Tag: vidhan sabha session

  • ಸದನದಲ್ಲಿ ಶರ್ಟ್ ಬಿಚ್ಚಿ ಆಕ್ರೋಶ ಹೊರಹಾಕಿದ ಕೈ ಶಾಸಕ ಬಿ.ಕೆ ಸಂಗಮೇಶ್

    ಸದನದಲ್ಲಿ ಶರ್ಟ್ ಬಿಚ್ಚಿ ಆಕ್ರೋಶ ಹೊರಹಾಕಿದ ಕೈ ಶಾಸಕ ಬಿ.ಕೆ ಸಂಗಮೇಶ್

    – ತನ್ನನ್ನು ತಾನು ಸಮರ್ಥಿಸಿಕೊಂಡ ಎಂಎಲ್‍ಎ

    ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರು ಶರ್ಟ್ ಬಿಚ್ಚಿ ತಮ್ಮ ಆಕ್ರೋಶ ಹೊರಹಾಕಿರುವ ಪ್ರಸಂಗ ನಡೆದಿದೆ.

     

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ಬೇಕು ಅಂತಾನೇ ಶರ್ಟ್ ಬಿಚ್ಚಿದ್ದು, ನನಗೆ ವಿಷಾದ ಇಲ್ಲ. ನ್ಯಾಯ ಸಿಗಬೇಕು ಎಂದೇ ಶರ್ಟ್ ಬಿಚ್ಚಿದ್ದು. ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ಬಿಜೆಪಿ ಪರ, ನಾನು ಧರಣಿ ಮುಂದುವರಿಸುತ್ತೇನೆ. ಅಪ್ಪ ಮಕ್ಕಳು, ಈಶ್ವರಪ್ಪ ಭದ್ರಾವತಿಯನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ನಿಂತಿದ್ದಾರೆ ಎಂದರು.

    ವಿಧಾನಸಭಾ ಕಲಾಪದಲ್ಲಿ ಒಂದು ದೇಶ ಒಂದು ಚುನಾವಣೆ ಕುರಿತು ವಿಶೇಷ ಚರ್ಚೆ ಬಗ್ಗೆ ಸ್ಪೀಕರ್ ಕಾಗೇರಿ ಪ್ರಸ್ತಾಪಿಸಿದರು. ಈ ವೇಳೆ ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ನಿಯಮಾವಳಿಗಳಲ್ಲಿ ಈ ಚರ್ಚೆ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು.

    ವಿಧಾನಸಭೆ ಕಲಾಪಕ್ಕೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಅಖಂಡ ಶ್ರೀನಿವಾಸ್, ಕಲಾಪಕ್ಕೆ ಜೆಡಿಎಸ್ ನಾಯಕ ಹೆಚ್‍ಡಿಕೆ ಗೈರಾಗಿದ್ದಾರೆ ಎಂದರು. ಈ ವೇಳೆ ಸಿದ್ದರಾಮಯ್ಯರವರಿಗೆ ಸಾಥ್ ನೀಡಿದ ರಮೇಶ್ ಕುಮಾರ್ ಮತ್ತು ಹೆಚ್.ಕೆಪಾಟೀಲ್ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆಗೆ ಅವಕಾಶ ಕೊಟ್ಟರೆ ಕ್ರಿಯಾಲೋಪ ಆಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮಧ್ಯೆ ಎದ್ದು ನಿಂತು ಸಿಎಂ ಬಿಎಸ್ ಯಡಿಯೂರಪ್ಪ ಸ್ಪೀಕರ್ ಅವರು ಸಂವಿಧಾನದ ಚೌಕಟ್ಟಿನಲ್ಲೇ ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ ಸಹಕರಿ ಎಂದು ಮನವಿ ಮಾಡಿದರು.

    ಈ ಎಲ್ಲಾ ಗೊಂದಲಗಳ ನಡುವೆ ಸ್ಪೀಕರ್ ಒಂದು ದೇಶ ಒಂದು ಚುನಾವಣೆ ಚರ್ಚೆಯ ಪ್ರಸ್ತಾವನೆ ಓದಲು ಮುಂದುವರಿಸಿದರು. ಈ ವೇಳೆ ಇದು ಆರ್‍ಎಸ್‍ಎಸ್ ಅಜೆಂಡಾ, ಪ್ರಧಾನಿ ಡಿಕ್ಟೇಟರ್ ಎಂದು ಸಿದ್ದರಾಮಯ್ಯ ಜರಿದರು. ಅಲ್ಲದೆ ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಇದರಿಂದ ಕೋಪಗೊಂಡ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ 19 ಜನ ಮಾತನಾಡುವವರ ಪಟ್ಟಿಯನ್ನು ಕೊಟ್ಟಿದ್ದೀರಿ. ಮೊದಲಿನಿಂದಲೂ ಇದನ್ನು ಒಪ್ಪಿಕೊಂಡು ಈಗ ಬೆಳಗ್ಗೆ ಏಕಾಏಕಿ ಬೇಡ ಅಂದರೆ ಏನು ಅರ್ಥ. ಇದು ಯಾರಿಗೂ ಕ್ಷೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

  • ರೇವಣ್ಣನಿಗೆ ನೀವು ನಿಂಬೆಹಣ್ಣು ಕೊಟ್ಟು ಸಿಎಂ ಆದ್ರಾ? ಬಿಎಸ್‍ವೈ ಕಾಲೆಳೆದ ರಮೇಶ್ ಕುಮಾರ್

    ರೇವಣ್ಣನಿಗೆ ನೀವು ನಿಂಬೆಹಣ್ಣು ಕೊಟ್ಟು ಸಿಎಂ ಆದ್ರಾ? ಬಿಎಸ್‍ವೈ ಕಾಲೆಳೆದ ರಮೇಶ್ ಕುಮಾರ್

    ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನಿಂಬೆಹಣ್ಣು ಕೊಟ್ಟು ನೀವು ಸಿಎಂ ಆದ್ರಾ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಪ್ರಶ್ನಿಸಿ, ಸದನದಲ್ಲಿ ನಗೆ ಹರಿಸಿದರು.

    ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಶಾಸಕ ಜಿ.ಟಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಟೀ ಮಾರಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಾಲ್ಯದಲ್ಲಿ ನಿಂಬೆಹಣ್ಣು ಮಾರಿ, ಮಾಜಿ ಸಿಎಂ ಸಿದ್ದರಾಮಯ್ಯನವರು ಎಮ್ಮೆ ಮೇಯಿಸಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ರೈತ ಕುಟುಂಬದಿಂದ ಬಂದು ಹಲವು ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಆದರೂ ಭ್ರಷ್ಟಾಚಾರ, ಜಾತಿ ವ್ಯವಸ್ಥೆಯಲ್ಲಿ ಏನು ಬದಲಾಗಿಲ್ಲ, ಏಕೆ ಬದಲಾಗಿಲ್ಲ ಎಂದು ಪ್ರಶ್ನಿಸಿದರು.

    ಈ ವೇಳೆ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಅವರು ಮಧ್ಯಪ್ರವೇಶಿಸಿ, ಬಹುಶಃ ಅದೇ ನಿಂಬೆಹಣ್ಣನ್ನು ಸಿಎಂ ಯಡಿಯೂರಪ್ಪ ಅವರು ಮಾಜಿ ಸಚಿವ ರೇವಣ್ಣ ಅವರಿಗೆ ಕೊಟ್ಟಿರಬಹುದಾ? ಈ ಬಗ್ಗೆ ಅವರು ಸ್ವಲ್ಪ ಸ್ಪಷ್ಟನೆ ಕೊಡಲಿ ಎಂದು ಕಾಲೆಳೆದರು.

    ರಮೇಶ್ ಕುಮಾರ್ ಅವರ ಮಾತಿಗೆ ಪ್ರತಿಕ್ರಿಯಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಈಗ ರೇವಣ್ಣ ಸದನದಲ್ಲಿ ಇಲ್ಲ, ಅವರು ಬಂದ ನಂತರ ಹೇಳಿ ಎಂದು ಸೂಚನೆ ನೀಡಿದರು. ಆಗ ರಮೇಶ್ ಕುಮಾರ್ ಅವರು, ಅಲ್ಲ… ರೇವಣ್ಣ ಅವರಿಗೆ ನಿಂಬೆಹಣ್ಣು ಕೊಟ್ಟು ನೀವು ಮುಖ್ಯಮಂತ್ರಿ ಆಗಿಬಿಟ್ರಲ್ಲಾ ಎಂದರು. ಈ ವೇಳೆ ಸದನ ನಗೆಗಡಲಲ್ಲಿ ತೇಲಿತು. ಸದನದಲ್ಲಿ ಇದ್ದರೂ ಸಿಎಂ ಯಡಿಯೂರಪ್ಪ ಅವರು ರಮೇಶ್ ಕುಮಾರ್ ಮಾತಿಗೆ ಪ್ರತಿಕ್ರಿಯಿಸಲಿಲ್ಲ.

  • ಕೇವಲ ಬುದ್ಧಿವಂತಿಕೆ ಪ್ರದರ್ಶನಕ್ಕೆ ಸ್ಪೀಕರ್ ಚೇರ್ ಇಲ್ಲ: ರಮೇಶ್ ಕುಮಾರ್‌ಗೆ ಕಾಗೇರಿ ಟಾಂಗ್

    ಕೇವಲ ಬುದ್ಧಿವಂತಿಕೆ ಪ್ರದರ್ಶನಕ್ಕೆ ಸ್ಪೀಕರ್ ಚೇರ್ ಇಲ್ಲ: ರಮೇಶ್ ಕುಮಾರ್‌ಗೆ ಕಾಗೇರಿ ಟಾಂಗ್

    – ಮಾಜಿ-ಹಾಲಿ ಸ್ಪೀಕರ್ ವಾಕ್ ಸಮರ
    – ರಮೇಶ್ ಕುಮಾರ್ ಏನ್ ಹೇಳುತ್ತಾರೋ ಅದೇ ಸರ್ವಶ್ರೇಷ್ಠ
    – ಸದನದಲ್ಲಿ ಕಿಡಿಕಾರಿದ ಈಶ್ವರಪ್ಪ

    ಬೆಂಗಳೂರು: ವಿಧಾನಸಭಾ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಹಾಲಿ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಧ್ಯೆ ವಾಕ್ ಸಮರವೇ ನಡೆಯಿತು.

    ನೆರೆ ಪರಿಹಾರ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುದೀರ್ಘ ಚರ್ಚೆ ನಡೆಸಿದರು. ಇದರಿಂದಾಗಿ ಸ್ಪೀಕರ್ ಕಾಗೇರಿ ಆಗಾಗ ಸಾಕು ಚರ್ಚೆ ನಿಲ್ಲಿಸಿ ಬೇರೆಯವರಿಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು. ಇದಕ್ಕೆ ಒಪ್ಪದ ಸಿದ್ದರಾಮಯ್ಯ ಅವರು ಮಾತು ಮುಂದುವರಿಸಿದರು.

    ಸಂತ್ರಸ್ತರ ನೋವನ್ನು ಅರ್ಥ ಮಾಡಿಕೊಳ್ಳುವ ತಾಯಿ ಹೃದಯದ ನಾಯಕರು ಬೇಕಾಗಿದ್ದಾರೆ. ಆದಷ್ಟು ಬೇಗ ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಮನೆ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಆದರೆ ಸ್ಪೀಕರ್ ಕಾಗೇರಿ ಅವರು ಮತ್ತೆ ಸಾಕು ನಿಮ್ಮ ಮಾತು ನಿಲ್ಲಿಸಿ ಎಂದು ಸೂಚನೆ ನೀಡಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ, ನೀವು ಈ ರೀತಿ ಮಾತು ನಿಲ್ಲಿಸಿ ಎಂದು ಪದೇ ಪದೇ ಹೇಳುವುದು ಸರಿಯಲ್ಲ. ನಾನು ವಿಪಕ್ಷ ನಾಯಕ ಕೊನೆಗೆ ಬಂದಿದ್ದೇನೆ, ಮಾತನಾಡುತ್ತೇನೆ ಅಂತ ಗುಡುಗಿದರು.

    ಸರಿ, ಸರಿ ಎನ್ನುತ್ತಲೇ ಸ್ಪೀಕರ್, ನೀವು ಇಷ್ಟುದ್ದ ಮಾತನಾಡಬಾರದು ಎಂದು ಹೇಳಿದರು. ಸ್ಪೀಕರ್ ಕಾಗೇರಿ ಅವರನಡೆಯಿಂದ ಗರಂ ಆದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಿದ್ದರಾಮಯ್ಯನವರೇ ಸ್ಪೀಕರ್ ಅವರಿಂದ ಕುಳಿತುಕೊಳ್ಳುವಂತೆ ಆದೇಶ ಬಂದರೇ ಸಾಕು ಕುಳಿತುಬಿಡಿ. ಇದು ಸರಿಯಾದ ವಿಧಾನ ಎಂದು ಕುಟುಕಿದರು.

    ಸ್ಪೀಕರ್ ಚೇರ್‍ಗೆ ನಮ್ರತೆ ಇರುತ್ತದೆ. ನೀವು ಈ ರೀತಿ ಕುಳಿತುಕೊಳ್ಳಿ ಅಂತ ಪದೇ ಪದೇ ಹೇಳುವುದು ಸರಿಯಲ್ಲ ಎಂದು ರಮೇಶ್ ಕುಮಾರ್ ಧ್ವನಿ ಏರಿಸಿದರು. ಆಗ ಕಾಗೇರಿ, ಸ್ಪೀಕರ್ ಸ್ಥಾನದಿಂದ ಬಂದ ಸೂಚನೆಯನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ತಿರುಗೇಟು ನೀಡಿದರು. ವಾಕ್ ಸಮರ ಜೋರಾಗುತ್ತಿದ್ದಂತೆ, ನಾನು ಯಾವತ್ತೂ ಯಾವುದೇ ವಿರೋಧ ಪಕ್ಷದ ನಾಯಕರಿಗೂ ಮಾತು ಮುಗಿಸಿ ಎಂದು ಒತ್ತಾಯ ಮಾಡಿಲ್ಲ ಅಂತ ರಮೇಶ್ ಕುಮಾರ್ ಕುಟುಕಿದರು.

    ಹೌದ.. ಹೌದು.. ಇಲ್ಲಿ ಕುಳಿತವರು ಯಾವ ಸಂದರ್ಭದಲ್ಲಿ ವಿಪಕ್ಷ ನಾಯಕರನ್ನು ಎಷ್ಟು ಬಾರಿ ಹೇಳಿ ಕೂರಿಸಿದ್ದಾರೆ ಎನ್ನುವುದನ್ನು ನಾನು ನೋಡಿದ್ದೇನೆ. ಕೇವಲ ಬುದ್ಧಿವಂತಿಕೆ ಪ್ರದರ್ಶನ ಮಾಡಲಿಕ್ಕೆ ಸ್ಪೀಕರ್ ಚೇರ್ ಇಲ್ಲ. ಇಲ್ಲಿ ಬಂದು ಯಾರು ಎಷ್ಟು ಬುದ್ಧಿವಂತಿಕೆ ತೋರಿದ್ದಾರೆ ಎನ್ನುವುದನ್ನು ನಾನು ನೋಡಿದ್ದೇನೆ ಎಂದು ಕಾಗೇರಿ, ರಮೇಶ್ ಕುಮಾರ್ ಅವರಿಗೆ ಟಾಂಗ್ ಕೊಟ್ಟರು.

    ಈ ಬೆಳವಣಿಗೆಯಿಂದಾಗಿ ಸದನದಲ್ಲಿ ಗಲಾಟೆ ಆರಂಭವಾಯಿತು. ತಕ್ಷಣವೇ ಎದ್ದು ನಿಂತ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಕುಮಾರ್ ಏನು ಹೇಳುತ್ತಾರೋ ಅದೇ ಸರ್ವಶ್ರೇಷ್ಠ. ಅಧ್ಯಕ್ಷ ಸ್ಥಾನದಲ್ಲಿ ಕುಳಿತಾಗ ಒಂದು ಮಾತು, ಕೆಳಗೆ ಕುಳಿತಾಗ ಮತ್ತೊಂದು ಮಾತು ಎಂದು ಕಿಡಿಕಾರಿದರು. ಈ ಮಧ್ಯೆ ಸ್ಪೀಕರ್ ಕಾಗೇರಿ, ಸಿದ್ದರಾಮಯ್ಯನವರೇ ನೀವು ಮಾತು ಮುಂದುವರಿಸಿ, ನನಗೆ ಸಮಯ ಮುಖ್ಯ ಎಂದು ಸೂಚನೆ ನೀಡಿದರು.

    ಅದು ವಿಪಕ್ಷ ಸ್ಥಾನವೇ ಹೊರತು ಸಿದ್ದರಾಮಯ್ಯ ಅಲ್ಲ. ಈ ರೀತಿ ಸಮಯ ಹಾಗೂ ಆಮೇಲೆ ಮಾತನಾಡಿ ಎನ್ನುವುದು ಸರಿಲ್ಲ ಎಂದು ರಮೇಶ್ ಕುಮಾರ್ ಮತ್ತೆ ಗುಡುಗಿದರು. ಇದರಿಂದ ಮತ್ತಷ್ಟು ಕೋಪಗೊಂಡ ಸ್ಪೀಕರ್, ರಮೇಶ್ ಕುಮಾರ್ ಅವರೇ ನೀವು ಅಲ್ಲಿ ಕುಳಿತು ಹೇಳಬೇಡಿ. ನಿಯಮಾವಳಿ ಪುಸ್ತಕ ನನ್ನ ಬಳಿಯೇ ಇದೆ. ಎಲ್ಲವನ್ನೂ ನಿಮಗೆ ಹೇಳಿದ್ದೇನೆ ಅಂತ ಯಾಕೆ ಹೆಗಲು ತಟ್ಟಿಕೊಳ್ಳುತ್ತೀರಿ ಎಂದು ತಿರುಗೇಟು ನೀಡಿದರು.

    ಸಿದ್ದರಾಮಯ್ಯನವರೇ ನೀವು ಮಾತನಾಡಿ. ನೀವು ಒಬ್ಬರೇ 5 ಗಂಟೆಗಳ ಕಾಲ ಮಾತನಾಡಿದರೆ ಉಳಿದವರಿಗೆ ಅವಕಾಶ ಸಿಗುತ್ತಾ? ಮಾತನಾಡಬೇಕು ಎನ್ನುವವರಿಗೆ ಏನು ಹೇಳಲಿ ಎಂದು ಸ್ಪೀಕರ್ ಅಸಮಾಧಾನ ಹೊರ ಹಾಕಿದರು.

  • ಆರ್.ಅಶೋಕ್‍ಗೆ ಹಿಂಬಡ್ತಿ ಭಾಗ್ಯ: ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

    ಆರ್.ಅಶೋಕ್‍ಗೆ ಹಿಂಬಡ್ತಿ ಭಾಗ್ಯ: ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

    – ಐವತ್ತಾರು ಇಂಚಿನ ಪಿಎಂ ಮೋದಿ ಎದೆಗೆ ತಾಯಿ ಹೃದಯ ಬೇಕಿದೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಚಿವ ಆರ್.ಅಶೋಕ್ ಅವರಿಗೆ ಹಿಂಬಡ್ತಿ ಭಾಗ್ಯ ಸಿಕ್ಕಿದೆ ಎಂದು ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

    ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಚಿವ ಆರ್. ಅಶೋಕ್ ಅವರು ಡೆಪ್ಯೂಟಿ ಸಿಎಂ ಆಗಲಿಲ್ಲ. ನೀವು ಡಿಸಿಎಂ ಆಗಬೇಕಿತ್ತು ಎಂದು ಕಾಲೆಳೆದರು. ತಕ್ಷಣವೇ ಎದ್ದು ನಿಂತ ಆರ್.ಅಶೋಕ್, ನಾನೇ ಬೇಡ ಅಂದೆ ಬಿಡಿ ಸಾರ್ ಎಂದರು. ಆಗ ಸಿದ್ದರಾಮಯ್ಯ ಅವರು, ನೋಡಿ ನಿಮಗೆ ಪಕ್ಷ ಹಿಂಬಡ್ತಿ ಭಾಗ್ಯ ಕೊಟ್ಟಿಗೆ ಎಂದಾಗ ಕಲಾಪ ನಗೆಗಡಲಲ್ಲಿ ತೇಲಿತು. ಇದನ್ನೂ ಓದಿ: ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ: ಸಿದ್ದರಾಮಯ್ಯ

    ಪಾಪ ಅಶೋಕ್‍ಗೆ ಡಿಸಿಎಂ ಸ್ಥಾನ ಇಲ್ಲ. ಕೆ.ಎಸ್. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರಿಗೂ ಉಪಮುಖ್ಯಮಂತ್ರಿ ಸ್ಥಾನ ಇಲ್ಲ. ಈಗ ಮಂತ್ರಿ ಆದವರಿಗೆ ಹಾಗೂ ಶಾಸಕರಲ್ಲದವರಿಗೆ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರನ್ನು ಕುಟುಕಿದರು.

    ಪ್ರಧಾನಿ ನರೇಂದ್ರ ಮೋದಿ ಬಳಿ ಐವತ್ತಾರು ಇಂಚು ಎದೆ ಇದೆ. ಆದರೆ ಅವರಿಗೆ ತಾಯಿ ಹೃದಯ ಬೇಕಲ್ಲ? ರಾಜ್ಯಕ್ಕೆ ಬರುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುತ್ತೇನೆ ಹಾಗೂ ನೆರೆ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸರ್ವೆ ಮಾಡಿ ಹಾನಿ ವೀಕ್ಷಣೆ ಮಾಡಲಿ ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ ಎಂದೆಂದು ಕೇಳರಿಯದ ಪ್ರವಾಹ ಎದುರಾಗಿದೆ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಕೂಡಲೇ 5000 ಕೋಟಿ ರೂ. ಬಿಡುಗಡೆ ಮಾಡಬೇಕು. ಮಹಾ ಮಳೆ ಹಾಗೂ ಪ್ರವಾಹದಿಂದಾಗಿ ಎಂಟು ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಎರಡು ಲಕ್ಷಕ್ಕೂ ಹೆಚ್ಚು ಸಂತ್ರಸ್ತರು ಮನೆ ಕಳೆದುಕೊಂಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಶೀಲಹಳ್ಳಿಯಲ್ಲಿ ಪ್ರವಾಹದಿಂದ ದೊಡ್ಡ ಹಾನಿಯಾಗಿದೆ. ಪ್ರವಾಹ ಉಂಟಾಗಿ 60 ದಿನ ಕಳೆದಿದೆ. ಅಲ್ಲಿನ ಸೇತುವೆಯನ್ನು ಪುನರ್ ನಿರ್ಮಾಣವಾಗಿಲ್ಲ. ಇದು ಸರ್ಕಾರದ ವೈಫಲ್ಯವನ್ನು ತೋರುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಪ್ರಧಾನಿ ಮೋದಿ ಅವರಿಗೆ ಕರ್ನಾಟಕದ ಪ್ರವಾಹ ಪರಿಸ್ಥಿತಿ ಕಾಣಿಸಿಲ್ಲ ಎನ್ನುವುದೇ ನನಗೆ ನೋವು ತಂದಿದೆ. ಇಲ್ಲಿ ಲಕ್ಷಾಂತರ ಜೀವನ ಬೀದಿ ಪಾಲಾಗಿದೆ, ಅದಕ್ಕೆ ಮೊದಲ ಆದ್ಯತೆ ನೀಡಬೇಕು. ಅವರು ವಿದೇಶಕ್ಕೆ ಹೋಗದೆ ಇದ್ದರೆ ಪ್ರಳಯ ಆಗುತ್ತಿತ್ತಾ? ಮನೆ ಕಳಕೊಂಡ ನೆರೆ ಸಂತ್ರಸ್ತರಿಗೆ ಶೆಡ್ ಹಾಕಿ ಕೊಟ್ಟಿಲ್ಲ. ನೆರೆ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಚಂದ್ರಯಾನ-2 ಸಂಬಂಧ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ಮೋದಿ ಅವರಿಗೆ ಕರ್ನಾಟಕದ ಸಮಸ್ಯೆ ಬಗ್ಗೆ ಹೇಳಬಹುದಿತ್ತು. ನನ್ನ ಮಾಹಿತಿ ಪ್ರಕಾರ ಭೇಟಿಯಾಗಲು ರಾಜ್ಯ ಬಿಜೆಪಿಯವರಿಗೆ ಅಪಾಯಿಂಟ್‍ಮೆಂಟ್ ಕೊಟ್ಟಿಲ್ಲ ಎಂದು ಕುಟುಕಿದರು.

  • ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ: ಸಿದ್ದರಾಮಯ್ಯ

    ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ: ಸಿದ್ದರಾಮಯ್ಯ

    – ಯಡಿಯೂರಪ್ಪಗೆ ಡಿಸಿಎಂಗಳು ಯಾರು ಅನ್ನೋದೇ ಗೊತ್ತಿಲ್ಲ
    – ಬಿಎಸ್‍ವೈ ಹೈಕಮಾಂಡ್‍ಗೆ ಒಲ್ಲದ ಶಿಶು

    ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಭರ್ಜರಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮಾತಿನ ದಾಟಿಯ ಮೂಲಕವೇ ಬಿಜೆಪಿಯಲ್ಲಿ ಕಾಣಿಸಿಕೊಂಡ ಭಿನ್ನಮತ ಹಾಗೂ ಅಸಮಾಧಾನವನ್ನು ಕೆಣಕಿದರು.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸತ್ಯ ಹೇಳುತ್ತಾರೆ. ಅವರು ನನಗೆ ಒಳ್ಳೆ ಸ್ನೇಹಿತ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ತೆಗೆಯುವುದಕ್ಕೆ ಇಬ್ಬರು ಕೇಂದ್ರ ಸಚಿವರು ಹೊರಟಿದ್ದಾರೆ ಅಂತ ಯತ್ನಾಳ್ ಹೇಳಿದ್ದಾರೆ. ಪಾಪ ಯತ್ನಾಳ್ ಸತ್ಯ ಹೇಳಿದ್ದಾರೆ. ಅವರ ಸತ್ಯ ಬೇರೆಯವರಿಗೆ ಕಹಿ. ಡೋಂಟ್ ವರಿ ಮಿಸ್ಟರ್ ಯತ್ನಾಳ್ ಎಂದು ಕಾಲೆಳೆದರು.

    ಸಿಎಂ ಯಡಿಯೂರಪ್ಪ ಅವರಿಗೆ ಯಾರು ಉಪ ಮುಖ್ಯಮಂತ್ರಿಗಳು ಎನ್ನುವುದೇ ಗೊತ್ತಿಲ್ಲ. ನಾನು ಹೇಳುತ್ತೇನೆ ಕೇಳಿ, ಒಬ್ಬರು ಸೋತವರು, ಮತ್ತೊಬ್ಬರು ಮೊದಲ ಬಾರಿಗೆ ಸಚಿವರಾದವರು. ಗೋವಿಂದ ಕಾರಜೋಳ ಡಿಸಿಎಂ ಅಂತ ನಾನು ಒಪ್ಪುತ್ತೇನೆ. ಬಿ.ಎಸ್.ಯಡಿಯೂರಪ್ಪ ಸೂಚಿಸಿದ ಒಂದಿಬ್ಬರು ಸಚಿವರಾಗಿದ್ದಾರೆ ಅಷ್ಟೇ. ಉಳಿದವರು ಹೈಕಮಾಂಡ್ ಆದೇಶದಿಂದಾದ ಸಚಿವರು ಎಂದು ವ್ಯಂಗ್ಯವಾಡಿದರು.

    ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನನಗೆ ಪ್ರೀತಿ ಇದೆ. ಅಷ್ಟೇ ಯಾಕೆ ಅನುಕಂಪವೂ ಇದೆ. ಆದರೆ ಅವರು ಹೈಕಮಾಂಡ್‍ಗೆ ಒಲ್ಲದ ಶಿಶು. ಈ ಮಾತುಗಳು ಯಡಿಯೂರಪ್ಪ ಅವರಿಗೆ ಬೇಜಾರ್ ಆಗಬಹುದು. ಆದರೆ ಏನ್ ಮಾಡೋದು ಬಿಎಸ್‍ವೈಗೆ ಬಿಜೆಪಿ ಹೈಕಮಾಂಡ್ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಪೂರ್ಣ ಸ್ವಾತಂತ್ರ್ಯ ಇತ್ತು. ಕ್ಯಾಬಿನೆಟ್ ರಚನೆಗೆ ಸ್ವತಂತ್ರ ಇತ್ತು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿರಲಿಲ್ಲ ಎಂದು ಕುಟುಕಿದರು.

    ಬಿ.ಎಸ್.ಯಡಿಯೂರಪ್ಪ ಅವರು ಜುಲೈ 26 ರಿಂದ ಆಗಸ್ಟ್ 20ರವರೆಗೆ ಒಬ್ಬರೇ ಸಿಎಂ ಆಗಿದ್ದರು. ಹಾಗಾಗಿ ಪಾಪ ಯಡಿಯೂರಪ್ಪ ಬಗ್ಗೆ ಅನುಕಂಪ ಇದೆ. ಬಳಿಕ ಬಂದ ಉಪ ಮುಖ್ಯಮಂತ್ರಿಗಳು ಯಾರು ಎನ್ನುವುದೇ ಅವರಿಗೆ ಗೊತ್ತಿಲ್ಲ ಎಂದು ಹೇಳಿದರು.

  • ರಾಜ್ಯಪಾಲರಿಗೆ ಆದೇಶ ನೀಡೋ ಅಧಿಕಾರ ಇದೆಯೋ – ಕೃಷ್ಣಬೈರೇಗೌಡ Vs ಮಾಧುಸ್ವಾಮಿ

    ರಾಜ್ಯಪಾಲರಿಗೆ ಆದೇಶ ನೀಡೋ ಅಧಿಕಾರ ಇದೆಯೋ – ಕೃಷ್ಣಬೈರೇಗೌಡ Vs ಮಾಧುಸ್ವಾಮಿ

    ಬೆಂಗಳೂರು: ಶುಕ್ರವಾರ ಮಧ್ಯಾಹ್ನ 1:30ರ ಒಳಗಡೆ ಬಹುಮತ ಸಾಬೀತು ಪಡಿಸಬೇಕೆಂದು ಸಿಎಂಗೆ ರಾಜ್ಯಪಾಲ ವಿ.ಆರ್.ವಾಲಾ ನೀಡಿರುವ ಆದೇಶದ ಬಗ್ಗೆ ವಿಧಾನ ಸಭೆಯಲ್ಲಿ ಬಹಳ ಗಂಭೀರ ಚರ್ಚೆ ನಡೆಯಿತು.

    ಸಚಿವ ಕೃಷ್ಣಬೈರೇಗೌಡರು ವಿಶ್ವಾಸ ಮತಯಾಚನೆ ಪ್ರಕ್ರಿಯೆ ಆರಂಭಗೊಂಡ ಬಳಿಕ ಸಿಎಂ ಅವರಿಗೆ ರಾಜ್ಯಪಾಲರು ಆದೇಶ ನೀಡಲು ಬರುವುದಿಲ್ಲ ಎಂದು ವಾದಿಸಿದರೆ ಬಿಜೆಪಿಯ ಮಾಧುಸ್ವಾಮಿಯವರು ರಾಜ್ಯಪಾಲರಿಗೆ ಆದೇಶ ನೀಡಲು ಬರುತ್ತದೆ ಎಂದು ಹೇಳಿದರು.

    ಆರಂಭದಲ್ಲಿ ಕೃಷ್ಣಬೈರೇಗೌಡರು ಈ ವಿಚಾರವನ್ನು ಪ್ರಸ್ತಾಪಿಸಿ, ಎಸ್.ಆರ್.ಬೊಮ್ಮಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ವಜಾಗೊಳಿಸುವ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ವೇಳೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ರಾಜ್ಯಪಾಲರು ಆಡಳಿತ ಪಕ್ಷಕ್ಕೆ ಬಹುಮತ ಸಾಬೀತು ಪಡಿಸಲು ಸೂಚನೆ ನೀಡಬಹುದು. ಜೊತಗೆ ಅದಕ್ಕೆ ಒಂದು ವಾರ ಕಾಲ ನಿಗದಿ ಮಾಡಬಹುದು ಎಂದು ಆದೇಶ ನೀಡಲಾಗಿತ್ತು. ಆದರೆ ಇಂದಿನ ಪರಿಸ್ಥಿತಿ ಬೇರೆ ಇದೆ ಎಂದು ತಿಳಿಸಿದರು.

    ವಿಶ್ವಾಸಮತ ನಿರ್ಣಯವನ್ನು ಸ್ವತಃ ಸಭಾ ನಾಯಕ (ಸಿಎಂ) ಮಂಡಿಸುವುದಾಗಿ ಸದನಕ್ಕೆ ತಿಳಿಸಿದ್ದಾರೆ. ಸಿಎಂ ಅವರೇ ಹೇಳಿರುವಾಗ ಆದೇಶವನ್ನು ಹೇಗೆ ನೀಡುತ್ತಾರೆ. ಈ ವಿಚಾರವನ್ನು ಸದನದಲ್ಲಿ ಚರ್ಚೆ ಮಾಡಲಾಗುತ್ತಿದೆ. ಅದನ್ನು ನಡೆಸುವವರು ಸ್ಪೀಕರ್ ಸ್ಥಾನದಲ್ಲಿರುವ ನೀವು ಎಂದು ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡರು.

    ನಮ್ಮ ಸಂವಿಧಾನದಲ್ಲಿ ಯಾರಿಗೂ ಸರ್ವಾಧಿಕಾರಿಯಂತೆ ನಡೆದುಕೊಳ್ಳುವ ಅಧಿಕಾರವನ್ನು ಕೊಟ್ಟಿಲ್ಲ. ಸಿಎಂ, ಸ್ಪೀಕರ್, ರಾಜ್ಯಪಾಲರು, ನ್ಯಾಯಾಧೀಶರು ಯಾರಿಗೂ ಸರ್ವಾಧಿಕಾರವಿಲ್ಲ. ವಿಶ್ವಾಸಮತ ನಿರ್ಣಯ ಸದನದ ಸ್ವತ್ತು ಹಾಗೂ ನೀವು ಇದನ್ನು ನಡೆಸುತ್ತಿರುವಾಗ ರಾಜ್ಯಪಾಲ ಪ್ರವೇಶ ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಅಧಿಕಾರ ಹಪಹಪಿಗಾಗಿ ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯಪಾಲ ವ್ಯಾಪ್ತಿಯನ್ನು ಸಂವಿಧಾನಿಕ ಪೀಠ ತಿಳಿಸಿರುವ ಮಾಹಿತಿಯನ್ನು ಮತ್ತೊಮ್ಮೆ ಓದಿ ಹೇಳಬೇಕೇ? ಇಂದಿನ ಪರಿಸ್ಥಿತಿ ನೋಡಿದರೆ ಇದು ಪ್ರಜಾಪ್ರಭುತ್ವವೇ ಎನ್ನುವ ಅನುಮಾನ ಜನರಲ್ಲಿ ಮೂಡುತ್ತಿದೆ ಎಂದು ಕಿಡಿಕಾರಿದರು. ಈ ವೇಳೆ ನಾಗಲ್ಯಾಂಡ್ ಸರ್ಕಾರಕ್ಕೆ ರಾಜ್ಯಪಾಲರು ನೀಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಓದಿ ತಮ್ಮ ವಾದವನ್ನು ಸಮರ್ಥಿಸಿಕೊಂಡರು.

    2018ರಲ್ಲಿ ಯಡಿಯೂರಪ್ಪನವರಿಗೆ 15 ದಿನಗಳ ಕಾಲ ಬಹುಮತ ಸಾಬೀತು ಪಡಿಸಲು ಅವಕಾಶವನ್ನು ರಾಜ್ಯಪಾಲರು ನೀಡುತ್ತಾರೆ. ಆದರೆ ಇಲ್ಲಿ ಈಗ 15 ಗಂಟೆಗಳ ಕಾಲ ಅವಕಾಶವನ್ನು ನೀಡುತ್ತಾರೆ. ಇದರಲ್ಲೇ ರಾಜ್ಯಪಾಲರು ಹೇಗೆ ನಡೆದುಕೊಳ್ಳುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದರು. ಈ ವೇಳೆ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ವಿರುದ್ಧವೇ ಘೋಷಣೆ ಕೂಗಿದರು.

    ಈ ವೇಳೆ ಬಿಜೆಪಿ ಶಾಸಕ ಮಾಧುಸ್ವಾಮಿ ಅವರು ಮಧ್ಯಪ್ರವೇಶ ಮಾಡುತ್ತಿದ್ದಂತೆ ಗುಡುಗಿದ ಸಚಿವರು, ನೀವು 3 ಕೋಟಿ ರೂ. ನೀಡಿ ಶಾಸಕರನ್ನು ಖರೀದಿ ಮಾಡುತ್ತೀರಿ. ಇರುವ ವಿಚಾರವನ್ನು ಹೇಳಲು ನಾನೇಕೆ ಹಿಂಜರಿಯಬೇಕು. ನಾನು ಅಂತಹ ಅನ್ಯಾಯದ ಕೆಲಸ ಮಾಡಿಲ್ಲ. ನೀವು ನನಗೆ ಪಾಠ ಹೇಳಬೇಡಿ ಎಂದು ಹೇಳಿದರು.

    ನಮಗೆ ಮಾತಾನಾಡಲು ಅನುಮತಿಯ ಜೊತೆಗೆ ರಕ್ಷಣೆಯೂ ಕೊಡಿ. ರಾಜ್ಯಪಾಲರು ಬಹುಮತ ಸಾಬೀತು ಮಾಡಿ ಅಂತ ಹೇಳುವುದು ಹೇಗೆ ತಪ್ಪಾಗುತ್ತೆ ಎಂದು ಮಾಧುಸ್ವಾಮಿ ಮಾತನಾಡುತ್ತಿದ್ದಂತೆ ಪ್ರತಿಪಕ್ಷದ ನಾಯಕರು ಗದ್ದಲ ಎಬ್ಬಿಸಿದರು. ಈ ವೇಳೆ ಸ್ಪೀಕರ್ ಮಧ್ಯಪ್ರವೇಶಿಸಿ ಸಿಎಂ ಮತ್ತು ಕೃಷ್ಣಬೈರೇಗೌಡರು ಮಾತನಾಡುವಾಗ ವಿರೋಧ ಪಕ್ಷದ ಸದಸ್ಯರು ಅಡ್ಡಿ ಪಡಿಸಲಿಲ್ಲ. ಹೀಗಾಗಿ ನೀವು ಅಡ್ಡಿಪಡಿಸುವುದು ಸರಿಯಲ್ಲ ಎಂದು ಮನವಿ ಮಾಡಿಕೊಂಡರು.

    ಮಾತು ಮುಂದುವರಿಸಿದ ಮಾಧುಸ್ವಾಮಿ ಅವರು, ಸರ್ಕಾರದ ಮೇಲೆ ಅನುಮಾನ ಬಂದರೆ ಬಹುಮತ ಸಾಬೀತು ಪಡೆಸುವಂತೆ ಕೇಳುವ ಅಧಿಕಾರ ರಾಜ್ಯಪಾಲರಿಗೆ ಇದೆ. ಇದು ಸಂವಿಧಾನಾತ್ಮಕ ಹಕ್ಕು. ಸರ್ಕಾರವನ್ನು ರಾಜ್ಯಪಾಲರು ಬಹುಮತ ಸಾಬೀತು ಮಾಡುವಂತೆ ಕೇಳುವುದು ತಪ್ಪು ಅಂತ ಎಲ್ಲಿಯೂ ವ್ಯಾಖ್ಯಾನ ಮಾಡಿಲ್ಲ ಎಂದರು.

    ನಾವು ಯಾರೂ ನಿಮಗೆ ಅಡಚಣೆ ಮಾಡಿಲ್ಲ. ರಾಜ್ಯಪಾಲರು ಸರ್ಕಾರಕ್ಕೆ ಪತ್ರದ ಬರೆದು, ನನಗೆ ಇಂತಹ ಕಾರಣಗಳಿಂದ ಬಹುಮತದ ಮೇಲೆ ಅನುಮಾನ ಬಂದಿದೆ. ನೀವು ಬಹುಮತ ಸಾಬೀತು ಮಾಡಿ ಎಂದು ಆದೇಶ ನೀಡಿದ್ದಾರೆ. ಸಂವಿಧಾನದತ್ತವಾಗಿ ಅವರಿಗೆ ಆದೇಶ ನೀಡುವ ಅಧಿಕಾರವಿದೆ. ಈಗ ಅಧಿವೇಶ ನಡೆಯುತ್ತಿರುವ ಕಾರಣದಿಂದಾಗಿ ರಾಜ್ಯಪಾಲರು ಹೀಗೆ ನಿರ್ದೇಶನ ನೀಡಿದ್ದಾರೆ. ಗುರುವಾರ ನಡೆದ ಅಧಿವೇಶನವನನು ರಾಜ್ಯಪಾಲರು ನೋಡಿದ್ದಾರೆ ಎಂದು ತಿಳಿಸಿದರು.

    ರಾಜ್ಯಪಾಲರ ಆದೇಶವನ್ನು ಪಾಲಿಸುವವರೆಗೂ ನಾವು ಇಲ್ಲಿಯೇ ಇರುತ್ತೇವೆ. ಬಿಜೆಪಿ ಎಲ್ಲ ಸದಸ್ಯರು ಇದಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿದರು.

  • ನೀವು ಡೆಪ್ಯೂಟಿ ಸಿಎಂ ಆಗಲ್ಲ ಬಿಡಿ: ಶ್ರೀರಾಮುಲುಗೆ ಡಿಕೆಶಿ ಟಾಂಗ್

    ನೀವು ಡೆಪ್ಯೂಟಿ ಸಿಎಂ ಆಗಲ್ಲ ಬಿಡಿ: ಶ್ರೀರಾಮುಲುಗೆ ಡಿಕೆಶಿ ಟಾಂಗ್

    ಬೆಂಗಳೂರು: ವಿಶ್ವಾಸಮತಯಾಚನೆ ಕುರಿತ ಚರ್ಚೆ ಇಂದು ವಿಧಾನ ಸಭೆಯ ಸದನದಲ್ಲಿ ಮೈತ್ರಿ ಸರ್ಕಾರ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ ಸಮರಕ್ಕೆ ಕಾರಣವಾಗಿದ್ದು, ಈ ನಡುವೆ ಸಚಿವ ಡಿಕೆ ಶಿವಕುಮಾರ್ ಹಾಗೂ ಶಾಸಕ ಶ್ರೀರಾಮುಲು ನಡುವೆ ಕುತೂಹಲ ಮೂಡಿಸುವ ಮಾತುಕತೆ ನಡೆದಿದೆ.

    ಸದನವನ್ನು ಮುಂದೂಡಿ ಸ್ಪೀಕರ್ ಅವರು ಮಧ್ಯಾಹ್ನ 3 ಗಂಟೆಗೆ ಸಮಯ ನಿಗದಿ ಮಾಡುತ್ತಿದಂತೆ ಎಲ್ಲ ನಾಯಕರು ಊಟಕ್ಕೆ ಹೊರ ನಡೆದಿದ್ದರು. ಆದರೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ತಮ್ಮ ಸ್ಥಾನದಲ್ಲೇ ಕುಳಿತು ಚಿಂತನೆ ನಡೆಸಿದಂತೆ ಕಂಡು ಬಂದಿತ್ತು.

    ಇತ್ತ ಸಚಿವ ಡಿಕೆ ಶಿವಕುಮಾರ್ ಹಾಗೂ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಅವರು ಚರ್ಚೆಯಲ್ಲಿ ತೊಡಗಿದ್ದರು. ಈ ಸಮಯದಲ್ಲಿ ಒಬ್ಬರೇ ಕುಳಿತ್ತಿದ್ದ ಶ್ರೀರಾಮುಲು ಅವರನ್ನು ನೋಡಿ ಸಿಎಂ, “ಅಲ್ಲಿ ಕುಳಿತು ಏನ್ ಯೋಚನೆ ಮಾಡ್ತಿದ್ದಿಯಾ ನಮ್ಮ ಬಳಿಗೆ ಬಾ” ಎಂದು ಕಿಚಾಯಿಸಿದ್ದರು.

    ಈ ವೇಳೆ ಡಿಕೆಶಿ “ನಿನ್ನ ಡಿಸಿಎಂ ಮಾಡಲ್ಲ, ಬೇಕಿದ್ರೆ ಬೇರೆಯವರನ್ನ ಡಿಸಿಎಂ ಮಾಡ್ತಾರೆ, ಜಾರಕಿಹೊಳಿಯನ್ನ ಡಿಸಿಎಂ ಮಾಡ್ತಾರೆ” ಎಂದರು. ಡಿಕೆ ಶಿವಕುಮಾರ್ ಅವರ ಮಾತಿಗೆ ನಗುತ್ತಲೇ ಟಾಂಗ್ ಕೊಟ್ಟ ಶ್ರೀರಾಮುಲು, “ಡಿಸಿಎಂ ಅಲ್ಲ ಸಿಎಂ ಮಾಡ್ತೀನಿ ಅಂದ್ರು ಬರಲ್ಲ” ಎಂದರು. ಬಳಿಕ ಡಿಕೆ ಶಿವಕುಮಾರ್ ಶ್ರೀರಾಮುಲು ಬಳಿ ಬಂದು ನಾಲ್ಕೈದು ನಿಮಿಷ ಚರ್ಚೆ ನಡೆಸಿದರು.

  • ನೀನು ಸತ್ತಂಗೆ ಆಡು, ನಾನು ಅತ್ತಂಗೆ ಆಡುತ್ತೇನೆ: ಮೈತ್ರಿ ಸರ್ಕಾರದ ವಿರುದ್ಧ ರವಿ ಕಿಡಿ

    ನೀನು ಸತ್ತಂಗೆ ಆಡು, ನಾನು ಅತ್ತಂಗೆ ಆಡುತ್ತೇನೆ: ಮೈತ್ರಿ ಸರ್ಕಾರದ ವಿರುದ್ಧ ರವಿ ಕಿಡಿ

    ಬೆಂಗಳೂರು: ನೀನು ಸತ್ತಂಗೆ ಆಡು, ನಾನು ಅತ್ತಂಗೆ ಆಡುತ್ತೇನೆ ಎನ್ನುವಂತೆ ಮೈತ್ರಿ ಸರ್ಕಾರ ನಾಯಕರು ಆಟವಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ನಾನು ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಒಂದು ಪಾಯಿಂಟ್ ಆಫ್ ಆರ್ಡರ್ ಮೇಲೆ 3 ಗಂಟೆಗೂ ಅಧಿಕ ಕಾಲ ಚರ್ಚೆ ಮಾಡಿದ್ದನ್ನು ನೋಡಿದ್ದು ಇದೇ ಮೊದಲು. ಈ ಮೂಲಕ ಆಡಳಿತ ಪಕ್ಷದ ನಾಯಕ ಸಿಎಂ ಅವರು ವಿಶ್ವಾಸ ಮತಯಾಚನೆಯನ್ನು ಮುಂದೂಡುತ್ತಿದ್ದಾರೆ ಎಂದು ದೂರಿದರು.

    ಸದನಲ್ಲಿ ಕುಳಿತಿದ್ದ ಆಡಳಿತ ಪಕ್ಷದ ಶಾಸಕರ ಸಂಖ್ಯೆ 94 ಹಾಗೂ ವಿರೋಧ ಪಕ್ಷದ ಶಾಸಕರ ಸಂಖ್ಯೆ 105 ಇತ್ತು. ಇದನ್ನು ನೋಡಿದರೆ ಅವರು ಬಹುಮತ ಕಳೆದುಕೊಂಡಿರುವುದು ಸ್ಪಷ್ಟವಾಗುತ್ತದೆ. ಆದರೂ ಅಧಿಕಾರದಲ್ಲಿ ಮುಂದುವರಿಯಲು ಸುಪ್ರೀಂಕೋರ್ಟ್ ತೀರ್ಪನ್ನು ಮರೆಯುತ್ತಿದ್ದಾರೆ. ಇದೊಂದು ರೀತಿಯಲ್ಲಿ ಮೈತ್ರಿ ಪಕ್ಷಗಳ ನಾಟಕವಾಗಿದ್ದು, ಇದರಲ್ಲಿ ಸ್ಪೀಕರ್ ಪಾಲುದಾರರಾಗಬಾರದು ಎನ್ನುವುದು ನಮ್ಮ ವಿನಂತಿ ಎಂದು ಹೇಳಿದರು.

    ಮೈತ್ರಿ ನಾಯಕರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಎಲ್ಲಿಯವರೆಗೂ ಬಹುಮತ ಸಿಗುವುದಿಲ್ಲವೋ ಅಲ್ಲಿಯವರೆಗೆ ವಿಶ್ವಾಸ ಮತಯಾಚನೆಯನ್ನು ಮುಂದೂಡಲಾಗುತ್ತದೆ ಎಂದು ಆಡಳಿತ ಪಕ್ಷದ ಶಾಸಕರು ನನಗೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರು ಮಾಡಲು ಸಾಧ್ಯವೇ ಎಂಬ ಲೆಕ್ಕಾಚಾರವನ್ನು ದೋಸ್ತಿ ನಾಯಕರು ಹಾಕುತ್ತಿದ್ದಾರೆ ಎಂದು ದೂರಿದರು.

  • ಮಾಜಿ, ಹಾಲಿ, ಭಾವಿ ಮುಖ್ಯಮಂತ್ರಿಗಳ ಮಧ್ಯೆ ಒಡೆದು ಹೋಗುತ್ತಿರುವೆ: ಸ್ಪೀಕರ್

    ಮಾಜಿ, ಹಾಲಿ, ಭಾವಿ ಮುಖ್ಯಮಂತ್ರಿಗಳ ಮಧ್ಯೆ ಒಡೆದು ಹೋಗುತ್ತಿರುವೆ: ಸ್ಪೀಕರ್

    – ಸದನದಲ್ಲಿ ನಗೆ ಚಟಾಕೆ ಹಾರಿಸಿದ ರಮೇಶ್ ಕುಮಾರ್

    ಬೆಂಗಳೂರು: ಮಾಜಿ, ಹಾಲಿ ಹಾಗೂ ಭಾವಿ ಮುಖ್ಯಮಂತ್ರಿಗಳ ಮಧ್ಯೆ ನಾನು ಒಡೆದು ಹೋಗುತ್ತಿರುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸದನದಲ್ಲಿ ನಗೆ ಹರಿಸಿದ್ದಾರೆ.

    ವಿಶ್ವಾಸಮತಯಾಚನೆ ಕಾವು ಸದನದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದ ಸದಸ್ಯರನ್ನು ಕೆಲವು ಸಂದರ್ಭದಲ್ಲಿ ನಗಿಸಿ, ಕಾಲೆಳೆದು ಕಾನೂನು ಜ್ಞಾನವನ್ನು ನೀಡುತ್ತಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಶ್ವಾಸ ಮತಯಾಚನೆಯ ಕುರಿತ ಚರ್ಚೆಯ ವೇಳೆ ನಾನು ವಿಪಕ್ಷ ನಾಯಕ ಎಂದು ಬಾಯಿತಪ್ಪಿ ಹೇಳಿದರು. ಆಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಖುಷಿ ವ್ಯಕ್ತಪಡಿಸಿದರು. ಸ್ವಲ್ಪ ಗುಡುಗಿದ ಮಾಜಿ ಸಿಎಂ, ನಾನು ನಾಲ್ಕು ವರ್ಷ ಲೀಡರ್ ಆಫ್ ಆಪೋಸಿಷನ್ ಆಗಿದ್ದೆ. ಏನೋ ಈಗ ಬಾಯಿ ತಪ್ಪಿ ಬಂದು ಮಾತನಾಡಿದೆ. ಈಗ ಏನ್ ಖುಷಿ ಆಯಿತೋ ಇವರಿಗೆ, ಸಿಎಂ ಹೇಳಿದಂತೆ ಏನ್ ಆತುರ ಇದೆ ಎಂದು ಹೇಳಿ ತಿರುಗೇಟು ನೀಡಿದರು.

    ಈ ವೇಳೆ ಮಧ್ಯಪ್ರವೇಶ ಮಾಡಿದ ಸ್ಪೀಕರ್ ರಮೇಶ್ ಕುಮಾರ್, ಸ್ವಲ್ಪ ಖುಷಿಯಾಗಿರಲು ಅವರನ್ನು ಬಿಡಿ ಎಂದು ಬಿಜೆಪಿ ಶಾಸಕರಿಗೆ ಮನವಿ ಮಾಡಿ, ಸಿದ್ದರಾಮಯ್ಯ ಅವರ ಕಾಲೆಳೆದರು. ಹೀಗಾಗಿ ವಿಪಕ್ಷ ನಾಯಕರಲ್ಲಿ ನಗೆ ಜೋರಾಗಿ ಕೇಳಿ ಬಂದಿತು. ಆಗ ಮಾಜಿ ಸಿಎಂ, ಪಾಪಾ ಅವರು ಬಹಳ ಸಂತೋಷದಲ್ಲಿ ತೇಲಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕರಿಗೆ ಟಾಂಗ್ ಕೊಟ್ಟರು.

    ವಿಶ್ವಾಸ ಮತಯಾಚನೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದನ್ನು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು. ಸ್ಪೀಕರ್ ಅವರು ಪ್ರತಿಕ್ರಿಯೆ ನೀಡಿ ಸಮಾಧಾನ ಪಡಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಮಾತು ಮುಂದುವರಿಸಿ, ಪಾಪ ಅವರು ಮಾಜಿ ಮುಖ್ಯಮಂತ್ರಿಗಳು ಹೇಳುತ್ತಾರೆ ಎಂದು ಕಾಲೆಳೆದರು. ಆಗ ಸ್ಪೀಕರ್ ಅವರು, ನಮ್ಮ ಸಮಸ್ಯೆಯೇ ಅದು. ಮಾಜಿ ಮುಖ್ಯಮಂತ್ರಿಗಳು, ಹಾಲಿ ಮುಖ್ಯಮಂತ್ರಿಗಳು ಹಾಗೂ ಭಾವಿ ಮುಖ್ಯಮಂತ್ರಿಗಳ ಮಧ್ಯೆ ಸಿಕ್ಕು ನಾನು ಒಡೆದು ಹೋಗುತ್ತಿರುವೆ ಎಂದು ಸದನದಲ್ಲಿ ನಗೆ ಹರಿಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮುಂದುವರಿಸಿ, ನೀವು ಎರಡನೇ ಬಾರಿ ಸ್ಪೀಕರ್ ಆಗಿರುವುದರಿಂದ ಇದನ್ನು ತಡೆದುಕೊಳ್ಳುವ ಶಕ್ತಿ ನಿಮಗೆ ಇದೆ ಅಂತ ನಾನು ಭಾವಿಸಿರುವೆ ಎಂದು ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದರು.