Tag: vidhanasabha

  • ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

    ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

    ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮೀಸಲಾತಿ ವಿಚಾರವಾಗಿ ಆಡಳಿತ ಪಕ್ಷದ ಶಾಸಕರಿಂದಲೇ ಗಟ್ಟಿ ಧ್ವನಿ ಮೊಳಗಿತು. ಪಂಚಮಸಾಲಿ ಮೀಸಲಾತಿಗಾಗಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬಾವಿಗಿಳಿದು ಪ್ರತಿಭಟನೆ ನಡೆಸಿದರೆ, ಎಸ್‍ಟಿ ಮೀಸಲಾತಿ ವಿಚಾರವಾಗಿ ಶಾಸಕ ರಾಜೂಗೌಡ ಆಕ್ರೋಶ ಹೊರಹಾಕಿದ್ರು. ಈ ನಡುವೆ ಯಾದವ-ಕಾಡುಗೊಲ್ಲ ಮೀಸಲಾತಿ ವಿಚಾರವಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಧ್ವನಿ ಎತ್ತಿದ್ರು. ಆಡಳಿತ ಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಸಂಕಟ ಶುರುವಾಗಿದೆ.

    ಶೂನ್ಯವೇಳೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಹಿಂದೆ ಯಡಿಯೂರಪ್ಪ ಅವರು ಸೆಪ್ಟೆಂಬರ್ ಒಳಗೆ ಮೀಸಲಾತಿ ವಿಚಾರ ಬಗೆಹರಿಸುವುದಾಗಿ ಹೇಳಿದರು. ಈಗಾಗಲೇ ಸೆಪ್ಟೆಂಬರ್ ಡೆಡ್ ಲೈನ್ ಮುಗಿದಿದೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟ ಉತ್ತರ ಕೊಡಬೇಕು. ಎಸ್ ಟಿ ಮೀಸಲಾತಿಯೂ ಇದೆ, ಪಂಚಮಸಾಲಿ ಮೀಸಲಾತಿಯೂ ಇದೆ. ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.

    ಅಲ್ಲದೆ ಸಿಎಂ ಉತ್ತರ ಕೊಡಬೇಕು ಅಂತಾ ಸದನದ ಬಾವಿಗಿಳಿದು ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಧರಣಿ ನಡೆಸಿದರು. ಇದೇ ವೇಳೆ ಎಸ್. ಟಿ.ಮೀಸಲಾತಿ ಬಗ್ಗೆ ಸ್ಪಷ್ಟನೆ ಕೊಡಿ ಅಂತಾ ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್ ಧರಣಿ ನಡೆಸಿದರು. ಆಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ, ಸಿಎಂ ಉತ್ತರ ಕೊಡಬೇಕು ಅಂತಿದ್ದಾರೆ. ಸಿ.ಸಿ.ಪಾಟೀಲ್ ಉತ್ತರ ಕೊಡಲು ಸಿದ್ಧರಿದ್ದಾರೆ. ಸಿಎಂ ಉತ್ತರ ಕೊಡಬೇಕು ಅಂದ್ರೆ ಅವರು ಬರುವ ತನಕ ಕಾಯಬೇಕು. ಹೀಗೆ ಧರಣಿ ಮಾಡಿ ಸದನದ ಸಮಯ ವ್ಯರ್ಥ ಮಾಡಬೇಡಿ ಎಂದು ಸಿದ್ದರಾಮಯ್ಯ ಸಲಹೆ ಕೊಟ್ಟರು. ಬಳಿಕ ಸ್ಪೀಕರ್ ಸೂಚನೆ ಮೇರೆಗೆ ಮೂವರು ಶಾಸಕರು ಧರಣಿ ವಾಪಸ್ ಪಡೆದರು.

    ಇದೇ ವೇಳೆ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಬಿಜೆಪಿ ಶಾಸಕ ರಾಜೂ ಗೌಡ ಸದನದಲ್ಲಿ ಅಸಮಾಧಾನ ಹೊರಹಾಕಿದರು. ರಮೇಶ್ ಕುಮಾರ್ ಅವರಿಗೆ ಅವಕಾಶ ಕೊಡ್ತೀರಿ, ನಮಗೆ ಮಾತಾಡಲು ಕೊಡಲ್ಲ ಎಂದ ರಾಜೂಗೌಡ ಬೆಂಬಲಕ್ಕೆ ಶಾಸಕ ಅರವಿಂದ ಲಿಂಬಾವಳಿ ನಿಂತರು. ಈ ವೇಳೆ ಸಿಟ್ಟಾದ ಸ್ಪೀಕರ್, ಇದೇನು ಹೀಗೆ ಮಾತಾಡ್ತೀರಿ, ಇದು ಸದನ, ಲಾಂಜ್ ನಲ್ಲಿ ಮಾತಾಡುವ ರೀತಿ ಮಾತನಾಡಬೇಡಿ ಅಂತ ಗರಂ ಆದರು. ಬಳಿಕ ರಾಜೂಗೌಡ ಕ್ಷಮೆ ಕೇಳಿ ನಮ್ಮ ರಕ್ಷಣೆಗೆ ನೀವು ನಿಲ್ಲಬೇಕು ಅಂತಾ ಮನವಿ ಮಾಡಿದರು. ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ನನ್ನ ಮಕ್ಕಳಿದ್ದಂತೆ, ಅವರಿಗೆ ಅನುಭವ ಇಲ್ಲ: ಕ್ಯಾ.ಅಮರೀಂದರ್ ಸಿಂಗ್

    ರಾಮನ ಹೆಸರು ಹೇಳಿ ಅಧಿಕಾರಕ್ಕೆ ಬರೋದು ಗೊತ್ತಿದೆ. ರಾಮನನ್ನ ಬೆಳಕಿಗೆ ತಂದ ವಾಲ್ಮೀಕಿ ಜನಾಂಗದ ಬಗ್ಗೆ ಏಕೆ ಇಷ್ಟು ನಿರ್ಲಕ್ಷ್ಯ. 7.5%ರಷ್ಟು ಮೀಸಲಾತಿ ಕೊಡಬೇಕು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಶಿಫಾರಸಿನಂತೆ ಅನುಷ್ಠಾನ ಮಾಡಬೇಕು ಅಂತಾ ಆಗ್ರಹಿಸಿದ್ರು. ಆಗ ಎಲ್ಲ ಮೀಸಲಾತಿ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿ ಉತ್ತರ ಕೊಡ್ತಾರೆ ಎಂದು ಸ್ಪೀಕರ್ ಸಮಾಧಾನಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!

    ಇದೆಲ್ಲದೆ ನಡುವೆ ಆಡಳಿತ ಪಕ್ಷದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲ ಮೀಸಲಾತಿ ಸಂಬಂಧ ಚರ್ಚೆಗೆ ನಮಗೂ ಅವಕಾಶ ಕೊಡಿ ಅಂತಾ ಆಗ್ರಹಿಸಿದರು. ನಿಯಮ 69ರಡಿ ಚರ್ಚೆಗೆ ಹಾಕಿದ್ದೀರಿ, ಆಗ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ರು. ಒಟ್ಟಾರೆ ಮೀಸಲಾತಿ ಸಂಬಂಧ ಆಡಳಿತ ಪಕ್ಷದ ಶಾಸಕರೇ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಕೊಡುವ ಉತ್ತರ ಕುತೂಹಲ ಮೂಡಿಸಿದೆ.

  • ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

    ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

    ಬೆಂಗಳೂರು: 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್. ನಾಗರಾಜು ಎಂ.ಟಿ.ಬಿ ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

    ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಸಭೆಯಲ್ಲಿ ಪರಿಣಾಮಕಾರಿಯಾಗಿ ಹಾಗೂ ವಿಷಯಾಧಾರಿತ ಚರ್ಚೆಯನ್ನು ನಡೆಸುವುದಕ್ಕಾಗಿ, ನಿರ್ದೇಶಕರ ಮಂಡಳಿಯಲ್ಲಿ ಸರ್ಕಾರೇತರ ಸದಸ್ಯರ ಸಂಖ್ಯೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ವ್ಯಕ್ತಿಯ ಬದಲಾಗಿ, ಪ್ರತಿಯೊಂದು ಕಂದಾಯವಲಯದಿಂದ ಮೂವರು ವ್ಯಕ್ತಿಗಳಂತೆ, ಆದರೆ ಒಂದೇ ಜಿಲ್ಲೆಯಿಂದ ಒಂದಕ್ಕಿಂತ ಹೆಚ್ಚಿರದಂತೆ ಹನ್ನೆರಡು ಸರ್ಕಾರೇತರ ಸದಸ್ಯರಿಗೆ ಕಡಿತಗೊಳಿಸಲು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಮಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ ಸಂಖ್ಯೆ 7) ತಿದ್ದುಪಡಿ ಮಾಡುವುದಯ ಅವಶ್ಯಕವೆಂದು ಪರಿಗಣಿಸಿದ ವಿಧೇಯಕವಾಗಿದೆ.

    2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್(ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

     

    2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು. ಇದನ್ನೂ ಓದಿ: ಮಂಡ್ಯ ಮೈಶುಗರ್ ಕಾರ್ಖಾನೆಗೆ ಬಿಡ್ ಮಾಡಲ್ಲ – ಪರಿಷತ್‍ನಲ್ಲಿ ನಿರಾಣಿ ಪ್ರಕಟ

    2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು, ಎಂ.ಟಿ.ಬಿ. ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

  • ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ

    ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ

    – ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

    ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

    ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ:  ಬಿಹಾರದಲ್ಲಿ ಎನ್‍ಡಿಎ ಮೈತ್ರಿಕೂಟಕ್ಕೆ ಗೆಲುವು – ಎಬಿಸಿ- ಸಿ ವೋಟರ್ ಸಮೀಕ್ಷೆ ಭವಿಷ್ಯ

    ಕೊರೊನಾ ನಡುವೆ ನಡೆಯುತ್ತಿರುವ ಮೊದಲ ಚುನಾವಣೆ ಹಿನ್ನೆಲೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಮಾಡಲಾಗಿದೆ. ನಕ್ಸಲ್ ಹಾವಳಿ ಇರುವ ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆಡಳಿತ ರೂಢ ಎನ್‍ಡಿಎ ಹಾಗೂ ಮಹಾ ಮೈತ್ರಿಕೂಟಕ್ಕೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಇದನ್ನೂ ಓದಿ: ಬಿಹಾರ ಚುನಾವಣೆ – ಆರ್‌ಜೆಡಿಯಿಂದ 10 ಲಕ್ಷ ಉದ್ಯೋಗ, ಕೃಷಿ ಸಾಲ ಮನ್ನಾ ಭರವಸೆ

    ಇಂದಿನ ಮತದಾನದಲ್ಲಿ ಎನ್‍ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವರಾಗಿರುವ ಕೃಷ್ಣನಂದನ್ ವರ್ಮ, ಪ್ರೇಮ್ ಕುಮಾರ್, ಜೈ ಕುಮಾರ್ ಸಿಂಗ್, ಸಂತೋಷ್ ಕುಮಾರ್ ನಿರಾಲ, ವಿಜಯ ಸಿನ್ಹಾ ಮತ್ತು ರಾಮ್‍ನಾರಾಯಣ್ ಮಂಡಲ್ ಕ್ಷೇತ್ರಗಳು ಒಳಗೊಂಡಿದ್ದು, ಸಂಜೆ ವೇಳೆಗೆ 1,066 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮೊದಲ ಹಂತ ಚುನಾವಣೆಗಾಗಿ ಸೋಮವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿತ್ತು. ಇದನ್ನೂ ಓದಿ: ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ – ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಬಿಹಾರದಲ್ಲಿ ನ.3 ಮತ್ತು ನ.7ರಂದು ಎರಡು ಮತ್ತು ಮೂರನೇ ಹಂತದ ಚುನಾವಣೆಗಳು ನಡೆಯಲಿದ್ದು, ನ.10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಎನ್‍ಡಿಎ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಈಗಾಗಲೇ ಸಮೀಕ್ಷೆಗಳು ಹೇಳಿವೆ.

