Tag: vidwath

  • ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ಬೆಂಗಳೂರು: ವಿದೇಶಕ್ಕೆ ತೆರಳಲು ತನಗೆ ಅನುಮತಿ ನಿಡಿ ಅಂತ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಹೈಕೋರ್ಟ್ ಮೊರೆ ಹೋಗಿದ್ದಾನೆ. ವಿದ್ವತ್ ಮೇಲೆ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳ ಸಡಿಲಿಕೆ ಕೋರಿ ನಲಪಾಡ್ ಈ ಅರ್ಜಿ ಸಲ್ಲಿಸಿದ್ದಾನೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ವೇಳೆ ನಗರ ಬಿಟ್ಟು ತೆರಳದಂತೆ ನಲಪಾಡ್ ಗೆ ಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ನನ್ನ ಸಹೋದರ ಲಂಡನ್ ನಲ್ಲಿ ವಾಸವಾಗಿದ್ದಾನೆ. ಹೀಗಾಗಿ ತಮ್ಮನನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿ. 15 ದಿನಗಳ ಕಾಲ ವಿದೇಶಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿ ಅಂತ ಮನವಿ ಮಾಡಿಕೊಂಡಿದ್ದಾನೆ.

    ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಕಷ್ಟ ಅಂದ್ರೆ ಏನು ಅನ್ನೋದು ಗೊತ್ತಾಗಿದೆ, ರಾತ್ರಿ 9 ಗಂಟೆಯ ನಂತ್ರ ಎಲ್ಲಿಗೂ ಬರಲ್ಲ: ನಲಪಾಡ್

    ಏನಿದು ಪ್ರಕರಣ?:
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.  ಇದನ್ನೂ ಓದಿ: ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿತ್ತು?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಗೆ ಇಂದು ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಲಪಾಡ್ ಸಹೋದರ ಉಮರ್ ನಲಪಾಡ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ ಅಂತ ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಅಲ್ಲದೇ ಮೊಹಮ್ಮದ್ ನಲಪಾಡ್ ಗೆ ಜಾಮೀನು ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿ, ಮನೆಯ ಬಳಿ ಇದ್ದ ಸ್ನೇಹಿತರಿಗೆ ದೂರದಿಂದಲೇ ಶುಭಕೋರಿದ್ರು.  ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಇತ್ತ ಮಗನಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ಹ್ಯಾರೀಸ್ ಮನೆಯಲ್ಲಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಮಗನಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ನಲಪಾಡ್ ಮನೆಗೆ ಬಂದಾಗ ಹೆಚ್ಚು ಜನ ಸೇರಬಾರದು. ಹೆಚ್ಚು ಜನ ಸೇರಿದ್ರೆ ಗಲಾಟೆಯಾಗ್ಬಹುದು. ಹೀಗಾಗಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಬ್ಬನ್ ಪಾರ್ಕ್ ಎಸಿಪಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

  • ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

    ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆಗೆ ಸಹಕರಿಸಬೇಕು. ಅಲ್ಲದೇ ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು. ಅಧೀನ ನ್ಯಾಯಾಲಯ ನೀಡುವ ಷರತ್ತಿಗೂ ಬದ್ಧವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ಆದೇಶ ನೀಡಿದ್ದಾರೆ.

    ಜಾಮೀನು ಮಂಜೂರು ಮಾಡಿದ ನಂತರದ ಪ್ರಕ್ರಿಯೆಗಳನ್ನು ನಲಪಾಡ್ ವಕೀಲರು ಆರಂಭಿಸಿದ್ದು, ಇಂದು ಸಂಜೆಯೊಳಗೆ ನಲಪಾಡ್ ಜೈಲಿನಿಂದ ಹೊರ ಬರುವ ಸಾಧ್ಯತೆಗಳಿವೆ. ಇತ್ತ ಪರಪ್ಪನ ಅಗ್ರಹಾರದಲ್ಲಿರುವ ನಲಪಾಡ್, ಜಾಮೀನು ಸಿಕ್ಕಿರುವ ಸುದ್ದಿ ತಿಳಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾನೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಮುಕ್ತಾಯ- ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು

    ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಮುಕ್ತಾಯ- ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ತೀರ್ಮಾನವಾಗುತ್ತದೆ.

    ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಇಂದು ಮುಕ್ತಾಯ ಹಂತಕ್ಕೆ ತಲುಪಲಿದೆ. ಎರಡು ಕಡೆಯ ವಾದ-ಪ್ರತಿವಾದ ಆಲಿಸಿ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ ನಲಪಾಡ್‍ನ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

    ಚಾರ್ಜ್ ಶೀಟ್ ಸಲ್ಲಿಕೆಯಾಗೋವರೆಗೂ ಕಾದು ನಲಪಾಡ್ ಸೆಷನ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದನು. ಚಾರ್ಜ್ ಶೀಟ್ ಸಲ್ಲಿಸಿರೋ ಹಿನ್ನೆಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಹಾಗಾಗಿ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಬಿ.ವಿ.ಆಚಾರ್ಯರ ಪ್ರಬಲ ವಾದವಾಗಿದೆ .

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ನಲಪಾಡ್ ಹಲ್ಲೆ ಪ್ರಕರಣ- ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ನಲಪಾಡ್ ಹಲ್ಲೆ ಪ್ರಕರಣ- ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಕಳೆದ ರಾತ್ರಿ 2 ಗಂಟೆಗೆ ವಿದ್ವತ್ ಅವರನ್ನ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದ 17 ದಿನಗಳಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಕಳೆದ ರಾತ್ರಿ ವಿದ್ವತ್‍ರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ರೌಡಿ ನಲಪಾಡ್ ಗೂಂಡಾಗಿರಿ ಪ್ರಕರಣ- ವಿದ್ವತ್ ಅಣ್ಣನ ಹೇಳಿಕೆ ಪಡೆದ ಸಿಸಿಬಿ

    ವಿದ್ವತ್ ಕಣ್ಣಿಗೆ ಚಿಕಿತ್ಸೆ ಆಗತ್ಯವಿದ್ದು, ಆಯುರ್ವೇದಿಕ್ ಔಷಧಿ ಕೊಡಿಸಲು ಕೇರಳಕ್ಕೆ ಶಿಫ್ಟ್ ಮಾಡುವ ಪ್ಲಾನ್ ನಲ್ಲಿದ್ದೆವೆ ಅಂತ ಕುಟುಂಬಸ್ಥರು ಹೇಳಿದ್ದಾರೆ.ಇದನ್ನೂ ಓದಿ:  ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!

  • ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ

    ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ

    ಬೆಂಗಳೂರು: ಯುಬಿ ಸಿಟಿಯ ಫರ್ಜಿ ರೆಸ್ಟೋರೆಂಟ್‍ನಲ್ಲಿ ಗೂಂಡಾಗಿರಿ ಮಾಡಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ಶಾಸಕ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ನ ಪುಂಡಾಟ ಜೈಲಿನಲ್ಲೂ ಮುಂದುವರಿದಿದೆ.ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಸ್ನೇಹಿತನ ಮೇಲೆಯೇ ರೌಡಿ ನಲಪಾಡ್ ಕೈ ಮಾಡಿದ್ದಾನೆ. ಸಹ ಅರೋಪಿ ಅಬ್ರಾಸ್ ಜೊತೆ ಮಹಮ್ಮದ್ ನಲಪಾಡ್ ಹೊಡೆದಾಡಿಕೊಂಡಿದ್ದಾನೆ. ನಿನ್ನಿಂದಲೇ ನಮಗೂ ಈ ಗತಿ ಬಂತು. ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದು ಎ5 ಅರೋಪಿ ಅಬ್ರಾಸ್ ಹೇಳಿದ್ದಾನೆ. ಇದರಿಂದ ಕೆರಳಿದ ಮಹಮ್ಮದ್ ನಲಪಾಡ್, ಅಬ್ರಾಸ್ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದಾನೆ. ತಾವಿದ್ದ ಕೊಠಡಿಯಲ್ಲೇ ಅಬ್ರಾಸ್ ಮತ್ತು ನಲಪಾಡ್ ಬಾಡಿದಾಡಿಕೊಂಡಿದ್ದಾರೆ. ನಂತರ ಜೈಲು ಸಿಬ್ಬಂದಿ ಅಬ್ರಾಸ್‍ನನ್ನ ಬೇರೆ ಸೆಲ್‍ಗೆ ವರ್ಗಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ನಲಪಾಡ್ ರಾತ್ರಿ ಕಣ್ಣಿರು ಹಾಕುತ್ತಾ ಊಟ ಮಾಡಿದ್ದಾನೆ ಎನ್ನಲಾಗಿದೆ. ಪಬ್, ರೆಸ್ಟೋರೆಂಟ್ ನಲ್ಲಿ ಶೋಕಿ ಜೀವನ ನಡೆಸುತ್ತಿದ್ದ ನಲಪಾಡ್ ರಾತ್ರಿ ಜೈಲಿನಲ್ಲಿ ಅನ್ನ ಸಂಬಾರ್ ತಿಂದಿದ್ದಾನೆ. ಬೆಳಗಿನ 4ರ ತನಕ ನಲಪಾಡ್ ಎದ್ದಿದ್ದ ಎಂದು ಹೇಳಲಾಗಿದೆ. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ಮೊಹಮ್ಮದ್ ನಲಪಾಡ್ ನಿಂದ ತೀವ್ರ ಹಲ್ಲೆಗೊಳಗಾಗಿ ಅಸ್ಪತ್ರೆ ಸೇರಿರುವ ವಿದ್ವತ್‍ಗೆ ಮಲ್ಯ ಅಸ್ಪತ್ರೆಯಲ್ಲಿ ನಾಲ್ಕನೇ ದಿನವೂ ಚಿಕಿತ್ಸೆ ಮುಂದುವರೆದಿದೆ. ತೀವ್ರ ನಿಗಾ ಘಟಕದಲ್ಲಿ ವಿದ್ವತ್‍ಗೆ ಚಿಕಿತ್ಸೆ ನೀಡುತ್ತಿದ್ದು ಮುಖದ ಊತ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಗಾಯದ ನೋವು ಜಾಸ್ತಿ ಇರುವುದರಿಂದ ವಿದ್ವತ್‍ಗೆ 102 ಡಿಗ್ರಿ ಜ್ವರ ಇತ್ತು. ಇದೀಗ 101 ಡಿಗ್ರಿಗೆ ಜ್ವರ ಇಳಿಮುಖವಾಗಿದ್ದು, ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡ್ತಿದ್ದಾರೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ಇನ್ನೂ ಮೂರ್ನಾಲ್ಕು ದಿನ ವಿದ್ವತ್‍ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. ವಿದ್ವತ್ ಮುಖ, ಕಣ್ಣು, ಮೂಗು, ಹಾಗೂ ಪಕ್ಕೆಲುಬುಗಳ ಮೂಳೆ ಮುರಿದಿದ್ದರಿಂದ ವಿದ್ವತ್ ಮೊದಲಿನಂತಾಗಲು ತಿಂಗಳಿಗೂ ಹೆಚ್ಚು ಕಾಲ ಬೇಕಾಗುತ್ತೆ ಎನ್ನಲಾಗಿದೆ.

    ವಿದ್ವತ್ ಅರೋಗ್ಯ ವಿಚಾರಿಸಲು ರಾಘವೇಂದ್ರ ರಾಜ್‍ಕುಮಾರ್ ಅವರ ಮಗ ಗುರುರಾಜ್ ಕುಮಾರ್ ಅಗಮಿಸಿದ್ದರು. ಇದೇ ವೇಳೆ ರಾಘವೇಂದ್ರ ರಾಜ್‍ಕುಮಾರ್ ಮನೆಯಿಂದ ಊಟ ಸಹ ತಂದು ಕೊಟ್ಟಿದ್ದು, ವಿದ್ವತ್ ಶೀಘ್ರ ಗುಣವಾಗಲೀ ಅಂತ ಹಾರೈಸಿದ್ರು.

    https://www.youtube.com/watch?v=p8o_3v5-ZYs

    https://www.youtube.com/watch?v=XE5CFfnOvx0

    https://www.youtube.com/watch?v=RtMFKdQtfME

     

  • ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ಬೆಂಗಳೂರು: ಯುಬಿ ಸಿಟಿಯ ರೆಸ್ಟೊರೆಂಟ್‍ನಲ್ಲಿ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ವಿದ್ವತ್ ಗೆ ನ್ಯಾಯ ಸಿಗಬೇಕೆಂದು ರಾಜ್‍ಕುಮಾರ್ ಮೊಮ್ಮಗ ಗುರು ರಾಜ್‍ಕುಮಾರ್ ಒತ್ತಾಯಿಸಿದ್ದಾರೆ.

