Tag: vicky varun

  • ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳಿಗೆ ಮುಹೂರ್ತ

    ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳಿಗೆ ಮುಹೂರ್ತ

    “ಅಲೆಮಾರಿ” ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್ (Hari Santhosh), ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು. ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಹಾಗೂ ರವಿಕುಮಾರ್ ಪೋಸ್ಟರ್ ಅನಾವರಣ ‌ಮಾಡುವ ಮೂಲಕ ನೂತನ ಚಿತ್ರಗಳಿಗೆ ಚಾಲನೆ ನೀಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಮೊದಲು “ಡಿಸ್ಕೋ” (Disco) ತಂಡದ ಸದಸ್ಯರು ಮಾತನಾಡಿದರು . “ಡಿಸ್ಕೋ” ಇದು ನಾಯಕನ ಅಡ್ಡ ಹೆಸರು ಎಂದು ಮಾತು ಆರಂಭಿಸಿದ ನಿರ್ದೇಶಕ ಹರಿ ಸಂತೋಷ್, ವಿಕ್ಕಿ ವರುಣ್ ಈ ಚಿತ್ರದ ನಾಯಕ. ನನ್ನ ಹಾಗೂ ವಿಕ್ಕಿ ವರಣ್ (Vicky Varun) ಕಾಂಬಿನೇಶನ್ ನಲ್ಲಿ “ಕಾಲೇಜ್ ಕುಮಾರ” ಚಿತ್ರದ ನಂತರ ಈ ಚಿತ್ರ ಮೂಡಿಬರುತ್ತಿದೆ. ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ. ನಮ್ಮ ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಕಲ್ಲೂರ್ ಸಿನಿಮಾಸ್ ಬ್ಯನಾರ್ ನಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಪ್ರಶಾಂತ್ ಕಲ್ಲೂರ್ ಹಾಗೂ ಹರೀಶ್ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಧ್ರುವ್ ಸಂಗೀತ ನೀಡಲಿದ್ದಾರೆ‌. ಇಂದು ಚಿತ್ರಕ್ಕೆ ಚಾಲನೆ ನೀಡಿದ ಗಣ್ಯರಿಗೆ ಧನ್ಯವಾದ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಹೇಳಿದರು.

    ಇದು ನಾನು ನಾಯಕನಾಗಿ ನಟಿಸುತ್ತಿರುವ ನಾಲ್ಕನೇ ಚಿತ್ರ. ಹಿಂದಿನ ಮೂರು ಚಿತ್ರಗಳೆ ಬೇರೆ ತರಹ.‌ ಇದೇ ಬೇರೆ ತರಹ. ನಾನು ಹೇಗೆ ಇದ್ದಿನೊ ಅದೇ ತರಹ ಪಾತ್ರ ಎನ್ನಬಹುದು. ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಇದು ಹಳ್ಳಿಯಿಂದ ಸಿಟಿಗೆ ಬಂದ ಹುಡುಗನ ಕಥೆ ಅಲ್ಲ. ಹಳ್ಳಿಯನ್ನೇ ಸಿಟಿ‌ ಮಾಡಲು ಹೊರಟ ಹುಡುಗನ ಕಥೆ. ಹರಿ ಸಂತೋಷ್ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ ಎಂದರು ನಾಯಕ ವಿಕ್ಕಿ ವರುಣ್. ಸಹ ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ಸಂಗೀತ ನಿರ್ದೇಶಕ ಧ್ರುವ್ “ಡಿಸ್ಕೊ” ಚಿತ್ರದ ಬಗ್ಗೆ ಮಾತನಾಡಿದರು.

    ಆನಂತರ “congratulations ಬ್ರದರ್” ಚಿತ್ರತಂಡದವರು ಮಾಧ್ಯಮದ ಮುಂದೆ ಮಾತನಾಡಿದರು. ಎರಡು ವರ್ಷಗಳಿಂದ ನಾವು ಹನ್ನೆರಡು ಜನ ಸ್ನೇಹಿತರು ಸೇರಿ “ಪೆನ್ ಎನ್ ಪೇಪರ್” ಸಂಸ್ಥೆ ಆರಂಭಿಸಿದ್ದೆವು. ಈ ಮೂಲಕ  ಹಲವು ವೆಬ್ ಸಿರೀಸ್ ಗಳಿಗೆ ಹಾಗೂ ಕೆಲವು ಪ್ರೊಡಕ್ಷನ್ ಹೌಸ್ ಗಳಿಗೆ ಕಥೆ ಒದಗಿಸಿಕೊಟ್ಟಿದ್ದೇವೆ. ಈಗ ಇದೇ ತಂಡದಿಂದ ಮೊದಲ ಸಿನಿಮಾ ಮಾಡುತ್ತಿದ್ದೇವೆ. ಅದೇ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ “congratulations ಬ್ರದರ್”. ಈ ಚಿತ್ರದ ಕಥೆ ಬರೆಯಲು ಒಂದು ವರ್ಷವಾಯಿತು. ಮಾರ್ನಿಂಗ್ ಶೋ ಆಡಿಯನ್ಸ್ ನ ತಲೆಯಲ್ಲಿಟ್ಟಿಕೊಂಡು ಕಥೆ ಮಾಡಿದ್ದೇವೆ. ನನ್ನ ತಂಡದಲ್ಲಿರುವ  ಪ್ರತಾಪ್ ಗಂಧರ್ವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ.  ಪ್ರಶಾಂತ್ ಕಲ್ಲೂರ್ , ಹರೀಶ್ ಹಾಗೂ ರವಿಕುಮಾರ್ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ‌. ಸಂಜನಾ ಈ ಚಿತ್ರದ ನಾಯಕಿ. ಅನುಷಾ ಎಂಬ ಹೊಸ ಹುಡುಗಿಯನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದೇವೆ. ರೊಮ್ಯಾಂಟಿಕ್ ಜಾನರ್ ನ ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಪ್ರತಾಪ್, ರಕ್ಷಿತ್ ಮುಂತಾದವರು ಚಿತ್ರಕಥೆ ರಚಿಸಿದ್ದಾರೆ ಎಂದು ಕಥೆಗಾರ ಹಾಗೂ ಕ್ರಿಯೇಟಿವ್ ಹೆಡ್ ಹರಿ ಸಂತೋಷ್ ತಿಳಿಸಿದರು.

    ಹಲವು ಧಾರಾವಾಹಿಗಳಿಗೆ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ. ನಮ್ಮ ತಂಡದ ಅನೇಕರಿಗೆ ಇದು ಹೊಸ ಹೆಜ್ಜೆ. ಸಾಮಾನ್ಯವಾಗಿ ಹೊಸ ಹೆಜ್ಜೆ ಅಷ್ಟು ಸುಲಭವಾಗಿರುವುದಿಲ್ಲ.‌ ಅದನ್ನು‌ ನಮಗೆ ಹರಿ ಸಂತೋಷ್ ಸುಲಭ ಮಾಡಿಕೊಟ್ಟಿದ್ದಾರೆ. ಹರಿ ಸಂತೋಷ್ ಅವರು ಹೇಳಿದ ಹಾಗೆ ಈ ಚಿತ್ರದ ಕಥೆ, ಚಿತ್ರಕಥೆ ರಚನೆಗೆ ವರ್ಷದ ಸಮಯ ಹಿಡಿಸಿದೆ. ನಮ್ಮ ಕಥೆ ಪೇಪರ್ ನಲ್ಲಿ ಈಗಾಗಲೇ ಗದ್ದಿದೆ. ಪ್ರೇಕ್ಷಕರು ಗೆಲ್ಲಿಸುತ್ತಾರೆಂಬ ನಂಬಿಕೆ ಇದೆ. ನಾಳೆಯಿಂದಲೇ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರತಾಪ್ ಗಂಧರ್ವ ತಿಳಿಸಿದರು.

    ಕಿರುತೆರೆ ಹಾಗೂ ನಾಟಕಗಳಲ್ಲಿ ನಟಿಸಿರುವ ನನಗೆ ಹಿರಿತೆರೆಯಲ್ಲಿ ನಾಯಕನಾಗಿ ಮೊದಲ ಚಿತ್ರ ಎಂದರು ನಾಯಕ ರಕ್ಷಿತ್ ನಾಗ್. ನಾಯಕಿ ಸಂಜನಾ, ನಟಿ ಅನೂಷ, ಸಂಗೀತ ನಿರ್ದೇಶಕ ಸೂರಜ್ ಜೋಯಿಸ್, ಛಾಯಾಗ್ರಾಹಕ ಗುರು, ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ರವಿಕುಮಾರ್ ಚಿತ್ರಕ್ಕೆ ಪ್ರೋತ್ಸಾಹ ನೀಡುವಂತೆ ಮನವಿ‌ ಮಾಡಿದರು.

  • ‘ಕಾಲಾಪತ್ಥರ್’ ಸಾಂಗ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ‘ಕಾಲಾಪತ್ಥರ್’ ಸಾಂಗ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ ‘ಕಾಲಾಪತ್ಥರ್’ (Kalapathar) ಚಿತ್ರದ ‘ಗೋರುಕನ ಗಾನ’ ಎಂಬ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar) ಹಾಗೂ ನಟಿ ತಾರಾ ಅನುರಾಧ ಬಿಡುಗಡೆ ಮಾಡಿ ಶುಭ ಕೋರಿದರು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು (Song) ಖ್ಯಾತ ಚಿತ್ರ ಸಾಹಿತಿ ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ. ಸರಿಗಮಪ ಖ್ಯಾತಿಯ ಶಿವಾನಿ ಹಾಡಿದ್ದಾರೆ. ಹಾಡು ಬಿಡುಗಡೆ ಸಾಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.

    ಗೋರುಕನ ಹಾಡು ನಮ್ಮ ಚಿತ್ರದ ಮೊದಲ ಹಾಡು ಎಂದು ಮಾತು ಅರಂಭಿಸಿದ ನಾಯಕ ಹಾಗೂ ನಿರ್ದೇಶಕ ವಿಕ್ಕಿ ವರುಣ್, ಈ ಹಾಡಿನ ಮೂಲಕ ಮಂಗಳಮುಖಿಯರು ನಮ್ಮ ಚಿತ್ರದ ಕಥೆ ಹೇಳುತ್ತಾರೆ. ಇದು ಚಿತ್ರದ ಕಥೆ ಹೇಳುವ ಗೀತೆಯಾಗಿರುವುದರಿಂದ ಇಂದು ಲಿರಿಕಲ್ ಸಾಂಗ್ ಮಾತ್ರ ರಿಲೀಸ್ ಮಾಡಿದ್ದೇವೆ.

    ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಶಿವಾನಿ ಈ ಹಾಡನ್ನು ಹಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಗಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ:ನಾನು ಮದುವೆಯಾಗುವ ಹುಡುಗ ಅದಿತಿ ಪ್ರಭುದೇವ ಗಂಡನ ಥರ ಇರಬೇಕು- ಸೋನು

    2.0 ಹೊಸ ವರ್ಷನ್ ನಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಇದು. ನಾಗೇಂದ್ರ ಪ್ರಸಾದ್ ಅದ್ಭುತವಾಗಿ ಗೀತರಚನೆ ಮಾಡಿದ್ದಾರೆ. ಹದಿನಾರು ವರ್ಷದ ಶಿವಾನಿ ಅವರ ಗಾಯನ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು ಸಂಗೀತ ನಿರ್ದೇಶಕ ಅನೂಪ್ ಸೀಳಿನ್. ದೇಸಿ ಶೈಲಿಯಲ್ಲಿ ಸಂಗೀತ ಸಂಯೋಜಿಸುವುದರಲ್ಲಿ ಅನೂಪ್ ಸೀಳಿನ್ ಸಹ ಪ್ರಮುಖರು. ಗೋರುಕನ ಎಂದರೆ ಸುವ್ವಿ ಎಂಬ ಅರ್ಥ ಬರುತ್ತದೆ. ಹೆಚ್ಚಾಗಿ ಸೋಲಿಗರು ಈ ಪದವನ್ನು ಬಳಸುತ್ತಾರೆ ಎಂದು ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು.