    ಅಹಂಕಾರ, ಅಧಿಕಾರದಿಂದಾಗಿ ಬಿಹಾರ ಅಭಿವೃದ್ಧಿಯಾಗಿಲ್ಲ ಅಂತ ನಿತೀಶ್ ಕುಮಾರ್ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಮಹಾಘಟಬಂಧನಕ್ಕೆ ಮತ ನೀಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಇತ್ತ ಲಾಲೂಪ್ರಸಾದ್‍ಗೆ 9 ಮಂದಿ ಮಕ್ಕಳಿದ್ದು ತೇಜಸ್ವಿ ಯಾದವ್ 8ನೇ ಮಗ ಎಂಬ ನಿತೀಶ್ ಕುಮಾರ್ ಹೇಳಿಕೆಗೆ ತೇಜಸ್ವಿ ಯಾದವ್ ತಿರುಗೇಟು ನೀಡಿದ್ದಾರೆ. ಹಿರಿಯರಾದ ನಿತೀಶ್ ಕುಮಾರ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ದಣಿದಿದ್ದಾರೆ. ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಅಂದ್ಕೊತೀನಿ. ಪ್ರಧಾನಿ ಮೋದಿ 6 ಮಂದಿ ಸಹೋದರರನ್ನು ಹೊಂದಿದ್ದಾರೆ ಅನ್ನೋದನ್ನು ಮರೀಬಾರದು ಅಂದಿದ್ದಾರೆ. ಅಲ್ಲದೆ ಮೋದಿಗೆ 11 ಪ್ರಶ್ನೆಗಳನ್ನು ಕೂಡ ಕೇಳಿದ್ದಾರೆ.

  • ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?

    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?

    ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು.

    ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ರಾಜ್ಯ ರಾಜಕೀಯಕ್ಕೆ ಬರುವಂತೆ ತಿಳಿಸಿದ್ದಾರೆ ಎಂದರು.

    ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ. ಹಾಗಾಗಿ ಇದರ ಬಗ್ಗೆ ಸದ್ಯ ನಾನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದರು. ಕೇಂದ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಅಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಬೇಕಾಗಿದ್ದು, ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರು ತಮಗೆ ಆಹ್ವಾನ ನೀಡಿರುವುದು ನಿಜ ಎಂದು ಹೇಳಿದರು.

    ಎಲ್ಲವೂ ಅಂದುಕೊಂಡಂತೆ ನಡೆದ್ರೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತು ಚಿಂತನೆ ನಡೆಯುತ್ತಿದ್ದು, ಗುಟ್ಟು ಬಿಟ್ಟು ಕೊಡದ ಮುನಿಯಪ್ಪ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡಲಿದೆ ಎನ್ನುತ್ತ ಜಾರಿಕೊಂಡಿದ್ದಾರೆ. ಆದರೆ ವಿಧಾನಸಭೆಯಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುವುದಾಗಿ ತಿಳಿಸುವ ಮೂಲಕ ಮುಂದೆ ದಲಿತ ಸಿಎಂ ಸೇರಿದಂತೆ ಎಡಗೈ ಕೋಟಾದಲ್ಲಿ ರಾಜ್ಯದಲ್ಲಿ ತಮ್ಮ ಹಿಡಿತ ಸಾಧಿಸಲು ಮುನಿಯಪ್ಪ ಮಾಸ್ಟರ್ ಪ್ಲಾನ್ ಮಾಡಿರುವುದಂತೂ ಸುಳ್ಳಲ್ಲ ಎಂದು ಹೇಳಲಾಗುತ್ತಿದೆ.

  • ಕೊರೊನಾ ಇದ್ಯಲ್ಲಾ ಬಹಳ ಅಪಾಯಕಾರಿ, ಅದ್ರ ಬಗ್ಗೆ ನಂಗೆ ಚೆನ್ನಾಗಿ ಗೊತ್ತು: ಸಿದ್ದು

    ಕೊರೊನಾ ಇದ್ಯಲ್ಲಾ ಬಹಳ ಅಪಾಯಕಾರಿ, ಅದ್ರ ಬಗ್ಗೆ ನಂಗೆ ಚೆನ್ನಾಗಿ ಗೊತ್ತು: ಸಿದ್ದು

    – ಮಾನವೀಯ ಸಂಬಂಧವನ್ನೇ ಕಟ್ ಮಾಡುತ್ತೆ
    – ಇದರ ಸಹವಾಸ ಸಾಕಪ್ಪ

    ಬೆಂಗಳೂರು: ಇಂದಿನಿಂದ ವಿಧಾನಸಭಾ ಕಲಾಪ ಆರಂಭವಾಗಿದ್ದು, ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ  ಆತಂಕ ವ್ಯಕ್ತಪಡಿಸಿದರು.

    ನನಗೆ, ನನ್ನ ಹೆಂಡತಿಗೆ, ಮಗನಿಗೆ ಕೊರೊನಾ ಬಂದುಬಿಟ್ಟಿತ್ತು. ಯಾರೂ ನಮ್ಮ ನೋಡಂಗಿಲ್ಲ, ನಮ್ಮ ಹತ್ರ ಬರಂಗಿಲ್ಲ. ಯಾರಿಗೆ ಕೊರೊನಾ ಬಂದಿದೆಯೋ ಅವರು ಯಾರೂ ಭಯಪಡಬೇಕಿಲ್ಲ ಎಂದರು. ಇದನ್ನು ಓದಿ: ಕೊರೊನಾ ಹೆಚ್ಚಾಗಿದ್ದು ನಿಮ್ಮಿಂದಲೇ- ಅಧಿವೇಶನ ಮೊಟಕುಗೊಳಿಸಲು ಸಿದ್ದು ವಿರೋಧ

    ಈ ಕೊರೊನಾ ಇದ್ಯಲ್ಲಾ ಇದು ಬಹಳ ಅಪಾಯಕಾರಿ. ಅದರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಈಶ್ವರಪ್ಪನಿಗೂ ಬಂದಿತ್ತು ಅಂತ ಕಾಣಿಸುತ್ತೆ. ನಮ್ಮ ಅಧ್ಯಕ್ಷನಿಗೂ ಕೊರೊನಾ ಬಂದ ನಂತರ ಅಲರ್ಟ್ ಆಗಿದ್ದಾರೆ. ಈ ಕಾಯಿಲೆ ಮಾನವೀಯ ಸಂಬಂಧವನ್ನೇ ಕಟ್ ಮಾಡುತ್ತೆ ಎಂದು ಹೇಳಿದರು.

    ನನ್ನ ಹೆಂಡತಿ, ಮಗ ನನ್ನನ್ನು ನೋಡೋಕೆ ಅವಕಾಶ ಸಿಗ್ಲಿಲ್ಲ. ನನಗೆ, ನನ್ನ ಪತ್ನಿ, ಮಗನಿಗೂ ಕೊರೊನಾ ಬಂತು. ನಮ್ಮ ಮನೆಯಲ್ಲಿ ಕೆಲಸ ಮಾಡ್ತಿದ್ದವರಿಗೂ ಬಂತು. ಮೈಸೂರಿನಿಂದ ಕರೆತಂದು ಅಡಿಗೆ ಮಾಡಿಸುವಂತಾಯ್ತು. ಇದರ ಸಹವಾಸ ಸಾಕಪ್ಪ. ಇದರಿಂದ ಬಚಾವ್ ಆಗೋದೇ ಕಷ್ಟ ಎಂದು ತಿಳಿಸಿದರು.

    ಸೋಶಿಯಲ್ ಡಿಸ್ಟನ್ಸ್, ಮಾಸ್ಕ್ ಹಾಕುವುದು ಕಡ್ಡಾಯ. ಇದರಿಂದಷ್ಟೇ ಕೊರೊನಾ ವೈರಸ್ ಹರಡುವುದನ್ನು ತಡೆಯಬಹುದು. ಆದರೆ ಕೊರೊನಾ ಬಂದವರು ಭಯಪಡಬೇಕಿಲ್ಲ ಎಂದು ಸಲಹೆ ನೀಡಿದರು.

  • ನೋಡ್ರಪ್ಪ.. ನಾನು ರಾಜೀನಾಮೆ ಕೊಟ್ಟುಬಿಡ್ತೀನಿ – ದಿನೇಶ್ ಜೊತೆ ಸಿದ್ದರಾಮಯ್ಯ ಮಾತು

    ನೋಡ್ರಪ್ಪ.. ನಾನು ರಾಜೀನಾಮೆ ಕೊಟ್ಟುಬಿಡ್ತೀನಿ – ದಿನೇಶ್ ಜೊತೆ ಸಿದ್ದರಾಮಯ್ಯ ಮಾತು

    ಬೆಂಗಳೂರು: ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಮುಖ್ಯಮಂತ್ರಿ ವರ್ತನೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯನವರು ಬೇಸರಗೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ಸೋಮವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಿ ರಾತ್ರಿ 11.45ರ ವರೆಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಿರ್ಣಯದ ಮೇಲಿನ ಚರ್ಚೆ ನಡೆದಿತ್ತು. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಜೊತೆ ಮಾತನಾಡುವಂತೆ ಹೇಳಿದ್ದಾರೆ. ಆದರೆ ಮೊದಲೇ ಸಿಟ್ಟಾಗಿದ್ದ ಸಿದ್ದರಾಮಯ್ಯ ಅವರು ನೋಡ್ರಪ್ಪ.. ನಾನೇ ರಾಜೀನಾಮೆ ಕೊಟ್ಟು ಬಿಡ್ತೀನಿ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯನವರು ಯಾವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಸಾಂದರ್ಭಿಕವಾಗಿ ಸಿಟ್ಟು ಹೊರ ಹಾಕುವಾಗ ಈಗ ನಡೆಯುತ್ತಿರುವ ಹೈಡ್ರಾಮಗಳನ್ನು ನೋಡಿ ಈ ಮಾತನ್ನು ಆಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ನಿನ್ನೆ ರಾತ್ರಿ 11.30ರ ಸುಮಾರಿಗೆ ಸದನದಲ್ಲಿ ಸಾಕಷ್ಟು ಗದ್ದಲ ನಡೆದಿತ್ತು. ಈ ವೇಳೆ ಆರ್ ವಿ ದೇಶ್‍ಪಾಂಡೆ ಮಧ್ಯಪ್ರವೇಶಿಸಿ ಸ್ಪೀಕರ್ ಅವರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಲ್ಲಿ ನೀವು ಮಾತಾಡಿ, ನೀವು ಮನವಿ ಮಾಡಿದ್ರೆ ಸರಿ ಹೋಗಬಹುದೆಂದು ಹೇಳುತ್ತಾರೆ. ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಸಿಎಂ ಅವರು ರಾಜೀನಾಮೆ ಕೊಟ್ಟು ಹೋಗಲಿ. ಇಲ್ಲವೆಂದಲ್ಲಿ ನಾನೇ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಹೇಳಿದ್ದಾರೆ.

    ಸಂದೇಶ ರವಾನೆ: ಇವತ್ತೇ ವಿಶ್ವಾಸಮತ ಸಾಬೀತು ಪಡಿಸೋಣ. ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎನ್ನುವ ಎಚ್ಚರಿಕೆಯ ಸಂದೇಶವನ್ನು ಸಿದ್ದರಾಮಯ್ಯ ಸಿಎಂಗೆ ಈಗಾಗಲೇ ರವಾನಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಡಿಸಿಎಂ ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಮೂಲಕ ಸಿಎಂಗೆ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಸುಪ್ರೀಂ ನಮ್ಮ ಪರವಾಗಿ ಆದೇಶ ನೀಡಿದರೆ ಅದಕ್ಕೆ ನನ್ನದೇನು ತಕರಾರಿಲ್ಲ. ಆದರೆ ಕೋರ್ಟ್ ಆದೇಶ ನಮ್ಮ ಪರವಾಗಿ ಬಾರದೇ ಸುಮ್ಮನೆ ನಾಳೆಗೆ ವಿಶ್ವಾಸಮತ ಸಾಬೀತು ಮಾಡುವುದಕ್ಕೆ ದಿನ ದೂಡಲು ಮುಂದಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಇಷ್ಟರಲ್ಲೇ ನಾವು ಬಹುಮತ ಸಾಬೀತು ಪಡಿಸಬೇಕಿತ್ತು. ಆದರೆ ಸಿಎಂ ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ. ನಾನು ಸೋಮವಾರ ಬಹುಮತ ಸಾಬೀತು ಮಾಡುತ್ತೇನೆ ಎಂದು ಶುಕ್ರವಾರವೇ ಸದನದಲ್ಲಿ ಸ್ಪಷ್ಟವಾಗಿ ಹೇಳಿದ್ದೆ. ಸಿಎಂ ಒಪ್ಪಿಗೆ ಮೇರೆಗೆ ನಾನು ಸದನದಲ್ಲಿ ಈ ಮಾತನ್ನು ಆಡಿದ್ದೆ. ಸ್ವತಃ ಕುಮಾರಸ್ವಾಮಿಯವರೇ ಸೋಮವಾರ ವಿಶ್ವಾಸ ಮತಯಾಚಿಸುವುದಾಗಿ ತಿಳಿಸಿದ್ದರು. ಆದರೆ ನಿನ್ನೆ ಸಿಎಂ ಉಲ್ಟಾ ಹೊಡೆದು ಬಿಟ್ಟಿದ್ದರೆ. ರಾತ್ರಿಯಿಡೀ ಚರ್ಚೆ ನಡೆದರೂ ಮತ್ತೆ ಮುಂದೂಡಿಕೆಯಾಗಿದ್ದು ಸರಿಯಲ್ಲ ಎನ್ನುವ ಅಭಿಪ್ರಾಯವನ್ನು ತಿಳಿಸಿದ್ದಾರೆ.

    ಮೈತ್ರಿ ಅನಿವಾರ್ಯತೆಗೆ ನಿನ್ನೆ ಸ್ಪೀಕರ್ ಮನವೊಲಿಕೆಗೂ ಮುಂದಾಗಿದ್ದೆ. ಆದರೆ ಶುಕ್ರವಾರ ನಾನು ನುಡಿದ ಮಾತಿನಂತೆ ನಡೆಯದೇ ತಪ್ಪು ಮಾಡಿದ್ದೇನೆ. ಈ ಮೂಲಕ ಸಿಎಂ ಜೊತೆಗೆ ನನ್ನ ಮೇಲೂ ವಚನಭ್ರಷ್ಟ ಆರೋಪ ಕೇಳಿ ಬಂದಿದೆ ಎಂದು ಆಪ್ತರ ಬಳಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ಸೋಮವಾರ ರಾತ್ರಿ ನಾನೇ ಸದನಕ್ಕೆ ಮಾತುಕೊಟ್ಟಿದ್ದೇನೆ. ಇಂದು ಈ ಮಾತಿನಂತೆ ನಡೆಯದೇ ಇದ್ದರೆ ನಾನು ತಲೆ ಅಡಿ ಹಾಕಬೇಕಾಗುತ್ತದೆ. ಯಾವ ಕಾರಣಕ್ಕೂ ಇವತ್ತು ಮಾತು ತಪ್ಪಬಾರದು. ಬಹುಮತ ಸಾಬೀತಿಗೆ ಮುಂದಾಗಲೇಬೇಕು ಎಂದು ಖಡಕ್ಕಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

  • ದಳ ತೊರೆದು ಕೈ ಸೇರ್ಪಡೆ- ಅಂದಿನ ಘಟನೆ ವಿವರಿಸಿದ ಸಿದ್ದರಾಮಯ್ಯ

    ದಳ ತೊರೆದು ಕೈ ಸೇರ್ಪಡೆ- ಅಂದಿನ ಘಟನೆ ವಿವರಿಸಿದ ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಚರ್ಚೆಯ ವೇಳೆ ಶಾಸಕ ಸಿ.ಟಿ ರವಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ಶಾಸಕರ ಪಕ್ಷಾಂತರ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ ಕಥೆಯನ್ನು ಬಿಚ್ಚಿಟ್ಟರು.

    2006ರಲ್ಲಿ ಸಿದ್ದರಾಮಯ್ಯನವರು ಜನತಾ ದಳದ ಉಪಮುಖ್ಯಮಂತ್ರಿಯಾಗಿದ್ದರು. ಅವರನ್ನು ಏನು ಕೊಟ್ಟು ಕರೆದುಕೊಂಡು ಹೋಗಿದ್ದೀರಿ ಎಂದು ನಾವು ಕೇಳಿಲ್ಲ ಎಂದು ಸಿಟಿ ರವಿ ಕಾಂಗ್ರೆಸ್ ನಾಯಕರ ಆಪರೇಷನ್ ಕಮಲದ ಆರೋಪಕ್ಕೆ ತಿರುಗೇಟು ನೀಡಿದರು.

    ಈ ವೇಳೆ ಎದ್ದುನಿಂತ ಸಿದ್ದರಾಮಯ್ಯ, ರವಿಗೆ ಸರಿಯಾದ ಮಾಹಿತಿ ಇಲ್ಲ ಅನಿಸುತ್ತದೆ. ನಾನು ಜೆಡಿಎಸ್ ಬಿಟ್ಟಿರಲಿಲ್ಲ. ಆದರೆ ಜೆಡಿಎಸ್ ನಿಂದ ನನ್ನನ್ನು ಹೊರಹಾಕಿದ್ರು. ಧರಂಸಿಂಗ್ ಅವರು ಉಪಮುಖ್ಯಮಂತ್ರಿ ಸ್ಥಾನದಿಂದ ನನ್ನನ್ನು ವಜಾಗೊಳಿಸಿದರು ಅರ್ಥವಾಯ್ತಾ? ನಿಜ ಏನೆಂದು ತಿಳಿಯದೇ ಏನೇನೋ ಮತಾಡಲು ಹೋಗಬೇಡಿ. ಇಲ್ಲಿ ತಪ್ಪು, ತಪ್ಪಾಗಿ ರೆಕಾರ್ಡ್ ಆಗಬಾರದು ಎಂದು ಹೇಳಿದರು.

    ನೀವು ಆ ಸಂದರ್ಭದಲ್ಲಿ ದೇವೇಗೌಡರನ್ನು ಉದ್ದೇಶಿಸಿ ಮಾತನಾಡಿದ್ದನ್ನು, ಎಸ್ ಆರ್ ಬೊಮ್ಮಾಯಿ ಅವರನ್ನು ಯಾರು ಬಿಡಿಸಿದ್ದು, 20 ಜನರತ್ರ ಯಾರು ಸೈನ್ ಹಾಕಿಸಿದ್ದು ಎಂಬ ವಿಡಿಯೋ ನಿನ್ನೆ ಮೊನ್ನೆ ಬಂದಿತ್ತು ಎಂದು ರವಿ ತಿರುಗೇಟು ನೀಡಿದರು.

    ಆಗ ಸಿದ್ದರಾಮಯ್ಯ ಅವರು, ರವಿ, ಯಾವ್ಯಾವ ಕಡೆಗೆ ಹೋಗಬೇಡಪ್ಪಾ ನೀನು.. ಎಂದು ಹೇಳಿ, ನಾನು ಉಪಮುಖ್ಯಮಂತ್ರಿಯಾಗಿದ್ದಿದ್ದು ನಿಜ. ಆಗ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಿದ್ರು. ಕೂಡಲೇ ನಾನು ಹೋಗಿ ಕಾಂಗ್ರೆಸ್ ಪಕ್ಷ ಸೇರಿಲ್ಲ. ಬದಲಾಗಿ ಅಹಿಂದ ಸಂಘಟನೆ ಮಾಡುತ್ತಿದ್ದೆ. 2005ರಲ್ಲಿ ಪ್ರಾರಂಭಿಸಿ ಸುಮಾರು 1 ವರ್ಷದ ಸಂಘಟನೆ ಮಾಡಿದ ಬಳಿಕ 2006ರಲ್ಲಿ ಕಾಂಗ್ರೆಸ್ ಸೇರಿದೆ. 2005ರ ಮೇ ತಿಂಗಳಲ್ಲಿ ನನ್ನನ್ನು ವಜಾಗೊಳಿಸಲಾಗಿತ್ತು. ಈವಾಗ ನೀವು ಈ ಮುಸುಕಿನ ಗುದ್ದಾಟ ಮಾಡುತ್ತಿದ್ದೀರಲ್ವಾ? ಆ ರೀತಿ ಅಂದು ಆಗಿರಲಿಲ್ಲ. ಇದನ್ನು ನೀವು ಅರ್ಥಮಾಡಿಕೊಳ್ಳಬೇಕು ಎಂದರು.

    ನೀವು ಕೂಡ ಅಧಿಕಾರಕ್ಕೆ ಬನ್ನಿ. ನಾವೇನು ಬೇಡ ಅಂದಿಲ್ಲ. ಪ್ರಜಾಪ್ರಭುತ್ವದಲ್ಲಿ ಜನ ಯಾರಿಗೆ ಆಶೀರ್ವಾದ ಮಾಡುತ್ತಾರೋ ಅವರು ಅಧಿಕಾರಕ್ಕೆ ಬರಲೇ ಬೇಕು. 5 ವರ್ಷ ಅಧಿಕಾರ ಮಾಡಲೇ ಬೇಕು. ಅದರ ಬಗ್ಗೆ ನಂದೇನು ತಕರಾರಿಲ್ಲ. ಆದರೆ ಹಿಂಬಾಗಿಲಿಂದ ಅಧಿಕಾರದಲ್ಲಿದ್ದ ಪಕ್ಷದ ಶಾಸಕರನ್ನು ಓಲೈಸಿ, ಆಸೆ, ಆಮಿಷ, ಹಣ, ಅಧಿಕಾರ ತೋರಿಸಿ ಅವರನ್ನು ಕರೆದುಕೊಂಡು ಹೋಗಿ ಮುಂಬೈನಲ್ಲಿಟ್ಟಿರುವುದು ವೆರಿ ಬ್ಯಾಡ್ ಎಂದು ತಿರುಗೇಟು ನೀಡಿದರು.

  • ವಿಧಾನಸಭೆಯಲ್ಲಿಂದು ಸಾಲಮನ್ನಾ ಚರ್ಚೆ – ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜು

    ವಿಧಾನಸಭೆಯಲ್ಲಿಂದು ಸಾಲಮನ್ನಾ ಚರ್ಚೆ – ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜು

    ಬೆಂಗಳೂರು: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಬಿಜೆಪಿ ತುದಿಗಾಲಲ್ಲಿ ನಿಂತಿದೆ. ಇಂದು ವಿಧಾನಸಭೆ ಕಲಾಪದಲ್ಲಿ ರೈತರ ಸಾಲಮನ್ನಾ ವಿಚಾರದ ಕುರಿತು ಚರ್ಚೆ ನಡೆಯಲಿದೆ.

    ಈ ವೇಳೆ ರೈತರ ಸಾಲಮನ್ನಾ ವಿಚಾರದಲ್ಲಿನ ಗೊಂದಲಗಳನ್ನಿಟ್ಟುಕೊಂಡೇ ದೋಸ್ತಿ ಸರ್ಕಾರದ ಮೇಲೆ ಬಿಜೆಪಿ ಪ್ರಹಾರಕ್ಕೆ ಸಜ್ಜಾಗಿದೆ. ಈ ವೇಳೆ ಸದನದಲ್ಲಿ ಕಾವೇರುವ ಚರ್ಚೆ ನಡೆಯಲಿದ್ದು, ಪರಸ್ಪರ ಕಾದಾಟ ಜೋರಾಗುವ ಸಾಧ್ಯತೆ ಇದೆ. ಜೊತೆಗೆ ಬರದ ಮೇಲಿನ ಚರ್ಚೆಗೆ ಇಂದು ಸರ್ಕಾರ ಉತ್ತರ ನೀಡಲಿದೆ. ಸರ್ಕಾರದಿಂದ ಸಮರ್ಪಕ ಉತ್ತರ ದೊರೆಯದಿದ್ದರೆ ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಸಭಾತ್ಯಾಗ ಮಾಡುವ ಸಾಧ್ಯತೆಯೂ ಇದೆ.

    ಇತ್ತ ಪರಿಷತ್‍ನಲ್ಲಿ ನಾಲ್ಕನೇ ದಿನವಾದ ಇಂದು ಬರದ ಬಗ್ಗೆ ಚರ್ಚೆ ನಡೆಯಲಿದೆ. ಮಂಗಳವಾರ ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಸಮಯದ ಅಭಾವದಿಂದ ಚರ್ಚೆ ನಡೆದಿರಲಿಲ್ಲ. ಹೀಗಾಗಿ ಇಂದು ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹಾದಿಯಾಗಿ ಬಿಜೆಪಿ ಸದಸ್ಯರು ನಿಯಮ 68 ರ ಅಡಿ ಚರ್ಚೆ ನಡೆಸಲಿದ್ದು, ಬರ ನಿರ್ವಹಣೆಯಲ್ಲಿ ಸರ್ಕಾರದ ವಿಫಲತೆ ವಿರುದ್ಧ ವಿಪಕ್ಷ ತರಾಟೆಗೆ ತೆಗೆದುಕೊಳ್ಳಲಿದೆ.

    ಅಲ್ಲದೇ ಮೂರು ದಿನಗಳ ಕಲಾಪದ ಬಳಿಕ ಇಂದು ಸಿಎಂ ಕುಮಾರಸ್ವಾಮಿ ಮೊದಲ ಬಾರಿಗೆ ಪರಿಷತ್ ಗೆ ಆಗಮಿಸುತ್ತಿದ್ದು, ಎನ್.ಪಿ. ಎಸ್, ಕಾಲ್ಪನಿಕ ವೇತನ ಕುರಿತು ಉತ್ತರ ನೀಡುವ ಸಾಧ್ಯತೆ ಇದೆ. ಇದೇ ವೇಳೆ ಸಿಎಂ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ಮಂಡನೆ ಮಾಡುವ ಸಾಧ್ಯತೆ ಇದೆ.

    ಎನ್ ಪಿಎಸ್ ವಿಚಾರವಾಗಿ ಸಿಎಂರಿಂದ ಉತ್ತರ ಕೊಡಿಸೋದಾಗಿ ಸಭಾ ನಾಯಕರು ಹೇಳಿದ್ರು. ಆದ್ರೆ ಸಿಎಂ ಉತ್ತರ ಕೊಡುವ ಮೊದಲೇ ಎನ್ ಪಿಎಸ್ ಸಂಬಂಧ ಸಮಿತಿ ರಚಿಸಿದ್ದು, ಈ ವಿಚಾರ ನಿನ್ನೆ ಸದನದಲ್ಲಿ ಪ್ರತಿಧ್ವನಿಸಿದೆ. ಹೀಗಾಗಿ ಇಂದು ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುವ ಸಾಧ್ಯತೆ ಇದೆ. ಉಳಿದಂತೆ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ, ನಿಯಮ 72, 330 ಅಡಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕರಿಗೆ ಬ್ರೀಫ್ ಕೇಸ್ ನೀಡ್ಬೇಡಿ: ಸ್ಪೀಕರ್ ರಮೇಶ್ ಕುಮಾರ್

    ಶಾಸಕರಿಗೆ ಬ್ರೀಫ್ ಕೇಸ್ ನೀಡ್ಬೇಡಿ: ಸ್ಪೀಕರ್ ರಮೇಶ್ ಕುಮಾರ್

    ಬೆಂಗಳೂರು: ಶಾಸಕರಿಗೆ ನೀಡಲು ತರಿಸಿದ್ದ ದುಬಾರಿ ಬೆಲೆಯ ಬ್ರೀಫ್ ಕೇಸ್ ಗಳನ್ನು ನೀಡದಂತೆ ಸ್ಪೀಕರ್ ರಮೇಶ್ ಕುಮಾರ್ ರವರು ವಿಧಾನಸಭಾ ಸಚಿವಾಲಯಕ್ಕೆ ಆದೇಶ ನೀಡಿದ್ದಾರೆ.

    ವಿಧಾನಸಭೆಯ ನೂತನ ಶಾಸಕರಿಗೆ ನೀಡಲು ವಿಧಾನಸಭಾ ಸಚಿವಾಲಯ 224 ಕ್ಕೂ ಹೆಚ್ಚು ಬ್ರೀಫ್ ಕೇಸ್‍ಗಳನ್ನು ಖರೀದಿಸಿತ್ತು. ಇದಕ್ಕೇ ಸ್ಪೀಕರ್ ರವರ ಅನುಮತಿ ಪಡೆಯದ ಹಿನ್ನೆಲೆಯಲ್ಲಿ  ರಮೇಶ್ ಕುಮಾರ್ ರವರು ಅಧಿಕಾರಿಗಳ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನನಗೆ ಮಾಹಿತಿ ನೀಡದೇ, ಲಕ್ಷಾಂತರ ರೂ. ಮೌಲ್ಯವುಳ್ಳ ಬ್ರೀಫ್ ಕೇಸ್ ಗಳನ್ನು ಖರೀದಿಸಿದ್ದು ಏಕೆ ಎಂದು ಸಚಿವಾಲಯದ ವಿರುದ್ಧ ಗುಡುಗಿದ್ದಾರೆ. ಯಾವುದೇ ಬ್ರೀಫ್ ಕೇಸ್ ಗಳನ್ನು ನೂತನ ಶಾಸಕರಿಗೆ ನೀಡದಂತೆ ವಿಧಾನಸಭಾ ಸಚಿವಾಲಯಕ್ಕೆ ಸ್ಪೀಕರ್ ಆದೇಶ ನೀಡಿದ್ದಾರೆ.

    15ನೇ ವಿಧಾನಸಭೆಗೆ ಆಯ್ಕೆಯಾಗಿದ್ದ ನೂತನ ಸದಸ್ಯರಿಗೆ ನೀಡಲು ವಿಧಾನಸಭಾ ಸಚಿವಾಲಯ ಬ್ರೀಫ್ ಕೇಸ್‍ಗಳನ್ನು ಖರೀದಿಸಿತ್ತು. ಅಧಿಕೃತವಾಗಿ ಖರೀದಿ ಮಾಡಿದ್ದರೆ, ನೂತನ ಶಾಸಕರಿಗೆ ಪ್ರಮಾಣ ವಚನ ಬೋಧನೆ ಬಳಿಕ ಬ್ರೀಫ್ ಕೇಸ್ ನೀಡಬೇಕಾಗಿತ್ತು. ಆದರೆ ಅಧಿವೇಶನ ಮುಗಿದ ನಂತರವು ನೂತನ ಶಾಸಕರಿಗೆ ಬ್ರೀಫ್ ಕೇಸ್ ನ್ನು ನೀಡಿಲ್ಲ.

    ಈ ಬ್ರೀಫ್ ಕೇಸ್‍ಗಾಗಿಯೇ ಸಚಿವಾಲಯ ಅಮೇರಿಕನ್ ಟೂರಿಸ್ಟರ್ ಕಂಪೆನಿಯ 224 ಕ್ಕೂ ಹೆಚ್ಚಿನ ಬ್ರೀಫ್ ಕೇಸ್ ಗಳನ್ನು ಖರೀದಿಸಿತ್ತು. ಒಂದೊಂದರ ಬೆಲೆ ಅಂದಾಜು 5 ಸಾವಿರ ರೂಪಾಯಿ ಆಗಿದೆ ಎಂದು ತಿಳಿದು ಬಂದಿದೆ.

  • ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವ ಸರ್ಕಾರ ಏನು ನೀಡಿದೆ, ಚರ್ಚೆ ನಡೆಯಲಿ: ಎಚ್‍ಡಿಕೆ

    ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವ ಸರ್ಕಾರ ಏನು ನೀಡಿದೆ, ಚರ್ಚೆ ನಡೆಯಲಿ: ಎಚ್‍ಡಿಕೆ

    ಬೆಂಗಳೂರು: ಸ್ವಾತಂತ್ರ್ಯ ಬಂದ ಬಳಿಕ ಉತ್ತರ ಕರ್ನಾಟಕಕ್ಕೆ ನೀಡಿರೋ ಅನುದಾನಗಳ ಬಗ್ಗೆ ಚರ್ಚೆಗೆ ಸಿದ್ಧ ಅಂತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

    ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಚ್‍ಡಿಕೆ, ನಾನು ಯಾವುದೋ ಒಂದು ಜಾತಿಗೆ ಸಿಎಂ ಅಲ್ಲ. ಆರು ಕೋಟಿ ಕನ್ನಡಿಗರಿಗೆ ಸಿಎಂ. ಈ ಹಿಂದೆ ಹಾಸನಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅಂತಾನೂ ಚರ್ಚೆ ನಡೆಯಲಿ. ಈ ಚರ್ಚೆ ಎರಡು ವಾರ ಬೇಕಾದರೂ ನಡೆಯಲಿ ಎಂದ ಅವರು, ವಿಭೂತಿ ಹಾಕಿಕೊಂಡು ಬಂದವ್ರಿಗೆ ಸಹಾಯ ಮಾಡಿದ್ದೇನೆ ಅಂತ ವಿಪಕ್ಷಕ್ಕೆ ತಿರುಗೇಟು ನೀಡಿದ್ರು.

    ನಾನು ವಚನಭ್ರಷ್ಟ ಅಲ್ಲ. 12 ವರ್ಷಗಳ ಹಿಂದೆ ನಾವು 38 ಮಂದಿ ಶಾಸಕರಿದ್ವಿ. ಆಗ ಯಾಕೆ 80 ಶಾಸಕರಿದ್ದ ನೀವೇ ಯಾಕೆ ನನಗೆ ಅಧಿಕಾರ ಕೊಟ್ರಿ? ಇದು 37 ಶಾಸಕರ ಸರ್ಕಾರವಲ್ಲ. 114 ಮಂದಿ ಶಾಸಕರ ಸರ್ಕಾರ. 104 ಶಾಸಕರಿದ್ದ ನಿಮಗೆ ರಾಜ್ಯಪಾಲರು ಆಹ್ವಾನ ಕೊಟ್ಟಿದ್ರು. ಆದ್ರೆ ಬಹುಮತ ಸಾಬೀತುಪಡಿಸ್ಲಿಲ್ಲ ಅಂತ ತಿರುಗೇಟು ನೀಡಿದ್ದಾರೆ.

    ನಮ್ಮ ಸಕಾರ ರಚನೆಯಾಗಿ ಕೆಲವೇ ತಿಂಗಳಾಗಿದೆ. ಮೈತ್ರಿ ಸರ್ಕಾರ ರೈತರ ಪರವಾಗಿದೆ. ಯಾರೂ ಕೂಡ ಆತ್ಮಹತ್ಯೆಗೆ ಮುಂದಾಗಬಾರದು. ಸಮ್ಮಿಶ್ರ ಸರ್ಕಾರ 5 ವರ್ಷ ಅಧಿಕಾರ ಪೂರೈಸುತ್ತೆ. ಈ ಬಗ್ಗೆ ಯಾರಿಗೂ ಭಯ, ಆತಂಕ ಬೇಡ ಅಂದ್ರು.

    ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಅಳವಡಿಕೆಗೆ ಸರ್ಕಾರ ಮುಂದಾಗಿದೆ ಅಂತ ಅವರು ಹೇಳಿದ್ರು.