Tag: Vidhanasoudha

  • ರನ್ಯಾ ರಾವ್ ಕೇಸ್ | ತಾಕತ್ತಿದ್ದರೆ ಸಚಿವರ ಹೆಸರು ಬಹಿರಂಗಪಡಿಸಲಿ – ಯತ್ನಾಳ್‌ಗೆ ಕಾಂಗ್ರೆಸ್ ಸಚಿವರ ಸವಾಲು

    ರನ್ಯಾ ರಾವ್ ಕೇಸ್ | ತಾಕತ್ತಿದ್ದರೆ ಸಚಿವರ ಹೆಸರು ಬಹಿರಂಗಪಡಿಸಲಿ – ಯತ್ನಾಳ್‌ಗೆ ಕಾಂಗ್ರೆಸ್ ಸಚಿವರ ಸವಾಲು

    ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಕೇಸ್‌ನಲ್ಲಿ ಸಚಿವರು ಭಾಗಿಯಾಗಿದ್ದಾರೆ, ವಿಧಾನಸಭೆಯಲ್ಲಿ ಹೆಸರು ಪ್ರಸ್ತಾಪಿಸುವುದಾಗಿ ಹೇಳಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ (Basanagouda Patil Yatnal) ಕಾಂಗ್ರೆಸ್ ಸಚಿವರು ಸವಾಲು ಹಾಕಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ತಾಕತ್ತಿದ್ದರೆ ಹೆಸರು ಹೇಳಲಿ. ಯತ್ನಾಳ್ ಹೊರಗಡೆ ಮಾತನಾಡುವುದು ಬೇಡ. ಅಧಿವೇಶನದಲ್ಲಿ ಹೆಸರು ಬಹಿರಂಗಪಡಿಸಲಿ. ಯರ‍್ಯಾರು ಕೇಂದ್ರ ಸಚಿವರು ಇದ್ದಾರೆ, ಅವರ ಪಾರ್ಟಿಯವರು ಯಾರಿದ್ದಾರೆ, ನಮ್ಮ ಪಾರ್ಟಿಯವರು ಯಾರಿದ್ದಾರೆ ಹೇಳಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಎಂದು ಟಾಂಗ್ ಕೊಟ್ಟರು.ಇದನ್ನೂ ಓದಿ: `ಪಬ್ಲಿಕ್ ಟಿವಿ’ ಮೂಲಕ ಮನವಿ ಮಾಡ್ತೀನಿ, ತಂದೆ-ತಾಯಿ ಬಿಟ್ಟು ಹೋದ್ರೆ ಆಸ್ತಿ ಸಿಗಲ್ಲ: ಶರಣ ಪ್ರಕಾಶ್ ಪಾಟೀಲ್

    ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಯತ್ನಾಳ್ ಬಳಿ ಮಾಹಿತಿ ಇದ್ದರೆ ಬಹಿರಂಗ ಮಾಡಲಿ ಯಾರದ್ದೂ ಅಡ್ಡಿ ಇಲ್ಲ. ಬೇಗ ಹೆಸರು ಹೇಳಿದರೆ ತನಿಖೆಗೆ ಸುಲಭ ಆಗಲಿದೆ ಎಂದು ತಿರುಗೇಟು ಕೊಟ್ಟರು.

    ಇನ್ನೂ ಸಚಿವ ಸಂತೋಷ್ ಲಾಡ್ ಮಾತನಾಡಿ, ಯತ್ನಾಳ್ ಸಚಿವರ ಹೆಸರನ್ನು ಬಹಿರಂಗಪಡಿಸಲಿ. ಒಳ್ಳೇದು ಯಾಕೆ ಅವರು ಹೇಳಬಾರದು? ಸಂಪೂರ್ಣವಾಗಿ ಯಾರಿದ್ದಾರೆ ಎನ್ನುವುದನ್ನು ಹೇಳಲಿ. ತನಿಖೆಗೂ ಅನುಕೂಲ ಆಗುತ್ತದೆ. ಅವರು ಹೇಳಿರುವುದು ಸತ್ಯಾನಾ ಎನ್ನುವುದು ಜನರಿಗೆ ಗೊತ್ತಾಗುತ್ತದೆ. ಸತ್ಯವಿದ್ದರೆ ಹೊರಬರಲಿ ಎಂದು ಟಕ್ಕರ್ ಕೊಟ್ಟರು.ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆ ಮೂಲಕ ಸರ್ಕಾರ ಮುಸ್ಲಿಮರ ಆಸ್ತಿ ಕಬಳಿಕೆ ಮಾಡುವ ಹುನ್ನಾರ: ಓವೈಸಿ ಆಕ್ರೋಶ

     

  • ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ತೇವೆ- ಸಿದ್ದರಾಮಯ್ಯ ಫುಲ್ ಕಾನ್ಫಿಡೆನ್ಸ್

    ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ತೇವೆ- ಸಿದ್ದರಾಮಯ್ಯ ಫುಲ್ ಕಾನ್ಫಿಡೆನ್ಸ್

    ಬೆಂಗಳೂರು: ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದಲ್ಲಿ (Vidhanasoudha) ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಕ್ಸಿಟ್ ಪೋಲ್ (Exit Poll) ಬಗ್ಗೆ ಪ್ರತಿಕ್ರಿಯಿಸಿ, ಎಕ್ಸಿಟ್ ಪೋಲ್ ಮೋದಿ ಮಾಧ್ಯಮ ಸಮೀಕ್ಷೆ. ಈಗಾಗಲೇ ರಾಹುಲ್ ಗಾಂಧಿ ಇದನ್ನು ಹೇಳಿದ್ದಾರೆ. ನಾವು ರಾಜ್ಯದಲ್ಲಿ 15 ರಿಂದ 20 ಸ್ಥಾನ ಗೆಲ್ಲುತ್ತೇವೆ ಎಂದರು.

    ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆಲ್ಲುತ್ತೇವೆ. ಇಂಡಿಯಾ ಒಕ್ಕೂಟವು 295 ಸ್ಥಾನ ಗೆಲ್ಲಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ಹೇಳಿದ್ದಾರೆ. ನಾನು ಹೇಳಿದ್ದೀನಲ್ವ ನಾವು 15 ಸ್ಥಾನ ಗೆಲ್ತೀವಿ ಎಂದು ತಿಳಿಸಿದರು.

    ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಬಿತ್ತನೆ ಬೀಜದ ಕೆಲಸ ಆರಂಭವಾಗಿದೆ. ಮಳೆ ಜಾಸ್ತಿ ಆಗಿ ಮರಗಳು ಬಿದ್ದಿವೆ. ನಗರದಲ್ಲಿ ಗುಂಡಿ ಮುಚ್ಚಲು ಆದೇಶ ಮಾಡಿದ್ದೇನೆ. ಸಾಯಂಕಾಲ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ. ಬಳಿಕ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು.

    ಇದೇ ವೇಳೆ ನಾಗೇಂದ್ರ ರಾಜೀನಾಮೆ ಬಗ್ಗೆ ನಾನು ಕೇಳಿಲ್ಲ. ರಿಪೋರ್ಟ್ ಬರಬೇಕು ಅಲ್ವಾ. ಎಸ್ ಐಟಿ ರಚನೆಯಾಗಿಯೇ ಎರಡು ದಿವಸ ಆಗಿದೆ. ರಿಪೋರ್ಟ್ ಬರಲಿ ಆಮೇಲೆ ನೋಡೊಣ ಎಂದರು.

  • ಪಾಕ್ ಪರ ಘೋಷಣೆ; ವಿತಂಡವಾದಿ ಕಾಂಗ್ರೆಸಿಗರಿಗೆ ತೀವ್ರ ಮುಖಭಂಗ: ಅಶ್ವಥ‌ ನಾರಾಯಣ್

    ಪಾಕ್ ಪರ ಘೋಷಣೆ; ವಿತಂಡವಾದಿ ಕಾಂಗ್ರೆಸಿಗರಿಗೆ ತೀವ್ರ ಮುಖಭಂಗ: ಅಶ್ವಥ‌ ನಾರಾಯಣ್

    ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಆ ರೀತಿ ಘೋಷಣೆ ಕೂಗಿಲ್ಲ ಎಂದು ವಿತಂಡವಾದ ಮಾಡುವ ಕಾಂಗ್ರೆಸ್ ಮುಖಂಡರಿಗೆ ಇದೀಗ ತೀವ್ರ ಮುಖಭಂಗವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ ನಾರಾಯಣ್ (Ashwath Narayan) ಹೇಳಿದ್ದಾರೆ.

    ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ತಮಗಾಗಿರುವ ಅಪಮಾನಕ್ಕೆ ಪ್ರತೀಕಾರವಾಗಿ ಮತ್ತು ಹತಾಶೆಯಿಂದ ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಬಿಲಾವರ್ ಭುಟ್ಟೊ ವಿರುದ್ದ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ರವಿಯವರು (ಆರಾಧ್ಯ ಅವರು ಆ ಪ್ರತಿಭಟನೆಯಲ್ಲಿ ಭಾಗವಹಿಸದೇ ಇದ್ದರೂ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು) ಪಾಕಿಸ್ತಾನ ಮುರ್ದಾಬಾದ್ ಎಂದು ಕೂಗಿದ್ದರು. ಅವರಿಗೆ ಹಿಂದಿ ಭಾಷೆ ತಿಳಿಯದ ಕಾರಣ ಅವರು ಅಚಾತುರ್ಯದಿಂದ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರು. ಆ ನಿಷ್ಠಾವಂತ ಕಾರ್ಯಕರ್ತರು ತಮ್ಮ ತಪ್ಪಿನ ಅರಿವಾಗಿ ಅವರು ಸ್ಪಷ್ಟೀಕರಣ ನೀಡಿದ್ದಲ್ಲದೇ ತಮ್ಮ ತಪ್ಪಿಗೆ ಕ್ಷಮೆಯನ್ನು ಕೋರಿದ್ದರು. ಅವರು ಘೋಷಣೆಯು ಉದ್ದೇಶಪೂರ್ವಕವಾಗಿ ಕೂಗಿದ್ದಲ್ಲ ಎಂದು ತನಿಖೆಯ ನಂತರ ತಿಳಿದ ಮೇಲೆ ಪೊಲೀಸರು ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆಗಿರುವ ಘಟನೆಗಳನ್ನು ವಿಷಯಾಂತರ ಗೊಳಿಸುವುದು ಮತ್ತು ಸೇಡಿನ ಭಾವನೆಯಿಂದ ಅಮಾಯಕ ಕಾರ್ಯಕರ್ತರನ್ನು ಬಂಧಿಸುವ ಉದ್ಧಟತನ ತೋರಿರುವುದನ್ನು ನಾವು ಸಾರಾಸಗಟಾಗಿ ಖಂಡಿಸುತ್ತೇವೆ ಎಂದಿದ್ದಾರೆ.

    ಮುಸ್ಲಿಂ ಯುವಕರನ್ನು ಬಂಧನ ಮಾಡಿದ ಕಾರಣಕ್ಕೆ ಮುಚ್ಚಿ ಹೋಗಿದ್ದ ಪ್ರಕರಣದಲ್ಲಿ ಹಿಂದೂ ಯುವಕರನ್ನು ಬಂಧಿಸಿರುವುದು ಇವರ ತುಷ್ಟೀಕರಣ ನೀತಿಯ ಭಾಗ ಇದಾಗಿದೆ. ಕಳೆದ ವಾರ ವಿಧಾನ ಸೌಧದಲ್ಲಿ ʼಪಾಕಿಸ್ತಾನ ಜಿಂದಾಬಾದ್ʼ ಎಂದು ಕೂಗಿದ್ದು ವೀಡಿಯೋದಲ್ಲಿ ಸ್ಪಷ್ಟವಾಗಿದ್ದರೂ ಆ ದ್ರೋಹಿಗಳನ್ನು ಬೆಂಬಲಿಸಿದ ಕಾಂಗ್ರೆಸ್ ಸಚಿವರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಬಾಂಬ್ ಬ್ಲಾಸ್ಟ್‌ ತನಿಖೆಗಿಳಿದ ಎನ್ಐಎ – ಸಿಸಿಬಿಯಿಂದ ತನಿಖಾ ಫೈಲ್ NIAಗೆ ಹಸ್ತಾಂತರ

    ಅಪರಾಧ ಮಾಡುವುದು ಮತ್ತು ಅಪರಾಧಿಗಳನ್ನು ಬೆಂಬಲಿಸುವುದು ಗಂಭೀರ ವಿಚಾರ. ಆದ್ದರಿಂದ ಆರೋಪಿಗಳನ್ನು ಬೆಂಬಲಿಸಿದವರ ಮೇಲೆಯೂ ಪೊಲೀಸರು ಮೊಕದ್ದಮೆ ದಾಖಲು ಮಾಡಬೇಕು. ಸರ್ಕಾರ ಅಮಾಯಕ ಕಾರ್ಯಕರ್ತರ ಮೇಲೆ ಹೂಡಿರುವ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕು. ಇಲ್ಲ ಅಪರಾಧಿಗಳ ಬೆಂಬಲಕ್ಕೆ ನಿಂತಿದ್ದ ಸರ್ಕಾರದ ಮಂತ್ರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

  • ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಮೂರು ದಿನ  ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ.

    ಇಂದು ಸಂಜೆ ಅಶೋಕನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಪೊಲೀಸರು ಕೋರಮಂಗಲದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

    ಘಟನೆ ಏನು..?: 2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪಿನಿಂದ ʼಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆ ಕೇಳಿಬಂದಿತ್ತು. ಈ ಸುದ್ದಿಯನ್ನು ಪಬ್ಲಿಕ್‌ ಟಿವಿ ಬ್ರೇಕ್‌ ಮಾಡಿತ್ತು. ಆದರೆ ಕಾಂಗ್ರೆಸ್‌ ನಾಯಕರು ಮಾಧ್ಯಮ ವರದಿ ಸುಳ್ಳೆಂದು ಹೇಳುತ್ತಲೇ ಬಂದರು.

    ಈ ನಡುವೆ ಪೊಲೀಸರು ಘೋಷಣೆ ಕೂಗಿರುವುದಕ್ಕೆ ಸಂಬಂಧಪಟ್ಟ ವೀಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದರು. ಇದೀಗ FSL ವರದಿಯಲ್ಲಿ ಪಾಕ್‌ ಪರ ಘೋಷಣೆ ಕೂಗಿರುವುದು ದೃಢಪಟ್ಟ ನಂತರ ಮೂವರ ಬಂಧನ ಮಾಡಲಾಗಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೊಷಣೆ ಆರೋಪ- ಮೂವರ ಬಂಧನ

    ಈ ಸಂಬಂಧ ಸೆಂಟ್ರಲ್‌ ಡಿಸಿಪಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿʼಪಾಕಿಸ್ತಾನ ಜಿಂದಾಬಾದ್‌ʼ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ FSL ವರದಿ, ಸಾಂದರ್ಭಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

  • ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ- ಮೂವರ ಬಂಧನ

    ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ- ಮೂವರ ಬಂಧನ

    ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ. ಪಾಕಿಸ್ತಾನ್ (Pakistan) ಜಿಂದಾಬಾದ್‌ ಎಂದು ವಿಧಾನಸೌಧದಲ್ಲಿ‌ (Vidhanasoudha) ಕೂಗಿರುವ ವಿಚಾರ ಸಂಬಂಧ FSL ವರದಿಯಲ್ಲಿ ದೃಢಪಟ್ಟ ನಂತರ ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಸದ್ಯ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಬಳಿಕ ಪೊಲೀಸರು ಅವರನ್ನು ಕೋರಮಂಗಲದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

    ಈ ಸಂಬಂಧ ಸೆಂಟ್ರಲ್‌ ಡಿಸಿಪಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿʼಪಾಕಿಸ್ತಾನ ಜಿಂದಾಬಾದ್‌ʼ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ FSL ವರದಿ, ಸಾಂದರ್ಭಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಘಟನೆ ಏನು..?: 2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪಿನಿಂದ ʼಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆ ಕೇಳಿಬಂದಿತ್ತು. ಈ ಸುದ್ದಿಯನ್ನು ಪಬ್ಲಿಕ್‌ ಟಿವಿ ಬ್ರೇಕ್‌ ಮಾಡಿತ್ತು. ಆದರೆ ಕಾಂಗ್ರೆಸ್‌ ನಾಯಕರು ಮಾಧ್ಯಮ ವರದಿ ಸುಳ್ಳೆಂದು ಹೇಳಿದ್ದರು. ಬಳಿಕ  ಪೊಲೀಸರು ಆ ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದರು.

  • ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ

    ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ

    – ಸ್ಪೀಕರ್ ಮಾತಿಗೆ ಆರಗ ಜ್ಞಾನೇಂದ್ರ ತಮಾಷೆ

    ಬೆಂಗಳೂರು: ವಿಧಾನಸೌಧದಲ್ಲೇ ಶಾಸಕರಿಗೆ (Vidhanasoudha MLA) ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಸ್ಪೀಕರ್ ಖಾದರ್ (UT Khader) ಅವರು ಇಂದು ಸದನದಲ್ಲಿ ಘೋಷಣೆ ಮಾಡಿದ್ದಾರೆ.

    ಈಗಾಗಲೇ ಬೆಳಗ್ಗೆ ತಿಂಡಿಯ ವ್ಯವಸ್ಥೆ ಮಾಡಿರುವ ಸ್ಪೀಕರ್, ಇದೀಗ ತಿಂಡಿ ಜೊತೆಗೆ ಊಟವೂ ಫ್ರೀ ಎಂದು ಹೇಳಿದ್ದಾರೆ. ಶಾಸಕರಿಗೆ ಮಧ್ಯಾಹ್ನದ ಊಟಕ್ಕೂ ವಿಧಾನಸೌಧದಲ್ಲೇ ವ್ಯವಸ್ಥೆ ಮಾಡಲಾಗುವುದು. ನೀವು ಎಲ್ಲಿ ಹೋದರೂ ಇಲ್ಲಿಗಿಂತ ಬೆಸ್ಟ್‌ ಊಟ ನಿಮಗೆ ಸಿಗಲ್ಲ ಎಂದು ಖಾದರ್ ಹೇಳಿದ್ದಾರೆ. ಸ್ಪೀಕರ್ ಮಾತಿಗೆ ಮಾಜಿ ಸಚಿವ ಆರಗ ಜ್ಞಾನೆಂದ್ರ (Araga Jnanendra) ತಮಾಷೆ ಮಾಡಿದ್ದಾರೆ. ಜೊತೆಗೆ ಹಾಸಿಗೆ, ದಿಂಬು ಕೊಟ್ಬಿಡಿ, ಇಲ್ಲೇ ಸುಖವಾಗಿ ನಿದ್ದೇನೂ ಮಾಡಿಬಿಡ್ತೀವಿ ಎಂದು ಹೇಳುವ ಮೂಲಕ ಖಾದರ್ ಕಾಲೆಳೆದಿದ್ದಾರೆ.

    ಊಟದ ವ್ಯವಸ್ಥೆ ಯಾಕೆ?: ಶಾಸಕರು ಸಮಯಕ್ಕೆ ಸರಿಯಾಗಿ ಬರದೇ ಮಧ್ಯಾಹ್ನದ ಕಲಾಪ ಆರಂಭ ವಿಳಂಬ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಈ ಘೋಷಣೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್

    ಈ ಹಿಂದೆಯೂ ಶಾಸಕರು ಲೇಟಾಗಿ ಬಂದಿದ್ದಾಗ ಸ್ಪೀಕರ್ ಪ್ರಶ್ನೆ ಮಾಡಿದ್ದರು. ಈ ವೇಳೆ ಶಾಸಕರು ಬಾಲಿಶವಾದ ಉತ್ತರಗಳನ್ನು ನೀಡಿದ್ದರು. ಒಬ್ಬರು ಶರ್ಟ್ ಚೇಂಜ್ ಮಾಡಿ ಬರುವಾಗ ತಡವಾಯಿತು. ಮೀಟಿಂಗ್ ರೂಂನಲ್ಲಿ ಕಾಯ್ತಾ ಇದ್ದೆವು, ಹೀಗಾಗಿ ನಮಗೆ ಗೊತ್ತಾಗಿಲ್ಲ ಅಂತೆಲ್ಲ ಹೇಳಿದ್ದರು. ಹೀಗೆ ಶಾಸಕರು ಕಲಾಪಕ್ಕೆ ತಡವಾಗಿ ಬರುತ್ತಿರುವುದರಿಂದ ಬೇಸತ್ತು ಸ್ಪೀಕರ್ ಈ ನಿರ್ಧಾರಕ್ಕೆ ಬಂದಿದ್ದಾರೆ.

  • ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಎಂದು 7 ಲಕ್ಷ ಪಡೆದು ಎಸ್ಕೇಪ್!

    ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಎಂದು 7 ಲಕ್ಷ ಪಡೆದು ಎಸ್ಕೇಪ್!

    ಬೆಂಗಳೂರು: ಬಿಟ್ಟು ಹೋದ ಗಂಡನನ್ನು ಜೊತೆಯಾಗಿರುವಂತೆ ಮಾಡುತ್ತೇನೆ ಎಂದು ಮಹಿಳೆಯೊಬ್ಬರಿಗೆ ವಂಚಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಫಾತಿಮಾ ಎಂಬ ಮಹಿಳೆಗೆ ಹಜರತ್ ನೂರ್ ಮೊಹಮ್ಮದ್ ಎಂಬಾತ ವಂಚಿಸಿರುವುದು ಬಯಲಾಗಿದೆ. ಈತ ಫಾತಿಮಾ ಹೆಸರಲ್ಲಿ ಲಕ್ಷ ಲಕ್ಷ ಲೋನ್ ಮಾಡಿಸಿ ಹಣ ಪಡೆದು ಸಿನಿಮೀಯ ಶೈಲಿಯಲ್ಲಿ ವಂಚನೆ ಮಾಡಿದ್ದಾನೆ. ಇದನ್ನೂ ಓದಿ: ಬಸ್ ಅಪಘಾತ ತಡೆಗೆ ಟೆಕ್ನಾಲಜಿ ಮೊರೆ ಹೊದ BMTC – ಏನಿದು ಅಡಾಸ್ ಸಿಸ್ಟಮ್‌?

    ನೀರಾವರಿ ಇಲಾಖೆಯಲ್ಲಿ ಎಫ್‍ಡಿಎ ಅಧಿಕಾರಿಯಾಗಿರೋ ಫಾತಿಮಾ ಪತಿ ಬಿಟ್ಟೋಗಿದ್ದು, ಮೂರು ವರ್ಷದ ಮಗುವಿನ ಕೈಗೆ ಗಾಯದ ಸಮಸ್ಯೆಯಿತ್ತು. ಪಕ್ಕದ ಮನೆಯರ ಮಾತು ಕೇಳಿ ನಾಗಮಂಗಲದಲ್ಲಿರೋ ಹಜರತ್ ನೂರ್ ಸಂಪರ್ಕ ಮಾಡಿ ಔಷಧಿ ಕೊಡಿಸಿದ್ರು. ಕಾಕತಾಳಿಯ ಎಂಬಂತೆ ಮಗುವಿಗೆ ಕೈ ಒಂದು ವಾರದಲ್ಲಿ ಸರಿಹೋಗಿತ್ತು. ಇದರಿಂದ ಹಜರತ್ ನನ್ನ ಸಂಪೂರ್ಣ ನಂಬಿದ್ದ ಫಾತಿಮಾ, ಪತಿಯನ್ನ ತನ್ನ ಜೊತೆಗಿರುವಂತೆ ಮಾಡಿ ಎಂದು ಕೇಳಿಕೊಂಡಿದ್ದಳು.

    ಗಂಡ ನಿನ್ನ ಜೊತೆಗೇ ಇರುವಂತೆ ಮಾಡ್ತೀನಿ ಅಂತ ಹಜರತ್ ನೂರ್ ಒಂದು ಲಕ್ಷ ಹಣ ಪಡೆದಿದ್ದ. ಆ ಬಳಿಕ ವೈಯಕ್ತಿಕ ಸಮಸ್ಯೆಯಿದೆ ಎಂದು ಲೋನ್ ಮಾಡಿಸಿ ಏಳು ಲಕ್ಷ ಪಡೆದಿದ್ದ. ಪ್ರತಿ ತಿಂಗಳು ಇಂತಿಷ್ಟು ಹಣ ಕಟ್ಟುತ್ತೇನೆ ಅಂತೇಳಿ ಹಣ ಕೈಗೆ ಬಂದ ತಕ್ಷಣ ಎಸ್ಕೇಪ್ ಆಗಿದ್ದಾನೆ. ಸದ್ಯ ವಂಚನೆ ಕೇಸ್‍ನಲ್ಲಿ ಶಿರಾ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

    ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ (Vidhanasoudha Police Station) ಪ್ರಕರಣ ದಾಖಲಾಗಿದೆ.

  • ವಿಧಾನಸೌಧದಲ್ಲಿ ನಮಾಜ್‍ಗೆ ಅನುಮತಿ ಕೇಳಿದ ಜೆಡಿಎಸ್ ಸದಸ್ಯ

    ವಿಧಾನಸೌಧದಲ್ಲಿ ನಮಾಜ್‍ಗೆ ಅನುಮತಿ ಕೇಳಿದ ಜೆಡಿಎಸ್ ಸದಸ್ಯ

    ಬೆಂಗಳೂರು: ವಿಧಾನಸೌಧದಲ್ಲಿ (Vidhanasoudha) ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ (JDS Parishad) ಸದಸ್ಯ ಫಾರೂಕ್ (Farooq) ಒತ್ತಾಯ ಮಾಡಿದ್ದಾರೆ.

    ವಿಧಾನಸೌಧದಲ್ಲಿ ನಮಗೆ ನಮಾಜ್‍ಗೆ ಕೊಠಡಿ ವ್ಯವಸ್ಥೆ ಮಾಡಿಕೊಡಿ ಎಂದು ವಿಧಾನ ಪರಿಷತ್‍ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ.

    ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ

    ಇತ್ತ ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್‍ಸಿ ನಾರಾಯಣಸ್ವಾಮಿ. ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾಸಕರ ಸೀಟ್‍ನಲ್ಲಿ ಕುಳಿತಿದ್ದಿದ್ದು ಕರಿಯಪ್ಪ!

    ಶಾಸಕರ ಸೀಟ್‍ನಲ್ಲಿ ಕುಳಿತಿದ್ದಿದ್ದು ಕರಿಯಪ್ಪ!

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ (Karnataka Budget 2023) ಮಂಡನೆಯ ವೇಳೆ ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ ಯಾನೇ ತಿಪ್ಪೇರುದ್ರ ಎಂದು ಗುರುತಿಸಲಾಗಿದೆ.

    ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ಕರಿಯಪ್ಪ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. 70 ವರ್ಷದ ಈ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಗಂಭೀರವಾಗಿ ಪರಿಗಣಿಸಿದ್ದಾರೆ.

    ಯಾವ ಶಾಸಕರ ಹೆಸರನ್ನು ಬಳಸಿ ಒಳಹೋಗಿದ್ದ?, ಆಸನದಲ್ಲಿ ಕುಳಿತುಕೊಂಡಿದ್ದು ಯಾಕೆ? ಹಾಗೂ ಯಾವ ದಾಖಲೆಗಳು ತನ್ನ ಬಳಿಯಿದ್ದವು ಅನ್ನೋದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸದನದಲ್ಲಿ ಭದ್ರತಾ ಲೋಪ – ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಖಾಸಗಿ ವ್ಯಕ್ತಿ

    ಸದನದೊಳಗೆ ಎಂಟ್ರಿ ಆಗಿದ್ದು ಹೇಗೆ?: ಸುಮಾರು 70 ರಿಂದ 72 ವರ್ಷದ ವ್ಯಕ್ತಿ ನೇರವಾಗಿ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಎಂಟ್ರಿ ಭಾಗದಲ್ಲಿದ್ದ ಮಾರ್ಷಲ್ಸ್ ಯಾರು ನೀವು ಅಂತಾ ಪ್ರಶ್ನೆ ಮಾಡಿದ್ದಾರೆ. ಆಗ ವ್ಯಕ್ತಿ ನಾನು ಶಾಸಕ ಗೊತ್ತಾಗಲ್ವಾ ಅಂತಾ ಅವಾಜ್ ಹಾಕಿದ್ದು, ಮಾರ್ಷಲ್ಸ್ ಐಡಿ ಕೊಡಿ ಸಾರ್ ಎಂದಿದ್ದಾರೆ. ಐಡಿ ಯಾಕ್ರೀ ನಾನು ಮೊಳಕಾಲ್ಮೂರು ಶಾಸಕ. ಐಡಿ ಕಾರಿನ ಬಳಿ ಇದೆ ಎಂದು ವ್ಯಕ್ತಿ ಗದರಿದ್ದಾರೆ. ಹೀಗಾಗಿ ಮಾರ್ಷಲ್ಸ್ ಒಳಪ್ರವೇಶಿಸಲು ಅವಕಾಶ ಕೊಟ್ಟಿದ್ದಾರೆ.

    ಒಳ ಹೋದ ಬಳಿಕ ನೇರವಾಗಿ ಸದನದ ಸದಸ್ಯರ ಜಾಗದಲ್ಲಿ ಕುಳಿತಿದ್ದಾರೆ. ಈ ವೇಳೆ ಅನುಮಾನಗೊಂಡ ಶಾಸಕ ಶರಣ ಗೌಡ ಅವರು ಅಕ್ಕ-ಪಕ್ಕದಲ್ಲಿದ್ದ ಬೇರೆ ಶಾಸಕರ ಬಳಿಯೂ ವಿಚಾರಿಸಿದ್ದಾರೆ. ಎಲ್ಲರೂ ನಮಗೆ ಪರಿಚಯ ಇಲ್ಲ ಅಂತಾ ಉತ್ತರಿಸಿದ್ದಾರೆ. ಹೀಗಾಗಿ ಶಾಸಕರು ನೇರವಾಗಿ ವ್ಯಕ್ತಿಯನ್ನೇ ಕೃಳಿದ್ದಾರೆ. ಆಗ ಅವರು ನಾನು ಮೊಳಕಾಲ್ಮೂರು ಶಾಸಕ ಎಂದಿದ್ದಾರೆ.

    ತಕ್ಷಣ ಅನುಮಾನಗೊಂಡ ಶಾಸಕರು ಕಾರ್ಯದರ್ಶಿ ಗಮನಕ್ಕೆ ತಂದು ಸ್ಪೀಕರ್‍ಗೆ ದೂರು ನೀಡಿದ್ದಾರೆ. ಅದಾದ ಬಳಿಕ ಸ್ಪೀಕರ್ ರಿಂದ ಮಾರ್ಷಲ್ಸ್ ಮೂಲಕ ವ್ಯಕ್ತಿಯನ್ನು ಹೊರಗೆ ಕಳುಹಿಸಲಾಗಿದೆ. ಕೂಡಲೇ ವಿಧಾನಸೌಧ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುರಿ ಲೆಕ್ಕ ಹಾಕಲು ಬಾರದವನಿಗೆ ಹಣಕಾಸು ಖಾತೆ ಯಾಕೆ ಎಂದಿದ್ದವರಿಗೆ 13 ಬಜೆಟ್‌ ಮಂಡಿಸಿ ಠಕ್ಕರ್‌ ಕೊಟ್ಟ ‘ಟಗರು’!

    ಕುರಿ ಲೆಕ್ಕ ಹಾಕಲು ಬಾರದವನಿಗೆ ಹಣಕಾಸು ಖಾತೆ ಯಾಕೆ ಎಂದಿದ್ದವರಿಗೆ 13 ಬಜೆಟ್‌ ಮಂಡಿಸಿ ಠಕ್ಕರ್‌ ಕೊಟ್ಟ ‘ಟಗರು’!

    ಸಿದ್ದರಾಮನಹುಂಡಿ ಎಂಬ ಕುಗ್ರಾಮದಿಂದ ವಿಧಾನಸೌಧದ ಅಧಿಕಾರದ ಗದ್ದುಗೆವರೆಗೆ ಸಿದ್ದರಾಮಯ್ಯ ನಡೆದುಬಂದ ಹಾದಿಯೇ ರೋಚಕ. ಬಡ ರೈತ ಕುಟುಂಬ ಹಿನ್ನಲೆಯ, ತಳಸಮುದಾಯದ ವ್ಯಕ್ತಿಯೊಬ್ಬ ರಾಜಕೀಯದಲ್ಲಿ ಬೆಳೆದು ಉತ್ತಮ ಸ್ಥಾನಗಳನ್ನು ಅಲಂಕರಿಸಿ ಎದೆಯುಬ್ಬಿಸಿ ನಡೆಯುತ್ತಿದ್ದದ್ದು, ಅನೇಕರ ಕಣ್ಣು ಕೆಂಪಾಗಿಸಿತ್ತು. ವ್ಯಕ್ತಿ ಎಷ್ಟು ಎತ್ತರಕ್ಕೇ ಬೆಳೆದರೂ, ಕೌಟುಂಬಿಕ ಹಿನ್ನೆಲೆಯನ್ನು ಮುಂದೆ ತಂದು ಸಿದ್ದರಾಮಯ್ಯ ಅವರನ್ನು ಟೀಕಿಸಿದವರಿಗೇನು ಕಮ್ಮಿಯಿಲ್ಲ.

    ಅದು 1994ರ ಸಂದರ್ಭ. ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸಿದ್ದರಾಮಯ್ಯ ಅವರು ಹೆಚ್‌.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾದರು. ಆ ಸಂದರ್ಭದಲ್ಲಿ ಅವರು ಬಯಸಿದ್ದು ಕಂದಾಯ ಇಲಾಖೆ ಖಾತೆ. ಆದರೆ ಸಿಕ್ಕಿದ್ದು ಹಣಕಾಸು ಖಾತೆ. ಆಗ ಸಿದ್ದರಾಮಯ್ಯರನ್ನು ಅನೇಕರು ಲೇವಡಿ ಮಾಡಿದ್ದರು. “ಸಿದ್ದರಾಮಯ್ಯಗೆ ಕುರಿ ಲೆಕ್ಕ ಹಾಕಲು ಬರುವುದಿಲ್ಲ. ಈತ ಹೇಗೆ ಹಣಕಾಸು ಸಚಿವನಾಗುತ್ತಾನೆ” ಅಂತ ಕುಹಕದ ಮಾತುಗಳು ಕೇಳಿಬಂದಿದ್ದವು. ಇದನ್ನೂ ಓದಿ: ತಂದೆಗೆ ಮಗ ಡಾಕ್ಟರ್‌ ಆಗ್ಬೇಕು ಅನ್ನೋ ಆಸೆ; ಆದ್ರೆ ಸಿದ್ದು ಆಗಿದ್ದು ವಕೀಲ, ಮಾಡಿದ್ದು ರಾಜಕೀಯ

    ಈ ನಿಂದನೆ, ಲೇವಡಿ, ಅಪಮಾನವನ್ನು ಸವಾಲಾಗಿಯೇ ಸ್ವೀಕರಿಸಿದ ಸಿದ್ದರಾಮಯ್ಯ ಆಗಿನ ಸಂದರ್ಭದಲ್ಲಿ ತಮ್ಮ ಮೊದಲ ಬಜೆಟ್‌ ಮಂಡಿಸಿ ತನ್ನನ್ನು ಟೀಕಿಸಿದವರೇ ಅಚ್ಚರಿ ಪಡುವಂತೆ ಮಾಡಿದ್ದರು. ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಆಗ ಭರಪೂರ ಪ್ರಶಂಸೆ ವ್ಯಕ್ತವಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಸಿದ್ದರಾಮಯ್ಯ ಅವರು ಬರೋಬ್ಬರಿ 13 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ ಏಳು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದಲ್ಲಿ 2005-07 ಮತ್ತು ಆಗಿನ ಜೆಡಿ ಸರ್ಕಾರದಲ್ಲಿ 1995-2000 ವರೆಗೆ. 1995 ಮತ್ತು 1996 ರಲ್ಲಿ ಹೆಚ್‌.ಡಿ. ದೇವೇಗೌಡರ ಅಡಿಯಲ್ಲಿ ಎರಡು ಬಾರಿ. 1997, 1998 ಮತ್ತು 1999 ರಲ್ಲಿ ಜೆ.ಹೆಚ್. ಪಟೇಲ್ ಅವರ ಅಡಿಯಲ್ಲಿ ಮೂರು ಬಾರಿ. 2005 ಮತ್ತು 2006 ರಲ್ಲಿ ಎನ್. ಧರಂ ಸಿಂಗ್ ನೇತೃತ್ವದಲ್ಲಿ ಬಜೆಟ್ ಮಂಡಿಸಿದ್ದಾರೆ.

    2013ರಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ಆಗ ಹಣಕಾಸು ಖಾತೆಯನ್ನೂ ಹೊಂದಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸತತ 6 ಬಜೆಟ್ ಮಂಡಿಸಿದ್ದಾರೆ. ಇದನ್ನೂ ಓದಿ: ನುಗ್ಗೆಕಾಯಿ, ಅವರೆಕಾಳು ಸಾರು, ರೇಷ್ಮೆ ಬಟ್ಟೆ, ಪುನೀತ್‌ ಸಿನಿಮಾ ಅಂದ್ರೆ ಡಿಕೆಶಿಗೆ ಪ್ರಾಣ

    ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಅಷ್ಟೇ ಅಲ್ಲ ತಮ್ಮ 14ನೇ ಬಜೆಟ್‌ ಮಂಡಿಸಲು ಸಹ ಅವರು ಸಜ್ಜಾಗಿದ್ದಾರೆ.