Tag: veteran actor

  • ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ

    ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ

    ಬೆಂಗಳೂರು: ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 82 ವರ್ಷ ವಯಸ್ಸಿನ ರಾಜೇಶ್, ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಕಸ್ತೂರಿ ಬಾ ನಗರದ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ವೆಂಟಿಲೇಟರ್ ನಲ್ಲಿ ಉಸಿರಾಡುತ್ತಿದ್ದಾರೆ. ಇತ್ತಿಚೆಗೆ ಪತ್ನಿಯನ್ನ ಕಳೆದುಕೊಂಡಿರುವ ರಾಜೇಶ್ ಅವರಿಗೆ 5 ಜನ ಮಕ್ಕಳಿದ್ದಾರೆ.

    ರಾಜೇಶ್ ಆರೋಗ್ಯದ ಬಗ್ಗೆ ಆಸ್ಪತ್ರೆ ನಿರ್ದೇಶಕ ಡಾಕ್ಟರ್ ಗಂಗಾಧರ್ ಮಾತನಾಡಿ, ಫೆಬ್ರವರಿ 9 ಕ್ಕೆ ರಾಜೇಶ್ ಅವರು ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ ಅಂತ ಆಸ್ಪತ್ರೆಗೆ ಬಂದಿದ್ರು. ಚಿಕಿತ್ಸೆಗೆ ರಾಜೇಶ್ ಅವರು ಸ್ಪಂದಿಸ್ತಿದ್ದಾರೆ. ಸ್ವಲ್ಪ ಕಾಲಾವಕಾಶ ಬೇಕಾಗುತ್ತೆ. ಸಂಬಂಧಪಟ್ಟ ವೈದ್ಯರು ಕೂಡ ಬಂದು ಚಿಕಿತ್ಸೆ ಕೊಡ್ತಿದ್ದಾರೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ನರ್ಸಿಂಗ್ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು – ಬ್ರೀಮ್ಸ್ ಮೆಡಿಕಲ್ ಕಾಲೇಜು ಅನುಮತಿ

    ಅಡ್ಮಿಟ್ ಆಗಿ ನಾಲ್ಕೈದು ದಿನಗಳಾಗಿದೆ. ಇನ್ನೂ ಎರಡ್ಮೂರು ದಿನ ಚಿಕಿತ್ಸೆ ಕೊಡಬೇಕಾಗುತ್ತೆ. ಅವರ ಮಗಳು ಮತ್ತು ಮೊಮ್ಮಗ ರಾಜೇಶ್ ಅವರನ್ನ ನೋಡಿಕೊಳ್ತಿದ್ದಾರೆ. ಉಳಿದ ಕುಟುಂಬಸ್ಥರಿಗೆ ಫೋನ್ ಮೂಲಕ ಮಾಹಿತಿ ಕೊಡಲಾಗ್ತಿದೆ. ಚೇತರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣ್ತಿದೆ ಎಂದು ಭರತ್ ವಿವರಿಸಿದ್ದಾರೆ.

  • ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ

    ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

    84 ವರ್ಷದ ಶಿವರಾಮ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ಶಿವರಾಮ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ನಟ ಶ್ರೀನಿವಾಸ್ ಮೂರ್ತಿ ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ತಂದೆಯ ಆರೋಗ್ಯದ ಬಗ್ಗೆ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿ, ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಅಂದು ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೀವಿ. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದ್ರು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್