Tag: Vidwat

  • ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಇಂದು ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ

    ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಇಂದು ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ

    ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ..? ಬೇಲಾ..? ಎಂಬುದು ಇಂದು ಗೊತ್ತಾಗಲಿದೆ.

    ಹೌದು. ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸೋಮವಾರ ನಲಪಾಡ್ ಪರ ವಕೀಲ ಉಸ್ಮಾನ್ ವಾದ ಮುಕ್ತಾಯ ಮಾಡಿದ್ದಾರೆ. ಹೀಗಾಗಿ ಇಂದು ಎಸ್ ಪಿಪಿ ಅವರಿಂದ ಪ್ರತಿವಾದ ನಡೆಯಲಿದೆ.

    ಪ್ರತಿವಾದ ಬೇಗ ಮುಗಿದ್ರೆ ಇಂದೇ ತೀರ್ಪು ಸಿಗುವ ಸಾಧ್ಯತೆಗಳಿವೆ. 63 ನೇ ಸಿಸಿಎಚ್ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿದ್ವತ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

    ಈ ಹಂತದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಲು ಸಾಧ್ಯವಿಲ್ಲ. ಹಾಗಾಗಿ ಜಾಮೀನು ನೀಡುವಂತೆ ನಲಪಾಡ್ ಪರ ವಕೀಲರಿಂದ ವಾದ ಮಂಡಿಸಲಾಗಿತ್ತು. ಇಂದು ಕೂಡ ಸ್ಪೆಷಲ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಅವರಿಂದ ವಾದ ಮಂಡನೆ ನಡೆಯಲಿದೆ.

    ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

                                                                                      ವಿದ್ವತ್- ಹಲ್ಲೆಗೊಳಗಾದ ಯುವಕ.
  • ನಲಪಾಡ್ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ನಲಪಾಡ್ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಶಾಸಕ ಹ್ಯಾರೀಸ್ ಮಗ ನಲಪಾಡ್ ಹಾಗೂ ಆತನ ಸ್ನೇಹಿತರ ವಿರುದ್ಧ ಸಿಸಿಬಿ ತನಿಖಾಧಿಕಾರಿಗಳು ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಫೆಬ್ರವರಿ 17ರಂದು ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಗ್ಯಾಂಗ್ ಗಂಭೀರವಾಗಿ ಹಲ್ಲೆ ಮಾಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸಿಸಿಬಿ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಚಾರ್ಜ್ ಶೀಟ್‍ನಲ್ಲಿ ಏನಿದೆ?: ಆರೋಪಿಗಳ ಮತ್ತು ವಿದ್ವತ್ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಕೆಫೆ, ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಲಗತ್ತಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ವಿದ್ವತ್ ಆತನ ಸ್ನೇಹಿತರು, ಫರ್ಜಿ ಕೆಫೆ ಸಿಬ್ಬಂದಿ, ಮಲ್ಯ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 60 ಸಾಕ್ಷಿಗಳಿಂದ ಹೇಳಿಕೆಗಳನ್ನು ಚಾರ್ಜ್ ಶೀಟ್‍ನಲ್ಲಿ ದಾಖಲಿಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ನಲಪಾಡ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಅಶ್ರಫ್, ಬಾಲಕೃಷ್ಣ, ಅಭಿಷೇಕ್ ಮತ್ತು ನಾಸಿರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಸದ್ಯ ಎಲ್ಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಆರೋಪಿ ಕೃಷ್ಣ 2004 ರಿಂದಲೂ ಮೊಬೈಲ್ ಬಳಕೆ ಮಾಡುತ್ತಿಲ್ಲ. ಅವನು ವಿದೇಶಕ್ಕೆ ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.

  • ನಲಪಾಡ್ ಪ್ರಕರಣ: ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್ ವಿಚಾರಣೆ

    ನಲಪಾಡ್ ಪ್ರಕರಣ: ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್ ವಿಚಾರಣೆ

    ಬೆಂಗಳೂರು: ವಿದ್ವತ್ ಮೇಲೆ ನಲಪಾಡ್ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಆರ್.ವಿ ದೇವರಾಜ್ ಪುತ್ರ ಯುವರಾಜ್ ಸಿಸಿಬಿ ಪೋಲಿಸರ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೇಳಿಕೆಯನ್ನು ನೀಡಿದ್ದಾರೆ.

    ಮಂಗಳವಾರ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಸಿಸಿಬಿ ಕಚೇರಿಗೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಿದ್ರು. ಈ ವೇಳೆ ಸುನಿಲ್ ಬೋಸ್ ಮೂವರು ಪ್ರಭಾವಿ ರಾಜಕಾರಣಿಗಳ ಪುತ್ರರು ಹಲ್ಲೆ ನಡೆದ ದಿನದಂದು ಫರ್ಜಿ ಕೆಫೆಯಲ್ಲಿ ಇದ್ದರೆಂದು ಹೇಳಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಘಟನೆ ವೇಳೆ ಆರ್.ವಿ.ದೇವರಾಜ್ ಪುತ್ರ ಯುವರಾಜ್ ಸಹ ಇದ್ದರು ಎಂಬುದು ಸಿಸಿಬಿ ಪೊಲೀಸರಿಗೆ ತಿಳಿದು ಬಂದಿದೆ. ಇದನ್ನೂ ಓದಿ: ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ವಿಚಾರಣೆ

    ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಯುವರಾಜ್ ದೌಡಾಯಿಸಿ ಫರ್ಜಿ ಕೆಫೆಯಲ್ಲಿ ಗಲಾಟೆ ನಡೆಯುವ ಅರ್ಧ ಗಂಟೆ ಮುಂಚೆ ಊಟ ಮಾಡಲೆಂದು ಸ್ನೇಹಿತರ ಜೊತೆ ತೆರಳಿದ್ದೆ. ಗಲಾಟೆ ಗದ್ದಲ ನಡೆಯುತ್ತಿದ್ದಂತೆ ಅಲ್ಲಿಂದ ಹೊರ ಬಂದೆವು. ನಾನು ಫರ್ಜಿ ಕೆಫೆಗೆ ಹೋಗುವ ಮೊದಲೆ ಗಲಾಟೆ ನಡೆದಿತ್ತು. ನಾನು ಕೆಫೆಗೆ ಹೋದಾಗ ಗಲಾಟೆ ವಿಚಾರ ನನಗೆ ತಿಳಿಸಿದ್ದು ಅಂಬರೀಶ್ ಮಗ ಅಭಿಷೇಕ್. ಒಂದು ವೇಳೆ ಗಲಾಟೆ ವೇಳೆ ತಾನು ಅಲ್ಲೆ ಇದ್ದಿದ್ದರೆ ಗಲಾಟೆ ನಡೆಯಲು ಬಿಡುತ್ತಿರಲಿಲ್ಲಾ ಎಂದು ಯುವರಾಜ್ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಯುವರಾಜ್ ಸದ್ಯ ಸುದಾಮನಗರ ವಾರ್ಡ್ ನ ಕಾರ್ಪೋರೇಟರ್ ಆಗಿದ್ದಾರೆ. ಹೇಳಿಕೆ ಪಡೆದ ಸಿಸಿಬಿ ಪೊಲೀಸರು ಯುವರಾಜ್‍ರನ್ನು ವಾಪಾಸ್ಸು ಕಳುಹಿಸಿದ್ದಾರೆ.

  • ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿ ಮತ್ತೊಬ್ಬ ಪ್ರಭಾವಿ ಸಚಿವರ ಪುತ್ರನ ವಿಚಾರಣೆ

    ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿ ಮತ್ತೊಬ್ಬ ಪ್ರಭಾವಿ ಸಚಿವರ ಪುತ್ರನ ವಿಚಾರಣೆ

    ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಈಗಾಗಲೇ ಜೈಲಿನಲ್ಲಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಲೋಕೋಪಯೋಗಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರನ್ನು ವಿಚಾರಣೆ ನಡೆಸಿದ್ದಾರೆ.

    ಫೆಬ್ರವರಿ 17ರಂದು ನಗರದ ಫರ್ಜಿ ಕೆಫೆಯಲ್ಲಿ ನಲಪಾಡ್ ಕ್ಷುಲಕ ಕಾರಣಕ್ಕಾಗಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಹಲ್ಲೆ ನಡೆದ ವೇಳೆ ಫರ್ಜಿ ಕಫೆಯಲ್ಲಿ ಸಚಿವರ ಪುತ್ರ ಸುನೀಲ್ ಬೋಸ್ ಅಲ್ಲಿಯೇ ಪಾರ್ಟಿ ಮಾಡ್ತಿದ್ರು ಎಂಬುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಲಪಾಡ್ ಪ್ರಕರಣದ ತನಿಖಾಧಿಕಾರಿ ಅಶ್ವಥ್ ಗೌಡ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕೇಂದ್ರ ಕಚೇರಿಯಲ್ಲಿ ಸುನಿಲ್ ಬೋಸ್ ಅವರ ವಿಚಾರಣೆಯನ್ನು ನಡೆಸಿದ್ದಾರೆ.

    ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ಕೆಲವು ದಿನಗಳ ಹಿಂದೆ ಸಚಿವ ಮಹದೇವಪ್ಪ ಈ ಬಾರಿ ಚುನಾವಣೆಯಲ್ಲಿ ಪುತ್ರ ಸುನಿಲ್ ಬೋಸ್ ಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದರು ಅಂತಾ ಹೇಳಲಾಗಿತ್ತು. ಆದ್ರೆ ಹೈಕಮಾಂಡ್ ಇಬ್ಬರಿಗೆ ಟಿಕೆಟ್ ನೀಡಿದ್ರೆ ಬೇರೆ ನಾಯಕರು ಅಸಮಾಧಾನಗೊಳ್ಳುವ ಸಾಧ್ಯತೆಗಳಿವೆ ಅಂತಾ ಹೇಳಿ ಟಿಕೆಟ್ ನೀಡಲು ನಿರಾಕರಿಸಿತ್ತು ಎಂಬ ಮಾಹಿತಿಗಳು ಕಾಂಗ್ರೆಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಚುನಾವಣೆಯ ಸಮಯದಲ್ಲಿ ಸುನಿಲ್ ಬೋಸ್ ವಿಚಾರಣೆ ನಡೆಯುತ್ತಿರುವುದು ಮುಂದೆ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿವೆ ಅಂತಾ ವಿಶ್ಲೇಷಣೆ ಮಾಡಲಾಗ್ತಿದೆ.

  • ನಲಪಾಡ್ ಜಾಮೀನು ಅರ್ಜಿ ವಜಾಗೊಂಡಿದ್ದು ಯಾಕೆ? ನ್ಯಾಯಾಧೀಶರು ಕೊಟ್ಟ ಕಾರಣಗಳು ಇಲ್ಲಿದೆ

    ನಲಪಾಡ್ ಜಾಮೀನು ಅರ್ಜಿ ವಜಾಗೊಂಡಿದ್ದು ಯಾಕೆ? ನ್ಯಾಯಾಧೀಶರು ಕೊಟ್ಟ ಕಾರಣಗಳು ಇಲ್ಲಿದೆ

    ಬೆಂಗಳೂರು: ಯುವಕ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾ ಆಗಿದೆ.

    ಯಾವೆಲ್ಲ ಅಂಶಗಳನ್ನು ಪರಿಗಣಿಸಿ ನ್ಯಾ. ಶ್ರೀನಿವಾಸ್ ಹರೀಶ್ ಅವರಿದ್ದ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತು ಎನ್ನುವುದನ್ನು ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ಸುದ್ದಿಗಾರರಿಗೆ ತಿಳಿಸಿದರು.

    ಕೋರ್ಟ್ ಹೇಳಿದ್ದು ಏನು?
    ವಿದ್ವತ್ ಮೇಲೆ ಹಲ್ಲೆಯಾದಾಗ ನಲಪಾಡ್ ಅಲ್ಲಿ ಇರಲೇ ಇಲ್ಲ. ಅವರು ಹೊಡೆದಿಲ್ಲ. 10-15 ಜನ ಹೊಡೆದಿದ್ದಾರೆ ಅಂತ ಎಫ್‍ಐಆರ್ ನಲ್ಲಿದೆ ಬಿಟ್ಟರೇ ಅವರೇ ಹೊಡೆದಿದ್ದಾರೆ ಎಂದು ನೇರವಾದ ಹೇಳಿಕೆಯಿಲ್ಲ ಅಂತ ಆರೋಪಿ ನಲಪಾಡ್ ಪರ ವಕೀಲ ವಾದ ಮಾಡಿದ್ದಾರೆ. ಆದ್ರೆ ಸಿಸಿಟಿವಿ ದೃಶ್ಯಾವಳಿ ನೋಡಿದಾಗ ವಿದ್ವತ್ ಮೇಲೆ ಘೋರ ಹಾಗೂ ಭಯಾನಕವಾಗಿ ಹಲ್ಲೆ ನಡೆದಿರುವುದು ನ್ಯಾಯಾಧೀಶರ ಗಮನಕ್ಕೆ ಬಂದಿದೆ. ಹಲ್ಲೆ ಮಾಡುತ್ತಿದ್ದ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದರೇ ವಿನಃ ಯಾರು ವಿದ್ವತ್ ಸಹಾಯಕ್ಕೆ ಬರಲಿಲ್ಲ. ನಲಪಾಡ್ ಅವರು ಅಲ್ಲಿ ತೋರಿದ ದರ್ಪದಿಂದಾಗಿ ಭಯಗೊಂಡು ಯಾರೊಬ್ಬರೂ ಸಹಾಯಕ್ಕೆ ಬರದಿರುವುದು ಕಾರಣವಾಗಿದೆ. ಹೀಗಾಗಿ ಇದೊಂದು ಘೋರವಾದ ಪ್ರಕರಣವಾಗಿದೆ.

     

    ಘಟನೆ ನಡೆದಂದೇ ರಾತ್ರಿ 11.45ರ ಸುಮಾರಿಗೆ ದೂರು ದಾಖಲಾದ್ರೂ ಕೂಡ ಬೆಳಗ್ಗಿನ ಜಾವ 3.30ರವರೆಗೂ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿಲ್ಲ. ಮಾರಣಾಂತಿಕ ಹಲ್ಲೆ ನಡೆದರೂ ಎಫ್‍ಐಆರ್ ದಾಖಲಿಸಲು ವಿಳಂಬ ಮಾಡಿದ್ದು ಯಾಕೆ ಎನ್ನುವುದಕ್ಕೆ ಪೊಲೀಸರು ಯಾವುದೇ ಕಾರಣವನ್ನೂ ಕೂಡ ಕೊಟ್ಟಿಲ್ಲ. ಹೀಗಾಗಿ ಇದು ಆರೋಪಿ ತನ್ನ ಪ್ರಭಾವ ಬಳಸಿ ಎಫ್‍ಐಆರ್ ದಾಖಲಿಸಿಕೊಳ್ಳಲು ತಡಮಾಡಿರಬಹುದೆಂದು ನ್ಯಾಯಾಲಯ ಗಮನಿಸಿದೆ.

    ಇಷ್ಟು ಮಾತ್ರವಲ್ಲದೇ ಅರುಣ್ ಬಾಬು ಎಂಬ ವ್ಯಕ್ತಿಯ ಕೈಯಿಂದ ಪ್ರತಿ ದೂರು ನೀಡಿ ಬೆಳಗ್ಗೆ 5.30 ಸುಮಾರಿಗೆ ಕೇಸ್ ದಾಖಲಿಸಿಕೊಂಡು, ನಂತರ 6 ಗಂಟೆ ಸುಮಾರಿಗೆ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಿ ಮೆಡಿಕಲ್ ಸಮ್ಮರಿ ಮಾಡಿಸಿದ್ದನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿದೆ.

    ಈ ಪ್ರಕರಣವನ್ನು ಏನಾದ್ರೂ ಮಾಡಿ ಮುಚ್ಚಿಹಾಕಲು ಮಾಡಿದಂತಹ ಪ್ರಯತ್ನವಾಗಿದೆ. ಮಲ್ಯ ಆಸ್ಪತ್ರೆಯ ವೈದ್ಯ ಡಾ. ಆನಂದ್ ಅವರು ಕೂಡ ವಿದ್ವತ್ ಡಿಸ್ಚಾರ್ಜ್ ಸಮ್ಮರಿಯನ್ನು ಅಪಾದಿತರಿಗೆ ಅನುಕೂಲವಾಗುವಂತೆ ಅಸಾಮಾನ್ಯವಾಗಿ ಸೃಷ್ಟಿಸಿದ್ದಾರೆ ಎಂಬ ನಿಲುವನ್ನು ನ್ಯಾಯಾಲಯ ತೆಗೆದುಕೊಂಡಿದೆ. ಈ ಎಲ್ಲಾ ವಿಚಾರಗಳ ಆಧಾರದ ಮೇಲೆ ಹಾಗೂ ಸುಪ್ರೀಂ ಕೋರ್ಟ್ 2, 3 ತೀರ್ಪುಗಳನ್ನು ಉಲ್ಲೇಖಿಸಿ, ಒಂದು ವೇಳೆ ಜಾಮೀನು ಮಂಜೂರು ಮಾಡಿದ್ದಲ್ಲಿ ಆರೋಪಿ ಸಾಕ್ಷ್ಯವನ್ನು ನಾಶ ಮಾಡುವ ಸಾಧ್ಯತೆಯಿದೆ ಎನ್ನುವುದನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ ಎಂದು ಶ್ಯಾಮ್‍ಸುಂದರ್ ತಿಳಿಸಿದರು.

    https://www.youtube.com/watch?v=1Lfn0Ovd27U

    https://www.youtube.com/watch?v=tGbMJgI45Dc

  • ಜಾಮೀನು ಅರ್ಜಿ ತಿರಸ್ಕೃತ- ಹ್ಯಾರಿಸ್ ಪುತ್ರನಿಗೆ ಜೈಲೇ ಗತಿ

    ಜಾಮೀನು ಅರ್ಜಿ ತಿರಸ್ಕೃತ- ಹ್ಯಾರಿಸ್ ಪುತ್ರನಿಗೆ ಜೈಲೇ ಗತಿ

    ಬೆಂಗಳೂರು: ನಗರದ ಯುಬಿ ಸಿಟಿಯ ಫರ್ಜಿಕೆಫೆ ಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕೃತ ಗೊಳಿಸಿದೆ.

    ಸಿಸಿಟಿವಿನಲ್ಲಿ ಹಲ್ಲೆ ನಡೆಸಿರೋದು ಸ್ಪಷ್ಟವಾಗಿದೆ. ತನಿಖಾಧಿಕಾರಿಗಳಿಗೆ ಸಿಗದ ಡಿಸ್ಚಾರ್ಜ್ ಸಮ್ಮರಿ ಆರೋಪಿಯ ತಂದೆಗೆ ಸಿಕ್ಕಿರುವುದು ಸಿಕ್ಕಿರೋದು ಅನುಮಾನ ಮೂಡುತ್ತದೆ ಅಂತ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ನಲಪಾಡ್ ಜಾಮೀನು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ದೂರು ದಾಖಲಿಸಿದ್ದರೂ, ಎಫ್‍ಐಆರ್ ಹಾಕುವಲ್ಲಿ ವಿಳಂಬ, ಸಿಸಿಟಿವಿಯಲ್ಲಿ ಮೊದಲು ನಲಪಾಡ್ ಹಲ್ಲೆ ನಡೆಸಿರುವ ದೃಶ್ಯ ಸೆರೆ, ವಿದ್ವತ್ ವೈದ್ಯಕೀಯ ವರದಿ ಹ್ಯಾರಿಸ್ ಕೈ ಸೇರಿದ್ದು, ಈ ಹಿಂದೆ ಈ ರೀತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ಉಲ್ಲೇಖಿಸಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

  • ನಲಪಾಡ್ ಹಲ್ಲೆ ಪ್ರಕರಣ- ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ತಳವಾರ್ ಅಮಾನತು ವಾಪಸ್

    ನಲಪಾಡ್ ಹಲ್ಲೆ ಪ್ರಕರಣ- ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ತಳವಾರ್ ಅಮಾನತು ವಾಪಸ್

    ಬೆಂಗಳೂರು: ಕರ್ತವ್ಯಲೋಪದಡಿ ಅಮಾನತಾಗಿದ್ದ ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ತಳವಾರ್ ಅವರ ಅಮಾನತು ವಾಪಸ್ ಪಡೆಯಲಾಗಿದೆ.

    ನಲಪಾಡ್ ಗೂಂಡಾಗಿರಿ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ಮಂಜುನಾಥ್ ತಳವಾರ್ ರನ್ನು ಅಮಾನತುಗೊಳಿಸಿದ್ರು. ಇದೀಗ ಅಮಾನತು ವಾಪಸ್ ಪಡೆಯಲಾಗಿದ್ದು, ಗೃಹಸಚಿವ ರಾಮಲಿಂಗಾರೆಡ್ಡಿ ಹ್ಯಾರಿಸ್ ಒತ್ತಡಕ್ಕೆ ಮಣಿದರಾ ಎಂಬಂತಹ ಅನುಮಾನಗಳು ವ್ಯಕ್ತವಾಗಿದೆ.

    ನಲಪಾಡ್ ಗ್ಯಾಂಗ್ ಗೆ ಇಂದು ಜೈಲು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ಕೋರಿ ನಲಪಾಡ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಲಪಾಡ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಆರೋಪಿ ನಲಪಾಡ್ ಗೆ ಜೈಲಾ ಅಥವಾ ಬೇಲಾ ಇಂದು ನಿರ್ಧಾರವಾಗಲಿದೆ.

  • ವಿದ್ವತ್ ಮೆಡಿಕಲ್ ರಿಪೋರ್ಟ್ ಹ್ಯಾರಿಸ್ ಕೈ ಸೇರಿದ್ದು ಹೇಗೆ? – ಸಿಸಿಬಿಯಿಂದ ಮಲ್ಯ ಆಸ್ಪತ್ರೆ ವೈದ್ಯರಿಗೆ ನೋಟಿಸ್

    ವಿದ್ವತ್ ಮೆಡಿಕಲ್ ರಿಪೋರ್ಟ್ ಹ್ಯಾರಿಸ್ ಕೈ ಸೇರಿದ್ದು ಹೇಗೆ? – ಸಿಸಿಬಿಯಿಂದ ಮಲ್ಯ ಆಸ್ಪತ್ರೆ ವೈದ್ಯರಿಗೆ ನೋಟಿಸ್

    ಬೆಂಗಳೂರು: ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್‍ಎ ಹ್ಯಾರಿಸ್ ಮಗ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಆರೋಪಿ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್‍ಗೆ ಚಿಕಿತ್ಸೆ ನೀಡಿದ ಮಲ್ಯ ಆಸ್ಪತ್ರೆ ವೈದ್ಯರಿಗೆ ಇದೀಗ ನೋಟಿಸ್ ಬಂದಿದೆ.

    ಆಸ್ಪತ್ರೆಯ ವೈದ್ಯರಾದ ಡಾ. ಆನಂದ್‍ಗೆ ಸಿಸಿಬಿ ಪೊಲೀಸರು ಈ ನೋಟಿಸ್ ನೀಡಿದ್ದು, ತನಿಖಾಧಿಕಾರಿಗೆ ಸಿಗದ ವಿದ್ವತ್ ಡಿಸ್ಚಾರ್ಜ್ ವರದಿ ಆರೋಪಿಯ ಅಪ್ಪ ಶಾಸಕ ಹ್ಯಾರಿಸ್‍ಗೆ ಸಿಕ್ಕಿದ್ದು ಹೇಗೆ? ಇದಕ್ಕೆ ಸೂಕ್ತ ಉತ್ತರ ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

    ಶುಕ್ರವಾರದಂದು ಹೈಕೋರ್ಟ್‍ನಲ್ಲಿ ಡಾ. ಆನಂದ್ ಮೇಲೆ ಆರೋಪ ಕೇಳಿಬಂದಿತ್ತು. ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ಯಾಂ ಸುಂದರ್ ಆನಂದ್ ಮೇಲೆ ಆರೋಪ ಮಾಡಿದ್ದರು. ನಾಗರಾಜ್ ರೆಡ್ಡಿ ಕಡೆಯಿಂದ ಡಿಸ್ಚಾರ್ಜ್ ರಿಪೋರ್ಟ್ ಸಿಕ್ಕಿತ್ತು ಎಂಬ ಆರೋಪ ಇತ್ತು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮತ್ತು ವೈದ್ಯರ ಹೆಸರು ಸೂಚಿಸಿ ನೋಟಿಸ್ ನೀಡಲಾಗಿದ್ದು, ಸಿಸಿಬಿ ಮೂರು ದಿನಗಳ ಕಾಲಾವಕಾಶ ನೀಡಿದೆ. ಸೋಮವಾರದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಡಿಸ್ಚಾರ್ಜ್ ವರದಿಯನ್ನು ಮುಖ್ಯ ವೈದ್ಯಾಧಿಕಾರಿ ಬರೆಯಬೇಕಿತ್ತು. ಆದ್ರೆ ಡಾ. ಆನಂದ್ ಇದನ್ನು ಬರೆದಿದ್ದಾರೆ. ಅಲ್ಲದೇ ಅವರು ಆಸ್ಪತ್ರೆಯಲ್ಲಿ ಗಲಾಟೆಯಾಗಿಲ್ಲ, ವಿದ್ವತ್ ನಾಟಕ ಆಡ್ತಿದ್ದಾನೆ ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ರೋಗಿಯ ಅರೋಗ್ಯ ಸ್ಥಿತಿಯನ್ನಷ್ಟೇ ಬರೆಯೋದು ಬಿಟ್ಟು ರೋಗಿಯ ಬೇರೆಲ್ಲಾ ವಿಚಾರ ಬರೆದಿರೋದ್ರಿಂದ ವೈಯುಕ್ತಿಕ ಹಿತಾಸಕ್ತಿ ಸಾಬೀತಾಗಿದೆ. ಮೇಲ್ನೋಟಕ್ಕೆ ವೈಯುಕ್ತಿಕ ಹಿತಾಸಕ್ತಿ ಗೊತ್ತಾಗಿರೋ ಹಿನ್ನೆಲೆಯಲ್ಲಿ ನೋಟೀಸ್ ಜಾರಿ ಮಾಡಲಾಗಿದೆ ಎಂದು ಸಿಸಿಬಿ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

  • ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಸಲ್ಲಿಸಿರುವ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

    ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ನಲಪಾಡ್ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ಈ ವೇಳೆ ನ್ಯಾಯಮೂರ್ತಿಗಳ ಮುಂದೇ ವಿಶೇಷ ಅಂಶವನ್ನು ಪ್ರಸ್ತಾಪಿಸಿದ ಅವರು, ಜೀವ ಭಯವಿರುವುದು ಹಲ್ಲೆಗೊಳಗಾದ ವಿದ್ವತ್ ಅವರಿಗೆ ಅಲ್ಲ. ಬದಲಾಗಿ ವಿದ್ವತ್‍ಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಎಂದು ವಾದ ಮಾಡಿದರು.

    ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ನನ್ನ ನಲಪಾಡ್ ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿದೆ ಎಂದು ವಾದಿಸಿದರು. ಎರಡು ಕಡೆ ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿತು.

    ನಲಪಾಡ್ ಪರ ವಕೀಲ ಸಿ.ವಿ.ನಾಗೇಶ್ ವಾದ ಹೀಗಿತ್ತು:
    ವಿದ್ವತ್ ಆಸ್ಪತ್ರೆಯಲ್ಲಿದ್ದಾಗ ಪ್ರಜ್ಞೆ ತಪ್ಪಿರಲಿಲ್ಲ. ಐಸಿಯು ನಲ್ಲಿ ಚಿಕಿತ್ಸೆ ನೀಡುವ ವೇಳೆಯೂ ಆತ ಚೆನ್ನಾಗಿಯೇ ಮಾತನಾಡುತ್ತಿದ್ದ. ತನಿಖಾಧಿಕಾರಿಗಳಿಗೆ ವಿದ್ವತ್ ಪ್ರಜ್ಞೆ ತಪ್ಪಿದ್ದಾನೆ ಎನ್ನುವ ಸುಳ್ಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಾಟಲ್ ನಿಂದ ಹೊಡೆದಿದ್ದಾರೆ ಹೇಳಿದ್ದಾರೆ. ಆದರೆ ಇಲ್ಲಿ ಬಾಟಲ್ ಮಾರಕಾಸ್ತ್ರ ಅಲ್ಲ. ವಿದ್ವತ್ ಚೆನ್ನಾಗಿಯೇ ಇದ್ದರೂ, ತೀವ್ರವಾಗಿ ಹಲ್ಲೆಯಾಗಿದೆ ಎಂದು ಬಿಂಬಿಸಿಕೊಂಡಿದ್ದಾನೆ. ವಿದ್ವತ್ ಡಿಸ್ಚಾರ್ಜ್ ವರದಿಯಲ್ಲಿ ಯಾವುದೇ ರೊಟೀನ್ ಚಿಕಿತ್ಸೆ ನೀಡಿರುವ ಬಗ್ಗೆ ಉಲ್ಲೇಖಿಸಿಲ್ಲ. ಆತನನ್ನು ಸುಮ್ಮನೆ ಆಸ್ಪತ್ರೆಯಲ್ಲಿ ಇಟ್ಟುಕೊಂಡಿದ್ದರು. ವೈದ್ಯರು ಮನೆಗೆ ಹೋಗುವಂತೆ ಸೂಚನೆ ನೀಡಿದ್ದರೂ ವಿದ್ವತ್ ಮನೆಗೆ ಹೋಗಿಲ್ಲ. ಪದೆ ಪದೆ ತಲೆನೋವು, ಎದೆನೋವು ಎಂದು ನಾಟಕ ಮಾಡಿದ್ದಾರೆ. ನಲಪಾಡ್ ತಾನಾಗಿಯೇ ಬಂದು ಕಾನೂನಿಗೆ ತಲೆಬಾಗಿದ್ದಾನೆ. ಬೆದರಿಕೆ ಹಾಕುವ ಉದ್ದೇಶ ಇದ್ದಿದ್ದಾರೆ ನಲಪಾಡ್ ಶರಣಾಗತನಾಗುತ್ತಿರಲಿಲ್ಲ.

    ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ವಾದ ಹೀಗಿತ್ತು:
    ವೈದ್ಯಕೀಯ ದಾಖಲೆಗಳು ನಲಪಾಡ್ ಪರ ವಕೀಲರಿಗೆ ಸಿಕ್ಕಿದ್ದು ಹೇಗೆ? ಇದರಲ್ಲೆ ನಲಪಾಡ್ ಎಷ್ಟು ಪ್ರಭಾವಿ ಆಗಿದ್ದಾನೆ ಎನ್ನುವುದು ತಿಳಿಯುತ್ತದೆ. ವೈದ್ಯರು ನಮಗೆ ಸಹಕಾರ ನೀಡಿಲ್ಲ ಬದಲಾಗಿ ನಲಪಾಡ್ ಪರ ವಕೀಲರಿಗೆ ಸಹಕಾರ ನೀಡಿದ್ದಾರೆ. ವೈದ್ಯಕೀಯ ದಾಖಲೆ ಅರೋಪಿ ಪರ ವಕೀಲರಿಗೆ ಸಿಕ್ಕ ಬಗ್ಗೆ ತನಿಖೆ ಆಗಬೇಕು. ಮಲ್ಯ ಆಸ್ಪತ್ರೆಯ ವೈದ್ಯ ಆನಂದ್ ಮೇಲೆ ಸಾಕಷ್ಟು ಅನುಮಾನ ಇದೆ. ಇದೆ ಅನಂದ್ ಮೊದಲು ಸರ್ಜರಿ ಮಾಡಬೇಕು ಎಂದು ಹೇಳಿದರು. ಈಗ ಸರ್ಜರಿ ಅವಶ್ಯಕತೆ ಇಲ್ಲ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಘಟನೆ ನಡೆದ ದಿನ ಕೊಟ್ಟ ಮೆಡಿಕಲ್ ರಿಪೋರ್ಟ್‍ನಲ್ಲಿ ಎಂಟು ಕಡೆ ಮೂಳೆ ಮುರಿದಿರುವುದಾಗಿ ಹೇಳಿದ್ದರು. ಆದರೆ ಇದೀಗ ಇದಕ್ಕೆ ವಿರುದ್ಧವಾಗಿ ವರದಿ ನೀಡಿದ್ದಾರೆ. ಇಲ್ಲಿ ವಿದ್ವತ್‍ಗೆ ಜೀವ ಬೆದರಿಕೆ ಬದಲು ವೈದ್ಯ ಆನಂದ್‍ಗೆ ಜೀವ ಬೆದರಿಕೆ ಇದೆ. ಹಾಗಾಗಿ ವೈದ್ಯ ಆನಂದ್ ಅವರು ವೈದ್ಯಕೀಯ ರಿಪೋರ್ಟ್ ತಿರುಚಿ ನೀಡಿದ್ದಾರೆ.

    ಘಟನೆ ನಡೆದು ಮಾರನೇ ದಿನವೇ ವಿದ್ವತ್ ವಿರುದ್ಧ ಕೌಂಟರ್ ಕೇಸ್ ದಾಖಲಾಗಿದೆ. ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುವವನ ವಿರುದ್ಧವೇ ಎಫ್‍ಐಆರ್ ದಾಖಲಿಸಲಾಗಿದೆ. ಈ ಬೆಳವಣಿಗೆ ಗಮನಿಸಿದರೆ ಸಮಾಜ ಎತ್ತ ಕಡೆ ಸಾಗುತ್ತಿದೆ ಎಂಬುದು ಗೊತ್ತಾಗಲಿದೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‍ಗೆ ಸಿಡಿ ನೀಡುತ್ತೇವೆ. ಅದನ್ನು ಒಮ್ಮೆ ನೋಡಿದರೆ ನಲಪಾಡ್ ಎಷ್ಟು ಕ್ರೂರ ಎಂಬುವುದು ತಿಳೀಯುತ್ತದೆ ಎಂದು ತಮ್ಮ ವಾದ ಮಂಡಿಸಿದರು.

    ಎರಡು ಕಡೆಯ ವಾದ ಪ್ರತಿವಾದ ಕೇಳಿದ ನ್ಯಾಯಾಮೂರ್ತಿಗಳು ಕೋರ್ಟ್‍ನ ಸಮಯ ಮುಗಿದಿದ್ದರಿಂದ ಪ್ರಕರಣವನ್ನ ಸೋಮವಾರಕ್ಕೆ ಮುಂದೂಡಿದರು. ಸೋಮವಾರ ವಿಶೇಷ ಅಭಿಯೋಜಕರು ಹಲ್ಲೆಯ ಸಿಸಿಟಿವಿ ದೃಶ್ಯಗಳನ್ನು ಕೋರ್ಟ್ ಗೆ ನೀಡಲಿದ್ದಾರೆ.

  • ವಿದ್ವತ್ ಡಿಸ್ಚಾರ್ಜ್‍ನಿಂದ ಶಾಸಕ ಹ್ಯಾರಿಸ್, ಮಗ ನಲಪಾಡ್ ಫುಲ್ ಖುಷ್

    ವಿದ್ವತ್ ಡಿಸ್ಚಾರ್ಜ್‍ನಿಂದ ಶಾಸಕ ಹ್ಯಾರಿಸ್, ಮಗ ನಲಪಾಡ್ ಫುಲ್ ಖುಷ್

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಶಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ನಗರದ ಮಲ್ಯ ಆಸ್ಪತ್ರೆಯಿಂದ ಭಾನುವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಹ್ಯಾರಿಸ್, ದೇವರ ದಯೆಯಿಂದ ವಿದ್ವತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಳಿಕ ಆತ ಈಗಾಗಲೇ ಡಿಸ್ಚಾರ್ಜ್ ಆಗಿದ್ದು ಖುಷಿತಂದಿದೆ. ವೈದ್ಯರ ಡಿಸ್ಚಾರ್ಜ್ ಶೀಟ್ ನಲ್ಲಿ ವಿದ್ವತ್ ಸಂಪೂರ್ಣವಾಗಿ ಗುಣಮುಖನಾಗಿದ್ದಾನೆ ಅಂತ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಆತ ಚೇತರಿಸಿಕೊಳ್ಳುವಂತೆ ಶ್ರಮಿಸಿದ ಮಲ್ಯ ಆಸ್ಪತ್ರೆ ವೈದ್ಯರಿಗೂ ಮತ್ತು ಸಿಬ್ಬಂದಿಗೂ ಧನ್ಯವಾದ ಎಂದು ಹ್ಯಾರಿಸ್ ಹೇಳಿದ್ದಾರೆ. ವಿದ್ವತ್ ಮತ್ತು ಆತನ ಕುಟುಂಬಸ್ಥರಲ್ಲಿ ಸಂತೋಷ ನೆಲೆಸಲಿ ಅಂತ ಹ್ಯಾರಿಸ್ ಹಾರೈಸಿದ್ದಾರೆ. ಇದನ್ನೂ ಓದಿ: ನಲಪಾಡ್ ಹಲ್ಲೆ ಪ್ರಕರಣ- ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ವಿದ್ವತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಯಾಗಿರೋ ನಲಪಾಡ್ ಕೂಡ ಸಂತಸದಿಂದಿದ್ದಾನೆ. ಯಾಕಂದ್ರೆ ಪ್ರಕರಣ ಸಂಬಂಧ ನಾಳೆ ಹೈಕೋರ್ಟ್‍ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಕ್ಕೇ ಸಿಗುತ್ತೆ ಅನ್ನೋ ಖುಷಿಯಲ್ಲಿದ್ದಾನೆ. ನಿನ್ನೆ ರಾತ್ರಿ ತಂದೆ ಹ್ಯಾರಿಸ್‍ಗೆ ಫೋನ್ ಮಾಡಿ ಖುಷಿಯಿಂದ ಮಾತನಾಡಿದ್ದಾನೆ. ಅಲ್ಲದೇ ನಾಳೆ ಯಾವುದೇ ಕಾರಣಕ್ಕೂ ಬೇಲ್ ಮಿಸ್ ಆಗದಂತೆ ಎಚ್ಚರಿಕೆ ನೀಡಿದ್ದಾನೆ ಅಂತ ಜೈಲಿನ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!