Tag: video call

  • ಒಂದು ಗಂಟೆಗೆ 15 ಬಾರಿ ವಿಡಿಯೋ ಕಾಲ್ ಮಾಡಿದ್ದಕ್ಕೆ ಕೇಸ್ ಬುಕ್

    ಒಂದು ಗಂಟೆಗೆ 15 ಬಾರಿ ವಿಡಿಯೋ ಕಾಲ್ ಮಾಡಿದ್ದಕ್ಕೆ ಕೇಸ್ ಬುಕ್

    ಮುಂಬೈ: ವ್ಯಕ್ತಿಯೊಬ್ಬ 36 ವರ್ಷದ ಮಹಿಳೆಗೆ ಒಂದು ಗಂಟೆಯಲ್ಲಿ 15 ಬಾರಿ ವಿಡಿಯೋ ಕರೆ ಮಾಡಿದ್ದರಿಂದ ಆತನ ವಿರುದ್ಧ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಂಧೇರಿಯ ಲೋಖಂಡ್ವಾಲಾ ನಿವಾಸಿ ಮಹಿಳೆಗೆ ವಿಡಿಯೋ ಕಾಲ್ ಬಂದಿದ್ದು, ವ್ಯಕ್ತಿಯೊಬ್ಬ ಒಂದು ಗಂಟೆಗೆ 15 ಬಾರಿ ಅಶ್ಲೀಲವಾಗಿ ವಿಡಿಯೋ ಕರೆಗಳನ್ನು ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

    ಏನಿದು ಪ್ರಕರಣ?
    ಜನವರಿ 26ರಂದು ಮಹಿಳೆ ಮಲಾಡ್ ನಲ್ಲಿರುವ ಮಾಲ್ ನಲ್ಲಿ ಶಾಪಿಂಗ್ ಮಾಡುತ್ತಿದ್ದರು. ವ್ಯಕ್ತಿಯೊಬ್ಬ ಮೊದಲ ಬಾರಿಗೆ ಮಹಿಳೆಗೆ ವಿಡಿಯೋ ಕಾಲ್ ಮಾಡಿದ್ದಾನೆ. ಆಗ ಫೋನಿನಲ್ಲಿ ಮಹಿಳೆಯ ಪತಿ ಸೋದರ ಸಂಬಂಧಿ ಹೆಸರು ಬಂದಿದೆ. ಆದ್ದರಿಂದ ಮಹಿಳೆ ಫೋನ್ ರಿಸೀವ್ ಮಾಡಿದ್ದಾರೆ. ಆದರೆ ಫೋನಿನ ಸ್ಕ್ರೀನ್ ಮೇಲೆ ಏನು ಕಾಣಿಸಲಿಲ್ಲ. ಬಳಿಕ ಮಹಿಳೆ ಕರೆಯನ್ನು ಕಟ್ ಮಾಡಿದ್ದಾರೆ. ಸ್ವಲ್ಪ ಸಮಯದ ನಂತರ ಮತ್ತೆ ಮಹಿಳೆಗೆ ಕರೆ ಬಂದಿದೆ. ಆಗ ಒಬ್ಬ ವ್ಯಕ್ತಿಯು ಅಶ್ಲೀಲವಾಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆ ಮನೆಗೆ ಸಂಜೆ ಸುಮಾರು 7.30ಕ್ಕೆ ಹೋಗಿದ್ದಾರೆ. ಅಷ್ಟರಲ್ಲಿಯೇ ಆರೋಪಿ ಅದೇ ನಂಬರಿಂದ 13 ಬಾರಿ ವಿಡಿಯೋ ಕಾಲ ಮಾಡಿದ್ದಾನೆ. ಕೊನೆಗೆ ಮಹಿಳೆ ನಂಬರ್ ನ್ನು ಬ್ಲಾಕ್ ಮಾಡಿದ್ದಾರೆ. ಬಳಿಕ ಈ ಬಗ್ಗೆ ಪತಿಗೆ ತಿಳಿಸಿ ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೇ ಜನವರಿ 28 ರಂದು ಓಶಿವಾರ ಪೊಲೀಸ್ ಠಾಣೆಯಲ್ಲಿ ಹಿರಿಯ ಇನ್ಸ್ ಪೆಕ್ಟರ್ ಶೈಲೇಶ್ ಪಾಸಲ್ವಾರನ್ನು ಭೇಟಿಯಾಗಿ ಪತಿ ದೂರು ದಾಖಲಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ವ್ಯಕ್ತಿಯ ಫೋನ್ ನಂಬರ್ ತೆಗೆದುಕೊಂಡಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನಿದ್ರೆ ಮಾಡ್ತಿದ್ದ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಮರ್ಮಾಂಗ ಪ್ರದರ್ಶಿಸಿದ ಕಾಮುಕ

    ನಿದ್ರೆ ಮಾಡ್ತಿದ್ದ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಮರ್ಮಾಂಗ ಪ್ರದರ್ಶಿಸಿದ ಕಾಮುಕ

    ಬೆಂಗಳೂರು: ಮಹಿಳೆಯರೇ ಅನಾಮಿಕ ನಂಬರ್ ನಿಂದ ಕರೆ ಬಂದರೆ ಪಿಕ್ ಮಾಡುವ ಮುನ್ನ ಹುಷಾರಾಗಿರಿ. ಏಕೆಂದರೆ ಕಾಮುಕರು ತಡರಾತ್ರಿ ವಿಡಿಯೋ ಕಾಲ್ ಮಾಡಿ ನಿಮ್ಮ ಮುಂದೆ ಬೆತ್ತಲೆ ನಿಲ್ಲುತ್ತಾರೆ.

    ಖಾಸಗಿ ಕಂಪನಿಯ ಮಹಿಳಾ ಮ್ಯಾನೇಜರ್‍ಗೆ ಅಪರಿಚಿತನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ತಡರಾತ್ರಿ ವಿಡಿಯೋ ಕಾಲ್ ಮಾಡಿ ಮಹಿಳೆ ಮುಂದೆ ಬೆತ್ತಲಾಗಿ ನಿಂತಿದ್ದಾನೆ. ಕಳೆದ 12ರಂದು ನಸುಕಿನ ಜಾವ ಸುಮಾರು 2:47ಕ್ಕೆ ಕಾಮುಕ ಮಹಿಳೆಗೆ ಎರಡು ಬಾರಿ ವಿಡಿಯೋ ಕಾಲ್ ಮಾಡಿದ್ದಾನೆ.

    ಈ ವೇಳೆ ನಿದ್ರೆಯಲ್ಲಿದ್ದ ಮಹಿಳೆ ಒಮ್ಮೆ ಕಾಲ್ ಪಿಕ್ ಮಾಡಿ ಕಟ್ ಮಾಡಿದ್ದಾರೆ. ನಂತರ ಕಾಮುಕ ಮತ್ತೆ ವಿಡಿಯೋ ಕಾಲ್ ಮಾಡಿ ಮರ್ಮಾಂಗ ಪ್ರದರ್ಶನ ಮಾಡಿ ವಿಕೃತಿ ಮರೆದಿದ್ದಾನೆ. ಕಾಮುಕ ವಿಡಿಯೋ ಕಾಲ್ ನಲ್ಲಿ ವಿಕೃತಿ ಮೆರೆದಿದ್ದಲ್ಲದೇ, ಮಹಿಳೆಗೆ ಅಸಭ್ಯವಾಗಿ ನಿಂದಿಸಿದ್ದಾನೆ.

    ಮಹಿಳೆ ತನ್ನ ಮೇಲಾದ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದಾಳೆ. ಅಲ್ಲದೇ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾಳೆ. ಬೆಂಗಳೂರು ಸಿಟಿ ಪೊಲೀಸ್ ಪೇಜ್ ನಲ್ಲಿ ಮಹಿಳೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಂಡಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಭಾಸ್- ಅನುಷ್ಕಾ ಶೆಟ್ಟಿ ಪ್ರೀತಿಯಲ್ಲಿದ್ದಾರೆ- ಇಲ್ಲಿದೆ ಸಾಕ್ಷಿ

    ಪ್ರಭಾಸ್- ಅನುಷ್ಕಾ ಶೆಟ್ಟಿ ಪ್ರೀತಿಯಲ್ಲಿದ್ದಾರೆ- ಇಲ್ಲಿದೆ ಸಾಕ್ಷಿ

    ಹೈದರಾಬಾದ್: ಟಾಲಿವುಡ್‍ನ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿ ಹಾರಿದಾಡುತ್ತಿತ್ತು. ಆದರೆ ಈ ಜೋಡಿ ಇದೆಲ್ಲಾ ಸುಳ್ಳು ಎಂದು ಹೇಳುತ್ತಾ ತಿರುಗುತ್ತಿದ್ದರು. ಈಗ ಈ ಜೋಡಿ ಪ್ರೀತಿಯಲ್ಲಿದ್ದಾರೆ ಎಂಬುದು ಸಾಬೀತಾಗಿದೆ.

    ಅನುಷ್ಕಾ ಮತ್ತು ಪ್ರಭಾಸ್ ಅವರ ಪ್ರೀತಿ ರಿವೀಲ್ ಆಗುತ್ತಿಲ್ಲ. ಈ ನಡುವೆ ಹೊಸ ಸುದ್ದಿಯೊಂದು ಓಡಾಡುತ್ತಿದೆ. ಈ ಜೋಡಿ ದಿನೇ ದಿನೇ ಪರಸ್ಪರ ಮಿಸ್ ಮಾಡಿಕೊಳ್ಳುತ್ತಾರೆ ಎನ್ನುವುದು ಈಗ ರಿವೀಲ್ ಆಗಿದೆ.

    ಸಾಹೋ ಚಿತ್ರದಲ್ಲೂ ಪ್ರಭಾಸ್‍ಗೆ ಅನುಷ್ಕಾ ಜೋಡಿಯಾಗಬೇಕಿತ್ತು ಎನ್ನುವ ಸುದ್ದಿ ಹಬ್ಬಿತ್ತು. ಆದರೆ ಸಾಹೋ ಚಿತ್ರದಲ್ಲಿ ಅನುಷ್ಕಾ ಬದಲು ಶ್ರದ್ಧಾ ಕಪೂರ್ ಆಯ್ಕೆಯಾಗಿದ್ದಾರೆ. ಈ ನಡುವೆ ಅನುಷ್ಕಾ ಮತ್ತು ಪ್ರಭಾಸ್ ಪರಸ್ಪರ ಬೇರೆ ಬೇರೆ ಚಿತ್ರಗಳಲ್ಲಿ ಬ್ಯುಸಿಯಾದ್ದರು. ಈ ನಡುವೆ ಇಬ್ಬರು ವಿಡಿಯೋ ಕಾಲ್ ಮೂಲಕ ಮಾತನಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ರಿವಿಲ್ ಆಗಿದೆ.

    ಇಬ್ಬರ ನಡುವೆ ಇರೋದು ಸ್ನೇಹಾನಾ ಪ್ರೀತಿನಾ ಎನ್ನುವುದು ರಹಸ್ಯವಾಗಿದೆ. ಇಬ್ಬರೂ ಅನುಭವಿಸುತ್ತಿರುವ ವಿರಹ ವೇದನೆ ಈಗಂತೂ ಜಗತ್ತಿನ ಮುಂದೆ ಬಂದಿದೆ. ಪರಸ್ಪರ ಶೂಟಿಂಗ್ ಗಾಗಿ ಬೇರೆ ಬೇರೆ ಸ್ಥಳದಲ್ಲಿರುವಾಗ ಈ ಜೋಡಿ ಬರೀ ಕಾಲ್ ಅಲ್ಲ, ವೀಡಿಯೋ ಕಾಲ್ ಮೂಲಕ ಗಂಟೆಗಟ್ಟಲೆ ಮಾತನಾಡಿಕೊಳ್ಳುತ್ತಾರೆ. ಪ್ರತಿ ದಿನ ಬಿಡುವಿದ್ದರೆ ಸಾಕು ಇಬ್ಬರ ಮೊಬೈಲ್‍ಗಳೂ ವೇಟಿಂಗ್ ನಲ್ಲಿಯೇ ಇರುತ್ತದೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

  • ಲೈವ್ ವಿಡಿಯೋ ಕರೆ ಮಾಡಿ ಪ್ರೇಮಿ ಆತ್ಮಹತ್ಯೆ- ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ರೂ ನಗುತ್ತಿದ್ದ ಯುವತಿ!

    ಲೈವ್ ವಿಡಿಯೋ ಕರೆ ಮಾಡಿ ಪ್ರೇಮಿ ಆತ್ಮಹತ್ಯೆ- ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ರೂ ನಗುತ್ತಿದ್ದ ಯುವತಿ!

    ಹೈದರಾಬಾದ್: ಪ್ರೀತಿ ವಿಫಲವಾಗಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನ ಮುಲ್ಕಾಜ್‍ಗಿರಿ ವಿನಾಯಕ್ ನಗರದಲ್ಲಿ ನಡೆದಿದೆ.

    ಸಾಗರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಸಾಗರ್ ಕೆಲ ದಿನಗಳಿಂದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ತನ್ನ ಪ್ರೀತಿಯ ವಿಚಾರವನ್ನು ಆಕೆಗೆ ತಿಳಿಸಿದ್ದ. ಆದರೆ ಆ ಯುವತಿ ಸಾಗರ್ ಪ್ರೀತಿಯನ್ನು ನಿರಾಕರಿಸಿದ್ದಳು. ಅಲ್ಲದೇ ಈ ವಿಷಯ ಯುವತಿ ಕುಟುಂಬಸ್ಥರಿಗೂ ತಿಳಿದು ಸಾಗರ್‍ಗೆ ಎಚ್ಚರಿಕೆ ನೀಡಿದ್ದರು.

    ಇತ್ತ ಮಗನ ಪ್ರೀತಿಯ ವಿಷಯವನ್ನು ತಿಳಿದ ಸಾಗರ್ ಪೋಷಕರು ಆತನಿಗೆ ಮದುವೆ ಮಾಡಲು ತಯಾರಿ ನಡೆಸಿದ್ದರು. ಇದರಿಂದ ತೀವ್ರವಾಗಿ ಮನನೊಂದ ಸಾಗರ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ.

    ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತನ್ನ ಪ್ರೇಯಸಿಗೆ ಮೆಸೇಜ್ ಕಳುಹಿಸಿ, ಇದನ್ನು ನೋಡಬೇಕಾದರೆ ವಿಡಿಯೋ ಕಾಲ್ ಮಾಡಲು ತಿಳಿಸಿದ್ದ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಯುವತಿ ಸಾಗರ್ ತಮಾಷೆ ಮಾಡುತ್ತಿದ್ದಾನೆ ಎಂದು ತಿಳಿದು ತನ್ನ ಇತರೇ ಸ್ನೇಹಿತರಿಗೆ ಮೇಸೆಜ್ ತೋರಿಸಿ ವಿಡಿಯೋ ಕಾಲ್ ಮಾಡಿದ್ದಾಳೆ.

    ಪ್ರೇಯಸಿ ವಿಡಿಯೋ ಕಾಲ್ ಮಾಡಿದ ಬಳಿಕ ಸಾಗರ್ ತನ್ನ ರೂಮಿನ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಈ ವೇಳೆ ಸಾಗರ್ ತಮಾಷೆ ಮಾಡುತ್ತಿದ್ದಾನೆ ಎಂದು ತಿಳಿದು ಬಿದ್ದು ಬಿದ್ದು ನಗಲು ಆರಂಭಿಸಿದ್ದಾಳೆ. ಆದರೆ ಸ್ವಲ್ಪ ಸಮಯದ ಬಳಿಕ ಸಾಗರ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

  • ಪ್ರೀತಿಯ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ದಚ್ಚು

    ಪ್ರೀತಿಯ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ದಚ್ಚು

    ಬೆಂಗಳೂರು: ಕ್ಯಾನ್ಸರ್ ನಿಂದ ಜೀವನದ ಕೊನೆಯ ಅಂಚಿನಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿಗೆ ದರ್ಶನ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ.

    ಶಿವಮೊಗ್ಗದ ರೇವಂತ್ ಅವರಿಗೆ ದರ್ಶನ್ ಅಂದ್ರೆ ಅಚ್ಚುಮೆಚ್ಚು. ನೆಚ್ಚಿನ ನಟನ ಎಲ್ಲಾ ಸಿನಿಮಾ ನೋಡಿರುವ ಅವರು, ಪ್ರತಿ ಹುಟ್ಟುಹಬ್ಬದ ದಿನ ಬೆಂಗಳೂರಿಗೆ ಹೋಗಿ ಶುಭ ಕೋರಿ ಬರುತ್ತಾರೆ. ದರ್ಶನ್ ಅವರನ್ನು ಭೇಟಿಯಾಗಬೇಕು, ಮಾತನಾಡಬೇಕೆಂಬ ಬಯಕೆ ಅವರಿಗೆ ಜಾಸ್ತಿಯಾಗಿತ್ತು. ಆದ್ದರಿಂದ ದರ್ಶನ್ ತಮ್ಮ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ, ನಾನು ಬ್ಯುಸಿಯಾಗಿದ್ದೇನೆ. ಆದಷ್ಟು ಬೇಗ ಬಂದು ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದ್ದಾರೆ.

    ಮೂಲತಃ ಶಿವಮೊಗ್ಗದವರಾದ ರೇವಂತ್, ತನ್ನ 20ನೇ ವಯಸ್ಸಿಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇವರಿಗೆ ತಮ್ಮ, ಅಕ್ಕ ಹಾಗೂ ಅಪ್ಪ-ಅಮ್ಮ ಇದ್ದಾರೆ. ಶಿವಮೊಗ್ಗದಲ್ಲಿ ವಾಸವಿರುವ ರೇವಂತ್ ಸಾಕಷ್ಟು ದಿನಗಳಿಂದ ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ನಂತರ ಬೆಂಗಳೂರಿಗೆ ಬಂದು ಚಿಕಿತ್ಸೆಯನ್ನು ಪಡೆದು ಹೋಗಿದ್ದರು. ಆದರೆ ಕ್ಯಾನ್ಸರ್ ಮತ್ತೆ ಕಾಣಿಸಿದ್ದು ಉಲ್ಭಣಿಸಿದೆ.

    ಪ್ರತಿ ವರ್ಷ ಫೆ.16ಕ್ಕೆ ರೇವಂತ್ ದರ್ಶನ್ ಹುಟ್ಟುಹಬ್ಬಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ಶುಭ ಹಾರೈಸುತ್ತಿದ್ದರು. ಆದರೆ ಈ ವರ್ಷ ದರ್ಶನ್ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ದುಖಃದಲ್ಲಿದ್ದರು. ವೈದ್ಯರು ಇನ್ನು ಮುಂದೆ ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿರುವ ರೇವಂತ್ ಅವರ ಕಡೆಯ ಆಸೆಯಾಗಿ ದರ್ಶನ್ ಅವರನ್ನು ನೋಡಬೇಕು ಎಂದು ಹೇಳಿದ್ದರು. ಇದನ್ನು ಓದಿ: ಪ್ರೀತಿಯ ಅಭಿಮಾನಿಯ ಕೊನೆ ಆಸೆಯನ್ನು ನೆರೆವೇರಿಸುತ್ತಾರಾ ದಚ್ಚು!?

  • ತಾಯಿಗೆ ವಿಡಿಯೋ ಕಾಲ್ ಮಾಡಿ ಗೃಹಿಣಿ ನಾಪತ್ತೆ ಪ್ರಕರಣ: ಸಹಾಯ ಮಾಡಿದ್ದ ಫೇಸ್ ಬುಕ್ ಗೆಳೆಯನಿಗೆ ಸಂಕಷ್ಟ

    ತಾಯಿಗೆ ವಿಡಿಯೋ ಕಾಲ್ ಮಾಡಿ ಗೃಹಿಣಿ ನಾಪತ್ತೆ ಪ್ರಕರಣ: ಸಹಾಯ ಮಾಡಿದ್ದ ಫೇಸ್ ಬುಕ್ ಗೆಳೆಯನಿಗೆ ಸಂಕಷ್ಟ

    ರಾಯಚೂರು: ತಾಯಿಗೆ ವಿಡಿಯೋ ಕಾಲ್ ಮಾಡಿ ಮೈಸೂರಿನಿಂದ ಮಗುವಿನೊಂದಿಗೆ ಪರಾರಿಯಾಗಿದ್ದ ಗೃಹಿಣಿಯ ಫೇಸ್ ಬುಕ್ ಗೆಳೆಯನಿಗೆ ಇದೀಗ ಕಾನೂನು ಭಯ ಶುರುವಾಗಿದೆ.

    ಹೌದು. ತನ್ನ ಪತಿ ಹಾಗೂ ಪತಿ ಮನೆಯವ ಕಿರುಕುಳ ತಾಳಲಾರದೆ ಹೊರಬಂದ ಮೈಸೂರು ಮೂಲದ ನಿಖಿತಾ ತನ್ನ ಫೆಸ್ ಬುಕ್ ಗೆಳೆಯನ ಮೂಲಕ ಆಶ್ರಮ ಸೇರಲು ರಾಯಚೂರಿಗೆ ಬಂದಿದ್ದರು. ಅಂತೆಯೇ ಸಹಾಯ ಮಾಡಿದ್ದ ಗೆಳೆಯ ಶಶಿಕಾಂತ್ ಇದೀಗ ಆತಂಕದಲ್ಲಿದ್ದಾರೆ.

    ಇದನ್ನೂ ಓದಿ: ತಾಯಿಗೆ ವಿಡಿಯೋ ಕಾಲ್ ಮಾಡಿ ನಾಪತ್ತೆಯಾಗಿದ್ದ ಗೃಹಿಣಿ ರಾಯಚೂರಿನಲ್ಲಿ ಪತ್ತೆ- ಪ್ರಕರಣಕ್ಕೆ ರೋಚಕ ಟ್ವಿಸ್ಟ್ 

    ರಾಯಚೂರಿನಿಂದ ನಿಖಿತಾಳ ಜೊತೆ ಶಶಿಕಾಂತ್ ಅವರನ್ನು ಕರೆದೊಯ್ದ ಮೈಸೂರಿನ ವಿಜಯನಗರ ಠಾಣೆ ಪೊಲೀಸರು, ಎರಡು ದಿನ ವಿಚಾರಣೆಗೊಳಪಡಿಸಿ ಬಿಟ್ಟಿದ್ದಾರೆ. ಇನ್ನು ನಿಖಿತಾಳನ್ನ ಆಕೆಯ ತಾಯಿ ಮನೆಗೆ ಬಿಟ್ಟಿದ್ದಾರೆ. ಆದ್ರೆ ತಂದೆಯ ಕಿರುಕುಳ ಇರುವುದರಿಂದ ತಾಯಿ ಹತ್ತಿರ ಬಿಟ್ಟರೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಖಿತಾ ಅವರು ಶಶಿಕಾಂತ್ ಬಳಿ ಹೇಳಿದ್ದರು.

    ಈಗ ನಿಖಿತಾ ಹೆಚ್ಚು ಕಡಿಮೆ ಮಾಡಿಕೊಂಡರೆ ನಾನು ಜವಾಬ್ದಾರನಲ್ಲ ನನ್ನದೇನು ತಪ್ಪಿಲ್ಲ. ಕಷ್ಟದಲ್ಲಿದ್ದಾಳೆ ಅಂತ ಸ್ನೇಹಿತೆ ಗೆ ಸಹಾಯ ಮಾಡಲು ಮುಂದಾಗಿರುವುದು ತಪ್ಪಾಗಿದೆ ಅಂತ ಶಶಿಕಾಂತ ಅಲವತ್ತುಕೊಳ್ಳುತ್ತಿದ್ದಾರೆ. ಈ ಕುರಿತು ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ತನ್ನ ಹೇಳಿಕೆ ನೀಡಲು ಮುಂದಾಗಿದ್ದಾರೆ.

    ಇದನ್ನೂ ಓದಿ: `ದಯವಿಟ್ಟು ಹುಡ್ಕೋ ಪ್ರಯತ್ನ ಮಾಡ್ಬೇಡಿ ಮಮ್ಮಿ’- ವಿಡಿಯೋ ಕಾಲ್ ಮಾಡಿ ಮಗುವಿನೊಂದಿಗೆ ಗೃಹಿಣಿ ನಾಪತ್ತೆ!

    https://www.youtube.com/watch?v=-CQL0kx4Nlc

     

  • ತಾಯಿಗೆ ವಿಡಿಯೋ ಕಾಲ್ ಮಾಡಿ ನಾಪತ್ತೆಯಾಗಿದ್ದ ಗೃಹಿಣಿ ರಾಯಚೂರಿನಲ್ಲಿ ಪತ್ತೆ- ಪ್ರಕರಣಕ್ಕೆ ರೋಚಕ ಟ್ವಿಸ್ಟ್

    ತಾಯಿಗೆ ವಿಡಿಯೋ ಕಾಲ್ ಮಾಡಿ ನಾಪತ್ತೆಯಾಗಿದ್ದ ಗೃಹಿಣಿ ರಾಯಚೂರಿನಲ್ಲಿ ಪತ್ತೆ- ಪ್ರಕರಣಕ್ಕೆ ರೋಚಕ ಟ್ವಿಸ್ಟ್

    ರಾಯಚೂರು: ಪತಿ ಹಾಗೂ ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ನಾಪತ್ತೆಯಾಗಿದ್ದ ಮೈಸೂರು ಮೂಲದ ಮಹಿಳೆ ರಾಯಚೂರಿನಲ್ಲಿ ಪತ್ತೆಯಾಗಿದ್ದಾರೆ.

    ಮನೆಯಿಂದ ಹೊರಬರುವ ಮೊದಲು ತಾಯಿಗೆ ವಿಡಿಯೋ ಕಾಲ್ ಮಾಡಿ ಗಂಡ ಮಂಜುನಾಥ್‍ನ ಕಿರುಕುಳದ ಬಗ್ಗೆ ಹೇಳಿದ್ದ ನಿಖಿತಾ, ರಾಯಚೂರಿನಲ್ಲಿ ಆಶ್ರಮ ಸೇರಲು ಬಂದಿದ್ದರು. ಒಂದು ಕಡೆ ಗಂಡ ಹಾಗೂ ಆತನ ಮನೆಯವರಿಂದ ಚಿತ್ರ ಹಿಂಸೆ, ಇನ್ನೊಂದೆಡೆ ಹೆತ್ತ ತಂದೆಯಿಂದಲೇ ಲೈಂಗಿಕ ಕಿರುಕುಳ ಯತ್ನ ನಡೆಯುತ್ತಿದ್ದರಿಂದ ಬೇಸತ್ತು ಹೊರ ಬಂದಿರುವುದಾಗಿ ನಿಖಿತಾ ಹೇಳಿದ್ದಾರೆ.

    ಇದನ್ನೂ ಓದಿ: `ದಯವಿಟ್ಟು ಹುಡ್ಕೋ ಪ್ರಯತ್ನ ಮಾಡ್ಬೇಡಿ ಮಮ್ಮಿ’- ವಿಡಿಯೋ ಕಾಲ್ ಮಾಡಿ ಮಗುವಿನೊಂದಿಗೆ ಗೃಹಿಣಿ ನಾಪತ್ತೆ!

    ಸಾಯುವ ನಿರ್ಧಾರದೊಂದಿಗೆ ಮಗುವಿನೊಂದಿಗೆ ಮನೆಯಿಂದ ಹೊರಬಂದ ನಿಖಿತಾ, ರಾಯಚೂರಿನ ಫೇಸ್‍ಬುಕ್ ಸ್ನೇಹಿತ ಶಶಿಕಾಂತ್ ಸಹಾಯದಿಂದ ಆಶ್ರಮ ಸೇರಲು ಮುಂದಾಗಿದ್ದಾರೆ. ಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ಕಿರುಕುಳ ಹಾಗೂ ಪದೇ ಪದೇ ಅನುಮಾನಿಸುತ್ತಿದ್ದ ಗಂಡ ಕುಡಿದು ಬಂದು ಸಿಗರೇಟ್ ನಿಂದ ಮೈಯಲ್ಲಾ ಸುಡುತ್ತಿದ್ದರು. ಊಟದಲ್ಲಿ ಫಿನಾಯಿಲ್ ಹಾಕಿ ತಿನ್ನಲು ಒತ್ತಾಯಿಸುತ್ತಿದ್ದರು ಅಂತ ನಿಖಿತಾ ಆರೋಪಿಸಿದ್ದಾರೆ.

    ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ನಿಖಿತಾರನ್ನ ಹುಡುಕುತ್ತಿದ್ದು, ಇದೀಗ ರಾಯಚೂರಿನಲ್ಲಿ ಬೀಡುಬಿಟ್ಟಿದ್ದಾರೆ. ಒಂದು ವೇಳೆ ಪೊಲೀಸರು ಮರಳಿ ಕರೆದೊಯ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಖಿತಾ ಹೇಳಿದ್ದಾರೆ.

    https://www.youtube.com/watch?v=-CQL0kx4Nlc