Tag: Veterinary Doctor

  • ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿ ಅಲ್ಲ: ಸಂತೋಷ್ ಹೆಗಡೆ

    ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿ ಅಲ್ಲ: ಸಂತೋಷ್ ಹೆಗಡೆ

    ಬಾಗಲಕೋಟೆ: ಹೈದರಾಬಾದ್ ಪಶುವೈದ್ಯೆಯ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿದ ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಗ್ರಹಿಸಿದ್ದಾರೆ.

    ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂತೋಷ್ ಹೆಗಡೆ, ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿ ಅಲ್ಲ. ಆದರೂ ಕೆಲವು ಬಾರಿ ಮಾನವೀಯ ಹಕ್ಕಿನ ಮೇಲೆ ಗಲ್ಲು ಶಿಕ್ಷೆ ಬೇಡ ಎಂದು ವಾದ ಮಾಡುತ್ತಾರೆ. ಇದು ಮಾನವೀಯತೆ ಇಲ್ಲದ ಕ್ರೂರವಾದಂತಹ ಕೃತ್ಯ. ಆದ್ದರಿಂದ ಇಂತಹ ಘಟನೆಯಾದಾಗ ಗಲ್ಲು ಶಿಕ್ಷೆಯೇ ಆಗಬೇಕು. ಅದು ವಿಳಂಬವಾಗಬಾರದು ತೀವ್ರಗತಿಯಲ್ಲಿ ತೀರ್ಪು ಪ್ರಕಟವಾಗಬೇಕು. ತಡವಾದರೆ ಅದರ ಪ್ರಾಮುಖ್ಯತೆ ಹೋಗುತ್ತದೆ ಎಂದರು.

    ಡಿಕೆಶಿಗೆ ಪುನಃ ಇಡಿ ನೊಟೀಸ್ ನೀಡಿರುವ ವಿಚಾರದ ಬಗ್ಗೆ ಮಾತನಾಡಿ, ವಿಚಾರಣೆಗೆ ಕರೆದರೆ ಹೋಗಲೇಬೇಕು. ಅದಕ್ಕೆ ರಾಜಕೀಯ ಪಿತೂರಿ ಎಂದು ಹೇಳುವುದು ಸರಿಯಲ್ಲ. ಇಡಿ ಆದೇಶ ನೊಟೀಸ್ ಪ್ರಕಾರ ನಡೆಯಬೇಕು. ತಪ್ಪು ಮಾಡಿದ ಆರೋಪದ ಮೇಲೆ ಇವೆಲ್ಲ ಪ್ರಕ್ರಿಯೆಗಳು ನಡೆಯುತ್ತವೆ ಎಂದರು. ಇದೇ ವೇಳೆ ಬಿಜೆಪಿಯಿಂದ ಇಡಿ ಸ್ವಾಯತ್ತ ಸಂಸ್ಥೆ ದುರುಪಯೋಗ ಎಂಬ ಕಾಂಗ್ರೆಸ್ ಆರೋಪ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇಬ್ಬರು ಒಂದೇ ತಾನೇ? ಇವರ ಬಗ್ಗೆ ಅವರು ಕೇಳಿದರೆ ನೀವು ಮಾಡಿಲ್ಲವೇನ್ರಿ ಎಂದು ಅವರು ಹೇಳುತ್ತಾರೆ ಎಂದು ತಿರುಗೇಟು ನೀಡಿದರು.

    ರಾಮಮಂದಿರ ಐತಿಹಾಸಿಕ ತೀರ್ಪಿನ ಬಗ್ಗೆ ಮಾತನಾಡಿ, ಅದು ಸರಿಯೋ ತಪ್ಪು ಎಂದು ನಾನು ಪರಾಮರ್ಶೆಗೆ ಇಳಿಯುವುದಿಲ್ಲ. ಇದು ದೇಶದ ಶಾಂತಿಗಾಗಿ ಕೊಟ್ಟ ತೀರ್ಪು. ಇದನ್ನು ನಾವು ಪಾಲಿಸಲೇಬೇಕು. ಪ್ರತಿಭಟನೆಯೂ ಬೇಡ, ಸಂಭ್ರಮವೂ ಬೇಡ ಎಂದು ಹೇಳಿದರು.

    ಸುಪ್ರೀಂ ತೀರ್ಪು ಮರುಪರಿಶೀಲನೆ ಹಾಕುತ್ತಾರೆ ಕೆಲವರಿಗೆ ಇಲ್ಲಿ ಶಾಂತಿ ಇರುವುದು ಬೇಕಾಗಿಲ್ಲ. ಮರುಪರಿಶೀಲನೆ ಅರ್ಜಿ ಹಾಕಿದ ಧರ್ಮದವರಲ್ಲೇ ಕೆಲವರು ನಾವು ಅರ್ಜಿ ಹಾಕುವುದಿಲ್ಲ ಎಂದು ಹೇಳುತ್ತಿದ್ದಾರೆ. ದೇಶದಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅದನ್ನೆಲ್ಲ ಮರೆತುಬಿಡೋಣ. ಧರ್ಮದ ವಿಚಾರ ಕೋರ್ಟ್ ನವರು ತೀರ್ಪು ಕೊಡುವುದಕ್ಕೆ ಅರ್ಹರಲ್ಲ ಎಂಬುದು ನನ್ನ ಅನಿಸಿಕೆ. ಯಾರದೂ ಸ್ವಂತ ಜಮೀನು ಹೋಗಿಲ್ಲ. ತೀರ್ಪಿಗೆ ಮನ್ನಣೆ ಕೊಡೋಣ ಎಂದರು. ಅಲ್ಲದೆ ಜೈಲಿಗೆ ಹೋಗಿ ಜಾಮೀನು ಪಡೆದು ಬಂದವರಿಗೆ ಹಾರ ಹಾಕಿ ಸಂಭ್ರಮಿಸುವುದು ತಪ್ಪು ಎಂದು ಪುನರುಚ್ಚರಿಸಿದರು.

