸ್ವಾಮೀಜಿ, ಭವರಲಾಲ್ ಜೈನ್, ರಮೇಶ್ ಕುಲಕರ್ಣಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

  • ಸಸ್ಯಹಾರಿ ಸೋನು ಸೂದ್ ಹೆಸರಲ್ಲಿ ಮಟನ್ ಶಾಪ್ – ನಟ ಹೇಳಿದ್ದು ಹೀಗೆ

    ಸಸ್ಯಹಾರಿ ಸೋನು ಸೂದ್ ಹೆಸರಲ್ಲಿ ಮಟನ್ ಶಾಪ್ – ನಟ ಹೇಳಿದ್ದು ಹೀಗೆ

    ಮುಂಬೈ: ತಮ್ಮ ಹೆಸರಿನಲ್ಲಿ ಆರಂಭವಾಗಿರುವ ಮಟನ್ ಶಾಪ್ ನೋಡಿ ಸಸ್ಯಹಾರಿ ನಟ ಸೋನು ಸೂದ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಟ್ವಿಟ್ಟರ್ ನಲ್ಲಿ ಸೋನು ಸೂದ್ ವೀಡಿಯೋ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಮಟನ್ ಅಂಗಡಿಗೆ ಸೋನು ಸೂದ್ ಎಂದು ಹೆಸರಿಡಲಾಗಿದೆ. ಅಂಗಡಿ ಮುಂದೆ ಸೋನು ಸೂದ್ ಫೋಟೋ ಹಾಕಿ ದೊಡ್ಡ ಬ್ಯಾನರ್ ಸಹ ಹಾಕಲಾಗಿದೆ. ಈ ಅಂಗಡಿ ವೀಡಿಯೋ ಕಳೆದೊಂದು ವಾರದಿಂದ ವೈರಲ್ ಆಗಿತ್ತು. ಈ ವೀಡಿಯೋ ನೋಡುತ್ತಿದ್ದಂತೆ ಸೋನು ಸೂದ್ ಸಹ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

    ಲಾಫಿಂಗ್ ಎಮೋಜಿ ಮೂಲಕ ಪ್ರತಿಕ್ರಿಯಿಸಿರುವ ಸೋನು ಸೂದ್, ನಾನೊಬ್ಬ ಸಸ್ಯಹಾರಿ. ಅರೇ ಇದೇನು ನೋಡುತ್ತಿದ್ದೇನೆ? ನನ್ನ ಹೆಸರಿನಲ್ಲಿ ಮಟನ್ ಶಾಪ್. ಇಲ್ಲಿ ಸಸ್ಯಹಾರಿ ವಸ್ತುಗಳನ್ನ ಮಾರಲು ನಾನು ಸಹಾಯ ಮಾಡಬಲ್ಲೆ ಎಂದು ಬರೆದು ವೀಡಿಯೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಸೋನು ಸೂದ್ ಫನ್ನಿ ಸಾಲುಗಳಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ನಿತ್ಯ 5 ಸಾವಿರ ಜನರಿಗೆ ಆಹಾರ ವಿತರಿಸುತ್ತಿರುವ ಸೋನು ಸೂದ್

    ಆಂಧ್ರಪ್ರದೇಶದಲ್ಲಿ ಎರಡು ಆಕ್ಸಿಜನ್ ಪ್ಲಾಂಟ್ ಸ್ಥಾಪಿಸೋದಾಗಿ ಸೋನು ಸೂದ್ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಚೀನಾ ಮತ್ತು ಫ್ರಾನ್ಸ್ ನಿಂದ ಆಮ್ಲಜನಕ ಸಾಂದ್ರಕ ತರುತ್ತೇನೆ ಎಂದು ಹೇಳಿದ್ದಾರೆ. ಇಷ್ಟು ಮಾತ್ರ ಅಲ್ಲದೇ ಕಳೆದ ವರ್ಷದಂತೆ ಈ ಬಾರಿಯೂ ಕೊರೊನಾ ಸಂಕಷ್ಟದಲ್ಲಿ ಸಿಲುಕಿರುವ ಜನರ ಪಾಲಿಗೆ ದೇವತಾ ಮನುಷ್ಯನಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಿದ ನಟ ಸೋನು ಸೂದ್

    2020ರಲ್ಲಿ ಲಾಕ್‍ಡೌನ್ ನಿಂದಾಗಿ ಸಂಕಷ್ಟದಲ್ಲಿದ್ದ ಪ್ರವಾಸಿ ಕಾರ್ಮಿಕರನ್ನು ಅವರ ಗೂಡು ಸೇರಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಈಗ ಎಷ್ಟೋ ಜನ ಚಿಕಿತ್ಸೆಗೆ ಸಹಾಯ ಮಾಡುತ್ತಿದ್ದಾರೆ. ಸೋನು ಅವರ ನಿಸ್ವಾರ್ಥ ಸೇವೆಗೆ ಅಭಿಮಾನಿಗಳು ಅವರ ಹೆಸರಿನಲ್ಲಿ ಅಂಗಡಿ, ವಿಶೇಷ ಅಭಿಯಾನ, ದೇವಸ್ಥಾನ ಸಹ ನಿರ್ಮಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ವಿಮಾನದ ಮೇಲೆ ಸೋನು ಸೂದ್ ಚಿತ್ರವನ್ನ ಚಿತ್ರಿಸಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ವಿಶೇಷವಾಗಿ ಗೌರವ ಸಲ್ಲಿಸಿತ್ತು.

  • ವೆಜ್ ಬದಲು ನಾನ್‍ವೆಜ್ ಪಿಜ್ಜಾ ಬಂತು- 1 ಕೋಟಿ ಪರಿಹಾರ ಕೇಳಿದ ಮಹಿಳೆ

    ವೆಜ್ ಬದಲು ನಾನ್‍ವೆಜ್ ಪಿಜ್ಜಾ ಬಂತು- 1 ಕೋಟಿ ಪರಿಹಾರ ಕೇಳಿದ ಮಹಿಳೆ

    ಲಕ್ನೋ: ಆರ್ಡರ್ ಮಾಡಿದ್ದ ವೆಜ್ ಪಿಜ್ಜಾ ಬದಲಾಗಿ ನಾನ್‍ವೆಜ್ ಪಿಜ್ಜಾ ಕಳುಹಿಸಿದ ತಪ್ಪಿಗಾಗಿ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

    ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ದೀಪಾಲಿ ತ್ಯಾಗ್ ಅನ್‍ಲೈನ್‍ನಲ್ಲಿ ವೆಜ್ ಪಿಜ್ಜಾ ಆರ್ಡರ್ ಮಾಡಿದ್ದರು. ಆದರೆ ಈ ಬದಲಿಗೆ ಅವರಿಗೆ ನಾನ್‍ವೆಜ್ ಪಿಜ್ಜಾ ಬಂದಿದೆ. ಈ ಸಂಬಂಧ ನ್ಯಾಯಾಲಯ ಮೊರೆ ಹೋಗಿದ್ದಾರೆ.

