Tag: Venkatrao gowda

  • ಯಶ್, ದರ್ಶನ್ ದುಡಿಯುವ ಬಾಡಿಗೆ ಜೋಡಿ ಎತ್ತುಗಳು- ವೆಂಕಟರಾವ್ ನಾಡಗೌಡ

    ಯಶ್, ದರ್ಶನ್ ದುಡಿಯುವ ಬಾಡಿಗೆ ಜೋಡಿ ಎತ್ತುಗಳು- ವೆಂಕಟರಾವ್ ನಾಡಗೌಡ

    ರಾಯಚೂರು: ನಟರಾದ ಯಶ್ ಮತ್ತು ದರ್ಶನ್ ದುಡಿಯುವ ಬಾಡಿಗೆ ಜೋಡಿ ಎತ್ತುಗಳು. ಮಂಡ್ಯ ಜನರ ಕಷ್ಟ-ಸುಖಗಳಿಗೆ ಸಿನಿಮಾದವರು ಭಾಗಿಯಾಗಿಲ್ಲ ಎಂದು ಪಶು ಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

    ನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾತನಾಡಿದ ನಾಡಗೌಡ, ಮಂಡ್ಯದ ಕನಕನಮರಡಿಯಲ್ಲಿ ಬಸ್ ಕಾಲುವೆಗೆ ಬಿದ್ದಾಗ ಸಿನಿಮಾದವರು ಎಲ್ಲಿ ಹೋಗಿದ್ದರು. ಇಂದು ಚುನಾವಣೆಗೆ ಬಂದಿದ್ದಾರೆ ಅಂದ್ರೆ ಅವರು ಬಾಡಿಗೆ ಎತ್ತುಗಳು ಎಂದು ಗರಂ ಆದ್ರು.

    ಇದು ತಮಿಳುನಾಡು ಆಂಧ್ರಪ್ರದೇಶ ಅಲ್ಲ. ಇಲ್ಲಿ ಸಿನಿಮಾ ಹೆಸರಲ್ಲಿ ಚುನಾವಣೆ ಗೆಲ್ಲೋಕೆ ಆಗಲ್ಲ. ಸಿನಿಮಾ ನಟರನ್ನು ನೋಡಲು ಜನ ಬರುತ್ತಾರೆ. ಆದ್ರೆ ಅವರೆಲ್ಲ ವೋಟು ಹಾಕಲ್ಲ. ಸುಮಲತಾ ಸಿನಿಮಾ ಬಿಟ್ಟು ರಾಜಕೀಯಕ್ಕೆ ಹೋದಾಗ ಗೊತ್ತಾಗುತ್ತದೆ. ಸಿನಿಮಾ ನೋಡಲು ಬಂದವರೆಲ್ಲ ವೋಟು ಹಾಕಲ್ಲ. ಮಾಧ್ಯಮದವರು ಬಿಂಬಿಸಿದಂತೆ ಮಂಡ್ಯ ಚುನಾವಣೆ ಯಾವುದೇ ರೀತಿಯ ಟಫ್ ಇಲ್ಲ ಎಂದು ಹೇಳಿದ್ರು.

    ಬಿಜೆಪಿಯನ್ನ ದೂರ ಇಡುವ ಸಲುವಾಗಿ ಮೈತ್ರಿ ಸರ್ಕಾರ ನಡೆಸುತ್ತಿದ್ದೇವೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಬಿವಿ ನಾಯಕ್ ಗೆಲುವು ಖಚಿತ. ಜೆಡಿಎಸ್‍ನ ಸಂಪೂರ್ಣ ಬೆಂಬಲ ಕಾಂಗ್ರೆಸ್ ಗೆ ಇದೆ. ಬಿವಿ ನಾಯಕ್ ಗೆಲುವಿಗೆ ನಮ್ಮ ಬೆಂಬಲ ಇದೆ. ಕಾಂಗ್ರೆಸ್, ಜೆಡಿಎಸ್ ಮತ ನಮಗೆ ಬರುತ್ತವೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಈ ಹಿಂದೆ ಜಾತ್ಯಾತೀತ ಮತಗಳು ಹಂಚಿ ಹೋಗುತ್ತಿದ್ದವು. ಆದ್ರೆ ಈಗ ಅದಕ್ಕೆ ಅವಕಾಶ ಇಲ್ಲ. ಮುಂಚೆ ಕಾಂಗ್ರೆಸ್, ಜೆಡಿಎಸ್ ಬೇರೆ ಬೇರೆಯಾಗಿ ಸ್ಪರ್ಧೆ ಮಾಡುತ್ತಿದ್ದವು. ಹೀಗಾಗಿ ಮತಗಳು ವಿಭಜನೆ ಆಗುತ್ತಿದ್ದವು. ಈಗ ಹಾಗಲ್ಲ, ನಮ್ಮ ಪಕ್ಷದ (ಜೆಡಿಎಸ್) ಕೆಲ ಮುಖಂಡರಲ್ಲಿ ಅಸಮಾಧಾನ ಇದೆ. ಅದೆಲ್ಲ ಸರಿ ಹೋಗುತ್ತದೆ ಎಂದು ಹೇಳಿದ್ರು.

    ಇದೇ ವೇಳೆ ಸಂಸದ ಬಿ.ವಿ.ನಾಯಕ್ ಮಾತನಾಡಿ, ನಾನು ಪಾಕಿಸ್ತಾನ ಪರ ಯಾವುದೇ ಹೇಳಿಕೆ ನೀಡಿಲ್ಲ. ಭಾರತಕ್ಕೆ ಪಾಕಿಸ್ತಾನ ಯಾವುದಕ್ಕೂ ಸಮವಲ್ಲ. ಸಣ್ಣ ದೇಶದ ಮೇಲೆ ಮೋದಿ ದಾಳಿ ಮಾಡಿದ್ದಾರೆ ಎಂದು ಹೇಳಿದ್ದೇನೆ ಅದನ್ನ ತಿರುಚಲಾಗಿದೆ ಅಂತ ಬಿ.ವಿ.ನಾಯಕ್ ಹೇಳಿದರು.

  • ಮುಂದೆ ಸಮ್ಮಿಶ್ರ ಸರ್ಕಾರಗಳೇ ಹೆಚ್ಚಾಗಲಿವೆ, ಹೊಂದಿಕೊಂಡು ಹೋಗುವುದನ್ನು ಕಲಿಯಬೇಕು: ಸಚಿವ ವೆಂಕಟರಾವ್ ಗೌಡ

    ಮುಂದೆ ಸಮ್ಮಿಶ್ರ ಸರ್ಕಾರಗಳೇ ಹೆಚ್ಚಾಗಲಿವೆ, ಹೊಂದಿಕೊಂಡು ಹೋಗುವುದನ್ನು ಕಲಿಯಬೇಕು: ಸಚಿವ ವೆಂಕಟರಾವ್ ಗೌಡ

    ರಾಯಚೂರು: ಸಮ್ಮಿಶ್ರ ಸರ್ಕಾರ ಇದೇ ಮೊದಲಲ್ಲಾ, ಮುಂದೆ ಸಮ್ಮಿಶ್ರ ಸರ್ಕಾರಗಳೇ ಹೆಚ್ಚಾಗುತ್ತವೆ. ಇದಕ್ಕೆ ಹೊಂದಿಕೊಂಡು ಹೋಗುವುದನ್ನ ಕಲಿಯಬೇಕು. ನಾವು ಐದು ವರ್ಷಗಳನ್ನ ಪೂರೈಸುತ್ತವೆ. ಹೇಗೆ ಪೂರೈಸುತ್ತೀರಿ ಅಂತ ಸದ್ಯ ಕೇಳಬೇಡಿ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

    ಸಿದ್ದರಾಮಯ್ಯನವರು ಹಳೆ ಬಜೆಟ್ ಮುಂದುವರೆಸಬಹುದು ಎಂದಿದ್ದಾರೆ. ಆದ್ರೆ ಹೊಸ ಬಜೆಟ್ ಮಂಡಿಸಬಾರದು ಅಂತ ಹೇಳಿಲ್ಲ. ಜುಲೈ 5 ರಂದು ಬಜೆಟ್ ಮಂಡನೆಯಾಗುತ್ತದೆ. ಧರ್ಮಸ್ಥಳಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದರಿಂದ ಅವರ ನಾಯಕನನ್ನ ಭೇಟಿಯಾಗಲು ಕಾಂಗ್ರೆಸ್ ಶಾಸಕರು ಹೋಗಿದ್ದಾರೆ ಅಷ್ಟೇ ,ಅದರಲ್ಲಿ ಗೊಂದಲವೇನು ಇಲ್ಲಾ ಎಂದು ಸ್ಪಷ್ಟಪಡಿಸಿದರು.

    ಬೇರೆ ಇಲಾಖೆಗಳಿಗೆ ನಿಯೋಜನೆಗೊಂಡ ವೈದ್ಯರು ಕೂಡಲೇ ಮಾತೃ ಇಲಾಖೆಗೆ ಮರಳಬೇಕು. ವಾಪಸ್ಸಾಗದ ವೈದ್ಯರನ್ನ ಮನೆಗೆ ಕಳುಹಿಸಲಾಗುವುದು. ವೈದ್ಯರ ಪರವಾಗಿ ನಾನಾ ಕಡೆಯಿಂದ ಒತ್ತಡ ಬರುತ್ತಿದೆ. ಯಾವ ಒತ್ತಡಕ್ಕೂ ಮಣಿಯಲ್ಲ 54 ಜನ ವೈದ್ಯರು ಮರಳಲೇಬೇಕು ಎಂಬ ವಿಷಯ ಕುರಿತು ಮುಖ್ಯಮಂತ್ರಿಗಳಿಗೆ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ತಿಳಿಸಿದರು.

    ಗೋಹತ್ಯೆ ಕಾಯಿದೆ ಮೊದಲಿನಿಂದಲೂ ಜಾರಿಯಲ್ಲಿದ್ದು, ಗೊಂದಲ ಸೃಷ್ಠಿ ಮಾಡಬಾರದು. ಗೊಡ್ಡು ದನಗಳನ್ನ ಸಾಕುವುದು ರೈತರಿಗೂ ಕಷ್ಟವಾಗುವದರಿಂದ ಅನಿವಾರ್ಯವಾಗಿ ಕಟುಕರಿಗೆ ದನಗಳನ್ನ ಮಾರುತ್ತಿದ್ದಾರೆ. ಅಂತಹ ದನಗಳನ್ನ ಸಾಕಲು ಗೋ ಶಾಲೆಗಳ ಸ್ಥಾಪನೆಗೆ ಕ್ರಮಗೊಳ್ಳುತ್ತೇವೆ ಅಂತ ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.