  • ಪಶುವೈದ್ಯೆ ಅತ್ಯಾಚಾರಿಗಳಿಗೆ ಜೈಲಿನಲ್ಲಿ ಮಟನ್ ಊಟ, ಹೈ ಸೆಕ್ಯೂರಿಟಿ

    ಪಶುವೈದ್ಯೆ ಅತ್ಯಾಚಾರಿಗಳಿಗೆ ಜೈಲಿನಲ್ಲಿ ಮಟನ್ ಊಟ, ಹೈ ಸೆಕ್ಯೂರಿಟಿ

    ಹೈದರಾಬಾದ್: ಸಂಚು ರೂಪಿಸಿ ಪಶುವೈದ್ಯೆಯನ್ನು ಅತ್ಯಾಚಾರಗೈದು, ಕೊಲೆ ಮಾಡಿ ಅಮಾನುಷವಾಗಿ ಸುಟ್ಟುಹಾಕಿ ವಿಕೃತಿ ಮೆರೆದಿದ್ದ ಕಾಮ ಪಿಶಾಚಿಗಳಿಗೆ ಜೈಲಿನಲ್ಲಿ ಹೈ ಸೆಕ್ಯೂರಿಟಿ ನೀಡಲಾಗುತ್ತಿದ್ದು, ರಾತ್ರಿ ಊಟಕ್ಕೆ ಮಟನ್ ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತಿಳಿದು ಹೀನಾಯ ಕೃತ್ಯವೆಸೆಗಿದ ನೀಚರನ್ನು ಗಲ್ಲಿಗೇರಿಸುವ ಬದಲು ಸತ್ಕರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೈದರಾಬಾದ್ ಪಶುವೈದ್ಯೆ ಮೇಲಿನ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಡೀ ದೇಶ ಮಮ್ಮಲ ಮರುಗಿದೆ. ಕೃತ್ಯವೆಸೆಗಿದ ನಾಲ್ವರು ಆರೋಪಿಗಳನ್ನು ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜೈಲಿನಲ್ಲಿರಿಸಲಾಗಿದೆ. ಒಂದೆಡೆ ಈ ದುಷ್ಟರನ್ನು ನಮಗೆ ಒಪ್ಪಿಸಿ ನಾವೇ ಶಿಕ್ಷೆ ವಿಧಿಸುತ್ತೇವೆ ಎಂದು ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಆದರೆ ಜೈಲಿನ ಕೈಪಿಡಿ ಪ್ರಕಾರ, ಭಾನುವಾರ ಕೈದಿಗಳಿಗೆ ಬಾಡೂಟ ನೀಡಲಾಗುತ್ತದೆ. ಆ ನಿಯಮದಂತೆ ಜೈಲಿನ ಒಳಗಿರುವ ಆರೋಪಿಗಳಿಗೂ ಮಟನ್ ಊಟ ನೀಡಲಾಗಿದ್ದು, ಬಿಗಿಭದ್ರತೆ ಒದಗಿಸಲಾಗಿದೆ. ಇದನ್ನೂ ಓದಿ: ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ಚೆರಪಲ್ಲಿಯ ಜೈಲಿನಲ್ಲಿ ಬಿಗಿಭದ್ರತೆಯ ಒದಗಿಸಲಾಗಿದೆ. ಭಾನುವಾರ ಮಧ್ಯಾಹ್ನದ ಊಟಕ್ಕೆ ಆರೋಪಿಗಳಿಗೆ ದಾಲ್ ಹಾಗೂ ಅನ್ನವನ್ನು ನೀಡಲಾಗಿತ್ತು. ಆದರೆ ರಾತ್ರಿ ಊಟಕ್ಕೆ ಮಟನ್ ಕರಿ ನೀಡಲಾಗಿತ್ತು ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಬಗ್ಗೆ ತಿಳಿದ ಸಾರ್ವಜನಿಕರು ರೊಚ್ಚಿಗೆದ್ದಿದ್ದು, ನಡುರಸ್ತೆಯಲ್ಲಿ ಕೊಂದು ಶಿಕ್ಷೆ ನೀಡಬೇಕಾದ ಕಾಮುಕರಿಗೆ ಜೈಲಿನಲ್ಲಿ ಸತ್ಕರಿಸುತ್ತಿದ್ದೀರಾ ಎಂದು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಸ್ವತಃ ಆರೋಪಿ ತಾಯಿಯೇ ನನ್ನ ಮಗನ ತಪ್ಪು ಮಾಡಿದ್ದಾನೆ ಎಂದು ಸಾಬೀತಾದರೆ ಸಂತ್ರಸ್ತೆಯನ್ನು ಕೊಲೆಗೈದಂತೆ ಆತನನ್ನು ಕೊಲೆ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ದೇಶದೆಲ್ಲೆಡೆ ಮಹಿಳೆಯರ ಮೇಲೆ ನಡೆಯುತ್ತಿರುವ ಕಾಮುಕರ ಅಟ್ಟಹಾಸ ಕೊನೆಯಾಗಬೇಕು. ರೇಪ್ ಆರೋಪಿಗಳನ್ನು ಗಲ್ಲಿಗೇರಿಸಿ ಆಗ ವಿಕೃತಿ ಮೆರೆಯಲು ದುಷ್ಕರ್ಮಿಗಳು ಹೆದರುತ್ತಾರೆ ಎಂಬ ಕೂಗುಗಳು ಕೇಳಿಬರುತ್ತಿವೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  • ಕರೆ ಮಾಡಿದ ಏಳು ಸೆಕೆಂಡಿನಲ್ಲಿ ಉತ್ತರ, ಒಂಬತ್ತು ನಿಮಿಷದಲ್ಲಿ ಸ್ಥಳದಲ್ಲಿ- ಭಾಸ್ಕರ್ ರಾವ್ ಭರವಸೆ

    ಕರೆ ಮಾಡಿದ ಏಳು ಸೆಕೆಂಡಿನಲ್ಲಿ ಉತ್ತರ, ಒಂಬತ್ತು ನಿಮಿಷದಲ್ಲಿ ಸ್ಥಳದಲ್ಲಿ- ಭಾಸ್ಕರ್ ರಾವ್ ಭರವಸೆ

    – ಸುರಕ್ಷ ಆ್ಯಪ್ ಬಳಸಲು ಸೂಚನೆ

    ಬೆಂಗಳೂರು: ಪಶು ವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಂತರ ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದು, ಯಾರೇ ಕರೆ ಮಾಡಿದರೂ ಕೇವಲ ಏಳು ಸೆಕೆಂಡ್‍ನಲ್ಲಿ ಪೊಲೀಸರು ಉತ್ತರಿಸುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭರವಸೆ ನೀಡಿದ್ದಾರೆ.

    ಹೈದ್ರಾಬಾದ್ ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಮಸ್ಯೆ ಇದ್ದರೂ ತಕ್ಷಣ ಸಹಾಯವಾಣಿ 100ಕ್ಕೆ ಕರೆ ಮಾಡಿ. ಕರೆ ಮಾಡಿದ ಏಳು ಸೆಕೆಂಡ್ ನಲ್ಲಿ ಸ್ವೀಕರಿಸಿ, ನಿಮ್ಮ ಸಮಸ್ಯೆ ಆಲಿಸುತ್ತಾರೆ. ಬೆಂಗಳೂರಿಗರು ಮಾತ್ರವಲ್ಲ ಹೊರಗಿನಿಂದ ಬಂದವರು ಸಹ ಕರೆ ಮಾಡಿ ದೂರು ನೀಡಿದರೆ ತಕ್ಷಣ ಸ್ಪಂದಿಸಲಾಗುವುದು. ಈ ಕುರಿತು ನಾನು ಶೇ.100ರಷ್ಟು ಭರವಸೆ ನೀಡುತ್ತೇನೆ. ಕರೆ ಮಾತ್ರವಲ್ಲ ಸಂದೇಶವನ್ನು ಸಹ ಕಳುಹಿಸಬಹುದು ಎಂದರು.

    ಕರೆ ಮಾಡಿದ ಕೆಲವೇ ಸೆಕೆಂಡ್‍ನಲ್ಲಿ ಉತ್ತರಿಸುತ್ತಾರೆ. ಮಾತ್ರವಲ್ಲದೆ ಕೆಲವೇ ನಿಮಿಷಗಳಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸುತ್ತಾರೆ. ಬೆಂಗಳೂರಿಗರು ಭಯ ಪಡುವ ಅಗತ್ಯವಿಲ್ಲ. ಸಾರ್ವಜನಿಕ ಪ್ರತಿಯೊಂದು ಕರೆಗೆ ನಾವು ಸ್ಪಂದಿಸುತ್ತೇವೆ. ಸಾರ್ವಜಕರು ಈ ಕ್ಷಣದಿಂದಲೆ ಕರೆ ಮಾಡಬಹುದು. ಕರೆ ಮಾಡಿದ ಒಂಬತ್ತು ನಿಮಿಷದಲ್ಲಿ ನಾವು ಸ್ಥಳಕ್ಕೆ ಬರುತ್ತೇವೆ ಎಂದು ತಿಳಿಸಿದರು.

    ಮಹಿಳೆಯರು ‘ಸುರಕ್ಷ’ ಆಪ್ ಬಳಸಬೇಕು, ಕೇವಲ ಮಹಿಳೆಯರು ಮಾತ್ರವಲ್ಲ ಪುರುಷರು ಸಹ ಈ ಆ್ಯಪ್ ಬಳಸಬೇಕು. ನಿಮಗೆ ಸಮಸ್ಯೆ ಆದಾಗ ಆಪ್ ನಿಮಗೆ ಸಹಾಯ ಮಾಡುತ್ತದೆ. ಕೇವಲ ಒಂದು ಬಟನ್ ಒತ್ತುವುದರಿಂದ ಪೊಲೀಸರು ನೀವಿದ್ದ ಸ್ಥಳಕ್ಕೆ ಬರುತ್ತಾರೆ. ಅಲ್ಲದೆ ನಿಮ್ಮ ಮೊಬೈಲ್ ಕ್ಯಾಮೆರಾ ಆನ್ ಅಗುತ್ತೆ, ನಿಮಗೆ ಏನಾಗಿದೆ ಎಂಬುದು ಕಂಟ್ರೋಲ್ ರೂಮ್ ನಲ್ಲಿರುವವರಿಗೆ ತಿಳಿಯುತ್ತದೆ. ಎಲ್ಲರೂ ಇದನ್ನು ಬಳಸಬೇಕು ಎಂದರು.

    26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಕೋರ್ಟ್ ಆದೇಶಿಸಿದೆ.

    ರಿಮ್ಯಾಂಡ್ ಹೋಂನಲ್ಲಿ ಆರೋಪಿಗಳಿಂದ ಪೊಲೀಸರು ಸತ್ಯ ಕಕ್ಕಿಸುತ್ತಿದ್ದು, ತೆಲಂಗಾಣ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಉಸಿರುಗಟ್ಟಿಸಿ ಕೊಂದ ಮೇಲೂ ಪಾಪಿಗಳು ಶವವನ್ನೂ ಬಿಡದೆ ಅತ್ಯಾಚಾರಗೈದಿದ್ದರು ಎನ್ನುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ದಿನ ಕಳೆದಂತೆ ಆರೋಪಿಗಳು ಪೊಲೀಸರ ಬಳಿ ಪಶುವೈದ್ಯೆಗೆ ಯಾವ ರೀತಿಯಲ್ಲೆಲ್ಲ ಹಿಂಸೆಕೊಟ್ಟು ಕೊಲೆ ಮಾಡಲಾಯ್ತು ಎನ್ನುವ ಸತ್ಯವನ್ನು ಬಾಯಿಬಿಡುತ್ತಿದ್ದಾರೆ. ಪ್ರಕರಣವನ್ನು ಪಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ವಿಚಾರಣೆ ನಡೆಸಬೇಕೆಂದು ಹೋರಾಟ ನಡೆಸಲಾಗುತ್ತಿದ್ದು, ವಿವಿಧ ರಾಜಕೀಯ ನಾಯಕರು ಸಹ ಈ ಕುರಿತು ಒತ್ತಾಯಿಸುತ್ತಿದ್ದಾರೆ.

  • ಕಾಮುಕರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡ್ಬೇಕು: ಜಯಾ ಬಚ್ಚನ್

    ಕಾಮುಕರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡ್ಬೇಕು: ಜಯಾ ಬಚ್ಚನ್

    ನವದೆಹಲಿ: ಪಶು ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕೆಂದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ.

    ಈ ಕುರಿತು ಮೇಲ್ಮನೆ ಕಲಾಪದಲ್ಲಿ ಮಾತನಾಡಿದ ಅವರು, ಇಂತಹ ಕ್ರೂರ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು. ಸರ್ಕಾರದಿಂದ ಈ ಕುರಿತು ಸ್ಪಷ್ಟ ಹಾಗೂ ದಿಟ್ಟ ಉತ್ತರವನ್ನು ಜನತೆ ನಿರೀಕ್ಷಿಸುತ್ತಿದ್ದಾರೆ. ಏನಾಗಿದೆ ಎಂಬುದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ಈ ಪ್ರಕರಣವನ್ನು ಸರ್ಕಾರ ಹೇಗೆ ಬೇಧಿಸುತ್ತದೆ, ಸಂತ್ರಸ್ತೆ ಕುಟುಂಬಕ್ಕೆ ಹೇಗೆ ನ್ಯಾಯ ಒದಗಿಸುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಭಾವುಕರಾದರು. ಇದನ್ನೂ ಓದಿ: ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    ಘಟನೆ ನಡೆದ ಸ್ಥಳದಲ್ಲಿ ಅಧಿಕಾರಿಗಳು ಭದ್ರತೆ ಒದಗಿಸಲು ಯಾಕೆ ವಿಫಲರಾದರು, ಭದ್ರತಾ ಸಿಬ್ಬಂದಿ ತಮ್ಮ ಕೆಲಸವನ್ನು ಮಾಡುವಲ್ಲಿ ವಿಫಲವಾಗಿದ್ದಾರೆ. ಆರೋಪಿಗಳು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ, ಇಂತಹವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಇತರ ನಾಯಕರು ಸಹ ಜಯಾ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿ, ಫಾಸ್ಟ್ ಟ್ರ್ಯಾಕ್ ಕೋರ್ಟಿಗೆ ಪ್ರಕರಣವನ್ನು ಹಸ್ತಾಂತರಿಸಿ, ಸಾಧ್ಯವಾದಷ್ಟು ಬೇಗ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ತೃಣಮೂಲ ಕಾಂಗ್ರೆಸ್ ನಾಯಕ ಶಾಂತನು ಸೇನ್ ಮಾತನಾಡಿ, ಶಿಕ್ಷೆಯನ್ನು ಸಾರ್ವಜನಿಕವಾಗಿಯೇ ನೀಡಬೇಕು. ಅಂದರೆ ಜನ ಇಂತಹ ತಪ್ಪುಗಳನ್ನು ಮಾಡುವುದಕ್ಕೂ ಮುನ್ನ ಯೋಚಿಸುತ್ತಾರೆ ಎಂದರು.

