Tag: Vice President Venkaiah Naidu

  • ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನ

    ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನ

    ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

    ಇಂದು ಸಂಜೆ ಬೆಂಗಳೂರಿನ ಎಚ್‍ಎಎಲ್ ಏರ್‍ಪೋರ್ಟ್‍ಗೆ ಆಗಮಿಸಲಿರುವ ವೆಂಕಯ್ಯ ನಾಯ್ಡು ಅವರು, 4 ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಸೋಮವಾರ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ನಂತರ ಬುಧವಾರ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಬುಧವಾರ ಸಂಜೆಯೇ ಹೈದರಾಬಾದ್‍ಗೆ ತೆರಳಲಿದ್ದಾರೆ. ಇದನ್ನೂ ಓದಿ: ದತ್ತಪೀಠಕ್ಕೆ ತೆರಳ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪಿನಿಂದ ಕಲ್ಲುತೂರಾಟ

    ‘ಬೆಂಗಳೂರು ಟೆಕ್ ಸಮ್ಮಿಟ್ 2021’ ಕಾರ್ಯಕ್ರಮದಲ್ಲಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ದಾವೋಸ್ ನಲ್ಲಿರುವ ವಿಶ್ವ ಆರ್ಥಿಕ ವೇದಿಕೆಯ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ ಎನ್ನಲಾಗುತ್ತಿದ್ದು, ಈ ಸಮ್ಮಿಟ್ ನಿಂದಾಗಿ ತಂತ್ರಜ್ಞಾನ ಕ್ಷೇತ್ರ ಇನ್ನಷ್ಟು ವಿಸ್ತರಣೆ ಆಗಲಿದೆ ಮತ್ತು ಉದ್ಯೋಗವಕಾಶಗಳೂ ಕೂಡ ಹೆಚ್ಚಲಿವೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಮೊಬೈಲ್ ಜಪ್ತಿ – ಫೋನ್ ನೋಡಿ ಪೋಷಕರು ಶಾಕ್

  • ಉಪರಾಷ್ಟ್ರಪತಿಗಳಿಂದ ಬಿಆರ್‌ಟಿಸಿ ಲೋಕಾರ್ಪಣೆ!

    ಉಪರಾಷ್ಟ್ರಪತಿಗಳಿಂದ ಬಿಆರ್‌ಟಿಸಿ ಲೋಕಾರ್ಪಣೆ!

    -ನವನಗರದಲ್ಲಿ ಹೈಟೆಕ್ ವ್ಯವಸ್ಥೆ

    ಹುಬ್ಬಳ್ಳಿ: ಮಹಾನಗರಗಳಲ್ಲಿ ಸುಸ್ಥಿರ ನಗರ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ, ರಾಜ್ಯದಲ್ಲಿ ಮೊದಲ ಬಾರಿಗೆ ಕೈಗೆತ್ತಿಕೊಳ್ಳಲಾದ ಹೆಚ್.ಡಿ.ಬಿ.ಆರ್.ಟಿ.ಎಸ್. ಹುಬ್ಬಳ್ಳಿ ಧಾರವಾಡ ಬಸ್ ತ್ವರಿತ ಸಂಚಾರ ವ್ಯವಸ್ಥೆ (ಬಿಆರ್‌ಟಿಸಿ) ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿ ನಿಂತಿದೆ.

    ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಫೆ.02 ರಂದು ಬಸ್ ಸೇವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಲವು ವಿಶೇಷತೆಗಳಿಂದ ಕೂಡಿರುವ ತ್ವರಿತ ಬಸ್ ಸೇವೆ ಸಾರ್ವಜನಿಕ ವಲಯದ ಮೊದಲ ಅತ್ಯುತ್ತಮ ಪರಿಸರಸ್ನೇಹಿ ಹಾಗೂ ಜನಸ್ನೇಹಿ ವ್ಯವಸ್ಥೆ ಎಂಬ ಹೆಮ್ಮೆಯನ್ನು ತನ್ನದಾಗಿಸಿಕೊಂಡಿದೆ.

    ಪ್ರಥಮ ಬಾರಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯೊಂದು ತ್ವರಿತ ಬಸ್ ಸೇವೆಯನ್ನು ಅನುಷ್ಠಾನಗೊಳಿಸುತ್ತಿರುವುದು ಇದೇ ಮೊದಲು. ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಸುಸ್ಥಿರ ನಗರ ಸಾರಿಗೆ ಯೋಜನೆ ಹಾಗೂ ಜಾಗತಿಕ ಪರಿಸರ ಸೌಲಭ್ಯ ಮತ್ತು ವಿಶ್ವ ಬ್ಯಾಂಕ್ ಜಂಟಿ ಯೋಜನೆಯಾಗಿ ಸುಮಾರು 970.87 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ಕರ್ನಾಟಕ ಸರ್ಕಾರದ 624.06 ಕೋಟಿ, ವಿಶ್ವ ಬ್ಯಾಂಕ್ ಸಾಲ 324.32 ಕೋಟಿ, 24.49ಕೋಟಿ ಜಿ.ಇ.ಎಫ್ ಅನುದಾನ ಒಳಗೊಂಡಿದೆ.

    ಯೋಜನೆಯ ದೊಡ್ಡ ಪಾಲಾಗಿ 445.59 ಕೋಟಿ ರೂಪಾಯಿಗಳನ್ನು ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ಬಳಸಲಾಗಿದೆ. 356.82 ಕೋಟಿ ರೂಪಾಯಿಗಳನ್ನು ಭೂ ಸ್ವಾಧೀನ ಹಾಗೂ ಪುನರ್ವಸತಿ ಕಾರ್ಯಕ್ಕೆ ವಿನಿಯೋಗಿಸಲಾಗಿದೆ. 147.97 ಮತ್ತು 24.49 ಕೋಟಿ ರೂಪಾಯಿಗಳನ್ನು ಕ್ರಮವಾಗಿ ಸರಕು ಮತ್ತು ಯಂತ್ರಗಳ ಖರೀದಿ ಮತ್ತು ಸಲಹಾ ಸೇವೆಗಳಿಗೆ ವೆಚ್ಚ ಮಾಡಲಾಗಿದೆ.

    ಹೆಚ್.ಡಿ.ಬಿ.ಆರ್.ಟಿಎಸ್ ಕಂಪನಿಯು ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆ (JNURM) ಅಡಿ 100 ಹವಾನಿಯಂತ್ರಿತ ಬಸ್ ಖರೀದಿಸಲಾಗಿದೆ. ಅವಳಿ ನಗರಗಳ ಮಧ್ಯ 32 ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಾರ್ಗದುದ್ದಕ್ಕೂ 6 ಪಾದಚಾರಿ ಮೇಲು ಸೇತುವೆಗಳು, ಹೊಸೂರಿನ 17 ಎಕರೆ ಪ್ರದೇಶದಲ್ಲಿ ಪ್ರಾದೇಶಿಕ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇಲ್ಲಿ ಇಂಟರ್ ಚೇಂಜ್, ಬಸ್ ಡಿಪೋ, ಕಚೇರಿ ಮತ್ತು ನಿಯಂತ್ರಣ ಕೇಂದ್ರಗಳಿವೆ. 2.5 ಎಕರೆ ಪ್ರದೇಶದಲ್ಲಿ ಉಪನಗರ ಸಾರಿಗೆ ಸೇವೆ ಒದಗಿಸಲು ಯೋಜಿಸಲಾಗಿದೆ. ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ 40 ಬಸ್ ಸಾಮರ್ಥ್ಯದ ಡಿಪೋ ಹಾಗೂ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿ 113 ಬಸ್ ಸಾಮರ್ಥ್ಯದ ಡಿಪೋ ನಿರ್ಮಿಸಲಾಗಿದೆ.

    ಐಟಿಎಸ್: ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಇಂಟಲಿಜೆಂಟ್ ಟ್ರಾನ್ಸ್ ಪೋರ್ಟ್ ಸಿಸ್ಟಮ್ ಜಾರಿಗೊಳಿಸಿದೆ. ಸ್ವಯಂಚಾಲಿತ ಟಿಕೆಟ್ ಸಂಗ್ರಹ, ಪ್ರಯಾಣಿಕರಿಗೆ ಬಸ್ ಸಂಚಾರದ ಕುರಿತಾದ ಮಾಹಿತಿ ವ್ಯವಸ್ಥೆ, ಸಿಸಿಟಿವಿ ವಿಡಿಯೋ ವಾಲ್‍ಗಳ ಬೃಹತ್ ಜಾಲ ಹೊಂದಿದೆ.

    ಹಸಿರು ಹೆಚ್.ಡಿ.ಬಿ.ಅರ್.ಟಿ.ಎಸ್: ಯೋಜನೆ ಅನುಷ್ಠಾನಕ್ಕೆ ಸಾವಿರಾರು ಗಿಡಗಳನ್ನು ತೆರವುಗೊಳಿಸಿರುವುದಕ್ಕೆ ಬದಲಾಗಿ ಅವಳಿ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ 25 ಸಾವಿರಕ್ಕೂ ಅಧಿಕ ಗಿಡಗಳನ್ನು ಐದು ವರ್ಷದಲ್ಲಿ ಬೆಳೆಸುವ ಗುರಿ ಹೊಂದಿದೆ. ಈಗಾಗಲೇ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯ ಅನುಷ್ಠಾನಗೊಂಡಿದೆ.

    ಕಾರ್ಯಾಚರಣೆ: ಹೆಚ್.ಡಿ.ಬಿ.ಆರ್.ಟಿ.ಎಸ್ ಯೋಜನೆಯು 2018 ಅಕ್ಟೋಬರ್ 2 ರಿಂದ ಪ್ರಾಯೋಗಿಕವಾಗಿ ಜನರಿಗೆ ಸೇವೆ ಒದಗಿಸುತ್ತಿದೆ. ಹಂತ ಹಂತವಾಗಿ ನೂರು ಬಸ್‍ಗಳು ಪ್ರತಿನಿತ್ಯ 1,204 ಟ್ರಿಪ್‍ಗಳಲ್ಲಿ ಸುಮಾರು ಒಂದು ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿರುವುದರಿಂದ ನಗರದ ಸಂಚಾರ ದಟ್ಟಣೆ ತಗ್ಗಿದೆ. ಇದರಿಂದ ಪರಿಸರಕ್ಕೆ ಸಾಕಷ್ಟು ಲಾಭವಾಗುತ್ತಿದೆ. ಇಂಧನ ಬಳಕೆ ಇಳಿಮುಖವಾಗಿದೆ. ಈ ಸೇವೆಯಿಂದ ಸಾರ್ವಜನಿಕರಿಗೆ ಸಮಯ ಉಳಿತಾಯವಾಗುತ್ತಿದೆ. ಪತ್ರಿನಿತ್ಯ ಟಿಕೆಟ್ ಪಡೆಯುವುದನ್ನು ತಪ್ಪಿಸಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ.

    ಮೆಟ್ರೋಗಿಂತ ಕಡಿಮೆ ವೆಚ್ಚ: ಬಿ.ಆರ್.ಟಿ.ಎಸ್. ಹಲವು ವಿಚಾರದಲ್ಲಿ ಮೆಟ್ರೋ ಸೇವೆಗಿಂತ ಅತ್ಯಂತ ಕಡಿಮೆ ಖರ್ಚಿನದಾಗಿದೆ. ಮೆಟ್ರೋ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ 250 ರಿಂದ 400 ಕೋಟಿ ರೂ. ವೆಚ್ಚ ತಗುಲಿದರೆ, ಬಿ.ಆರ್.ಟಿ.ಎಸ್ ನಲ್ಲಿ ಈ ವೆಚ್ಚ ಪ್ರತಿ ಕಿ.ಮೀ.ಗೆ 25 ರಿಂದ 30 ಕೋಟಿ ರೂಪಾಯಿಗಳಾಗುತ್ತಿದೆ. ನಿರ್ವಹಣಾ ವೆಚ್ಚವೂ ಮೆಟ್ರೋಗಿಂತ ಶೇ.90 ರಷ್ಟು ಕಡಿಮೆ. ಖಾಸಗಿ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಲಕ್ನೋ ನಗರದ ಬಿ.ಆರ್.ಟಿ.ಎಸ್. ಪ್ರತಿನಿತ್ಯ 60 ರಿಂದ 70 ಸಾವಿರ ಜನರಿಗೆ ಸೇವೆ ನೀಡುತ್ತಿದ್ದರೆ, ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದಲ್ಲಿ ಇರುವ ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್ 1 ಲಕ್ಷ ಜನರಿಗೆ ಸೇವೆ ಒದಗಿಸುತ್ತಿದೆ.

    ರಾಜ್ಯದಲ್ಲಿ ಉತ್ತಮ ಸಾರಿಗೆ ಸೇವೆಯನ್ನು ಬಿ.ಆರ್.ಟಿ.ಎಸ್ ಮೂಲಕ ಜನರಿಗೆ ನೀಡಲಾಗುತ್ತಿದೆ. ಬಿ.ಎಂ.ಟಿ.ಸಿ ನಗರ ಸಾರಿಗೆಯಲ್ಲಿ ಎ.ಸಿ. ಬಸ್‍ಗಳಲ್ಲಿ ಪ್ರತಿ ಕಿ.ಮೀ.ಗೆ 3 ರೂಪಾಯಿ 72 ಪೈಸೆ ದರ ವಿಧಿಸಲಾಗುತ್ತಿದೆ. ಬಿ.ಆರ್.ಟಿ.ಎಸ್‍ನಲ್ಲಿ ಪ್ರತಿ ಕಿ.ಮೀ. 1 ರೂಪಾಯಿ 18 ಪೈಸೆ ದರ ನಿಗದಿ ಮಾಡಲಾಗಿದೆ. ಅತಿ ಕಡಿಮೆ ದರದಲ್ಲಿ ಜನರಿಗೆ ಉತ್ತಮ ಸಾರಿಗೆ ಸೇವೆ ಲಭಿಸುತ್ತಿದೆ. ಸಾರ್ವಜನಿಕ ಸಾರಿಗೆ ಸಂಸ್ಥೆಗಳನ್ನು ಯಾವುದೇ ನಷ್ಟ ಹಾಗೂ ಲಾಭಗಳಿಲ್ಲದೆ ನಡೆಸಲಾಗುತ್ತಿದೆ.

  • ಮಾತೃ ಭಾಷೆಯಲ್ಲಿ ಶಿಕ್ಷಣ ಸಿಗಲಿ ಉಪರಾಷ್ಟ್ರಪತಿ ಅಭಿಮತ

    ಮಾತೃ ಭಾಷೆಯಲ್ಲಿ ಶಿಕ್ಷಣ ಸಿಗಲಿ ಉಪರಾಷ್ಟ್ರಪತಿ ಅಭಿಮತ

    ಬೆಂಗಳೂರು : ಪ್ರತಿ ಮಗುವಿಗೆ ಮಾತೃ ಭಾಷೆ ಅನ್ನೋದು ಮುಖ್ಯ. ಯಾವ ಭಾಷೆ ಮರೆತರು ಮಾತೃ ಭಾಷೆ ಮಾತ್ರ ಮರೆಯಬಾರದು. ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದು ಅಗತ್ಯ. ಕ್ರಮೇಣ ಉನ್ನತ ಶಿಕ್ಷಣವನ್ನೂ ಮಾತೃಭಾಷೆಯಲ್ಲಿ ಕೊಡುವಂತಾಗಬೇಕು ಅಂತ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ ನೀಡಿದರು.

    ಇಂಗ್ಲಿಷ್, ಪರ್ಷಿಯನ್ ಸೇರಿದಂತೆ ಎಲ್ಲ ಭಾಷೆಯನ್ನೂ ಕಲಿಯಿರಿ. ಆದರೆ ಕನ್ನಡವನ್ನು ಮರೆಯಬೇಡಿ. ಮಾತೃಭಾಷೆ ನಮ್ಮ ಕಣ್ಣುಗಳು. ಅನ್ಯಭಾಷೆಗಳು ಅದರ ಮೇಲೆ ಹಾಕಿಕೊಳ್ಳುವ ಕನ್ನಡಕದಂತೆ.ಬ್ರಿಟಿಷರು ಭಾರತಕ್ಕೆ ಇಂಗ್ಲಿಷ್ ತಂದರು. ಇಂಗ್ಲಿಷ್ ವಸಹಾತುಕರಣದ ಸಂಕೇತ. ಹಾಗಾಗಿ ಒಂದು ಭಾಷೆಯಾಗಿ ಇಂಗ್ಲಿಷನ್ನೂ ಕಲಿಯಿರಿ. ಆದರೆ ಶಿಕ್ಷಣ ಮಾತ್ರ ಮಾತೃಭಾಷೆಯಲ್ಲೇ ಪಡೆಯುವುದು ಸೂಕ್ತ ಅಂತ ಅಭಿಪ್ರಾಯ ವ್ಯಕ್ತಪಡಿಸಿದರು.

    ವಿದ್ಯಾರ್ಥಿಗಳಿಗೆ ದೈಹಿಕ ಕ್ಷಮತೆ ಅನ್ನೋದು ಮುಖ್ಯ. ಮಕ್ಕಳು ಫಿಟ್ ಆಗಿರಬೇಕಾದರೆ ದೈಹಿಕ ತರಬೇತಿ ಅವಶ್ಯಕತೆ ಇದೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ದೈಹಿಕ ಶಿಕ್ಷಣ ವಿಷಯ ಕಲಿಸಬೇಕು. ಅದಕ್ಕೆ ಅಂಕವನ್ನು ಕೊಡಬೇಕು ಅಂತ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಕೂಡಾ ಫಿಟ್ ಇಂಡಿಯಾ ಮೂಲಕ ದೇಶ ಫಿಟ್ ಇಡೋಕೆ ಕಾರ್ಯಕ್ರಮ ರೂಪಿಸಿದ್ದಾರೆ ಅಂತ ತಿಳಿಸಿದರು.

  • ಅದಮ್ಯ ಚೇತನದ ಅಡುಗೆ ಮನೆಗೆ ಉಪರಾಷ್ಟ್ರಪತಿಗಳ ಭೇಟಿ

    ಅದಮ್ಯ ಚೇತನದ ಅಡುಗೆ ಮನೆಗೆ ಉಪರಾಷ್ಟ್ರಪತಿಗಳ ಭೇಟಿ

    ಬೆಂಗಳೂರು: ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಸನ್ಮಾನ್ಯ ಉಪ ರಾಷ್ಟ್ರಪತಿಗಳಾದ ವೆಂಕಯ್ಯನಾಯ್ಡು ಮಂಗಳವಾರ ಭೇಟಿ ನೀಡಲಿದ್ದಾರೆ. ಗವಿಪುರಂ ಬಳಿ ಇರೋ ಗುಟ್ಟಹಳ್ಳಿಯಲ್ಲಿರುವ ಅದಮ್ಯ ಚೇತನದ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಲಿದ್ದು, ಹೇಗೆ ತ್ಯಾಜ್ಯದ ನಿರ್ವಹಣೆ ಮಾಡುತ್ತಿದ್ದಾರೆ ಅನ್ನೋದನ್ನ ಉಪರಾಷ್ಟ್ರಪತಿಗಳು ವೀಕ್ಷಣೆ ಮಾಡಲಿದ್ದಾರೆ.

    ಪ್ರತಿನಿತ್ಯ ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ಮತ್ತು ರಾಜಸ್ತಾನದ ಜೋಧಪುರ್ ಅಡುಗೆ ಕೇಂದ್ರಗಳಿಂದ 1.50 ಲಕ್ಷ ಮಕ್ಕಳಿಗೆ ರುಚಿ, ಶುಚಿ, ಸ್ವಾದಿಷ್ಟಯುಕ್ತ ಮಧ್ಯಾಹ್ನದ ಬಿಸಿಯೂಟ ಸರಬರಾಜು ಕೆಲಸವನ್ನು ಅದಮ್ಯ ಚೇತನ ಸಂಸ್ಥೆ ಮಾಡುತ್ತಿದೆ. ಅದಮ್ಯ ಚೇತನ ಸಂಸ್ತೆಯನ್ನ ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ತಮ್ಮ ತಾಯಿ ಗಿರಿಜಾ ಶಾಸ್ತ್ರಿ ಸ್ಮರಣಾರ್ಥ 1997ರಲ್ಲಿ ಸ್ಥಾಪಿಸಿದರು. ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ವೀಕ್ಷಣೆಗೆ ಉಪರಾಷ್ಟ್ರಪತಿಗಳು ಆಗಮಿಸಲಿದ್ದಾರೆ.

    ಅದಮ್ಯ ಚೇತನ ಸಮರ್ಥವಾಗಿ ಜೈವಿಕ ತ್ಯಾಜ್ಯವನ್ನು ಇಂಧನವನ್ನಾಗಿ ಬಳಸಿಕೊಂಡು ಫಾಸಿಲ್ ಇಂಧನವನ್ನು ಉಳಿತಾಯ ಮಾಡುತ್ತಿದೆ. ಪ್ರತಿದಿನವೂ 75 ಎಲ್‍ಪಿಜಿ ಸಿಲಿಂಡರ್ಗಳಷ್ಟು ಮತ್ತು 750 ಲೀಟರ್ ಡೀಸೆಲ್‍ನಷ್ಟು ಉಳಿತಾಯವಾಗುತ್ತಿದೆ. ಅದಮ್ಯ ಚೇತನದ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ಶೂನ್ಯ ತ್ಯಾಜ್ಯ ಅಡುಗೆ ಮನೆಯ ಮಾಹಿತಿಯನ್ನು ಉಪರಾಷ್ಟ್ರಪತಿಗಳಿಗೆ ನೀಡಲಿದ್ದಾರೆ.