Tag: Venkatrao Nadgowda

  • ಬಿಎಸ್‍ವೈಗೆ ಈಗ ಜ್ಞಾನೋದಯವಾಗಿದೆ, ಅದಕ್ಕೆ ಬರ ಪ್ರವಾಸ – ಸಚಿವ ನಾಡಗೌಡ

    ಬಿಎಸ್‍ವೈಗೆ ಈಗ ಜ್ಞಾನೋದಯವಾಗಿದೆ, ಅದಕ್ಕೆ ಬರ ಪ್ರವಾಸ – ಸಚಿವ ನಾಡಗೌಡ

    ರಾಯಚೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ಈಗ ಜ್ಞಾನೋದಯವಾಗಿದೆ. ಅದಕ್ಕೆ ರಾಜ್ಯದಲ್ಲಿ ಬರ ಪ್ರವಾಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ವ್ಯಂಗ್ಯವಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಒಂದು ವರ್ಷ ಸಿಎಂ ಆಗುವುದರಲ್ಲೆ ಯಡಿಯೂರಪ್ಪ ಕಾಲ ಕಳೆದರು. ಈಗ ಅವರಿಗೆ ಜ್ಞಾನೋದಯವಾಗಿದೆ. ಅದಕ್ಕೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುವ ಕಡೆ ಪ್ರವಾಸ ಮಾಡುತ್ತಿದ್ದಾರೆ. ಯಡಿಯೂರಪ್ಪರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. 15 ಸಾವಿರ ಕೋಟಿ ಕೇಂದ್ರದಿಂದ ಬಂದಿಲ್ಲ ಅನ್ನೋದು ಅವರಿಗೆ ಗೊತ್ತಿಲ್ವಾ? ಹಣ ಬಿಡುಗಡೆ ಮಾಡಲು ಆಗದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯಾ ಎಂದು ಪ್ರಶ್ನೆ ಮಾಡಿದರು.

    ಇದೇ ವೇಳೆ ರಾಯಚೂರು ವಿವಿ ಹಾಗೂ ಐಐಐಟಿ ಈ ವರ್ಷ ಆರಂಭವಾಗಲಿದೆ. ಐಐಐಟಿಗೆ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ ಬೇರೆಡೆ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ನಗರದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಐಐಐಟಿ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

    ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯದ ಬಗ್ಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ಮಾಡುವ ಗ್ರಾಮವನ್ನು ನಾಳೆ ಅಂತಿಮ ಮಾಡುತ್ತೇವೆ. ಮಾನ್ವಿ ತಾಲೂಕಿನ ಗ್ರಾಮವೊಂದರಲ್ಲಿ ಜೂನ್ 28 ರಂದು ಸಿಎಂ ವಾಸ್ತವ್ಯ ಮಾಡಲಿದ್ದಾರೆ ಎಂದು ಹೇಳಿದರು.

  • ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ: ವೆಂಕಟರಾವ್ ನಾಡಗೌಡ

    ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ: ವೆಂಕಟರಾವ್ ನಾಡಗೌಡ

    ಬೀದರ್: ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ. ಇಡೀ ದೇಶಕ್ಕೆ ಆಪರೇಷನ್ ಮಾಡೋಕೆ ಬರುತ್ತೆ ಅಂತ ತೋರಿಸಿದವರೇ ಅವರು ಎಂದು ಪಶು ಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪಶು ಇಲಾಖೆ ಸಭಾಂಗಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಆಪರೇಷನ್ ಮಾಡುವುದಕ್ಕೆ ಬರುತ್ತದೆ ಎಂದು ತೋರಿಸಿದ ವ್ಯಕ್ತಿ ಯಡಿಯೂರಪ್ಪ. ನಾನು ಶಾಸಕನಾಗಿದ್ದಾಗ ಆಪರೇಷನ್ ಕಮಲ ಮಾಡಿ, ರಾಜೀನಾಮೆ ಕೊಡಿಸಿ ಮಂತ್ರಿ ಮಾಡಿದರು. ಈಗ ಅವರಿಗೆ ಆಪರೇಷನ್ ಭಯ ಶುರುವಾಗಿದೆ. ಅವರು ಕೂಡ ಮುಖ್ಯಮಂತ್ರಿ ಆಗಬೇಕು ಎಂದು ಕನಸ್ಸು ಕಾಣುತ್ತಿದ್ದಾರೆ. ಈಗಾಗಲೇ ಒಂದು ದಿನ ಮುಖ್ಯಮಂತ್ರಿ ಆಗಿದ್ದು ಆಗಿದೆ. ಆಪರೇಷನ್ ಮಾಡೋದು ಅವರಿಗೆ ಹವ್ಯಾಸವಾಗಿದೆ ಎಂದು ಕಿಡಿಕಾರಿದರು.

    ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು ಬೆಂಕಿಯಲ್ಲಿ ಹೊಗೆ ಆಡೋದು ನೋಡಿದ್ದೇನೆ. ಆದರೆ ನೀವು ಬೂದಿಯಲ್ಲಿ ಹೊಗೆ ಹಾರಿಸುತ್ತಿದ್ದೀರಿ ಎಂದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರನ್ನು ಯಾರು ಮೂಲೆ ಗುಂಪು ಮಾಡಿಲ್ಲ. ಎಲ್ಲ ವಿಷಯವು ಅವರ ಬಳಿ ಚರ್ಚೆಯಾಗಿ ಕಾರ್ಯಕ್ಕೆ ಬರುತ್ತವೆ. ಸಿಎಂ ದಂಗೆ ಎನ್ನುವ ಪದವನ್ನು ಬೇರೆ ಅರ್ಥದಲ್ಲಿ ಬಳಸಿದ್ದಾರೆ ಎಂದು ವೆಂಕಟರಾವ್ ನಾಡಗೌಡ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv