Tag: vidya balan

  • ರಣ್‌ವೀರ್ ಸಿಂಗ್ ನಗ್ನ ಫೋಟೋಶೂಟ್‌ಗೆ ಬೆಂಬಲಿಸಿದ ವಿದ್ಯಾ ಬಾಲನ್

    ರಣ್‌ವೀರ್ ಸಿಂಗ್ ನಗ್ನ ಫೋಟೋಶೂಟ್‌ಗೆ ಬೆಂಬಲಿಸಿದ ವಿದ್ಯಾ ಬಾಲನ್

    ಬಾಲಿವುಡ್‌ನ ಸದ್ಯದ ಹಾಟ್ ಟಾಪಿಕ್ ಅಂದ್ರೆ ರಣ್‌ವೀರ್ ಸಿಂಗ್ ನಗ್ನ ಫೋಟೋಶೂಟ್ ವಿಚಾರ. ಅಶ್ಲೀಲ ಫೋಟೋಗಳೊಂದಿಗೆ ಮಹಿಳೆಯರ ಭಾವನೆಗೆ ಧಕ್ಕೆ ಮಾಡಿದ್ದಕ್ಕಾಗಿ ರಣ್‌ವೀರ್ ಮೇಲೆ ಕೇಸ್ ಕೂಡ ದಾಖಲಾಗಿದೆ. ಇದೀಗ ರಣ್‌ವೀರ್ ಸಿಂಗ್ ಪರವಾಗಿ ನಟಿ ವಿದ್ಯಾ ಬಾಲನ್ ಮಾತನಾಡಿದ್ದಾರೆ.

     

    View this post on Instagram

     

    A post shared by Ranveer Singh (@ranveersingh)

    ಬಾಲಿವುಡ್‌ನ ಸಾಕಷ್ಟು ಸಿನಿಮಾಗಳ ಮೂಲಕ ಹೈಪ್ ಕ್ರಿಯೆಟ್ ಮಾಡಿದ್ದ ರಣ್‌ವೀರ್ ಸಿಂಗ್ ಇದೀಗ ತನ್ನ ನಗ್ನ ಫೋಟೋಶೂಟ್ ಮೂಲಕ ಬಿಟೌನ್‌ನಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ. ಈ ಫೋಟೋಶೂಟ್ ಬಳಿಕ ಸಾಕಷ್ಟು ಮಹಿಳೆಯರ ಕೆಂಗಣ್ಣಿಗೆ ಗುರಿಯಾಗುವುದರ ಜತೆಗೆ ಸಖತ್ ಟ್ರೋಲ್ ಕೂಡ ಆಗಿದ್ದಾರೆ. ಟ್ರೋಲ್ ಮತ್ತು ರಣ್‌ವೀರ್ ಮೇಲಿನ ಕೇಸ್ ಗಮನಿಸಿರುವ ವಿದ್ಯಾ ಬಾಲನ್, ರಣ್‌ವೀರ್ ಪರ ಖಡಕ್ ವಾರ್ನಿಂಗ್ ಕೂಡ ಮಾಡಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ರು ಶ್ವೇತಾ ಶ್ರೀವಾಸ್ತವ್

    ರಣ್‌ವೀರ್ ಸಿಂಗ್‌ಗೆ ಜಾನ್ ಅಬ್ರಾಹಂ, ಪರಿಣಿತಿ ಚೋಪ್ರಾ, ಸಾಥ್ ನೀಡಿದ ಬಳಿಕ ಇದೀಗ ವಿದ್ಯಾ ಬಾಲನ್ ಮಾತನಾಡಿದ್ದಾರೆ. ಯಾರೊಬ್ಬರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವುದು ತಪ್ಪು, ನಿಮಗೆ ರಣ್‌ವೀರ್ ಫೋಟೋಶೂಟ್ ಇಷ್ಟವಾಗದಿದ್ದರೆ ಕಣ್ಣು ಮುಚ್ಚಿ ಎಂದು ನಟಿ ಮಾತನಾಡಿದ್ದಾರೆ. ಈ ಮೂಲಕ ನಟನಿಗೆ ವಿದ್ಯಾ ಬಾಲನ್ ಸಾಥ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಂಗೀತ ದಂತಕಥೆ ಎಂ.ಎಸ್.ಸುಬ್ಬಲಕ್ಷ್ಮೀ ಬಯೋಪಿಕ್ : ರಾಕ್‌ಲೈನ್ ವೆಂಕಟೇಶ್ ನಿರ್ಮಾಪಕ

    ಸಂಗೀತ ದಂತಕಥೆ ಎಂ.ಎಸ್.ಸುಬ್ಬಲಕ್ಷ್ಮೀ ಬಯೋಪಿಕ್ : ರಾಕ್‌ಲೈನ್ ವೆಂಕಟೇಶ್ ನಿರ್ಮಾಪಕ

    ಈ ಹಿಂದೆ ಬಾಲಿವುಡ್ ನ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಸಂಗೀತ ದಂತಕಥೆ, ಭಾರತ ರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ ಜೀವನವನ್ನು ಆಧರಿಸಿದ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ವಿಷಯವನ್ನು ಸ್ವತಃ ವಿದ್ಯಾ ಬಾಲನ್ ಅವರು ಖಚಿತ ಪಡಿಸಿದ್ದರು. ಈಗ ಕನ್ನಡ ಸಿನಿಮಾ ರಂಗದಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ. ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಎಂ.ಎಸ್.ಸುಬ್ಬಲಕ್ಷ್ಮೀ ಬಯೋಪಿಕ್ ಅನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ವಿದ್ಯಾ ಬಾಲನ್ ನಟಿಸಬೇಕಿದ್ದ ಸಿನಿಮಾ ಮತ್ತು ರಾಕ್ ಲೈನ್ ವೆಂಕಟೇಶ್ ಮಾಡುತ್ತಿರುವ ಈ ಸಿನಿಮಾ ಒಂದೇನಾ? ಅನ್ನುವ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ. ಆದರೆ, ಎಲ್ಲವೂ ಒಂದು ಹಂತದಲ್ಲಿ ಬರುವವರೆಗೂ ಈ ಸಿನಿಮಾದ ಬಗ್ಗೆ ಏನೂ ಹೇಳಲಾರೆ ಎಂದಿದ್ದಾರೆ ರಾಕ್ ಲೈನ್ ವೆಂಕಟೇಶ್. ಆದರೆ, ಎಂ.ಎಸ್.ಸುಬ್ಬಲಕ್ಷ್ಮೀ ಅವರ ಕುರಿತಾಗಿ ಸಿನಿಮಾ ಮಾಡುತ್ತಿರುವ ಕುರಿತು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಸದ್ಯ ಸ್ಕ್ರಿಪ್ಟ್ ಹಂತದಲ್ಲೇ ಸಿನಿಮಾ ಇರುವುದರಿಂದ ಯಾವುದೇ ಮಾಹಿತಿ ಕೊಡಲಾರೆ ಅಂದಿದ್ದಾರಂತೆ ರಾಕ್ ಲೈನ್ ವೆಂಕಟೇಶ್. ‘ಕಥೆ ಓಕೆ ಆಗಿದೆ. ಚಿತ್ರಕಥೆ ರೆಡಿಯಾಗುತ್ತಿದೆ. ಸೂಕ್ತ ಕಲಾವಿದರ ಆಯ್ಕೆಯಾಗಬೇಕು. ಇದೆಲ್ಲವೂ ಆದ ನಂತರ ಸಿನಿಮಾದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದಕ್ಕೆ ತಕ್ಕಂತೇ ಕಲಾವಿದರು ಮತ್ತು ತಂತ್ರಜ್ಞರು ಈ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಹಲವು ಭಾಷೆಗಳಲ್ಲೂ ಈ ಸಿನಿಮಾ ಮೂಡಿ ಬರಲಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ಸಿನಿಮಾ ಸ್ಕ್ರಿಪ್ಟ್ ಹಂತದಲ್ಲಿ ಇರುವುದರಿಂದ ವಿದ್ಯಾ ಬಾಲನ್ ಮಾಡಬೇಕಿದ್ದ ಸಿನಿಮಾ ಇದೆನಾ? ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ.