    ತಾವು ಗಂಗಾ ಎಂಬ ಪಾತ್ರ ನಿರ್ವಹಿಸಿರುವುದಾಗಿ ನಾಯಕಿ ಧನ್ಯ ರಾಮಕುಮಾರ್ ತಿಳಿಸಿದರು. ನಿರ್ದೇಶಕರಾದ ಸಿಂಪಲ್ ಸುನಿ, ಮಹೇಶ್ ಕುಮಾರ್(ಮದಗಜ), ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್, ಉದ್ಯಮಿ ಜಗದೀಶ್ ಚೌಧರಿ ಮುಂತಾದವರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.  ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆಗಮಿಸಿದ ಗಣ್ಯರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಕ್ಕಿ ವರುಣ್ ನಟಿಸಿ, ನಿರ್ದೇಶನ ಮಾಡಿರುವ ‘ಕಾಲಾಪತ್ಥರ್’ ಸಾಂಗ್ ರಿಲೀಸ್

    ವಿಕ್ಕಿ ವರುಣ್ ನಟಿಸಿ, ನಿರ್ದೇಶನ ಮಾಡಿರುವ ‘ಕಾಲಾಪತ್ಥರ್’ ಸಾಂಗ್ ರಿಲೀಸ್

    ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ (Vicky Varun) ನಿರ್ದೇಶಿಸಿ ನಾಯಕನಾಗಿ ನಟಿಸಿರುವ ‘ಕಾಲಾಪತ್ಥರ್’ (Kalapathar) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಐದು ಹಾಡುಗಳನ್ನು (Song) ಸೇರಿಸಿ ‘ಸೌಂಡ್ಸ್ ಆಫ್ ಕಾಲಾಪತ್ಥರ್’ ಎಂಬ ಹಾಡುಗಳ ಗುಚ್ಛವನ್ನು ಕೆಲವೇ ನಿಮಿಷಗಳಲ್ಲಿ ತೋರಿಸುವ ವಿಭಿನ್ನ ಪ್ರಯತ್ನಕ್ಕೆ ಚಿತ್ರತಂಡ ಮುಂದಾಯಿತು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.

    ನಿರ್ದೇಶನ ನನ್ನ ಕನಸು. ಆ ಕನಸನ್ನು ನನಸು ಮಾಡಿದ ನಿರ್ಮಾಪಕರಿಗೆ ನಾನು ಆಭಾರಿ. ಸೂರಿ ಅವರ ಬಳಿ ಹತ್ತು ವರ್ಷ ಕೆಲಸ ಮಾಡಿರುವ ಅನುಭವದಿಂದ ನಿರ್ದೇಶನ ನನಗೆ ಅಷ್ಟು ಕಷ್ಟವಾಗಲಿಲ್ಲ. ನಿರ್ದೇಶನ ಹಾಗೂ ನಟನೆ ಎರಡು ಒಟ್ಟಿಗೆ ಮಾಡುವುದು ಸ್ವಲ್ಪ ಕಷ್ಟ. ಆದರೆ ನಮ್ಮ ಚಿತ್ರತಂಡದ ಸಹಕಾರದಿಂದ  ‘ಕಾಲಾಪತ್ಥರ್’ ನಾವು ಅಂದುಕೊಂಡ ಹಾಗೆ ಅದ್ಭುತವಾಗಿ ಮೂಡಿಬಂದಿದೆ. ಏನಾದರೂ ಹೊಸತು ಮಾಡಬೇಕು ಎಂದೆನಿಸಿ ‘ಸೌಂಡ್ಸ್ ಆಫ್ ಕಾಲಾಪತ್ಥರ್’ ವಿಡಿಯೋವನ್ನು ಇಂದು ಬಿಡುಗಡೆ ಮಾಡಿದ್ದೇವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ‘ಕಾಲಾಪತ್ಥರ್’ ಶೀರ್ಷಿಕೆ ಬಗ್ಗೆ ಹೇಳಿದರೆ, ಕಥೆ ಹೇಳಿದಂತೆ. ಹಾಗಾಗಿ ಅದರ ಬಗ್ಗೆ ಸಿನಿಮಾ ನೋಡಿದ ಮೇಲೆ ತಿಳಿಯುವುದು ಎಂದು ನಾಯಕ ಹಾಗೂ ನಿರ್ದೇಶಕ ವಿಕ್ಕಿವರುಣ್ ತಿಳಿಸಿದರು. ಇದನ್ನೂ ಓದಿ:ಅಣ್ಣ ಚಿರು ಸಮಾಧಿ ಬಳಿ ನಿದ್ದೆ ಮಾಡಿದ ಧ್ರುವ ಸರ್ಜಾ

    ಚಿತ್ರದಲ್ಲಿ ಐದು ಹಾಡುಗಳಿವೆ. ವಿ.ನಾಗೇಂದ್ರ ಪ್ರಸಾದ್ ಹಾಗೂ ಪ್ರಮೋದ್ ಮರವಂತೆ ಗೀತರಚನೆ ಮಾಡಿದ್ದಾರೆ. ವಿಜಯ್ ಪ್ರಕಾಶ್, ಸಾಯಿ ವಿಘ್ನೇಶ್, ಅಭಿಷೇಕ್, ಐಶ್ವರ್ಯ ರಂಗರಾಜನ್, ಶಿವಾನಿ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಹಾಡುಗಳನ್ನು ಹಾಡಿದ್ದಾರೆ. ಇಂದು ಬಿಡುಗಡೆಯಾದ ‘ಸೌಂಡ್ಸ್ ಆಫ್ ಕಾಲಾಪತ್ಥರ್’ ವಿಕ್ಕಿ ವರುಣ್ ಅವರ ಕಾನ್ಸೆಪ್ಟ್ ಎಂದು ಸಂಗೀತ ನಿರ್ದೇಶಕ. ಅನೂಪ್ ಸೀಳಿನ್ ತಿಳಿಸಿದರು.

    ನಾನು ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಮಾತನಾಡಿದ ನಾಯಕಿ ಧನ್ಯ ರಾಮಕುಮಾರ್ (Dhanya Kumar), ಗಂಗಾ ಎಂಬ ಹೆಸರಿನ ಶಿಕ್ಷಕಿ ಪಾತ್ರ ನನ್ನದು ಎಂದು ಹೇಳಿದರು. ಕಾಲಾಪತ್ಥರ್ ಚಿತ್ರ ಚೆನ್ನಾಗಿ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ತಿಳಿಸುತ್ತೇವೆ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಕ್ಕಿ ವರುಣ್ ಹುಟ್ಟು ಹಬ್ಬಕ್ಕೆ ‘ಕಾಲಪತ್ಥರ್’ ಪೋಸ್ಟರ್ ರಿಲೀಸ್

    ವಿಕ್ಕಿ ವರುಣ್ ಹುಟ್ಟು ಹಬ್ಬಕ್ಕೆ ‘ಕಾಲಪತ್ಥರ್’ ಪೋಸ್ಟರ್ ರಿಲೀಸ್

    ಕೆಂಡಸಂಪಿಗೆ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟ ವಿಕ್ಕಿ ವರುಣ್ (Vicky Varun), ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹುಟ್ಟು ಹಬ್ಬಕ್ಕಾಗಿ  (Birthday,) ಅವರ ನಟನೆಯ ‘ಕಾಲಪತ್ಥರ್ ‘ ಸಿನಿಮಾದ ಪೋಸ್ಟರ್ (Poster) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅವರು ವಿಭಿನ್ನ ರೀತಿಯ ಪಾತ್ರ ನಿರ್ವಹಿಸುತ್ತಿದ್ದು, ಆ ಪಾತ್ರದ ಪೋಸ್ಟರ್ ಅನ್ನು ವಿಕ್ಕಿ ಹುಟ್ಟು ಹಬ್ಬಕ್ಕೆ ರಿಲೀಸ್ ಮಾಡಿದೆ ಚಿತ್ರತಂಡ.

