Tag: Venkatesh Prasad

  • ಸಂಪತ್ತಿನ ಮರು ಹಂಚಿಕೆ: ಆರ್‌ಆರ್‌, ಕೆಕೆಆರ್‌ನಿಂದ 4 ಅಂಕ ತೆಗೆದು ಉಳಿದ ತಂಡಗಳಿಗೆ ಹಂಚಿದಂತೆ – ವೆಂಕಟೇಶ್‌ ಪ್ರಸಾದ್‌

    ಸಂಪತ್ತಿನ ಮರು ಹಂಚಿಕೆ: ಆರ್‌ಆರ್‌, ಕೆಕೆಆರ್‌ನಿಂದ 4 ಅಂಕ ತೆಗೆದು ಉಳಿದ ತಂಡಗಳಿಗೆ ಹಂಚಿದಂತೆ – ವೆಂಕಟೇಶ್‌ ಪ್ರಸಾದ್‌

    ಬೆಂಗಳೂರು: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ (Congress Manifesto) ಘೋಷಣೆ ಮಾಡಿದ ಸಂಪತ್ತಿನ ಮರು ಹಂಚಿಕೆಯನ್ನು (Wealth Redistribution) ಟೀಂ ಇಂಡಿಯಾದ (Team India) ಮಾಜಿ ವೇಗದ ಬೌಲರ್‌ ವೆಂಕಟೇಶ್‌ ಪ್ರಸಾದ್‌ (Venkatesh Prasad) ಐಪಿಎಲ್‌ ಅಂಕಪಟ್ಟಿಗೆ ಹೋಲಿಸಿ ವ್ಯಂಗ್ಯವಾಡಿದ್ದಾರೆ.

    ಶ್ರೀಮಂತರ ಸಂಪತ್ತನ್ನು ಬಡವರಿಗೆ (Poor) ಮರುಹಂಚಿಕೆ ಮಾಡುವುದಾಗಿ ರಾಜಕೀಯ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಬಡವರನ್ನು ನಿಜವಾಗಿಯೂ ಮೇಲಕ್ಕೆ ಎತ್ತಬೇಕು. ಆದರೆ ಈ ಚಿಂತನೆಯ ಪ್ರಕ್ರಿಯೆಯು ತುಂಬಾ ಕರುಣಾಜನಕವಾಗಿದೆ. ನಾವು ರಾಜಸ್ಥಾನ ರಾಯಲ್ಸ್‌ನಿಂದ 4 ಅಂಕ, ಕೋಲ್ಕತ್ತಾ ನೈಟ್‌ ರೈಡರ್ಸ್‌, ಸನ್‌ ರೈಸರ್ಸಸ್‌ ಹೈದಾಬಾದ್‌ನಿಂದ 4 ಅಂಕಗಳನ್ನ ತೆಗೆದು ಕೆಳಗಿನ 3 ತಂಡಗಳಿಗೆ ಮರು-ಹಂಚಿಕೆ ಮಾಡಿದರೆ ಅವರು ಪ್ಲೇ ಆಫ್‌ಗೆ ಬರಬಹುದು ಎಂದು ಟ್ವೀಟ್‌ ಮಾಡಿ ಕಾಲೆಳೆದಿದ್ದಾರೆ.  ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದ ಬಿಜೆಪಿ!

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳಿರುವವರಿಗೆ ಮರುಹಂಚಿಕೆ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆರೋಪಿಸಿದ ಒಂದು ದಿನದ ನಂತರ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲ ಧರ್ಮದ ತಾಯಂದಿರು ಗಂಡ-ಮಕ್ಕಳನ್ನ ಕಳೆದುಕೊಳ್ತಾರೆ: ಯತೀಂದ್ರ

    ಏಪ್ರಿಲ್ 6 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ದೇಶದಲ್ಲಿನ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಿದೆ ಎಂದು ಹೇಳಿದ ನಂತರ ಪ್ರಧಾನಿಯವರ ಈ ಹೇಳಿಕೆಯು ಹೊರಬಿದ್ದಿದೆ.

     

    ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರಿಗೆ ಎಷ್ಟು ಜನರು ಸೇರಿದ್ದಾರೆ ಎಂಬುದನ್ನು ನಿರ್ಧರಿಸಲು ನಾವು ಮೊದಲು ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸುತ್ತೇವೆ. ನಂತರ ನಾವು ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸುತ್ತೇವೆ. ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ಸಮೀಕ್ಷೆಯ ನಂತರ ಜನರಿಗೆ ಸರಿಯಾದ ಪಾಲು ನೀಡುವುದನ್ನು ಕಾಂಗ್ರೆಸ್ ಖಚಿತಪಡಿಸುತ್ತದೆ ಎಂದು ರಾಹುಲ್‌ ಗಾಂಧಿ (Rahul Gandhi) ಹೈದರಾಬಾದ್‌ನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ತಿಳಿಸಿದ್ದರು.

     

  • ಇದು ಇಡೀ ಭಾರತದ ಶ್ರೇಷ್ಠ ಕ್ಷಣ – ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಆಹ್ವಾನ ಪಡೆದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ

    ಇದು ಇಡೀ ಭಾರತದ ಶ್ರೇಷ್ಠ ಕ್ಷಣ – ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಆಹ್ವಾನ ಪಡೆದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ

    ಅಯೋಧ್ಯೆ: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಸಿಂಗಾರಗೊಳ್ಳುತ್ತಿದೆ. ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಅಮಂತ್ರಣ ಪತ್ರಿಕೆ ಹಂಚಿಕೆ ಕಾರ್ಯ ಶುರುವಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಅವರಿಗೂ ಆಹ್ವಾನ ನೀಡಲಾಗಿದೆ. ಈ ಮೂಲಕ ಕ್ರೀಡಾಕ್ಷೇತ್ರದ ಗಮನವನ್ನೂ ಸೆಳೆಯಲಾಗಿದೆ. ಟೀಂ ಇಂಡಿಯಾದ ಉತ್ತಮ ಬೌಲರ್‌ಗಳ ಪೈಕಿ ವೆಂಕಟೇಶ್‌ ಪ್ರಸಾದ್‌ ಸಹ ಒಬ್ಬರು. ಭಾರತದ ಪರ ಆಡಿದ 33 ಟೆಸ್ಟ್‌ ಪಂದ್ಯಗಳಲ್ಲಿ 96 ವಿಕೆಟ್‌ ಹಾಗೂ 161 ಏಕದಿನ ಪಂದ್ಯಗಳಲ್ಲಿ 196 ವಿಕೆಟ್‌ ಪಡೆದು ಸಾಧನೆ ಮಾಡಿರುವುದಲ್ಲದೇ ಏಕದಿನ ವಿಶ್ವಕಪ್‌ ಟೂರ್ನಿಯ ಹಲವು ಪಂದ್ಯಗಳಲ್ಲಿ ದಾಖಲೆಗಳನ್ನ ಮಾಡಿದ್ದಾರೆ.

    ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಂದಿರ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮಗೆ ಆಹ್ವಾನ ಬಂದಿರುವುದಾಗಿ ಅವರು ತಿಳಿಸಿದ್ದಾರೆ. ಈ ವಿಷಯವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    ನನ್ನ ಜೀವಿತಾವಧಿಯಲ್ಲಿ ಶ್ರೀರಾಮಮಂದಿರದ ನಿರ್ಮಾಣವಾಗುವ ಭರವಸೆ ಮತ್ತು ಬಯಕೆ ಇತ್ತು. ಇದು ಎಂತಹ ಕ್ಷಣ. ಜನವರಿ 22ರಂದು ಶಂಕುಸ್ಥಾಪನೆ ಮಾತ್ರ ನಡೆಯುತ್ತಿಲ್ಲ. ಭಾರತದ ಶ್ರೇಷ್ಠ ಕ್ಷಣದಲ್ಲಿ ಪಾಲ್ಗೊಳ್ಳುವ ದೊಡ್ಡ ಅದೃಷ್ಟ ಮತ್ತು ಆಶೀರ್ವಾದ ನನಗೆ ಸಿಕ್ಕಿದೆ. ನನ್ನ ಜೀವಮಾನದಲ್ಲಿಯೂ ಮಾತ್ರವಲ್ಲದೇ ಭಾರತದ ಅತ್ಯಂತ ವಿಶೇಷ ಕ್ಷಣವಿದು. ಆಹ್ವಾನಕ್ಕಾಗಿ ಧನ್ಯವಾದಗಳು. ಜೈ ಶ್ರೀ ರಾಮ್ ಎಂದು ವೆಂಕಟೇಶ್ ಪ್ರಸಾದ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    4000 ಸಂತರಿಗೆ ಆಹ್ವಾನ:
    ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್‌ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?

