Tag: vidhan sabha

  • ಟಿಪ್ಪು ಜಯಂತಿ ಆಚರಣೆ ಕುರಿತ ಚರ್ಚೆಗೆ ಆಗ್ರಹ – ಬಿಜೆಪಿ ಬೆಂಬಲಕ್ಕೆ ನಿಂತ ಬಸವರಾಜ ಹೊರಟ್ಟಿ

    ಟಿಪ್ಪು ಜಯಂತಿ ಆಚರಣೆ ಕುರಿತ ಚರ್ಚೆಗೆ ಆಗ್ರಹ – ಬಿಜೆಪಿ ಬೆಂಬಲಕ್ಕೆ ನಿಂತ ಬಸವರಾಜ ಹೊರಟ್ಟಿ

    ಬೆಳಗಾವಿ: ವಿಧಾನ ಪರಿಷತ್ ಕಲಾಪದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರದ ಚರ್ಚೆಗೆ ಪಟ್ಟು ಹಿಡಿದ ವೇಳೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸದಸ್ಯರ ಬೆಂಬಲಕ್ಕೆ ನಿಂತಿದ್ದಾರೆ.

    ಪರಿಷತ್‍ನಲ್ಲಿ ಟಿಪ್ಪು ಜಯಂತಿ ಕುರಿತ ಚರ್ಚೆಗೆ ಸಿಎಂ ಕುಮಾರಸ್ವಾಮಿ ಅವರು ಕಾಲಾವಕಾಶ ಕೇಳಿದ್ರು, ಹೀಗಾಗಿ ಸಭಾಪತಿಗಳು ಚರ್ಚೆಗೆ ಅವಕಾಶ ಕೊಡಲಿಲ್ಲ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಸದಸ್ಯರು, ಸಂಜೆ ಒಳಗೆ ಸಿಎಂ ಉತ್ತರ ಕೊಡಲೇಬೇಕು ಅಂತ ಬಿಗಿಪಟ್ಟು ಹಿಡಿದರು.

    ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದಂತೆ ಅಚ್ಚರಿಯ ರೀತಿಯಲ್ಲಿ ಬೆಂಬಲಕ್ಕೆ ನಿಂತ ಹೊರಟ್ಟಿ ಅವರು, ಹೌದು, ಅಜೆಂಡಾದಿಂದ ಯಾಕೆ ಇದನ್ನು ಬಿಟ್ಟಿದ್ದೀರಿ ಎನ್ನುವುದನ್ನು ಹೇಳಬೇಕು. ಸರ್ಕಾರ ವಿಪಕ್ಷಕ್ಕೆ ಮನವರಿಕೆ ಮಾಡಬೇಕು ಎಂದರು. ನಂತರ ಮಾತನಾಡಲು ಮುಂದಾದ ಐವಾನ್ ಡಿಸೋಜಾ ಅವರನ್ನು ಹೊರಟ್ಟಿ ತರಾಟೆಗೆ ತೆಗೆದುಕೊಂಡರು. ಈ ರೀತಿ ಮಾಡಿ ದಾರಿ ತಪ್ಪಿಸಬೇಡಿ. ನೀವು ಸುಮ್ನೆ ಕುಳಿತುಕೊಳ್ಳಿ ಅಂತ ಹೇಳಿ ಗದರಿದರು.

    ಹೊರಟ್ಟಿ ಅವರ ಮಾತಿನಂತೆ ಐವಾನ್ ಡಿಸೋಜಾ ಅವರು ತಮ್ಮ ಸ್ಥಾನದಲ್ಲಿ ಕುಳಿತರು. ಬಳಿಕ ಮಾತನಾಡಿದ ಸಚಿವೆ ಜಯಮಾಲಾ ಅವರು ಎರಡು ದಿನ ಸಮಯ ಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಬಿಜೆಪಿ ಸದಸ್ಯರು ಒಪ್ಪಿಗೆ ನೀಡಲಿಲ್ಲ. ಈ ವೇಳೆ ಮಧ್ಯಪ್ರವೇಶ ಮಾಡಿದ ಸಚಿವ ಸಾರಾ ಮಹೇಶ್ ಅವರು, ನೀವು ಹೇಳಿದಂತೆ ಕೇಳಬೇಕಿಲ್ಲ ಎಂದು ಬಿಜೆಪಿ ಸದಸ್ಯರಿಗೆ ತಿರುಗೇಟು ನೀಡಿದರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆಯಿತು. ಸರ್ಕಾರ ನಡೆಯನ್ನು ವಿರೋಧಿ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

    ಸಿಎಂ ಕುಮಾರಸ್ವಾಮಿ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ನಿಲುವು ತಿಳಿಸಲು ಹಿಂದೇಟು ಹಾಕುತ್ತಿದ್ದಾರೆ. ಅದ್ದರಿಂದಲೇ 15 ದಿನಗಳ ಕಾಲಾವಕಾಶ ಕೇಳಿ ಪಲಾಯನ ಮಾಡುತ್ತಿದ್ದಾರೆ. ಅದ್ದರಿಂದ ನಮಗೇ ಈ ಕುರಿತು ತಮ್ಮ ನಿಲುವುವಿನ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸಚಿವ ಕೃಷ್ಣಬೈರೈಗೌಡ ಮಾತನಾಡಿ ಈ ಕುರಿತು ಸಿಎಂ ಕುಮಾರಸ್ವಾಮಿ ಅವರ ಜೊತೆ ಮಾತನಾಡುತ್ತೇನೆ. ಏಕೆ ಹೆಚ್ಚಿನ ಸಮಯ ಕೇಳಿದರು ಎಂದು ತಿಳಿದುಕೊಂಡು ಹೇಳುತ್ತೇನೆ ಎಂದರು. ಆದರೆ ಇವರ ಸಮಾಜಯಿಸಿಗೆ ಕೂಡ ಬಿಜೆಪಿ ನಾಯಕರು ಸಮ್ಮತಿ ಸೂಚಿಸಲಿಲ್ಲ. ಗದ್ದಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಸ್ಪೀಕರ್ ಸದನವನ್ನು ಮುಂದೂಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv 

  • ಚೆನ್ನಮ್ಮ ದೇವೇಗೌಡ, ಎಚ್‍ಡಿಕೆ, ರೇವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಂಎಲ್‍ಸಿ

    ಚೆನ್ನಮ್ಮ ದೇವೇಗೌಡ, ಎಚ್‍ಡಿಕೆ, ರೇವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಂಎಲ್‍ಸಿ

    ಬೆಂಗಳೂರು: ನೂತನವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾದ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಈ ವೇಳೆ ಜೆಡಿಎಸ್ ಪಕ್ಷದ ಸದಸ್ಯ ರಮೇಶ್ ಗೌಡ ಅವರು ಚೆನ್ನಮ್ಮ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ವೀಕರ್ ಮತ್ತೊಮ್ಮೆ ಪ್ರಮಾಣ ವಚನ ನೀಡಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಇಬ್ಬರು ನೂತನ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ ವಚನ ಬೋಧನೆ ಮಾಡಿದರು. ಜೆಡಿಎಸ್ ನ ರಮೇಶ್ ಗೌಡ ಹಾಗೂ ಕಾಂಗ್ರೆಸ್ ನ ವೇಣುಗೋಪಾಲ್ ಪರಿಷತ್ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದರು. ಮೊದಲು ಚೆನ್ನಮ್ಮ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಬಳಿಕ ರಮೇಶ್ ಗೌಡ ಅವರು 2ನೇ ಬಾರಿಗೆ ಸತ್ಯ, ನಿಷ್ಠೆ, ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

    ಡಿಸಿಎಂ ಬರೋವರೆಗೂ ಕಾದು ಕುಳಿತ ವೇಣುಗೋಪಾಲ್:
    ಜೆಡಿಎಸ್ ಪಕ್ಷದ ಸದಸ್ಯರ ಬಳಿಕ ಪ್ರಮಾಣ ಸ್ವೀಕರಿಸಬೇಕಾಗಿದ್ದ ಕಾಂಗ್ರೆಸ್ ಪಕ್ಷದ ವೇಣುಗೋಪಾಲ್ ಅವರು ಡಿಸಿಎಂ ಪರಮೇಶ್ವರ್ ಅವರು ಬರುವವರೆಗೂ ಪ್ರಮಾಣ ವಚನ ಸ್ವೀಕಾರ ಮಾಡಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. ಹೀಗಾಗಿ ಬೆಳಗ್ಗೆ 11 ಗಂಟೆಗೆ ನಡೆಯಬೇಕಾಗಿದ್ದ ಪ್ರಮಾಣ ಸ್ವೀಕಾರ 10 ನಿಮಿಷ ತಡವಾಗಿ ನಡೆಯಿತು. ಸ್ವೀಕರ್ ಬಸವರಾಜ್ ಹೊರಟ್ಟಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಡಿಸಿಎಂ ಪರಮೇಶ್ವರ್ ಅವರು ಆಗಮಿಸುವವರೆಗೂ ಕಾದುಕುಳಿತರು. ಪರಮೇಶ್ವರ್ ಆಗಮಿಸಿದ ಬಳಿಕ ವೇಣುಗೋಪಾಲ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರಿಷತ್ ಚುನಾವಣೆ – ವರಿಷ್ಠರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷರ ಅಸಮಾಧಾನ?

    ಪರಿಷತ್ ಚುನಾವಣೆ – ವರಿಷ್ಠರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷರ ಅಸಮಾಧಾನ?

    ಬೆಂಗಳೂರು: ವಿಧಾನ ಪರಿಷತ್ ಮೂರು ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ 2 ಇಬ್ಬರು ಹಾಗೂ ಜೆಡಿಎಸ್ ಪಕ್ಷದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿದ್ದಾರೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಅವರು ಪಕ್ಷದ ವರಿಷ್ಠರ ನಿರ್ಧಾರಕ್ಕೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

    ವಿಧಾನ ಪರಿಷತ್ ಸದ್ಯಸ ಸ್ಥಾನಕ್ಕೆ ತಾವು ಸೂಚಿಸಿರುವ ಅಭ್ಯರ್ಥಿಗಳ ಹೆಸರನ್ನು ಪರಿಗಣಿಸಿಲ್ಲ ಎನ್ನುವುದು ವಿಶ್ವನಾಥ್ ಅವರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಪರಿಷತ್ ಅಭ್ಯರ್ಥಿ ಆಯ್ಕೆ ರಾಜ್ಯಾಧ್ಯಕ್ಷನ ಮಾತಿಗೆ ಬೆಲೆ ಇಲ್ಲ. ರಮೇಶ್ ಬಾಬು, ವೈಎಸ್ ವಿ ದತ್ತ, ಕೋನರೆಡ್ಡಿ ಹಿರಿಯರು. ಪರಿಷತ್ ನಲ್ಲಿ ಯಾವುದೇ ವಿಷಯದ ಮೇಲೆ ಅವರಿಗೆ ಮಾತನಾಡುವ ಅರ್ಹತೆ ಇದ್ದವರು. ಅವರಲ್ಲಿ ಯಾರನ್ನಾದರೂ ಒಬ್ಬರನ್ನು ಆಯ್ಕೆ ಮಾಡಬಹುದಿತ್ತು. ಪಕ್ಷದ ಹಲವು ನಾಯಕರೆಲ್ಲ ಸೇರಿ ಶಿಫಾರಸ್ಸು ಮಾಡಿದರೂ ಬೆಲೆ ಇಲ್ಲ ಎಂದು ಪಕ್ಷದ ವರಿಷ್ಠರ ನಡೆಗೆ ವಿಶ್ವನಾಥ್ ಆಪ್ತರಲ್ಲಿ ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿದೆ.

    ಜೆಡಿಎಸ್ ಅಭ್ಯರ್ಥಿಯಾಗಿ ರಮೇಶ್ ಗೌಡ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಯಾವುದೇ ನಾಯಕರಿಲ್ಲದೆ ರೇವಣ್ಣ ಅವರ ಆಪ್ತ ಸಹಾಯಕರೊಂದಿಗೆ ವಿಧಾನಸಭೆಗೆ ಆಗಮಿಸಿದ ರಮೇಶ್ ಗೌಡ ಅವರು ಚುನಾವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಸಿಎಂ ಎಚ್‍ಡಿ ಕುಮಾರಸ್ವಾಮಿ, ಸಚಿವ ಎಚ್‍ಡಿ ರೇವಣ್ಣ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದದಿಂದ ನಾನು ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, ನಾಮಪತ್ರದಲ್ಲಿ ಸೂಚಕರಾಗಿ 10 ಜನ ಶಾಸಕರು ಸಹಿ ಮಾಡಿದ್ದಾರೆ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದಿಂದ ನಸೀರ್ ಅಹಮ್ಮದ್ ಹಾಗೂ ಎಂ ಸಿ ವೇಣುಗೋಪಾಲ್ ನಾಮಪತ್ರ ಸಲ್ಲಿಸಿದ್ದಾರೆ. ಉಳಿದಂತೆ ಹೆಚ್. ಎಂ. ರಮೇಶಗೌಡ, ಹರಿಶ್ಚಂದ್ರ, ವೆಂಕಟೇಶ್ವರ್ ಮಹಾಸ್ವಾಮೀಜಿ ಉರೂಫ್ ಕಟಕದೊಂಡ ಸೇರಿದಂತೆ ಮೂವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಜಂಟಿ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಎಸ್ ಕುಮಾರಸ್ವಾಮಿ ಅವರು, ಪರಿಷತ್ ಗೆ ಖಾಲಿ ಇರುವ ಮೂರು ಸ್ಥಾನಗಳ ಚುನಾವಣೆಗೆ ಒಟ್ಟು 5 ನಾಮಪತ್ರ ಸಲ್ಲಿಕೆಯಾಗಿವೆ. ನಾಳೆ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಸೆಪ್ಟೆಂಬರ್ 27 ರ ಬಳಿಕ ಅಭ್ಯರ್ಥಿ ಆಯ್ಕೆ ಪ್ರಕಟವಾಗಲಿದೆ ಎಂದು ತಿಳಿಸಿದರು.

    ಪಕ್ಷೇತರ ಅಭ್ಯರ್ಥಿಗಳು ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರಗಳಲ್ಲಿ ಶಾಸಕರ ಸಹಿ ಇಲ್ಲದ ಕಾರಣ ಬಹುತೇಕ ತಿರಸ್ಕರಗೊಳ್ಳಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಕೆಪಿಎಂಇ ಮಸೂದೆ ಮಂಡನೆ: ಮೂಲ ಮಸೂದೆಯಲ್ಲಿ ಏನಿತ್ತು? ಈಗ ಬದಲಾಗಿದ್ದು ಏನು?

    ಕೆಪಿಎಂಇ ಮಸೂದೆ ಮಂಡನೆ: ಮೂಲ ಮಸೂದೆಯಲ್ಲಿ ಏನಿತ್ತು? ಈಗ ಬದಲಾಗಿದ್ದು ಏನು?

    ಬೆಳಗಾವಿ: ವೈದ್ಯರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ಮಸೂದೆ(ಕೆಪಿಎಂಇ) ವಿಧಾನಸಭೆಯಲ್ಲಿ ಮಂಡನೆಯಾಗಿದೆ.

    ಖಾಸಗಿ ವೈದ್ಯರ ಮುಷ್ಕರದಿಂದ 60ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಕೆಪಿಎಂಇ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಹಠ ಸಾಧಿಸಿ ಕೊನೆಗೂ ಮಂಡಿಸಿದ್ದಾರೆ.

    ಮಸೂದೆಯಲ್ಲಿರುವ ಪ್ರಮುಖ ಅಂಶಗಳು:
    ಮೂಲ ಮಸೂದೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರೋಗಿ ಮೃತಪಟ್ಟರೆ ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ಅಂಶವಿದೆ ಎಂದು ಹೇಳಲಾಗಿತ್ತು. ಆದರೆ ಮಂಡನೆಯಾಗಿರುವ ಮಸೂದೆಯಲ್ಲಿ ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾಪವನ್ನು ಕೈಬಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಕಡ್ಡಾಯವಾಗಿ ಪ್ರದರ್ಶಿಸಬೇಕು, ಸರ್ಕಾರಿ ಯೋಜನೆಯಡಿ ನೀಡುವ ಚಿಕಿತ್ಸೆಗಳಿಗೆ ಸರ್ಕಾರವೇ ದರ ನಿಗದಿ ಪಡಿಸಬೇಕು ಎನ್ನುವ ಅಂಶವಿದೆ.

    ನಿಗದಿಯಾಗಿರುವ ದರ, ವೆಚ್ಚದ ಪಟ್ಟಿಯನ್ನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೆಬ್‍ಸೈಟ್‍ನಲ್ಲಿ ಪ್ರದರ್ಶಿಸಬೇಕು. ನಿಗದಿತ ಅವಧಿಯೊಳಗೆ ಹೆಚ್ಚಿಗೆ ಕಾಯಿಸದೇ ರೋಗಿಗಳೊಂದಿಗೆ ಸಮಾಲೋಚನೆ ಮಾಡಬೇಕು. ಸಮಾಲೋಚನಾ ಕೊಠಡಿಗೆ ರೋಗಿಯ ಸಂಬಂಧಿ ಅಥವಾ ಸ್ನೇಹಿತರಿಗೆ ಅವಕಾಶ ನೀಡಬೇಕು ಎನ್ನುವ ಅಂಶಗಳು ಮಸೂದೆಯಲ್ಲಿದೆ.

    ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕುಂದುಕೊರತೆ ದೂರು ಪ್ರಾಧಿಕಾರ ರಚನೆಯಾಗಲಿದ್ದು, ಈ ಸಮಿತಿಯಲ್ಲಿ ಡಿಎಚ್‍ಓ, ಜಿಲ್ಲಾ ಆಯುಷ್ ಅಧಿಕಾರಿ, ಐಎಂಎ ಓರ್ವ ಪ್ರತಿನಿಧಿ, ಜಿಲ್ಲಾಮಟ್ಟದ ಮಹಿಳಾ ಪ್ರತಿನಿಧಿ ಇರುತ್ತಾರೆ. ದೂರು ಪ್ರಾಧಿಕಾರದಲ್ಲಿ ವಾದಿಸಲು ಅವಕಾಶ ನೀಡಲಾಗಿದ್ದು, ಆರೋಪಿತ ವೈದ್ಯರು ಅಥವಾ ಸಂಸ್ಥೆ ವಕೀಲರನ್ನು ನೇಮಿಸಿಕೊಳ್ಳಬಹುದು. ತುರ್ತು ಚಿಕಿತ್ಸಾ ಸಮಯದಲ್ಲಿ ಮುಂಗಡ ಹಣಕ್ಕೆ ರೋಗಿಗಳ ಸಂಬಂಧಿಕರಿಗೆ ಒತ್ತಾಯಿಸುವಂತಿಲ್ಲ. ಅಷ್ಟೇ ಅಲ್ಲದೇ ಚಿಕಿತ್ಸೆ ಫಲಕಾರಿಯಾಗದೇ ರೋಗಿ ಸಾವನ್ನಪ್ಪಿದ್ದರೆ ಶವ ನೀಡದೇ ಬಾಕಿ ಹಣಕ್ಕೆ ಒತ್ತಾಯಿಸಬಾರದು ಎನ್ನುವ ಅಂಶಗಳಿವೆ.

    ಮೂಲ ಮಸೂದೆಯಲ್ಲಿ ಆಸ್ಪತ್ರೆಯಲ್ಲಿ ನೀಡಲಾಗುವ ಎಲ್ಲ ಚಿಕಿತ್ಸೆಗಳಿಗೆ ಆಸ್ಪತ್ರೆಗಳು ಎಷ್ಟು ದರವನ್ನು ವಿಧಿಸಬೇಕು ಎನ್ನುವ ಅಂಶವನ್ನು ಸರ್ಕಾರವೇ ನಿಗದಿ ಪಡಿಸಲಿದೆ. ಸರ್ಕಾರ ನಿಗದಿಪಡಿಸಿದ ಪಟ್ಟಿಯನ್ನು ಆಸ್ಪತ್ರೆಗಳು ಪ್ರದರ್ಶಿಸಬೇಕು ಮತ್ತು ಅಷ್ಟೇ ದರವನ್ನು ಪಡೆಯಬೇಕು ಎನ್ನುವ ಅಂಶವಿತ್ತು. ಆದರೆ ವೈದ್ಯರ ಜೊತೆಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ನಡೆಸಿದ ಸಂಧಾನ ಸಭೆಯ ಬಳಿಕ ಈ ಅಂಶಗಳನ್ನು ಕೈಬಿಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

  • ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಶಾಸಕರಿಗೆ ಬರ

    ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಶಾಸಕರಿಗೆ ಬರ

    ಬೆಂಗಳೂರು: ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಶಾಸಕರಿಗೆ ಬರ ಬಂದಿತ್ತು. ಕೇವಲ 45 ಶಾಸಕರು ಮಾತ್ರ ಹಾಜರಿದ್ರು. ಮೌಢ್ಯದ ಬಗ್ಗೆ ಹಾಸ್ಯದ ಶೈಲಿಯಲ್ಲಿ ಚರ್ಚೆಯಾಯ್ತು.

    ಮಳೆಗಾಗಿ ಸಚಿವ ಎಂಬಿ ಪಾಟೀಲ್ ಪರ್ಜನ್ಯ ಹೋಮದ ಬಗ್ಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿ, ಸರ್ಕಾರ ದುಡ್ಡು ಭರಿಸಲ್ಲ. ಅದು ಎಂಬಿ ಪಾಟೀಲ್ ಸ್ವಂತ ಖರ್ಚು. ಅದು ಅವರ ನಂಬಿಕೆ. ವೈಯಕ್ತಿಕವಾಗಿ ನಾನು ನಂಬುವುದಿಲ್ಲ ಎಂದರು.

    ಈ ವೇಳೆ ಎದ್ದು ನಿಂತ ಜಗದೀಶ್ ಶೆಟ್ಟರ್, ಸಚಿವರಾಗಿ ಎಂಬಿ ಪಾಟೀಲ್ ಮಾಡಿದ್ದನ್ನ ಸಿಎಂ ಸಮರ್ಥಿಸಿಕೊಳ್ಳುವ ಮಟ್ಟಕ್ಕೆ ಬಂದಿರೋದು ಖೇದಕರ. ಮೋಡ ಬಿತ್ತನೆ ಬದಲು ಮೂಢ ಬಿತ್ತನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಈಶ್ವರಪ್ಪ ಗರಂ: ಪರಿಷತ್‍ನಲ್ಲಿ ಈಶ್ವರಪ್ಪ ಗರಂ ಆಗಿದ್ರು. ವಿಮಲಗೌಡರಿಗೆ ಸಂತಾಪ ಸೂಚಿಸುವ ವೇಳೆ, ಪಕ್ಷಾಂತರ ಮಾಡುವವರು ಪಕ್ಷ ಕಟ್ಟಲು ಬರೋದಿಲ್ಲ. ಅಧಿಕಾರ ಅನುಭವಿಸಲು ಬರುತ್ತಾರೆ ಅಂತ ಪಕ್ಷದ ನಾಯಕರ ವಿರುದ್ಧವೇ ಈಶ್ವರಪ್ಪ ಪರೋಕ್ಷ ವಾಗ್ದಾಳಿ ನಡೆಸಿದರು.

    ವಿಮಲಗೌಡರು ಚುನಾವಣೆಗೆ ನಿಂತು ಸೋತಿದ್ದಾಗ ಧೈರ್ಯ ಹೇಳಲು ಹೋಗಿದ್ದೆ. ಆಗ, ಸೋಲು ಬೇಸರ ತಂದಿಲ್ಲ. ನಮ್ಮವರೇ ನಮಗೆ ಸೋಲಿಸಿದ್ರಲ್ಲ ಅಂತ ವಿಮಲ ಬೇಸರಗೊಂಡಿದ್ದರು ಎಂದು ಅವರು ಹೇಳಿದರು.