    ನಿರ್ದೇಶಕ ಸುಕ್ಕಾ ಸೂರಿ ಗರಡಿಯಲ್ಲಿ ಪಳಗಿದ್ದ ವಿಕ್ಕಿ, ಕೆಂಡಸಂಪಿಗೆ ಚಿತ್ರದಲ್ಲಿನ ಇವರ ಮುಗ್ಧ ಅಭಿನಯ ಎಲ್ಲರ ಗಮನ ಸೆಳೆದಿತ್ತು. ಮೊದಲ ಚಿತ್ರದ ಗೆಲುವಿನ ನಂತರ ಕಾಲೇಜ್ ಕುಮಾರನಾಗಿ ತೆರೆ ಮೇಲೆ ಎಂಟ್ರಿ ಕೊಟ್ಟ ಇವರು ಎರಡನೇ ಸಿನಿಮಾದಲ್ಲೂ ಸಕ್ಸಸ್ ಕಾಣುವ ಮೂಲಕ ಖ್ಯಾತಿ ಗಳಿಸಿದ್ರು. ಸಿನಿಮಾ ಆಯ್ಕೆ ವಿಚಾರದಲ್ಲಿ ಸಖತ್ ಚ್ಯೂಸಿಯಾಗಿರುವ ವಿಕ್ಕಿ ವರುಣ್ ಬಹಳ ದಿನಗಳ ನಂತರ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಎಲ್ಲೆಡೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ಕೆಂಡ ಸಂಪಿಗೆ, ಕಾಲೇಜ್ ಕುಮಾರ ಚಿತ್ರಗಳ ಬ್ಯಾಕ್ ಟು ಬ್ಯಾಕ್ ಸಕ್ಸಸ್ ನಂತರ ವಿಕ್ಕಿ ವರುಣ್ ಒಪ್ಪಿಕೊಂಡಿರುವ ನೂತನ ಚಿತ್ರವೇ ಈ ‘ಕಾಲಾ ಪತ್ಥರ್’ ((Kalapathar)). ಈಗಾಗಲೇ ನಟಿಸಿದ ಎರಡೂ ಸಿನಿಮಾಗಳು ಹಿಟ್ ಆಗಿರೋದ್ರಿಂದ ಸಾಕಷ್ಟು ಎಚ್ಚರಿಕೆ ವಹಿಸಿ ಮೂರನೇ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ ವಿಕ್ಕಿ ವರುಣ್. ‘ಕಾಲಾ ಪತ್ಥರ್’ ಸಿನಿಮಾ ಭಿನ್ನವಾಗಿದ್ದು ಖಂಡಿತಾ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತೆ ಎನ್ನುತ್ತಾರೆ ನಟ ವಿಕ್ಕಿ ವರುಣ್.

    ‘ಕಾಲಾಪತ್ಥರ್’ ಚಿತ್ರಕ್ಕೆ ವಿಕ್ಕಿ ವರುಣ್ ಇವರೇ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇವರ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ರಾಮಾ ರಾಮಾ ರೇ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ (Satya Prakash) ‘ಕಾಲಾ ಪತ್ಥರ್’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸುರೇಶ್ ಮತ್ತು ನಾಗರಾಜು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

  • ‘ಕಾಲೇಜು ಕುಮಾರ’ ವಿಕ್ಕಿ ವರುಣ್ ಹೊಸ ಅವತಾರ ‘ಕಾಲಾ ಪತ್ಥರ್’

    ‘ಕಾಲೇಜು ಕುಮಾರ’ ವಿಕ್ಕಿ ವರುಣ್ ಹೊಸ ಅವತಾರ ‘ಕಾಲಾ ಪತ್ಥರ್’

    ನಿರ್ದೇಶಕ ಸುಕ್ಕಾ ಸೂರಿ ಗರಡಿಯಲ್ಲಿ ಪಳಗಿ ಕೆಂಡಸಂಪಿಗೆ ಚಿತ್ರದ ಮೂಲಕ ಚಂದನವನಕ್ಕೆ ಪರಿಚಿತನಾದ ಉದಯೋನ್ಮುಕ ನಟ ವಿಕ್ಕಿ ವರುಣ್. ಕೆಂಡಸಂಪಿಗೆ ಚಿತ್ರದಲ್ಲಿನ ಇವರ ಮುಗ್ಧ ಅಭಿನಯ ಎಲ್ಲರ ಗಮನ ಸೆಳೆದಿತ್ತು. ಮೊದಲ ಚಿತ್ರದ ಗೆಲುವಿನ ನಂತರ ಕಾಲೇಜ್ ಕುಮಾರನಾಗಿ ತೆರೆ ಮೇಲೆ ಎಂಟ್ರಿ ಕೊಟ್ಟ ವಿಕ್ಕಿ ವರುಣ್ ಎರಡನೇ ಸಿನಿಮಾದಲ್ಲೂ ಸಕ್ಸಸ್ ಕಾಣುವ ಮೂಲಕ ಖ್ಯಾತಿ ಗಳಿಸಿದ್ರು. ಸಿನಿಮಾ ಆಯ್ಕೆ ವಿಚಾರದಲ್ಲಿ ಸಖತ್ ಚ್ಯುಸಿಯಾಗಿರುವ ವಿಕ್ಕಿ ವರುಣ್ ಬಹಳ ದಿನಗಳ ನಂತರ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಎಲ್ಲೆಡೆ ಕುತೂಹಲ ಮೂಡಿಸಿದೆ.

    ಕೆಂಡ ಸಂಪಿಗೆ, ಕಾಲೇಜ್ ಕುಮಾರ ಚಿತ್ರಗಳ ಬ್ಯಾಕ್ ಟು ಬ್ಯಾಕ್ ಸಕ್ಸಸ್ ನಂತರ ವಿಕ್ಕಿ ವರುಣ್ ಒಪ್ಪಿಕೊಂಡಿರುವ ನೂತನ ಚಿತ್ರ ‘ಕಾಲಾ ಪತ್ಥರ್’. ಚಿತ್ರದ ವಿಭಿನ್ನ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ನಟಿಸಿದ ಎರಡೂ ಸಿನಿಮಾಗಳು ಹಿಟ್ ಆಗಿರೋದ್ರಿಂದ ಸಾಕಷ್ಟು ಎಚ್ಚರಿಕೆ ವಹಿಸಿ ಮೂರನೇ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ ವಿಕ್ಕಿ ವರುಣ್. ‘ಕಾಲಾ ಪತ್ಥರ್’ ಸಿನಿಮಾ ಭಿನ್ನವಾಗಿದ್ದು ಖಂಡಿತಾ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತೆ ಎನ್ನುತ್ತಾರೆ ನಟ ವಿಕ್ಕಿ ವರುಣ್.

    ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಗರಡಿಯಲ್ಲಿ ಗುರುತಿಸಿಕೊಂಡಿರುವ ಚೇತನ್ ಎ.ಸಿ ‘ಕಾಲಾಪತ್ಥರ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚೇತನ್ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ರಾಮಾ ರಾಮಾ ರೇ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ‘ಕಾಲಾ ಪತ್ಥರ್’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಎಸ್ ಅಂಡ್ ಎಸ್ ಎಂಟರ್‍ಪ್ರೈಸಸ್ ಬ್ಯಾನರಿನಡಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಹೆಚ್.ಪಿ.ನವೀನ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಚಿತ್ರತಂಡ ನಾಯಕಿ ಹಾಗೂ ಕಲಾವಿದರ ಆಯ್ಕೆಯಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲೇ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದೆ.