ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ (Actress Ramya) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜೋಗಿ ನಿರ್ಮಾಪಕರಿಂದ ಮತ್ತೊಂದು ಹೊಸ ಸಾಹಸದ ಸಂಕಲ್ಪ
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ, ಪ್ರಜ್ವಲ್ ಅತ್ಯಾಚಾರ ಪ್ರಕರಣದ ಸಂಬಂಧ ಕೋರ್ಟ್ ನೀಡಿದ ತೀರ್ಪನ್ನು ಹಂಚಿಕೊಂಡಿದ್ದಾರೆ. ಜೊತೆಗೆ “ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.
ಸದ್ಯ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಿದೆ. ಇನ್ನೂ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ.ಇದನ್ನೂ ಓದಿ: ನಟಿ ಭಾವನಾ ರಾಮಣ್ಣ ಸೀಮಂತ ಶಾಸ್ತ್ರ
ಸತತ ಹತ್ತು ವರ್ಷಗಳಿಂದ ನಡೆಯುತ್ತಿದ್ದ ಬಾಲಿವುಡ್ ನಟಿ ಜಿಯಾ ಖಾನ್ (Zia Khan) ಸಾವಿನ ಪ್ರಕರಣದ ಮಹತ್ವದ ತೀರ್ಪು ಇಂದು ಪ್ರಕಟವಾಗಿದೆ. ಜಿಯಾ ಮತ್ತು ಸೂರಜ್ (Suraj Pancholi) ರಿಲೇಶನ್ ಶಿಪ್ ನಲ್ಲಿ ಇರುವಾಗ ನಟಿ ಜಿಯಾ ಖಾನ್ ಆತ್ಮಹತ್ಯೆಗೆ (Suicide) ಶರಣಾಗಿದ್ದರು. ಈ ಸಾವಿಗೆ ಸೂರಜ್ ಕಾರಣವೆಂದು ಜಿಯಾ ಮನೆಯವರು ಆರೋಪಿಸಿದ್ದರು. ಸಿಕ್ಕಿರುವ ಡೆತ್ ನೋಟ್ ಆಧರಿಸಿದ ಸೂರಜ್ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಸೂರಜ್ ನಿರಪರಾಧಿ ಎಂದು ಕೋರ್ಟ್ ತೀರ್ಪು (Verdict) ನೀಡಿದೆ.
ಏನಿದು ಜಿಯಾ ಖಾನ್ ಸಾವಿನ ಪ್ರಕರಣ?
ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.
ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.
ಜಿಯಾ ಖಾನ್ ತಾಯಿ ರಬಿಯಾ (Rabia) ತಮ್ಮ ವಿರುದ್ಧ ಮಾನಹಾನಿ ಮಾಡುವಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಸೂರಜ್ ಪಾಂಚೋಲಿ, ಜಿಯಾ ತಾಯಿಯ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು. ರಬಿಯಾ ನೀಡಿದ ದೂರಿನ ಮೇಲೆ ಸಿಬಿಐ ಅಧಿಕಾರಿಗಳು ಸೂರಜ್ ಮನೆಯ ಮೇಲೆ ದಾಳಿ ಮಾಡಿದರು. ನಂತರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮತ್ತೆ ಸಪ್ಲಿಮೆಂಟರಿ ಚಾರ್ಜ್ ಶೀಟ್ ದಾಖಲಿಸಿದ್ದರು.
ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಹಲವಾರು ಪ್ರಯತ್ನಗಳನ್ನು ಮಾಡಿದ್ದರು ರುಬಿಯಾ. ವಿಶೇಷ ತನಿಖಾ ದಳ ರಚಿಸುವಂತೆ ಕೋರ್ಟಿಗೆ ಮೊರೆ ಹೋದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದರು. ಕೇಸ್ ವಿಚಾರಣೆ ಬೇಗ ಮುಗಿಸುವಂತೆ ಮುಂಬೈ ಕೋರ್ಟಿಗೂ ಮನವಿ ಮಾಡಿಕೊಂಡಿದ್ದರು.
ಸೂರಜ್ ಪಾಂಚೋಲಿ ಕೂಡ ಈ ಪ್ರಕರಣದಲ್ಲಿ ಅಷ್ಟೇ ಹೋರಾಟ ಮಾಡಿದ್ದರು. ಆ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ವಾದಿಸುತ್ತಲೇ ಬಂದರು. ಸುದೀರ್ಘ ಹತ್ತು ವರ್ಷಗಳ ನಂತರ 2023 ಏಪ್ರಿಲ್ 20 ರಂದು ಅಂತಿವ ವಾದ- ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಮೂರ್ತಿಗಳಾದ ಎ.ಎಸ್. ಸಯ್ಯದ್ ಅವರು ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದೆ. ಸೂರಜ್ ಪಾಂಚೋಲಿ ಪರವಾಗಿ ಮಾನ್ಯ ನ್ಯಾಯಾಲಯ ತೀರ್ಪು ನೀಡಿದೆ.