    ತೆಲಂಗಾಣ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಉಸಿರುಗಟ್ಟಿಸಿ ಕೊಂದ ಮೇಲೂ ಪಾಪಿಗಳು ಶವವನ್ನೂ ಬಿಡದೆ ಅತ್ಯಾಚಾರಗೈದಿದ್ದರು ಎನ್ನುವ ಸತ್ಯ ಬಯಲಾಗಿದೆ. ದಿನ ಕಳೆದಂತೆ ಆರೋಪಿಗಳು ಪೊಲೀಸರ ಬಳಿ ಪಶುವೈದ್ಯೆಗೆ ಯಾವ ರೀತಿಯಲ್ಲೆಲ್ಲ ಹಿಂಸೆಕೊಟ್ಟು ಕೊಲೆ ಮಾಡಲಾಯ್ತು ಎನ್ನುವ ಸತ್ಯವನ್ನು ಬಾಯಿಬಿಡುತ್ತಿದ್ದಾರೆ. ವೈದ್ಯೆಯ ಮೇಲೆ ಅವರು ಎಷ್ಟರ ಮಟ್ಟಿಗೆ ವಿಕೃತಿ ಮೆರೆದಿದ್ದಾರೆ ಎಂದರೆ ಆಕೆಯನ್ನು ಕೊಲೆ ಮಾಡಿದ ಬಳಿಕವೂ ಶವವನ್ನು ಬಿಡದೇ ಅತ್ಯಾಚಾರಗೈದಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಕೋರ್ಟ್ ಆದೇಶಿಸಿದೆ

  • ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    -ಲಾರಿ ಕ್ಯಾಬಿನ್‍ನಲ್ಲೇ ರೇಪ್

    ಹೈದರಾಬಾದ್: ತೆಲಂಗಾಣ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಉಸಿರುಗಟ್ಟಿಸಿ ಕೊಂದ ಮೇಲೂ ಪಾಪಿಗಳು ಶವವನ್ನೂ ಬಿಡದೆ ಅತ್ಯಾಚಾರಗೈದಿದ್ದರು ಎನ್ನುವ ಸತ್ಯ ಬಯಲಾಗಿದೆ.

    ದಿನ ಕಳೆದಂತೆ ಆರೋಪಿಗಳು ಪೊಲೀಸರ ಬಳಿ ಪಶುವೈದ್ಯೆಗೆ ಯಾವ ರೀತಿಯಲ್ಲೆಲ್ಲ ಹಿಂಸೆಕೊಟ್ಟು ಕೊಲೆ ಮಾಡಲಾಯ್ತು ಎನ್ನುವ ಸತ್ಯವನ್ನು ಬಾಯಿಬಿಡುತ್ತಿದ್ದಾರೆ. ವೈದ್ಯೆಯ ಮೇಲೆ ಅವರು ಎಷ್ಟರ ಮಟ್ಟಿಗೆ ವಿಕೃತಿ ಮೆರೆದಿದ್ದಾರೆ ಎಂದರೆ ಆಕೆಯನ್ನು ಕೊಲೆ ಮಾಡಿದ ಬಳಿಕವೂ ಶವವನ್ನು ಬಿಡದೇ ಅತ್ಯಾಚಾರಗೈದಿದ್ದಾರೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಸದ್ಯ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದು, ಹೇಗೆಲ್ಲಾ ಸಂತ್ರಸ್ತೆಯನ್ನು ಕಾಮುಕರು ಕೊಂದರು ಎಂಬುದು ಬಯಲಾಗುತ್ತಿದೆ. ಆರೋಪಿಗಳು ಲಾರಿಯ ಕ್ಯಾಬಿನ್‍ನಲ್ಲಿ ಪಶುವೈದ್ಯೆಯನ್ನು ಒಬ್ಬರಾದ ಮೇಲೋಬ್ಬರು ಅತ್ಯಾಚಾರಗೈದರು. ಬಳಿಕ ಆರೋಪಿ ಶಿವಾ ಸಂತ್ರಸ್ತೆಯ ಸ್ಕೂಟಿಯ ಪಂಕ್ಚರ್ ಆಗಿದ್ದ ಟಯರ್ ಗೆ ಗಾಳಿ ಹಾಕಿಸಿಕೊಂಡು ಬರಲು ಹೋಗಿದ್ದನು. ಆತ ವಾಪಸ್ ಬರುವಷ್ಟರಲ್ಲಿ ಉಳಿದ ಆರೋಪಿಗಳು ಅತ್ಯಾಚಾರ ಮಾಡಿ ಸಂತ್ರಸ್ತೆಯ ಬಾಯಿ, ಮೂಗು ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಇದನ್ನೂ ಓದಿ: ಪಶುವೈದ್ಯೆ ರೇಪ್, ಕೊಲೆ ಪ್ರಕರಣ- ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರ ಅಮಾನತು

    ಆದರೂ ಬಿಡದ ಶಿವಾ ಸಂತ್ರಸ್ತೆಯ ಶವದ ಮೇಲೆಯೇ ಅತ್ಯಾಚಾರಗೈದನು. ಬಳಿಕ ಮೃತದೇಹವನ್ನು ಬೆಡ್ ಶೀಟ್‍ನಲ್ಲಿ ಸುತ್ತಿ, ಜನಗಳು ಓಡಾಡದ ಸ್ಥಳದಲ್ಲಿ ಸೇತುವೆ ಬಳಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿ ಹಾಕಿದರು ಎನ್ನುವ ಸತ್ಯವನ್ನು ಆರೋಪಿಗಳು ಪೊಲೀಸರ ಎದುರು ಬಾಯಿ ಬಿಟ್ಟಿದ್ದಾರೆ.

    ಪೆಟ್ರೋಲ್ ಬಂಕ್ ಸಿಬ್ಬಂದಿಯಿಂದ ಸುಳಿವು:
    ಮಾಧ್ಯಮಗಳಲ್ಲಿ ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ನೋಡಿದಾಗ ಪೆಟ್ರೋಲ್ ಬಂಕ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿ, ಈ ಘಟನೆ ನಡೆದ ರಾತ್ರಿ ಇಬ್ಬರು ವ್ಯಕ್ತಿಗಳು ಬಂಕ್‍ನಲ್ಲಿ ಲೂಸ್ ಪೆಟ್ರೋಲ್ ಖರೀದಿಸಲು ಬಂದಿದ್ದರು ಎಂದು ತಿಳಿಸಿದ್ದರು. ಅಲ್ಲದೆ ಆ ವ್ಯಕ್ತಿಗಳನ್ನು ನಾನು ಗುರುತಿಸಬಲ್ಲೆ, ಅವರ ಅನುಮಾನಾಸ್ಪದ ನಡವಳಿಕೆ ನೋಡಿ ನಾನು ಅವರ ಮುಖವನ್ನು ಹಾಗೂ ಸ್ಕೂಟಿ ನಂಬರ್ ಅನ್ನು ನೆನಪಿಟ್ಟುಕೊಂಡಿದ್ದೆ ಎಂದು ಸಿಬ್ಬಂದಿ ಹೇಳಿದ್ದರು. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಪೆಟ್ರೋಲ್ ಖರೀದಿಸಲು ಆರೋಪಿಗಳು ಸ್ಕೂಟಿಯಲ್ಲಿ ಪೆಟ್ರೋಲ್ ಬಂಕ್ ಬಳಿ ಬಂದಿದ್ದರು. ಈ ವೇಳೆ ಆರೋಪಿಗಳ ವರ್ತನೆ ನೋಡಿ ಅನುಮಾನ ಬಂದಿತ್ತು. ಅಲ್ಲದೆ ಆರೋಪಿಗಳು ಪ್ಲಾಸ್ಟಿಕ್ ಬಾಟಲಿಯಲ್ಲಿ ಪೆಟ್ರೋಲ್ ತುಂಬಿ ಕೊಡುವಂತೆ ಹೇಳಿದಾಗ ನಾನು ನಿರಾಕರಿಸಿದ್ದೆ ಎಂದು ಸಿಬ್ಬಂದಿ ತಿಳಿಸಿದ್ದರು.

    ಸಿಬ್ಬಂದಿ ಕೊಟ್ಟ ಮಾಹಿತಿ ಬಳಿಕ ಪೊಲೀಸರು ಪೆಟ್ರೋಲ್ ಬಂಕ್ ಬಳಿ ಹೋಗಿ ವಿಚಾರಿಸಿದಾಗ, ಪ್ರಕರಣ ನಡೆದ ರಾತ್ರಿ ಬಂಕ್‍ನಿಂದ ಪೆಟ್ರೋಲ್ ತೆಗೆದುಕೊಂಡು ಹೋಗಲು ಬಂದವರೇ ಆರೋಪಿಗಳು ಎನ್ನುವುದು ತಿಳಿದುಬಂದಿತ್ತು. ಈ ಮಾಹಿತಿಯಿಂದಲೇ ಆರೋಪಿಗಳನ್ನು ಪೊಲೀಸರು ಬಂಧಿಸಲು ಸಹಾಯವಾಯ್ತು.

  • ಪಶುವೈದ್ಯೆ ರೇಪ್, ಕೊಲೆ ಪ್ರಕರಣ- ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರ ಅಮಾನತು

    ಪಶುವೈದ್ಯೆ ರೇಪ್, ಕೊಲೆ ಪ್ರಕರಣ- ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರ ಅಮಾನತು

    – ದೂರು ಕೊಡಲು ಹೋದ ತಂದೆಯನ್ನು ಅಲೆದಾಡಿಸಿದ ಪೊಲೀಸರು

    ಹೈದರಾಬಾದ್: ತೆಲಂಗಾಣ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

    ಮೊದಲು ಪ್ರಿಯಾಂಕಾ ಅವರು ನಾಪತ್ತೆಯಾಗಿದ್ದಾರೆ ಎಂದು ಪೋಷಕರು ಪೊಲೀಸರಿಗೆ ದೂರು ಕೊಡಲು ಹೋದಾಗ ಶಂಶಾಬಾದ್ ಠಾಣೆಯ ಪೊಲೀಸರು ನಿರ್ಲಕ್ಷ್ಯ ತೋರಿದ್ದರು. ಪೋಷಕರು ನಾಪತ್ತೆ ದೂರು ನೀಡಲು ಹೋದಾಗ ಒಂದು ಠಾಣೆಯಿಂದ ಇನ್ನೊಂದು ಠಾಣೆಗೆ ಅವರನ್ನು ಪೊಲೀಸರು ಅಲೆದಾಡಿಸಿದ್ದರು. ಒಂದು ವೇಳೆ ಪೊಲೀಸರು ನಿರ್ಲಕ್ಷ್ಯ ತೋರದೇ ತಮ್ಮ ಕೆಲಸ ಮಾಡಿದ್ದರೆ ಈ ಅನಾಹುತ ನಡೆಯುವುದನ್ನು ತಡೆಯಬಹುದಿತ್ತು ಎಂದು ಮಹಿಳಾ ರಾಷ್ಟ್ರೀಯ ಆಯೋಗ(ಎನ್‍ಡಬ್ಲುಸಿ) ಕಾರ್ಯಕರ್ತರು ಆರೋಪಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಮೆರೆದ ಶಂಶಾಬಾದ್ ಪೊಲೀಸ್ ಠಾಣೆಯ ಎಸ್‍ಐ ಎಂ. ರವಿ ಕುಮಾರ್, ರಾಜೀವ್ ಗಾಂಧಿ ಅಂತರಾಷ್ಟ್ರೀಯ ಏರ್‌ಪೋರ್ಟ್‌ ಪೊಲೀಸ್ ಠಾಣೆಯ ಮುಖ್ಯ ಪೇದೆ ಪಿ. ವೇಣುಗೋಪಾಲ್ ರೆಡ್ಡಿ ಹಾಗೂ ಎ. ಸತ್ಯನಾರಾಯಣ ಗೌಡ್ ಅವರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ಈ ಬಗ್ಗೆ ಸೈಬರಾಬಾದ್ ಪೊಲೀಸ್ ಆಯುಕ್ತರಾದ ವಿ.ಸಿ ಸಜ್ಜನರ್ ಅವರು ಪ್ರತಿಕ್ರಿಯಿಸಿ, ಈಗಾಗಲೇ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದೇವೆ. ಮುಂದಿನ ಆದೇಶದವರೆಗೂ ಅವರು ಕೆಲಸಕ್ಕೆ ಬರುವಂತಿಲ್ಲ. ಪೊಲೀಸರು ಪ್ರಿಯಾಂಕ ನಾಪತ್ತೆ ದೂರು ದಾಖಲಿಸಿಕೊಳ್ಳಲು ಸಮಯ ಹಾಳು ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ ಎಂದು ತಿಳಿಸಿದರು.

    ಈ ಬಗ್ಗೆ ತಂದೆ ಮಾತನಾಡಿ, ಪ್ರಿಯಾಂಕ ಬುಧವಾರ ರಾತ್ರಿ 9.15ಕ್ಕೆ ಸೋದರಿ ಜೊತೆ ಮಾತನಾಡಿದ್ದಳು. ಮತ್ತೆ ರಾತ್ರಿ 11 ಗಂಟೆಗೆ ಕರೆ ಮಾಡಿದಾಗ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಚಾರ್ಜ್ ಇಲ್ಲದೆ ಫೋನ್ ಆಫ್ ಆಗಿರಬಹುದೆಂದು ತಿಳಿದು ಆಕೆಯನ್ನು ಹುಡುಕಿಕೊಂಡು ಟೋಲ್ ಪ್ಲಾಜಾ ಬಳಿ ನಾವು ಹೋದೆವು. ಆದರೆ ಅಲ್ಲಿ ಪ್ರಿಯಾಂಕ ಇರಲಿಲ್ಲ. ನಂತರ ಮಗಳು ಕಾಣೆಯಾದ ಬಗ್ಗೆ ದೂರು ನೀಡಲು ಶಂಶಾಬಾದ್ ಠಾಣೆಗೆ ಹೋದೆವು. ಆದರೆ ಈ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ನೆಪ ಹೇಳಿ, ಪೊಲೀಸರು ನಮ್ಮನ್ನು ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ಅಲೆದಾಡಿಸಿದರು. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಪೊಲೀಸರು ಈ ಪ್ರಕರಣ ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ ಎನ್ನುವುದನ್ನ ನಿರ್ಧರಿಸುವಲ್ಲೇ ಕಾಲ ಹರಣ ಮಾಡಿದರು. ಕೊನೆಗೆ ಇಬ್ಬರು ಕಾನ್‍ಸ್ಟೇಬಲ್‍ಗಳ ನೆರವು ಕೋರಿದೆವು. ಆದರು ಏನೂ ಪ್ರಯೋಜನವಾಗಲಿಲ್ಲ. ಮಗಳನ್ನು ಹುಡುಕಿಕೊಂಡು ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ನಾನೇ ಹೋದೆ ಎಂದು ತಂದೆ ಅಳಲನ್ನು ತೋಡಿಕೊಂಡರು.

    26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್‍ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಕೋರ್ಟ್ ಆದೇಶಿಸಿದೆ.

    ಮಗನ ಕೃತ್ಯಕ್ಕೆ ತಾಯಿ ಕಿಡಿ:
    ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಚೆನ್ನಕೇಶವುಲು ತಾಯಿ ಪ್ರತಿಕ್ರಿಯಿಸಿ, ಮಗನ ಅಮಾನುಷ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನನ್ನ ಮಗ ಈ ಪಾಪ ಮಾಡಿದ್ದಾನೆ ಎಂದು ಸಾಬೀತಾದರೆ ಖಂಡಿತಾ ಆತನಿಗೆ ಶಿಕ್ಷೆಯಾಗಬೇಕು. ಬೇಕಾದರೆ ಪ್ರಿಯಾಂಕ ರೆಡ್ಡಿಯನ್ನು ಹೇಗೆ ಆರೋಪಿಗಳು ಅಮಾನುಷವಾಗಿ ಕೊಲೆಗೈದಿದ್ದಾರೋ ಹಾಗೆಯೇ ನನ್ನ ಮಗನನ್ನೂ ಹತ್ಯೆ ಮಾಡಿ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.

    ನಾನು ಒಬ್ಬಳು ಹೆಣ್ಣು. ನನಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಕ್ಕಳಿಗೆ ಹೀಗಾದರೆ ಹೆತ್ತ ಕರುಳು ಎಷ್ಟು ನೋವು ಪಡುತ್ತದೆ ಎಂದು ನನಗೂ ತಿಳಿದಿದೆ. ನನ್ನ ಮಗ ತಪ್ಪಿತಸ್ಥ ಆಗಿದ್ದರೆ ಆತನಿಗೆ ಶಿಕ್ಷೆ ಖಂಡಿತ ಆಗಬೇಕು. ಈ ರೀತಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಹೀನಾಯ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆ ಕೊಡಬೇಕು. ಆಗ ಮುಂದೆ ಇಂತಹ ದುಷ್ಕೃತ್ಯಕ್ಕೆ ಯಾರು ಕೈ ಹಾಕಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹ:
    ಈಗಾಗಲೇ ದೇಶಾದ್ಯಂತ ಈ ಪ್ರಕರಣ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಪ್ರಿಯಾಂಕ ರೆಡ್ಡಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಿ ಎಂದು ಎಲ್ಲೆಡೆ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲದೆ ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ದೊಡ್ಡ ಮೊತ್ತದ ದಂಡ ವಿಧಿಸಿ ಬಿಸಿ ಮುಟ್ಟಿಸಿ ನಿಯಮ ಪಾಲಿಸುವಂತೆ ಸರ್ಕಾರ ಮಾಡಿದೆ. ಅದರಂತೆ ಅತ್ಯಾಚಾರಿಗಳಿಗೆ ಗಲ್ಲಿಗೇರಿಸಿ, ಆಗ ಕಾಮುಕರ ಅಟ್ಟಹಾಸ ಅಂತ್ಯವಾಗುತ್ತದೆ. ಇಂಥವರಿಗೆ ಜೀವಾವಧಿ ಶಿಕ್ಷೆ ನೀಡರೆ ಆರಾಮಾಗಿ ಸಾಯುವ ತನಕ ಜೈಲಿನಲ್ಲಿ ಇರುತ್ತಾರೆ. ಅದರ ಬದಲು ಶಿಕ್ಷೆ ಸಾಬೀತಾದ ಕೂಡಲೇ ಗಲ್ಲಿಗೇರಿಸಿ ಎಂದು ಆಗ್ರಹಿಸಿದ್ದಾರೆ.

  • ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣದ ಆರೋಪಿಯೊರ್ವನ ತಾಯಿ, ಸಂತ್ರಸ್ತೆಯನ್ನು ಕೊಲೆ ಮಾಡಿದ ಹಾಗೆಯೇ ತಪ್ಪು ಮಾಡಿದ ನನ್ನ ಮಗನನ್ನು ಕೊಂದುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ಈ ಪ್ರಕರಣ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದು, ಪ್ರಿಯಾಂಕಾ ರೆಡ್ಡಿ ಸಾವಿಗೆ ನ್ಯಾಯ ಕೊಡಿಸಿ ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಜನರು ಸಿಡಿದೆದ್ದಿದ್ದಾರೆ. ಈ ಮಧ್ಯೆ ಆರೋಪಿ ಚೆನ್ನಕೇಶವುಲು ತಾಯಿ ಪ್ರತಿಕ್ರಿಯಿಸಿ, ಮಗನ ಅಮಾನುಷ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನನ್ನ ಮಗ ಈ ಪಾಪ ಮಾಡಿದ್ದಾನೆ ಎಂದು ಸಾಬೀತಾದರೆ ಖಂಡಿತಾ ಆತನಿಗೆ ಶಿಕ್ಷೆಯಾಗಬೇಕು. ಬೇಕಾದರೆ ಪ್ರಿಯಾಂಕ ರೆಡ್ಡಿಯನ್ನು ಹೇಗೆ ಆರೋಪಿಗಳು ಅಮಾನುಷವಾಗಿ ಕೊಲೆಗೈದಿದ್ದಾರೋ ಹಾಗೆಯೇ ನನ್ನ ಮಗನನ್ನೂ ಹತ್ಯೆ ಮಾಡಿ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

    ನಾನು ಒಬ್ಬಳು ಹೆಣ್ಣು. ನನಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಕ್ಕಳಿಗೆ ಹೀಗಾದರೆ ಹೆತ್ತ ಕರುಳು ಎಷ್ಟು ನೋವು ಪಡುತ್ತದೆ ಎಂದು ನನಗೂ ತಿಳಿದಿದೆ. ನನ್ನ ಮಗ ತಪ್ಪಿತಸ್ಥ ಆಗಿದ್ದರೆ ಆತನಿಗೆ ಶಿಕ್ಷೆ ಖಂಡಿತ ಆಗಬೇಕು. ಈ ರೀತಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಹೀನಾಯ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆ ಕೊಡಬೇಕು. ಆಗ ಮುಂದೆ ಇಂತಹ ದುಷ್ಕೃತ್ಯಕ್ಕೆ ಯಾರು ಕೈ ಹಾಕಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಈಗಾಗಲೇ ದೇಶಾದ್ಯಂತ ಈ ಪ್ರಕರಣ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ದೊಡ್ಡ ಮೊತ್ತದ ದಂಡ ವಿಧಿಸಿ ಬಿಸಿ ಮುಟ್ಟಿಸಿ ನಿಯಮ ಪಾಲಿಸುವಂತೆ ಸರ್ಕಾರ ಮಾಡಿದೆ. ಅದರಂತೆ ಅತ್ಯಾಚಾರಿಗಳಿಗೆ ಗಲ್ಲಿಗೇರಿಸಿ, ಆಗ ಕಾಮುಕರ ಅಟ್ಟಹಾಸ ಅಂತ್ಯವಾಗುತ್ತದೆ. ಇಂಥವರಿಗೆ ಜೀವಾವಧಿ ಶಿಕ್ಷೆ ನೀಡರೆ ಆರಾಮಾಗಿ ಸಾಯುವ ತನಕ ಜೈಲಿನಲ್ಲಿ ಇರುತ್ತಾರೆ. ಅದರ ಬದಲು ಶಿಕ್ಷೆ ಸಾಬೀತಾದ ಕೂಡಲೇ ಗಲ್ಲಿಗೇರಿಸಿ ಎಂದು ಆಗ್ರಹಿಸಿದ್ದಾರೆ.

    ಆರೋಪಿಗಳ ವೈದ್ಯಕೀಯ ಪರೀಕ್ಷೆ ಆದ ಬಳಿಕ ಪೊಲೀಸರು ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಆದೇಶಿಸಿದೆ.

  • ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

    ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿತ್ತು. ಈ ಸಂಬಂಧ ತನಿಖೆ ನಡೆದಿರುವಾಗಲೇ ಮತ್ತೋರ್ವ ಮಹಿಳೆಯ ಶವವು ಪಶುವೈದ್ಯೆ ಕೊಲೆಯಾದ ಸಮೀಪದ ಜಾಗದಲ್ಲಿ ಪತ್ತೆಯಾಗಿದೆ.

    ಹೈದರಾಬಾದ್ ಸಮೀಪ ಶಂಶಾಬಾದ್ ನಗರದ ಹೊರ ವಲಯದ ಅಂಡರ್ ಬ್ರಿಡ್ಜ್ ಕೆಳಗೆ ಗುರುವಾರ ಪಶುವೈದ್ಯ ಶವ ಸಿಕ್ಕಿತ್ತು. ಇದೇ ಜಾಗದ ಸಮೀಪದಲ್ಲಿ ಮತ್ತೋರ್ವ ಮಹಿಳೆಯ ಮೃತದೇಹವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿ.ಸಿ.ಸಜ್ಜನಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    26 ವರ್ಷದ ಪಶುವೈದ್ಯೆಯನ್ನು ಲಾರಿ ಚಾಲಕ, ಕ್ಲೀನರ್ ಮತ್ತಿಬ್ಬರು ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದಾರೆ.

    ಈ ವಿಚಾರವಾಗಿ ತೆಲಂಗಾಣ ಗೃಹ ಸಚಿವ ಮೊಹ್ಮದ್ ಮಹ್ಮೂದ್ ಅಲಿ ಅಮಾನವೀಯ ಹೇಳಿಕೆ ನೀಡಿದ್ದಾರೆ. ಪಶುವೈದ್ಯೆಯು ಯಾಕೆ ತಂಗಿಗೆ ಫೋನ್ ಮಾಡಿದ್ರು. ಅದರ ಬದಲಿಗೆ ಪೊಲೀಸರಿಗೆ ಫೋನ್ ಮಾಡಬಹುದಿತ್ತಲ್ಲವೇ ಅಂತ ಲೇವಡಿ ಮಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಳಿಕ ಸ್ಪಷ್ಟನೆ ಕೊಟ್ಟ ಮಸೂದ್, ಆಕೆ ನನ್ನ ಮಗಳ ಸಮಾನ. ನನ್ನಕಣ್ಣಲ್ಲೂ ನೀರು ಬಂದಿದೆ ಎಂದು ಹೇಳಿದ್ದಾರೆ.

  • ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    – ಪಂಕ್ಚರ್ ಸರಿ ಮಾಡುವ ನೆಪದಲ್ಲಿ ರೇಪ್
    – ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗಳು ಪತ್ತೆ
    – ಕೃತ್ಯವೆಸೆಗಿದ ಟ್ರಕ್ ಡ್ರೈವರ್ ಸೇರಿ ನಾಲ್ವರು ಅರೆಸ್ಟ್

    ಹೈದರಾಬಾದ್: ತೆಲಂಗಾಣದಲ್ಲಿ ಪಶುವೈದ್ಯೆಯನ್ನು ಓರ್ವ ಟ್ರಕ್ ಚಾಲಕ ಸೇರಿದಂತೆ ಒಟ್ಟು ನಾಲ್ಕು ಮಂದಿ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿ, ಘಟನಾ ಸ್ಥಳದಿಂದ 25 ಕಿ.ಮೀ ದೂರ ಶವವನ್ನು ಕೊಂಡೊಯ್ದು ಸುಟ್ಟಿರುವುದು ಬಯಲಾಗಿದೆ.

    ತೆಲಂಗಾಣದ ಕೊಲ್ಲೂರು ಗ್ರಾಮದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಪಶುವೈದ್ಯೆಯಾದ ಪ್ರಿಯಾಂಕಾ ರೆಡ್ಡಿ, ಬುಧವಾರ ಬೆಳಗ್ಗೆ ಶಾದ್‍ನಗರದ ತನ್ನ ಮನೆಯಿಂದ ತಾನು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ನಂತರ ರಾತ್ರಿ ಸ್ಕೂಟಿ ಪಂಕ್ಚರ್ ಆಗಿದೆ ಎಂದು ತನ್ನ ತಂಗಿಗೆ ಕರೆ ಮಾಡಿದ್ದರು. ಆ ಬಳಿಕ ಅವರ ನಾಪತ್ತೆಯಾಗಿದ್ದರು. ಆದರೆ ಗುರುವಾರ ಬೆಳಗ್ಗೆ ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ನ ಕೆಳಗೆ ಪ್ರಿಯಾಂಕಾ ಶವವಾಗಿ ಪತ್ತೆಯಾಗಿದ್ದರು.

    ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ತೊಂಡುಪಲ್ಲಿ ಟೋಲ್ ಪ್ಲಾಝಾ ಬಳಿ ಬೆಳಗ್ಗೆ ವೈದ್ಯೆ ತನ್ನ ಸ್ಕೂಟಿ ಪಾರ್ಕ್ ಮಾಡಿ ಗಚಿಬೌಲಿಗೆ ತೆರೆಳಿದ್ದರು. ಇದನ್ನು ಲಾರಿ ಚಾಲಕ ಮಹ್ಮದ್ ಪಾಷಾ, ಆತನ ಸಹಾಯಕ ಹಾಗೂ ಇನ್ನೂ ಇಬ್ಬರು ಗಮನಿಸಿದ್ದರು. ಸಂಜೆ ವೈದ್ಯೆ ಸ್ಕೂಟಿ ತೆಗೆದುಕೊಂಡು ಹೋಗಲು ಬಂದೇ ಬರುತ್ತಾರೆ ಎಂದು ತಿಳಿದುಕೊಂಡು ಬೇಕಂತಲೆ ವಾಹನವನ್ನು ಪಂಕ್ಚರ್ ಮಾಡಿದ್ದರು.

    ರಾತ್ರಿ 8 ಗಂಟೆ ವೇಳೆಗೆ ಗಚಿಬೌಲಿಯಿಂದ ವಾಪಸ್ ಆಗಿದ್ದ ವೈದ್ಯೆ ಟೋಲ್ ಬಳಿ ಸ್ಕೂಟಿ ತೆಗೆದುಕೊಂಡು ಹೋಗಲು ಬಂದಿದ್ದರು. ಆಗ ಸ್ಕೂಟಿ ಪಂಚರ್ ಆಗಿದ್ದನ್ನು ನೋಡಿ ಏನು ಮಾಡುವುದು ಎಂದು ತೋಚದೇ ಆತಂಕದಲ್ಲಿದ್ದರು. ಈ ವೇಳೆ ಮೊದಲೇ ಪ್ಲಾನ್ ಮಾಡಿಕೊಂಡಿದ್ದ ಆರೋಪಿಗಳು ಪಂಕ್ಚರ್ ರಿಪೇರಿ ಮಾಡಲು ಸಹಾಯ ಮಾಡುತ್ತೇವೆ ಎಂದು ವೈದ್ಯೆಗೆ ನಂಬಿಸಿದರು. ಬಳಿಕ ಸಹಾಯ ಮಾಡುವ ನೆಪದಲ್ಲಿ ವೈದ್ಯೆಯನ್ನು ಟೋಲ್‍ನಿಂದ ತುಸು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದರು. ನಂತರ ವೈದ್ಯೆಯನ್ನು ಕೊಲೆಗೈದು, ಮೃತದೇಹವನ್ನು ಸುಮಾರು 25 ಕಿ.ಮೀ ದೂರ ಕೊಂಡೊಯ್ದು ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ಕೆಳಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾ ಸ್ಥಳದ ಹತ್ತಿರವಿದ್ದ ಟಯರ್ ರಿಪೇರಿ ಅಂಗಡಿ ಮಾಲೀಕನನ್ನು ವಿಚಾರಿಸಿದಾಗ, ರಾತ್ರಿ ಸುಮಾರು 9:30 ಗಂಟೆಯಿಂದ 10 ಗಂಟೆ ವೇಳೆಯಲ್ಲಿ ಚಾಲಕರು ಸ್ಕೂಟಿ ತೆಗೆದುಕೊಂಡು ಬಂದಿದ್ದರು. ರಿಪೇರಿ ಆದ ಬಳಿಕ ಅದನ್ನು ತೆಗೆದುಕೊಂಡು ಹೋಗಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗೆ ಹೊರಟಾಗ ಇಬ್ಬರು ಚಾಲಕರು ಸಿಕ್ಕಿಬಿದ್ದಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆರೋಪಿಗಳ ಬಗ್ಗೆ ಪತ್ತೆಯಾಗಿದ್ದು, ಸದ್ಯ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಟೋಲ್ ಪ್ಲಾಝಾ ಬಳಿ ಇದ್ದ ವೈದ್ಯೆಯ ಸ್ಕೂಟಿ, ಬಟ್ಟೆ, ಚಪ್ಪಲಿ ಹಾಗೂ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಿಯಾಂಕಾ ಅವರ ಬಗ್ಗೆ ತಂಗಿ ಭವ್ಯ ಮಾತನಾಡಿ, ನನಗೆ ಪ್ರಿಯಾಂಕಾ ರಾತ್ರಿ 9:15 ಸುಮಾರಿಗೆ ಕರೆ ಮಾಡಿದಳು. ನನ್ನ ಬೈಕ್ ಪಂಕ್ಚರ್ ಆಗಿದೆ. ನನಗೆ ಭಯವಾಗುತ್ತಿದೆ ಎಂದು ಹೇಳಿದಳು. ನಂತರ ನಾನು ಅವಳಿಗೆ ಹತ್ತಿರದ ಟೋಲ್ ಬಳಿ ಹೋಗಲು ಹೇಳಿದೆ. ಆದರೆ ಅವಳು ನನಗೆ ತುಂಬಾ ಭಯವಾಗುತ್ತಿದೆ. ಇಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿದ್ದಾರೆ ಹಾಗೂ ತುಂಬಾ ಲಾರಿಗಳನ್ನು ಪಾರ್ಕ್ ಮಾಡಲಾಗಿದೆ ಎಂದು ಹೇಳಿದ್ದಳು.

    ನಾನು ನಂತರ ಅವಳಿಗೆ ಭಯಪಡಬೇಡ ಬೈಕನ್ನು ಅಲ್ಲೇ ನಿಲ್ಲಿಸಿ ನೀನು ಅಲ್ಲಿಂದ ಬಾ ಎಂದು ಹೇಳಿದೆ. ನಂತರ ಮತ್ತೆ ಅವಳ ಫೋನ್‍ಗೆ ಕರೆ ಮಾಡಿದಾಗ ಅವಳ ಫೋನ್ ಸ್ವಿಚ್ ಆಫ್ ಬಂತು. ಆದರೆ ಬೆಳಗ್ಗೆ ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ಕೆಳಗೆ ಪತ್ತೆಯಾಗದ ರೀತಿಯಲ್ಲಿ ಸುಟ್ಟು ಹೋದ ಅವಳ ದೇಹ ದೊರಕಿದೆ. ಆಕೆ ಹಾಕಿದ್ದ ಚೈನ್ ಲಾಕೆಟ್ ನೋಡಿ ನಾವು ದೇಹವನ್ನು ಗುರುತಿಸಿದೆವು ಎಂದು ಭವ್ಯ ತಿಳಿಸಿದ್ದರು.

  • ಆರು ಮರಿಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಮೇಕೆ

    ಆರು ಮರಿಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಮೇಕೆ

    ಕೋಲಾರ: ಮೇಕೆಯೊಂದು 6 ಮರಿಗಳಿಗೆ ಜನ್ಮ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕನ್ನಸಂದ್ರ ಗ್ರಾಮದಲ್ಲಿ ನಡೆದಿದೆ.

    ಕನ್ನಸಂದ್ರ ಗ್ರಾಮದ ನಿವಾಸಿ ರೈತ ಸುಬ್ಬಣ್ಣ ಎಂಬುವರಿಗೆ ಸೇರಿದ ಮೇಕೆ ಇಂದು ಮುಂಜಾನೆ ಆರು ಮೇಕೆ ಮರಿಗಳಿಗೆ ಜನ್ಮ ನೀಡಿದೆ. ಮೇಕೆ ಆರು ಮರಿಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ್ದರಿಂದ ಅಪರೂಪ ಎಂಬಂತೆ ಸುತ್ತಮುತ್ತಲಿನ ಗ್ರಾಮಸ್ಥರು ಮೇಕೆ ಮರಿಗಳನ್ನ ನೋಡಲು ಗುಂಪು ಗುಂಪಾಗಿ ಆಗಮಿಸುತ್ತಿದ್ದಾರೆ.

    ಸಾಮಾನ್ಯವಾಗಿ ಮೇಕೆ 2 ಅಥವಾ 3 ಮರಿಗಳಿಗೆ ಜನ್ಮ ನೀಡುತ್ತದೆ. ಆದರೆ ಈ ಮೇಕೆ 6 ಮರಿಗಳಿಗೆ ಜನ್ಮ ನೀಡಿದೆ. ಜನ್ಮ ನೀಡಿದ ಮರಿಗಳಲ್ಲಿ ನಾಲ್ಕು ಹೆಣ್ಣು ಹಾಗೂ ಎರಡು ಗಂಡು ಮರಿಗಳಾಗಿದ್ದು, ಆರು ಮರಿಗಳಿಗೆ ಜನ್ಮ ನೀಡಿರುವುದು ಅಚ್ಚರಿಯ ಸಂಗತಿಯಾಗಿದೆ.

    ಆರು ಮರಿಗಳಿಗೆ ಜನ್ಮ ನೀಡಿದ್ದರಿಂದ ಸುಬ್ಬಣ್ಣ ಪಶು ವೈದ್ಯರಿಗೆ ತಿಳಿಸಿ ಪರೀಕ್ಷೆ ಮಾಡಲು ಕರೆದುಕೊಂಡು ಬಂದಿದ್ದಾರೆ. ವೈದ್ಯರು ಸದ್ಯಕ್ಕೆ ಮೇಕೆ ಸೇರಿದಂತೆ ಎಲ್ಲಾ ಆರು ಮೇಕೆ ಮರಿಗಳು ಆರೋಗ್ಯವಾಗಿವೆ ಎಂದು ದೃಢಪಡಿಸಿದ್ದಾರೆ.