    2019ಮಾರ್ಚ್, 21ರಂದು ನಾನು ಅಮೆರಿಕನ್ ಪಿಜ್ಜಾ ಔಟ್‍ಲೆಟ್‍ನಲ್ಲಿ ಆನ್‍ಲೈನ್ ಮೂಲಕವಾಗಿ ವೆಜ್ ಪಿಜ್ಜಾ ಆರ್ಡರ್ ಮಾಡಿದ್ದೆ. ಬದಲಾಗಿ ನನಗೆ ನಾನ್ ವೆಜ್ ಪಿಜ್ಜಾ ಕಳುಹಿಸಿಕೊಟ್ಟಿದ್ದಾರೆ. ತುಂಬಾ ಹಸಿವಾದ್ದರಿಂದ ನಾನು ಈ ವಿಚಾರ ತಿಳಿಯದೆ ಹಾಗೇ ತಿಂದಿದ್ದೇನೆ. ಹುಟ್ಟಿದಾಗಿನಿಂದಲೂ ಶುದ್ಧ ಸಸ್ಯಹಾರಿಯಾಗಿರುವ ನನಗೆ ಹಾಗೂ ನನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಹೀಗಾಗಿ ನನಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ನ್ಯಾಯಾಲದ ಮೊರೆ ಹೋಗಿದ್ದೇನೆ ಎಂದಿದ್ದಾರೆ. ರೆಸ್ಟೋರೆಂಟ್‍ನವರು ನಿಲಕ್ಷ್ಯದ ವಿರುದ್ಧ ದೂರು ನೀಡಿದ್ದರೆಂದು ಗ್ರಾಹಕ ನ್ಯಾಯಾಲಯಕ್ಕೆ ತ್ಯಾಗಿ ವಕೀಲ ಫರ್ಹಾತ್ ವಾರ್ಸಿ ಸಿಳಿಸಿದ್ದಾರೆ.

    ಘಟನೆಯ ಬಳಿಕ 2019ರ ಮಾರ್ಚ್ 26 ರಂದು ಪಿಜ್ಜಾ ರೆಸ್ಟರೋರೆಂಟ್‍ನ ಮ್ಯಾನೇಜರ್ ಎಂದು ಹೇಳಿಕೊಂಡು ತ್ಯಾಗಿ ಅವರಿಗೆ ಕರೆಮಾಡಿ ನಿಮ್ಮಿಂದ ಯಾವುದೇ ಹಣ ಪಡೆಯದೆ ನಿಮ್ಮ ಕುಟುಂಬಕ್ಕೆ ನಾವು ಪಿಜ್ಜಾ ನೀಡುತ್ತೇವೆ ಎಂದು ಹೇಳಿದ್ದಾರೆ. ಆಗ ತ್ಯಾಗಿ ಅವರು ಇದು ಸಾಮಾನ್ಯವಾದ ಪ್ರಕರಣವಲ್ಲ. ನಿಮ್ಮ ಕಂಪನಿ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದೆ. ಮಾನಸಿಕ ನೆಮ್ಮದಿ ಹಾಳಾಗಿದೆ. ಹಲವಾರು ದುಬಾರಿ ಆಚರಣೆಗಳ ಮೂಲಕವಾಗಿ ಹೋಗಬೇಕಾಗುತ್ತದೆ. ಇದಕ್ಕೆ ಹಣ ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

    ದೆಹಲಿ ಜಿಲ್ಲಾ ಗ್ರಾಹಕ ವಿವಾದ ನಿವಾರಣಾ ಆಯೋಗವು ಮಹಿಳೆಯ ದೂರಿಗೆ ಉತ್ತರವನ್ನು ಸಲ್ಲಿಸುವಂತೆ ಪಿಜ್ಜಾ ಕಂಪನಿಗೆ ಸೂಚಿಸಿದೆ. ಮಾರ್ಚ್ 17 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

  • ಸಸ್ಯಾಹಾರಿ ದಂಪತಿಗೆ ಮಾಂಸಾಹಾರ ತಿನ್ನಿಸಿದ ಸಿಬ್ಬಂದಿ – ವಿಮಾನ ಸಂಸ್ಥೆಗೆ 20 ಸಾವಿರ ದಂಡ

    ಸಸ್ಯಾಹಾರಿ ದಂಪತಿಗೆ ಮಾಂಸಾಹಾರ ತಿನ್ನಿಸಿದ ಸಿಬ್ಬಂದಿ – ವಿಮಾನ ಸಂಸ್ಥೆಗೆ 20 ಸಾವಿರ ದಂಡ

    ಬೆಂಗಳೂರು: ಸಸ್ಯಾಹಾರ ಬದಲಿಗೆ ಬೆಂಗಳೂರು ಮೂಲದ ದಂಪತಿಗೆ ಮಾಂಸಾಹಾರ ನೀಡಿದ್ದಕ್ಕೆ ಕೋರ್ಟ್ ದುಬೈ ಮೂಲದ ಎಮಿರೇಟ್ಸ್ ವಿಮಾನಯಾನ ಸಂಸ್ಥೆಗೆ 20 ಸಾವಿರ ರೂ. ದಂಡ ವಿಧಿಸಿದೆ.