ವಾರಣಾಸಿ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದಿಯೇ, ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ (Varanasi) ಜಿಲ್ಲಾ ನ್ಯಾಯಲಯ ಇಂದು ತೀರ್ಪು (Verdict) ನೀಡಲಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು. ಇದಕ್ಕೂ ಮುನ್ನ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲೆ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರಾ ಇದೆ ಎಂದು ಕೆಲವರು ವಾದಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ
ಈ ನಡುವೆ ಐವರು ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರ್ಟ್ ಮೇಟ್ಟಿಲೇರಿದ್ದರು. ಪ್ರಕರಣ ಗಂಭೀರವಾಗಿರುವ ಹಿನ್ನಲೆ ಸುಪ್ರೀಂಕೋರ್ಟ್ (Supreme Court) ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು. ಈ ಐದು ಮಂದಿ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಈ ಮಹಿಳೆಯರು ಸಲ್ಲಿರುವ ಅರ್ಜಿ ವಿಚಾರಣೆಗೆ ಯೋಗ್ಯವಾಗಿದಿಯೇ ಇಲ್ಲವೇ ಎನ್ನುವ ಬಗ್ಗೆ ಕೋರ್ಟ್ ಮೊದಲು ವಿಚಾರಣೆ ನಡೆಸಿತ್ತು, ಇಂದು ಈ ಬಗ್ಗೆ ಕೋರ್ಟ್ ಮೊದಲ ತೀರ್ಪು ನೀಡುತ್ತಿದೆ. ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿದ್ದಲ್ಲಿ ಮಾತ್ರ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ ಎನ್ನುವ ಅರ್ಜಿಯ ವಿಚಾರಣೆ ನಡೆಸಲಿದೆ.
ಈ ಹಿಂದೆ ಏನಾಗಿತ್ತು:
ಮುಸ್ಲಿಮರ ಪರ ವಾದ ಮಂಡಿಸಿದ ವಕೀಲರು 1991ರ ವಿಶೇಷ ಪೂಜಾ ಸ್ಥಳ ಕಾಯ್ದೆಯನ್ನು ಪ್ರಮುಖವಾಗಿ ವಿಚಾರಣೆ ವೇಳೆ ಉಲ್ಲೇಖಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ದೇಶದ ಯಾವುದೇ ಧಾರ್ಮಿಕ ಸ್ಥಳದಲ್ಲಿ ಸದ್ಯ ಚಾಲ್ತಿಯಲ್ಲಿ ಇರುವ ಯಾವುದೇ ಧರ್ಮದ ಆಚರಣೆಯ ಧಾರ್ಮಿಕ ಸ್ವರೂಪವನ್ನು ಬದಲಿಸುವಂತಿಲ್ಲ. 1947ರ ಆಗಸ್ಟ್ 15ರ ನಂತರ ಯಾವ ಧಾರ್ಮಿಕ ಸ್ಥಳದಲ್ಲಿ ಯಾವ ಧರ್ಮದ ಆಚರಣೆ ಇತ್ತೋ, ಅದೇ ಆಚರಣೆ ಮುಂದೆಯೂ ನಿರಂತರವಾಗಿ ಮುಂದುವರೆಯಬೇಕು. ಈ ಕಾಯಿದೆಯ ಅನ್ವಯ ಜ್ಞಾನವ್ಯಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಸಾಧ್ಯವಿಲ್ಲ. ಜ್ಞಾನವ್ಯಾಪಿ ಮಸೀದಿ 16-17 ಶತಮಾನದ ಪುರಾತನ ಧಾರ್ಮಿಕ ಪ್ರದೇಶವಾಗಿರುವ ಈ ಹಿನ್ನಲೆ ಈ ನಿಯಮ ಅನ್ವಯವಾಗಲಿದೆ. ಒಂದು ವೇಳೆ ಪೂಜೆಗೆ ಅವಕಾಶ ನೀಡಿದ್ದಲ್ಲಿ ದೇಶದಲ್ಲಿ ಇಂತಹ ಹತ್ತಾರು ವಿವಾದಾತ್ಮಕ ಪ್ರದೇಶಗಳಲ್ಲೂ ಪೂಜೆ ಅವಕಾಶ ಕೇಳುವ ಸಾಧ್ಯತೆಗಳಿರುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ವಝುಖಾನದಲ್ಲಿ ಪತ್ತೆಯಾಗಿರುವುದು ನೀರಿನ ಕಾರಂಜಿ ಮತ್ತು ಅಲ್ಲಿ ಯಾವುದೇ ಶೃಂಗಾರ ಗೌರಿ ಮೂರ್ತಿಗಳಿಲ್ಲ, ಅದು ಹಳೆಯ ವಾಸ್ತು ಶಿಲ್ಪ ಶೈಲಿಯಾಗಿದೆ ಎಂದು ವಾದ ಮಂಡಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್
ಸೂಕ್ಷ್ಮ ವಿಚಾರವಾಗಿರುವ ಜ್ಞಾನವಾಪಿ ಮಸೀದಿ ವಿಚಾರದಲ್ಲಿ ವಾರಣಾಸಿಯ ಜಿಲ್ಲಾ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟ ಮಾಡಲಿದೆ. ಈ ಕಾರಣಕ್ಕಾಗಿ ಇಡೀ ನಗರದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಿಶ್ರ ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯುಲ್ಲಿ ನಿಯೋಜನೆಯಾಗಿದೆ. ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
Live Tv
[brid partner=56869869 player=32851 video=960834 autoplay=true]
ನಟಿ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಲಯಾಳಂ ಸ್ಟಾರ್ ನಟ ದಿಲೀಪ್ ಪ್ರಕರಣದ ತೀರ್ಪು ಇಂದು ಮಧ್ಯಾಹ್ನ 1.45ಕ್ಕೆ ಪ್ರಕಟವಾಗಲಿದೆ. ನಟಿ ಮೇಲಿನ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು ದಿಲೀಪ್ ವಿರುದ್ಧ ಕೊಲೆ ಸಂಚು ಆರೋಪ ಹೊರಿಸಿದ್ದರು. ಇವತ್ತು ಈ ಪ್ರಕರಣದ ತೀರ್ಪು ಹೊರಡಿಸಲಿದೆ ಕೇರಳ ಹೈಕೋರ್ಟ್. ಇದನ್ನೂ ಓದಿ : ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್
ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಿಯಾದ್ ರೆಹಮಾನ್ ಇಂದು ತೀರ್ಪು ಪ್ರಕಟಿಸಲಿದ್ದು, ಕೇರಳ ಚಿತ್ರೋದ್ಯಮ ತೀರ್ಪಿಗಾಗಿ ಎದುರು ನೋಡುತ್ತಿದೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲೀಪ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪುನ್ನು ಕೂಡ ಕೇರಳ ಹೈಕೋರ್ಟ್ ಪ್ರಕಟಿಸಿತ್ತು. ಎರಡು ವಾರಗಳ ವಿಸ್ತ್ರತ ವಿಚಾರಣೆಯ ನಂತರ ನ್ಯಾಯಮೂರ್ತಿ ಗೋಪಿನಾಥ್ ನೇತೃತ್ವದ ಪೀಠ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ
ಮೊನ್ನೆಯಷ್ಟೇ ಆ ನಟಿಯ ತಮಗಾದ ಅನ್ಯಾಯದ ಕುರಿತು ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಪ್ರಕರಣದ ಕುರಿತು ಎಳೆ ಎಳೆಯಾಗಿ ಘಟನೆಗಳನ್ನು ಬಿಚ್ಚಿಟ್ಟಿದ್ದರು. ಅಂದಿನ ಪರಿಸ್ಥಿತಿಯನ್ನೂ ವಿವರಿಸಿದ್ದರು. ಈಗ ಆ ಪ್ರಕರಣವೆಲ್ಲ ಏನಾಗಲಿವೆ ಎನ್ನುವ ಕುತೂಹಲ ಹೆಚ್ಚಿದೆ. ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್
ನಟಿಗೆ ಆದ ದೌರ್ಜನ್ಯದ ಕುರಿತಾಗಿ ಕೇರಳ ಚಿತ್ರೋದ್ಯಮ ವಿಷಾದ ವ್ಯಕ್ತ ಪಡಿಸಿತ್ತು. ನಟಿಯ ಬೆನ್ನಿಗೆ ನಿಂತು ಧೈರ್ಯ ತುಂಬಿತ್ತು. ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಸಂದೇಶವನ್ನೂ ನೀಡಲಾಗಿತ್ತು. ಇವೆಲ್ಲ ಕಾರಣದಿಂದಾಗಿ ದಿಲೀಪ್ ಮೇಲಿನ ಪ್ರಕರಣ ಮಹತ್ವ ಪಡೆದುಕೊಂಡಿದೆ.
ಬೆಳಗಾವಿ: ಅಂಕೋಲಾ ಉದ್ಯಮಿ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಬೆಳಗಾವಿ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣ ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.
ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ ಈ ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಇದನ್ನೂ ಓದಿ: ಆನ್ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ
ಉಳಿದಂತೆ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ
2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು.
ಭೋಪಾಲ್: ಕಾಂಗ್ರೆಸ್ ಮಾಜಿ ಶಾಸಕಿ ಶಕುಂತಲಾ ಖತಿಕ್ ಅವರಿಗೆ ಮಧ್ಯ ಪ್ರದೇಶದ ಭೋಪಾಲ್ ಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಕರೇರಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕಿ ಶಕುಂತಲಾ ಖತಿಕ್ ಅವರು ಮತ್ತು ಅವರ ಬೆಂಬಲಿಗರಾದ ಏಳು ಜನರಿಗೆ ಪೊಲೀಸ್ ಠಾಣೆಯನ್ನು ಸುಟ್ಟು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
2017 ರಲ್ಲಿ ಮಾಂಡ್ಸೌರ್ ಪ್ರದೇಶದಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಈ ಹತ್ಯೆಯ ವಿರೋಧಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ ಶಕುಂತಲಾ ಖತಿಕ್ ಅವರು, ಪ್ರತಿಭಟನೆಯ ವೇಳೆ ಪೊಲೀಸ್ ಠಾಣೆಯನ್ನು ಸುಟ್ಟು ಹಾಕಿ ಎಂದು ಘೋಷಣೆ ಕೂಗಿದ್ದರು. ಈ ಕಾರಣದಿಂದ ಭೋಪಾಲ್ ನ್ಯಾಯಾಲಯ ಮೂರು ವರ್ಷ ಜೈಲು ಮತ್ತು ಮಾಜಿ ಶಾಸಕಿ ಸೇರಿ ಎಲ್ಲಾ ಆರೋಪಿಗಳಿಗೂ 5 ಸಾವಿರ ದಂಡ ವಿಧಿಸಿದೆ.
2017ರಲ್ಲಿ ರೈತರ ಮೇಲಿನ ಗುಂಡಿನ ದಾಳಿಯನ್ನು ಖಂಡಿಸಿ ಶಕುಂತಲಾ ಖತಿಕ್ ಅವರು ರೈತರ ಜೊತೆ ಸೇರಿ ಪೊಲೀಸ್ ಠಾಣೆಯ ಮುಂದೆ ಉಗ್ರ ಹೋರಾಟ ಮಾಡಿದ್ದರು. ಈ ವೇಳೆ ಪೊಲೀಸ್ ಠಾಣೆಗೆ ಬೆಂಕಿ ಹಾಕಿ ಎಂಬ ಘೋಷಣೆಯನ್ನು ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಈ ವಿಡಿಯೋ ಅಧಾರದ ಮೇಲೆ ಅವರ ವಿರುದ್ಧ ಕೇಸ್ ದಾಖಲಾಗಿತ್ತು.
ಈಗ ಈ ಪ್ರಕರಣದಲ್ಲಿ ಶಕುಂತಲಾ ಖತಿಕ್ ಸೇರಿ ಅವರ ಬೆಂಬಲಿಗರಾದ ವಿನಾಸ್ ಗೋಯೆಲ್, ದೀಪಕ್ ಸೇಠ್, ನಾರಾಯಣ್, ಬಂಟಿ ಅಲಿಯಾಸ್ ಸಂಜಯ್, ಸತೀಶ್ ವರ್ಮಾ, ಮತ್ತು ಮನೀಶ್ ಖತಿಕ್ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಖತಿಕ್ ಅವರಿಗೆ ಒಂದು ತಿಂಗಳ ಕಾಲವಾಕಾಶ ನೀಡಲಾಗಿದೆ.
ಬೆಂಗಳೂರು: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ನಟ ಪ್ರಕಾಶ್ ರಾಜ್, ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ. ಹೀಗಾಗಿ 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವಿಚಾರವಾಗಿ ಪ್ರಕಾಶ್ ರಾಜ್, ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು ಎನ್ನುವ ರೀತಿ ತೀರ್ಪು ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ‘ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು’ ಎನ್ನುವ ತೀರ್ಪಿನ ಆಶೀರ್ವಾದ ಪಡೆದುಕೊಂಡು ‘ತೃಪ್ತ’ ಶಾಸಕರು ಕೊಂಕಣ ಸುತ್ಕೊಂಡು ಮೈಲಾರಕ್ಕೆ ಬಂದಿವೆ. ಒಳ್ಳೇದೆ ಆಯ್ತು, ಸ್ವಾಭಿಮಾನಿ ಕನ್ನಡಿಗರೇ ಇವುಗಳು ಜನ್ಮ ಜನ್ಮಕ್ಕೂ ಮರೆಯದೆ ಇರುವ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.
ಸುಪ್ರೀಂಕೋರ್ಟ್ ನಲ್ಲಿ ಗೆದ್ದು ಬೀಗುತ್ತಿರುವ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು. ಈ ಮೂಲಕ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಪ್ರಕಾಶ್ ರಾಜ್ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.
“ಹಾವೂ ಸಾಯ್ಬಾರ್ದು..ಕೋಲೂ ಮುರೀಬಾರ್ದು “ಎನ್ನುವ ತೀರ್ಪಿನ ಆಶೀರ್ವಾದ ಪಡಕೊಂಡು “ತ್ರಪ್ತ”ಶಾಸಕರು ..ಕೊಂಕಣ ಸುತ್ಕೊಂಡು ಮ್ಯಲಾರಕ್ ಬಂದವೆ ..ಓಳ್ಳೇದೆ ಆಯ್ತು ..ಸ್ವಾಭಿಮಾನಿ ಕನ್ನಡಿಗರೆ .. ಇವುಗಳು ..ಜನ್ಮ ಜನ್ಮಕ್ಕೂ ಮರೀದೆ ಇರೋ ತೀರ್ಪು ಕೊಡೋದು ಈಗ ನಮ್ಮ ಜವಾಬ್ದಾರಿ ..#justAsking
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ. ಸ್ಪೀಕರ್ ಅವರಿಗೆ ಅನರ್ಹತೆ ಮಾಡಲು ಮಾತ್ರ ಅಧಿಕಾರ ಇರುತ್ತದೆ ಹೊರತು ನಿರ್ಧಿಷ್ಟ ಸಮಯದವರೆಗೆ ಅನರ್ಹ ಮಾಡಲು ಅವಕಾಶ ಇಲ್ಲ ಎಂದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಅನರ್ಹತೆಯಾದರೂ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಕೆಲವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಇಂದು ಅನರ್ಹ ಶಾಸಕರ ಭವಿಷ್ಯ ಏನು ಎನ್ನುವುದನ್ನ ಸುಪ್ರೀಂ ಕೋರ್ಟ್ ನಿರ್ಧರಿಸಲಿದೆ. ಹೀಗಾಗಿ ಅನರ್ಹರಿಗಷ್ಟೇ ಅಲ್ಲ ಬಿಜೆಪಿಗೂ ತೀರ್ಪು ಏನಾಗಲಿದೆ ಎಂಬ ಎದೆಬಡಿತ ಹೆಚ್ಚಾಗಿದೆ.
ಸುಪ್ರೀಂ ಕೋರ್ಟಿನ ತೀರ್ಪು ಹೊರಬಿದ್ದ ಬಳಿಕ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ನಡೆಸಲಿದೆ ಎನ್ನಲಾಗಿದೆ. ಉಪಚುನಾವಣೆಗೆ ಟಿಕೆಟ್ ಹಂಚಿಕೆ ಸಂಬಂಧ ಮಹತ್ವದ ನಿರ್ಧಾರವನ್ನು ಬಿಜೆಪಿ ಕೈಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ಇಂದು ಮಧ್ಯಾಹ್ನ 3 ಗಂಟೆವರೆಗೆ ಸಿಎಂ ಯಡಿಯೂರಪ್ಪ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅನರ್ಹರ ತೀರ್ಪಿಗಾಗಿ ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:ಸುಪ್ರೀಂಕೋರ್ಟಿನಿಂದ ಇಂದು ಜಡ್ಜ್ಮೆಂಟ್ – ಅಗ್ನಿ ಪರೀಕ್ಷೆಯಲ್ಲಿ ಪಾಸ್ ಆಗ್ತಾರಾ ರೆಬೆಲ್ಸ್?
ಹಾಗೆಯೇ ಈ ಮಧ್ಯೆ ಅನರ್ಹರ ಭವಿಷ್ಯ ಏನಾಗಲಿದೆ ಎಂಬ ಹಲವು ಪ್ರಶ್ನೆಗಳು ರಾಜಕೀಯ ಪಾಳಯದಲ್ಲಿ ಹುಟ್ಟಿಕೊಂಡಿದೆ. ಕಾಂಗ್ರೆಸ್ ಉಪಚುನಾವಣೆಗೆ ಉಳಿದ ಟಿಕೆಟ್ ಅನೌನ್ಸ್ ಮಾಡುತ್ತಾ? ಬಿಜೆಪಿ ಟಿಕೆಟ್ ಹಂಚಿಕೆ ಗೊಂದಲಕ್ಕೆ ಇಂದೇ ತೆರೆ ಬೀಳುತ್ತಾ? ಯಾರಿಗೆ ಸಿಗುತ್ತೆ ಬಿಜೆಪಿ ಟಿಕೆಟ್? ಅನರ್ಹರಿಗಾ ಅಥವಾ ಅವರ ಕುಟುಂಬಸ್ಥರಿಗಾ? ಇಲ್ಲಾ ಪಕ್ಷದವರಿಗಾ ಎನ್ನುವ ಸಾಲು ಸಾಲು ಪ್ರಶ್ನೆಗಳು ರಾಜ್ಯ ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರ ತಲೆ ಕಡೆಸಿದೆ.
ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟಿನಿಂದ ತೀರ್ಪು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರಾದ ರಮೇಶ್ ಜಾರಕಿಹೋಳಿ, ಮುನಿರತ್ನ, ಎಸ್.ಟಿ ಸೋಮಶೇಖರ್, ಬಿಸಿ ಪಾಟೀಲ್, ಬೈರತಿ ಬಸವರಾಜ್, ಹೆಚ್. ವಿಶ್ವ ನಾಥ್, ರೋಷನ್ ಬೇಗ್, ಆರ್ ಶಂಕರ್ ಸೇರಿ ಇನ್ನು ಹಲವರು ದೆಹಲಿ ತಲುಪಿದ್ದು ಇಂದಿನ ತೀರ್ಪು ಬಗ್ಗೆ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ತಿಂಗಳುಗಳ ಕಾನೂನು ಹೋರಾಟಕ್ಕೆ ಅಂತಿಮ ದಿನ ಬಂದಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಅನರ್ಹ ಶಾಸಕರ ಭವಿಷ್ಯ ನಿರ್ಧಾರ ಆಗಲಿದೆ.
– ಶತಮಾನದ ಭೂ ವ್ಯಾಜ್ಯದ ಸಕ್ಸಸ್ಗೆ ಪರಾಸರನ್ ಕಾರಣ
– ಎರಡನೇ ‘ಪತ್ನಿ’ಯಿಂದ ಅಯೋಧ್ಯೆ ಕೇಸ್ ಗೆಲುವು
ಬೆಂಗಳೂರು: ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಭೂ ವ್ಯಾಜ್ಯ ಕೇಸ್ ಇತ್ಯರ್ಥವೇನೋ ಆಯ್ತು. ಆದರೆ ಶತಮಾನದ ವ್ಯಾಜ್ಯದ ಸಕ್ಸಸ್ಗೆ ಕಾರಣವಾಗಿದ್ದು ಯಾರು ಎಂಬ ಪ್ರಶ್ನೆಗೆ ಇಂಟ್ರೆಸ್ಟಿಂಗ್ ಉತ್ತರ ಇಲ್ಲಿದೆ.
ಹೌದು. ದಶಕಗಳ ಕಾನೂನು ಹೋರಾಟದ ಬಳಿಕ ಅಯೋಧ್ಯೆ ರಾಮಜನ್ಮಭೂಮಿಯ ವಿವಾದ ಕೊನೆಗೂ ಬಗೆಹರಿದಿದೆ. ರಾಮಜನ್ಮಭೂಮಿ ಶ್ರೀರಾಮನಿಗೆ ಸೇರಿದ್ದು. ಇದು ಬೇರೆ ಯಾರಿಗೂ ಸೇರಲ್ಲ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಶಿಯಾ, ವಕ್ಫ್, ನಿರ್ಮೋಹಿ ಅಖಾರರ ಪರ ಖ್ಯಾತನಾಮ ವಕೀಲರು ಮಂಡಿಸಿದ ವಾದವನ್ನು ಮೆಟ್ಟಿನಿಂತು ರಾಮಲಲ್ಲಾ ಕೇಸ್ ತನ್ನದಾಗಿಸಿಕೊಂಡಿದೆ. ಇದಕ್ಕೆ ಕಾರಣ 92 ವರ್ಷ ಹಿರಿಯ ವಕೀಲ ಕೆ ಪರಾಸರನ್.
ಕೆ ಪರಾಸರನ್ ಅವರು ಕಾನೂನು ಲೋಕದ ಹೀರೋ. ಇವರಿಗೆ ಕೋರ್ಟಿನಲ್ಲಿ ಕಾನೂನು ಹೋರಾಟ ನಡೆಸೋದು ಅಂದರೆ ಪಂಚಪ್ರಾಣ. `1949ರಲ್ಲಿ ನನಗೆ ಮದುವೆ ಆಯ್ತು. ಇದಾದ ಮರುವರ್ಷವೇ ಮತ್ತೊಂದು ಮದುವೆ ಮಾಡಿಕೊಂಡೆ. ಎರಡನೇ ಹೆಂಡತಿ ಹೆಸರು `ಕಾನೂನು’. ಯಾವ ಪುರುಷನಿಗಾದ್ರೂ ಎರಡನೇ ಹೆಂಡತಿ ಮೇಲೆ ಮೋಹ. ನನಗೂ ಮೊದಲ ಹೆಂಡತಿಗಿಂತ 2ನೇ ಹೆಂಡತಿ ಮೇಲೆಯೇ ಮೋಹ. ನಾನು ನನ್ನ ಜೀವನದಲ್ಲಿ ನಿಜವಾದ ಪತ್ನಿಗಿಂತ ಕಾನೂನನ್ನೇ ಹೆಚ್ಚು ಪ್ರೀತಿಸಿದೆ’ ಎಂದು ಹಿರಿಯ ವಕೀಲ ಪರಾಸರನ್ ಹೇಳುತ್ತಾರೆ. ಇದನ್ನೂ ಓದಿ: ಅಂದು ಹೇಳಿದಾಗ ಟೀಕೆ ಬಂದಿತ್ತು, ಇಂದು ನನ್ನ ಸಾಕ್ಷ್ಯ ಆಧಾರಿಸಿ ತೀರ್ಪು ಬಂದಿದೆ- ಕೆ.ಕೆ.ಮೊಹಮ್ಮದ್ ಸಂತಸ
ಇಂತಹ ಕಾನೂನು ವ್ಯಾಮೋಹಿ ಪರಾಸರನ್, ತಮ್ಮ 92ನೇ ವಯಸ್ಸಿನಲ್ಲಿಯೂ ರಾಮಲಲ್ಲಾ ಪರ ಸುಪ್ರೀಂಕೋರ್ಟಿನಲ್ಲಿ ಪ್ರಖರ ವಾದ ಮಂಡಿಸಿ, ಕೇಸನ್ನು ಗೆಲ್ಲಿಸಿದ್ದಾರೆ. ಇದೀಗ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ರಾಮಲಲ್ಲಾ ವಿರಾಜಮಾನ್ ಪರ ಸುಪ್ರೀಂಕೋರ್ಟಿನಲ್ಲಿ 40 ದಿನಗಳ ಕಾಲ ಪ್ರಖರ ವಾದ ಮಂಡಿಸಿದರು. 92 ವರ್ಷದ ಪರಾಸರನ್ ಕೋರ್ಟ್ ಹಾಲ್ನಲ್ಲಿ ನಿಂತು ವಾದ ಮಂಡಿಸುತ್ತಿದ್ದರೆ, ನ್ಯಾಯಮೂರ್ತಿಗಳು ತಾವು ದಯವಿಟ್ಟು ಕುಳಿತು ವಾದ ಮಾಡಿ ಎಂದು ಕೇಳಿಕೊಳ್ಳುತ್ತಿದ್ರು. ಆದರೆ ಪರಾಸರನ್ ಮಾತ್ರ ನಿಂತು ವಾದ ಮಂಡಿಸೋದು ನಮ್ಮ ಸಂಸ್ಕೃತಿ ಎಂದು ಹೇಳಿ ವಾದಿಸಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷತೆ ಏನು? ಹೇಗಿರಲಿದೆ ದೇವಾಲಯ?
ರಾಮಲಲ್ಲಾ ಪರ ವಾದ ಮಂಡಿಸುವ ವೇಳೆ ಕೆ ಪರಾಸರನ್ ಅವರು ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ ಎಂದು ಹೇಳುತ್ತಾರೆ. ಅಂದರೆ ತಾಯಿ ಮತ್ತು ತಾಯಿನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂದರ್ಥ. ಶ್ರೀರಾಮನಜನ್ಮಭೂಮಿ ಕೂಡ ನಮಗೆ ಮುಖ್ಯ. ರಾಮಲಲ್ಲಾಗೆ ರಾಮಜನ್ಮಭೂಮಿ ಸಿಗಬೇಕು ಎಂದು ವಾದ ಮಂಡಿಸಿದ್ದರು. ಇದನ್ನೂ ಓದಿ: ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ
ಕೋರ್ಟಿನಲ್ಲಿ ಪ್ರಕರಣ ಸಂಬಂಧ ವಾದ ಮಂಡನೆಯಲಿ ಪರಾಸರನ್ ಅವರು ವೇದಗಳನ್ನು, ಪುರಾಣಗಳನ್ನು ಕೂಡ ಉಲ್ಲೇಖಿಸುತ್ತಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಳ್ಳಲೇಬೇಕು ಎಂಬ ಉದ್ದೇಶದಿಂದ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದವರಲ್ಲಿ ಪರಾಸರನ್ ಸಹ ಒಬ್ಬರು. ಪ್ರತೀದಿನದ ಕೋರ್ಟ್ ಕಲಾಪಗಳಿಗೆ ಒಂದು ದಿನ ಮುಂಚಿತವಾಗಿಯೇ ಸಿದ್ಧಗೊಳ್ಳುವ ಪರಿಪಾಠವನ್ನು ಪರಾಸರನ್ ಅವರು ಅಳವಡಿಸಿಕೊಂಡಿದ್ದರು.
ಈ ವಾದ ಸರಣಿಯ ಸಂದರ್ಭದಲ್ಲಿ ಪಿ.ವಿ. ಯೋಗೇಶ್ವರನ್, ಅನಿರುದ್ ಶರ್ಮಾ, ಶ್ರೀಧರ್ ಪುಟ್ಟರಾಜು ಮತ್ತು ಅದಿತಿ ದಾನಿ ಅವರಿದ್ದ ಯುವ ವಕೀಲ ಪಡೆ ಪರಾಸರನ್ ಅವರಿಗೆ ಸಹಾಯ ಮಾಡುತ್ತಿದ್ದರು. ಪರಾಸರನ್ ಅವರು ಎಷ್ಟು ತಯಾರಾಗಿ ಕಲಾಪಕ್ಕೆ ಹಾಜರಾಗುತ್ತಿದ್ದರು ಎಂದರೆ ನ್ಯಾಯಾಧೀಶರು ಮತ್ತು ವಕೀಲರು ಯಾವುದೇ ವಿಷಯದ ಬಗ್ಗೆ ಪ್ರಶ್ನೆ ಕೇಳಿದರೂ ಅವರು ಅಲ್ಲೇ ನಿಖರವಾಗಿ ಉತ್ತರಿಸಿ ವಾದಿಸುತ್ತಿದ್ದರು. ವಯಸ್ಸು ಆಗಿದ್ದರೂ ಅವರ ಜ್ಞಾಪಕ ಶಕ್ತಿ ಕಲಾಪ ವೀಕ್ಷಿಸುತ್ತಿದ್ದ ಯುವ ವಕೀಲರ ಅಚ್ಚರಿಗೆ ಕಾರಣವಾಗಿತ್ತು.
ಆದರೆ 40 ದಿನಗಳ ವಿಚಾರಣೆಯ ಸಂದರ್ಭದಲ್ಲಿ ಪರಾಸರನ್ ಅವರು ಯಾವುದೇ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳುತ್ತಿರಲಿಲ್ಲ. ಪರಾಸರನ್ ಅವರಿಗೆ ಪ್ರತಿವಾದಿಯಾಗಿದ್ದವರು ಮುಸ್ಲಿಂ ಅರ್ಜಿದಾರರ ಪರವಾಗಿ ವಾದಿಸುತ್ತಿದ್ದ ರಾಜೀವ್ ಧವನ್ ಅವರು. ಧವನ್ ಸುಪ್ರೀಂ ಕೋರ್ಟಿನ ಪ್ರಮುಖ ವಕೀಲರು. ಹೀಗಾಗಿ ಎದುರಾಳಿಗಳ ಮೇಲೆ ಲಾ ಪಾಯಿಂಟ್ ಎತ್ತಿ ವಕೀಲರನ್ನು ಕಕ್ಕಾಬಿಕ್ಕಿ ಮಾಡುವ ಸಾಮರ್ಥ್ಯ ಹೊಂದಿರುವ ವ್ಯಕ್ತಿ. ಧವನ್ ಕಾಗದ ಪತ್ರವನ್ನು ಹರಿದು ಹಾಕಿದ್ದರೂ ಪರಾಸರನ್ ಅವರು ತಾಳ್ಮೆ ಕಳೆದುಕೊಂಡಿರಲಿಲ್ಲ. ಹಿಂದೂ ಕಡೆಯ ವಕೀಲರ ವಾದ ಮೂರ್ಖತನದಿಂದ ಕೂಡಿದ್ದು ಎಂದು ಹೇಳಿದರು ಪರಾಸರನ್ ಶಾಂತವಾಗಿದ್ದರು.
ಅಕ್ಟೋಬರ್ 16ರಂದು ಜನ್ಮಭೂಮಿ ಪ್ರಕರಣದ ವಿಚಾರಣೆ ಮುಕ್ತಾಯವಾದ ಬಳಿಕ ಪರಾಸರನ್ ಅವರು ನ್ಯಾಯಾಲಯದ ಹೊರಭಾಗದಲ್ಲಿ 15 ನಿಮಿಷಗಳ ಕಾಲ ರಾಜೀವ್ ಧವನ್ ಅವರಿಗಾಗಿ ಕಾದು ಕುಳಿತಿದ್ದರು. ಈ ವಿಚಾರ ತಿಳಿದ ರಾಜೀವ್ ಧವನ್ ಅವರು ಹೊರಗೆ ಬಂದು ಪರಾಸರನ್ ಅವರನ್ನು ಭೇಟಿಯಾಗಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ಮೂಲಕ ಕೋರ್ಟಿನ ಒಳಗೆ ನಾವಿಬ್ಬರು ಎದುರಾಳಿಗಳಾಗಿದ್ದರೂ ಹೊರಗಡೆ ಮಾತ್ರ ಸ್ನೇಹಿತರು ಎಂದು ತೋರಿಸಿದ್ದರು. ಈ ಮೂಲಕ ಎಲ್ಲ ವಕೀಲರ ಮನಸ್ಸು ಗೆದ್ದಿದ್ದರು.
ಇಂತಹ ಕೆ ಪರಾಸರನ್, ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಕರಣದಲ್ಲಿ ಮಹಿಳೆಯರ ಪ್ರವೇಶದ ವಿರುದ್ಧವಾಗಿ ವಾದ ಮಂಡಿಸಿದ್ದಾರೆ. ಈ ಕುರಿತ ತೀರ್ಪು ಇನ್ನೂ ಬರಬೇಕಿದೆ. ಅಂದಹಾಗೇ, ಕೆ ಪರಾಸರನ್ ಅವರನ್ನು ಭಾರತೀಯ ಬಾರ್ ಅಸೋಸಿಯೇಷನ್ನ ಪಿತಾಮಹ ಅಂತಲೇ ಕರೆಯಲಾಗುತ್ತಿದೆ. 1927 ಅಕ್ಟೋಬರ್ 9ರಂದು ತಮಿಳುನಾಡಿನ ಅಯ್ಯಂಗಾರಿ ಕುಟುಂಬದಲ್ಲಿ ಜನಿಸಿದ ಪರಾಸರನ್, ತಮ್ಮ ಬಹುಕೇತ ಜೀವನವನ್ನು ಕೋರ್ಟ್ ಹಾಲ್ಗಳಲ್ಲೇ ಕಳೆದಿದ್ದಾರೆ. ಹಿಂದುತ್ವದ ಬಗ್ಗೆ ಅಪಾರ ಜ್ಞಾನವಿರುವ ಇವರು ರಾಜ್ಯಸಭಾ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. 1983ರಿಂದ 1989ರ ತನಕ ಭಾರತ ಅಟಾರ್ನಿ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.
ಕೆ ಪರಾಸರನ್ ಅವ್ರ ಕಾನೂನು ಸೇವೆ ಪರಿಗಣಿಸಿ ಭಾರತ ಸರ್ಕಾರ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಒಟ್ಟಿನಲ್ಲಿ ರಾಮನಜನ್ಮಭೂಮಿಯನ್ನು ರಾಮನಿಗೆ ಮರಳಿಸುವಲ್ಲಿ ಕೆ ಪರಾಸರನ್ ಪಾತ್ರವನ್ನು ಯಾರು ಮರೆಯುವಂತೆ ಇಲ್ಲ. ಇವರ ಜೀವನ ಪಥ ಕಾನೂನು ವಿದ್ಯಾರ್ಥಿಗಳಿಗೆ ಒಂದು ಪಾಠವಾಗಿದೆ.
ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಇದನ್ನು ಯಾರೂ ಗೆಲವು, ಸೋಲು ಎಂದು ಭಾವಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮನ ದೇವಸ್ಥಾನ ನಿರ್ಮಿಸಲು ನಾವೂ ಸಹ ಸಹಕರಿಸುತ್ತೇವೆ ಎಂದು ಭಾಗವತ್ ಹೇಳಿದ್ದಾರೆ.
Mohan Bhagwat,RSS Chief: We welcome this decision of Supreme Court. This case was going on for decades and it has reached the right conclusion. This should not be seen as a win or loss.We also welcome everyone's efforts to maintain peace and harmony in society. #Ayodhyajudgementpic.twitter.com/DtNnliaKEA
ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ. ದಶಕಗಳಿಂದ ನಡೆಯುತ್ತಿದ್ದ ಪ್ರಕರಣ ಇಂದು ಇತ್ಯರ್ಥವಾಗಿರುವುದು ಸಂತಸ ತಂದಿದೆ. ಇದನ್ನು ಯಾರೂ ಗೆಲುವು ಸೋಲು ಎಂದು ಭಾವಿಸಬಾರದು. ನಾವು ಹಿಂದಿನದನ್ನು ಮರೆಯಬೇಕಿದೆ. ನಮ್ಮಿಂದ ನಿರೀಕ್ಷಿಸಲಾದ ಕರ್ತವ್ಯಗಳನ್ನು ನಿರ್ವಹಿಸಬೇಕಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರ ಪ್ರಯತ್ನವನ್ನು ನಾವು ಸ್ವಾಗತಿಸುತ್ತೇವೆ ಎಂದು ಕರೆ ನೀಡಿದರು.
ಮುಂದಿನ ಯಾವುದೇ ಆಂದೋಲನ ಅಥವಾ ರಾಜಕೀಯ ಆಂದೋಲನದಲ್ಲಿ ಆರ್ಎಸ್ಎಸ್ ಭಾಗಿಯಾಗುವುದಿಲ್ಲ. ಚಾರಿತ್ರ್ಯ ನಿರ್ಮಾಣದ ಕಡೆ ಗಮನಹರಿಸಲಿದೆ ಎಂದು ಸ್ಪಷ್ಟಪಡಿಸಿದರು.
ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು, ನಾವು ಎಲ್ಲ ಧರ್ಮಗಳನ್ನು ಹೊರತಾಗಿ ಭಾರತೀಯ ಪ್ರಜೆಗಳು ಎಂದು ಅಭಿಪ್ರಾಯಪಟ್ಟರು.
ಇಂದು ಬೆಳಗ್ಗೆ ರಾಮಜನ್ಮ ಭೂಮಿ ಕುರಿತು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪಂಚಸದಸ್ಯರ ಪೀಠ ತೀರ್ಪು ಪ್ರಕಟಿಸಿದೆ. ಮಸೀದಿ ನಿರ್ಮಾಣಕ್ಕೆ ಬೇರೆ ಸ್ಥಳದಲ್ಲಿ 5 ಎಕರೆ ಜಮೀನು ನೀಡಬೇಕು. ಮಂದಿರ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.