Tag: video call

  • ಮದುವೆಗೆ ರಜೆ ಕೊಡದ ಬಾಸ್ – ವಿಡಿಯೋ ಕಾಲ್‌ನಲ್ಲಿ ಮದುವೆ

    ಮದುವೆಗೆ ರಜೆ ಕೊಡದ ಬಾಸ್ – ವಿಡಿಯೋ ಕಾಲ್‌ನಲ್ಲಿ ಮದುವೆ

    ಶಿಮ್ಲಾ: ಮದುವೆಗೆ ಬಾಸ್ ರಜೆ ಕೊಡದ ಕಾರಣ ವರ ಹಾಗೂ ವಧು ವಿಡಿಯೋ ಕಾಲ್‌ನಲ್ಲಿ ವಿವಾಹವಾಗಿರುವ ಸಂಗತಿಯೊಂದು ನಡೆದಿದೆ.

    ಭಾರತೀಯ ಮೂಲದ ವ್ಯಕ್ತಿ ಟರ್ಕಿಯಲ್ಲಿದ್ದರು (Turkey). ಆತನ ಮದುವೆಗಾಗಿ ಬಾಸ್ ರಜೆ ಕೊಡದ ಕಾರಣ ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ (Mandi) ವಧುವಿನೊಂದಿಗೆ ವಿಡಿಯೋ ಕಾಲ್ ಮೂಲಕ ವಿವಾಹವಾಗಿದ್ದಾರೆ.

    ವಧುವಿನ ಅಜ್ಜನಿಗೆ ಅನಾರೋಗ್ಯದ ಹಿನ್ನೆಲೆ ವರನನ್ನು ಬೇಗ ಮದುವೆಯಾಗು ಎಂದು ವಧುವಿನ ಕುಟುಂಬಸ್ಥರು ಒತ್ತಾಯಿಸಿದ್ದರು. ಈ ಕಾರಣದಿಂದ ವರ ಮದುವೆಗಾಗಿ ಬಾಸ್ ಬಳಿ ರಜೆ ಕೋರಿದ್ದರು. ಆದರೆ ಬಾಸ್ ರಜೆಯನ್ನು ನಿರಾಕರಿಸಿದ್ದರು. ಇದರಿಂದ ಈ ವಿಷಯವನ್ನು ತಿಳಿದ ಕುಟುಂಬಸ್ಥರು ವರ್ಚುವಲ್ ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಬಿಷ್ಣೋಯ್‌ ಗ್ಯಾಂಗ್‌ನಿಂದ 5 ಕೋಟಿಗೆ ಬೇಡಿಕೆ

    ಬಿಲಾಸ್‌ಪುರದ ನಿವಾಸಿಯಾಗಿರುವ ವರ ಅದ್ನಾನ್ ಮುಹಮ್ಮದ್ ಅವರ ಕುಟುಂಬವು ಭಾನುವಾರ ಮಂಡಿಗೆ ತಲುಪಿದರು. ಬಳಿಕ ಸೋಮವಾರ ವಿಡಿಯೋ ಕರೆಯ ಮೂಲಕ ವಿವಾಹವಾಗಿದ್ದು, ಖಾಜಿಯೊಬ್ಬರು ಕುಬೂಲ್ ಹೈ ಎಂದಾಗ ಮೂರು ಬಾರಿ ಹೇಳುವ ಮೂಲಕ ಧಾರ್ಮಿಕ ಕ್ರಿಯೆಗಳು ನೆರವೇರಿದವು.

    ಈ ಕುರಿತು ಮಾತನಾಡಿದ ವಧುವಿನ ಚಿಕ್ಕಪ್ಪ ಅಕ್ರಂ ಮೊಹಮ್ಮದ್, ಅತ್ಯಾಧುನಿಕ ತಂತ್ರಜ್ಞಾನದಿAದ ಮದುವೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಕಳೆದ ವರ್ಷ ಜುಲೈನಲ್ಲಿ, ಹಿಮಾಚಲ ಪ್ರದೇಶದಲ್ಲಿ (Himachal Pradesh) ಭಾರೀ ಭೂಕುಸಿತ ಮತ್ತು ಪ್ರವಾಹದಿಂದಾಗಿ ವರನ ಮನೆಯವರು ವಧುವಿನ ಮನೆಗೆ ತಲುಪದ ಕಾರಣ ಶಿಮ್ಲಾದ ಕೋಟ್‌ಗಢ್‌ನ ಆಶಿಶ್ ಸಿಂಘಾ ಹಾಗೂ ಕುಲುವಿನ ಭುಂತರ್‌ನಲ್ಲಿದ್ದ ಶಿವಾನಿ ಠಾಕೂರ್ ಅವರನ್ನು ವಿಡಿಯೋ ಕಾಲ್ ಮೂಲಕ ವಿವಾಹವಾಗಿದ್ದರು.ಇದನ್ನೂ ಓದಿ: ಕೊತ್ವಾಲ್‌ ಬಳಿ 100 ರೂ.ಗೆ ಕೆಲಸ ಮಾಡ್ತಿದ್ದ ಡಿಕೆ ಕಣ್ಣೀರು ಹಾಕಿರೋದು ನೋಡಿದ್ದೀರಾ? – ಹೆಚ್‌ಡಿಡಿ

  • ಜೈಲಿನಲ್ಲಿದ್ದುಕೊಂಡೇ ವೀಡಿಯೋ ಕಾಲ್‌ – ತನಿಖಾಧಿಕಾರಿಗಳ ಮುಂದೆ ದರ್ಶನ್‌ ಜಾಣನಡೆ!

    ಜೈಲಿನಲ್ಲಿದ್ದುಕೊಂಡೇ ವೀಡಿಯೋ ಕಾಲ್‌ – ತನಿಖಾಧಿಕಾರಿಗಳ ಮುಂದೆ ದರ್ಶನ್‌ ಜಾಣನಡೆ!

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ (Darshan) ಜೈಲಿನಲ್ಲಿದ್ದುಕೊಂಡೇ ರೌಡಿಶೀಟರ್ ಮೊಬೈಲ್‌ನಿಂದ ವಿಡಿಯೋ ಕಾಲ್‌ ಮಾಡಿರುವುದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗೆ (Police Investigation) ಮುಂದಾಗಿದ್ದಾರೆ. ಬುಧವಾರ ದರ್ಶನ್‌ ವಿಚಾರಣೆಯನ್ನೂ ನಡೆಸಿದ್ದಾರೆ. ಆದ್ರೆ ತನಿಖಾಧಿಕಾರಿಗಳ ಮುಂದೆ ದರ್ಶನ್‌ ಜಾಣನಡೆ ತೋರಿದ್ದಾರೆ ಎಂದು ತಿಳಿದುಬಂದಿದೆ.

    ಅಸಲಿಗೆ ನನ್ನ ಕೋಣೆಗೆ ಬಂದಿದ್ಯಾರು ಅನ್ನೋದೇ ಗೊತ್ತಿಲ್ಲ. ನಾನು ಮಾತನಾಡಿದ ವ್ಯಕ್ತಿಯೇ ನನಗೆ ಗೊತ್ತಿಲ್ಲ ಅಂತ ದರ್ಶನ್‌ ಹೇಳಿದ್ದಾರಂತೆ. ಅಷ್ಟೇ ಅಲ್ಲ. ಕರೆ ಮಾಡಿದವನು ಯಾರು ಎಂಬುದೇ ಗೊತ್ತಿಲ್ಲ. ವೀಡಿಯೋ ಕಾಲ್ (Video Call) ಮಾಡಿಕೊಂಡು ಬಂದ, ದರ್ಶನ್ ಸರ್ ಇದ್ದಾರೆ ಅಂತ ಹೇಳ್ಕೊಂಡು ಬಂದ, ಹಾಗೆಯೇ ನನ್ನ ಕಡೆ ಮೊಬೈಲ್ ತಿರುಗಿಸಿದ. ಆದ್ದರಿಂದ ನಾನು ವಿಶ್ ಮಾಡಿದೆ ಅಷ್ಟೇ ಎಂದಿದ್ದಾರೆ. ಇದನ್ನೂ ಓದಿ: Exclusive Video | ಜೈಲಲ್ಲಿದ್ದುಕೊಂಡೇ ವೀಡಿಯೊ ಕಾಲ್ – 25 ಸೆಕೆಂಡುಗಳ ಆ ವೀಡಿಯೋನಲ್ಲಿ ಏನಿದೆ?

    ನಾನು ಸೌಜನ್ಯಕ್ಕೆ ಹಾಯ್ ಎಂದು ಪ್ರತಿಕ್ರಿಯೆ ಕೊಟ್ಟೆ, ನಾನು ಬೈಯೋದಕ್ಕೆ ಸಾಧ್ಯವಾಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಿದೆ ಹೊರತು, ನಾನೇ ಬೇಕೆಂದು ವೀಡಿಯೋ ಕಾಲ್ ಮಾಡಿಲ್ಲ, ಅಂತ ದರ್ಶನ್ ವಿಚಾರಣೆ ವೇಳೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ʻಡೆವಿಲ್ʼ ದರ್ಶನ್ ಜೈಲಿನಲ್ಲೂ ಬಿಂದಾಸ್ ಲೈಫು – ಕಾಸು ಕೊಟ್ರೆ ಎಲ್ಲವೂ ಖುಲ್ಲಂ ಖುಲ್ಲನಾ..?

    ಏನಿದು ಆರೋಪ?
    ಇದೇ ಆಗಸ್ಟ್‌ 25 ರಂದು ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದುಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎನ್ನಲಾದ ಫೋಟೋವೊಂದು ಭಾರೀ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ದರ್ಶನ್‌ ಮೊಬೈಲ್‌ನಲ್ಲಿ ವೀಡಿಯೋ ಕಾಲ್‌ (Video Call) ಮೂಲಕ ಆಪ್ತರೊಬ್ಬರ ಜೊತೆ ಮಾತನಾಡಿರುವ ವೀಡಿಯೋ ಸಹ ವೈರಲ್‌ ಆಗಿತ್ತು. ಅತ್ಯಾಪ್ತವಾಗಿ ಮಾತನಾಡಿದ್ದ ದರ್ಶನ್, ಊಟ ಆಯ್ತಾ ಚಿನ್ನ, ಆರಾಮಾಗಿದ್ದೀನಿ ಅಂತ ಹೇಳಿದ್ದರು. ಸುಮಾರು 25 ಸೆಕೆಂಡುಗಳ ಈ ವೀಡಿಯೋ ಇದಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಜೈಲಲ್ಲಿ ಪೋಸ್ ಕೊಟ್ಟ ರೌಡಿಶೀಟರ್ ನಾಗ ಧರಿಸಿದ್ದ ಟಿ-ಶರ್ಟ್ ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

  • ಬೆತ್ತಲೆಯಾಗಿದ್ದು ವೀಡಿಯೋ ಮಾಡುವಂತೆ ಒತ್ತಾಯ- ಪತಿಯ ವಿರುದ್ಧ ಪತ್ನಿ ದೂರು

    ಬೆತ್ತಲೆಯಾಗಿದ್ದು ವೀಡಿಯೋ ಮಾಡುವಂತೆ ಒತ್ತಾಯ- ಪತಿಯ ವಿರುದ್ಧ ಪತ್ನಿ ದೂರು

    ಕಾಸರಗೋಡು: ಪತಿಯ ವಿರುದ್ಧವೇ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಕೇರಳದ ಕಾಸರಗೋಡು (Kasaragodu) ಜಿಲ್ಲೆಯ ನೀಲೇಶ್ವರಂನಲ್ಲಿ ನಡೆದಿದೆ.

    ಪತಿ ವಿರುದ್ಧ ದೂರು ನೀಡಿದ ಪತ್ನಿಗೆ 20 ವರ್ಷ ವಯಸ್ಸು. ಈಕೆಯ ಪತಿ ಬಂಕಲಂ ಮೂಲದವನು. ಮದುವೆಯಾದ ಬಳಿಕ ದಂಪತಿ ಪಾಲಾದಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಾರೆ. ಆದರೆ ಇದೀಗ ಪತಿ ಹಾಗೂ ಪತ್ನಿಯ ನಡುವ ವೈಮನಸ್ಸು ಮೂಡಿದ್ದು, ಠಾಣೆವರೆಗೆ ತಲುಪಿದೆ. ಇದನ್ನೂ ಓದಿ: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್‌ನ ಸ್ನೇಹಿತರಿಬ್ಬರು ದುರ್ಮರಣ

    ಪತ್ನಿಯ ದೂರಿನಲ್ಲೇನಿದೆ..?: ಪತಿ ಕೆಲ ವ್ಯಕ್ತಿಗಳಿಂದ ಹಣ ಪಡೆದಿದ್ದಾನೆ. ಅಂತೆಯೇ ಹಣ ಕೊಟ್ಟವರು ಪತಿ ಬೆನ್ನು ಬಿದ್ದಿದ್ದಾರೆ. ಅಲ್ಲದೆ ಅದರಲ್ಲಿ ಓರ್ವ, ಪತ್ನಿಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವೀಡಿಯೋ ಕರೆ ಮಾಡಲು ಒತ್ತಾಯಿಸಿದ್ದಾನೆ. ಅಂತೆಯೇ ಪತಿಯು ನಗ್ನವಾಗಿ ಇರುವಾಗ ವೀಡಿಯೋ ಕರೆ ಮಾಡುವಂತೆ ಪೀಡಿಸಿದ್ದಾನೆ. ಬೆದರಿಕೆ ಹಾಕಿ ಹಲ್ಲೆ ಮಾಡಿರುವ ಆರೋಪವನ್ನೂ ಪತ್ನಿ ಮಾಡಿದ್ದಾರೆ.

    ಸದ್ಯ ನೀಲೇಶ್ವರಂ ಪೊಲೀಸರು ಮಹಿಳೆಯ ದೂರು ಸ್ವೀಕರಿಸಿದ್ದಾರೆ. ಅಲ್ಲದೆ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಆಫರ್ ನೀಡಿದ ಕಿರಣ್ ರಾಥೋಡ್ : ಫೋಟೋ, ವಿಡಿಯೋಗೆ ಇಂತಿಷ್ಟು ರೇಟು

    ಬಿಗ್ ಆಫರ್ ನೀಡಿದ ಕಿರಣ್ ರಾಥೋಡ್ : ಫೋಟೋ, ವಿಡಿಯೋಗೆ ಇಂತಿಷ್ಟು ರೇಟು

    ನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಕಿರಣ್ ರಾಥೋಡ್ (kiran rathod), ಅವರ ಅಭಿಮಾನಿಗಳಿಗೆ ಬಿಗ್ ಆಫರ್ (Big Offer)  ನೀಡಿದ್ದಾರೆ. ಕೈಯಲ್ಲಿ ಸಿನಿಮಾ ಇಲ್ಲದ ಕಾರಣದಿಂದಾಗಿ ತಮ್ಮದೇ ಆಪ್ ವೊಂದನ್ನು ಸಿದ್ಧಪಡಿಸಿರುವ ಕಿರಣ್, ಆ ಮೂಲಕ ಅವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ಅವರು ಹಾಕಿದ್ದಾರೆ.

    ಕಿರಣ್ ರಾಥೋಡ್ ಸಿದ್ಧಪಡಿಸಿರುವ ಆಪ್ ಉಚಿತವಲ್ಲ. 49 ರೂಪಾಯಿ ಪಾವತಿಸಿ ಡೌನ್ ಲೋಡ್ ಮಾಡಬೇಕು. ಅಲ್ಲಿಂದಲೇ ಅವರನ್ನು ಸಂಪರ್ಕಿಸಬೇಕು. ಹಾಗಂತ ಅದು ಕೂಡ ಉಚಿತವಲ್ಲ, ಅವರೊಂದಿಗೆ ಮಾತನಾಡುವುದಕ್ಕೆ ಹತ್ತು ಸಾವಿರ ರೂಪಾಯಿಯನ್ನು ಫಿಕ್ಸ್ ಮಾಡಿದ್ದಾರೆ. ಹತ್ತು ಸಾವಿರ ರೂಪಾಯಿ ಪಾವತಿಸಿದರೆ ಅವರ ಜೊತೆ ಐದು ನಿಮಿಷ ಮಾತನಾಡಬಹುದಂತೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಇಷ್ಟೇ ಅಲ್ಲ ಒಂದು ಸಾವಿರ ರೂಪಾಯಿ ಪಾವತಿ ಮಾಡಿದರೆ ಅವರು ಎರಡು ಹಾಟ್ ಫೋಟೋಗಳನ್ನು ಕಳುಹಿಸುತ್ತಾರಂತೆ. ಅಷ್ಟೇ ಅಲ್ಲದೇ ಅವರೊಂದಿಗೆ ಡಿನ್ನರ್ ಕೂಡ ಮಾಡಬಹುದಂತೆ. ಅವರೊಂದಿಗೆ ಊಟ ಮಾಡಲು ಕೂಡ ಇಂತಿಷ್ಟು ಹಣವನ್ನು ಪಾವತಿಸಬೇಕು. ಅವರೊಂದಿಗೆ ಡಿನ್ನರ್ ಗೆ ಹೋಗಲು ಒಂದೂವರೆ ಲಕ್ಷ ರೂಪಾಯಿಯನ್ನು ಪಾವತಿಸಬೇಕಾಗುತ್ತದೆ.

    ವಿಡಿಯೋ ಕಾಲ್ (Video Call) ಕೂಡ ಮಾಡಬಹುದಾಗಿದ್ದು, ಇಂತಿಷ್ಟು ಸಮಯಕ್ಕೆ ಇಂತಿಷ್ಟು ರೂಪಾಯಿಯನ್ನು ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಹನ್ನೆರಡು ಸಾವಿರದಿಂದ ಶುರುವಾಗುವ ಈ ರೇಟು ಐವತ್ತು ಸಾವಿರ ರೂಪಾಯಿವರೆಗೂ ಇದೆ. ಈ ನಡೆಯು ಅನೇಕರಿಗೆ ಅಚ್ಚರಿ ಮೂಡಿಸಿದೆ. ಕಿರಣ್ ರಾಥೋಡ್ ಏನು ಮಾಡಲು ಹೊರಟಿದ್ದಾರೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

  • ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

    ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

    ಬೆಂಗಳೂರು: ವಿಡಿಯೋ ಕಾಲ್ (Video Call) ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಸ್ನೇಹಿತನಿಗೆ ಚಾಕು ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣಾ (HSR Layout Police Station) ವ್ಯಾಪ್ತಿಯಲ್ಲಿ ನಡೆದಿದೆ.

    ಲೆನಿನ್ ಕಲೆಕ್ಷನ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ತನ್ನ ಪತ್ನಿಯೊಂದಿಗೆ ಫೋನ್‌ನಲ್ಲಿ ಮಾತಾಡುತ್ತಿದ್ದ. ಈ ವೇಳೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎಂಬಾತ ಅಲ್ಲಿಗೆ ಬಂದಿದ್ದ. ರಾಜೇಶ್ ಮಿಶ್ರಾ ಫೋನ್ ನಲ್ಲಿ ಮಾತಾಡುತ್ತಿದ್ದನ್ನು ನೋಡಿ, ವಿಡಿಯೋ ಕಾಲ್ ಮಾಡು, ನಿನ್ನ ಹೆಂಡತಿಯನ್ನು (Wife) ನೋಡ್ಬೇಕು ಅಂದಿದ್ದಾನೆ. ಇದನ್ನೂ ಓದಿ: Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

    ಇದರಿಂದ ಕೋಪಗೊಂಡ ರಾಜೇಶ್ ಮಿಶ್ರಾ, ಸುರೇಶ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾನೆ. ಮಾತು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸುರೇಶ್ ರಾಜೇಶ್ ಮಿಶ್ರಾಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಜೇಶ್ ಮಿಶ್ರಾನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

    ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಆರೋಪಿ ಸುರೇಶ್ ನನ್ನ ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

    ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

    ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

    ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ ಮೇಜರ್ ಟ್ವಿಸ್ಟ್ ಪಡೆದುಕೊಂಡಿದೆ. ನಿನ್ನೆ ಶ್ರೀಗಳು ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‍ನ ಒಂದು ಪುಟ ವೈರಲ್ ಆದ ಬೆನ್ನಲ್ಲೆ ಇದೀಗ ಶ್ರೀಗಳ ವೀಡಿಯೋ ಕಾಲ್ ತುಣುಕೊಂದು ವೈರಲ್ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮಹಿಳೆಯೊಬ್ಬಳ ಜೊತೆ ಸ್ವಾಮೀಜಿ ವೀಡಿಯೋ ಕಾಲ್‍ನಲ್ಲಿ ಮಾತನಾಡುತ್ತಿರುವ ವೀಡಿಯೋ ದೊರೆತಿದ್ದು, ಇದರ ಹಿಂದಿರುವ ಕಾಣದ ಕೈಗಳ ಹುಡುಕಾಟ ಶುರುವಾಗಿದೆ.

    ಆದರೆ ಸ್ವಾಮಿಗಳ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಾಗಿದ್ದು, ಎಫ್‍ಐಆರ್‌ನಲ್ಲಿ ಅನಾಮಧೇಯ ಹೆಸರಿನಲ್ಲಿ 1 ಆರೋಪಿ ಎಂದು ಹೇಳಲಾಗಿದೆ. ಸ್ವಾಮೀಜಿಯ ಡೆತ್ ನೋಟ್‍ನಲ್ಲಿ ಹಲವರ ಹೆಸರು ಉಲ್ಲೇಖವಾಗಿದ್ದರೂ ಯಾರ ಹೆಸರೂ ಸಹ ಎಫ್‍ಐಆರ್‌ನಲ್ಲಿ ದಾಖಲಾಗದೆ ಇರೋದು ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡಲಾಗ್ತಿದ್ಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಇನ್ನು ಶ್ರೀಗಳನ್ನು ಖೆಡ್ಡಾಗೆ ಕೆಡವಲು 6 ತಿಂಗಳಿನಿಂದ ಕೆಲ ವ್ಯಕ್ತಿಗಳು ಕುತಂತ್ರ ಹೆಣೆಯಲಾಗಿತ್ತಂತೆ. ಮಹಿಳೆಯೊಂದಿಗೆ ಮಾತನಾಡುತ್ತಿದ್ದ ವೀಡಿಯೋ ಇರುವುದನ್ನು 1 ತಿಂಗಳ ಹಿಂದೆ ಶ್ರೀಗಳ ಗಮನಕ್ಕೆ ತರಲಾಗಿದ್ದು, ಈ ವಿಚಾರ ಗೊತ್ತಾಗುತ್ತಿದ್ದಂತೆ ಬಸವಲಿಂಗ ಸ್ವಾಮೀಜಿ ಖಿನ್ನತೆಗೆ ಒಳಗಾಗಿದ್ದರಂತೆ. ಸದ್ಯ ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ಒಂದು ವರ್ಷದ ಕಾಲ್ ಡಿಟೇಲ್ಸ್ ತೆಗೆದು ತನಿಖೆ ನಡೆಸುತ್ತಿದ್ದಾರೆ.

    ಅಲ್ಲದೇ ಬಸವಲಿಂಗ ಸ್ವಾಮಿ ಶ್ರೀಗಳ ವೈರಲ್ ಆಗಿರುವ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣ ಒಟ್ಟು 7 ಮಂದಿಯನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮತ್ತೊಂದೆಡೆ ಬಸವಲಿಂಗ ಶ್ರೀಗಳ ಆರಾಧನಾ ಕಾರ್ಯಕ್ರಮ ನಡೆಸುವ ಸಂಬಂಧ ಇಂದು ಮಠದ ಆವರಣದಲ್ಲಿ ಲಿಂಗಾಯತ ಮುಖಂಡರು ಸಭೆ ನಡೆಸಿದ್ದಾರೆ. ನ. 3 ರಂದು ಶ್ರೀಗಳ 11ನೇ ದಿನದ ಪುಣ್ಯತಿಥಿ ನಡೆಯಲಿದ್ದು, ಕಾರ್ಯಕ್ರಮದ ಉಸ್ತುವಾರಿಯನ್ನು ಬೆಂಗಳೂರಿನ ಬಿನ್ನಿಮಿಲ್ ಗುರುವಣ್ಣದೇವರ ಮಠದ ಶ್ರೀ ನಂಜುಂಡ ಸ್ವಾಮೀಜಿಗೆ ವಹಿಸಲಾಗಿದೆ. ಪುಣ್ಯತಿಥಿ ಬಳಿಕ ಮಠದ ಮುಂದಿನ ಉತ್ತರಾಧಿಕಾರಿ ನೇಮಕ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಒಟ್ಟಾರೆ ಷಡ್ಯಂತ್ರಕ್ಕೆ ಹೆದರಿ ಡೆತ್ ನೋಟ್ ಬರೆದು ಬಸವಲಿಂಗ ಶ್ರೀಗಳು ಸೂಸೈಡ್ ಮಾಡಿಕೊಂಡಿರೋದು ಬಹಿರಂಗವಾಗಿದೆ. ಶ್ರೀಗಳ ಡೆತ್‍ನೋಟ್ 2 ಮೊಬೈಲ್, ಬರವಣಿಗೆ ಸ್ಯಾಂಪಲ್ ಹಾಗೂ ಡೈರಿ ಜಪ್ತಿ ಮಾಡಿರುವ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಏನು ಎಂಬದನ್ನು ಬಯಲು ಮಾಡ್ತಾರಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

    Live Tv
    [brid partner=56869869 player=32851 video=960834 autoplay=true]

  • ನಿವೃತ್ತ ಪ್ರೊಫೆಸರ್‌ಗೆ ಯುವತಿ ಕಾಲ್ – ಅಶ್ಲೀಲ ವೀಡಿಯೋ ಮಾಡಿ 21 ಲಕ್ಷ ನಾಮ ಹಾಕಿದ್ಲು

    ನಿವೃತ್ತ ಪ್ರೊಫೆಸರ್‌ಗೆ ಯುವತಿ ಕಾಲ್ – ಅಶ್ಲೀಲ ವೀಡಿಯೋ ಮಾಡಿ 21 ಲಕ್ಷ ನಾಮ ಹಾಕಿದ್ಲು

    ಧಾರವಾಡ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ತಮ್ಮ ಖಾಸಗಿ ವೀಡಿಯೋಗಳನ್ನು ತೋರಿಸುವ ಮೂಲಕ ಜನರನ್ನು ಮರುಳು ಮಾಡಿ, ಅವರಿಂದ ಹಣ ಕಿತ್ತುಕೊಳ್ಳುವ ಜಾಲ ಹಬ್ಬುತ್ತಲೇ ಇದೆ. ಈಗ ಅದೇ ರೀತಿ ಯುವತಿಯೊಬ್ಬಳು ವೀಡಿಯೋ ಕಾಲ್ (Video Call) ಮುಖಾಂತರ ನಿವೃತ್ತ ಪ್ರೊಫೆಸರ್ (Retired Professor) ಒಬ್ಬರಿಗೆ ತನ್ನ ಖಾಸಗಿ ವೀಡಿಯೋ (Obscene Video) ತೋರಿಸಿ ದೊಡ್ಡ ಮೊಸವನ್ನೇ (Fraud) ಮಾಡಿದ್ದಾಳೆ.

    ಧಾರವಾಡದಲ್ಲಿ (Dharwad) ಇರುವ ನಿವೃತ್ತ ಪ್ರೊಫೆಸರ್ ಒಬ್ಬರಿಗೆ ಬರೋಬ್ಬರಿ 21 ಲಕ್ಷ ರೂ. ಹಣವನ್ನು ಉಂಡೆ ನಾಮ ಹಾಕಿರುವ ಯುವತಿ, ತನ್ನ ಸಹೋದರಿ ಮದುವೆಗೆ ಹಣ ಬೇಕು ಎಂದು ಮೊಬೈಲ್ ಕರೆ ಮಾಡಿ ಬೇಡಿಕೆ ಇಟ್ಟಿದ್ದಳು. ಮೊದಲು ಈ ನಿವೃತ್ತ ಪ್ರೊಫೆಸರ್‌ಗೆ ಮೊಬೈಲ್‌ನಲ್ಲಿ ಮಾತನಾಡುತ್ತ ಪರಿಚಯ ಮಾಡಿಕೊಂಡ ಯುವತಿ, ನಂತರ ಹಣದ ಬೇಡಿಕೆ ಇಟ್ಟಿದ್ದಾಳೆ.

    ಯುವತಿ ಹಣ ಕೇಳಿದಾಗ ನಿವೃತ್ತ ಪ್ರೊಫೆಸರ್ ಹಣ ಕೊಟ್ಟಿರಲಿಲ್ಲ. ಆಗ ವೀಡಿಯೋ ಕಾಲ್ ಮಾಡಿದ ಆ ಯುವತಿ, ಇವರ ಫೋಟೋ ತೆಗೆದುಕೊಂಡು ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಮಾರ್ಯಾದೆಗೆ ಅಂಜಿದ ನಿವೃತ್ತ ಪ್ರೊಫೆಸರ್, ಆಕೆ ಕೇಳಿದ್ದಕ್ಕೆ ಹಣ ಕೊಡುತ್ತಾ ಬಂದಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್‌ ಆಯ್ತು ವಿಶ್ವದ ದೊಡ್ಡ ವಿಮಾನ

    ನಿವೃತ್ತ ಪ್ರೊಫೆಸರ್ 21 ಲಕ್ಷ ರೂ. ಕಳೆದುಕೊಂಡ ಬಳಿಕ ಹುಬ್ಬಳ್ಳಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಅಂಜಲಿ ಶರ್ಮಾ ಎಂಬಾಕೆ ಇವರಿಗೆ ವಿಡಿಯೊ ಕಾಲ್ ಮಾಡಿದ್ರೆ, ಆಕೆಯ ಜೊತೆ ಇದ್ದ ವಿಕ್ರಂ ಸೈಬರ್ ಕ್ರೈಂ ದೆಹಲಿ ಪೊಲೀಸ್ ಎಂದು ಹೆಸರು ಹೇಳಿ ದುಡ್ಡು ಪೀಕಿದ್ದಾನೆ.

    ಸದ್ಯ ನನಗೆ ಆದ ರೀತಿ ಬೇರೆ ಯಾರಿಗೂ ಆಗದಿರಲಿ, ಅದರಲ್ಲೂ ಯುವಕರು ಇಂತಹ ಬಲೆಗೆ ಬೀಳಬಾರದು ಎಂದು ನಿವೃತ್ತ ಪ್ರೊಫೆಸರ್ ಹೇಳಿದ್ದಾರೆ. ಅಲ್ಲದೇ ದೆಹಲಿ ಸೈಬರ್ ಕ್ರೈಂ ಪೊಲೀಸರಿಗೂ ಈ ಬಗ್ಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿ ಹೆಸರಿನಲ್ಲಿ ಬಲವಂತದ ಮತಾಂತರ- ಮದುವೆ ಕಥೆ ಕಟ್ಟಿ ಧರ್ಮವನ್ನೇ ಬದಲಿಸಿದ!

    Live Tv
    [brid partner=56869869 player=32851 video=960834 autoplay=true]

  • ವೀಡಿಯೋ ಕಾಲ್ ಮಾಡಿ ನಗ್ನಳಾದ ಯುವತಿ – ರೆಕಾರ್ಡ್ ಇಟ್ಕೊಂಡು ಯುವಕನಿಗೆ ಬ್ಲ್ಯಾಕ್‌ಮೇಲ್

    ವೀಡಿಯೋ ಕಾಲ್ ಮಾಡಿ ನಗ್ನಳಾದ ಯುವತಿ – ರೆಕಾರ್ಡ್ ಇಟ್ಕೊಂಡು ಯುವಕನಿಗೆ ಬ್ಲ್ಯಾಕ್‌ಮೇಲ್

    ಮೈಸೂರು: ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿ, ನಾನಾ ಕ್ರಿಮಿನಲ್ ಐಡಿಯಾಗಳನ್ನು ಮಾಡಿ ಮುಗ್ದ ಜನರಿಂದ ಹಣ ದೋಚುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಂತೆಯೇ ಇಲ್ಲೊಬ್ಬ ಅಪರಿಚಿತ ಯುವತಿ ಯುವಕನೊಬ್ಬನಿಗೆ ವೀಡಿಯೋ ಕಾಲ್ ಮಾಡಿ, ಬಳಿಕ ಅದರ ರೆಕಾರ್ಡ್‌ಗಳನ್ನು ಇಟ್ಟುಕೊಂಡು ಹಣಕ್ಕಾಗಿ ಡಿಮಾಂಡ್ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

    ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಯುವಕ ವಾಸುವಿಗೆ ಭಾನುವಾರ ಬೆಳಗ್ಗೆ ಯುವತಿಯೊಬ್ಬಳಿಂದ ವೀಡಿಯೋ ಕಾಲ್ ಬಂದಿದೆ. ಆಕೆ ವೀಡಿಯೋ ಕಾಲ್ ಮಾಡುವುದಕ್ಕೂ ಮುನ್ನ ತನ್ನನ್ನು ಅಮೃತ ಎಂದು ಪರಿಚಯ ಮಾಡಿಕೊಂಡು ಚ್ಯಾಟ್ ಮಾಡಿದ್ದಾಳೆ. ಬಳಿಕ ವೀಡಿಯೋ ಕಾಲ್ ಮಾಡುತ್ತಲೇ ನಗ್ನಳಾಗಿದ್ದಾಳೆ. ಇದನ್ನೂ ಓದಿ: ಹಣದಾಸೆಗೆ ಮದುವೆ – ಅನಾರೋಗ್ಯದ ನೆಪ ಹೇಳಿ, ಹಣ ದೋಚಿಕೊಂಡು ಸೊಸೆ ಎಸ್ಕೇಪ್

    POLICE JEEP

     

    ಇದರಿಂದ ಕಸಿವಿಸಿಗೊಂಡ ವಾಸು ತಕ್ಷಣವೇ ವೀಡಿಯೋ ಕಾಲ್ ಅನ್ನು ಕಟ್ ಮಾಡಿದ್ದಾನೆ. ಆದರೆ ಬಳಿಕ ಅದೇ ವೀಡಿಯೋ ಕಾಲ್‌ನ ರೆಕಾರ್ಡ್ ಇಟ್ಟುಕೊಂಡು ಯುವತಿ ಹಣಕ್ಕಾಗಿ ಡಿಮಾಂಡ್ ಮಾಡಿದ್ದಾಳೆ. ಹಣ ಕೊಡದೇ ಹೋದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆಯನ್ನೂ ಒಡ್ಡಿದ್ದಾಳೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನ 2 ಕಡೆ ಮೊಟ್ಟೆ ದಾಳಿ

    ಈ ಹಿನ್ನೆಲೆ ವಾಸು ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಬಗ್ಗೆ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರಿಗೆ ವೀಡಿಯೋ ಕಾಲ್ ಮಾಡಿ ಅಸಭ್ಯ ವರ್ತನೆ – CPI ಅಮಾನತು

    ಮಹಿಳೆಯರಿಗೆ ವೀಡಿಯೋ ಕಾಲ್ ಮಾಡಿ ಅಸಭ್ಯ ವರ್ತನೆ – CPI ಅಮಾನತು

    ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡುತ್ತಿದ್ದ ಹಾವೇರಿಯ ಸಿಪಿಐ ಅನ್ನು ಅಮಾನತು ಮಾಡಲಾಗಿದೆ.

    ಮಹಿಳಾ ಪೊಲೀಸ್ ಠಾಣೆ ಸಿಪಿಐ ಚಿದಾನಂದ ದೂರು ನೀಡಲು ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವುದು ಅಲ್ಲದೇ ಅವರ ಜೊತೆಗೆ ವೀಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದನು. ಪ್ರಸ್ತುತ ಆ ವೀಡಿಯೋಗಳು ಸಹ ವೈರಲ್ ಆಗಿದೆ. ಇದನ್ನೂ ಓದಿ:  15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – 13 ಮಂದಿಗೆ 20 ವರ್ಷ ಜೈಲು

    ಠಾಣೆಗೆ ಬಂದ ಮಹಿಳೆಯರ ನಂಬರ್ ತೆಗೆದುಕೊಂಡು ಅವರಿಗೆ ಚಿದಾನಂದ ಬಾತ್ ರೂಂನಲ್ಲಿದ್ದಾಗ ವೀಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದನು. ಮಹಿಳೆಯರ ಜೊತೆಗೆ ಫೋನ್ ನಲ್ಲಿ ಕೆಟ್ಟದಾಗಿ ಮಾತನಾಡಿದ್ದು, ಓರ್ವ ಮಹಿಳೆಗೆ ಮಂಚಕ್ಕೆ ಕರೆದಿದ್ದಾನೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

    ಈ ಹಿನ್ನೆಲೆ ಈತನ ವಿರುದ್ಧ ಎಸ್‍ಪಿ, ಪೂರ್ವ ವಲಯ ಐಜಿಪಿ ರವಿ.ಎಸ್ ಸೇರಿದಂತೆ ಹಲವರಿಗೆ ಮಹಿಳೆಯರು ದೂರು ನೀಡಿದ್ದು, ಅವರ ದೂರನ್ನು ಆಧರಿಸಿ ಪೂರ್ವ ವಲಯ ಐಜಿಪಿ ಹಾಗೂ ಅಧಿಕಾರಿಗಳು ಚಿದಾನಂದ ಬಗ್ಗೆ ತನಿಖೆ ಮಾಡಿದ್ದಾರೆ. ನಂತರ ಆತನನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಚಾರ್ಜಿಂಗ್ ವೇಳೆ ಸ್ಫೋಟ- ಓರ್ವ ಸಾವು, ನಾಲ್ವರು ಗಂಭೀರ

  • ಪತ್ನಿಗೆ ವೀಡಿಯೋ ಕರೆ ಮಾಡಿ ಮಾತಾಡುತ್ತಲೇ ನೇಣಿಗೆ ಶರಣಾದ!

    ಪತ್ನಿಗೆ ವೀಡಿಯೋ ಕರೆ ಮಾಡಿ ಮಾತಾಡುತ್ತಲೇ ನೇಣಿಗೆ ಶರಣಾದ!

    ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ವೀಡಿಯೋ ಕರೆ ಮಾಡಿ, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಎಂದು ಗುರುತಿಸಲಾಗಿದೆ. ಅಸ್ಪಾಕ್ ತಗಡಿ ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲದ ನಿವಾಸಿ. ಇವರು ಕಳೆದ ಎರಡೂವರೆ ವರ್ಷದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಅಸ್ಪಾಕ್ ತಗಡಿಗೆ ಒಂದೂವರೆ ತಿಂಗಳ ಮಗುವಿದ್ದು, ಪತ್ನಿ ಬಾಣಂತನಕ್ಕೆ ತವರು ಮನೆಗೆ ತೆರಳಿದ್ದರು. ಇದನ್ನೂ ಓದಿ: ಪೆಟ್ರೋಲ್,ಡೀಸೆಲ್ ದರ ಇಳಿಕೆ ದೀಪಾವಳಿ ಕೊಡುಗೆ ಅಲ್ಲ, ಉಪಚುನಾವಣೆಗಳ ಕೊಡುಗೆ: ಸಿದ್ದರಾಮಯ್ಯ

    ವಿವಾಹವಾದ ಎರಡು ಮೂರು ತಿಂಗಳ ನಂತರದಿಂದಲೇ ಸಣ್ಣ ಪುಟ್ಟ ವಿಷಯಕ್ಕೆ ಪತಿ ಪತ್ನಿ ಇಬ್ಬರು ಜಗಳ ಆಡುತ್ತಿದ್ದರು ಎನ್ನಲಾಗಿದೆ. ಬುಧವಾರ ರಾತ್ರಿ ಸಹ ಪತ್ನಿಗೆ ವೀಡಿಯೋ ಕರೆ ಮಾಡಿದ್ದ ಅಸ್ಪಾಕ್ ತಗಡಿ ಈ ವೇಳೆಯೂ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೇ ಅತ್ತೆ ಮಾವನೊಂದಿಗೂ ಸಹ ಜಗಳವಾಡಿದ್ದಾನೆ ಎನ್ನಲಾಗಿದೆ. ಜಗಳ ಆಡುತ್ತಿರುವಾಗಲೇ ನೇಣು ಹಾಕಿಕೊಳ್ಳುವ ದೃಶ್ಯವನ್ನು ಪತ್ನಿಗೆ ತೋರಿಸಿದ್ದಾನೆ. ಪತಿಯ ಆತ್ಮಹತ್ಯೆ ನಿರ್ಧಾರಕ್ಕೆ ಕಂಗಾಲಾದ ಪತ್ನಿ ನಂತರ ಕಾರಾಗೃಹದ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ವಿಷಯ ತಿಳಿದು ಇತರೆ ಸಿಬ್ಬಂದಿ ವಸತಿಗೃಹಕ್ಕೆ ತೆರಳಿ ನೋಡುವಷ್ಟರಲ್ಲಿ ಅಸ್ಪಾಕ್ ತಗಡಿ ಕೊನೆಯುಸಿರು ಎಳೆದಿದ್ದಾನೆ.

    ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ವ್ಯಕ್ತಿಯ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೈದ್ಯರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.