    ಲಂಡನ್ ನಲ್ಲಿ ನೆಲೆಸಿರುವ ದಂಪತಿ ಬೆಂಗಳೂರಿಗೆ ಆಗಮಿಸಿದ್ದರು. 2 ತಿಂಗಳು ನಗರದಲ್ಲಿದ್ದ ದಂಪತಿ ಮರಳಿ ಲಂಡನ್ ಗೆ ತೆರಳಲು ಎಮಿರೇಟ್ಸ್ ಕಂಪನಿಯ ವಿಮಾನ ಟಿಕೆಟ್ ಬುಕ್ ಮಾಡಿದ್ದರು.

    ಬುಕ್ಕಿಂಗ್ ವೇಳೆ ಯಾವ ರೀತಿಯ ಆಹಾರ ಬೇಕು ವಿಭಾಗದಲ್ಲಿ  ‘ಸಸ್ಯಾಹಾರ’ ಆಯ್ಕೆ ಮಾಡಿಕೊಂಡಿದ್ದರು. ಆದರೆ ವಿಮಾನ ಪ್ರಯಾಣದ ಸಂದರ್ಭದಲ್ಲಿ ಸಿಬ್ಬಂದಿ ಮಾಂಸಾಹಾರ ನೀಡಿದ್ದಾರೆ. ಆರಂಭದಲ್ಲಿ ಪತ್ನಿ ಆಹಾರ ಸೇವಿಸಿದ್ದಾರೆ. ನಂತರ ಪತಿ ಆಹಾರ ಸೇವಿಸುತ್ತಿದ್ದಾಗ ಅನುಮಾನ ಬಂದು ಸಿಬ್ಬಂದಿ ಜೊತೆ ಪ್ರಶ್ನಿಸಿದ್ದಾರೆ.

    ಈ ವೇಳೆ ಮಿಸ್ ಆಗಿ ನಾನ್ ವೆಜ್ ಆಹಾರ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ. ಇಷ್ಟು ಹೊತ್ತಿಗೆ ಪತ್ನಿ ಊಟ ಸೇವಿಸಿದ್ದರೆ ಪತಿ ಕೂಡ ಸ್ವಲ್ಪ ಊಟ ಸೇವಿಸಿದ್ದರು. ಯಾವಾಗ ಇದು ನಾನ್ ವೆಜ್ ಅಂತಾ ಗೊತ್ತಾಯ್ತೋ ದಂಪತಿ ಅಲ್ಲೇ ಪ್ರಶ್ನೆ ಮಾಡಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇಲ್ಲಿಯವರೆಗೂ ನಾವು ನಾನ್ ವೆಜ್ ತಿಂದಿಲ್ಲ, ನಾವು ಶುದ್ಧ ಸಸ್ಯಹಾರಿಗಳು. ನಿಮ್ಮ ಎಡವಟ್ಟಿನಿಂದ ನಾನ್ ವೆಜ್ ತಿನ್ನುವಂತಾಯ್ತು ಎಂದು ಆರೋಪಿಸಿ ದಂಪತಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ದೂರು ನೀಡಿದ್ದರು. ಅರ್ಜಿ ವಿಚಾರಣೆ ನಡೆಸಿದ  ವೇದಿಕೆ ಎಮಿರೇಟ್ಸ್ ಸಂಸ್ಥೆಗೆ 20 ಸಾವಿರ ರೂ. ದಂಡ ಹಾಕಿ ಆದೇಶ ಪ್ರಕಟಿಸಿದೆ.

  • ಹುಲ್ಲು ತಿಂದ ಸಿಂಹ – ಸಸ್ಯಾಹಾರಿ ಲಯನ್ ಎಂದ ಜನರು

    ಹುಲ್ಲು ತಿಂದ ಸಿಂಹ – ಸಸ್ಯಾಹಾರಿ ಲಯನ್ ಎಂದ ಜನರು

    ಗಾಂಧಿನಗರ: ಗುಜರಾತಿನ ಗಿರ್ ಕಾಡಿನಲ್ಲಿ ಸಿಂಹವೊಂದು ಹುಲ್ಲು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆಯಾಗುತ್ತಿದೆ.

    ಅಪ್ಪಟ ಮಾಂಸಹಾರಿಯಾಗಿರುವ ಸಿಂಹ ಪ್ರಾಣಿಗಳನ್ನು ಬೇಟೆಯಾಡಿ ತಿನ್ನುವುದನ್ನು ನಾವು ನೋಡಿದ್ದೇವೆ. ಆದರೆ ಈ ಸಿಂಹ ಕಾಡಿನಲ್ಲಿ ಇರುವ ಗರಿಕೆ ಹುಲ್ಲು ಮತ್ತು ಗಿಡಮೂಲಿಕೆಯನ್ನು ತಿನ್ನುತ್ತಿರುವುದು ವಿಚಿತ್ರ ಎಂದು ತೋರುತ್ತದೆ.

    ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದ ಕೆಲವರು ಆಶ್ಚರ್ಯ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಸಿಂಹಗಳು ಹುಲ್ಲು ತಿನ್ನುವುದು ಸಹಜ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನು ಒಪ್ಪಿಕೊಂಡಿರುವ ಪ್ರಾಣಿ ತಜ್ಞರು ಸಿಂಹಗಳು ಹಸಿ ಮಾಂಸವನ್ನು ತಿನ್ನುವುದರಿಂದ ಅದು ಬೇಗ ಜೀರ್ಣವಾಗುವುದಿಲ್ಲ. ಅದ್ದರಿಂದ ಜೀರ್ಣಕ್ರಿಯೇಗೆ ತೊಂದರೆಯಾದಾಗ ಸಿಂಹಗಳು ಹುಲ್ಲನ್ನು ತಿಂದು ಹೊಟ್ಟೆಯನ್ನು ಸ್ವಚ್ಛಮಾಡಿಕೊಳ್ಳುತ್ತವೆ ಎಂದು ಹೇಳಿದ್ದಾರೆ.

    ಎಲ್ಲಾ ಜಾತಿಯ ಮಾಂಸಹಾರಿ ಪ್ರಾಣಿಗಳು ಹುಲ್ಲನ್ನು ತಿನ್ನುತ್ತವೆ. ಏಕೆಂದರೆ ಅವುಗಳು ಬೇಟೆಯಾಡಿ ಹಸಿ ಮಾಂಸವನ್ನು ತಿನ್ನುವ ಕಾರಣ ಅವುಗಳ ದೇಹಕ್ಕೆ ಫೈಬರ್ ಅಂಶವು ಜಾಸ್ತಿ ಸೇರುತ್ತದೆ. ಇದರಿಂದ ಅವು ತಮ್ಮ ಕರುಳುಗಳನ್ನು ಸ್ವಚ್ಛಮಾಡಿಕೊಳ್ಳಲು ಆಗಾಗ ಈ ರೀತಿ ಹುಲ್ಲುಗಳನ್ನು ತಿನ್ನುತ್ತವೆ ಎಂದು ಪ್ರಾಣಿ ತಜ್ಞರು ತಿಳಿಸಿದ್ದಾರೆ.

    https://twitter.com/Adamiington/status/1167016863802355712

    ಈ ವಿಡಿಯೋ ನೋಡಿದ ಕೆಲವರು ವ್ಯಂಗ್ಯವಾಗಿ ಕೂಡ ಕಮೆಂಟ್ ಮಾಡಿದ್ದು, ಪಾಪ ಆದರ ಗಂಡ ಡಯಟ್ ಮಾಡು ಎಂದು ಹೇಳಿರಬೇಕು ಅದಕ್ಕೆ ಅ ಸಿಂಹಿಣಿ ಹಲ್ಲು ತಿನ್ನುತ್ತಿದೆ ಎಂದು ಹೇಳಿದ್ದಾರೆ. ಇನ್ನೂ ಕೆಲವರು ಇದು ಸಸ್ಯಾಹಾರಿ ಸಿಂಹ ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

  • ನಾನು ಸಸ್ಯಹಾರಿಯಾಗಿ ಬದಲಾಗಿದ್ದು ಯಾಕೆ: ಜಗ್ಗೇಶ್ ವಿವರಿಸಿದ್ರು

    ನಾನು ಸಸ್ಯಹಾರಿಯಾಗಿ ಬದಲಾಗಿದ್ದು ಯಾಕೆ: ಜಗ್ಗೇಶ್ ವಿವರಿಸಿದ್ರು

    ಬೆಂಗಳೂರು: ನವರಸ ನಾಯಕ ನಟ ಜಗ್ಗೇಶ್ ತಾವು ಯಾಕೆ ಸಸ್ಯಹಾರಿಯಾಗಿದ್ದು ಯಾಕೆ ಎನ್ನುವುದನ್ನು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

    ಜಗ್ಗೇಶ್ ಸಸ್ಯಹಾರಿಯಾಗಿದ್ದು, ಈ ಬಗ್ಗೆ ಜಗ್ಗೇಶ್ “ಊರ ಹಬ್ಬಕ್ಕೆ ಕುರಿ ಕಡಿಯಲು ಕಟುಕ ಅಣಿಯಾದಾಗ ಮಾತ್ತೊಂದು ಕುರಿ ರೋಧಿಸುತ್ತಿತ್ತು. ವಿಷಯ ತಿಳಿದಾಗ ನಾನು ಅತ್ತುಬಿಟ್ಟಿ. ಕಟುಕನಿಗೆ ತಲೆಕೊಟ್ಟದ್ದು ಮಗ ರೋಧಿಸುತ್ತಿದ್ದದ್ದು ಅಮ್ಮ. ಪ್ರಾಣಿಗಳಲ್ಲು ಭಾವನಾತ್ಮಕ ಸಂಬಂಧವಿರುತ್ತದೆ. 4 ಘಂಟೆಗೆ ಮಲವಾಗುವ ಊಟಕ್ಕೆ ಯಾಕೆ ಬೇಕು ಭಾವನೆ ಕೊಂದ ಊಟ. ದಯೇ ಧರ್ಮದ ಮೂಲ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಈ ಹಿಂದೆ ಜಗ್ಗೇಶ್, ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಿದರೆ ಅಯ್ಯೋ ಪಾಪಾ ಅನಿಸುತ್ತದೆ. ಸರ್ಕಾರ ರಚನೆಗೆ ತನು, ಮನ, ಧನ ಎಲ್ಲ ಅರ್ಪಿಸಿ, ಈಗ ಒಳಿತು ಮಾಡು ಮನುಸ ಎಂಬ ಹಾಡಿನಂತೆ ಕೂತಿದ್ದಾರೆ ಅಂತ ನಟ, ಬಿಜೆಪಿ ಮುಖಂಡ ಜಗ್ಗೇಶ್ ವ್ಯಂಗ್ಯವಾಡಿದ್ದರು.

    ಕಬಾಬ್, ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ಎಲ್ಲಾ ಸಿಎಂ ಎಚ್‍ಡಿಕೆ ತಟ್ಟೆಯಲ್ಲಿದೆ. ನೀರ್ ಮಜ್ಜಿಗೆ, ಕೋಸಂಬರಿ, ಪಾನಕ ಎಲ್ಲವೂ ಕಾಂಗ್ರೆಸ್ ತಟ್ಟೆಯಲ್ಲಿದೆ. ಇಬ್ಬರು ಊಟಕ್ಕೆ ಕೂತಿದ್ದಾರೆ. ಜೆಡಿಎಸ್‍ನವರು ಮೃಷ್ಠಾನ್ನ ಭೋಜನ ಮಾಡುವುದನ್ನ ನೋಡಿಕೊಂಡು ಕಾಂಗ್ರೆಸ್ಸಿನವರು ಸುಮ್ಮನಿರುವುದಕ್ಕೆ ಸಾಧ್ಯಾನಾ.? ನೋಡ್ತಾ ಇರಿ, ತಟ್ಟೆ ಮುಂದೆಯೇ ಇಬ್ಬರು ಬಡಿದಾಡಿಕೊಳ್ತಾರೆ. ಆ ಕಾಲ ತುಂಬಾ ದೂರ ಇಲ್ಲ. ಮದುವೆ ಮನೆಯಲ್ಲಿ ಊಟಕ್ಕೆ ಕಿತ್ತಾಡುವ ಸಂದರ್ಭ ಬಹಳ ಬೇಗ ಬರುತ್ತೆ. ಈ ಆಟವನ್ನು ನೋಡಲು ನಾನೂ, ಜನರು ನೀವೂ ಎಲ್ಲರೂ ಕಾಯುತ್ತಿದ್ದೇವೆ ಅಂತ ಹೇಳಿದ್ದರು.

  • ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ನಾನ್ ವೆಜ್ ಸಿಗೋದು ಡೌಟ್!

    ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ನಾನ್ ವೆಜ್ ಸಿಗೋದು ಡೌಟ್!

    ನವದೆಹಲಿ: ರೈಲ್ವೇ ಬೋರ್ಡ್ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದಲ್ಲಿ ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಮಾಂಸಾಹಾರ ಸಿಗುವುದಿಲ್ಲ.

    ಮಹಾತ್ಮ ಗಾಂಧೀಜಿಯವರ 150ನೇ ಹುಟ್ಟು ಹಬ್ಬದ ವಿಶೇಷ ಸಂಭ್ರಮಾಚರಣೆ ಪ್ರಯುಕ್ತ 2018, 2019, 2020 ರ ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ಸಸ್ಯಾಹಾರ ದಿನವನ್ನಾಗಿ ಆಚರಿಸಲು ಮುಂದಾಗಿದೆ. ಸಸ್ಯಾಹಾರದ ರಾಯಭಾರಿಯಾಗಿದ್ದ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಅಕ್ಟೋಬರ್ 2 ರಂದು ರಾಷ್ಟ್ರೀಯ ಸ್ವಚ್ಛತಾ ದಿವಸದ ಜೊತೆಗೆ ಸಸ್ಯಾಹಾರ ದಿನವನ್ನಾಗಿ ಆಚರಣೆ ಮಾಡಲು ಅನುಮತಿ ನೀಡುವಂತೆ ರೈಲ್ವೇ ಬೋರ್ಡ್ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.

    ಗಾಂಧೀಜಿಯರ 150ನೇ ಹುಟ್ಟು ಹಬ್ಬದ ಪ್ರಯುಕ್ತ ಕೇಂದ್ರ ಸಂಸ್ಕೃತಿ  ಇಲಾಖೆ ಹೊರತಂದಿರುವ ಲೋಗೋವನ್ನು ರೈಲ್ವೆ ಕೋಚ್ ಗಳ ಹೊರ ಭಾಗದಲ್ಲಿ ಬಾಗಿಲ ಬಳಿ ಪ್ರಯಾಣಿಕರಿಗೆ ಕಾಣುವಂತೆ ಹಾಕಲು ಇಲಾಖೆಯ ಅನುಮತಿಯನ್ನು ಕೋರಿದೆ ಎಂದು ತಿಳಿಸಿದೆ.

    ಮಾರ್ಚ್ 12 ರಂದು ದಂಡಿ ಸತ್ಯಾಗ್ರಹದ ಸ್ಮರಣಾರ್ಥ ಸಬರಮತಿಯಿಂದ ಸ್ವಚ್ಛತಾ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುವುದು. ಟಿಕೆಟ್ ಗಳ ಮೇಲೆ ಮಹಾತ್ಮ ಗಾಂಧಿಯವರ ಚಿತ್ರವಿರುತ್ತದೆ ಎಂದು ತಿಳಿಸಿದೆ.

    ಸಸ್ಯಾಹಾರ ದಿನಾಚಾರಣೆಯನ್ನು ಯಶಸ್ವಿಯಾಗಿ ಆಚರಿಸಬೇಕು. ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಹಾಗೂ ಅವರ ಕಾರ್ಯಗಳ ಕುರಿತಾದ ವಿಡಿಯೋಗಳನ್ನು ಎಲ್ಲ ನಿಲ್ದಾಣಗಳಲ್ಲಿ ಪ್ರದರ್ಶನ ಮಾಡಲು ರೈಲ್ವೇ ಇಲಾಖೆ ಸಿದ್ಧತೆ ನಡೆಸುತ್ತಿದೆ.

    150ನೇ ಹುಟ್ಟು ಹಬ್ಬದ ವಿಶೇಷ ಸಂಭ್ರಮಾಚರಣೆಗೆ ಸಮಿತಿ ರಚನೆಯಾಗಿದ್ದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಒಂದು ತಿಂಗಳ ಹಿಂದೆ ಮೊದಲ ಸಭೆ ನಡೆದಿದೆ.

  • ನಾನ್ ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರಂತೆ ರಾಗಾ – ಬಿಎಸ್‍ವೈ ಗಂಭೀರ ಆರೋಪ

    ನಾನ್ ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರಂತೆ ರಾಗಾ – ಬಿಎಸ್‍ವೈ ಗಂಭೀರ ಆರೋಪ

    ಬೆಂಗಳೂರು: ಸತತ ಮೂರು ದಿನಗಳಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಿ ಉತ್ತರ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಸಂಚರಿಸುವ ಮಾರ್ಗದಲ್ಲಿ ಬರುವ ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

    ಮಾಂಸಾಹಾರ ತಿಂದು ದರ್ಶನ ಪಡೆದ್ರಾ ರಾಗಾ?: ರಾಹುಲ್ ಗಾಂಧಿ ಕೊಪ್ಪಳ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಜವಾರಿ ಕೋಳಿ, ಬಿರಿಯಾನಿ, ಪಾವ್ ಬಾಜಿ, ಶಾವಿಗೆ ಪಾಯಸ, ಪಿಜ್ಜಾ ಸೇರಿದಂತೆ ವಿವಿಧ ವೆಜ್ ಮತ್ತು ನಾನ್‍ವೆಜ್ ಆಹಾರ ಸೇವನೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.

    ಬಿಎಸ್‍ವೈ ಟ್ವೀಟ್: ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೀನು ಊಟ ಸೇವಿಸಿ ಬಳಿಕ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದ್ರೆ ಈ ಕುರಿತು ಸಿಎಂ ಪ್ರತಿಕ್ರಿಯಿಸಿ, ದೇವರು ಮಾಂಸಾಹಾರ ತಿಂದು ಬರಬೇಡ ಅಂತ ಎಲ್ಲೂ ಹೇಳಿಲ್ಲ ಎಂದು ಬೇಡರ ಕಣ್ಣಪ್ಪನ ಉದಾಹರಣೆ ಕೊಟ್ಟು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಮೀನೂಟ ತಿಂದುಬಂದ ಸಿಎಂ, ಉಪವಾಸದಲ್ಲೇ ಧರ್ಮಸ್ಥಳಕ್ಕೆ ಬಂದ ಮೋದಿ!