Tag: video record

  • ಟ್ಯೂಷನ್ ಟೀಚರ್ ಸ್ನಾನದ ವೀಡಿಯೋ ಸೆರೆಹಿಡಿದು ಸಿಕ್ಕಿಬಿದ್ದ ಹುಡ್ಗ

    ಟ್ಯೂಷನ್ ಟೀಚರ್ ಸ್ನಾನದ ವೀಡಿಯೋ ಸೆರೆಹಿಡಿದು ಸಿಕ್ಕಿಬಿದ್ದ ಹುಡ್ಗ

    ಮುಂಬೈ: ಟ್ಯೂಷನ್ ಶಿಕ್ಷಕಿ ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಸೆರೆಹಿಡಿದಿದ್ದಕ್ಕೆ 16 ವರ್ಷದ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಹುಡುಗ ತನ್ನ ಶಿಕ್ಷಕಿ ಸ್ನಾನ ಮಾಡಲು ತೆರಳುವ ಮುನ್ನ ಬಾತ್ ರೂಮ್‍ನಲ್ಲಿ ಮೊಬೈಲ್ ಫೋನ್‍ನನ್ನು ಬಚ್ಚಿಟ್ಟಿದ್ದಾನೆ. ಹುಡುಗನಿಗೆ 10-11 ವರ್ಷದವನಾಗಿದ್ದಗಲಿಂದಲೂ ಶಿಕ್ಷಕಿ ಇಂಗ್ಲಿಷ್ ಹೇಳಿಕೊಡುತ್ತಿದ್ದರು. ಆದರೆ ಒಮ್ಮೆ ಮೊಬೈಲ್ ಫೋನ್ ಬಾತ್ ರೂಂನ ಸೋಪ್ ಬಾಕ್ಸ್ ಹಿಂದೆ ಕಂಡುಬಂದಿದ್ದು, ಶಿಕ್ಷಕಿ ಸ್ನಾನ ಮಾಡುತ್ತಿರುವ ವೀಡಿಯೋ ರೆಕಾರ್ಡ್ ಆಗುತ್ತಿರುವ ಬಗ್ಗೆ ತಿಳಿದುಬಂದಿದೆ. ಇದನ್ನೂ ಓದಿ: ಪರೀಕ್ಷೆಯ ಒತ್ತಡ ನಿಭಾಯಿಸುವುದು ಹೇಗೆ- ವಿದ್ಯಾರ್ಥಿಗಳಿಗೆ ಮೋದಿ ಟಿಪ್ಸ್‌

    ನಂತರ ಮೊಬೈಲ್ ಫೋನ್ ಪರಿಶೀಲಿಸಿದ ಶಿಕ್ಷಕಿಗೆ ತನ್ನ ಬೆತ್ತಲೆಯ ಹಳೆಯ ಫೋಟೋ ಹಾಗೂ ವೀಡಿಯೋಗಳನ್ನು ನೋಡಿ ಶಾಕ್ ಆಗಿದ್ದಾರೆ. ಬಳಿಕ ಪುಣೆಯ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ಹುಡುಗನ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಹುಡುಗನ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಸಿದ್ದಾರೆ. ಇದನ್ನೂ ಓದಿ: 20 ಕಡೆ ದಾಳಿ, ಸಾವಿರಾರು ಜನರ ಹತ್ಯೆ – ಮೋದಿಗೆ ಕೊಲೆ ಬೆದರಿಕೆ

  • ವೀರಪುತ್ರ ಅಭಿನಂದನ್ ಬಿಡುಗಡೆ ವಿಳಂಬವಾಗಿದ್ದೇಕೆ..?

    ವೀರಪುತ್ರ ಅಭಿನಂದನ್ ಬಿಡುಗಡೆ ವಿಳಂಬವಾಗಿದ್ದೇಕೆ..?

    ನವದೆಹಲಿ: ಭಾರತೀಯ ಹೆಮ್ಮೆಯ ಯೋಧ, ಪೈಲಟ್ ಅಭಿನಂದನ್ ವರ್ಧಮಾನ್ ಅವರ ಬಿಡುಗಡೆ ವಿಚಾರದಲ್ಲಿ ಕೊನೆಯವರೆಗೂ ಪಾಕಿಸ್ತಾನ ಆಟವಾಡಿದ್ದು, ಭಾರತೀಯ ಆಕ್ರೋಶಕ್ಕೆ ಕಾರಣವಾಗಿತ್ತು.

    ಶುಕ್ರವಾರ ಮಧ್ಯಾಹ್ನದ ವೇಳೆಗೆ ಭಾರತದ ಪೈಲಟ್ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನ ಕೊನೆ ಕ್ಷಣದವರೆಗೂ ಕಿರಿಕ್ ತೆಗೆದಿದೆ. ಭಾರತಕ್ಕೆ ಹಸ್ತಾಂತರ ಮಾಡುವುದಕ್ಕೂ ಮೊದಲು ಪಾಕ್ ನಿಂದ ಅಭಿನಂದನ್ ಕೈಯಲ್ಲಿ ವಿಡಿಯೋ ರೆಕಾರ್ಡ್ ಮಾಡಿಸಲಾಗಿತ್ತು.

    ವಿಡಿಯೋ ರೆಕಾರ್ಡ್ ಮಾಡಿಯೇ ಹಸ್ತಾಂತರ ಮಾಡುವುದೆಂದು ಪಾಕ್ ಹಟಕ್ಕೆ ಬಿದ್ದಿತ್ತು. ನಾಲ್ಕೈದು ಗಂಟೆ ಲಾಹೋರ್ ನಲ್ಲಿ ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು ಕಿರಿಕ್ ತೆಗೆದಿದ್ದರು. ಹೀಗಾಗಿ ಸಂಜೆ 4 ಗಂಟೆಗೆ ಲಾಹೋರ್‍ಗೆ ಬಂದರೂ ಭಾರತ ಪ್ರವೇಶಿಸುವ ವೇಳೆ ರಾತ್ರಿ 9 ಗಂಟೆ ಆಗಿದೆ ಎಂಬುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಅವರನ್ನು ನೋಡಲು ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದರು. ಭಾರತೀಯ ಅಭಿಮಾನಿಗಳ ಈ ಛಲ ರಾತ್ರಿಯಾದ್ರೂ ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

    ಅಭಿನಂದನ್ ಅವರನ್ನು ಸ್ವಾಗತ ಮಾಡಲು ವಾಯುಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಹಾಗೂ ಭಾರತ ಸರ್ಕಾರದ ಅಧಿಕಾರಿಗಳು ವಾಘಾ ಗಡಿಗೆ ಆಗಮಿಸಿದ್ದರು. ಅಲ್ಲದೇ ಅಭಿನಂದನ್ ಪೋಷಕರು ಕೂಡ ಸ್ಥಳದಲ್ಲಿ ಹಾಜರಿದ್ದರು. ವಾಘಾ ಗಡಿಯಿಂದ ನೇರ ಅವರನ್ನು ಅಮೃತಸರಕ್ಕೆ ಕರೆದ್ಯೊಯಲಾಯಿತು. ಆ ಬಳಿಕ ಅಲ್ಲಿಂದ ಸೇನಾಧಿಕಾರಿಗಳೊಂದಿಗೆ ದೆಹಲಿಗೆ ವಿಮಾನದಲ್ಲಿ ಕರೆತಂದಿದ್ದಾರೆ. ದೆಹಲಿಯಲ್ಲಿಂದು ಅವರ ಆರೋಗ್ಯ ತಪಾಸಣೆ ಹಾಗೂ ಸೇನಾ ವಿಚಾರಣೆ ನಡೆಯಲಿದೆ.

    https://www.youtube.com/watch?v=ArvRnqPs81s

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv