Tag: Vidhana Soudha Police

  • ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್‌ಗೆ ಷರತ್ತುಬದ್ಧ ಜಾಮೀನು

    ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್‌ಗೆ ಷರತ್ತುಬದ್ಧ ಜಾಮೀನು

    ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) 10 ಲಕ್ಷ ಹಣ ಸಿಕ್ಕ ಪ್ರಕರಣದಲ್ಲಿ ಬಂಧಿತನಾಗಿದ್ದ ಮಂಡ್ಯ ಮೂಲದ ಪಿಡಬ್ಲ್ಯೂಡಿ  (PWD) ಕಿರಿಯ ಎಂಜಿನಿಯರ್ ಜಗದೀಶ್‌ಗೆ ಕೋರ್ಟ್ (Court) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

    ವಿಧಾನಸೌಧದ  ಮುಖ್ಯದ್ವಾರ ಬಳಿ 10.5 ಲಕ್ಷ ಹಣ ಸಿಕ್ಕ ಪ್ರಕರಣದಲ್ಲಿ ಜಗದೀಶ್‌ನನ್ನು ಬಂಧಿಸಿದ್ದ ವಿಧಾನಸೌಧ ಪೊಲೀಸರು (Vidhana Soudha Police) ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಇನ್‌ಸ್ಪೆಕ್ಟರ್ ಕುಮಾರಸ್ವಾಮಿ ಅವರು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದರು. ಆದರೂ ಜಗದೀಶ್ ಯಾರಿಗೆ ಹಣ ಕೊಡೋಕೆ ಬಂದಿದ್ದ ಅನ್ನೋ ಮಾಹಿತಿಯನ್ನ ಬಾಯಿಬಿಟ್ಟಿರಲಿಲ್ಲ. ಆದ್ದರಿಂದ ಲಂಚದ ರೂಪದಲ್ಲಿ ಹಣ ಕೊಡಲು ಬಂದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ತನಿಖೆ ಮುಂದುವರಿರಿಸಲಾಗಿತ್ತು. ಇದನ್ನೂ ಓದಿ: ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ – 10.50 ಲಕ್ಷ ಪೊಲೀಸರ ವಶಕ್ಕೆ

    ಜಗದೀಶ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಕೊನೆಯ ದೂರವಾಣಿ ಕರೆ ಹಾಗೂ ಕೆಲ ವಾಟ್ಸಪ್ ಚಾಟ್‌ಗಳನ್ನು ಡಿಲೀಟ್ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಜಗದೀಶ್ ಯಾರ ಕೈಕೆಳಗೆ ಕೆಲಸ ಮಾಡ್ತಿದ್ದ ಅನ್ನೋ ಕುರಿತಾಗಿ ಮಾಹಿತಿ ಸಂಗ್ರಹ ಮಾಡಿದ್ದರು. ಆರೋಪಿ ಬಾಯಿಬಿಡಲಿಲ್ಲ ಅಂದ್ರೆ ಸಿನೀಯರ್ ಎಂಜನಿಯರ್‌ಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಮುಂದಾಗಿದ್ದರು. ಇಂದು ಆರೋಪಿ ಜಗದೀಶ್‌ನನ್ನ ಕೋರ್ಟ್‌ಗೆ ಹಾಜರುಪಡಿಸಿದ್ದು, ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದ್ರೆ ನ್ಯಾಯಾಲಯ ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಇದನ್ನೂ ಓದಿ: ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್ – ದರ ಹೆಚ್ಚಳ

    ಏನಿದು ಕೇಸ್?
    ವಿಧಾನಸೌಧದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 10.50 ಲಕ್ಷ ರೂ. ಅನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದ್ದರು. ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಒಬ್ಬ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಈ ವ್ಯಕ್ತಿಯಿಂದ ಬ್ಯಾಗ್‌ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿತ್ತು.

    ವ್ಯಕ್ತಿಯ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟ ಮಾಹಿತಿ ಆತ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನೂ ಬಂಧಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೆಡ್ ಬುಷ್ ಚಿತ್ರದ ಪ್ರಚಾರ – ತೊಂದರೆ ಕೊಡ್ತಿದ್ದಾರೆಂದು ಐವರ ವಿರುದ್ಧ FIR

    ಹೆಡ್ ಬುಷ್ ಚಿತ್ರದ ಪ್ರಚಾರ – ತೊಂದರೆ ಕೊಡ್ತಿದ್ದಾರೆಂದು ಐವರ ವಿರುದ್ಧ FIR

    ಬೆಂಗಳೂರು: ಹೆಡ್ ಬುಷ್ ಚಿತ್ರತಂಡ (Head Bush Film Team) ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಿದೆ. ಇತ್ತೀಚೆಗೆ ವೀರಗಾಸೆ ಕಲಾವಿದರಿಗೆ ಅಪಮಾನ ಮಾಡಲಾಗಿದೆ ಹಾಗೂ `ಜುಜುಬಿ ಕರಗ’ (Karaga) ಎನ್ನುವ ಪದ ಬಳಸಲಾಗಿದ್ದು ಕರಗ ಕುಣಿತಕ್ಕೂ ಅವಮಾನ ಮಾಡಲಾಗಿದೆ ಅನ್ನೋ ವಿವಾದ ಎದುರಿಸುತ್ತಿದ್ದ ಚಿತ್ರತಂಡ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ.

    ಹೆಡ್‌ಬುಷ್ ಚಿತ್ರದ ಪ್ರಚಾರ ಮಾಡುತ್ತಿದ್ದ ಐವರ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಕಾರು ಹಾಗೂ ಬೈಕ್‌ಗಳಲ್ಲಿ ಬಂದು ರಸ್ತೆ ಮಧ್ಯೆ ಕಿರುಚಾಡುತ್ತಾ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌದ ಪೊಲೀಸರು (Vidhana Soudha Police) ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ‘ಜುಜುಬಿ ಕರಗ’ ಪದ ಮ್ಯೂಟ್ ಮಾಡಲು ಧನಂಜಯ್ ಹಾಗೂ ಹೆಡ್ ಬುಷ್ ತಂಡ ಒಪ್ಪಿಗೆ

    ಐದಕ್ಕಿಂತ ಹೆಚ್ಚು ಜನ ಅಕ್ರಮ ಕೂಟ ಕಟ್ಟಿಕೊಂಡು ಹೆಡ್‌ಬುಷ್ (Head Bush) ಚಿತ್ರದ ಬಗ್ಗೆ ಪ್ರಚಾರ ಮಾಡುತ್ತಾ ಕೂಗಾಡುತ್ತಿದ್ದರು. ಅಲ್ಲದೇ ವಿಧಾನಸೌಧ ಮೆಟ್ರೋ (Namma Metro) ನಿಲ್ದಾಣದ ಮುಂದೆ ಓಡಾಡುವ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ಇತ್ತೀಚೆಗೆ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿಬರುತ್ತಿದ್ದಂತೆ ಚಿತ್ರತಂಡ ಕ್ಷಮೆ ಕೇಳಿತ್ತು. ತದ ನಂತರ `ಜುಜುಬಿ ಕರಗ’ ಎನ್ನುವ ಪದವನ್ನೂ ಮ್ಯೂಟ್ ಮಾಡಲು ಒಪ್ಪಿಕೊಂಡಿತು. ಇದೀಗ ಪ್ರಚಾರದ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಅನ್ನೋ ಆರೋಪದ ಮೇಲೆ ಕೇಸ್ ದಾಖಲಾಗಿದ್ದು, ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]