    ಪ್ರೈಮರಿ ಸ್ಕೂಲ್‍ನಿಂದ ಹಿಡಿದು ಮುಂದೆ ಎಂದೆಂದಿಗೂ…. ನನ್ನ ಸಹೋದರನಿಗೆ ನೋವಾದ್ರೆ ನನಗೆ ನೋವಾಗುತ್ತೆ. ಆತನ ನೋವು ನನ್ನ ನೋವಿದ್ದಂತೆ. ಬೇಗ ಗುಣಮುಖನಾಗು ಸಹೋದರ ವಿದ್ವತ್. ನಿನ್ನೊಂದಿಗೆ ಯಾವಾಗಲೂ ಇರುತ್ತೇನೆ. ವಿದ್ವತ್‍ಗೆ ನ್ಯಾಯ ಸಿಗಬೇಕು ಎಂದು ಗುರು ರಾಜ್‍ಕುಮಾರ್ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಾರೆ. ಇದರ ಜೊತೆಗೆ ವಿದ್ವತ್ ರೊಂದಿಗಿನ ತಮ್ಮ ಬಾಲ್ಯದ ಫೋಟೋವನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Exclusive ಹ್ಯಾರಿಸ್ ಮಗನ ಮತ್ತೊಂದು ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ

    ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ನಡೆದ ನಲಪಾದ್ ಹಲ್ಲೆ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರೋ ವಿದ್ವತ್, ಫರ್ಜಿ ಕೆಫೆಯಲ್ಲಿ ಕಾಲು ಚಾಚಿಕೊಂಡು ಕುಳಿತಿದ್ದಕ್ಕೆ ಕ್ಷಮೆ ಕೋರುವಂತೆ ಹೇಳಿದರು. ತಪ್ಪಿಲ್ಲದ ಕಾರಣಕ್ಕೆ ನಾನು ಆರಂಭದಲ್ಲಿ ನಲಪಾಡ್ ಮಾತು ಕೇಳಲಿಲ್ಲ. ಎಂಎಲ್‍ಎ ಹ್ಯಾರಿಸ್ ಮಗನಿಗೇ ಎದುರು ಮಾತನಾಡುತ್ತೀಯಾ ಎನ್ನುತ್ತಾ ಅಬ್ಬರಿಸಿದ್ರು. ಏಕಾಏಕಿ ಹೊಡೆಯಲು ಶುರು ಮಾಡಿದ್ದರಿಂದ ಸಾರಿ.. ಸಾರಿ.. ಎಂದೆ. ಆದರೆ ಸಾರಿ ಎಂದರೂ ಕೂಡ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದರು. ನಲಪಾಡ್ ಜತೆ ಸುಮಾರು 15 ಸ್ನೇಹಿತರು ಇದ್ದರು. ಅವರಲ್ಲಿ ಆರೇಳು ಮಂದಿ ಬೌನ್ಸರ್‍ಗಳು. ಎಲ್ಲರೂ ಸೇರಿಕೊಂಡು ಮನಸೋ ಇಚ್ಛೆ ಹೊಡೆದರು. ಮೈಮೇಲೆ ಕುರ್ಚಿಗಳನ್ನು ಎಸೆದರು, `ಕ್ಷಮೆ ಕೇಳು’ ಎಂದರು. ಕ್ಷಮೆ ಯಾಚಿಸಿದರೂ ಹೊಡೆದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಲಪಾಡ್ ಬಳಿ ಇವೆ ಪೊಲೀಸರು, ಮಿಲಿಟರಿಯವರು ಬಳಸೋ ಬೋರ್ ಗನ್!

    ಹಲ್ಲೆಗೊಳಗಾದ ವಿದ್ವತ್ ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾದ್ರೂ ನಲಪಾದ್ ಗ್ಯಾಂಗ್ ಬಿಟ್ಟಿರಲಿಲ್ಲ. ನರ್ಸ್ ಒಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವ ವೇಳೆ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿತ್ತು. ಎರಡು ಕಾರುಗಳಲ್ಲಿ ಆಸ್ಪತ್ರೆಗೆ ನುಗ್ಗಿದ ರೌಡಿ ನಲಪಾಡ್ ಹಾಗೂ ಸಹಚರರು, ಆಸ್ಪತ್ರೆ ಕೊಠಡಿಯ ಬಾಗಿಲು ಒದ್ದುಕೊಂಡೇ ಒಳನುಗ್ಗಿ ಪುನಃ ವಿದ್ವತ್ ಮೇಲೆ ಹಲ್ಲೆಗೆ ಯತ್ನ ನಡೆಸಿದ್ರು. ಇದನ್ನೂ ಓದಿ: ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    ರಕ್ಷಣೆಗೆ ಹೋದ ವಿದ್ವತ್ ಸೋದರನ ಮೇಲೂ ನಲಪಾಡ್ ಹಲ್ಲೆ ನಡೆಸಿ, ಕೊರಳಪಟ್ಟಿ ಹರಿದಿದ್ದ. ಈ ವೇಳೆ ಗುರು ರಾಜ್‍ಕುಮಾರ್ ಅವರನ್ನ ನೋಡಿ ನಲಪಾಡ್ ಆಸ್ಪತ್ರೆಯಿಂದ ಹೊರಹೋಗಿದ್ದ. ಗುರು ರಾಜ್‍ಕುಮಾರ್ ಮಲ್ಯ ಆಸ್ಪತ್ರೆಗೆ ಬರದಿದ್ದರೆ, ನನ್ನ ತಮ್ಮನನ್ನು ಕೊಂದುಬಿಡುತ್ತಿದ್ರು ಎಂದು ಸಾತ್ವಿಕ್ ಹೇಳಿದ್ದಾರೆ. ಇದನ್ನೂ ಓದಿ: ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ 

    ಇದನ್ನೂ ಓದಿ: ಸ್ವಲ್ಪ ಮಿಸ್ ಆಗಿದ್ರೆ ರೌಡಿ ನಲಪಾಡ್ ಸೌದಿಗೆ ಪರಾರಿ!

  • ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    ಬೆಂಗಳೂರು: ಇದು ರೌಡಿ ನಲಪಾಡ್ ರಾಕ್ಷಸತ್ವದ ಘೋರ ಕಥನ. ವಿದ್ವತ್ ಮೇಲೆ ಯಾವ್ಯಾವ ರೀತಿ ದಾಳಿ ನಡೆಯಿತು, ಆಸ್ಪತ್ರೆಯಲ್ಲೂ ನಲಪಾಡ್ ಗ್ಯಾಂಗ್ ಅಬ್ಬರಿಸಿದ್ದು ಹೇಗೆ ಹಾಗೂ ನಲಪಾಡ್ ದಾಳಿಯ ಬಗ್ಗೆ ವಿದ್ವತ್ ಪಬ್ಲಿಕ್ ಟಿವಿಗೆ ತಿಳಿಸಿದ ಎಕ್ಸ್ ಕ್ಲೂಸೀವ್ ಮಾತು ಇಲ್ಲಿದೆ. ಇದನ್ನೂ ಓದಿ: Exclusive ಹ್ಯಾರಿಸ್ ಮಗನ ಮತ್ತೊಂದು ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ

    ಫರ್ಜಿ ಕೆಫೆಯಲ್ಲಿ ಕಾಲು ಚಾಚಿಕೊಂಡು ಕುಳಿತಿದ್ದಕ್ಕೆ ಕ್ಷಮೆ ಕೋರುವಂತೆ ಹೇಳಿದರು. ತಪ್ಪಿಲ್ಲದ ಕಾರಣಕ್ಕೆ ನಾನು ಆರಂಭದಲ್ಲಿ ನಲಪಾಡ್ ಮಾತು ಕೇಳಲಿಲ್ಲ. ಎಂಎಲ್‍ಎ ಹ್ಯಾರಿಸ್ ಮಗನಿಗೇ ಎದುರು ಮಾತನಾಡುತ್ತೀಯಾ ಎನ್ನುತ್ತಾ ಅಬ್ಬರಿಸಿದ್ರು. ಏಕಾಏಕಿ ಹೊಡೆಯಲು ಶುರು ಮಾಡಿದ್ದರಿಂದ sorry.. sorry.. ಎಂದೆ. ಆದರೆ sorry ಎಂದರೂ ಕೂಡ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದರು. ನಲಪಾಡ್ ಜತೆ ಸುಮಾರು 15 ಸ್ನೇಹಿತರು ಇದ್ದರು. ಅವರಲ್ಲಿ ಆರೇಳು ಮಂದಿ ಬೌನ್ಸರ್‍ಗಳು. ಎಲ್ಲರೂ ಸೇರಿಕೊಂಡು ಮನಸೋ ಇಚ್ಛೆ ಹೊಡೆದರು. ಮೈಮೇಲೆ ಕುರ್ಚಿಗಳನ್ನು ಎಸೆದರು, `ಕ್ಷಮೆ ಕೇಳು’ ಎಂದರು. ಕ್ಷಮೆ ಯಾಚಿಸಿದರೂ ಹೊಡೆದರು ಎಂದು ವಿದ್ವತ್ ಹೇಳಿದ್ದಾರೆ. ಇದನ್ನೂ ಓದಿ: ನಲಪಾಡ್ ಬಳಿ ಇವೆ ಪೊಲೀಸರು, ಮಿಲಿಟರಿಯವರು ಬಳಸೋ ಬೋರ್ ಗನ್!

    ನಲಪಾಡ್ ಗ್ಯಾಂಗ್ ಫರ್ಜಿ ಕೆಫೆಯಲ್ಲಿ ಮಾತ್ರ ಅಬ್ಬರಿಸಿರಲಿಲ್ಲ. ಚಿಕಿತ್ಸೆಗಾಗಿ ಮಲ್ಯಾ ಆಸ್ಪತ್ರೆಗೆ ದಾಖಲಾದ್ರೂ ಬಿಟ್ಟಿರಲಿಲ್ಲ ಆ ಗ್ಯಾಂಗ್. ವಿದ್ವತ್‍ಗೆ ನರ್ಸ್‍ವೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವ ವೇಳೆ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿತ್ತು. ಎರಡು ಕಾರುಗಳಲ್ಲಿ ಆಸ್ಪತ್ರೆಗೆ ನುಗ್ಗಿದ ರೌಡಿ ನಲಪಾಡ್ ಹಾಗೂ ಸಹಚರರು, ಆಸ್ಪತ್ರೆ ಕೊಠಡಿಯ ಬಾಗಿಲು ಒದ್ದುಕೊಂಡೇ ಒಳನುಗ್ಗಿ ಪುನಃ ವಿದ್ವತ್ ಮೇಲೆ ಹಲ್ಲೆಗೆ ಯತ್ನ ನಡೆಸಿದ್ರು. ಇದನ್ನೂ ಓದಿ: ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    ರಕ್ಷಣೆಗೆ ಹೋದ ವಿದ್ವತ್ ಸೋದರನ ಮೇಲೂ ನಲಪಾಡ್ ಹಲ್ಲೆ ನಡೆಸಿ, ಕೊರಳಪಟ್ಟಿ ಹರಿದಿದ್ದ. ಈ ವೇಳೆ ಗುರು ರಾಜ್‍ಕುಮಾರ್ ಅವರನ್ನ ನೋಡಿ ನಲಪಾಡ್ ಆಸ್ಪತ್ರೆಯಿಂದ ಹೊರಹೋಗಿದ್ದ. ಗುರು ರಾಜ್‍ಕುಮಾರ್ ಮಲ್ಯ ಆಸ್ಪತ್ರೆಗೆ ಬರದಿದ್ದರೆ, ನನ್ನ ತಮ್ಮನನ್ನು ಕೊಂದುಬಿಡುತ್ತಿದ್ರು ಎಂದು ಸಾತ್ವಿಕ್ ಹೇಳಿದ್ದಾರೆ. ಇದನ್ನೂ ಓದಿ: ಸ್ವಲ್ಪ ಮಿಸ್ ಆಗಿದ್ರೆ ರೌಡಿ ನಲಪಾಡ್ ಸೌದಿಗೆ ಪರಾರಿ!

    ಇದನ್ನೂ ಓದಿ: ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ 

    https://www.youtube.com/watch?v=dy5Sl50Qi3k

    https://www.youtube.com/watch?v=IHwUP3mtZXQ

    ಇದನ್ನೂ ಓದಿ: ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ ಡಿಟೇಲ್ ಇಲ್ಲಿದೆ

  • ಚರ್ಚೆ ನಡೆಯಲೆಂದೇ ತಪ್ಪಾಗಿ ವಿದ್ವತ್ ಹೆಸರನ್ನು ಹೇಳಿದ್ದೇನೆ: ಸ್ಪಷ್ಟನೆಯೊಂದಿಗೆ ಸಿಎಂಗೆ ಶಾ ಟಾಂಗ್

    ಚರ್ಚೆ ನಡೆಯಲೆಂದೇ ತಪ್ಪಾಗಿ ವಿದ್ವತ್ ಹೆಸರನ್ನು ಹೇಳಿದ್ದೇನೆ: ಸ್ಪಷ್ಟನೆಯೊಂದಿಗೆ ಸಿಎಂಗೆ ಶಾ ಟಾಂಗ್

    ಮಂಗಳೂರು: ಬೆಂಗಳೂರಿನ ಶಾಂತಿ ನಗರದ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಾಗಿರುವ ವಿದ್ವತ್ ಬಿಜೆಪಿ ಕಾರ್ಯಕರ್ತ ಎಂಬುದಾಗಿ ಚರ್ಚೆ ನಡೆಯಲೆಂದೇ ತಪ್ಪಾಗಿ ಹೇಳಿಕೆ ನೀಡಿದ್ದೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

    ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ದೀಪಕ್ ರಾವ್ ಮನೆಗೆ ಭೇಟಿ ನೀಡಿ ಬಳಿಕ ಅಮಿತ್ ಶಾ ಸುರತ್ಕಲ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಾನು ವಿದ್ವತ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದರಿಂದ ಚರ್ಚೆ ಆರಂಭವಾಗಿದೆ. ಆದರೆ ನನ್ನ ಹೇಳಿಕೆಯಿಂದ ಕನಿಷ್ಠ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ಗೊತ್ತಾಗಿದೆ. ನನ್ನ ಹೇಳಿಕೆ ಚರ್ಚೆಯಾಗುತ್ತಿರುವುದಕ್ಕೆ ಮಾಧ್ಯಮಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು.

    ನಾನು ಭಾಜಪದ ಅಧ್ಯಕ್ಷ ನೆಲೆಯಲ್ಲಿ ದೀಪಕ್ ರಾವ್ ಮನೆಗೆ ಭೇಟಿ ನೀಡಿದ್ದೇನೆ. ದೀಪಕ್ ಮನೆಯವರಿಗೆ ಸಾಂತ್ವಾನ ಹೇಳುವುದು ನನ್ನ ಕರ್ತವ್ಯ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಆಗಿದೆ. ಇಲ್ಲಿಯವರೆಗೆ ಮುಖ್ಯಮಂತ್ರಿ ಎಷ್ಟು ಮನೆಗೆ ಭೇಟಿ ನೀಡಿದ್ದಾರೆ. ದೀಪಕ್ ರಾವ್ ಮನೆಗೆ ಮಾತ್ರ ಭೇಟಿ ನೀಡಿದ್ದಾರೆ. ಬಶೀರ್ ಮನೆಗೆ ಭೇಟಿ ನೀಡಬೇಕಾದ್ದರಿಂದ ದೀಪಕ್ ಮನೆಗೆ ಹೋಗಿದ್ದರು. ಬೇರೆ ಹಿಂದೂ ಕಾರ್ಯಕರ್ತರ ಮನೆಗೆ ಏಕೆ ಭೇಟಿ ನೀಡಿಲ್ಲ ಎಂದು ಬಶೀರ್ ಮನೆಗೆ ಭೇಟಿ ನೀಡದ ಕುರಿತ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: 68 ವರ್ಷ ಮುಚ್ಚಿದ್ದ ದೇಶದ ಭವಿಷ್ಯದ ಬಾಗಿಲನ್ನು 2014ರಲ್ಲಿ ತೆರೆದೆವು- ಕಾಂಗ್ರೆಸ್ಸಿಗೆ ಶಾ ಪಂಚ್

    ಇದಕ್ಕೂ ಮುನ್ನ ದೀಪಕ್ ರಾವ್ ಭಾವಚಿತ್ರಕ್ಕೆ ಅಮಿತ್ ಶಾ ಕೈ ಮುಗಿದು ನಮಸ್ಕರಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ದೀಪಕ್ ರಾವ್ ಕುಟುಂಕ್ಕೆ ಸಾಂತ್ವನ ಹೇಳಿದರು. ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯವಾರಿ ಉಸ್ತುವಾರಿ ಮುರಳೀಧರ್ ರಾವ್ ಸಾಥ್ ನೀಡಿದರು. ಇದನ್ನೂ ಓದಿ: ಸ್ವಲ್ಪ ಮಿಸ್ ಆಗಿದ್ರೆ ರೌಡಿ ನಲಪಾಡ್ ಸೌದಿಗೆ ಪರಾರಿ!

    https://www.youtube.com/watch?v=cc0Gkb0XdLw

  • ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್‍ಗೆ ಬಿಜೆಪಿ ಕಾರ್ಯಕರ್ತನ ಪಟ್ಟ ಕಟ್ಟಿದ ಶಾ

    ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್‍ಗೆ ಬಿಜೆಪಿ ಕಾರ್ಯಕರ್ತನ ಪಟ್ಟ ಕಟ್ಟಿದ ಶಾ

    ಮಂಗಳೂರು: ಬೆಂಗಳೂರಿನ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ಯುವಕ ವಿದ್ವತ್ ಬಿಜೆಪಿ ಕಾರ್ಯಕರ್ತನೆಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದ ಶಾ, ಇತ್ತೀಚೆಗೆ ಸಿದ್ದರಾಮಯ್ಯ ಅವರ ಸರ್ಕಾರ ಕೆಲವು ಹಲ್ಲೆಗಳನ್ನು ಮಾಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕ ಹ್ಯಾರಿಸ್ ಮಗನ ಪ್ರಕರಣ ಇದಕ್ಕೆ ಮುಖ್ಯ ನಿದರ್ಶನವಾಗಿದೆ. ಓರ್ವ ಶಾಸಕನ ಮಗ ಅನ್ನೋದನ್ನು ಬಿಟ್ಟು ಓರ್ವ ಸಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ಆತನ ಮೇಲೆ ಎಫ್‍ಐಆರ್ ದಾಖಲಿಸಿಕೊಳ್ಳಲಿಲ್ಲ. ಇದನ್ನು ಹೇಳುವ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಾ ಹೇಳಿದ್ದಾರೆ. ಇದನ್ನೂ ಓದಿ:  ಬಿಜೆಪಿಯವರು ಸತ್ತ ಮೇಲೆ ಎಲ್ಲರನ್ನೂ ಪಕ್ಷಕ್ಕೆ ಸೇರಿಸುತ್ತಾರೆ: ರಾಮಲಿಂಗಾ ರೆಡ್ಡಿ ವ್ಯಂಗ್ಯ

    ವಿದ್ವತ್- ಹಲ್ಲೆಗೊಳಗಾದ ಯುವಕ. 

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಮುಕ್ತವನ್ನಾಗಿ ಮಾಡುತ್ತೇವೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮುಕ್ತ ಮಾಡ್ತೇವೆ. ಯಡಿಯೂರಪ್ಪ ಸರ್ಕಾರ ಬಂದ್ರೆ ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕ್ತೇವೆ ಅಂತ ಹೇಳಿದ್ರು. ಇದೇ  ವೇಳೆ ಸಮಾವೇಶದ ಮುಂಭಾಗದಲ್ಲಿ ಆಸೀನರಾಗಿದ್ದ ಬಂಟ್ವಾಳದ ಬಿಜೆಪಿ ಕಾರ್ಯಕರ್ತ ಶರತ್ ಮಡಿವಾಳ ಅವರ ಹೆತ್ತವರನ್ನು ಶಾ ಭೇಟಿ ಮಾಡಿ, ಸಾಂತ್ವಾನ ಹೇಳಿದ್ರು.  ಇದನ್ನೂ ಓದಿ: ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ

    ಬಿಜೆಪಿ ಕಾರ್ಯಕರ್ತನಲ್ಲ: ಅಮಿತ್ ಶಾ ಹೇಳಿಕೆ ಸಂಬಂಧ ಮಾಜಿ ಡಿಸಿಎಂ ಆರ್. ಅಶೋಕ್ ಪ್ರತಿಕ್ರಿಯಿಸಿ ವಿದ್ವತ್ ಬಿಜೆಪಿ ಕಾರ್ಯಕರ್ತ ಅಲ್ಲ. ರಾಷ್ಟ್ರೀಯ ಅಧ್ಯಕ್ಷರು ಭಾಷಣ ಮಾಡುವ ವೇಳೆ ಬಿಜೆಪಿ ಕಾರ್ಯಕರ್ತ ಎಂದು ಹೇಳಿದ್ದಾರೆ. ಇದಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸ್ಪಷ್ಟೀಕರಣ ಕೊಡುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ ಡಿಟೇಲ್ ಇಲ್ಲಿದೆ