Tag: vidvat

  • ನನ್ನ ಹಣೆ ಬರಹವೇ ಸರಿ ಇಲ್ಲ- ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಜೈಲಿನಲ್ಲಿ ಗೋಳಾಡಿದ ನಲಪಾಡ್

    ನನ್ನ ಹಣೆ ಬರಹವೇ ಸರಿ ಇಲ್ಲ- ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಜೈಲಿನಲ್ಲಿ ಗೋಳಾಡಿದ ನಲಪಾಡ್

    ಬೆಂಗಳೂರು: ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಜೈಲಿನ ಅಧೀಕ್ಷಕರ ಕೊಠಡಿಯಲ್ಲಿ ಟಿವಿ ನೋಡುತ್ತಿದ್ದ ನಲಪಾಡ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಅಲ್ಲದೇ ಜೊತೆಯಲ್ಲಿದ್ದ ಸ್ನೇಹಿತರ ಮುಂದೆಯೇ ಜೋರಾಗಿ ಕೂಗಾಡಿದ್ದಾನೆ ಎಂದು ಜೈಲಿನ ಮೂಲಗಳಿಂದ ತಿಳಿದುಬಂದಿದೆ.

    ನನ್ನ ಹಣೆ ಬರಹವೇ ಸರಿ ಇಲ್ಲ ಎಂದು ಗೋಳಾಡುತ್ತಿರುವ ನಲಪಾಡ್, ಬೇಸರ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ. ಅರ್ಜಿ ವಿಚಾರಣೆ ತೀರ್ಪು ಹೊರಬೀಳುತ್ತಿದ್ದಂತೆಯೇ ಕೋರ್ಟ್ ಆವರಣದಲ್ಲಿದ್ದ ನಲಪಾಡ್ ಬೆಂಬಲಿಗರು ನಿರಾಶೆಯಿಂದ ಹಿಂದಿರುಗಿದ್ದಾರೆ. ಆದ್ರೆ ಈ ಕುರಿತು ನಲಪಾಡ್ ತಂದೆ ಇದೂವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಪ್ರಕರಣ ಸಂಬಂಧ ಇತರೆ 6 ಜನ ಆರೋಪಿಗಳ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ. ಇದೊಂದು ಗಂಭೀರವಾರ ಪ್ರಕರಣವಾಗಿದ್ದು ಕೇಸ್ ವಿಚಾರಣೆ ತನಿಖಾ ಹಂತದಲ್ಲಿದೆ. ಹಲ್ಲೆಯ ಬಳಿಕ ಆರೋಪಿ ಆಸ್ಪತ್ರೆವರೆಗೂ ಹಿಂಬಾಲಿಸಿ ದುವರ್ತನೆ ತೋರಿರುವುದನ್ನು ಗಮನಿಸಲಾಗಿದೆ ಎಂದು ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಇಂದು ಬೆಳಗ್ಗೆ ಜಾಮೀನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದ ಎಂದು ಜೈಲಿನ ಮುಲಗಳಿಂದ ತಿಳಿದುಬಂದಿತ್ತು. ಒಂದು ವೇಳೆ ಜಾಮೀನು ಕೊಡಿಸಲು ಆಗದಿದ್ದರೆ ಹೊರಗಡೆ ನನ್ನ ಹುಡುಗರಿದ್ದಾರೆ. ಅವರಿಂದ ನಾನು ಜಾಮೀನು ತರಿಸಿಕೊಳ್ಳುತ್ತೇನೆ ಎಂದು ನಲಪಾಡ್ ತಂದೆಯನ್ನು ತರಾಟೆಗೆ ತಗೊಂಡಿದ್ದಾನೆ ಎನ್ನಲಾಗಿದೆ. ಜೈಲಿಗೆ ಬಂದು ಇಷ್ಟು ದಿನ ಆಯ್ತು. ಒಂದು ದಿನವೂ ಕೂಡ ನನ್ನನ್ನು ನೋಡಲು ಬಂದಿಲ್ಲ. ನಾನು ಜೈಲಿನಿಂದ ಹೊರ ಬಂದ ಮೇಲೆ ನಿಂಗೆ ಇದೆ ನೋಡು. ಇವತ್ತು ಜೈಲಿಗೆ ಬಂದು ನನ್ನ ನೋಡ್ಲೆಬೇಕು ಎಂದು ತನ್ನ ತಂದೆಯೊಂದಿಗೆ ಉರ್ದು ಭಾಷೆಯಲ್ಲಿ ಹೇಳಿ ಹಠ ಹಿಡಿದಿದ್ದಾನೆ ಎಂದು ತಿಳಿದುಬಂದಿತ್ತು.

  • ಜಾಮೀನು ಅರ್ಜಿ ತಿರಸ್ಕೃತ- ನಲಪಾಡ್ ಗೆ ಜೈಲೇ ಗತಿ

    ಜಾಮೀನು ಅರ್ಜಿ ತಿರಸ್ಕೃತ- ನಲಪಾಡ್ ಗೆ ಜೈಲೇ ಗತಿ

    ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

    ಅರ್ಜಿ ವಿಚಾರಣೆ ನಡೆಸಿದ 63ನೇ ಸಿಸಿಎಚ್ ನ್ಯಾಯಾಲಯ ನಲಪಾಡ್ ಮತ್ತು ತಂಡದ ಜಾಮೀನು ಅರ್ಜಿ ವಜಾ ಮಾಡಿದೆ. ಹೀಗಾಗಿ ನಲಪಾಡ್ ಗಳಗಳನೆ ಅಳಲು ಶುರುಮಾಡಿದ್ದಾನೆ ಎಂದು ತಿಳಿದುಬಂದಿದೆ. ನಲಪಾಡ್ ಮತ್ತು ಗ್ಯಾಂಗ್ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ನಲಪಾಡ್‍ನಿಂದ ಹೆಲ್ಲೆಗೊಳಗಾದ ವಿದ್ವತ್ ಇನ್ನೂ ಪೊಲೀಸರ ಮುಂದೆ ಹೇಳಿಕೆ ನೀಡಲು ಸಾಧ್ಯವಾಗಿಲ್ಲ. ವಿದ್ವತ್ ಆರೋಗ್ಯ ಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿ ಜಾಮೀನು ಅರ್ಜಿ ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

    ನನ್ನ ಕಕ್ಷಿದಾರ (ನಲಪಾಡ್) ಅಮಾಯಕ. ಅವರ ಮೇಲೆ ರಾಜಕೀಯ ಒತ್ತಡಕ್ಕೆ ಇಲ್ಲಸಲ್ಲದ ಕೇಸ್ ಗಳನ್ನು ಹಾಕಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿಯಾಗಿ ವಾದಿಸಿದ್ದ ವಿಶೇಷ ಅಭಿಯೋಜಕರಾದ ಶ್ಯಾಮ್ ಸುಂದರ್, ಈ ಪ್ರಕರಣ ದೇಶದ ಗಮನ ಸೆಳೆದಿದೆ. ಆರೋಪಿ ಪ್ರಬಲನಾಗಿರುವುದರಿಂದ ಸಾಕ್ಷಿ ನಾಶವಾಗುವ ಸಂಭವ ಇದೆ. ಹೀಗಾಗಿ ಜಾಮೀನು ನೀಡಬಾರದು ಅಂತ ವಾದ ಮಂಡಿಸಿದ್ದರು. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಇಂದು ಬೆಳಗ್ಗೆ ಜಾಮೀನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದ ಎಂದು ಜೈಲಿನ ಮುಲಗಳಿಂದ ತಿಳಿದುಬಂದಿತ್ತು. ಒಂದು ವೇಳೆ ಜಾಮೀನು ಕೊಡಿಸಲು ಆಗದಿದ್ದರೆ ಹೊರಗಡೆ ನನ್ನ ಹುಡುಗರಿದ್ದಾರೆ. ಅವರಿಂದ ನಾನು ಜಾಮೀನು ತರಿಸಿಕೊಳ್ಳುತ್ತೇನೆ ಎಂದು ನಲಪಾಡ್ ತಂದೆಯನ್ನು ತರಾಟೆಗೆ ತಗೊಂಡಿದ್ದಾನೆ ಎನ್ನಲಾಗಿದೆ. ಜೈಲಿಗೆ ಬಂದು ಇಷ್ಟು ದಿನ ಆಯ್ತು. ಒಂದು ದಿನವೂ ಕೂಡ ನನ್ನನ್ನು ನೋಡಲು ಬಂದಿಲ್ಲ. ನಾನು ಜೈಲಿನಿಂದ ಹೊರ ಬಂದ ಮೇಲೆ ನಿಂಗೆ ಇದೆ ನೋಡು. ಇವತ್ತು ಜೈಲಿಗೆ ಬಂದು ನನ್ನ ನೋಡ್ಲೆಬೇಕು ಎಂದು ತನ್ನ ತಂದೆಯೊಂದಿಗೆ ಉರ್ದು ಭಾಷೆಯಲ್ಲಿ ಹೇಳಿ ಹಠ ಹಿಡಿದಿದ್ದಾನೆ ಎಂದು ತಿಳಿದುಬಂದಿತ್ತು.

     

  • ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಬೆಂಗಳೂರು: ಫರ್ಜಿ ಕೆಫೆಯಲ್ಲಿ ಅಟ್ಟಹಾಸ ಮೆರೆದಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಕೊನೆಗೂ ಜೈಲು ಸೇರಿದ್ದಾನೆ. ಕಳೆದೆರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು ಆತನ 6 ಸಹಚರರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

    ನ್ಯಾಯಾಧೀಶ ಮಹೇಶ್ ಬಾಬು ಈ ಆದೇಶ ಹೊರಡಿಸುತ್ತಲೇ ಕಟಕಟೆಯಲ್ಲಿ ನಿಂತಿದ್ದ ನಲಪಾಡ್ ಗಳಗಳನೆ ಕಣ್ಣೀರಿಟ್ಟದ್ದಾನೆ. ಆದೇಶ ಹೊರಬಿದ್ದ ಕೂಡಲೇ ನಲಪಾಡ್ ಹಾಗೂ ಆತನ ಸಹಚರರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ನ್ಯಾಯಾಲಯದ ಆದೇಶದಂತೆ ನಲಪಾಡ್ ಹಾಗೂ ಆತನ ಸ್ನೇಹಿತರು ಮಾರ್ಚ್ 7 ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಲಿದ್ದಾರೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಮಧ್ಯಂತರ ಅರ್ಜಿ ನಾಳೆ ವಿಚಾರಣೆಗೆ ಬರಲಿದೆ. ನಲಪಾಡ್ ಪ್ರಕರಣ ಸಂಬಂಧ ಶ್ಯಾಂ ಸುಂದರ್ ರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸುವಂತೆ ವಿದ್ವತ್ ತಂದೆ ಲೋಕನಾಥ್ ರಾಜ್ಯ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇಷ್ಟೆಲ್ಲಾ ಆದರೂ ಶಾಸಕ ಎನ್‍ಎ ಹ್ಯಾರೀಸ್ ಮಗನನ್ನು ನೋಡಲು ಭೇಟಿ ನೀಡಿಲ್ಲ. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    8ನೇ ಎಸಿಎಂಎಂ ನ್ಯಾಯಾಯದಲ್ಲಿ ಕಲಾಪ ಹೀಗಿತ್ತು:
    ನಗರದ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾ. ಮಹೇಶ್ ಬಾಬು ಅವರ ಸಮ್ಮುಖದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರ ವಕೀಲರು ಹಾಗೂ ಆರೋಪಿ ನಲಪಾಡ್ ಪರ ವಕೀಲರು ನ್ಯಾಯಮೂರ್ತಿಗಳ ಮುಂದೇ ತಮ್ಮ ವಾದ ಮಂಡಿಸಿದರು.

    ಕೋರ್ಟ್‍ನಲ್ಲಿದ್ದ ವಕೀಲರು – ಕೋರ್ಟ್ ಹಾಲ್‍ನಲ್ಲಿ ಬರೀ ಗೂಂಡಾಗಳೇ ತುಂಬಿದ್ದಾರೆ. ಪೊಲೀಸರಿಗೆ ಕೂಡಲೇ ಎಲ್ಲರನ್ನೂ ಹೊರಗೆ ಕಳುಹಿಸಲು ಸೂಚಿಸಿ ಎಂದರು. ವಕೀಲರ ಮನವಿಯಂತೆ ಕೋರ್ಟ್ ಹಾಲ್ ನಿಂದ ಆರೋಪಿಗಳನ್ನು ಹೊರತು ಪಡಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದರು.

    ಸರ್ಕಾರಿ ಪರ ವಕೀಲರು – ಕೇಸ್ ಇನ್ನೂ ಪ್ರಾಥಮಿಕ ವಿಚಾರಣೆ ಹಂತದಲ್ಲಿದೆ. ಹಲ್ಲೆಗೊಳಗಾದ ವ್ಯಕ್ತಿಯ ಮೂಳೆಗಳು ಮುರಿದಿವೆ. ಇದು ಸಿಸಿಟಿವಿಯ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಆರೋಪಿಗಳು ಆಸ್ಪತ್ರೆಗೂ ತೆರಳಿ ಹಲ್ಲೆಗೆ ಯತ್ನಿಸಿದ್ದಾರೆ. ಜಾಮೀನು ಮಂಜೂರು ಮಾಡಬೇಡಿ.

    ನ್ಯಾಯಾಧೀಶರು – ಇನ್ನೂ ಹೇಳುವುದು ಏನಾದರೂ ಇದೆಯಾ ?
    ಸರ್ಕಾರಿ ಪರ ವಕೀಲರು – ನಲಪಾಡ್ ಅಂಡ್ ಗ್ಯಾಂಗ್ ಸುಖಾಸುಮ್ಮನೆ ಹಲ್ಲೆ ಮಾಡಿಲ್ಲ. ವಿದ್ವತ್‍ರನ್ನು ಪ್ರಚೋದನೆ ಮಾಡಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೂ ನುಗ್ಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳು ಕೂಡ ಕೊಲೆ ಮಾಡಲು ಹೋಗಿದ್ದಾಗಿ ಒಪ್ಪಿಕೊಂಡಿದ್ದಾರೆ.

    ಸರ್ಕಾರಿ ಪರ ವಕೀಲರು – ವಿದ್ವತ್ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ನಮಗೆ ಆಕ್ಷೇಪಣೆ ಸಲ್ಲಿಸಲು ನಾಳೆಯವರೆಗೂ ಅವಕಾಶ ನೀಡಿ.

    ನ್ಯಾಯಾಧಿಶರು – ಓಕೆ.. ಆಕ್ಷೇಪಣೆ ಸಲ್ಲಸಲು ನಿಮಗೆ ನಾಳೆಯವರೆಗೆ ಕಾಲಾವಕಾಶ ನೀಡುತ್ತಿದ್ದೇವೆ.
    ನ್ಯಾಯಾಧೀಶರು – ನಲಪಾಡ್ ಮತ್ತು ಇತರೆ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗುತ್ತಿದೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಸಿಟಿ ಸಿವಿಲ್ ಕೋರ್ಟ್ ಕಲಾಪ ಹೀಗಿತ್ತು:
    ನಲಪಾಡ್ ಪರ ವಕೀಲರು ಸಲ್ಲಿಸಿದ್ದ ಜಾಮಿನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ನ್ಯಾಯಾಲಯದಲ್ಲಿ ವಿದ್ವತ್ ತಂದೆ ಸಹ ಹಾಜರಿದ್ದರು.

    ಉದ್ಯಮಿ ಅಲಂಪಾಶಾ ಪರ ವಕೀಲ – ಆಡಳಿತಾರೂಢ ಪಕ್ಷದ ಶಾಸಕರ ಪುತ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸರ್ಕಾರ ಪರ ಇದ್ದಾರೆ. ವಾದ ಮಂಡಿಸುತ್ತಿರುವ ವಕೀಲರು ಸರ್ಕಾರ ಪರ ಇದ್ದಾರೆ. ಹೀಗಾಗಿ ಜನಸಾಮಾನ್ಯರ ಪರವಾಗಿ ನಮ್ಮ ವಾದ ಮಂಡಿಸಲು ಅವಕಾಶ ನೀಡಿ.

    ನ್ಯಾಯಾಧೀಶರು – ಜಾಮೀನು ಅರ್ಜಿಯಲ್ಲಿ ಸೆಕ್ಷನ್ 307 ಉಲ್ಲೇಖವಿಲ್ಲ. ಅರ್ಜಿ ತಿದ್ದುಪಡಿ ಮಾಡಿ.
    ನಲಪಾಡ್ ಪರ ವಕೀಲ– ಅರ್ಜಿ ತಿದ್ದುಪಡಿ ಮಾಡಿ 307 ಸೆಕ್ಷನ್ ಸೇರಿಸಿ ನಂತರ ತಿದ್ದುಪಡಿ ಪತ್ರ ಸಲ್ಲಿಸಿದರು.

    ವಿದ್ವತ್ ತಂದೆ – ನಲಪಾಡ್ ಜಾಮೀನು ಅರ್ಜಿ ವೇಳೆ ನನ್ನ ವಾದವನ್ನು ಸಹ ಪರಿಗಣಿಸಿ ಎಂದು ಕೋರ್ಟ್‍ಗೆ ಅರ್ಜಿ ಸಲ್ಲಿಸಿದರು.
    ನ್ಯಾಯಾಧೀಶರು – ಅಲಂಪಾಶಾ, ವಿದ್ವತ್ ತಂದೆಯ ಅರ್ಜಿಯನ್ನು ವಿಚಾರಣೆ ವೇಳೆ ಪರಿಗಣಿಸಬೇಕೋ, ಅಥವಾ ಬೇಡವೋ ಎಂಬ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಶುಕ್ರವಾರ ಜಾಮೀನು ಅರ್ಜಿ ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    https://www.youtube.com/watch?v=p8o_3v5-ZYs

    https://www.youtube.com/watch?v=XE5CFfnOvx0

    https://www.youtube.com/watch?v=RtMFKdQtfME

     

  • ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

    ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರೋಚಕ ತಿರುವೊಂದು ಸಿಕ್ಕಿದೆ. ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಸುದ್ದಿ ಹರಡುತ್ತಿದ್ದಂತೆಯೇ, ಇತ್ತ ಇಡೀ ಪ್ರಕರಣವನ್ನು ಮುಚ್ಚಿಹಾಕಲು ಪ್ಲಾನ್ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಘಟನೆ ನಡೆದ ಬಳಿಕ ಫರ್ಜಿ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳನ್ನೇ ಡಿಲೀಟ್ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ಪಾರ್ಟಿ ಹಾಲ್ ನ ಒಂದೇ ಒಂದು ತುಣುಕು ಇರುವ ದೃಶ್ಯ ರಿಲೀಸ್ ಆಗಿಲ್ಲ. ಅಷ್ಟೇ ಅಲ್ಲದೇ ಪಾರ್ಕಿಂಗ್ ನಲ್ಲಿ ಇದ್ದ ಸಿಸಿಟಿವಿ ದೃಶ್ಯವನ್ನು ಡಿಲೀಟ್ ಮಾಡಲಾಗಿದೆ ಎನ್ನುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ವಿಡಿಯೋದಲ್ಲೇನಿದೆ?: ಘಟನೆ ನಡೆದ ಬಳಿಕ ಒಂದು ವಿಡಿಯೋ ಲಭ್ಯವಾಗಿದ್ದು, ಪಾರ್ಟಿ ಹಾಲ್ ನಲ್ಲಿ ಗಲಾಟೆಯ ನಂತ ವಿದ್ವತ್ ಲಿಫ್ಟ್ ನಲ್ಲಿ ಇಳಿದು ಹೋಗಿದ್ದಾರೆ. ಫಸ್ಟ್ ಫ್ಲೋರ್ ನಲ್ಲಿ ಲಿಫ್ಟ್ ಇಳಿದ ವಿದ್ವತ್ ನನ್ನು ಮೆಟ್ಟಿಲುಗಳ ಮೇಲೆ ಹೊಡೆದು ಮತ್ತೆ ಪಾರ್ಟಿ ಹಾಲ್ ಗೆ ಎಳೆದುಕೊಂಡು ಹೋಗಿದ್ರು. ಮೆಟ್ಟಿಲುಗಳ ಮೇಲೆ ಎಳೆದುಕೊಂಡು ಹೋಗುವ ದೃಶ್ಯಾವಳಿ ಅದರಲ್ಲಿದೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ಆ ಸಂದರ್ಭದಲ್ಲಿ ಪೊಲೀಸರು ಬಂದು ನಲಪಾಡ್ ನನ್ನು ಹಿಡಿಯೋದಾಗ್ಲಿ ಅಥವಾ ಹೊಡೆಯೋದನ್ನ ನಿಲ್ಲಿಸೋದಾಗ್ಲಿ ಮಾಡಿಲ್ಲ. ನಂತರ ವಿದ್ವತ್ ನನ್ನು ಪಾರ್ಕಿಂಗ್ ಗೆ ಕರೆದುಕೊಂಡು ಹೋದಾಗ ಪಿಎಸ್‍ಐ ಗಿರೀಶ್ ಎಂಟ್ರಿ ಕೊಟ್ಟಿದ್ದಾರೆ. ಗಿರೀಶ್ ಅವರು ಬರುತ್ತಿದ್ದಂತೆಯೇ ಪಾರ್ಕಿಂಗ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಯುತ್ತಾ ಇತ್ತು. ಈ ಬಗ್ಗೆ ಗೊತ್ತಿದ್ದರೂ ಗಿರೀಶ್ ಅವರು ಪಾರ್ಕಿಂಗ್ ಲಾಟ್ ಗೆ ಹೋಗದೇ ಪಾರ್ಟಿ ಹಾಲ್ ಗೆ ಹೋಗಿದ್ದಾರೆ. ನಂತರಪಾರ್ಟಿ ಹಾಲ್‍ನಿಂದ ಕೆಳಗೆ ಬಂದಾಗ ಆರೋಪಿ ನಲಪಾಡ್ ಫರ್ಜಿ ಕೆಫೆ ಮುಂದೆ ನಿಂತಿದ್ದನು. ಈ ವೇಳೆ ಗಿರೀಶ್ ನಲಪಾಡ್ ನನ್ನು ನೋಡಿಯೂ ಸುಮ್ಮನೇ ನಿಂತಿದ್ದಾರೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    ಶಾಸಕರ ಪುತ್ರ ಎನ್ನುವ ಕಾರಣಕ್ಕೆ ಪ್ರಕರಣದ ಆರಂಭದಲ್ಲೇ ಬೆಂಗಳೂರು ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಆರೋಪ, ಅನುಮಾನಗಳಿಗೆ ಪುಷ್ಠಿ ಎನ್ನುವಂತೆ ಸಿಸಿ ಕ್ಯಾಮೆರಾದ ದೃಶ್ಯವಾಳಿಗಳನ್ನು ದಿನ ಕಳೆದರೂ ಪೊಲೀಸರು ರಿಲೀಸ್ ಮಾಡಿಲ್ಲ ಯಾಕೆ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ನಲಪಾಡ್ ಒಂದೊಂದೆ ಅಕ್ರಮಗಳು ಬಯಲಾಗುತ್ತಿದ್ದು, ಪ್ರಕರಣದ ಪ್ರಮುಖ ಸಾಕ್ಷಿಯಾಗಬೇಕಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ರಿಲೀಸ್ ಮಾಡಿದ್ದರೆ ಆ ಪಾರ್ಟಿಯಲ್ಲಿ ಯಾರೆಲ್ಲ ಭಾಗವಹಿಸಿದ್ದರು? ಘಟನೆ ಹೇಗಾಯ್ತು ಎನ್ನುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗಲಿದೆ. ಇದನ್ನೂ ಓದಿ: ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    https://www.youtube.com/watch?v=B-erXK9nl1M

    https://www.youtube.com/watch?v=TIPtfcxi6O4

    https://www.youtube.com/watch?v=vgXGeYC-QqU

    https://www.youtube.com/watch?v=ETcXE9RXvXE

    https://www.youtube.com/watch?v=bLWKOszy0uc