    ಪ್ರಾಣ ತ್ಯಾಗ ಮಾಡಿದ ಕುಟುಂಬಗಳಿಗೆ ಆಹ್ವಾನ:
    ರಾಮ ಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮಭಕ್ತನ ಕುಟುಂಬದ ಸದಸ್ಯರು, ಕೈಗಾರಿಕಾ ಲೋಕದ ಮುಖ್ಯಸ್ಥರು, ತಿರುಪತಿ, ವೈಷ್ಣೋದೇವಿ, ಕಾಶಿ ವಿಶ್ವನಾಥ ದೇಗುಲ ಪ್ರಮುಖರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. 25 ಆರ್‌ಎಸ್‌ಎಸ್ ಕಾರ್ಯಕರ್ತರು, 100 ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಸಿಆರ್‌ಪಿಎಫ್ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ:  ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

    ಟಾಟಾ, ಅಂಬಾನಿ, ಅದಾನಿಗೂ ಆಹ್ವಾನ:
    ಲಾರ್ಸೆನ್ ಟೂಬ್ರೊ ಮುಖ್ಯಸ್ಥರ ಜೊತೆ, ರತನ್ ಟಾಟಾ ಅವರ ಉತ್ತರಾಧಿಕಾರಿ ಚಂದ್ರಶೇಖರನ್, ಅಂಬಾನಿ ಮತ್ತು ಅದಾನಿಗೂ ಆಹ್ವಾನ.

    ಸಿನಿಮಾ, ಕ್ರೀಡೆಯ ಗಣ್ಯರು
    ತಮಿಳು ಚಲನಚಿತ್ರ ನಟ ರಜನಿಕಾಂತ್, ಬ್ಯಾಡ್ಮಿಂಟನ್ ಆಟಗಾರ ಗೋಪಿಚಂದ್, ಗಾಯಕ ಗುರುದಾಸ್ ಮನ್, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮಹಾಭಾರತದಲ್ಲಿ ಕೃಷ್ಣನ ಪಾತ್ರ ನಿರ್ವಹಿಸಿದ ನಿತೀಶ್ ಭಾರದ್ವಾಜ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿಯನ್ನು ಆಹ್ವಾನಿಸಿದ್ದಾರೆ.

  • ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿಯಿಂದ ರಾಮ ಮಂದಿರಕ್ಕೆ ನಿಧಿ ಸಮರ್ಪಣೆ

    ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿಯಿಂದ ರಾಮ ಮಂದಿರಕ್ಕೆ ನಿಧಿ ಸಮರ್ಪಣೆ

    ಬೆಂಗಳೂರು: ಭಾರತದ ಖ್ಯಾತ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಿ ನಿಧಿ ಅರ್ಪಣೆ ಮಾಡಿದ್ದಾರೆ.

     

    ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ನಿಧಿ ಸಂಗ್ರಹಿಸುವ ಅಭಿಯಾನ ದೇಶದ್ಯಾಂತ ನಡೆಯುತ್ತಿದೆ. ಹೀಗಾಗಿ ಖ್ಯಾತ ನಟಿ ಮತ್ತು ವಕೀಲರಾದ ಮಾಳವಿಕಾ ಅವಿನಾಶ್ ಅವರು ಭಾರತ ಮಾಜಿ ಆಟಗಾರರಾದ ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿ, ವಿಜಯ್ ಭಾರದ್ವಾಜ್ ಹಾಗೂ ರಣಜಿ ಆಟಗಾರ ಅಖಿಲ್ ಅವರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಿದರು.

    ನಿಧಿ ನೀಡಿದ ಬಳಿಕ ಮಾತನಾಡಿದ ವೆಂಕಟೇಶ್ ಪ್ರಸಾದ್, ತುಂಬಾ ಖುಷಿಯಾಗುತ್ತಿದೆ ನಾನು ಈ ಅಭಿಯಾನಕ್ಕೆ ಕೈ ಜೋಡಿಸುತ್ತೇನೆ, ರಾಮ ಮಂದಿರದ ನಿರ್ಮಾಣ ದೇಶದ ನಿರ್ಮಾಣ ಎನ್ನುವ ಮೂಲಕ ಸಂತಸ ಹಂಚಿಕೊಂಡರು.

     

    ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶದ ಮೂಲೆ ಮೂಲೆಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಹಲವು ಸ್ಟಾರ್ ನಟ-ನಟಿಯರು ಮತ್ತು ಸೆಲೆಬ್ರಿಟಿಗಳು ರಾಮ ಮಂದಿರಕ್ಕೆ ನಿಧಿ ಅರ್ಪಣೆ ಮಾಡಿದ್ದಾರೆ. ರಾಮಮಂದಿರ ನಿರ್ಮಾಣದ ನಕ್ಷೆ ಈಗಾಗಲೇ ನಿರ್ಮಾಣವಾಗಿದ್ದ, ವಿಶ್ವದ ಮೂರನೇ ಅತೀ ದೊಡ್ಡ ಹಿಂದೂ ದೇಗುಲವಾಗಿ ಗುರುತಿಸಿಕೊಳ್ಳಲಿದೆ.

     

  • ನಾಗೇಂದ್ರ ಸಹ ಮುಂದಿನ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆ: ರಾಮುಲು

    ನಾಗೇಂದ್ರ ಸಹ ಮುಂದಿನ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆ: ರಾಮುಲು

    ಬಳ್ಳಾರಿ: ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ. ಅವರ ಸಹೋದರ ಪಕ್ಷಕ್ಕೆ ಬಂದ ಮೇಲೆ ಮುಂದೆ ನಾಗೇಂದ್ರ ಸಹ ಮರಳಿ ಬಿಜೆಪಿ ಬರಲಿದ್ದಾರೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಶ್ರೀರಾಮುಲು ಹೇಳಿದ್ದಾರೆ.

    ಬಳ್ಳಾರಿಯಲ್ಲಿಂದು ವೆಂಕಟೇಶ್ ಪ್ರಸಾದಗೆ ಬಿಜೆಪಿಯ ಶಾಲು ಹೊಂದಿಸಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಶಾಸಕ ಶ್ರೀರಾಮುಲು, ಶಾಸಕ ನಾಗೇಂದ್ರ ಬಿಜೆಪಿ ಸೇರ್ಪಡೆಯಾಗಲು ಕೆಲವೂ ಕಾನೂನು ತೊಡಕುಗಳಿವೆ. ಅವುಗಳು ಬಗೆಹರಿದ ಮೇಲೆ ನಾಗೇಂದ್ರ ಸಹ ಬಿಜೆಪಿ ಬರುವ ವಿಶ್ವಾಸವಿದೆ. ನಾಗೇಂದ್ರ ಬಿಎಸ್ ಯಡಿಯೂರಪ್ಪರ ಜೊತೆ ಚರ್ಚೆ ನಡೆಸಿದ್ದಾರೆ ಎಂದರು.

    ಮೋದಿ ಒಬ್ಬರೇ ಚೌಕಿದಾರರಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರು ಸಹ ಚೌಕಿದಾರರಾಗಿದ್ದಾರೆ. ರಾಹುಲ್ ಗಾಂಧಿ ಸೋಮವಾರ ಚೋರ್ ಚೌಕಿದಾರ ಅಂದಿದ್ದು ಸರಿಯಲ್ಲ. ಈ ಬಾರಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸುವೆ. ನಾವು ಮೋದಿ ವರ್ಚಸ್ಸಿನ ಮೇಲೆಯೇ ಈ ಬಾರಿಯೂ ಚುನಾವಣೆಯನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕ್ಷಾಂಕಿಯಾಗಿದ್ದ ವೆಂಕಟೇಶ್ ಪ್ರಸಾದ್, ಈ ಬಾರಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ ಸಹೋದರ ವೆಂಕಟೇಶ್ ಪ್ರಸಾದ್, ಬಿಜೆಪಿ ಸೇರ್ಪಡೆಗೆ ಶಾಸಕ ನಾಗೇಂದ್ರ ಬೆಂಬಲ ಸಹ ಇದೆ. ಶಾಸಕ ನಾಗೇಂದ್ರ ಬಹಿರಂಗವಾಗಿ ಬಿಜೆಪಿ ಪರ ಪ್ರಚಾರ ಮಾಡದಿದ್ದರೂ ಹಿಂದಿನಿಂದ ಬಿಜೆಪಿಯ ಪರ ಕೆಲಸ ಮಾಡುವುದಂತೂ ಖಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‍ಗೆ ಬಹುದೊಡ್ಡ ಆಘಾತ ಎನ್ನುವ ಮಾತುಗಳು ಜಿಲ್ಲೆಯ ರಾಜಕೀಯದಲ್ಲಿ ಕೇಳಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಜಂಪ್!

    ಕೈ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಜಂಪ್!

    ಬಳ್ಳಾರಿ: ಬಳ್ಳಾರಿ ಲೊಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

    ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಶಾಸಕ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕ್ಷಾಂಕಿಯಾಗಿದ್ದ ವೆಂಕಟೇಶ್ ಪ್ರಸಾದ್, ಈ ಬಾರಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ.

    ಅಲ್ಲದೆ ಸಹೋದರ ವೆಂಕಟೇಶ್ ಪ್ರಸಾದ್, ಬಿಜೆಪಿ ಸೇರ್ಪಡೆಗೆ ಶಾಸಕ ನಾಗೇಂದ್ರ ಬೆಂಬಲ ಸಹ ಇದೆ. ಶಾಸಕ ನಾಗೇಂದ್ರ ಬಹಿರಂಗವಾಗಿ ಬಿಜೆಪಿ ಪರ ಪ್ರಚಾರ ಮಾಡದಿದ್ದರೂ ಕ್ಲೋಸ್ ಡೋರ್ ಮೂಲಕ ಬಿಜೆಪಿಯ ಪರ ಕೆಲಸ ಮಾಡುವುದಂತೂ ಖಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‍ಗೆ ಬಹುದೊಡ್ಡ ಆಘಾತವಾಗಿದೆ.

    ಬಂಡಾಯ ಶಾಸಕರಲ್ಲಿ ಗುರುತಿಸಿಕೊಂಡಿದ್ದ ನಾಗೇಂದ್ರ ವಿರುದ್ಧ ಪಕ್ಷದ ವಿಪ್ ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಸ್ಪೀಕರ್ ಗೆ ದೂರು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಕಮಲ ಹಿಡಿಯಲು ಹಿಂದೇಟು ಹಾಕಿದ್ದು, ಪರ್ಯಾಯವಾಗಿ ಸೋದರನನ್ನು ಬಿಜೆಪಿ ಸೇರಿಸುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಂಡಾಯ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದೂವರೆಗೂ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲಾವಕಾಶ ತೆಗೆದುಕೊಂಡು ಶಾಸಕ ನಾಗೇಂದ್ರ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಸಾದ್@49: ಪಾಕ್ ವಿರುದ್ಧದ ಬೆಂಗ್ಳೂರು ಪಂದ್ಯದ ವಿಡಿಯೋ ನೋಡಿ

    ಪ್ರಸಾದ್@49: ಪಾಕ್ ವಿರುದ್ಧದ ಬೆಂಗ್ಳೂರು ಪಂದ್ಯದ ವಿಡಿಯೋ ನೋಡಿ

    ಬೆಂಗಳೂರು: ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಕರ್ನಾಟಕದ ಹೆಮ್ಮೆಯ ವೆಂಕಟೇಶ್ ಪ್ರಸಾದ್ ಇಂದು 49ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

    ಭಾರತದ ಬಲಗೈ ಮಧ್ಯಮ ವೇಗದ ಬೌಲರ್ ಗಳಲ್ಲಿ ಒಬ್ಬರಾಗಿರುವ ವೆಂಕಟೇಶ್ ಪ್ರಸಾದ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಸಿಸಿಐ ಪಾಕಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆದ ವಿಲ್ಸ್ ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯದ ವಿಡಿಯೋವನ್ನು ಅಪ್ಲೋಡ್ ಮಾಡಿ ಶುಭಾಶಯ ತಿಳಿಸಿದೆ.

    ವಿಡಿಯೋದಲ್ಲಿ ಏನಿದೆ?
    288 ರನ್‍ಗಳ ಗುರಿ ಪಡೆದ ಪಾಕಿಸ್ತಾನ 14.4 ಓವರ್ ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 109 ರನ್ ಗಳಿಸಿ ಸುಭದ್ರ ಸ್ಥಿತಿಯಲ್ಲಿತ್ತು. ವೆಂಕಟೇಶ್ ಪ್ರಸಾದ್ ಎಸೆದ 14.5ನೇ ಓವರ್ ನ 5ನೇ ಎಸೆತವನ್ನು ನಾಯಕ ಅಮೀರ್ ಸೊಹೈಲ್ ಬೌಂಡರಿಗೆ ಅಟ್ಟಿದ್ದರು. ಈ ವೇಳೆ ಪ್ರಸಾದ್ ಅವರನ್ನು ನೋಡಿ ಸೊಹೈಲ್, ಬಾಲ್ ಅಲ್ಲಿ ಹೋಯ್ತು ಎಂದು ಬ್ಯಾಟ್ ಎತ್ತಿ ಕಿಚಾಯಿಸಿದ್ದಾರೆ. ಇದರಿಂದ ಸಿಟ್ಟಾದ ವೆಂಕಟೇಶ್ ಮರು ಎಸೆತದಲ್ಲಿ 55 ರನ್ ಗಳಿಸಿದ್ದ ಸೊಹೈಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ತನ್ನನ್ನು ಕೆಣಕಿದ್ದಕ್ಕೆ ಸೊಹೈಲ್ ಮುಖವನ್ನು ನೋಡಿ ಪ್ರಸಾದ್ ಸಂಭ್ರಮಿಸಿದ್ದರು. ಈ ಪಂದ್ಯದಲ್ಲಿ ವೆಂಕಟೇಶ್ ಪ್ರಸಾದ್ 3 ವಿಕೆಟ್ ಪಡೆದು ಮಿಂಚಿದ್ದರು.

    ಈ ಪಂದ್ಯದಲ್ಲಿ ಭಾರತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿದ್ದರೆ ಪಾಕಿಸ್ತಾನ 49 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತ್ತು. ನಿಧಾನಗತಿಯ ಓವರ್ ಮಾಡಿದ್ದಕ್ಕೆ ಪಾಕಿಸ್ತಾನ ಬ್ಯಾಟಿಂಗ್ ವೇಳೆ 1 ಓವರ್ ಕಡಿತಗೊಳಿಸಲಾಗಿತ್ತು. ಭಾರತ ಕೊನೆಯ ನಾಲ್ಕು ಓವರ್ ಗಳಲ್ಲಿ 57 ರನ್ ಗಳಿಸಿದ್ದರೆ, ವಾಕರ್ ಯೂನಿಸ್ ಎಸೆದ ಓವರ್ ನಲ್ಲಿ 22 ರನ್ ಬಂದಿತ್ತು. 93 ರನ್ (115 ಎಸೆತ, 9 ಬೌಂಡರಿ) ಹೊಡೆದ ಸಿದ್ದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಜಡೇಜಾ 45 ರನ್(25 ಎಸೆತ, 4 ಬೌಂಡರಿ, 2 ಸಿಕ್ಸರ್) ಚಚ್ಚಿದ್ದರು.

    ಭಾರತದ ಪರ 33 ಟೆಸ್ಟ್ ಪಂದ್ಯಗಳ 58 ಇನ್ನಿಂಗ್ಸ್ ನಲ್ಲಿ 96 ವಿಕೆಟ್ ಪಡೆದಿರುವ ವೆಂಕಟೇಶ್ ಪ್ರಸಾದ್ 161 ಏಕದಿನ ಪಂದ್ಯಗಳಲ್ಲಿ 196 ವಿಕೆಟ್ ಪಡೆದಿದ್ದಾರೆ. 2005ರಲ್ಲಿ ನಿವೃತ್ತಿ ಘೋಷಿಸಿದ ಬಳಿಕ ಐಪಿಎಲ್‍ನಲ್ಲಿ ಆರ್ ಸಿಬಿ ತಂಡದ ಕೋಚ್ ಹಾಗೂ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕವಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಭಾರತದ ಕಿರಿಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ವೆಂಕಟೇಶ್ ಪ್ರಸಾದ್ ರಾಜೀನಾಮೆ

    ಭಾರತದ ಕಿರಿಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ವೆಂಕಟೇಶ್ ಪ್ರಸಾದ್ ರಾಜೀನಾಮೆ

    ಬೆಂಗಳೂರು: ಭಾರತ ಕ್ರಿಕೆಟ್ ತಂಡದ 90 ರ ದಶಕದ ಪ್ರಖ್ಯಾತ ಬೌಲರ್ ವೆಂಕಟೇಶ್ ಪ್ರಸಾದ್, ಕಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    2001 ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ವೆಂಕಟೇಶ್ ಪ್ರಸಾದ್ ಈಗ ಆಯ್ಕೆ ಸಮಿತಿಗೆ ರಾಜೀನಾಮೆ ನೀಡುವ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ. ಈ ವರ್ಷದ ಅಂಡರ್-19 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇವರ ಪಾತ್ರ ಅಪಾರವಾಗಿತ್ತು. ಕಳೆದ 30 ತಿಂಗಳಿನಿಂದ ಬಿಸಿಸಿಐನ ಕಿರಿಯರ ಆಯ್ಕೆ ಸಮಿತಿಯಲ್ಲಿದ್ದರು.

    ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ ಖನ್ನಾ ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ನಾನು ವೆಂಕಟೇಶ್ ಪ್ರಸಾದ್ ಅವರ ಜೊತೆ ಮಾತನಾಡಿ ತಮ್ಮ ನಿರ್ಧಾರವನ್ನ ಮತ್ತೊಮ್ಮೆ ಮರುಪರಿಶೀಲಿಸಲು ಹೇಳಿದೆ. ಆದರೆ ವೆಂಕಟೇಶ್ ಅವರು ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು. ಬಿಸಿಸಿಐ ವೆಂಕಟೇಶ್ ಅವರ ಸಾಧನೆಗೆ ಹೆಮ್ಮೆ ಪಟ್ಟಿದ್ದು, ಅವರ ಮುಂದಿನ ಜೀವನಕ್ಕೆ ಶುಭಕೋರುವೆವು” ಎಂದು ಹೇಳಿದರು.

    ಮೂಲಗಳ ಪ್ರಕಾರ ವೆಂಕಟೇಶ್ ಪ್ರಸಾದ್ ಅವರು ಬಿಸಿಸಿಐ ಜೊತೆಗಿನ ಶೀತಲ ಸಮರದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

    ನಿಯಮದ ಪ್ರಕಾರ ಬಿಸಿಸಿಐ ಹುದ್ದೆಯಲ್ಲಿ ಇರುವವರು ಯಾವುದೇ ಖಾಸಗಿ ಮತ್ತು ಬೇರೆ ಕೋಚಿಂಗ್ ಸಂಸ್ಥೆಗಳ ಜೊತೆ ಒಡನಾಟ ಬೆಳೆಸಿಕೊಳ್ಳುವಂತಿಲ್ಲ. ಈ ನಿಯಮವು ರಾಷ್ಟ್ರ ಮತ್ತು ರಾಜ್ಯ ಫ್ರಾಂಚೈಸ್ ಆಧಾರಿತ ಲೀಗ್ ಗಳಿಗೆ ಅನ್ವಯವಾಗುತ್ತದೆ. ಆದರೆ ಐಪಿಎಲ್ ವೇಳೆ ವೆಂಕಟೇಶ್ ತಂಡವೊಂದರ ಜೊತೆ ಕೋಚಿಂಗ್ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕೋಚಿಂಗ್‍ಗೆ ಈ ನಿಯಮವು ಅಡ್ಡಿ ಮಾಡುವ ಕಾರಣದಿಂದ ತಮ್ಮ ಹುದ್ದೆಗೆ ರಾಜಿನಾಮೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

    ಮಾಧ್ಯಮದವರು ಈ ವಿಚಾರವಾಗಿ ವೆಂಕಟೇಶ್ ಅವರಿಗೆ ಪ್ರಶ್ನಿಸಿದಾಗ ಉತ್ತರ ನೀಡಲು ನಿರಾಕರಿಸಿದ್ದಾರೆ. ವೆಂಕಟೇಶ್ ಅವರು ಐಪಿಎಲ್ ತಂಡವೊಂದಕ್ಕೆ ಕೋಚ್ ಆಗುತ್ತಾರೆಂಬ ವದಂತಿ ಕೆಲ ದಿನಗಳಿಂದ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ.