Tag: Vidhan soudha

  • ವಿಧಾನಸೌಧದಲ್ಲಿ ನಕಲಿ ಪಾಸ್‌ ಹಾವಳಿ – 4 ದಿನದಲ್ಲಿ 300ಕ್ಕೂ ಹೆಚ್ಚು ನಕಲಿ ಪಾಸ್‌

    ವಿಧಾನಸೌಧದಲ್ಲಿ ನಕಲಿ ಪಾಸ್‌ ಹಾವಳಿ – 4 ದಿನದಲ್ಲಿ 300ಕ್ಕೂ ಹೆಚ್ಚು ನಕಲಿ ಪಾಸ್‌

    ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಪ್ರವೇಶ ಪಡೆಯುವುದಕ್ಕೆ ನಕಲಿ ಪಾಸ್‌ಗಳ ಬಳಕೆಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ ಪಾಸ್‌ಗಳನ್ನ ಬಳಸಿ ವಿಧಾನಸೌಧದಲ್ಲೇ ವ್ಯವಹಾರ ನಡೆಸಲಾಗುತ್ತಿದೆ.

    ಕಳೆದ ಕೆಲವು ದಿನಗಳಿಂದ 300 ಕ್ಕೂ ನಕಲಿ ಪಾಸ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತಿಪ್ಪೇರುದ್ರಪ್ಪ ಕೇಸ್ ಬಳಿಕ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ಸಿಸಿಬಿ ಮುಖ್ಯಸ್ಥರಾಗಿದ್ದ ಡಾ.ಶರಣಪ್ಪ ವಿಧಾನಸೌಧ ಭದ್ರತೆ ನೇತೃತ್ವ ವಹಿಸಿದ್ದಾರೆ. ಇದನ್ನೂ ಓದಿ: ಆಷಾಢ ಮಾಸದ ಕೊನೆ ಶುಕ್ರವಾರ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ

    ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಲಾಗುತ್ತಿದೆ. ಅಧಿಕೃತ ಪಾಸ್‌ಗಳ ಕಲರ್ ಜೆರಾಕ್ಸ್, ಹಳೇ ಪಾಸ್‌ಗಳು, ಅವಧಿ ಮುಗಿದಿರೋ ಪಾಸ್‌ಗಳನ್ನು ಬಳಸಲಾಗುತ್ತಿತ್ತು. ಅಲ್ಲದೇ ಕೆಲ ವಾಹನಗಳ ನಕಲಿ ಪಾಸ್ ಪತ್ತೆಯಾಗಿವೆ. ಇದನ್ನೂ ಓದಿ: ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್‌ಡೌನ್‌

    ಎಂಎಲ್‌ಎ, ಎಂಎಲ್‌ಸಿ‌ಗಳಿಗೆ ನೀಡಿರುವ ಪಾಸ್‌ಗಳನ್ನು ಕಲರ್ ಜೆರಾಕ್ಸ್ ಮಾಡಿ‌ ವಿಧಾನಸೌಧ ಬರುತ್ತಿದ್ದರು. ನಕಲಿ ಪಾಸ್‌ಗಳನ್ನ ಬಳಸಿ ಒಳ ಪ್ರವೇಶಿಸುವವರ ನಿಯಂತ್ರಣಕ್ಕೆ ವಿಧಾನಸೌಧಕ್ಕೆ ಪ್ರವೇಶ ನೀಡುವ ಎಲ್ಲಾ ಗೇಟ್‌ಗಳಲ್ಲಿ ಪ್ರತಿಯೊಬ್ಬರ ಪರಿಶೀಲನೆ ನಡೆಸಲಾಗುತ್ತಿದೆ.

    ಅವಧಿ‌ ಮುಗಿದಿರುವ ಪಾಸ್, ಕಲರ್ ಜೆರಾಕ್ಸ್ ಪಾಸ್‌ಗಳನ್ನು ಪೊಲೀಸರು ಸೀಜ್‌ ಮಾಡಿದ್ದಾರೆ. ಹಲವು ರಾಜಕಾರಣಿಗಳ ಬೆಂಬಲಿಗರಿಂದ ನಕಲಿ ಪಾಸ್‌ಗಳ ಬಳಕೆಯಾಗುತ್ತಿದೆ ಎನ್ನಲಾಗಿದೆ. ಸದ್ಯ ನಕಲಿ ಪಾಸ್‌ ಬಳಸುತ್ತಿದ್ದ ಎಲ್ಲರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ.

    ಪರಿಶೀಲನೆ ನಂತರ ಮಾಜಿ ಎಂಎಲ್ಎ, ಎಂಎಲ್‌ಸಿ ಪಾಸ್‌ಗಳೇ ನಕಲಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ವಿಧಾನಸೌಧ ಸಿಬ್ಬಂದಿ ಎಂದೇ ನಕಲಿ ಪಾಸ್ ಬಳಕೆ ಮಾಡಿರುವುದು ಕಂಡುಬಂದಿದೆ. ಈ ನಕಲಿ ಪಾಸ್‌ಗಳ ಹಿಂದಿನ ಉದ್ದೇಶ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಸ್ತು ಸರಿಯಿಲ್ಲ ಅಂತ ಮುಚ್ಚಿದ್ದ ಬಾಗಿಲು ತೆರೆಸಿ ಎಂಟ್ರಿ ಕೊಟ್ಟ ಸಿಎಂ

    ವಾಸ್ತು ಸರಿಯಿಲ್ಲ ಅಂತ ಮುಚ್ಚಿದ್ದ ಬಾಗಿಲು ತೆರೆಸಿ ಎಂಟ್ರಿ ಕೊಟ್ಟ ಸಿಎಂ

    ಬೆಂಗಳೂರು: ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ಪಶ್ಚಿಮ ದ್ವಾರದ ಬೀಗ ತೆರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಒಳಗೆ ಪ್ರವೇಶಿಸಿದರು.

    ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪಶ್ಚಿಮ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂತು. ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ದಕ್ಷಿಣ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಪಶ್ಚಿಮದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಕಟೀಲ್ ಸ್ಪಷ್ಟನೆ

    ಆರೋಗ್ಯಕರ ಮನಸ್ಸು, ಸ್ವಚ್ಛ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ-ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜೊತೆ ಸಿಎಂ ತಮ್ಮ ನಿಲುವನ್ನು ಹಂಚಿಕೊಂಡರು.

    ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ, ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ. ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ. ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದು ಆಶಿಸಿದ್ದಾರೆ.

    ಬಿಜೆಪಿ ಅವಧಿಯಲ್ಲಿ ವಾಸ್ತು ಸರಿಯಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ಮುಚ್ಚಿಸಲಾಗಿತ್ತು. ಈಗ ಬಾಗಿಲನ್ನು ತೆಗೆಸಿ ದಕ್ಷಿಣ ಬಾಗಿಲಿನಿಂದಲೇ ತಮ್ಮ ಕಚೇರಿಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದಾರೆ.

    ಚಾಮರಾಜನಗರ ಕಥೆ ನೆನಪಿಸಿದ ಸಿದ್ದು
    ಚಾಮರಾಜನಗರಕ್ಕೆ ಭೇಟಿ ಕೊಟ್ಟ ಮುಖ್ಯಮಂತ್ರಿಗಳು,ಉನ್ನತ ಅಧಿಕಾರಿಗಳು ಆರು ತಿಂಗಳಿನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆನ್ನುವ ನಂಬಿಕೆ ಬಹು ಹಿಂದಿನ ಕಾಲದಿಂದಲೂ ಇತ್ತು. ಸಮಾಜವಾದಿ ತತ್ವಪಾಲಕರಾಗಿದ್ದ ಜೆ.ಹೆಚ್.ಪಟೇಲ್ ಆದಿಯಾಗಿ ಬಹುತೇಕ ಮುಖ್ಯಮಂತ್ರಿಗಳು ಚಾಮರಾಜನಗರ ಪಟ್ಟಣಕ್ಕೆ ಭೇಟಿ ನೀಡುವುದನ್ನು ತಪ್ಪಿಸಿದ್ದದ್ದು ಇದೇ ಕಾರಣಕ್ಕಾಗಿತ್ತು. ಹೆಚ್.ಡಿ. ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯ ಕಡೆ ದಿನಗಳಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಕಾಕತಾಳೀಯವೆನ್ನುವಂತೆ ಅವರು ಮತ್ತೆ ಅಧಿಕಾರದಲ್ಲಿ ಮುಂದುವರಿಯಲಿಲ್ಲ. ಇದನ್ನೂ ಓದಿ: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಸಿದ್ದರಾಮಯ್ಯ

    ಆದರೆ ಈ ಮೂಢನಂಬಿಕೆಯನ್ನು ಈ ಹಿಂದೆ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅವರು ಅಲ್ಲಗಳೆದು ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಅದಾದ ಬಳಿಕ ಅನೇಕ ಬಾರಿ ಈ ಜಿಲ್ಲೆಗೆ ತೆರಳಿದ್ದರು. ಕೊನೆಗೆ ಪೂರ್ಣಾವಧಿ ಆಡಳಿತ ಕೂಡ ನಡೆಸಿದರು. ಸಿದ್ದರಾಮಯ್ಯ ಅವರು ತಮ್ಮ ಜೀವನದುದ್ದಕ್ಕೂ ಮೌಢ್ಯ, ಮೂಢನಂಬಿಕೆ, ಕಂದಾಚಾರಗಳನ್ನು ವಿರೋಧಿಸುತ್ತಾ ಬಂದಿದ್ದಾರೆ. ಅದಕ್ಕೆ ಇವೆರಡು ನಿದರ್ಶನಗಳಿವೆ.

  • ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಚಿವರಿಂದ ಸ್ಥಳ ಪರಿಶೀಲನೆ

    ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಚಿವರಿಂದ ಸ್ಥಳ ಪರಿಶೀಲನೆ

    ಬೆಂಗಳೂರು: ಜಗಜ್ಯೋತಿ ಬಸವೇಶ್ವರರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ವಿಧಾನಸೌಧದ ಎದುರು ಪ್ರತಿಷ್ಠಾಪಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಕಂದಾಯ ಸಚಿವ ಆರ್. ಅಶೋಕ್ (R Ashok) ಮತ್ತು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ (CC Patil) ಅವರು ಶನಿವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಲನಕ್ಷೆ ಪರಿಶೀಲಿಸಿ, ಸ್ಥಳಕ್ಕೆ ಜಂಟಿಯಾಗಿ ಭೇಟಿ ನೀಡಿ ತಪಾಸಣೆ ನಡೆಸಿದರು.

    ಬಸವಣ್ಣನವರ ಮತ್ತು ಕೆಂಪೇಗೌಡರ ಪ್ರತಿಮೆಗಳ ಮಾದರಿಯನ್ನು ಸಿದ್ಧಪಡಿಸಿ ವಿಧಾನಸೌಧದ (Vidhan Soudha) ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿತ್ತು. ಅದರಂತೆ ಅವರು ಇಂದು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಉಭಯ ಸಚಿವರೂ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

    ಈ ಪ್ರತಿಮೆಗಳನ್ನು ಆದಷ್ಟು ಶೀಘ್ರವೇ ನಿರ್ಮಿಸಿ, ವಿಧಾನಸೌಧದ ಮುಂಭಾಗ ಈ ತಿಂಗಳಿನಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಉಭಯ ಸಚಿವರು ಸೂಚಿಸಿದರು.

    ತಲಾ 4 ಮೀ. ಎತ್ತರದ ಈ ಎರಡು ಪ್ರತಿಮೆಗಳನ್ನು ಅಶ್ವಾರೂಢ ಭಂಗಿಗಳಲ್ಲಿ ಸ್ಥಾಪಿಸಬೇಕು ಮತ್ತು ಸುತ್ತಮುತ್ತ ಹಸಿರು ಸೂಸುವ ಪರಿಸರವನ್ನು ಕಾಪಾಡಿಕೊಳ್ಳಬೇಕೆಂದು ಸಚಿವ ಅಶೋಕ್ ತಿಳಿಸಿದರು. ಇದನ್ನೂ ಓದಿ: ಗಣರಾಜೋತ್ಸವ ಪರೇಡ್‍ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ: ಸಿಎಂ

    ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೃಷ್ಣಾರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆಯಲ್ಲಿದ್ದರು. ಇದನ್ನೂ ಓದಿ: ಸ್ತಬ್ಧ ಚಿತ್ರಕ್ಕೆ ಅವಕಾಶ ಕೊಡದಿದ್ರೆ ಕೇಂದ್ರ ಸಚಿವರಿಗೆ ಘೇರಾವ್‌ ಹಾಕ್ತೇವೆ: ಡಿಕೆ ಸುರೇಶ್‌ ಎಚ್ಚರಿಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ

    ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ

    ಬೆಂಗಳೂರು: ಆನೆ, ಕಾಡು ಪ್ರಾಣಿಗಳಿಂದ ಮೃತರಾದವರಿಗೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು. ಹಾಸನದಲ್ಲಿ (Hassan) ಆನೆ ಕಾರಿಡಾರ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಹಾಸನ ಜೆಡಿಎಸ್ ಶಾಸಕರು (JDS) ಇಂದು ಪ್ರತಿಭಟನೆ ನಡೆಸಿದರು.

    ವಿಧಾನಸೌಧದ (Vidhan Soudha) ಗಾಂಧಿ ಪ್ರತಿಮೆ ಮುಂದೆ ಶಾಸಕರಾದ ಎ.ಟಿ. ರಾಮಸ್ವಾಮಿ (A.T.Ramaswamy), ಹೆಚ್.ಕೆ. ಕುಮಾರಸ್ವಾಮಿ (H.K.Kumaraswamy), ಲಿಂಗೇಶ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಟಿ ರಾಮಸ್ವಾಮಿ, ಆನೆ, ಕಾಡು ಪ್ರಾಣಿ ಹಾವಳಿಯಿಂದ ಬೆಳೆ ಹಾನಿಯಾಗಿದೆ. ಆನೆ ದಾಳಿಯಿಂದ ಜನರು ಸತ್ತಿದ್ದಾರೆ. ಸದನದಲ್ಲಿ ಸಿಎಂ ಅವರು ಕಾಡು ಪ್ರಾಣಿ ದಾಳಿಯಿಂದ ಬೆಳೆ ಹಾನಿಗೆ ಪರಿಹಾರ ಡಬಲ್ ಮಾಡೋದಾಗಿ ಹೇಳಿದ್ರು. ಆದರೆ ಪರಿಹಾರ ಡಬಲ್ ಮಾಡಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಆನೆಗಳ ಹಾವಳಿ ತಡಗೆ ಕಾರಿಡಾರ್ ನಿರ್ಮಾಣ ಮಾಡಬೇಕು. ಆನೆಗಳ ಸಂಖ್ಯೆ ಕಡಿಮೆ ಮಾಡಲು ಕ್ರಮ ಆಗಬೇಕು. ಚಿರತೆಗಳು, ಕೋತಿಗಳು, ಕಾಡು ಹಂದಿಗಳಿಂದ ಬೆಳೆ ನಾಶ ಆಗ್ತಿದೆ. ಇದಕ್ಕೆ ‌ಪರಿಹಾರ ಕೊಡಬೇಕು. ಸರ್ಕಾರ ಕೊಟ್ಟ ಮಾತಿನಂತೆ ಪರಿಹಾರ ನೀಡಬೇಕು. ಸಿಎಂ ಕೂಡಲೇ ಕೊಟ್ಟ ಮಾತು ಈಡೇರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಶಾಸಕ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ- ಹಣ ಕೇಳಿದ ಕಿಡಿಗೇಡಿಗಳು

    ಶಾಸಕ ಹೆಚ್.ಕೆ. ಕುಮಾರಸ್ವಾಮಿ ಮಾತನಾಡಿ, ಕಾಡು ಪ್ರಾಣಿಗಳಿಂದ ದೊಡ್ಡ ಸಮಸ್ಯೆ ಆಗ್ತಿದೆ. ಕೂಡಲೇ ವೈಜ್ಞಾನಿಕವಾಗಿ ಕಾಡು ಪ್ರಾಣಿ ಕಡಿಮೆ ಮಾಡುವ ಕೆಲಸ ಮಾಡಬೇಕು. ಜನರು ನಮ್ಮ ಮೇಲೆ ಕೋಪ ಮಾಡಿಕೊಳ್ತಿದ್ದಾರೆ. ಸಿಎಂ ಪರಿಹಾರ ಹೆಚ್ಚಳ ಮಾಡೋದಾಗಿ ಹೇಳಿದ್ದಾರೆ. ಇನ್ನು ಆದೇಶ ಆಗಬೇಕು. ಕೂಡಲೇ ಆದೇಶ ಆಗಬೇಕು. ಕೂಡಲೇ ಆನೆ ಕಾರಿಡಾರ್ ನಿರ್ಮಾಣ ಮಾಡಬೇಕು. ಕಾಡು ಪ್ರಾಣಿ ದಾಳಿಯಿಂದ ಮೃತರಾದವರಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಆಗ್ರಹಿಸಿದರು.

    ಶಾಸಕ ಲಿಂಗೇಶ್ ಮಾತನಾಡಿ, ಕಾಡು ಪ್ರಾಣಿಗಳಿಂದ ಮಕ್ಕಳನ್ನ ಕಳೆದುಕೊಂಡವರಿಗೆ ನೋವು ಗೊತ್ತಿರುತ್ತೆ. ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲವಾ ಅಂತ ಪ್ರಶ್ನೆ ಮಾಡಿದರು. ಕೋಮು ದಾಳಿಯಿಂದ ಸತ್ತವರಿಗೆ 25 ಲಕ್ಷ ರೂ. ಕೊಡ್ತೀರಾ. ಹಾಗೆಯೇ ಆನೆ ದಾಳಿಯಿಂದ ಮೃತರಾದರಿಗೆ 25 ಲಕ್ಷ ಕೊಡಬೇಕು. ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

  • ಬುರ್ಕಾ ಮಾನಸಿಕ ಗುಲಾಮಗಿರಿ ಸಂಕೇತ ಅಂತ ಅಂಬೇಡ್ಕರ್ ಹೇಳಿದ್ದಾರೆ: ಸಿ.ಟಿ.ರವಿ

    ಬುರ್ಕಾ ಮಾನಸಿಕ ಗುಲಾಮಗಿರಿ ಸಂಕೇತ ಅಂತ ಅಂಬೇಡ್ಕರ್ ಹೇಳಿದ್ದಾರೆ: ಸಿ.ಟಿ.ರವಿ

    ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ಬುರ್ಕಾ ಮಾನಸಿಕ ಗುಲಾಮಗಿರಿ ಎಂದು ತಿಳಿಸಿದ್ದಾರೆ. ಅವರ ಮಾತನ್ನು ಹೇಳುವವರು, ಒಮ್ಮೆ ಅಂಬೇಡ್ಕರ್ ಹೇಳಿರುವುದನ್ನು ಓದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲ್ಲಾ ಮಕ್ಕಳು ಒಂದೇ ಅನ್ನೋದಕ್ಕೆ ಹಿಜಬ್‍ನ್ನು ಶಾಲೆಗಳಲ್ಲಿ ಬ್ಯಾನ್ ಮಾಡಲಾಗಿದೆ. ಎಲ್ಲರೂ ಒಂದಾಗಿ ಕಲಿಯಬೇಕು ಎನ್ನುವುದು ಉದ್ದೇಶವಾಗಿದೆ ಎಂದು ತಿಳಿಸಿದರು.

    ಸಾರ್ವಜನಿಕ ಸ್ಥಳದಲ್ಲಿ ಹಿಜಬ್, ಬುರ್ಕಾ ಬ್ಯಾನ್ ಮಾಡಿಲ್ಲ. ಫ್ರಾನ್ಸ್, ಆಸ್ಟ್ರೇಲಿಯಾ ರಾಷ್ಟ್ರಗಳಲ್ಲಿ ಬುರ್ಕಾವನ್ನು ಬ್ಯಾನ್ ಮಾಡಲಾಗಿದೆ. ಭಾರತ ಆಗಲಿ, ಕರ್ನಾಟಕ ಆಗಲಿ ಹಿಜಬ್, ಬುರ್ಕಾವನ್ನು ಬ್ಯಾನ್ ಮಾಡಿಲ್ಲ ಎಂದರು. ಇದನ್ನೂ ಓದಿ: ಹಿಜಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

    ಕಾಶ್ಮೀರ ಫೈಲ್ಸ್ ಅನ್ನೋದು ಸತ್ಯದ ಘಟನೆ ಬಗ್ಗೆ ನಡೆದ ಚಿತ್ರವಾಗಿದೆ. ಮತಾಂಧತೆ ಕಳೆದುಕೊಂಡು ಹತ್ಯೆ ಮಾಡಿದ ಘಟನೆ ಈ ಸಿನಿಮಾದಲ್ಲಿದೆ. ಕುಶಸ್ಥಳ ಇಂದು ಪಾಕಿಸ್ತಾನಕ್ಕೆ ಸೇರಿದೆ. ಉಗ್ರ ನರಸಿಂಹನ ಮೂಲ ಸ್ಥಾನ ಮೌಲ್ತಾನ ಆಗಿದೆ. ಶಾರದೆ ಜನ್ಮಸ್ಥಳ ನಮ್ಮ ಬಳಿ ಇಲ್ಲ. ಈ ಕೆಟ್ಟ ಪರಿಸ್ಥಿತಿ ನಮ್ಮೊಳಗೂ ಬರಬಾರದು ಎಂದು ಕಳವಳ ವ್ಯಕ್ತಪಡಿಸಿದರು.

    ಹಿಜಬ್ ವಿಚಾರ ಬಹಳ ಸ್ಪಷ್ಟ ಇದೆ. ಅವರ ಮೂಗಿಗೆ ನೇರವಾಗಿ ತೀರ್ಪು ಬಂದರೆ ಸಂವಿಧಾನ ಬಗ್ಗೆ ಮಾತಾಡ್ತಾರೆ. ಹಿಂದೆ ಶಾಬಾನ ವಿಚಾರವಾಗಿ ತೀರ್ಪು ಬಂದಾಗ ಹೀಗೆ ಮಾಡಿದ್ದರು. ಅಂದಿನ ರಾಜೀವ್ ಗಾಂಧಿ ಸರ್ಕಾರ ಬೆದರಿಕೆಗೆ ಮಣಿದಿತ್ತು. ಇಂದು ಆ ರೀತಿ ಮಣಿಯೋದಿಲ್ಲ. ಈಗ ಇರೋದು ಬಿಜೆಪಿ ಸರ್ಕಾರ. ನಿಮ್ಮ ಅಜೆಂಡಾ ಈಗ ತರಬೇಡಿ. ಜಿನ್ನಾ ಅಜೆಂಡಾ ಈಗ ನಡೆಯೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ನಡುವೆ ಹೋಲಿಕೆ ಮಾಡಿ ತಂದು ಹಾಕ್ಬೇಡಿ: ಸಿ.ಟಿ.ರವಿ

  • ಸಿಎಂಗೆ ಸ್ವಾಭಿಮಾನ ಇದ್ದರೆ ಬಚ್ಚಲು ಬಾಯಿ ಈಶ್ವರಪ್ಪರನ್ನು ವಜಾ ಮಾಡಲಿ: ಡಿಕೆಶಿ

    ಸಿಎಂಗೆ ಸ್ವಾಭಿಮಾನ ಇದ್ದರೆ ಬಚ್ಚಲು ಬಾಯಿ ಈಶ್ವರಪ್ಪರನ್ನು ವಜಾ ಮಾಡಲಿ: ಡಿಕೆಶಿ

    ಬೆಂಗಳೂರು: ಸಿಎಂಗೆ ಸ್ವಾಭಿಮಾನ ಇದ್ದಿದ್ದರೆ ಈ ಬಚ್ಚಲು ಬಾಯಿಯ ಈಶ್ವರಪ್ಪರನ್ನು ವಜಾ ಮಾಡಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು.

    ಯಾವ ಪಕ್ಷದವರು ಯಾವ ರೀತಿ ಮಾತನಾಡುತ್ತಿದ್ದಾರೆ ಎಂದು ಜನರು ಗಮನಿಸುತ್ತಿದ್ದಾರೆ. ನಿನ್ನೆ ಖರ್ಗೆಯವರು ಬಂದು ಬೆಂಬಲ ಕೊಟ್ಟರು. ಬೇರೆ ರಾಜ್ಯಗಳಿಂದಲೂ ಕರೆ ಬರುತ್ತಿವೆ. ಕರ್ನಾಟಕದ ಕಾಂಗ್ರೆಸ್ ಶಾಸಕರು ಒಳ್ಳೇ ಕೆಲಸ ಮಾಡ್ತಿದ್ದಾರೆ. ಧರಣಿ ಮಾಡುತ್ತಿರುವುದು ಒಳ್ಳೆಯದು ಎಂದು ಬೇರೆ ರಾಜ್ಯಗಳ ರಾಜಕಾರಣಿಗಳು ಹೇಳುತ್ತಿದ್ದಾರೆ ಎಂದು ಖರ್ಗೆ ಹೇಳಿದರು. ಈಶ್ವರಪ್ಪ ಹೇಳಿಕೆಗೆ ಎಲ್ಲೆಡೆ ವಿರೋಧ ಬರುತ್ತಿದೆ ಎಂದರು.

    ಸಿಂಗಾಪುರ ಪಿಎಂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡಿದ್ದಾರೆ. ಬೇರೆ ಬೇರೆ ದೇಶಗಳಿಂದ ಕೇಂದ್ರದ ನಡೆ ಬಗ್ಗೆ ಟೀಕೆ ಬರುತ್ತಿದೆ. ಈಶ್ವರಪ್ಪ ಹೇಳಿಕೆ ವೈಯಕ್ತಿಕ ಅಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ. ನಮ್ಮ ಹೋರಾಟ ನಿಲ್ಲಲ್ಲ ಎಂದು ಹೇಳಿದರು.

    ನಿರಾಣಿ ಸಿಎಂ ಆಗುತ್ತಾರೆ ಎಂದು ಈಶ್ವರಪ್ಪ ಹೇಳಿದಾಗಲೇ ಅವರನ್ನು ಸಿಎಂ ವಜಾ ಮಾಡಬೇಕಿತ್ತು. ಯಡಿಯೂರಪ್ಪ ವಿರುದ್ಧವೇ ಈಶ್ವರಪ್ಪ ರಾಜ್ಯಪಾಲರಿಗೆ ದೂರು ಕೊಟ್ಟರು. ಈಶ್ವರಪ್ಪ ಯಾರಿಗೂ ನಿಷ್ಠರಾಗಿಲ್ಲ. ನಾಳೆ ನಮ್ಮ ಎಲ್ಲಾ ಕಾರ್ಯಕರ್ತರೂ ತಹಶೀಲ್ದಾರ್‌ರಿಗೆ ಮನವಿ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 58 ವರ್ಷದ ಸಮಸ್ಯೆ ಬಗೆಹರಿಸಿದ ಬಸಪ್ಪ – ಪವಾಡ ನೋಡಿ ನಿಬ್ಬೆರಗಾದ ಜನರು

    ದೆಹಲಿಯಲ್ಲಿ ವರಿಷ್ಠರ ಜೊತೆ ಸಭೆ ಇದೆ. ಎಲ್ಲರ ಜೊತೆ ಹೋಗಿ ದೆಹಲಿಯಲ್ಲಿ ಮಾತುಕತೆ ಮಾಡಬೇಕು ಎಂದು ನಿರ್ಧರಿಸಿದ್ದೆವು. ಪಾದಯಾತ್ರೆಗೂ ಮುನ್ನ ದೆಹಲಿಯಲ್ಲಿ ಸಭೆ ಇದೆ. ಹತ್ತು ಹದಿನೈದು ಜನ ನಾಯಕರು ಹೋಗುತ್ತೇವೆ. ನಮ್ಮ ಅಭಿಪ್ರಾಯಗಳನ್ನು ವರಿಷ್ಠರಿಗೆ ತಿಳಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

    ಕಾಂಗ್ರೆಸ್ ಸದಸ್ಯರ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ಡಾ. ರಂಗನಾಥ್ ಅವರು ವಿಧಾನಸಭೆ ಮೊಗಸಾಲೆಯಲ್ಲಿ ಭಾನುವಾರ ಬೆಳಗ್ಗೆ ದಿನಪತ್ರಿಕೆ ವಾಚನದಲ್ಲಿ ನಿರತರಾಗಿದ್ದಾರೆ.

  • ವಿಧಾನಸೌಧದಲ್ಲಿ ನೀರಾಗೆ ಫುಲ್ ಡಿಮ್ಯಾಂಡ್

    ವಿಧಾನಸೌಧದಲ್ಲಿ ನೀರಾಗೆ ಫುಲ್ ಡಿಮ್ಯಾಂಡ್

    – ನೀರಾ ಕುಡಿದು ಸೂಪರ್ ಎಂದ ಸಿದ್ದರಾಮಯ್ಯ

    ಬೆಂಗಳೂರು: ಬೇಸಿಗೆಯ ಸುಡು ಬಿಸಿಲು ಸಾರ್ವಜನಿಕರು ತಂಪು ಪಾನೀಯಗಳತ್ತ ಮುಖ ಮಾಡುವಂತೆ ಮಾಡಿದೆ. ಅದರಲ್ಲೂ ಇಂದು ರಾಜ್ಯ ಬಜೆಟ್. ಇದರ ಬೆನ್ನಲ್ಲೇ ವಿಧಾನ ಸೌಧಕ್ಕೆ ನೀರಾ ಎಂಟ್ರಿ ಕೊಟ್ಟಿತು.

    ವಿಧಾನಸೌಧದಲ್ಲಿ ನೀರಾಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಹಾಪ್ ಕಾಮ್ಸ್‍ನ ಮಳಿಗೆಯನ್ನು ಸದನ ಹಿನ್ನೆಲೆಯಲ್ಲಿ ನೂತನವಾಗಿ ಓಪನ್ ಮಾಡಲಾಗಿತು. ತೋಟಗಾರಿಕೆ ಇಲಾಖೆಯಿಂದ ಹಣ್ಣು, ತಂಪು ಪಾನೀಯಗಳ ಮಾರಾಟಕ್ಕೆ ಇಂದು ಅವಕಾಶ ನೀಡಲಾಗಿತ್ತು.

    ಈ ಮಧ್ಯೆ ಎಲ್ಲ ಆಹಾರ ಪದಾರ್ಥಗಳಿಗಿಂತ ನೀರಾಗೆ ಫುಲ್ ಡಿಮ್ಯಾಂಡ್ ಸೃಷ್ಟಿಯಾಗಿದೆ. ಒಂದು ಗ್ಲಾಸ್ ನೀರಾಗೆ 50 ರೂ, ನಂತೆ ಮಾರಾಟ ಮಾಡಲಾಯಿತು. ನೀರಾ ಬಗ್ಗೆ ಅರಿವು ಹಾಗೂ ಅದರ ಸ್ವಾದ ತಿಳಿಸಲು ಕೌಂಟರ್ ಓಪನ್ ಮಾಡಿರುವುದಾಗಿ ಹಾಪ್ ಕಾಮ್ಸ್ ಸಿಬ್ಬಂದಿ ಮಾಹಿತಿ ಹಂಚಿಕೊಂಡರು.

    ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಅನೇಕ ಶಾಸಕರು ನೀರಾ ಕುಡಿದರು. ನೀರಾ ಕುಡಿಯುತ್ತ ಮಾತನಾಡಿದ ಸಿದ್ದರಾಮಯ್ಯ ಅವರು ನನ್ನ ಅವಧಿಯ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದೆ ಎಂದು ಹೇಳಿದರು.

  • ಸುಧಾಕರ್ ಕರೆತರಲು ಸೂಚಿಸಿದ ರಾಜ್ಯಪಾಲರು

    ಸುಧಾಕರ್ ಕರೆತರಲು ಸೂಚಿಸಿದ ರಾಜ್ಯಪಾಲರು

    ಬೆಂಗಳೂರು: ರಾಜೀನಾಮೆ ನೀಡಿದ ಬಳಿಕ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಅವರಿಗೆ ಕಾಂಗ್ರೆಸ್ ನಾಯಕರು ದಿಗ್ಭಂದನ ಹಾದ್ದಾರೆ. ವಿಧಾನಸೌಧದಲ್ಲಿ ಪರಿಸ್ಥಿತಿ ಗಲಾಟೆಯಾಗಿ ಬದಲಾಗುತ್ತಿದ್ದಂತೆ ರಾಜ್ಯಪಾಲ ವಜೂಬಾಯಿ ವಾಲಾ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ಶಾಸಕರಿಗೆ ರಕ್ಷಣೆ ನೀಡಿ ಕರೆತರಬೇಕೆಂದು ಸೂಚಿಸಿದ್ದಾರೆ.

    ರಾಜ್ಯಪಾಲರ ಸೂಚನೆ ಮೇರೆಗೆ ಅಲೋಕ್ ಕುಮಾರ್ ಅವರು 1 ಸಾವಿರ ಪೊಲೀಸರನ್ನು ವಿಧಾನಸೌಧಕ್ಕೆ ನಿಯೋಜನೆ ಮಾಡಿದ್ದಾರೆ. ಸ್ವತಃ ಅಲೋಕ್ ಕುಮಾರ್ ಅವರೇ ವಿಧಾನಸೌಧಕ್ಕೆ ಆಗಮಿಸಿದರು. ಇತ್ತ ಬಿಜೆಪಿ ಶಾಸಕರು ಸಹ ವಿಧಾನಸೌಧ ಕೊಠಡಿಗೆ ಆಗಮಿಸಿ ಸುಧಾಕರ್ ಅವರನ್ನು ರಕ್ಷಿಸಿ, ರಕ್ಷಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ.

    ವಿಧಾನಸೌಧ ಗಲಾಟೆ ಸೌಧವಾಗಿ ಬದಲಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಎಲ್ಲ ಪ್ರವೇಶ ದ್ವಾರಗಳನ್ನು ಬಂದ್ ಮಾಡಿದ್ದಾರೆ. ಕೆ.ಜೆ.ಜಾರ್ಜ್ ಅವರ ಕೊಠಡಿಯಲ್ಲಿ ಸುಧಾಕರ್ ಜೊತೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸುತ್ತಿದ್ದಾರೆ.

    ವಿಧಾನಸೌಧಕ್ಕೆ ಆಗಮಿಸಿದ ಅಲೋಕ್ ಕುಮಾರ್ ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾಸಕ ಸುಧಾಕರ್ ಅವರನ್ನು ಕೆ.ಜೆ.ಜಾರ್ಜ್ ಕೊಠಡಿಯಿಂದ ಹೊರ ಕರೆದುಕೊಂಡು ಬಂದರು. ಸುಧಾಕರ್ ಅವರನ್ನು ನೇರವಾಗಿ ರಾಜಭವನಕ್ಕೆ ಕರೆದುಕೊಂಡು ಹೋದರು.

  • ಸಿಎಂ ನೇರವಾಗಿ ಧಾರವಾಡಕ್ಕೆ ಬಂದ್ರೆ 3 ದಿನಗಳಲ್ಲಿ ಸರ್ಕಾರ ಉಳಿಯುತ್ತೆ: ಸ್ವಾಮೀಜಿ ಭವಿಷ್ಯ

    ಸಿಎಂ ನೇರವಾಗಿ ಧಾರವಾಡಕ್ಕೆ ಬಂದ್ರೆ 3 ದಿನಗಳಲ್ಲಿ ಸರ್ಕಾರ ಉಳಿಯುತ್ತೆ: ಸ್ವಾಮೀಜಿ ಭವಿಷ್ಯ

    ಧಾರವಾಡ: ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಮೈತ್ರಿ ಸರ್ಕಾರ ಉಳಿಯಬೇಕು ಎಂದರೆ ಮುಖ್ಯಮಂತ್ರಿಗಳು ಅಮೆರಿಕಾದಿಂದ ನೇರವಾಗಿ ಧಾರವಾಡಕ್ಕೆ ಬಂದರೆ ಮೂರು ದಿನಗಳಲ್ಲಿ ಸರ್ಕಾರ ಉಳಿಯುತ್ತೆ ಎಂದು ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

    ಧಾರವಾಡದ ಮೈಲಾರ ಸ್ವಾಮೀಜಿಯವರು ಈ ರೀತಿಯ ಭವಿಷ್ಯವೊಂದನ್ನು ನುಡಿದಿದ್ದಾರೆ. ಜಿಲ್ಲೆಯ ರಾಜೀವಗಾಂಧಿ ನಗರದಲ್ಲಿರುವ ತಮ್ಮ ದೇವಸ್ಥಾನದಲ್ಲಿ ಭವಿಷ್ಯವನ್ನು ಸ್ವಾಮೀಜಿ ಹೇಳಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಕತ್ತಿನ ಮಧ್ಯೆ ತ್ರಿಶೂಲದ ಅಂಚು ಸಿಕ್ಕಿಸಿಕೊಂಡು ನಂತರ ಅದನ್ನು ಕಣ್ಣಿನ ಮೇಲಿಟ್ಟುಕೊಂಡು ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ. ಮೈತ್ರಿ ಸರ್ಕಾರ ಸಂಕಷ್ಟದಲ್ಲಿರುವ ಸಮಯದಲ್ಲಿ ಅಮೆರಿಕ ಪ್ರವಾಸಕ್ಕೆ ಹೋಗಿರುವ ಮುಖ್ಯಮಂತ್ರಿಗಳು ನೇರವಾಗಿ ಧಾರವಾಡಕ್ಕೆ ಬಂದು ಆದಿಶಕ್ತಿ ಹೊಳೆಮ್ಮನ ದರ್ಶನ ಪಡೆದು ನಂತರ ವಿಧಾನಸೌಧ ಪ್ರವೇಶಿಸಿದರೆ ಮೂರು ದಿನದಲ್ಲಿ ಸರ್ಕಾರ ಉಳಿಯುತ್ತೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

  • ಗ್ರಹಣ ಎಫೆಕ್ಟ್ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ

    ಗ್ರಹಣ ಎಫೆಕ್ಟ್ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ

    ಬೆಂಗಳೂರು: ವಾರಾಂತ್ಯ ಬಂದರೆ ಬೆಂಗಳೂರಿನ ರಸ್ತೆಗಳಲ್ಲಿ ಜಾಸ್ತಿ ಜನಸಂದಣಿ ಇರುತ್ತದೆ. ಆದರೆ ಶುಕ್ರವಾರ ಸಂಜೆ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಗರದ ರಸ್ತೆಗಳು ಖಾಲಿ ಖಾಲಿಯಾಗಿದೆ.

    ಹಲವು ಅಂಗಡಿಗಳು ಮುಚ್ಚಿದ್ದು, ಟ್ರಾಫಿಕ್ ಜಾಮ್ ನ ಸಂಕಷ್ಟಕ್ಕೆ ಗ್ರಹಣದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.

    ದೇವಾಲಯಗಳು ಇರುವ ಕಡೆ ಸ್ವಲ್ಪ ಟ್ರಾಫಿಕ್ ಹೆಚ್ಚಾಗಿದೆ. ರಸ್ತೆಯಲ್ಲಿ ಸರತಿ ಸಾಲು ಉದ್ದವಾಗಿದ್ದರಿಂದ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯವಾಗುತ್ತಿದೆ.

    ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಬಹುತೇಕ ಸಚಿವರು ಯಾರೂ ಶಕ್ತಿ ಸೌಧಕ್ಕೆ ಬಂದಿರಲಿಲ್ಲ. ಹಲವು ಸಚಿವರ ಕೊಠಡಿಗಳು ಬಂದ್ ಆಗಿತ್ತು. ವಿಧಾನಸೌಧದ ಮೊಗಸಾಲೆ, ಕಾರಿಡಾರ್ ಗಳೂ ಕೂಡ ಖಾಲಿ ಖಾಲಿಯಾಗಿವೆ.