  • ಮೋಹನ್ ಲಾಲ್‍ರಿಂದ ವಿದ್ಯಾ ಬಾಲನ್ ಕಲಿತ ದೊಡ್ಡ ಪಾಠವೇನು ಗೊತ್ತಾ?

    ಮೋಹನ್ ಲಾಲ್‍ರಿಂದ ವಿದ್ಯಾ ಬಾಲನ್ ಕಲಿತ ದೊಡ್ಡ ಪಾಠವೇನು ಗೊತ್ತಾ?

    ಬಾಲಿವುಡ್ ನಟಿ ವಿದ್ಯಾ ಬಾಲನ್ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ತಮ್ಮ ನಟನಾ ಕೌಶಲ್ಯದಿಂದ ಮತ್ತೆ, ಮತ್ತೆ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ಈ ನಟಿ ದಕ್ಷಿಣದ ಸೂಪರ್ಸ್ಟಾರ್ ಮೋಹನ್ಲಾಲ್ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡುತ್ತಾ, ಅವರಿಂದ ಕಲಿತ ಪಾಠವೇನು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

    ವಿದ್ಯಾ ಬಾಲನ್ ಅವರು ಮೋಹನ್ಲಾಲ್ ಅವರ ಜೊತೆಗೆ ಸಿನಿಮಾ ಮಾಡುತ್ತಿದ್ದರು. ಆದರೆ ದುರದೃಷ್ಟವಶಾತ್, ಆ ಚಿತ್ರವು ಸ್ಥಗಿತಗೊಂಡಿತು. ಈ ಚಿತ್ರದ ಕುರಿತು ಮಾತನಾಡಿದ ವಿದ್ಯಾ, ಈ ಚಿತ್ರಕ್ಕಾಗಿ ಸುಮಾರು 2 ವಾರಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೆ. ಮೋಹನ್ಲಾಲ್ ಮತ್ತು ನಿರ್ದೇಶಕರಿಗೆ ಸಮಸ್ಯೆಗಳಿವೆ, ಆದ್ದರಿಂದ ಬಹಳಷ್ಟು ಬಾರಿ ಚಿತ್ರೀಕರಣವನ್ನು ರದ್ದುಗೊಳಿಸಲಾಯಿತು. ಅವರ ಜೊತೆ ಕೇವಲ 6-7 ದಿನ ಕೆಲಸ ಮಾಡಿದ್ದೇನೆ ಎಂದು ವಿದ್ಯಾ ಬಾಲನ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್


    ನಾನೊಬ್ಬಳು ನಟಿಯಾಗಿ ಮೋಹನ್ ಲಾಲ್ ಅವರನ್ನು ಪ್ರೀತಿಸುತ್ತೇನೆ. ಅವರಿಂದ ನಾನು ದೊಡ್ಡ ಪಾಠವನ್ನು ಕಲಿತಿದ್ದೇನೆ. ನಾನು ಯಾವಾಗಲೂ ಅವರು ನನ್ನ ನೆಚ್ಚಿನ ನಟ ಎಂದು ಹೇಳುತ್ತಿದ್ದೆ. ಸೆಟ್ನಲ್ಲಿ ನಾನು ಮೋಹನ್ಲಾಲ್ ಅವರ ಜೊತೆಗೆ ಸಾಕಷ್ಟು ಸಮಯ ಕಳೆದಿದ್ದೇನೆ. ಅವರ ನನಗೆ ಹೇಳಿದ್ದರು, ನಾನು ಸ್ಕ್ರಿಪ್ಟ್ ಓದಲು ಬಯಸುವುದಿಲ್ಲ. ಆದರೆ ನಿರ್ದೇಶಕರು ಕರೆದಾಗ ಮ್ಯಾಜಿಕ್ ಆಗುವಂತೆ ನಾನು ನಟಿಸಲು ನಾನು ಬಯಸುತ್ತೇನೆ. ಅವರು ಯಾವಾಗಲೂ ಸಿನಿಮಾ ತಂಡವನ್ನು ಬೆಂಬಲಿಸುತ್ತಿದ್ದರು. ಸಂಕ್ಷಿಪ್ತವಾಗಿ ಹೇಳುವುದಾದರೆ, ನಾನು ಅವರಿಂದ ದೊಡ್ಡ ಪಾಠವನ್ನು ಕಲಿತಿದ್ದೇನೆ ಎಂದು ಹೇಳಿದ್ದಾರೆ.

  • ಲಿವ್ ಇನ್ ರಿಲೇಶನ್‍ಶಿಪ್ – ಮದುವೆ ಬಗ್ಗೆ ವಿದ್ಯಾ ಬಾಲನ್ ಹೇಳೋದೇನು?

    ಲಿವ್ ಇನ್ ರಿಲೇಶನ್‍ಶಿಪ್ – ಮದುವೆ ಬಗ್ಗೆ ವಿದ್ಯಾ ಬಾಲನ್ ಹೇಳೋದೇನು?

    ಬಾಲಿವುಡ್ ತಾರೆಯರು ಮದುವೆಯಾದ ನಂತರ ಅವರ ಮದುವೆ, ಫ್ಯಾಮಿಲಿ ವಿಷಯಕ್ಕಾಗಿ ಹೆಚ್ಚು ಸುದ್ದಿ ಆಗುತ್ತಾರೆ. ಆದರೆ ಬಾಲಿವುಡ್ ಬೋಲ್ಡ್ ನಟಿ ವಿದ್ಯಾ ಬಾಲನ್ ಮಾತ್ರ ಬಾಡಿಶೇಮಿಂಗ್, ಫಿಟ್‍ನೆಸ್ ವಿಷಯದಲ್ಲಿ ಹೆಚ್ಚು ಸುದ್ದಿ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಹಾಗೂ ಸುದ್ದಿಗೋಷ್ಠಿಯಲ್ಲಿ ಇವರು ತಮ್ಮ ಕುಟುಂಬದ ಬಗ್ಗೆ ಮಾತನಾಡುವುದು ತೀರಾ ಕಡಿಮೆ. ಆದರೆ ಇದೇ ಮೊದಲ ಬಾರಿಗೆ ವಿದ್ಯಾ ಬಾಲನ್ ರಿಲೇಶನ್‍ಶಿಪ್ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ.


    ಮಹಿಳಾ ಪ್ರಧಾನ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ವಿದ್ಯಾ, ಬಾಲಿವುಡ್‌ನಲ್ಲಿ ಬೋಲ್ಡ್ ನಟನೆಯ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ. ಮದುವೆ ನಂತರವೂ ಸಿನಿಮಾರಂಗದಲ್ಲಿ ಮುಂದುವರಿದಿರುವ ಈ ನಟಿ, ಈಗಾಲೂ ತಮ್ಮ ಬೇಡಿಕೆ ಉಳಿಸಿಕೊಂಡಿದ್ದಾರೆ. ಫಿಟ್ನೆಸ್ ಬಗ್ಗೆಯೂ ಬೋಲ್ಡ್ ಆಗಿ ಮಾತನಾಡುವ ಇವರು, ಯಾವತ್ತೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿಲ್ಲ. ಆದರೆ ಇದೇ ಮೊದಲಬಾರಿ ಸುದ್ದಿಗಾರರ ಜೊತೆ ಅವರು ‘ಲಿವ್ ಇನ್ ರಿಲೇಶನ್‍ಶಿಪ್’ ಮತ್ತು ‘ಮದುವೆ’ ಎರಡರ ನಡುವಿನ ವ್ಯತ್ಯಾಸದ ಬಗ್ಗೆ ನಗುತ್ತಲೇ ಉತ್ತರಿಸಿದರು.  ಇದನ್ನೂ ಓದಿ: ತಲೆಕೂದಲು ಬೋಳಿಸಿಕೊಂಡ ಫೋಟೋ ಶೇರ್ ಮಾಡಿದ ಗರ್ಭಿಣಿ ಸಂಜನಾ

    ‘ನನ್ನ ದಾಂಪತ್ಯ ಜೀವನ ಸುಂದರವಾಗಿದೆ’ ಎನ್ನುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತ್ತೊಬ್ಬರ ಮಾತುಗಳನ್ನು ಆಲಿಸುವ ತಾಳ್ಮೆ ಸಿದ್ಧಾರ್ಥ್ ರಾಯ್ ಕಪೂರ್ ಅವರಷ್ಟು ಬೇರೆಯವರಲ್ಲಿ ನಾನು ನೋಡಿಲ್ಲ. ಅವರೆಷ್ಟು ತಾಳ್ಮೆಯಿಂದ ಕೇಳುತ್ತಾರೆಂದರೆ, ನಾನು ಅವರಿಗೆ ಯಾವುದಾದರೂ ಗೊಂದಲದ ವಿಷಯಗಳನ್ನು ವಿವರಿಸುತ್ತಾ ನನಗೇ ಅದರ ಸ್ಪಷ್ಟ ಚಿತ್ರಣ ಸಿಗುತ್ತೆ. ಅವರಿಂದ ಸಲಹೆಗಳೇ ಬೇಕಾಗುವುದಿಲ್ಲ ಎಂದು ವಿವರಿಸಿದರು.

    ‘ಸಿದ್ಧಾರ್ಥ್ ಅವರನ್ನು ನನ್ನ ಬಾಳಸಂಗತಿಯನ್ನಾಗಿ ಪಡೆಯಲು ಪುಣ್ಯ ಮಾಡಿದ್ದೆ. ಅವರು ನನ್ನ ಜೀವನದ ಕೆಟ್ಟ ದಿನಗಳಲ್ಲಿ ಬಂದು ಸಂತೋಷವನ್ನು ತಂದುಕೊಟ್ಟಿದ್ದಾರೆ. ಅವರು ನನ್ನನ್ನು ನಾನಿದ್ದಂತೆಯೇ ಸ್ವೀಕರಿಸಿದ್ದಾರೆ. ಮದುವೆಯಾಗಿ ಸುಮಾರು 10 ವರ್ಷಗಳಾಗುತ್ತಾ ಬಂದಿದೆ. ನಾನು ಮದುವೆ ಬಗ್ಗೆ ನನಗಿದ್ದ ಕೆಟ್ಟ ಅಭಿಪ್ರಾಯ ಸಿದ್ಧಾರ್ಥ್‍ರಿಂದಾಗಿ ಬದಲಾಗಿದೆ. ಮೊದಲಿಗೆ ಲಿವ್ ಇನ್ ರಿಲೇಶನ್‍ಶಿಪ್ ಅಥವಾ ಮದುವೆಯಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಭಾವಿಸಿದ್ದೆ. ಆದರೆ ಸಿದ್ಧಾರ್ಥ್‍ರಿಂದಾಗಿ ವೈವಾಹಿಕ ಬದುಕು ಅದ್ಭುತವಾಗಿದೆ’ ಎಂದು ಸಂತಸ ಹಂಚಿಕೊಂಡರು.  ಇದನ್ನೂ ಓದಿ: ‘ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

    2012ರಲ್ಲಿ ವಿದ್ಯಾ ಬಾಲನ್ ಹಾಗೂ ಸಿದ್ಧಾರ್ಥ್ ರಾಯ್ ಕಪೂರ್ ಡೇಟಿಂಗ್ ಮಾಡುತ್ತಿರುವುದಾಗಿ ಅನೌನ್ಸ್ ಮಾಡಿದ್ದರು. ಅದೇ ವರ್ಷ ಇವರಿಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೂ ಇವರಿಬ್ಬರ ಫೋಟೋಗಳು ಎಲ್ಲೂ ಹೆಚ್ಚು ಸಿಕ್ಕಿಲ್ಲ. ಇಬ್ಬರೂ ಕೂಡ ಕೆಲಸದ ಹೊರತಾದ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಈ ಬಗ್ಗೆ ಮಾತನಾಡಿದ ವಿದ್ಯಾ ಬಾಲನ್, ನಾನು ಒಂದು ರೀತಿಯ ಖಾಸಗಿ ವ್ಯಕ್ತಿ. ಕೆಲಸದ ಹೊರತಾದ ಫೋಟೋಗಳನ್ನು ಹಂಚಿಕೊಳ್ಳುವುದು ಇಷ್ಟವಾಗುವುದಿಲ್ಲ ಎಂದು ತಿಳಿಸಿದರು.

  • ಭಾರತೀಯ ಸೇನೆಯಿಂದ ವಿದ್ಯಾ ಬಾಲನ್‍ಗೆ ಅತ್ಯುನ್ನತ ಗೌರವ

    ಭಾರತೀಯ ಸೇನೆಯಿಂದ ವಿದ್ಯಾ ಬಾಲನ್‍ಗೆ ಅತ್ಯುನ್ನತ ಗೌರವ

    ಮುಂಬೈ: ಬಾಲಿವುಡ್ ನಟಿ ವಿದ್ಯಾ ಬಾಲನ್‍ಗೆ ಭಾರತೀಯ ಸೇನೆ ಅತ್ಯುನ್ನತ ಗೌರವವನ್ನು ಸಲ್ಲಿಸಿದೆ. ವಿದ್ಯಾ ಬಾಲನ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಗೌರವಿಸಿ ಭಾರತೀಯ ಸೇನೆಯು ನಟಿಗೆ ವಿಭಿನ್ನವಾಗಿ ಗೌರವ  ಸಮರ್ಪಿಸಿದೆ. ಸೈನಿಕರು ಫೈರಿಂಗ್ ತರಬೇತಿ ಪಡೆಯುವ ಸ್ಥಳ ಕಾಶ್ಮೀರದ ಗುಲ್ಮರ್ಗ್ ನಲ್ಲಿರುವ ಮಿಲಿಟರಿ ಫೈರಿಂಗ್ ರೇಂಜ್‍ಗೆ ವಿದ್ಯಾ ಬಾಲನ್ ಹೆಸರನ್ನು ನಾಮಕರಣ ಮಾಡಲಾಗಿದೆ.

    ಮಿಲಿಟರಿ ಫೈರಿಂಗ್ ರೇಂಜ್‍ಗೆ ವಿದ್ಯಾ ಬಾಲನ್ ಹೆಸರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ವಿದ್ಯಾ ಬಾಲನ್‍ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಬಗ್ಗೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದು, ವಿದ್ಯಾ ಬಾಲನ್ ವೃತ್ತಿ ಜೀವನದಲ್ಲಿ ಇದು ಅತ್ಯಂತ ಹೆಮ್ಮೆಯ ವಿಚಾರ ಎಂದು ಶ್ಲಾಘಿಸುತ್ತಿದ್ದಾರೆ. ಆದರೆ ಈ ಬಗ್ಗೆ ವಿದ್ಯಾ ಬಾಲನ್ ಸಾರ್ವಜನಿಕವಾಗಿ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಈ ವರ್ಷದ ಆರಂಭದಲ್ಲಿ ಕಾಶ್ಮೀರದಲ್ಲಿ ಭಾರತೀಯ ಸೇನೆಯು ಆಯೋಜಿಸಿದ್ದ `ಗುಲ್ಮರ್ಗ್ ವಿಂಟರ್ ಫೆಸ್ಟಿವಲ್’ನಲ್ಲಿ ನಟಿ ವಿದ್ಯಾ ಬಾಲನ್ ಪತಿ ಸಿದ್ದಾರ್ಥ್ ರಾಯ್ ಕಪೂರ್ ಜೊತೆ ಪಾಲ್ಗೊಂಡಿದ್ದರು. ಇದನ್ನೂ ಓದಿ:  ಮಲ್ಲೇಶ್ವರದಲ್ಲಿ ವರ್ತಕರಿಗೆ ವ್ಯಾಕಿನೇಷನ್‍ಗೆ ಚಾಲನೆ ನೀಡಿದ ಡಿಸಿಎಂ

    ಇತ್ತೀಚೆಗಷ್ಟೇ ವಿದ್ಯಾ ಬಾಲನ್ ಅಭಿನಯದ `ಶೆರ್ನಿ’ ಸಿನಿಮಾ ಅಮೇಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅರಣ್ಯಾಧಿಕಾರಿ ಪಾತ್ರದಲ್ಲಿ ವಿದ್ಯಾ ಬಾಲನ್ ನಟಿಸಿದ್ದು, ವಿದ್ಯಾ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದರೊಂದಿಗೆ ಆಸ್ಕರ್ ಆಡಳಿತ ಮಂಡಳಿಯ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ &  ಸೈನ್ಸ್‌ನಲ್ಲಿ ಕಾರ್ಯನಿರ್ವಾಹಕ ಸದಸ್ಯರ ಹೊಸ ಬ್ಯಾಚ್‍ಗೆ ವಿದ್ಯಾ ಬಾಲನ್ ಆಯ್ಕೆಯಾಗಿದ್ದರು. ವಿದ್ಯಾ ಬಾಲನ್ ಜೊತೆಗೆ ನಿರ್ಮಾಪಕರಾದ ಏಕ್ತಾ ಕಪೂರ್ ಮತ್ತು ಶೋಭಾ ಕಪೂರ್‌ಗೂ ಆಹ್ವಾನ ಬಂದಿದೆ.

  • ಸಚಿವರ ಭೋಜನಕೂಟ ತಿರಸ್ಕರಿಸಿದ ವಿದ್ಯಾ- ಮರುದಿನ ಅಧಿಕಾರಿಗಳಿಂದ ಶೂಟಿಂಗ್ ಸ್ಥಗಿತ

    ಸಚಿವರ ಭೋಜನಕೂಟ ತಿರಸ್ಕರಿಸಿದ ವಿದ್ಯಾ- ಮರುದಿನ ಅಧಿಕಾರಿಗಳಿಂದ ಶೂಟಿಂಗ್ ಸ್ಥಗಿತ

    ಮುಂಬೈ/ಭೋಪಾಲ್: ಅರಣ್ಯ ಸಚಿವರ ಔತನಕೂಟ ತಿರಸ್ಕರಿಸಿದ್ದಕ್ಕೆ ವಿದ್ಯಾ ಬಾಲನ್ ಸಿನಿಮಾದ ಚಿತ್ರೀಕರಣ ತಡೆಯಲಾಗಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸುತ್ತಿವೆ.

    ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ತಮ್ಮ ರಾಜ್ಯದಲ್ಲಿ ಶೂಟಿಂಗ್ ನಡೆಸುತ್ತಿರುವ ನಟಿ ವಿದ್ಯಾ ಬಾಲನ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದರು. ಆದ್ರೆ ವಿದ್ಯಾ ಬಾಲನ್ ತಮ್ಮ ಶೆಡ್ಯೂಲ್ ಮೊದಲ ನಿಗದಿಯಾಗಿದ್ದರಿಂದ ಭೋಜನಕೂಟಕ್ಕೆ ತೆರಳಿರಲಿಲ್ಲ. ಇದರಿಂದ ಸಚಿವರು ಮರುದಿನ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣಕ್ಕೆ ತಡೆ ನೀಡಿದ್ದರು ಎನ್ನಲಾಗಿದೆ. ಕೊನೆಗೆ ಚಿತ್ರತಂಡ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ ಬಳಿಕ ಶೂಟಿಂಗ್ ನಡೆಸಲು ಅನುಮತಿ ನೀಡಲಾಗಿದೆ ಎಂದು ವರದಿ ಆಗಿದೆ.

    ವಿದ್ಯಾ ಬಾಲನ್ ನಟಿಸುತ್ತಿರುವ ‘ಶೇರರ್ನಿ’ ಚಿತ್ರೀಕರಣ ಬಾಲಾಘಾಟ್ ನಲ್ಲಿ ನಡೆಯುತ್ತಿದ್ದು, ಚಿತ್ರತಂಡ ಅಕ್ಟೋಬರ್ 20 ರಿಂದ ನವೆಂಬರ್ 21ರ ವರೆಗೆ ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಂಡಿತ್ತು. ಶೂಟಿಂಗ್ ಹಿನ್ನೆಲೆ ವಿದ್ಯಾ ಬಾಲನ್ ಮಹಾರಾಷ್ಟ್ರದ ಗೋಂದಿಯಾದಲ್ಲಿ ಉಳಿದುಕೊಂಡಿದ್ದರು. ಸಂಜೆ 5 ಗಂಟೆಗೆ ಸಚಿವ ವಿಜಯ್ ಶಾ ನಟಿಯನ್ನ ಔತಣಕೂಟಕ್ಕೆ ಆಹ್ವಾನಿಸಿದ್ದರು. ಆದ್ರೆ ವಿದ್ಯಾ ಬಾಲನ್ ಊಟಕ್ಕೆ ತೆರಳಿರಲಿಲ್ಲ. ಮರುದಿನ ಶೂಟಿಂಗ್ ಸ್ಥಳಕ್ಕೆ ಆಗಮಿಸಿ ಜಿಲ್ಲಾ ರಣ್ಯಾಧಿಕಾರಿಗಳು ಶೂಟಿಂಗ್ ವಾಹನಗಳನ್ನು ಅರಣ್ಯ ಪ್ರವೇಶಿಸುವದನ್ನ ತಡೆದಿದ್ದರು. ಕೆಲ ಸಮಯದ ಬಳಿಕ ಚಿತ್ರೀಕರಣಕ್ಕೆ ಅನಮತಿ ನೀಡಲಾಗಿತ್ತು.

    ವಿಜಯ್ ಶಾ ಸ್ಪಷ್ಟನೆ: ಔತಣಕೂಟವನ್ನ ಜಿಲ್ಲಾಡಳಿತ ಆಯೋಜಿಸಿತ್ತು. ಅಧಿಕಾರಿಗಳು ಶೂಟಿಂಗ್ ವಾಹನಗಳನ್ನ ತಡೆದಿರೋದು ನಿಜ. ಪ್ರತಿದಿನ ಚಿತ್ರತಂಡ ಅರಣ್ಯದೊಳಗೆ ಎರಡು ಜನರೇಟರ್ ವಾಹನಗಳನ್ನು ತೆಗೆದುಕೊಂಡು ಹೋಗುತ್ತಿತ್ತು. ಆದ್ರೆ ಅಂದು ಎರಡಕ್ಕಿಂತ ಹೆಚ್ಚು ಜನರೇಟರ್ ವಾಹನ ಅರಣ್ಯದೊಳಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಸಚಿವ ವಿಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.

  • ಬಾಲಿವುಡ್‍ನಲ್ಲಿ ತೆರೆ ಕಾಣಲಿದೆ ಕನ್ನಡತಿ ‘ಶಕುಂತಲಾ ದೇವಿ’ ಸಿನಿಮಾ

    ಬಾಲಿವುಡ್‍ನಲ್ಲಿ ತೆರೆ ಕಾಣಲಿದೆ ಕನ್ನಡತಿ ‘ಶಕುಂತಲಾ ದೇವಿ’ ಸಿನಿಮಾ

    ಮುಂಬೈ: ಕನ್ನಡದ ಕೆಲವು ಸಾಧಕರ ಬಗ್ಗೆ ಪರಭಾಷೆಯವರು ಈಗಾಗಲೇ ಸಿನಿಮಾ ಮಾಡಿದ್ದಾರೆ. ಈಗಲೂ ಮಾಡುತ್ತಲೇ ಇದ್ದಾರೆ. ಆದರೆ ಈಗ ಬಾಲಿವುಡ್‍ನಲ್ಲಿ ಕರ್ನಾಟಕದ ಸಾಧಕಿಯ ಸಿನಿಮಾವೊಂದು ತಯಾರಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ.

    ಹೌದು, ಮಾನವ ಕಂಪ್ಯೂಟರ್ ಎಂದೇ ಖ್ಯಾತಿ ಗಳಿಸಿರುವ ಹೆಸರಾಂತ ಗಣಿತಜ್ಞೆ ಶಕುಂತಲಾ ದೇವಿ ಬಗ್ಗೆ ಬಿಟೌನ್‍ನಲ್ಲಿ ಸಿನಿಮಾ ತಯಾರಾಗಿದೆ. ‘ಶಕುಂತಲಾ ದೇವಿ’ ಹೆಸರಿನಲ್ಲಿಯೇ ಸಿನಿಮಾ ನಿರ್ಮಾಣವಾಗಿದ್ದು, ಚಿತ್ರದಲ್ಲಿ ನಟಿ ವಿದ್ಯಾಬಾಲನ್ ಶಕುಂತಲಾ ದೇವಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅನು ಮೆನನ್ ಆ್ಯಕ್ಷನ್ ಕಟ್ ಹೇಳಿದ್ದು, ವಿಕ್ರಂ ಮಲ್ಹೋತ್ರಾ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಜಿಶು ಸೇನ್‍ಗುಪ್ತಾ ಶಕುಂತಲಾ ದೇವಿ ಅವರ ಪತಿ ಪಾತ್ರದಲ್ಲಿ ನಟಿಸಿದ್ದಾರೆ.

    ಒಂದು ವೇಳೆ ಕೊರೊನಾ ವೈರಸ್ ಭಾರತಕ್ಕೆ ವಕ್ಕರಿಸದೇ ಲಾಕ್‍ಡೌನ್ ಮಾಡಿಲ್ಲವಾಗಿದ್ದರೆ ಈ ವೇಳೆಗೆ ‘ಶಕುಂತಲಾ ದೇವಿ’ ಸಿನಿಮಾ ತೆರೆಕಂಡು ಸಿನಿಪ್ರಿಯರ ಮನ ಗೆಲ್ಲುತ್ತಿತ್ತು. ಆದರೆ ಸದ್ಯ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಚಿತ್ರಮಂದಿರಗಳು ಮುಚ್ಚಿದ್ದು, ಸಿನಿಮಾ ತಂಡ ಚಿತ್ರವನ್ನು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಅಮೆಜಾನ್ ಪ್ರೈಂ ನಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ನಿರ್ಮಾಪಕರು ತಿಳಿಸಿದ್ದು, ಸ್ವತಃ ವಿದ್ಯಾ ಬಾಲನ್ ಈ ಬಗ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ಶಕುಂತಲಾ ದೇವಿ 1929ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಮೈಸೂರು ವಿವಿಯಲ್ಲಿ ವಿದ್ಯಾಭ್ಯಾಸ ಮಾಡಿರುವ ಶಕುಂತಲಾ ದೇವಿಗೆ ಗಣಿತ ಎಂದರೆ ಅಚ್ಚುಮೆಚ್ಚು. ಹೀಗಾಗಿ ಗಣಿತದ ಮೇಲೆ ಅವರಿಗೆ ತುಂಬ ಆಸಕ್ತಿ ಹಾಗೂ ಹಿಡಿತವಿತ್ತು. ಚಿಕ್ಕ ವಯಸ್ಸಿನಲ್ಲಿಯೇ ಅವರು ಇತರೆ ಮಕ್ಕಳಿಗೆ ಕಬ್ಬಿಣದ ಕಡಲೆಯಂತಿದ್ದ ಕಷ್ಟವಾದ ಲೆಕ್ಕಗಳನ್ನು ಸಲೀಸಾಗಿ ಬಿಡಿಸುತ್ತಿದ್ದರು. ಇವರು ವರ್ಲ್ಡ್ ರೆಕಾರ್ಡ್ ಕೂಡ ಮಾಡಿದ್ದು, ಹಾಳೆ, ಕ್ಯಾಲ್ಕುಲೇಟರ್ ಸಹಾಯವಿಲ್ಲದೆ ಮನಸ್ಸಿನಲ್ಲಿಯೇ ಗಣಿತದ ಲೆಕ್ಕಗಳನ್ನು ಬಿಡಿಸುವ ಮಟ್ಟಿಗೆ ಅದರ ಮೇಲೆ ಶಕುಂತಲಾ ದೇವಿ ಹಿಡಿತ ಇಟ್ಟುಕೊಂಡಿದ್ದಾರೆ.

    ಕೊರೊನಾ ಹಾವಾಳಿಯಿಂದ ಚಿತ್ರಮಂದಿರಗಳು ಮುಚ್ಚಿರುವ ಹಿನ್ನೆಲೆ ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳನ್ನು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡಗಳು ಮುಂದಾಗಿವೆ. ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಆಯುಷ್ಮನ್ ಖುರಾನಾ ಅಭಿನಯದ ‘ಗುಲಾಬೋ ಸಿತಾಬೋ’ ಸಿನಿಮಾವವನ್ನು ಜೂನ್ 12ಕ್ಕೆ ಜಗತ್ತಿನಾದ್ಯಂತ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ.

    ಈ ಹಿಂದೆ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳು ಒಟಿಟಿ ಪ್ಲಾಟ್ ಫಾರ್ಮ್‍ನ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡುವುದಾಗಿ ಪುನೀತ್ ರಾಜ್‍ಕುಮಾರ್ ತಿಳಿಸಿದ್ದರು. ಈ ಮೂಲಕ ಕನ್ನಡ ನಿರ್ಮಾಕಪರು ಕೂಡ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿದೆ.

    ರಘು ಸಮರ್ಥ ಚಿತ್ರಕಥೆ ಬರೆದು ನಿರ್ದೇಶಿಸಿದ ‘ಲಾ’ ಸಿನಿಮಾ ಜೂನ್ 26ರಂದು ಅಮೆಜಾನ್ ಪ್ರೈಮ್ ಮೂಲಕ ಜಗತ್ತಿನಾದ್ಯಂತ ತೆರೆ ಕಾಣುತ್ತಿದೆ. ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಮೊದಲ ಬಾರಿಗೆ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನೂ ಪನ್ನಗಾಭರಣ ನಿರ್ದೇಶನದ ‘ಫ್ರೆಂಚ್ ಬಿರಿಯಾನಿ’ ಚಿತ್ರವು ಅಮೆಜಾನ್ ಪ್ರೈಮ್‍ನಲ್ಲಿ ಜುಲೈ 24ರಂದು ಬಿಡುಗಡೆಯಾಗಲಿದೆ ಎಂದು ಪಿಆರ್‌ಕೆ ಪ್ರೊಡಕ್ಷನ್ಸ್ ಅಧಿಕೃತವಾಗಿ ಮಾಹಿತಿ ನೀಡಿತ್ತು.

  • ಆರೋಗ್ಯ ಸಿಬ್ಬಂದಿ ರಕ್ಷಣೆಗೆ ನಿಂತ ವಿದ್ಯಾ ಬಾಲನ್

    ಆರೋಗ್ಯ ಸಿಬ್ಬಂದಿ ರಕ್ಷಣೆಗೆ ನಿಂತ ವಿದ್ಯಾ ಬಾಲನ್

    ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಹಲವು ನಟ, ನಟಿಯರು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಕೆಲವರು ಧನಸಹಾಯ ಮಾಡಿದರೆ, ಇನ್ನೂ ಕೆಲವರು ಅಸಹಾಯಕರಿಗೆ ಅಗತ್ಯ ವಸ್ತುಗಳನ್ನು ನಿಡುತ್ತಿದ್ದಾರೆ. ಇನ್ನಷ್ಟು ಜನ ತಾವೇ ಕೊರೊನಾ ವಾರಿಯರ್ಸ್ ಆಗಿ ಹೋರಾಡುತ್ತಿದ್ದಾರೆ. ಆದರೆ ಬಾಲಿವುಡ್ ಖ್ಯಾತ ನಟಿ ವಿದ್ಯಾಬಾಲನ್ ಅವರು ಕೊರೊನಾ ವಾರಿಯರ್ಸ್‍ಗೆ ಸಹಾಯ ಮಾಡಲು ನಿಂತಿದ್ದಾರೆ.

    ಈಗಾಗಲೇ ದೇಶಾದ್ಯಂತ ಬಹುತೇಕ ನಟ, ನಟಿಯರು ತಮ್ಮದೇಯಾದ ಕೊಡುಗೆ ನೀಡುತ್ತಿದ್ದು, ಹಲವರು ಪಿಎಂ ಕೇರ್ಸ್‍ಗೆ ಹಣ ಸಂದಾಯ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಇನ್ನೂ ಕೆಲವರು ಸಂಕಷ್ಟದಲ್ಲಿರುವ ಸಿನಿಮಾ ದಿನಗೂಲಿ ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲಸ ನಟಿಯರು ತಾವೇ ವೈದ್ಯರಾಗಿ, ನರ್ಸ್‍ಗಳಾಗಿ ಕಾರ್ಯನಿರ್ವಹಿಸುವ ಮೂಲಕ ಜೀವ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ನಟಿ ವಿದ್ಯಾಬಾಲನ್ ವೈದ್ಯರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲು ಮುಂದಾಗಿದ್ದಾರೆ.

    ಹಗಲು-ರಾತ್ರಿ ಎನ್ನದೆ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಮತ್ತು ಆರೋಗ್ಯ ಸಿಬ್ಬಂದಿಗೆ ಬೇಕಾಗುವ ಅಗತ್ಯ ಪಿಪಿಇ ಕಿಟ್‍ಗಳನ್ನು ನೀಡಿ ಸಹಾಯ ಮಾಡಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಪಿಪಿಇ ಕಿಟ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಮಸ್ತೆ, ಇಂತಹ ಕಠಿಣ ಪರಿಸ್ಥಿತಿಯಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ರಕ್ಷಣೆಗಾಗಿ ಪಿಪಿಇ ಕಿಟ್‍ಗಳ ಅಗತ್ಯವಿದೆ. ಹೀಗಾಗಿ ನಾವು ಸಹಾಯ ಮಾಡಬೇಕು. ನಾನು 1000 ಪಿಪಿಇ ಕಿಟ್‍ಗಳನ್ನು ಕೊಡುಗೆಯಾಗಿ ನೀಡುತ್ತಿದ್ದೇನೆ. ಅಲ್ಲದೆ ಟ್ರಿಂಗ್ ಜೊತೆಗಿನ ಸಹಭಾಗಿತ್ವದಲ್ಲಿ ಒಂದು ಸಾವಿರ ಪಿಪಿಇ ಕಿಟ್ ತಯಾರಿಗೆ ಸಿದ್ಧತೆ ನಡೆಸಿದ್ದೇವೆ. ಇಂತಹ ಕಠಿಣ ಸಂದರ್ಭದಲ್ಲಿ ಇದು ನಮ್ಮ ವೈದ್ಯರಿಗೆ ಅಗತ್ಯವಿದೆ. ಅಲ್ಲದೆ ನಿಮ್ಮಲ್ಲೂ ಮನವಿ ಮಾಡುತ್ತೇನೆ. ನೀವು ಸಹ ಸಹಾಯ ಮಾಡಿದಲ್ಲಿ ವಿಡಿಯೋ ಸಂದೇಶದ ಮೂಲಕ ವೈಯಕ್ತಿಕವಾಗಿ ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ವಿಡಿಯೋ ನಿಮ್ಮೊಂದಿಗೆ ಶಾಶ್ವತವಾಗಿ ನೆನಪಿನಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

    ವಿದ್ಯಾ ಬಾಲನ್ ಇದಕ್ಕಾಗಿ ಒಂದು ತಂಡವನ್ನೇ ಕಟ್ಟಿಕೊಂಡಿದ್ದು, ಮನಿಶ್ ಚಂದ್ರ ಮತ್ತು ನಿರ್ಮಾಪಕ ಅತುಲ್ ಕಸ್ಬೇಕರ್ ಸಹಭಾಗಿತ್ವದಲ್ಲಿ ಈ ಕಾರ್ಯವನ್ನು ಮಾಡಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ವಿದ್ಯಾಬಾಲನ್, ಇಂತಹ ಸಮಯದಲ್ಲಿ ಆರೋಗ್ಯ ಸಿಬ್ಬಂದಿ ನಮಗೆ ಬಾರ್ಡರ್‍ನಲ್ಲಿ ಹೋರಾಡುವ ಸೈನಿಕರಿದ್ದಂತೆ. ಆದರೆ ಆರೋಗ್ಯ ಸೈನಿಕರಿಗೆ ಸದ್ಯ ಪಿಪಿಇ ಕಿಟ್‍ಗಳ ಕೊರತೆ ಕಾಡುತ್ತಿದ್ದು, ಇವುಗಳು ಹೆಚ್ಚು ಸಿಗುವಂತೆ ಮಾಡಬೇಕಿದೆ ಎಂದಿದ್ದಾರೆ.

    ಒಂದು ವೇಳೆ ಒಂದು ಯುನಿಟ್‍ನ ಒಬ್ಬರಿಗೆ ಕೊರೊನಾ ಸೋಂಕು ತಗುಲಿದರೂ 10-12 ಜನ ಆರೋಗ್ಯ ಸಿಬ್ಬಂದಿಯನ್ನು 2ರಿಂದ 3 ವಾರಗಳ ಕಾಲ ಕ್ವಾರಂಟೈನ್ ಮಾಡುತ್ತಾರೆ. ಆಗ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಕೊರತೆ ಕಾಡುತ್ತದೆ. ಹೀಗಾಗಿ ನನ್ನೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ. ನೀವು ಯಾವ ರೀತಿಯಾಗಿ ಸಹಾಯ ಮಾಡಬಹುದು ಎಂಬುದನ್ನು ಸಹ ವಿದ್ಯಾಬಾಲನ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

  • ಬಾಲಿಯ ಕಡಲ ಕಿನಾರೆಯಲ್ಲಿ ವಿದ್ಯಾ ಬಾಲನ್ ಹಾಟ್ ಪೋಸ್

    ಬಾಲಿಯ ಕಡಲ ಕಿನಾರೆಯಲ್ಲಿ ವಿದ್ಯಾ ಬಾಲನ್ ಹಾಟ್ ಪೋಸ್

    ಬಾಲಿ: ಸದ್ಯ ಸಿನಿಮಾದಿಂದ ದೂರವಿರುವ ಬಾಲಿವುಡ್ ನಟಿ ವಿದ್ಯಾ ಬಾಲನ್ ತಮ್ಮ ಅಮೂಲ್ಯ ಸಮಯವನ್ನು ಕುಟುಂಬ ಹಾಗೂ ಸ್ನೇಹಿತರ ಜೊತೆ ಕಳೆಯುತ್ತಿದ್ದಾರೆ. ಬಾಲಿಯಲ್ಲಿ ವಿದ್ಯಾ ಸ್ನೇಹಿತರ ಜೊತೆ ಹಾಲಿಡೇ ಎಂಜಾಯ್ ಮಾಡುತ್ತಿರುವ ಬೋಲ್ಡ್ ಲುಕ್ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ವಿದ್ಯಾ ಬಾಲನ್ ಪೋಸ್ಟ್ ಮಾಡಿರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಕಡಲ ಕಿನಾರೆಯಲ್ಲಿ ಎಂಜಾಯ್ ಮಾಡ್ತಿರುವ ಫೋಟೋಗಳನ್ನು ಹಾಕಿ, ತಮ್ಮ ಸ್ನೇಹಿತರನ್ನು ಟ್ಯಾಗ್ ಮಾಡಿ ಒಳ್ಳೆಯ ಕ್ಯಾಂಡಿಡ್ ಫೋಟೋಗಳಿಗೆ ಧನ್ಯವಾದ. ಐ ಲವ್ ಮೈ ಡ್ರೆಸ್ ಎಂದು ಬರೆದು ವಿದ್ಯಾ ಪೋಸ್ಟ್ ಮಾಡಿದ್ದಾರೆ.

    ಈ ಫೋಟೋಗಳಲ್ಲಿ ವಿದ್ಯಾ ಲಾಂಗ್ ಡ್ರೆಸ್‍ನಲ್ಲಿ ಸಖತ್ ಹಾಟಾಗಿ ಕಾಣಿಸಿಕೊಂಡಿದ್ದು, ಸುಂದರ ಸ್ಥಳದಲ್ಲಿ ವಿದ್ಯಾ ಅವರ ಬೋಲ್ಡ್ ಲುಕ್‍ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇತ್ತೀಚಿಗೆ ಹೆಚ್ಚಾಗಿ ಕಾಣಿಸಿಕೊಳ್ಳದ ವಿದ್ಯಾರನ್ನು ಹಾಟ್ ಲುಕ್‍ನಲ್ಲಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

    ಬಾಲಿವುಡ್‍ನ ಅನೇಕ ಕಲಾವಿದರು ವಿದ್ಯಾ ಫೋಟೋಗೆ ಪ್ರತಿಕ್ರಿಯೆ ನೀಡಿದ್ದಾರೆ. ಸೋನಾಕ್ಷಿ ಸಿನ್ಹಾ ಪ್ರತಿಕ್ರಿಯಿಸಿ `ನನ್ನನ್ನು ಯಾಕೆ ನಿಮ್ಮ ಜೊತೆ ಕರೆದುಕೊಂದು ಹೋಗಿಲ್ಲಾ’ ಎಂದು ಪ್ರಶ್ನಿಸಿದರೆ, ಪ್ರಿಯಾಂಕ ಚೋಪ್ರಾ `ಸ್ಟನ್ನರ್’ ಎಂದು, ಏಕ್ತಾ ಕಪೂರ್ `ಗಾರ್ಜಿಯ್ಸ್’ ಎಂದು ಕಮೆಂಟ್ ಮಾಡಿದ್ದಾರೆ. ಅಲ್ಲದೆ ವಿದ್ಯಾ ಅವರು ಈ ಫೋಟೋಗಳನ್ನು ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷಕ್ಕಿಂತಲೂ ಹೆಚ್ಚು ಲೈಕ್ಸ್ ಸಿಕ್ಕಿದೆ.

    https://www.instagram.com/p/Byjcgc2nVUf/?utm_source=ig_embed

    ಇತ್ತೀಚಿಗೆ ವಿದ್ಯಾ ತಮ್ಮ ಮೊದಲ ಸಿನಿಮಾ ಪರಿನಿತಾ ತೆರೆಕಂಡು 14 ವರ್ಷಗಳ ಕಳೆದಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು. ಅಲ್ಲದೆ ಅದೇ ವರ್ಷದ ಫಿಲಂ ಫೇರ್ ಅವಾರ್ಡ್ ಕಾರ್ಯಕ್ರಮದಲ್ಲಿ ಅವರು ಉತ್ತಮ ನಟಿ ಪ್ರಶಸ್ತಿ ಗಳಿಸಿದ್ದರು. ಆ ಖುಷಿಯನ್ನು ನೆನೆದು ಅವರು ಪರಿನಿತಾ ಚಿತ್ರದ ಶೂಟಿಂಗ್ ವೇಳೆ ನಡೆದ ಕೆಲ ಫನ್ನಿ ದೃಶ್ಯಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

    https://www.instagram.com/p/ByiATi3ncES/

  • ಬಾಲಿವುಡ್ ನಟಿ ವಿದ್ಯಾ ಬಾಲನ್ ಬಳಿ ಯಶ್ ಮನವಿ

    ಬಾಲಿವುಡ್ ನಟಿ ವಿದ್ಯಾ ಬಾಲನ್ ಬಳಿ ಯಶ್ ಮನವಿ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಈ ಮಧ್ಯೆ ನಟ ಯಶ್ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರನ್ನು ಭೇಟಿ ಮಾಡಿದ್ದು, ಅವರ ಬಳಿ ಒಂದು ಮನವಿ ಮಾಡಿದ್ದಾರೆ.

    ಟಾಲಿವುಡ್ ನಟ ಬಾಲಕೃಷ್ಣ ಅವರು ಅಭಿನಯಿಸಿರುವ ‘ಎನ್.ಟಿ.ಆರ್ ಕಥಾನಾಯಕಡು’ ಸಿನಿಮಾ ಇದೇ ವಾರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಾಲಯ್ಯ ಮತ್ತು ಅವರ ತಂಡ ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಹೋಗಿದ್ದರು. ಈ ವೇಳೆ ನಟ ಯಶ್ ಬಾಲಿವುಡ್ ನಟಿ ವಿದ್ಯಾ ಬಾಲನ್ ಬಳಿ ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ.

    ನಟ ಯಶ್, “ನಿಮ್ಮ ಸಿನಿಮಾಗಳನ್ನ ನಾನು ನೋಡಿ ಬೆಳೆದಿದ್ದೇನೆ. ನಿಮ್ಮ ಕೆಲಸಗಳನ್ನ ನೋಡಿದ್ದೇನೆ. ನಿಮ್ಮನ್ನು ನೋಡಿದರೆ ತುಂಬಾ ಖುಷಿಯಾಗುತ್ತದೆ. ಮುಂದೆ ನೀವು ನಮ್ಮ ಕನ್ನಡ ಸಿನಿಮಾದಲ್ಲೂ ಅಭಿನಯಿಸಿ” ಎಂದು ಯಶ್ ಕೇಳಿದರು. ಅದಕ್ಕೆ ನಟಿ ವಿದ್ಯಾಬಾಲನ್ ‘ನೀವು ನನಗೆ ಆಫರ್ ಕೊಡಿ’ ಎಂದು ಪ್ರತಿಕ್ರಿಯಿಸಿದ್ದಾರೆ.

    ಬಾಲಯ್ಯ ಅವರನ್ನು ಇವತ್ತೇ ನಾನು ಮೊದಲ ಬಾರಿಗೆ ನೋಡಿದ್ದು, ಅವರ ಸಿನಿಮಾವನ್ನು ನೋಡಿದ್ದೇವೆ. ತುಂಬಾ ಖುಷಿಯಾಯಿತು. ನಾವು ಏನು ಕೊಡುತ್ತೇವೆ ಅದನ್ನು ವಾಪಸ್ ಬರುವ ರೀತಿ ಬೆಳೆಯುವುದೇ ಸ್ನೇಹವಾಗಿದೆ. ನಮ್ಮ ಕೆಜಿಎಫ್ ಸಿನಿಮಾಕ್ಕೆ ತೆಲುಗಿನಲ್ಲೂ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ ಎಂದು ಬಾಲಯ್ಯ ಅವರ ಬಗ್ಗೆ ಮಾತನಾಡಿದ್ದರು.

    ಎನ್.ಟಿ.ಆರ್ ಕಥಾನಾಯಕಡು ಚಿತ್ರದಲ್ಲಿ ವಿದ್ಯಾಬಾಲನ್ ಅವರು ಎನ್.ಟಿ.ಆರ್ ಪತ್ನಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರ್, ಬಾಲಯ್ಯ, ಹಾಗೂ ವಿದ್ಯಾ ಬಾಲನ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.