Tag: veterinarian Doctor

  • ಅತ್ಯಾಚಾರಿಗಳ ಎನ್‍ಕೌಂಟರ್ – ಪಶುವೈದ್ಯೆಯನ್ನು ನೆನೆದು ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

    ಅತ್ಯಾಚಾರಿಗಳ ಎನ್‍ಕೌಂಟರ್ – ಪಶುವೈದ್ಯೆಯನ್ನು ನೆನೆದು ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

    ಬೆಂಗಳೂರು: ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ನಟ ವಿನೋದ್ ರಾಜ್ ಅವರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರಿಗೆ ಬಿಗ್ ಸೆಲ್ಯೂಟ್ ಹೊಡೆಯುವ ಮೂಲಕ ಆನಂದಬಾಷ್ಪ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲದ ಮನೆಯಲ್ಲಿ ಮಾತನಾಡುವಾಗ ಲೀಲಾವತಿ ಅವರು ಪಶುವೈದ್ಯೆ ಮೇಲಾದ ಅತ್ಯಾಚಾರಕ್ಕೆ ಕಣ್ಣೀರು ಹಾಕಿದ್ದಾರೆ. ಅಲ್ಲದೆ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಒಂದು ವೇಳೆ ಪೊಲೀಸರು ಅವರನ್ನು ಎನ್‍ಕೌಂಟರ್ ಮಾಡದಿದ್ದರೆ, ಆರೋಪಿಗಳು ಭಯ ಪಡುತ್ತಿರಲಿಲ್ಲ. ಕಾಮುಕರಿಗೆ ಸರಿಯಾದ ಪಾಠವನ್ನು ಪೊಲೀಸರು ಕಲಿಸಿದ್ದಾರೆ. ದೇಶದಲ್ಲಿ ಇಂತಹವರಿಗೆ ಇನ್ನಷ್ಟು ಕಠಿಣ ಕಾನೂನು ಜಾರಿಗೆ ಬರಬೇಕು. ಅಲ್ಲದೆ ಸೂಕ್ತವಾದ ಶಿಕ್ಷೆಯಾಗಬೇಕು ಎಂದು ಅತ್ಯಾಚಾರಿಗಳಿಗೆ ಪೊಲೀಸರು ಕಲಿಸಿದ ಪಾಠದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಿಶಾ ಆರೋಪಿಗಳ ಎನ್‍ಕೌಂಟರ್- ಪೊಲೀಸರ ದಿಟ್ಟ ಕ್ರಮಕ್ಕೆ ಅದಿತಿ ಸೆಲ್ಯೂಟ್

    ಇದೇ ವೇಳೆ ಈ ಪ್ರಕರಣದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ ವೈದ್ಯೆಯ ಆತ್ಮಕ್ಕೆ ದೇವರು ಶಾಂತಿ ಕೊಡಲಿ. ಅವರ ಪೋಷಕರಿಗೆ ದೇವರು ದುಃಖ ಬರಿಸುವ ಶಕ್ತಿ ನೀಡಲಿ ಎಂದು ಪಶುವೈದ್ಯೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ನಟ ವಿನೊದ್ ರಾಜ್ ಅವರು ಕೂಡ ಎನ್‍ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿ, ಅತ್ಯಾಚಾರ ಪ್ರಕರಣದಿಂದ ದುಃಖವಾಗಿದೆ. ಇಂತಹ ಪ್ರಕರಣಗಳು ನಡೆಯಬಾರದಾಗಿತ್ತು. ಪೊಲೀಸರು ಸರಿಯಾದ ಪ್ರತೀಕಾರ ಮಾಡಿದ್ದಾರೆ. ಅಂತಹ ಪೊಲೀಸರಿಗೆ ನನ್ನದೊಂದು ಸೆಲ್ಯೂಟ್. ಇಂತಹ ಪ್ರಕರಣಗಳು ಜರುಗದಂತೆ ಪೊಲೀಸರ ಬೀಟ್ ಹೆಚ್ಚಾಗಬೇಕು. ಪೊಲೀಸರಿಗೆ ಎಲ್ಲಾ ರೀತಿಯ ಅಧಿಕಾರ ಇದೆ. ಹೀಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಪಶುವೈದ್ಯೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

  • ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು: ಸಿದ್ದರಾಮಯ್ಯ

    ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು: ಸಿದ್ದರಾಮಯ್ಯ

    ರಾಯಚೂರು: ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಸಿದ್ದರಾಮಯ್ಯನವರು ಹೈದರಾಬಾದ್ ಎನ್‍ಕೌಂಟರ್ ವಿಚಾರವಾಗಿ ಮಾತನಾಡಿ, ಪೊಲೀಸರಿಗೆ ರಕ್ಷಣೆ ಬೇಕಾದಾಗ, ಆರೋಪಿಗಳು ತಪ್ಪಿಸಿಕೊಂಡು ಹೋದಾಗ ಎನ್‍ಕೌಂಟರ್ ಮಾಡಬಹುದು. ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಲಾಯರ್ ಆಗಿ ನಾನು ಹೇಳುತ್ತಿದ್ದೇನೆ ಸುಮ್ಮನೆ ಹೇಳಲ್ಲ. ಇಂತಹ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು. ನಮ್ಮ ದೇಶದಲ್ಲಿ ಮರಣದಂಡನೆ ಶಿಕ್ಷೆಯಿಲ್ಲ, ಅದನ್ನು ಜಾರಿಗೆ ತರಬೇಕು ಎಂದು ಹೇಳಿದರು.

    ಇದೇ ವೇಳೆ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ಉಪಚುನಾವಣೆಯಲ್ಲಿ 12 ಸ್ಥಾನ ಗೆಲ್ಲುತ್ತೇವೆ 15 ಸ್ಥಾನ ಗೆದ್ದರೂ ಅಚ್ಚರಿಯಿಲ್ಲ ಎಂದರು. ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷಾಂತರಿಗಳಿಗೆ ವಿರೋಧ ಅಲೆಯಿದೆ. ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ. 12 ಸೀಟ್ ಗೆದ್ದರೆ ನಮಗೆ ಅವಕಾಶ ಇದೆ. ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದರು.

    ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಫಲಿತಾಂಶ ಮೇಲೆ ಅವಲಂಬಿಸಿದೆ. ದೇವೇಗೌಡರು ಒಮ್ಮೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಹೇಳುತ್ತಾರೆ. ಇನ್ನೊಮ್ಮೆ ಸೋನಿಯಾ ಗಾಂಧಿ ಜೊತೆ ಮಾತನಾಡುತ್ತೇನೆ ಎನ್ನುತ್ತಾರೆ ಎಂದು ತಿಳಿಸಿದರು.

    ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬಾರದು ಎಂದು ನಾವು ಎಲ್ಲಿಯೂ ಹೇಳಿಲ್ಲ. ಪಕ್ಷದಲ್ಲಿ ಯಾರನ್ನು ಐಸೋಲೆಟ್ ಮಾಡುವ ಕೆಲಸ ನಡೆದಿಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

  • ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    – ಇತರ ರೇಪ್ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ
    – ನನ್ನ ಪತಿಯನ್ನು ಕೊಂದ ಜಾಗದಲ್ಲಿ ನನ್ನನ್ನು ಕೊಲ್ಲಿ: ಪತ್ನಿ ಕಣ್ಣೀರು

    ಹೈದರಾಬಾದ್: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಎನ್‍ಕೌಂಟರ್ ವಿಷಯ ತಿಳಿದು ಭಾರತದೆಲ್ಲಡೆ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಈ ನಡುವೆ ಆರೋಪಿಗಳ ಕುಟುಂಬಸ್ಥರು ಎನ್‍ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಆರೋಪಿಗಳಾದ ಮೊಹಮ್ಮದ್ ಪಾಷಾ, ನವೀನ್, ಚೆನ್ನಕೇಶವುಲು ಹಾಗೂ ಶಿವಾ ನನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಪೊಲೀಸರ ಈ ಕಾರ್ಯಕ್ಕೆ ಇಡೀ ದೇಶ ಶ್ಲಾಘಿಸುತ್ತಿದೆ. ಅಲ್ಲದೆ ಹೈದರಾಬಾದ್ ವಿದ್ಯಾರ್ಥಿಗಳು ಪೊಲೀಸರಿಗೆ ಜೈಕಾರ ಹಾಕುತ್ತಿದ್ದಾರೆ. ಜೊತೆಗೆ ರಾಖಿ ಕಟ್ಟುವ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಮೊಹಮ್ಮದ್ ಪಾಷಾನ ತಾಯಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಪೊಲೀಸರು ನನ್ನ ಮಗನಿಗೆ ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ನನ್ನ ಮಗ ಈಗ ಇಲ್ಲ. ಖಂಡಿತಾ ಇದು ತಪ್ಪು. ಆದರೆ ಏನೂ ಮಾಡಲಿ ನನ್ನ ಮಗ ಈಗ ಬದುಕಿಲ್ಲ. ನನಗೆ ಮಾತನಾಡಲು ಸಹ ಆಗುತ್ತಿಲ್ಲ ಎಂದು ಕಣ್ಣೀರು ಹಾಕಿದರು. ಆರೋಪಿ ಶಿವಾ ತಾಯಿ ಮಾತನಾಡಿ, ನನ್ನ ಮಗ ತಪ್ಪು ಮಾಡಿದ್ದಾನೆ ಎಂದರೆ ಆತನನ್ನು ಶೂಟ್ ಮಾಡಿ ಎಂದು ಕಣ್ಣೀರು ಹಾಕುತ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಶಿವಾ ತಂದೆ, ಕೇವಲ ನಾಲ್ವರು ಆರೋಪಿಗಳಿಗೆ ಮಾತ್ರ ಏಕೆ ಈ ಶಿಕ್ಷೆ? ಬೇರೆಯವರಿಗೂ ಇದೇ ಶಿಕ್ಷೆ ನೀಡಬೇಕು. ಅವರಿಗೇಕೆ ಈ ಶಿಕ್ಷೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ನನ್ನ ಮಗ ಹಾಗೂ ಉಳಿದ ಆರೋಪಿಗಳಿಗೆ ಜೈಲಿಗೆ ಹಾಕುವ ಬದಲು ಕೊಂದು ಬಿಡಿ ಎಂದು ನಾನು ಮೊದಲೇ ಹೇಳಿದ್ದೆ. ಆದರೆ ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು ಎಂದು ಆರೋಪಿ ನವೀನ್ ತಂದೆ ಪ್ರತಿಕ್ರಿಯಿಸಿದ್ದಾರೆ. ಈ ಮೊದಲು ಚೆನ್ನಕೇಶವುಲು ತಾಯಿ, ನನ್ನ ಮಗ ತಪ್ಪು ಮಾಡಿದ್ದಾನೆ ಎಂದರೆ ಆತನಿಗೆ ಶಿಕ್ಷೆ ನೀಡಿ. ನನ್ನ ಮಗ ಅಪರಾಧ ಮಾಡಿದ್ದಾನೆಂದರೆ ಆತನನ್ನು ಸುಟ್ಟು ಕೊಲೆ ಮಾಡಿ. ನನ್ನ ಮಗ ನನಗೆ ಏನೂ ಅಲ್ಲ. ತಪ್ಪು ಯಾರು ಮಾಡಿದರೂ ತಪ್ಪೇ. ಸಂತ್ರಸ್ತೆಯ ತಾಯಿ 9 ತಿಂಗಳ ನಂತರ ತನ್ನ ಮಗಳಿಗೆ ಜನ್ಮ ನೀಡಿದ್ದರು. ಆದರೆ ಅವರ ಮಗಳು ಇಂತಹ ಅಪರಾಧಕ್ಕೆ ಬಲಿಯಾಗಿದ್ದಾಳೆ. ಅವರು ಎಷ್ಟು ಕಷ್ಟಪಟ್ಟಿರಬಹುದು ಎಂದು ಹೇಳಿದ್ದರು. ಇದನ್ನು ಓದಿ: ದೇಶಕ್ಕಾಗಿ ಒಳ್ಳೆಯ ನಿರ್ಧಾರ- ವಿಶ್ವನಾಥ್ ಕೆಲಸಕ್ಕೆ ಸಹೋದರ ಶ್ಲಾಘನೆ

    ಚೆನ್ನಕೇಶವುಲು ಪತ್ನಿ ಪ್ರತಿಕ್ರಿಯೆ ನೀಡಿ, ಮದುವೆಯಾದ ಒಂದು ವರ್ಷದೊಳಗೆ ನನ್ನ ಪತಿ ನನ್ನನ್ನು ಬಿಟ್ಟು ಹೋಗಿದ್ದಾರೆ. ದಯವಿಟ್ಟು ನನಗೆ ಎನ್‍ಕೌಂಟರ್ ಆದ ಜಾಗಕ್ಕೆ ಕರೆದುಕೊಂಡು ಹೋಗಿ. ನಾನು ಅಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಥವಾ ನೀವೇ ನನ್ನನ್ನು ಕೊಲೆ ಮಾಡಿ. ನನ್ನ ಪತಿ ಇಲ್ಲದೆ ನನಗೆ ಬದುಕಲು ಆಗುವುದಿಲ್ಲ ಎಂದು ಕಣ್ಣೀರು ಹಾಕುವ ಮೂಲಕ ತನ್ನ ನೋವನ್ನು ಹೊರಹಾಕಿದ್ದಾಳೆ. ಇದನ್ನು ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

    ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆಗೈದಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ.

  • ದೇಶಕ್ಕಾಗಿ ಒಳ್ಳೆಯ ನಿರ್ಧಾರ- ವಿಶ್ವನಾಥ್ ಕೆಲಸಕ್ಕೆ ಸಹೋದರ ಶ್ಲಾಘನೆ

    ದೇಶಕ್ಕಾಗಿ ಒಳ್ಳೆಯ ನಿರ್ಧಾರ- ವಿಶ್ವನಾಥ್ ಕೆಲಸಕ್ಕೆ ಸಹೋದರ ಶ್ಲಾಘನೆ

    ಬೆಂಗಳೂರು: ದೇಶಕ್ಕಾಗಿ ಅವರು ಒಳ್ಳೆಯ ನಿರ್ಧಾರ ತೆಗೆದುಕೊಂಡಿರುವುದಕ್ಕೆ ತುಂಬಾ ಹೆಮ್ಮೆ ಆಗುತ್ತಿದೆ ಎಂದು ಎನ್‍ಕೌಂಟರ್ ಸ್ಪೆಷಾಲಿಸ್ಟ್, ಹೈದರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಅವರ ಸಹೋದರ ವೀರಣ್ಣ ಸಜ್ಜನರ್ ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿಶ್ವನಾಥ್ ಸಹೋದರ ವೀರಣ್ಣ ಸಜ್ಜನರ್ ಅವರು, ನನ್ನ ಸಹೋದರ ಇಂತಹದ್ದೊಂದು ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದು ತುಂಬಾ ಖುಷಿಯಾಗುತ್ತಿದೆ. ಈ ಹಿಂದೆ ವಾರಂಗಲ್‍ನಲ್ಲಿ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ ಈ ರೀತಿ ಮತ್ತೆ ನಡೆಯುವುದಿಲ್ಲ ಎಂದು ಜನರಿಗೆ ಭರವಸೆ ನೀಡಿದ್ದರು. ಎನ್‍ಕೌಂಟರ್ ನಡೆದಾಗಿನಿಂದ ಆ್ಯಸಿಡ್ ದಾಳಿ ಎಲ್ಲಿಯೂ ನಡೆಯಲಿಲ್ಲ. ಇದೀಗ ಅತ್ಯಾಚಾರಿಗಳ ಎನ್‍ಕೌಂಟರ್ ಮೂಲಕ ಇಡೀ ದೇಶಕ್ಕೆ ಭಯ ಹುಟ್ಟಿಸಿದ್ದಾರೆ. ದೇಶಕ್ಕಾಗಿ ಅವರು ಒಳ್ಳೆಯ ನಿರ್ಧಾರ ತೆಗೆದುಕೊಂಡಿರುವುದಕ್ಕೆ ತುಂಬಾ ಹೆಮ್ಮೆ ಆಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಸಣ್ಣದೇ ಇರಲಿ, ದೊಡ್ಡದೇ ಇರಲಿ ಸಾರ್ವಜನಿಕರಿಗೆ ನ್ಯಾಯ ಸಿಗಬೇಕು ಎಂದು ಅವರು ಯಾವಾಗಲೂ ಹೋರಾಟ ಮಾಡುತ್ತಾರೆ. ವಿಶ್ವನಾಥ್ ಅವರು ವಿದ್ಯಾರ್ಥಿ ಆಗಿದ್ದಾಗಿನಿಂದಲೂ ಹೋರಾಟ ಮಾಡುತ್ತಿದ್ದರು. ಯಾರಿಗಾದರೂ ತೊಂದರೆಯಾದಾಗ ಆರೋಪಿಗಳ ಬೆನ್ನಟ್ಟಿ ಕೆಲಸ ಮುಗಿಯುವವರೆಗೂ ಅವರು ನಿದ್ದೆ ಮಾಡುವುದಿಲ್ಲ. ಈ ಪ್ರಕರಣ ಬೆಳಕಿಗೆ ಬಂದಾಗ ನನ್ನ ಸಹೋದರ ಈ ಕೇಸನ್ನು ನೋಡಿಕೊಳ್ಳುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಅವರು ಕೂಡ ತಮ್ಮ ಕೆಲಸದ ಬಗ್ಗೆ ಏನೂ ಹೇಳಲ್ಲ. ಪ್ರತಿಕೆಗಳಲ್ಲಿ ನೋಡಿದಾಗ ಈ ಪ್ರಕರಣವನ್ನು ನನ್ನ ಸಹೋದರ ವಹಿಸಿಕೊಂಡಿದ್ದಾರೆ ಎಂಬುದು ತಿಳಿಯಿತು ಎಂದರು. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ವಿಶ್ವನಾಥ್ ಮೊದಲು ಆಂಧ್ರ ಪ್ರದೇಶಕ್ಕೆ ಆಯ್ಕೆ ಆಗಿ ಅಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಹೈದರಾಬಾದ್ ಕಮಿಷನರ್ ಆಗಿ ಎರಡೂವರೆ ವರ್ಷ ಆಗಿದೆ. ಅವರಿಗೆ ಮೊದಲು ಆಂಧ್ರದಲ್ಲೇ ಕೆಲಸ ಸಿಕ್ಕ ಕಾರಣ ಅವರು ಕರ್ನಾಟಕದಲ್ಲಿ ಕೆಲಸ ಮಾಡಿಲ್ಲ. ನಮ್ಮ ಊರಿನಲ್ಲಿ ಯಾವುದೇ ಕಾರ್ಯಕ್ರಮ ಇದ್ದರೆ ಅವರು ಬರುತ್ತಾರೆ. ಅಲ್ಲದೆ ಶಿಕ್ಷಣ ಅಥವಾ ಸಮಾಜಕ್ಕೆ ಸಂಬಂಧಿಸಿದ ಕೆಲಸ ಇದ್ದರೆ ಎಷ್ಟೇ ಬ್ಯುಸಿ ಇದ್ದರೂ ಮಕ್ಕಳಿಗೆ ಕೌನ್ಸ್ ಲಿಂಗ್ ಮಾಡುತ್ತಾರೆ ಎಂದು ವೀರಣ್ಣ ತಿಳಿಸಿದರು. ಇದನ್ನೂ ಓದಿ: ಸುಡುವಾಗ ಪಶುವೈದ್ಯೆ ಜೀವಂತವಾಗಿದ್ಳು: ಸತ್ಯ ಬಾಯಿಬಿಟ್ಟ ಮೃಗೀಯ ಮನುಷ್ಯ

    ಬೆಳಗ್ಗೆಯಿಂದಲೂ ಸ್ನೇಹಿತರು ಹಾಗೂ ಸಂಬಂಧಿಕರು ಕರೆ ಮಾಡಿ ಶುಭಾಶಯ ತಿಳಿಸುತ್ತಿದ್ದಾರೆ. ನಮಗೆ ತುಂಬಾ ಖುಷಿ ಹಾಗೂ ಹೆಮ್ಮೆ ಆಗುತ್ತಿದೆ. ವಿಶ್ವನಾಥ್ ಅವರ ಈ ನಿರ್ಧಾರ ಜೀವಮಾನದ ಶ್ರೇಷ್ಠ ನಿರ್ಧಾರ. ಇಡೀ ದೇಶ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ವೀರಣ್ಣ ತಮ್ಮ ಸಂತಸವನ್ನು ಹಂಚಿಕೊಂಡರು.

  • ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    – ಪಶುವೈದ್ಯೆ ಕುಟುಂಬಸ್ಥರಿಂದ ಸಂತಸ

    ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದಾರೆ.

    ವಿಶ್ವನಾಥ್ ಸಜ್ಜನರ್ ಎನ್‍ಕೌಂಟರ್ ಸ್ಪೆಷಲಿಸ್ಟ್ ಆಗಿದ್ದು, ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ವಿಶ್ವನಾಥ್ ಸಜ್ಜನರ್ ವಾರಂಗಲ್ ಎಸ್‍ಪಿ ಆಗಿದ್ದರು. ಆಗ ಆಸಿಡ್ ದಾಳಿ ಆರೋಪಿಗಳು ಎನ್‍ಕೌಂಟರ್ ನಲ್ಲಿ ಹತ್ಯೆಗೈದಿದ್ದರು. ಆ ಎನ್‍ಕೌಂಟರ್ ಬಳಿಕ ಆ್ಯಸಿಡ್ ದಾಳಿಯಲ್ಲಿ ಇಳಿಕೆ ಕಂಡಿತ್ತು.

    ವೀರ ಕನ್ನಡಿಗ ವಿಶ್ವನಾಥ್ ಈಗ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ್ದಾರೆ. ಅಲ್ಲದೆ ಕಾಮುಕರನ್ನು ಎನ್‍ಕೌಂಟರ್ ಮಾಡಿದ್ದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ರೇಪಿಸ್ಟ್ ಗಳ ಎನ್‍ಕೌಂಟರ್ ಬೆನ್ನಲ್ಲೇ ಹೈದಾರಾಬಾದ್‍ನಲ್ಲಿ ವಿದ್ಯಾರ್ಥಿಗಳು ಪೊಲೀಸರಿಗೆ ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.  ಇದನ್ನೂ ಓದಿ: ಸುಡುವಾಗ ಪಶುವೈದ್ಯೆ ಜೀವಂತವಾಗಿದ್ಳು: ಸತ್ಯ ಬಾಯಿಬಿಟ್ಟ ಮೃಗೀಯ ಮನುಷ್ಯ

    ಏನಿದು ಪ್ರಕರಣ?
    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿ ಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.