Tag: vehicles

  • ಅಂತರ್ ಜಿಲ್ಲಾ ಖದೀಮರ ಬಂಧನ- 1 ಕೋಟಿಗೂ ಅಧಿಕ ಮೌಲ್ಯದ ವಾಹನಗಳು ವಶಕ್ಕೆ

    ಅಂತರ್ ಜಿಲ್ಲಾ ಖದೀಮರ ಬಂಧನ- 1 ಕೋಟಿಗೂ ಅಧಿಕ ಮೌಲ್ಯದ ವಾಹನಗಳು ವಶಕ್ಕೆ

    ಹಾಸನ: ಜಿಲ್ಲೆಯ ಹಳೇಬೀಡು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರು ಮಂದಿ ಅಂತರ್ ಜಿಲ್ಲಾ ವಾಹನ ಖದೀಮರನ್ನು ಬಂಧಿಸಿದ್ದಾರೆ. ಸುಮಾರು 1.50 ಕೋಟಿ ರೂ. ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ತಿಳಿಸಿದರು.

    ಬಂಧಿತರೆಲ್ಲ 20-25ರ ವಯಸ್ಸಿನ ನಡುವಿನ ಯುವಕರಾಗಿದ್ದು, ಎಲ್ಲರೂ ಶಿವಮೊಗ್ಗ ಜಿಲ್ಲೆಯ ಸೊರಬ, ಮಂಗಳೂರು, ಗುಲ್ಬರ್ಗ ಜಿಲ್ಲೆಯರಾಗಿದ್ದಾರೆ. ಈ ಹಿಂದೆ ಎಲ್ಲರೂ ಸಣ್ಣಪುಟ್ಟ ಕಳ್ಳತನ ನಡೆಸಿದ್ದರು. ಕೃತ್ಯ ಸಂಬಂಧ ಶಾಹಿದ್, ಹಿದಾಯತ್, ಬಾಸ್ಕರ್ ಪೂಜಾರಿ, ಅಬ್ದುಲ್ ಕಲಾಂ, ಅಬ್ದುಲ್ ರಹೀಂ, ಖಾಜಾ ಮಹಮದ್ ಬಂಧಿತ ಆರೋಪಿಗಳಾಗಿದ್ದಾರೆ.

    ಬಂಧಿತರಿಂದ 1 ಕೋಟಿಗೂ ಅಧಿಕ ಬೆಲೆಯ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, 10 ಅಶೋಕ್ ಲೈಲ್ಯಾಂಡ್‍ನ ದೋಸ್ತ್, ಎರಡು ಲಾರಿ ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಮಹೀಂದ್ರಾ ಪಿಕ್ ಅಪ್, ಆರ್‍ಎಕ್ಸ್-100 ಬೈಕ್, ಒಂದು ಹೋಂಡಾ ಡಿಯೋ ಬೈಕ್‍ನ್ನು ವಶಕ್ಕೆ ಪಡೆಯಲಾಗಿದೆ.

    ಶಿವಮೊಗ್ಗ ಜಿಲ್ಲೆಯಲ್ಲಿ ಮೂರು, ಹಾಸನ ಜಿಲ್ಲೆಯಲ್ಲಿ ಎರಡು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ತುಮಕೂರು, ರಾಮನಗರ, ಬೆಂಗಳೂರು ಜಿಲ್ಲೆಗಳಲ್ಲಿ ತಲಾ ಒಂದು ವಾಹನ ಕಳವು ಮಾಡಿದ್ದರು ಎಂದು ಆರ್.ಶ್ರೀನಿವಾಸ್ ಗೌಡ ಮಾಹಿತಿ ನೀಡಿದರು.

    ಕೊರೊನಾ- ಫೈನಾನ್ಸ್ ಕಾರಣ ನೀಡಿ ಮಾರಾಟ:
    ಕೊರೊನಾ ಹಿನ್ನೆಲೆ ಫೈನಾನ್ಸ್ ಪೂರ್ಣ ಪಾವತಿಯಾಗಿಲ್ಲ ಎಂದು ಕಾರಣ ನೀಡಿ ಕದ್ದ ವಾಹನವನ್ನು ಮಾರಾಟ ಮಾಡುತ್ತಿದ್ದ ಖದೀಮರು, ಸುಮಾರು 15ಕ್ಕೂ ಹೆಚ್ಚು ವಾಹನವನ್ನು ಮಾರಾಟಮಾಡಿದ್ದಾರೆ. ಇವರ ಹಿಂದೆ ವಾಹನ ಕದಿಯುವ ಹಾಗೂ ಮಾರಾಟಮಾಡುವ ದೊಡ್ಡ ಜಾಲವೇ ಸಕ್ರೀಯವಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

    ಆಸೆಗೆ ಬಿದ್ದು ಕೈಸುಟ್ಟುಕೊಂಡರು:
    ಖದೀಮರು ಗ್ರಾಹಕರನ್ನು ಪುಸಲಾಯಿಸಿ 10 ಲಕ್ಷದ ವಾಹನವನ್ನು ಕೇವಲ 2-3 ಲಕ್ಷಕ್ಕೆ ನೀಡುತ್ತಿದ್ದರು. ಇಷ್ಟು ಕಡಿಮೆ ಮೊತ್ತಕ್ಕೆ ವಾಹನ ಸಿಗಲಿದೆ ಹಾಗೂ ವಾಹನದ ಮೂಲ ದಾಖಲಾತಿಗಳನ್ನು ಕೊರೊನಾ ಹಾವಳಿ ಮುಗಿದ ಬಳಿಕ ಹಾಗೂ ಫೈನಾನ್ಸ್ ಪೂರ್ಣ ಪಾವತಿ ಬಳಿಕ ಸಿಗಲಿದೆ ಎಂದು ನಂಬಿಸಿ ಎಷ್ಟೋ ಮಂದಿಗೆ ಉಂಡೇನಾಮ ಹಾಕಿದ್ದಾರೆ. ಇದೀಗ ವಾಹನಗಳನ್ನು ಖರೀದಿಸಿದ ಗ್ರಾಹಕರಿಂದ ವಶಕ್ಕೆ ಪಡೆದಿದ್ದು, ಕದ್ದ ಮಾಲು ಖರೀದಿಸಿದವರಿಗೆ ಕೈಸುಟ್ಟಿಕೊಂಡಂತಾಗಿದೆ.

    ಅಶೋಕ್ ಲೈಲ್ಯಾಂಡ್ ವಾಹನಗಳೇ ಟಾರ್ಗೆಟ್:
    ಪೊಲೀಸರು ಇದೀಗ ವಶಕ್ಕೆ ಪಡೆದ ಬಹುತೇಕ ವಾಹನಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ಸೇರಿದ್ದಾಗಿದೆ. ಇವುಗಳ ಲಾಕ್ ಮುರಿದು ಕದಿಯುತಿದ್ದ ಖದೀಮರು, ಈ ಕಂಪನಿ ವಾಹನ ಮಾರಾಟಕ್ಕೆ ಸೂಕ್ತವಾಗಿರುವುದರಿಂದ ಇದನ್ನೇ ಗುರುತಿಸಿ ಕೃತ್ಯ ನಡೆಸುತ್ತಿದ್ದರು ಎಂದು ತನಿಖೆ ವೇಳೆ ಬಹಿರಂಗಗೊಂಡಿದೆ.

  • ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

    ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

    ಶಿವಮೊಗ್ಗ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

    ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಉಡುಪಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಆಗುಂಬೆ ಘಾಟಿಯ ರಸ್ತೆಯು ಕಿರಿದಾದ ಪರಿಣಾಮ ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿತ್ತು. ಭಾರೀ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆಯ ಬದಿಯ ಮಣ್ಣು ಕುಸಿತ ಉಂಟಾಗಿ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಸಾಕಷ್ಟು ಅಪಘಾತಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅಕ್ಟೋಬರ್ 15 ರವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.

    ಇದೀಗ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಮಗ ಸಂಚಾರಕ್ಕಾಗಿ ಈಗ ಭಾರೀ ವಾಹನಗಳಿಗೆ ಅವಕಾಶ ನೀಡಲಾಗಿದೆ. ಈ ಮಾರ್ಗದಲ್ಲಿ ಅಧಿಕ ಮಳೆ ಪ್ರಮಾಣ ಇರುವ ದಿನಗಳಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು. ಮಳೆ ಕಡಿಮೆ ಇರುವ ದಿನಗಳಲ್ಲಿ ಎಲ್ಲ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

    ಪರ್ಯಾಯ ಮಾರ್ಗಗಳು
    * ಶಿವಮೊಗ್ಗ- ತೀರ್ಥಹಳ್ಳಿ- ಆಗುಂಬೆ – ಉಡುಪಿ.
    * ಶಿವಮೊಗ್ಗ-ತೀರ್ಥಹಳ್ಳಿ-ಉಂಟೂರುಕಟ್ಟೆ ಕೈಮರ – ಮಾಸ್ತಿಕಟ್ಟೆ- ಹುಲಿಕಲ್ – ಕುಂದಾಪುರ
    * ಶಿವಮೊಗ್ಗ – ತೀರ್ಥಹಳ್ಳಿ – ಕಮ್ಮರಡಿ – ಶೃಂಗೇರಿ- ಕೆರೆಕಟ್ಟೆ- ಕಾರ್ಕಳ

  • ನಾಳೆಯಿಂದ ಅನ್‍ಲಾಕ್ – ಗಂಟು, ಮೂಟೆ ಹೊತ್ತು ಕುಟುಂಬ ಸಮೇತ ಬೆಂಗಳೂರಿನತ್ತ ಜನ

    ನಾಳೆಯಿಂದ ಅನ್‍ಲಾಕ್ – ಗಂಟು, ಮೂಟೆ ಹೊತ್ತು ಕುಟುಂಬ ಸಮೇತ ಬೆಂಗಳೂರಿನತ್ತ ಜನ

    ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಲಾಕ್‍ಡೌನ್ ತೆರವು ಹಿನ್ನೆಲೆ ರಾಜ್ಯದ ಗಡಿ ಅತ್ತಿಬೆಲೆ ಮೂಲಕ ಸಾಲು-ಸಾಲು ವಾಹನಗಳ ಮೂಲಕ ಜನರು ಬೆಂಗಳೂರಿನತ್ತ ಬರುತ್ತಿದ್ದಾರೆ.

    ನಾಳೆಯಿಂದ ಅನ್‍ಲಾಕ್ ಆಗಿರುವುದರಿಂದ ವಲಸೆ ಹೋಗಿದ್ದ ಕಾರ್ಮಿಕರು ಕರ್ನಾಟಕ- ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ವಾಹನಗಳ ಮೂಲಕ ಮತ್ತೆ ಮರಳಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಜನರು ಕಾರುಗಳಲ್ಲಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ತಮ್ಮ ಕುಟುಂಬ ಸಮೇತರಾಗಿ ಲಗೇಜುಗಳೊಂದಿಗೆ ಒಂದುವರೆ ತಿಂಗಳ ಬಳಿಕ ತಮ್ಮ ನಿವಾಸಗಳಿಗೆ ಆಗಮಿಸುತ್ತಿದ್ದಾರೆ.

    ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಪೇದೆಯೊಬ್ಬರು ಹಾಗೂ ನಾಲ್ಕು ಜನ ಹೋಂ ಗಾರ್ಡ್‍ಗಳು, ಶಿಕ್ಷಕರು ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಇದನ್ನು ಹೊರತುಪಡಿಸಿ ಚೆಕ್ ಪೋಸ್ಟ್ ಗೆ ನೇಮಕ ಮಾಡಿದ್ದ ರೆವಿನ್ಯೂ ಇಲಾಖೆ ಅಧಿಕಾರಿಗಳು ಸೇರಿದಂತೆ ಕೆಲ ಇಲಾಖೆಯ ಅಧಿಕಾರಿಗಳು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ, ಡ್ಯೂಟಿ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ.  ಇದನ್ನೂ ಓದಿ: ನಾಳೆಯಿಂದ ದೆಹಲಿಯಲ್ಲಿ ಅನ್‍ಲಾಕ್ – ಹೋಟೆಲ್‍ಗಳಲ್ಲಿ ಶೇ.50, ಮಾಲ್ ಫುಲ್ ಓಪನ್

    ಬೆಳಗ್ಗೆಯಿಂದ ಸಂಜೆಯವರೆಗೂ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಸರಿಯಾದ ಮಾರ್ಗಸೂಚಿ ನೀಡದ ಹಾಗೂ ಬೆರಳೆಣಿಕೆಯಷ್ಟು ಸಿಬ್ಬಂದಿಗಳ ನಿಯೋಜನೆಯಿಂದ ಯಾವುದೇ ಕಟ್ಟುನಿಟ್ಟಿನ ತಪಾಸಣೆ ಮಾಡದೇ ಇರುವುದು ಕಂಡು ಬಂತು. ಒಟ್ಟಿನಲ್ಲಿ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬೆಂಗಳೂರು ತೊರೆದಿದ್ದ ವಲಸೆ ಕಾರ್ಮಿಕರು ಮತ್ತೆ ಬೆಂಗಳೂರಿನತ್ತ ಮರಳಿ ಮುಖ ಮಾಡಿದ್ದು, ಮತ್ತಷ್ಟು ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮೊದಲ ಪ್ರಯತ್ನ- ಹುಬ್ಬಳ್ಳಿಯಲ್ಲಿ 2 ರೂ.ಗೆ ಸಿಗುತ್ತೆ ಸರ್ಜಿಕಲ್ ಮಾಸ್ಕ್!

  • ಲಾಕ್‍ಡೌನ್ ವೇಳೆ ಪೊಲೀಸರು ವಶಕ್ಕೆ ಪಡೆದ ವಾಹನಗಳಿಗೆ ಬಿಡುಗಡೆ ಭಾಗ್ಯ

    ಲಾಕ್‍ಡೌನ್ ವೇಳೆ ಪೊಲೀಸರು ವಶಕ್ಕೆ ಪಡೆದ ವಾಹನಗಳಿಗೆ ಬಿಡುಗಡೆ ಭಾಗ್ಯ

    – ರಿಲೀಸ್‍ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

    ಬೆಂಗಳೂರು: ಲಾಕ್‍ಡೌನ್ ವೇಳೆ ಸೀಜ್ ಆಗಿದ್ದ ವಾಹನ ರಿಲೀಸ್ ಮಾಡಲು ಪೊಲೀಸರಿಗೆ ಅಧಿಕಾರವನ್ನು ನೀಡಿ ಹೈಕೋರ್ಟ್ ಆದೇಶ ನೀಡಿದೆ. ಪೊಲೀಸರೇ ದಂಡ ಕಟ್ಟಿಸಿಕೊಂಡು ಬಿಡಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

    ವಾಹನ ಬಿಡುಗಡೆಗಾಗಿ ನ್ಯಾಯಾಲಯಕ್ಕೆ ಓಡಾಡುವ ಅಗತ್ಯವಿಲ್ಲ. ಈ ರೀತಿ ಅಲೆದಾಡುವ ಬದಲು ಪೊಲೀಸರೇ ಗಾಡಿಯನ್ನು ರಿಲೀಸ್ ಮಾಡಬಹುದು. ಪೊಲೀಸರಿಗೇ ವಾಹನ ರಿಲೀಸ್ ಅಧಿಕಾರ ನೀಡಲಾಗಿದೆ. ಲಾಕ್‍ಡೌನ್ ಸಂದರ್ಭದಲ್ಲಿ ರೂಲ್ಸ್ ಬ್ರೇಕ್ ಮಾಡಿ ರಸ್ತೆಗಿಳಿದಿದ್ದ ಲಕ್ಷಾಂತರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು ಈ ಹಿನ್ನೆಲೆಯಲ್ಲಿ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

    ಸದ್ಯದ ಲಾಕ್‍ಡೌನ್ ಮುಗಿಯೋಕೆ ಇನ್ನು 6 ದಿನಗಳಷ್ಟೇ ಇದೆ. ಆದರೆ ಬೆಂಗಳೂರಲ್ಲಿ ಜೂನ್ 14ಕ್ಕೂ ಮೊದಲೇ ಅನ್‍ಲಾಕ್ ಆಗೋ ಎಲ್ಲಾ ಸಾಧ್ಯತೆ ಇದೆ. ತಜ್ಞರು ಹೇಳಿರುವಂತೆ ಬೆಂಗಳೂರು ಅನ್‍ಲಾಕ್‍ಗೆ ಪಾಸಿಟಿವಿಟಿ ರೇಟ್ ಶೇ.3 ಇಳಿಯಬೇಕು. ಇದೀಗ ಸೋಂಕು ಪ್ರಮಾಣ ಶೇಕಡಾ 3.82ಕ್ಕೆ ಇಳಿದಿದೆ. ಕಳೆದ 4 ದಿನಗಳಿಂದ ಬೆಂಗಳೂರಿನಲ್ಲಿ ಸೋಂಕು ಪ್ರಮಾಣ ಶೇಕಡಾ 5ರೊಳಗೆ ಇದೆ. ಪಾಲಿಕೆಯ 8 ವಲಯಗಳಲ್ಲೂ 300ಕ್ಕಿಂತ ಕಡಿಮೆ ಕೇಸ್ ದಾಖಲಾಗಿದೆ. ಇನ್ನು ಅನ್‍ಲಾಕ್ ಬಗ್ಗೆ ಖುದ್ದು ಬಿಬಿಎಂಪಿ ಮುಖ್ಯ ಆಯುಕ್ತರೇ ಸುಳಿವು ಕೊಟ್ಟಿದ್ದಾರೆ.

    ಸೋಂಕು ಪ್ರಮಾಣ ಶೇಕಡಾ 5ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರಿಸಬಹುದು ಎನ್ನಲಾಗುತ್ತಿದೆ. ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಪಾಸಿಟಿವಿಟಿ ರೇಟ್ ಶೇಕಡಾ 1ಕ್ಕಿಂತ ಕಡಿಮೆ ಇದೆ. ಈ ಮೂಲಕ ಬೀದರ್ ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಡಿಸಿಎಂ ಅಶ್ವಥ್ ನಾರಾಯಣ ಕೂಡ ಅನ್‍ಲಾಕ್ ಸುಳಿವು ಕೊಟ್ಟಿದ್ದಾರೆ.

    ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಹತೋಟಿಗೆ ಬಂದಿದೆ. ಇನ್ನು 2-3 ದಿನದಲ್ಲಿ ಸಿಎಂ ತೀರ್ಮಾನ ಕೈಗೊಳ್ತಾರೆ ಎಂದು ತಿಳಿಸಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡ, ಜೂನ್ 14ರ ನಂತರ ಲಾಕ್ ಸಡಿಲಿಕೆ ಆಗಲಿದೆ. ಹಂತಹಂತವಾಗಿ ಬಸ್‍ಗಳನ್ನು ಕಾರ್ಯಾರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

  • ಮಂಗಳೂರಿನಲ್ಲಿ ಲಾಕ್‍ಡೌನ್ ಮುಗಿದೇ ಹೋಯ್ತು ಅನ್ನೋ ಮಟ್ಟಿಗೆ ವಾಹನ ದಟ್ಟಣೆ

    ಮಂಗಳೂರಿನಲ್ಲಿ ಲಾಕ್‍ಡೌನ್ ಮುಗಿದೇ ಹೋಯ್ತು ಅನ್ನೋ ಮಟ್ಟಿಗೆ ವಾಹನ ದಟ್ಟಣೆ

    ಮಂಗಳೂರು: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್‍ಡೌನ್ ಇದ್ದರೂ ನಗರದ ಜನ ಮಾತ್ರ ಲಾಕ್ ಡೌನ್ ಮುಗಿದೇ ಹೋಯ್ತು ಅಂದುಕೊಂಡಂತಿದೆ. ಇಂದು ಬೆಳಗ್ಗೆ 10 ಗಂಟೆಯವರೆಗಿನ ದೃಶ್ಯ ನೋಡಿದರೆ ಲಾಕ್‍ಡೌನ್ ಇದೆಯೇ ಎಂಬ ಸಂದೇಹ ಮೂಡುತ್ತದೆ. ಅಷ್ಟರ ಮಟ್ಟಿಗೆ ವಾಹನ ದಟ್ಟಣೆ ಸಂಭವಿಸಿದೆ.

    ಬೆಳಗ್ಗೆ 6 ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಟ್ಟಿದ್ದನ್ನೇ ಲಾಭವನ್ನಾಗಿಸಿದ ಜನ ಬೇಕಾಬಿಟ್ಟಿ ರಸ್ತೆಯಲ್ಲಿ ಓಡಾಟ ನಡೆಸಿದರು. ಎಲ್ಲ ಪ್ರಮುಖ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಮಾಮೂಲಿ ದಿನಕ್ಕಿಂತಲೂ ಹೆಚ್ಚು ವಾಹನಗಳು ರಸ್ತೆಯಲಿದ್ದವು.

    ಟ್ರಾಫಿಕ್ ಪೊಲೀಸರಿಗೆ ವಾಹನಗಳನ್ನು ಕಂಟ್ರೋಲ್ ಮಾಡೋದೇ ಸವಾಲಾಗಿತ್ತು. ಬೆಳಗ್ಗೆ 10 ಗಂಟೆಯವರೆಗೂ ಪೊಲೀಸರು ರಸ್ತೆಗಿಳಿದು ತಪಾಸಣೆ ಮಾಡುವುದಿಲ್ಲ ಎಂದು ಗೊತ್ತಿದ್ದೇ ಜನ ಈ ರೀತಿ ತಮ್ಮ ಇತರೆ ಕೆಲಸಗಳಿಗೂ ಬೇಕಾ ಬಿಟ್ಟಿ ಓಡಾಟ ನಡೆಸಿದರು. ಇದನ್ನೆಲ್ಲ ಗಮನಿಸುತ್ತಿರುವ ಪೊಲೀಸ್ ಇಲಾಖೆ ಮಾತ್ರ ಬೆಳಗ್ಗೆ 10 ಗಂಟೆಯವರೆಗೆ ಕಣ್ಣು ಮುಚ್ಚಿ ಕುಳಿತಂತಿತ್ತು.

  • ಟೋಲ್‍ಗಳಲ್ಲಿ 10 ಸೆಕೆಂಡ್ ಮಾತ್ರ ವೇಟಿಂಗ್

    ಟೋಲ್‍ಗಳಲ್ಲಿ 10 ಸೆಕೆಂಡ್ ಮಾತ್ರ ವೇಟಿಂಗ್

    – 100 ಮೀ.ಗೂ ಹೆಚ್ಚು ಸರದಿ ನಿಂತರೆ ಶುಲ್ಕ ಪಾವತಿಸುವಂತಿಲ್ಲ
    – ಫಾಸ್ಟ್ ಟ್ಯಾಗ್ ಅಳವಡಿಸಿರುವ ವಾಹನಗಳಿಗೆ ಮಾತ್ರ ಅನ್ವಯ

    ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನದಟ್ಟಣೆಯ ಸಮಯ ಸೇರಿ ಎಲ್ಲ ಸಮಯದಲ್ಲೂ ಪ್ರತಿ ವಾಹನದ ಟೋಲ್ ಶುಲ್ಕ ಪಾವತಿ ಸಮಯ 10 ಸೆಕೆಂಡ್ ಮೀರದಿರುವುದನ್ನು ಖಾತರಿಪಡಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‍ಎಚ್‍ಎಐ) ತಿಳಿಸಿದೆ.

    ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿರುವ ಪ್ರಾಧಿಕಾರ, ಟೋಲ್ ಶುಲ್ಕ ಪಾವತಿ ಸಮಯ 10 ಸೆಕೆಂಡ್ ಮೀರುವಂತಿಲ್ಲ. ಅಲ್ಲದೆ ಟೋಲ್ ಪ್ಲಾಜಾಗಳಲ್ಲಿ 100 ಮೀಟರ್ ಗಿಂತ ಹೆಚ್ಚು ವಾಹನಗಳ ಸರದಿ ನಿಲ್ಲಲು ಅವಕಾಶವಿಲ್ಲ. ಒಂದು ವೇಳೆ ಯಾವುದಾದರು ಕಾರಣಕ್ಕೆ ಕಾಯುತ್ತಿರುವ ವಾಹನಗಳ ಸರದಿ 100 ಮೀಟರ್ ಗಿಂತ ಹೆಚ್ಚಾದರೆ ಟೋಲ್ ಬೂತ್ ಗಳಲ್ಲಿ ವಾಹನಗಳ ಸರದಿ 100 ಮೀಟರ್ ಒಳಗಿನ ವಾಹನಗಳು ಟೋಲ್ ಪಾವತಿಸದೆ ಸಂಚರಿಸಬಹುದು.

    ಟೋಲ್ ಬೂತ್ ನಲ್ಲಿ ಪ್ರತಿಯೊಂದು ಟೋಲ್ ಮಾರ್ಗದಲ್ಲಿ 100 ಮೀಟರ್ ದೂರದಲ್ಲಿ ಹಳದಿ ಪಟ್ಟಿ ಹಾಕಲಾಗುತ್ತದೆ. ಒಂದು ವೇಳೆ 100 ಮೀಟರ್‍ಗೂ ಅಧಿಕ ಸರದಿ ನಿಂತರೆ ಈ ಹಳದಿ ಪಟ್ಟಿ ಒಳಗಿನ ವಾಹನಗಳು ಟೋಲ್ ಪಾವತಿಸದೇ ಉಚಿತವಾಗಿ ಸಂಚರಿಸಬಹುದಾಗಿದೆ. ಇದು ಫಾಸ್ಟ್ಯಾಗ್ ಅಳವಡಿಸಿಕೊಂಡ ವಾಹನಗಳಿಗೆ ಮಾತ್ರ ಅನ್ವಯವಾಗಲಿದೆ. ಫಾಸ್ಟ್ಯಾಗ್ ಅಳವಡಿಸದ ವಾಹನಗಳಿಗೆ ವೇಟಿಂಗ್ ಪಿರಿಯಡ್ ನಿಯಮ ಅನ್ವಯವಾಗುವುದಿಲ್ಲ ಎಂದು ಎನ್‍ಎಚ್‍ಎಐ ಸ್ಪಷ್ಟಪಡಿಸಿದೆ.

    2021ರ ಫೆಬ್ರವರಿ ಮಧ್ಯದಿಂದೀಚೆಗೆ ಟೋಲ್ ಪ್ಲಾಜಾಗಳನ್ನು ಎನ್‍ಎಚ್‍ಎಐ ಶೇ.100ರಷ್ಟು ನಗದುರಹಿತ ವಹಿವಾಟನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಎನ್‍ಎಚ್‍ಎಐ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿರುವ ಪ್ರಮಾಣ ಶೇ.96ರಷ್ಟು ಮತ್ತು ಹಲವು ಪ್ಲಾಜಾಗಳಲ್ಲಿ ಶೇ.99ರಷ್ಟಿದೆ. ದೇಶದಲ್ಲಿ ಬೆಳೆಯುತ್ತಿರುವ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ (ಇಟಿಸಿ) ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ಹೊಸ ವಿನ್ಯಾಸ ಟೋಲ್ ಫ್ಲಾಜಾಗಳನ್ನು ಹೊಂದಲು ಹಾಗೂ ಮುಂದಿನ ಹತ್ತು ವರ್ಷಗಳ ವಾಹನಗಳ ಅಂದಾಜು ಮಾಡಿ ಟೋಲ್ ಪ್ಲಾಜಾಗಳನ್ನು ನಿರ್ಮಿಸಿ ಪರಿಣಾಮಕಾರಿ ಟೋಲ್ ಸಂಗ್ರಹ ವ್ಯವಸ್ಥೆಗೆ ಒತ್ತು ನೀಡಲಾಗಿದೆ.

  • ಅನಾವಶ್ಯಕ ಓಡಾಟ, ಕಡ್ಡಾಯವಾಗಿ ವಾಹನ ಪರಿಶೀಲಿಸಿ- ಕಮಲ್ ಪಂಥ್ ಸೂಚನೆ

    ಅನಾವಶ್ಯಕ ಓಡಾಟ, ಕಡ್ಡಾಯವಾಗಿ ವಾಹನ ಪರಿಶೀಲಿಸಿ- ಕಮಲ್ ಪಂಥ್ ಸೂಚನೆ

    ಬೆಂಗಳೂರು: ಲಾಕ್‍ಡೌನ್ ವೇಳೆಯೂ ಅನಾವಶ್ಯಕ ವಾಹನಗಳ ಓಡಾಡ ಹೆಚ್ಚಳವಾಗಿದ್ದು, ಕಡ್ಡಾಯವಾಗಿ ಎಲ್ಲ ವಾಹನಗಳ ಪರಿಶೀಲನೆ ನಡೆಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

    ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ ಸಭೆ ನಡೆಸಿದ್ದು, ವಾಹನಗಳ ಅನಾವಶ್ಯಕ ಓಡಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಬೆಳಗ್ಗೆ 10 ಗಂಟೆ ನಂತರವೂ ವಾಹನಗಳ ಓಡಾಡ ಹೆಚ್ಚಾಗುತ್ತಿದೆ. ಪೊಲೀಸರು ಪರಿಶೀಲನೆ ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಕಡ್ಡಾಯವಾಗಿ ವಾಹನಗಳನ್ನು ತಡೆದು ಪರಿಶೀಲನೆ ಮಾಡಬೇಕು. ಅನಾವಶ್ಯಕವಾಗಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡಬೇಕು ಎಂದು ಆದೇಶಿಸಿದ್ದಾರೆ.

    ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು, ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೌಖಿಕವಾಗಿ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿದ್ದರೂ ಕಳೆದ ಕೆಲ ದಿನಗಳಿಂದ ಬೆಳಗ್ಗೆ 10 ಗಂಟೆ ನಂತರವೂ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ಪೊಲೀಸರು ತಪಾಸಣೆ ನಡೆಸುತ್ತಿಲ್ಲ ಎಂಬ ದೂರು ಸಹ ಕೇಳಿ ಬಂದಿವೆ. ಹೀಗಾಗಿ ಕಮಲ್ ಪಂತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

  • ಕೋವಿಡ್ ನಿಯಮ ಉಲ್ಲಂಘನೆ- 14 ವಾಹನಗಳ ವಿರುದ್ಧ ಕೇಸ್, 4 ವಾಹನಗಳು ವಶಕ್ಕೆ

    ಕೋವಿಡ್ ನಿಯಮ ಉಲ್ಲಂಘನೆ- 14 ವಾಹನಗಳ ವಿರುದ್ಧ ಕೇಸ್, 4 ವಾಹನಗಳು ವಶಕ್ಕೆ

    ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ಶ್ರಮಪಡುತ್ತಿದೆ. ಇಂದು ಧಾರವಾಡ (ಪೂರ್ವ) ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಸಮರ ಸಾರಿದ್ದಾರೆ.

    ಸರ್ಕಾರದ ಕೋವಿಡ್-19ರ ಮಾರ್ಗಸೂಚಿ ಅನ್ವಯ ಬಸ್, ಮೋಟಾರು ಕ್ಯಾಬ್, ಟೆಂಪೋ ಟ್ರಾವೆಲರ್ ವಾಹನಗಳಿಗೆ ಅನುಮತಿ ನೀಡಿರುವ ಆಸನಕ್ಕಿಂತ ಹೆಚ್ವಿನ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವಾಹನಗಳಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ವಾಹನಗಳು ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದುಕೊಂಡು ಹೋಗಬೇಕಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಶೇ.50ಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಕಾರ್ಯಾಚರಣೆಯಲ್ಲಿ ಕೆಎಸ್‍ಆರ್‍ಟಿಸಿಯ 2, ಬೇಂದ್ರೆ ನಗರ ಸಾರಿಗೆಯ 3, ಬಿಆರ್‍ಟಿಎಸ್ ಕಂಪನಿಯ 2, ಪಿಎಸ್‍ಎ 1 ಬಸ್ ಹಾಗೂ 3 ಮೋಟಾರು ಕ್ಯಾಬ್‍ಗಳು ಹಾಗೂ 3 ಮ್ಯಾಕ್ಸಿಕ್ಯಾಬ್ ಸೇರಿ ಒಟ್ಟು 14 ವಾಹನಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಂದು ಬೇಂದ್ರೆ ನಗರ ಸಾರಿಗೆಯ ಬಸ್ ಹಾಗೂ 3 ಮ್ಯಾಕ್ಸಿಕ್ಯಾಬ್ ಸೇರಿದಂತೆ ಒಟ್ಟು 4 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

  • DL, RC, ವಾಹನ ಪರ್ಮಿಟ್‍ಗಳ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

    DL, RC, ವಾಹನ ಪರ್ಮಿಟ್‍ಗಳ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

    ನವದೆಹಲಿ: ಕೊರೊನಾ ಹಿನ್ನೆಲೆ ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಶನ್ ಸರ್ಟಿಫಿಕೇಟ್ ಹಾಗೂ ವಾಹನ ಪರ್ಮಿಟ್‍ಗಳ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯ ಸರ್ಕಾರಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ನಿರ್ದೇಶನ ನೀಡಿದ್ದು, ವಾಹನಗಳ ಫಿಟ್ನೆಸ್, ಪರ್ಮಿಟ್, ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಶನ್ ಹಾಗೂ ಇತರೆ ದಾಖಲೆಗಳ ಅವಧಿಯನ್ನು ಕೊರೊನಾ ಕಾರಣದಿಂದಾಗಿ ವಿಸ್ತರಿಸಲಾಗಿದೆ. ಫೆಬ್ರವರಿ 1, 2020 ರಿಂದ ಮಾರ್ಚ್ 21, 2021ರೊಳಗೆ ಅವಧಿ ಮುಗಿಯುವ ದಾಖಲೆಗಳಿಗೆ ಇದು ಅನ್ವಯವಾಗಲಿದೆ.

    ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಸಿದವರಿಗೆ ಕೊರೊನಾ ಕಾರಣದಿಂದಾಗಿ ದಾಖಲೆಗಳನ್ನು ನವೀಕರಿಸುವಲ್ಲಿ ವಿಳಂಬವಾಗಿದ್ದು, ಇವುಗಳಿಗೂ ಫೆಬ್ರವರಿ 1ಕ್ಕೆ ಮುಕ್ತಾಯಗೊಳ್ಳುವ ದಾಖಲೆಗಳ ಅವಧಿಯನ್ನು ಜೂನ್ 30ರ ವರೆಗೆ ಮಾನ್ಯವೆಂದು ಪರಿಗಣಿಸಬಹದು ಎಂದು ತಿಳಿಸಲಾಗಿದೆ.

    ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರು, ವಾಹನ ಸವಾರರು, ಇತರ ಸಂಸ್ಥೆಗಳಿಗೆ ದಾಖಲೆಗಳ ಕುರಿತು ಕಿರುಕುಳ, ತೊಂದರೆ ನಿಡದೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಸಲಹಾ ಪತ್ರವನ್ನು ಜಾರಿಗೆ ತರಬೇಕೆಂದು ಸಚಿವಾಲಯ ಮನವಿ ಮಾಡಿದೆ.

  • ಕಸದ ವಾಹನ ಚಲಾಯಿಸಿದ ರೇಣುಕಾಚಾರ್ಯ

    ಕಸದ ವಾಹನ ಚಲಾಯಿಸಿದ ರೇಣುಕಾಚಾರ್ಯ

    ದಾವಣಗೆರೆ: ಕಸದ ಗಾಡಿ ಚಲಾಯಿಸುವ ಮೂಲಕ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಹನಕ್ಕೆ ಚಾಲನೆ ನೀಡಿದರು.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದಲ್ಲಿ ಹೊಸ ಕಸದ ಗಾಡಿಗೆ ಚಾಲನೆ ನೀಡಿದ್ದು, ಇದೇ ವೇಳೆ ಕಸದ ಆಟೋವನ್ನು ಚಲಾಯಿಸಿದ್ದಾರೆ. ಇದೇ ವೇಳೆ ‘ನಮ್ಮ ನಡಿಗೆ ತ್ಯಾಜ್ಯ ಮುಕ್ತದ ಕಡೆಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಾಸಕರು ವಾಹನ ಚಾಲನೆ ಮಾಡಿದ್ದಕ್ಕೆ ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ನೆರೆದಿದ್ದ ಜನತೆ ಕೇಕೆ, ಹಾಕಿ ಶಿಳ್ಳೆ ಹೊಡೆದು ಖುಷಿ ಪಟ್ಟರು.

    ಹೊಸದಾಗಿ ಖರೀದಿಸಿದ್ದ ಕಸ ಸಂಗ್ರಹಿಸುವ ಆಟೋ ಚಲಾಯಿಸುವ ಮೂಲಕ ವಾಹನಗಳಿಗೆ ಚಾಲನೆ ನೀಡಿದರು. ನಂತರ ತ್ಯಾಜ್ಯ ವಿಲೇವಾರಿ ಘಟಕವನ್ನು ಸಹ ಲೋಕಾರ್ಪಣೆಗೊಳಿಸಿ, ವೀಕ್ಷಿಸಿದರು. ಇದೇ ವೇಳೆ ತ್ಯಾಜ್ಯ ವಿಲೇವಾರಿ ಘಟಕದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುರು.