Tag: vijay mallya

  • ಆರ್‌ಸಿಬಿಗೆ ಸೇರಿಸಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ಫೋಟೋ ಹಂಚಿಕೊಂಡ ವಿಜಯ್ ಮಲ್ಯ

    ಆರ್‌ಸಿಬಿಗೆ ಸೇರಿಸಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ಫೋಟೋ ಹಂಚಿಕೊಂಡ ವಿಜಯ್ ಮಲ್ಯ

    ಲಂಡನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)  ತಂಡಕ್ಕೆ ಕ್ರಿಸ್ ಗೇಲ್‍ರನ್ನು ಸೇರಿಸಿಕೊಂಡಾಗಿನಿಂದ ನನಗೆ ಉತ್ತಮ ಸ್ನೇಹಿತ ಎಂದು ಬರೆದುಕೊಂಡು ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಗೇಲ್ ಕುರಿತಾಗಿ ಮೆಚ್ಚುಗೆಯ ನುಡಿಗಳನ್ನು ಬರೆದುಕೊಂಡಿರುವ ಮಲ್ಯ, ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಫರ್ ಹೆನ್ರಿ ಗೇಲ್, ಯೂನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್‌ಸಿಬಿ ತಂಡಕ್ಕೆ ಸೇರಿಸಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ ಒಡನಾಟವಿದ್ದು, ಆತ ನಾ ಕಂಡ ಅತ್ಯುತ್ತಮ ಆಟಗಾರ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ

    2011ರಲ್ಲಿ ಗೇಲ್‍ರನ್ನು ಆರ್‌ಸಿಬಿ ತಂಡ ಖರೀದಿಸಿತ್ತು. ಆ ಬಳಿಕ ಆರ್‌ಸಿಬಿ ತಂಡದಲ್ಲಿ ಮಿಂಚಿದ ಗೇಲ್‍ರನ್ನು 2018ರ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡ ಖರೀದಿಸಿತು. 2022ರ ಐಪಿಎಲ್ ಮೆಗಾ ಹರಾಜಿನಿಂದ ಸ್ವತಃ ಗೇಲ್ ಹಿಂದೆ ಸರಿದು ಐಪಿಎಲ್‍ನಲ್ಲಿ ಆಡಿರಲಿಲ್ಲ. ಇದನ್ನೂ ಓದಿ: 2021-22ರ ಅವಧಿಯಲ್ಲಿ ಟೀಂ ಇಂಡಿಯಾಗೆ 6 ನಾಯಕರು

    ಗೇಲ್ ಐಪಿಎಲ್‍ನಲ್ಲಿ ಒಟ್ಟು 142 ಪಂದ್ಯಗಳಿಂದ 4,965 ರನ್ ಚಚ್ಚಿದ್ದು, ಒಟ್ಟು 3 ಫ್ರಾಂಚೈಸ್‍ಗಳ ಪರ ಆಡಿದ್ದಾರೆ. ಐಪಿಎಲ್‍ನಲ್ಲಿ ಗೇಲ್ ಸಿಡಿಸಿರುವ 175 ರನ್ ವೈಯಕ್ತಿಕ ಹೆಚ್ಚಿನ ಗಳಿಕೆ ಯಾಗಿದೆ.

    Live Tv

  • ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ, ನೀರವ್‌ ಮೋದಿ ಬಗ್ಗೆ ಬೋರಿಸ್‌ ಹೇಳಿದ್ದೇನು?

    ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ, ನೀರವ್‌ ಮೋದಿ ಬಗ್ಗೆ ಬೋರಿಸ್‌ ಹೇಳಿದ್ದೇನು?

    ನವದೆಹಲಿ: ಬ್ಯಾಂಕ್‌ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಂಚಿಸಿ ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿಗಳಾದ ವಿಜಯ್‌ ಮಲ್ಯ ಹಾಗೂ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಬ್ರಿಟಿಷ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಪ್ರತಿಕ್ರಿಯಿಸಿದ್ದಾರೆ.

    ಭಾರತದಲ್ಲಿ ಎರಡು ದಿನ ಪ್ರವಾಸ ಕೈಗೊಂಡಿರುವ ಬೋರಿಸ್‌ ಜಾನ್ಸನ್‌, ವಿಜಯ್‌ ಮಲ್ಯ, ನೀರವ್‌ ಮೋದಿಯನ್ನು ವಿಚಾರಣೆಗಾಗಿ ಭಾರತಕ್ಕೆ ವಾಪಸ್ ಹಸ್ತಾಂತರಿಸಲು ನಾವು ಬಯಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ಯುಕೆ ಸರ್ಕಾರವು ಅವರನ್ನು ಹಸ್ತಾಂತರಿಸಲು ಆದೇಶಿಸಿದೆ. ಅವರನ್ನು ವಿಚಾರಣೆಗಾಗಿ ಭಾರತಕ್ಕೆ ಹಿಂತಿರುಗಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

    ಅವರ ನಡೆಯನ್ನು ನಾವು ಸ್ವಾಗತಿಸುವುದಿಲ್ಲ. ನಾನು ಈಗ ಅದನ್ನು ಸಂಪೂರ್ಣವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ. ಭಾರತದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಕಾನೂನು ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಾರೆ ಈ ಜನರು ಎಂದು ಮಲ್ಯ, ನೀರವ್‌ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನನ್ನ ಸ್ನೇಹಿತನನ್ನು ಭೇಟಿಯಾಗಲಿದ್ದೇನೆ – ಮೋದಿ ಭೇಟಿಗೂ ಮುನ್ನ ಬ್ರಿಟಿಷ್ ಪ್ರಧಾನಿ

    ವಿಜಯ್‌ ಮಲ್ಯ ಮತ್ತು ನೀರವ್‌ ಮೋದಿ ಬ್ಯಾಂಕ್‌ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ.

  • ನಾನೇನು ವಿಜಯ್‌ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್‌ ರಾವತ್‌ ಕಿಡಿ

    ನಾನೇನು ವಿಜಯ್‌ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್‌ ರಾವತ್‌ ಕಿಡಿ

    ಮುಂಬೈ: ಅಕ್ರಮ ಹಣ ವರ್ಗಾವಣೆ ಕಾನೂನಿನ ಅಡಿಯಲ್ಲಿ ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್‌ ರಾವುತ್‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಮಂಗಳವಾರ ಜಪ್ತಿ ಮಾಡಿದೆ. ಈ ಕ್ರಮದ ವಿರುದ್ಧ ಸಂಜಯ್‌ ರಾವತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಾನೇನು ದೇಶ ಬಿಟ್ಟು ಪರಾರಿಯಾಗಿರುವ ವಿಜಯ್‌ ಮಲ್ಯಾ ಅಥವಾ ನೀರವ್‌ ಮೋದಿ ಅಂತಾ ಭಾವಿಸಿದ್ದಾರೆಯೇ ಎಂದು ಇ.ಡಿ ವಿರುದ್ಧ ಸಂಜಯ್‌ ರಾವತ್‌ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನನಗೆ ಇಷ್ಟವಾದಾಗ ಮಾಂಸ ತಿನ್ನಲು ಅವಕಾಶವಿದೆ: ಮೊಯಿತ್ರಾ

    ಇದು ರಾಜಕೀಯ ಸೇಡಿನ ವಿಚಾರವಾಗಿದ್ದರೆ, ಈ ಬಗ್ಗೆ ರಾಜ್ಯಸಭಾ ಅಧ್ಯಕ್ಷರಿಗೆ ಈ ಹಿಂದೆಯೇ ತಿಳಿಸಿದ್ದೆ. ಮಹಾರಾಷ್ಟ್ರ ಸರ್ಕಾರವನ್ನು ಕೆಳಗಿಳಿಸುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಇಲ್ಲದಿದ್ದರೆ ನಾನು ಕೇಂದ್ರ ತನಿಖಾ ಸಂಸ್ಥೆಗಳನ್ನು ಎದುರಿಸಬೇಕಾಗುತ್ತದೆ. ಅವರು ಮನೆಗೆ ಬಂದು ಬೆದರಿಕೆ ಹಾಕಿದರು. ನಂತರ ಈ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಜೆಪಿಯ ಕೆಲವು ಹಿರಿಯ ನಾಯಕರು ನನ್ನನ್ನು ಸಂಪರ್ಕಿಸಿದ್ದರು. ಪಕ್ಷವನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಅವರ ಮಾತನ್ನು ನಾನು ನಿರಾಕರಿಸಿದ್ದಕ್ಕೆ, ಕೇಂದ್ರೀಯ ಸಂಸ್ಥೆಗಳ ತನಿಖೆಯನ್ನು ಎದುರಿಸಬೇಕಾಗುತ್ತದೆ ಎಂದು ಧಮ್ಕಿ ಹಾಕಿದ್ದರು. ನೀವು ಹೇಗಾದರೂ ಈ ಸರ್ಕಾರವನ್ನು ಉರುಳಿಸಬೇಕು. ಆಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ, ನಂತರ ನಾವು ಶಾಸಕರ ಗುಂಪನ್ನು ಮುರಿದು ಸರ್ಕಾರವನ್ನು ರಚಿಸುತ್ತೇವೆ ಎಂದು ಬೆದರಿಸಿದ್ದಾರೆಂದು ರಾವತ್‌ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸುವ ಆನ್‍ಲೈನ್ ಚಾನೆಲ್‍ಗಳಿಗೆ ಅನುರಾಗ್ ಠಾಕೂರ್ ವಾರ್ನಿಂಗ್

    ನಾನೇನು ವಿಜಯ್‌ ಮಲ್ಯಾನಾ? ನೀರವ್‌ ಮೋದಿ ಅಥವಾ ಅಂಬಾನಿ, ಅದಾನಿನಾ? ನಾನು ಪುಟ್ಟ ಮನೆಯೊಂದರಲ್ಲಿ ವಾಸವಾಗಿದ್ದೇನೆ. ನನ್ನ ಹುಟ್ಟೂರಿನಲ್ಲಿ ನನಗೆ ಒಂದೇ ಒಂದು ಎಕರೆ ಜಮೀನು ಇಲ್ಲ. ನನ್ನದೇನಿದ್ದರೂ ಕಷ್ಟಪಟ್ಟು ದುಡಿದ ಹಣ. ತನಿಖಾ ಸಂಸ್ಥೆಗೆ ಏನಾದರೂ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಅನಿಸುತ್ತದೆಯೇ? ನೀವು ನನ್ನನ್ನು ಯಾರೊಂದಿಗೆ ಲಿಂಕ್ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

    ಅವರು ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ಅವರು ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲಿ. ನನ್ನನ್ನು ಗುಂಡಿಕ್ಕಿ ಕೊಲ್ಲಲಿ ಅಥವಾ ಜೈಲಿಗೆ ಕಳುಹಿಸಲಿ. ಸಂಜಯ್ ರಾವತ್ ಬಾಳಾಸಾಹೇಬ್ ಠಾಕ್ರೆ ಅವರ ಅನುಯಾಯಿ ಮತ್ತು ಶಿವಸೈನಿಕ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

    ಸಂಜಯ್‌ ರಾವತ್‌ ಹಾಗೂ ಅವರ ಕುಟುಂಬಕ್ಕೆ ಸೇರಿದ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿರುವ 9 ಕೋಟಿ ಮೌಲ್ಯದ ಭೂಮಿ ಮತ್ತು ಮುಂಬೈನ ದಾದರ್ ಉಪನಗರದಲ್ಲಿರುವ 2 ಕೋಟಿ ಮೌಲ್ಯದ ಫ್ಲ್ಯಾಟ್‌ ಜಪ್ತಿಯಾಗಿವೆ. 1,034 ಕೋಟಿ ಮೌಲ್ಯದ ಮುಂಬೈನ ‘ಪತ್ರಾ ಚಾಲ್’ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾವತ್‌ ಅವರ ಈ ಆಸ್ತಿಗಳನ್ನೂ ಸೇರಿಸಲಾಗಿದೆ.

  • ಲಂಡನ್‌ ಮನೆಯಿಂದಲೇ ವಿಜಯ್‌ ಮಲ್ಯನನ್ನು ಹೊರ ಹಾಕಿದ ಯುಕೆ ಕೋರ್ಟ್‌

    ಲಂಡನ್‌ ಮನೆಯಿಂದಲೇ ವಿಜಯ್‌ ಮಲ್ಯನನ್ನು ಹೊರ ಹಾಕಿದ ಯುಕೆ ಕೋರ್ಟ್‌

    ಲಂಡನ್‌: ಭಾರತೀಯ ಬ್ಯಾಂಕುಗಳಿಂದ ಸುಮಾರು 9 ಸಾವಿರ ಕೋಟಿ ರೂ. ಸಾಲ ಮಾಡಿ ಇಂಗ್ಲೆಂಡ್‌ಗೆ ಪರಾರಿಯಾಗಿರುವ ಮದ್ಯ ಉದ್ಯಮಿ ವಿಜಯ್‌ ಮಲ್ಯ ಅವರನ್ನು ಲಂಡನ್‌ ಮನೆಯಿಂದಲೇ ಯುಕೆ ಕೋರ್ಟ್‌ ಹೊರ ಹಾಕಿದೆ.

    ವಿಜಯ್ ಮಲ್ಯ ಅಲ್ಲದೇ ಇಡೀ ಕುಟುಂಬವನ್ನು ಲಂಡನ್‌ನ ಮನೆಯಿಂದ ಹೊರಹಾಕುವಂತೆ ನ್ಯಾಯಾಲಯ ಆದೇಶ ನೀಡಿದೆ. ಮಲ್ಯ ಅವರ ಕೋಟ್ಯಂತರ ರೂ. ಬೆಲೆ ಬಾಳುವ ಐಷಾರಾಮಿ ಮನೆಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಬೇಕೇ? ಬೇಡವೇ ಎಂಬುದರ ಬಗ್ಗೆ ಹೈಕೋರ್ಟ್ ಕಳೆದ ವಾರ ತೀರ್ಪನ್ನು ಕಾಯ್ದಿರಿಸಿತ್ತು.

    ಇಂದು ತೀರ್ಪು ಪ್ರಕಟಿಸಿದ ಕೋರ್ಟ್‌, ಮಲ್ಯ ಅವರ ಮನೆಯನ್ನು ಸ್ವಿಸ್ ಬ್ಯಾಂಕ್ ಯುಬಿಎಸ್‌ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆದೇಶಿಸಿದೆ. ಇದನ್ನೂ ಓದಿ: 2 ದಿನದಲ್ಲಿ ಮದುವೆ ಇಟ್ಕೊಂಡು ಬ್ಯಾಂಕ್ ದರೋಡೆಗೆ ಬಂದು ಸಿಕ್ಕಿಬಿದ್ದ ಕಳ್ಳ ಮದುಮಗ

    9 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಗಳಿಗೆ ಬಾಕಿ ಹಣ ನೀಡಬೇಕಿರುವ ವಿಜಯ್ ಮಲ್ಯ ಅವರ ಲಂಡನ್ ನಲ್ಲಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ನ್ಯಾಯಾಲಯದಲ್ಲಿ 13 ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಕಾನೂನು ಸಮರ ನಡೆಸುತ್ತಿದೆ.

    2017ರಲ್ಲಿ ಇಂಗ್ಲೆಂಡ್‌ನಲ್ಲಿ ಮಲ್ಯ ಅವರನ್ನು ಬಂಧಿಸಲಾಗಿತ್ತು.  ಉದ್ಯಮಿ ವಿಜಯ್‌ ಮಲ್ಯ ಗಡೀಪಾರಿಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ, ಈ ವಿಷಯದಲ್ಲಿ ಹಲವು ಕಾನೂನು ತೊಡಕುಗಳು ಎದುರಾದ ಕಾರಣ ಗಡೀಪಾರು ಪ್ರಕ್ರಿಯೆ ವಿಳಂಬವಾಗಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಭಾರತದ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಇದನ್ನೂ ಓದಿ: ಬಾಂಬ್ ಮಾಡುವುದನ್ನ ಕಲಿತು ಪತ್ನಿ ಮೇಲೆ ಅತ್ಯಾಚಾರ ಮಾಡಿದವನನ್ನ ಕೊಂದ!

    ಮಲ್ಯ ಪಾಸ್‍ಪೋರ್ಟ್ ರದ್ದು ಮಾಡಿದ್ದ ಭಾರತ, ಇಂಗ್ಲೆಂಡ್ ಸರ್ಕಾರಕ್ಕೆ ಮಲ್ಯರನ್ನು ಗಡೀಪಾರು ಮಾಡುವಂತೆ ಕೇಳಿತ್ತು. ಆದರೆ ಪಾಸ್‍ಪೋರ್ಟ್ ಮಾನ್ಯತೆ ಕಳೆದುಕೊಂಡಿದ್ದರೂ ಯುಕೆ ಪೌರತ್ವ ಪಡೆದವರಿಗೆ  ಇಂಗ್ಲೆಂಡ್‌ನಲ್ಲೇ ನೆಲೆಸಲು ಅವಕಾಶವಿದೆ. ಹೀಗಾಗಿ ಮಲ್ಯ ಲಂಡನ್‌ನಲ್ಲೇ ನೆಲೆಸಿದ್ದಾರೆ.

  • ಇನ್ನು ಕಾಯಲು ಸಿದ್ಧವಿಲ್ಲ: ಮಲ್ಯಗೆ ಶಿಕ್ಷೆ ವಿಧಿಸಲು ಸಿದ್ಧ ಎಂದ ಸುಪ್ರೀಂ

    ಇನ್ನು ಕಾಯಲು ಸಿದ್ಧವಿಲ್ಲ: ಮಲ್ಯಗೆ ಶಿಕ್ಷೆ ವಿಧಿಸಲು ಸಿದ್ಧ ಎಂದ ಸುಪ್ರೀಂ

    ನವದೆಹಲಿ: ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವವರೆಗೆ ಇನ್ನು ಮುಂದೆ ನಾವು ಕಾಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಖಡಕ್ ಆಗಿ ಹೇಳಿದೆ.

    ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ವಿಜಯ್ ಮಲ್ಯ ನ್ಯಾಯಾಂಗ ನಿಂದನ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಮಲ್ಯ ಅವರಿಗಿದ್ದ ಎಲ್ಲ ಮೇಲ್ಮನವಿ ಸಲ್ಲಿಸುವ ಎಲ್ಲ ಮಾರ್ಗಗಳು ಈಗಾಗಲೇ ಮುಗಿದಿದೆ. ಆದರೂ ಕೆಲವು ‘ಗೌಪ್ಯ ಪ್ರಕ್ರಿಯೆಗಳು’ ಬಾಕಿ ಉಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತು. ಇದನ್ನೂ ಓದಿ: ಇಂದು 745 ಜನರು ಡಿಸ್ಚಾರ್ಜ್- 8 ಸಾವು

    SUPREME COURT

    ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವವರೆಗೆ ನಾವು ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ, ಎಂದು ಹೇಳಿದ ನ್ಯಾಯಾಲಯ ಮುಂದಿನ ಕೊನೆಯ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಲಾಗುವುದು. ಶಿಕ್ಷೆ ವಿಧಿಸಲು ನಾವು ಸಿದ್ಧ ಎಂದು ತಿಳಿಸಿತು. ಈ ವೇಳೆ ಮಲ್ಯ ಹಾಜರಾಗದೇ ಇದ್ದರೂ ವಿಚಾರಣೆ ನಡೆಯುತ್ತದೆ ಎಂದು ಹೇಳಿದೆ.

    ಡಿಯಾಗೋ ಒಪ್ಪಂದದ 40 ದಶಲಕ್ಷ ಡಾಲರ್‍ಗಳನ್ನು ತನ್ನ ಮಕ್ಕಳ ವಿದೇಶಿ ಖಾತೆಗಳಿಗೆ ವರ್ಗಾಯಿಸಿದ್ದಕ್ಕಾಗಿ ಮತ್ತು ನಿಖರವಾದ ಆಸ್ತಿ ವಿವರಗಳನ್ನು ನೀಡಲು ವಿಫಲವಾಗಿದ್ದಕ್ಕೆ ಮಲ್ಯ ಅವರನ್ನು ನ್ಯಾಯಾಂಗ ನಿಂದನೆಯ ದೋಷಿ ಎಂದು ಕೋರ್ಟ್ ಘೋಷಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮಲ್ಯ ಅವರ ಮರುಪರಿಶೀಲನಾ ಅರ್ಜಿಯನ್ನೂ ಸಹ ವಜಾಗೊಳಿಸಲಾಗಿದೆ. ಇದನ್ನೂ ಓದಿ: 2 ಡೋಸ್ ಪಡೆದವರಿಗೆ ಚಿಕಿತ್ಸೆ – ಸರ್ಕಾರಿ ಸೌಲಭ್ಯ ಕಡಿತಗೊಳಿಸಿ

    2017ರಲ್ಲಿ ಸುಪ್ರೀಂ ಕೋರ್ಟ್ ಮಲ್ಯ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸಿದ ನಂತರ ಮಲ್ಯ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಹಸ್ತಾಂತರ ಕಾನೂನು ಹೋರಾಟದಲ್ಲಿ ಸೋತ ಬಳಿಕವೂ ಇನ್ನೂ ವಿಜಯ್ ಮಲ್ಯ ಹೇಗೆ ಇಂಗ್ಲೆಂಡಿನಲ್ಲಿ ನೆಲೆಸಿದ್ದಾರೆ ಎಂದು ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.

  • ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಎಎಪಿ

    ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಎಎಪಿ

    ಬೆಂಗಳೂರು: ರಾಜ್ಯದ ಸಾವಿರಾರು ಜನರು ಕೋವಿಡ್‍ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಗದೀಶ್ ವಿ.ಸದಂ ಅವರು, ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್, ಆಕ್ಸಿಜನ್ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕೃತ ವಿರೋಧಪಕ್ಷ ಹೇಳುತ್ತಿದೆ. ರಾಜ್ಯ ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ ಪ್ರಕಾರ ಆಗಸ್ಟ್ 2ರ ತನಕ 36 ಸಾವಿರ ಜನರು ಮೃತಪಟ್ಟಿದ್ದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಲ್ಲಿಸಿರುವ ಡೆತ್ ಆಡಿಟ್‍ನಲ್ಲಿ ಆಗಸ್ಟ್ 2ರ ತನಕ ಕೇವಲ 14,371 ಜನರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ರೀತಿ ಒಂದೊಂದು ಕಡೆ ಒಂದೊಂದು ಅಂಕಿಅಂಶ ಹೇಳುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ- ಕೃಷ್ಣ ಮಠಕ್ಕೆ ಭೇಟಿ

    ಸುತ್ತಮುತ್ತಲಿನ ಮನೆಗಳನ್ನು ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ಮೃತಪಟ್ಟಿರುವ ಸುಳಿವು ಸಿಗುತ್ತಿದೆ. ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‍ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ ಎಂದು ವಾಗ್ದಾಳಿ ನಡೆಸಿದರು.

    ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ 20 ಎಸ್‍ಸಿ/ಎಸ್‍ಟಿ, 27 ಒಬಿಸಿ ಸಚಿವರಿದ್ದಾರೆ ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಆದರೆ ಸತ್ಯವೇನೆಂದರೆ, ಅವರೆನ್ನಲ್ಲ ಕೇವಲ ನಾಮಕಾವಸ್ಥೆಗೆ ಸಚಿವರನ್ನಾಗಿ ಮಾಡಲಾಗಿದೆ. ಆ ಸಚಿವರ ಅಧಿಕಾರವನ್ನೆಲ್ಲಾ ಪ್ರಧಾನಿ ಮೋದಿ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಆ 47 ಸಚಿವರು ಸಣ್ಣ ಕಡತಕ್ಕೆ ಸಹಿ ಹಾಕಬೇಕಾದರೂ ಮೋದಿಯವರ ಅಪ್ಪಣೆ ಪಡೆಯಬೇಕಾಗಿದೆ. ಇನ್ನು ಅವರು ತಮ್ಮ ಸಮುದಾಯದ ಜನರ ಹಿತ ಕಾಪಾಡುವುದು ದೂರದ ಮಾತು. ಕಳೆದ ಏಳು ವರ್ಷಗಳಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಮೋದಿ ಏನು ಮಾಡಿದ್ದಾರೆ? ತೆಲಂಗಾಣ ಸರ್ಕಾರವು ಎಲ್ಲಾ ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿ ನೀಡುವ ಯೋಜನೆ ಘೋಷಿಸಿದೆ. ಅಲ್ಲಿ ಸಾಧ್ಯವಾಗುವ ಇಂತಹ ಯೋಜನೆ ನಮ್ಮಲ್ಲಿ ಏಕೆ ಸಾಧ್ಯವಾಗುವುದಿಲ್ಲ? ಕರ್ನಾಟಕ ಸರ್ಕಾರಕ್ಕೂ ದಲಿತರ ಮೇಲೆ ಕಾಳಜಿ ಇದ್ದರೆ ಅಂತಹದೇ ಯೋಜನೆ ಘೋಷಿಸಲಿ ಎಂದು ಆಗ್ರಹಿಸಿದರು.

    ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುವಷ್ಟು ಹಣ ಸ್ವಿಸ್ ಬ್ಯಾಂಕ್‍ನಲ್ಲಿದ್ದು, ಅದನ್ನು ಭಾರತಕ್ಕೆ ತರುವುದಾಗಿ 2014ರಲ್ಲಿ ಬಿಜೆಪಿ ಹೇಳಿತ್ತು. ಇದನ್ನು ನಂಬಿ ಜನರು ಬಿಜೆಪಿಗೆ ಮತ ಚಲಾಯಿಸಿದ್ದರು. ಆದರೆ ಈಗ ಮಿನಿಮಮ್ ಬ್ಯಾಲೆನ್ಸ್ ಮೇಂಟೇನ್ ಮಾಡಲೂ ಕಷ್ಟಪಡುವಂತಹ ದುಃಸ್ಥಿತಿಗೆ ಜನರನ್ನು ಮೋದಿ ಸರ್ಕಾರ ತಂದಿದೆ. ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್, ಡೀಸೆಲ್‍ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್ ಪೆಟ್ರೋಲ್‍ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‍ಪಿಜಿ) ಸಿಲೆಂಡರ್ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‍ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಬಿಜೆಪಿ ಸರ್ಕಾರವನ್ನು ಸದಂ ಅವರು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಸೆಪ್ಟೆಂಬರ್ 13 ರಿಂದ 10 ದಿನ ವಿಧಾನಮಂಡಲದ ಅಧಿವೇಶನ

    ನೋಟು ಬದಲಾವಣೆಯಿಂದ ದೇಶಕ್ಕೆ ಭಾರೀ ಲಾಭವಾಗುತ್ತದೆ, ಕಪ್ಪುಹಣವೇ ಇಲ್ಲವಾಗುತ್ತದೆ ಎಂದು ನಂಬಿದ ಜನರು ಅಂದು ಕಷ್ಟಗಳನ್ನು ಸಹಿಸಿಕೊಂಡರು. ಆದರೆ ನೋಟು ಬದಲಾವಣೆಯಿಂದ ಎಷ್ಟು ಕಪ್ಪುಹಣ ನಾಶವಾಗಿದೆ ಎಂಬ ಮಾಹಿತಿಯನ್ನು ಆರ್‍ಬಿಐ ಈವರೆಗೂ ನೀಡಿಲ್ಲ. ಚುನಾವಣೆ ಬಂತೆಂದರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಸಾವಿರಾರು ರೂಪಾಯಿಯನ್ನು ಮನೆಮನೆಗೆ ಹಂಚುತ್ತವೆ. ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರನ್ನು ಖರೀದಿಸಲು ನೂರಾರು ಕೋಟಿ ರೂಪಾಯಿಯನ್ನು ಬಿಜೆಪಿ ಖರ್ಚು ಮಾಡುತ್ತದೆ. ನೋಟು ಬದಲಾವಣೆ ಸಂಪೂರ್ಣ ವಿಫಲವಾಗಿದೆ ಎನ್ನುವುದನ್ನು ಇವೆಲ್ಲ ಸಾರಿ ಸಾರಿ ಹೇಳುತ್ತಿವೆ ಎಂದು ಹೇಳಿದರು.

    ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. ಹಿಂದೂ ರಾಷ್ಟ್ರ ಮಾಡುತ್ತೇವೆ ಎಂದು ಹೇಳಿದವರು ಹಿಂದುಳಿದ ರಾಷ್ಟ್ರ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಹೆಚ್ಚುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಗಡಿಯಲ್ಲಿ ಈಗಲೂ ನಮ್ಮ ಯೋಧರು ಹುತಾತ್ಮರಾಗುತ್ತಿದ್ದರೂ ಸರ್ಜಿಕಲ್ ಸ್ಟ್ರೈಕ್ ಎಂಬ ಹಳೇ ಕಥೆಯನ್ನೇ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಗೋಶಾಲೆಗಳು ಅಕ್ರಮದ ಕೇಂದ್ರಬಿಂದುವಾಗಿದ್ದರೂ ಕೇಳುವವರು ಇಲ್ಲವಾಗಿದೆ. ಪಾಕಿಸ್ತಾನ ಸೇನೆಯಿಂದ ಬಂಧಿತರಾಗಿರುವ ಭಾರತದ ಪುತ್ರ ಕುಲಭೂಷಣ್ ಜಾಧವ್‍ರನ್ನು ಮರಳಿ ಕರೆತರುವುದರಲ್ಲೂ ಮೋದಿ ಸರ್ಕಾರ ವಿಫಲವಾಗಿದೆ. ಕೃಷಿ ಕಾಯಿದೆ, ಸಿಎಎ, ಎನ್‍ಆರ್‍ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ. ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿದ್ದರಿಂದ ಎಪಿಎಂಸಿಗಳಲ್ಲಿ ವಹಿವಾಟು ಕಡಿಮೆಯಾಗಿ ಮುಚ್ಚಿಹೋಗಲಿದೆ. ನಂತರ ಖಾಸಗಿಯವರು ಎಪಿಎಂಸಿಯ ಸ್ಥಾನದಲ್ಲಿ ಬಂದು ರೈತರಿಗೆ ಕಿರುಕುಳ ನೀಡಲಿವೆ ಎಂದು ಸದಂ ಬೇಸರ ವ್ಯಕ್ತಪಡಿಸಿದರು.

    ಭಾರತದ ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ವಂಚಿಸಿ ಪರಾರಿಯಾಗಿರುವ ನೀರವ್ ಮೋದಿ ಮತ್ತು ವಿಜಯ್ ಮಲ್ಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಪ್ರತಿ ಚುನಾವಣೆ ಬಂದಾಗಲೂ ನೀರವ್ ಹಾಗೂ ಮಲ್ಯ ಕೆಲವೇ ದಿನಗಳಲ್ಲಿ ಬರುತ್ತಾರೆಂದು ಸುಳ್ಳು ಸುದ್ದಿಯನ್ನು ಬಿಜೆಪಿ ಹಬ್ಬಿಸುತ್ತದೆ. ಆದರೆ ಅವರು ಮಾತ್ರ ಭಾರತೀಯರ ದುಡ್ಡಿನಿಂದ ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಜಗದೀಶ್ ವಿ.ಸದಂ ಆಕ್ರೊಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖೂಬಾ ಕಾರ್ಯಕ್ರಮದಲ್ಲಿ ನಾಡಬಂದೂಕು ಸಿಡಿಸಿದ ಪ್ರಕರಣ- ಮೂವರು ಕಾನ್‍ಸ್ಟೇಬಲ್‍ಗಳ ಅಮಾನತು

    ಆಮ್ ಆದ್ಮಿ ಪಾರ್ಟಿಯ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‍ರವರು ಮಾತನಾಡಿ, ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

  • ವಿಜಯ್ ಮಲ್ಯ ಒಡೆತನದ ಕಿಂಗ್‍ಫಿಷರ್ ಕಟ್ಟಡ 52 ಕೋಟಿಗೆ ಮಾರಾಟ

    ವಿಜಯ್ ಮಲ್ಯ ಒಡೆತನದ ಕಿಂಗ್‍ಫಿಷರ್ ಕಟ್ಟಡ 52 ಕೋಟಿಗೆ ಮಾರಾಟ

    ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯನನ್ನು ದಿವಾಳಿ ಲಂಡನ್ ಹೈಕೋರ್ಟ್ ಎಂದು ಘೋಷಿಸಿದ ದಿವಾಳಿ ಎಂದು ಘೋಷಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತವಾಗಿದೆ. ವಿಜಯ್ ಮಲ್ಯ ಒಡೆತನದ ಕಿಂಗ್‍ಫಿಷರ್ ಹೌಸ್ 52 ಕೋಟಿ ರೂ.ಗೆ ಮಾರಾಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಹೈದರಾಬಾದ್ ಮೂಲದ ಖಾಸಗಿ ಡೆವಲಪರ್ ಸತುರ್ನ್ ರಿಯಲ್ಟರ್ಸ್ 52 ಕೋಟಿ ರೂ.ಗೆ ಕೊಂಡಿದ್ದಾರೆ. ಈ ಕಟ್ಟಡ ವಿಜಯ್ ಮಲ್ಯ ಸ್ಥಾಪಿಸಿದ ಏರ್‍ಲೈನ್‍ನ ಪ್ರಧಾನ ಕಚೇರಿಯಾಗಿದೆ. ಹಲವು ವರ್ಷಗಳಿಂದ ಹರಾಜು ಪ್ರಕ್ರಿಯೆ ನಡೆದಿದ್ದರೂ ಸಾಲದಾತರು ಖರೀದಿದಾರರನ್ನು ಹುಡುಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಮೂಲ ಬೆಲೆಗೆ ಕಟ್ಟಡ ಮಾರಾಟವಾಗಿದೆ.

    ರಿಯಲ್ ಎಸ್ಟೇಟ್ ಉದ್ಯಮದ ತಜ್ಞರ ಪ್ರಕಾರ, ಬ್ಯಾಂಕ್‍ಗಳು ಮೂಲತಃ ಮೀಸಲು ಬೆಲೆಯನ್ನು ಅವಾಸ್ತವಿಕವಾಗಿ ನಿಗದಿಪಡಿಸಿದ್ದರು. ಹೀಗಾಗಿ ಆಸ್ತಿಯು ಹಲವು ಮಿತಿಗಳನ್ನು ಹೊಂದಿತ್ತು. ಮುಂಬೈ ವಿಮಾನ ನಿಲ್ದಾಣದ ಹೊರವಲಯದಲ್ಲಿರುವುದರಿಂದ ಆಸ್ತಿಯನ್ನು ಹೆಚ್ಚು ಅಭಿವೃದ್ಧಿಪಡಿಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

    ಕಟ್ಟಡವು ನೆಲಮಾಳಿಗೆ ಹಾಗೂ ಮೂರು ಅಂತಸ್ತಿನದ್ದಾಗಿದೆ. ಒಟ್ಟು 1,586 ಚ.ಮೀ. ಅಳತೆ ಹೊಂದಿದ್ದು, ಇದರಲ್ಲಿ 2,402 ಚ.ಮೀ. ಪ್ಲಾಟ್ ಮನೆ ಇದೆ. ಹಲವು ಬಾರಿ ಹರಾಜು ಪ್ರಕ್ರಿಯೆ ರದ್ದಾದರೂ ಇದೀಗ ಅಂತಿಮವಾಗಿ ಆಸ್ತಿ ಮಾರಾಟವಾಗಿದೆ.

    ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯನನ್ನು ಇತ್ತೀಚೆಗಷ್ಟೇ ಲಂಡನ್ ಹೈಕೋರ್ಟ್ ದಿವಾಳಿ ಎಂದು ಘೋಷಿಸಿತ್ತು. ಈ ಮೂಲಕ ಭಾರತೀಯ ಬ್ಯಾಂಕ್‍ಗಳಿಗೆ ಜಯ ಸಿಕ್ಕಂತಾಗಿದೆ. ಎಸ್‍ಬಿಐ ನೇತೃತ್ವದ ಭಾರತೀಯ ಬ್ಯಾಂಕ್‍ಗಳ ಒಕ್ಕಟವು ಇದೀಗ ಸ್ಥಗಿತಗೊಂಡಿರುವ ವಿಜಯ್ ಮಲ್ಯ ಅವರ ಕಿಂಗ್‍ಫಿಶರ್ ಏರ್ ಲೈನ್ಸ್ ಗೆ ನೀಡಿದ ಸಾಲವನ್ನು ವಸೂಲಿ ಮಾಡಲು ಈ ತೀರ್ಪು ಸಹಾಯವಾಗಿದೆ. ಮಲ್ಯ ಅವರು ಹೈ ಕೋರ್ಟ್ ತೀರ್ಪಿನ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಿದ್ದರು ಆದರೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು.

    ಮೇ ತಿಂಗಳಲ್ಲಿ ಯುಕೆ ಕೋರ್ಟ್ ಎಸ್‍ಬಿಐ ನೇತೃತ್ವದ ಸಾಲದಾತ ಒಕ್ಕೂಟದ ದಿವಾಳಿತನದ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದಿತ್ತು. ಭಾರತದಲ್ಲಿ ಮಲ್ಯ ಅವರ ಆಸ್ತಿಗಳ ಮೇಲಿನ ಭದ್ರತೆಯನ್ನು ಮನ್ನಾ ಮಾಡುವ ಪರವಾಗಿ ಅರ್ಜಿಯನ್ನು ಎತ್ತಿಹಿಡಿದಿತ್ತು.

    ಭದ್ರತಾ ಹಕ್ಕುಗಳನ್ನು ಮನ್ನಾ ಮಾಡುವುದನ್ನು ತಡೆಯುವಂತೆ ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಈ ಮನವಿಯಲ್ಲಿ ಯಾವುದೇ ಸಾರ್ವಜನಿಕ ನೀತಿ ಇಲ್ಲ ಎಂದು ಘೋಷಿಸಿ ಬ್ಯಾಂಕ್‍ಗಳ ಪರವಾಗಿ ಚೀಫ್ ಇನ್ಸೋಲ್ವೆನ್ಸೀಸ್ ಆ್ಯಂಡ್ ಕಂಪನೀಸ್ ಕೋರ್ಟ್ (ಐಸಿಸಿ) ಜಡ್ಜ್ ಮೈಕೆಲ್ ಬ್ರಿಗ್ಸ್ ಆದೇಶ ನೀಡಿದ್ದರು.

  • ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್

    ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್

    – ಭಾರತೀಯ ಬ್ಯಾಂಕ್‍ಗಳಿಗೆ ಬಹುದೊಡ್ಡ ವಿಜಯ

    ಲಂಡನ್: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯನನ್ನು ಲಂಡನ್ ಹೈ ಕೋರ್ಟ್ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಭಾರತೀಯ ಬ್ಯಾಂಕ್‍ಗಳಿಗೆ ಜಯ ಸಿಕ್ಕಂತಾಗಿದೆ.

    ಎಸ್‍ಬಿಐ ನೇತೃತ್ವದ ಭಾರತೀಯ ಬ್ಯಾಂಕ್‍ಗಳ ಒಕ್ಕಟವೂ ಇದೀಗ ಸ್ಥಗಿತಗೊಂಡಿರುವ ವಿಜಯ್ ಮಲ್ಯ ಅವರ ಕಿಂಗ್‍ಫಿಶರ್ ಏರ್ ಲೈನ್ಸ್ ಗೆ ನೀಡಿದ ಸಾಲವನ್ನು ವಸೂಲಿ ಮಾಡಲು ಈ ತೀರ್ಪು ಸಹಾಯ ಮಾಡುತ್ತದೆ. ಮಲ್ಯ ಅವರು ಹೈ ಕೋರ್ಟ್ ತೀರ್ಪಿನ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಿದ್ದರು ಆದರೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

    ಮೇ ತಿಂಗಳಲ್ಲಿ ಯುಕೆ ಕೋರ್ಟ್ ಎಸ್‍ಬಿಐ ನೇತೃತ್ವದ ಸಾಲದಾತ ಒಕ್ಕೂಟದ ದಿವಾಳಿತನದ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದಿತ್ತು. ಭಾರತದಲ್ಲಿ ಮಲ್ಯ ಅವರ ಆಸ್ತಿಗಳ ಮೇಲಿನ ಭದ್ರತೆಯನ್ನು ಮನ್ನಾ ಮಾಡುವ ಪರವಾಗಿ ಅರ್ಜಿಯನ್ನು ಎತ್ತಿಹಿಡಿದಿತ್ತು.

    ಭದ್ರತಾ ಹಕ್ಕುಗಳನ್ನು ಮನ್ನಾ ಮಾಡುವುದನ್ನು ತಡೆಯುವಂತೆ ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಈ ಮನವಿಯಲ್ಲಿ ಯಾವುದೇ ಸಾರ್ವಜನಿಕ ನೀತಿ ಇಲ್ಲ ಎಂದು ಘೋಷಿಸಿ ಬ್ಯಾಂಕ್‍ಗಳ ಪರವಾಗಿ ಚೀಫ್ ಇನ್ಸೋಲ್ವೆನ್ಸೀಸ್ ಆ್ಯಂಡ್ ಕಂಪನೀಸ್ ಕೋರ್ಟ್ (ಐಸಿಸಿ) ಜಡ್ಜ್ ಮೈಕೆಲ್ ಬ್ರಿಗ್ಸ್ ಆದೇಶ ನಿಡಿದ್ದರು.

    ಫೆಬ್ರವರಿಯಲ್ಲಿ ಡೆಪ್ಯೂಟಿ ಐಸಿಸಿ ನ್ಯಾಯಾಧೀಶ ಬರ್ನೆಟ್ ನೀಡಿದ ಆದೇಶವನ್ನು ಪ್ರಶ್ನಿಸಿ ವಿಜಯ್ ಮಲ್ಯ ಹೈ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬಾರ್ನೆಟ್ ಅವರು, ಭವಿಷ್ಯದ ಕಾನೂನು ಶುಲ್ಕ ಹಾಗೂ ತನ್ನ ಜೀವನ ಸಾಗಿಸಲು ಮಾಸಿಕ 23 ಲಕ್ಷ ರೂ.ಗಳನ್ನು ಕೋರ್ಟ್ ಫಂಡ್ಸ್ ಆಫೀಸ್‍ನಿಂದ ನೀಡಲು ಅನುಮತಿಸಿದ್ದರು. ಆದರೆ ಇದರಲ್ಲಿ ಭಾರತದಲ್ಲಿನ ವಕೀಲರಿಗೆ ನೀಡುವ ಹಣವನ್ನು ಸೇರಿಸಿರಲಿಲ್ಲ. ಹೀಗಾಗಿ ಇದೀಗ ಭಾರತದಲ್ಲಿನ ವಕೀಲರ ಶುಲ್ಕವನ್ನು ಸಹ ಕೋಟ್ರ್ಸ್ ಫಂಡ್ಸ್ ಆಫೀಸ್‍ನಿಂದ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 12 ಕೋಟಿ ರೂ. ಆಸ್ತಿಯನ್ನು ಬಳಸಲು ಮಲ್ಯಗೆ ಬರ್ನೆಟ್ ಅವರು ಆಗ ಅನುಮತಿ ನೀಡಿದ್ದರು.

    ಈಗಾಗಲೇ ಮಲ್ಯ ಭಾರತದಲ್ಲಿನ ಕಾನೂನು ಸಂಸ್ಥೆಗಳಿಗೆ ನೀಡುವ 5.7 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅಲ್ಲದೆ ಭಾರತದಲ್ಲಿನ ಭವಿಷ್ಯದ ಕಾನೂನು ವೆಚ್ಚಗಳಿಗಾಗಿ ಅವರಿಗೆ ಇನ್ನೂ 2 ಕೋಟಿ ರೂ. ಅಗತ್ಯವಿದೆ ಎಂದು ಬ್ರಿಟಿಷ್ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

    ಮಲ್ಯ ಪರ ವಕೀಲ ಫಿಲಿಪ್ ಮಾರ್ಷಲ್ ಕ್ಯೂಸಿ ಅವರು ಈ ಕುರಿತು ನ್ಯಾಯಾಲಯಕ್ಕೆ ತಿಳಿಸಿದ್ದು, ನನ್ನ ಕಕ್ಷಿದಾರ ಈ ಪ್ರಕರಣಗಳಿಗೆ ಸ್ವತಃ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಅವರು `ಜೈಲುವಾಸ ಅನುಭವಿಸುತ್ತಿದ್ದಾರೆ’. ವಿಜಯ್ ಮಲ್ಯ ಅವರ ರಾಜಿ ಇತ್ಯರ್ಥದ 3 ಪ್ರೊಸಿಡಿಂಗ್ಸ್‍ಗಳು ಭಾರತದ ಸುಪ್ರೀಂ ಕೋರ್ಟ್ ಮುಂದಿವೆ. ತೀರ್ಪಿನ ಸಾಲದ ಮೇಲೆ ವಿಧಿಸಲಾಗುತ್ತಿರುವ ಶೇ.11.5 ಬಡ್ಡಿ ಹಾಗೂ `ಪರಾರಿಯಾದ ಆರ್ಥಿಕ ಅಪರಾಧಿ’ ಹಣೆಪಟ್ಟಿ ಕುರಿತು ಮೂರು ಸೆಟ್‍ಗಳ ವಿಚಾರಣೆಗಳು ಭಾರತದ ಸುಪ್ರೀಂ ಕೋರ್ಟ್‍ನಲ್ಲಿ ನಡೆಯುತ್ತಿವೆ ಎಂದು ಅವರು ಹೇಳಿದ್ದರು.

    ಬಡ್ಡಿದರ ಪಾವತಿಸುವ ಸವಾಲಿನಲ್ಲಿ ಮಲ್ಯ ಯಶಸ್ವಿಯಾದರೆ, ತೀರ್ಪಿನ ಸಾಲವನ್ನು 5,851 ಕೋಟಿ ರೂ.ಗೆ ಇಳಿಸಲಾಗುತ್ತದೆ. ಉಳಿದ ಹಣವನ್ನು ಆಸ್ತಿಗಳ ಮೂಲಕ ಪೂರೈಸಬಹುದು. ಅವರ ಆಸ್ತಿಗಳು ಮೂರನೇ ವ್ಯಕ್ತಿಗಳ ಕೊಡುಗೆಗಳಾಗಿವೆ. ರಾಜಿ ಇತ್ಯರ್ಥಕ್ಕೆ ಅನುಮೋದನೆ ನೀಡಿದರೆ ತೀರ್ಪಿನ ಸಂಪೂರ್ಣ ಸಾಲವನ್ನು ತೀರಿಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ವಿವರಿಸಿದ್ದರು.

    ಭಾರತದಲ್ಲಿನ ವಕೀಲರಿಗೆ ಸೂಚನೆ ನೀಡಲು ಅವಕಾಶ ನೀಡದಿರುವುದು ಆಕ್ರಮಣಕಾರಿ. ಅಲ್ಲದೆ ಭಾರತದಲ್ಲಿ ಈ ಪ್ರಕರಣಗಳು ಪ್ರಗತಿ ಸಾಧಿಸುತ್ತಿಲ್ಲ. ವಿಚಾರಣೆಗಳು ಪ್ರಗತಿ ಸಾಧಿಸದಿರಲು ಹಣದ ಕೊರತೆ ಹಾಗೂ ಕೊರೊನಾ ಪರಿಸ್ಥಿತಿ ಕಾರಣ ಎಂದು ಮಲ್ಯ ಪರ ವಕೀಲ ಮಾರ್ಷಲ್ ಅವರು ಈ ಹಿಂದೆ ಕೋರ್ಟ್‍ಗೆ ತಿಳಿಸಿದ್ದರು.

  • ಮಲ್ಯ, ಮೋದಿ, ಚೋಕ್ಸಿಯ 18,170 ಕೋಟಿ ರೂ. ಆಸ್ತಿ ಜಪ್ತಿ

    ಮಲ್ಯ, ಮೋದಿ, ಚೋಕ್ಸಿಯ 18,170 ಕೋಟಿ ರೂ. ಆಸ್ತಿ ಜಪ್ತಿ

    ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ.

    ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 18,170 ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‍ಎ ಕಾಯ್ದೆ ಅಡಿ ಜಪ್ತಿ ಮಾಡಿದೆ.

    ಈ ಮೂಲಕ ಮೂವರಿಂದ ಬ್ಯಾಂಕ್‍ಗಳಿಗೆ ಆಗಿರುವ ನಷ್ಟದ ಶೇ.80ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ 9,371 ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ ಒಪ್ಪಿಸಲಾಗಿದೆ ಎಂದು ಇಡಿ ಟ್ವಿಟ್ಟರ್ ನಲ್ಲಿ ತಿಳಿಸಿದೆ. ಇದನ್ನೂ ಓದಿ: ಸ್ಫೋಟಕ ಬಳಸಿ ನೀರವ್ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ- ವಿಡಿಯೋ ನೋಡಿ

    ವಿಜಯ್ ಮಲ್ಯ ಹಾಗೂ ನೀರವ್ ಮೋದಿ, ಭಾರತದ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ದೇಶ ಬಿಟ್ಟು ಪರಾರಿಯಾಗಿ ಇದೀಗ ಲಂಡನ್‍ನಲ್ಲಿ ನೆಲೆಸಿದ್ದಾರೆ. ಇಬ್ಬರನ್ನು ದೇಶಕ್ಕೆ ಕರೆತರಲು ಭಾರತ ಸರ್ಕಾರ ಇಂಗ್ಲೆಂಡ್ ಕೋರ್ಟ್‍ನಲ್ಲಿ ಕಾನೂನು ಹೋರಾಟ ನಡೆಸುತ್ತಿದೆ. ಡೊಮಿನಿಕಾದಲ್ಲಿ ಸಿಕ್ಕಿ ಬಿದ್ದಿರುವ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿದೆ. ಡೊಮಿನಿಕಾ ಸರ್ಕಾರ ಚೋಕ್ಸಿಯನ್ನು ನಿಷೇಧಿತ ವಲಸಿಗ ಎಂದು ಘೋಷಿಸಿದ್ದು, ಭಾರತದ ಕಾನೂನು ಹೋರಾಟಕ್ಕೆ ಬಲ ಬಂದಿದೆ.

  • ನನ್ನ ಬಳಿ ಹಣವಿಲ್ಲ, ಲಾಯರ್ ಫೀಸ್ ಕಟ್ಟಲು 7.8 ಕೋಟಿ ಕೊಡಿ- ಲಂಡನ್ ಕೋರ್ಟ್‍ಗೆ ಮಲ್ಯ ಮನವಿ

    ನನ್ನ ಬಳಿ ಹಣವಿಲ್ಲ, ಲಾಯರ್ ಫೀಸ್ ಕಟ್ಟಲು 7.8 ಕೋಟಿ ಕೊಡಿ- ಲಂಡನ್ ಕೋರ್ಟ್‍ಗೆ ಮಲ್ಯ ಮನವಿ

    ಲಂಡನ್: ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಯಾಗಿ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ ಲಾಯರ್ ಫೀಸ್ ಕಟ್ಟಲು ಮತ್ತೆ ಬ್ರಿಟಿಷ್ ಕೋರ್ಟ್ ಮೊರೆ ಹೋಗಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ವಿಜಯ್ ಮಲ್ಯ, ಭಾರತದಲ್ಲಿನ ವಕೀಲರಿಗೆ ನೀಡಲು ನನ್ನ ಬಳಿ ಹಣವಿಲ್ಲ. ವಕೀಲರಿಗೆ ಹಣ ನೀಡಲು ಲಂಡನ್‍ನ ಕೋರ್ಟ್ ಫಂಡ್ಸ್ ಆಫೀಸ್‍ನಿಂದ 7.8 ಕೋಟಿ ರೂ. ಕೊಡಿ ಎಂದು ಮನವಿ ಮಾಡಿದ್ದಾರೆ.

    ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಮಲ್ಯರ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ನನ್ನ ಬಳಿ ಹಣವಿಲ್ಲ, ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಹೀಗಾಗಿ ಭಾರತದಲ್ಲಿನ ವಕೀಲರ ಶುಲ್ಕವನ್ನು ಭರಿಸಲು ನನ್ನಿಂದ ಆಗುತ್ತಿಲ್ಲ. ವಕೀಲರ ಶುಲ್ಕ ಪಾವತಿಸಲು 7.8 ಕೋಟಿ ರೂ. ನೀಡಿ ಎಂದು ಮಲ್ಯ ಮೇಲ್ಮನವಿ ಸಲ್ಲಿಸಿದ್ದಾರೆ.

    ಫೆಬ್ರವರಿಯಲ್ಲಿ ಡೆಪ್ಯೂಟಿ ಐಸಿಸಿ ನ್ಯಾಯಾಧೀಶ ಬರ್ನೆಟ್ ನೀಡಿದ ಆದೇಶವನ್ನು ಪ್ರಶ್ನಿಸಿ ವಿಜಯ್ ಮಲ್ಯ ಇದೀಗ ಹೈ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬಾರ್ನೆಟ್ ಅವರು, ಭವಿಷ್ಯದ ಕಾನೂನು ಶುಲ್ಕ ಹಾಗೂ ತನ್ನ ಜೀವನ ಸಾಗಿಸಲು ಮಾಸಿಕ 23 ಲಕ್ಷ ರೂ.ಗಳನ್ನು ಕೋರ್ಟ್ ಫಂಡ್ಸ್ ಆಫೀಸ್‍ನಿಂದ ನೀಡಲು ಅನುಮತಿಸಿದ್ದರು. ಆದರೆ ಇದರಲ್ಲಿ ಭಾರತದಲ್ಲಿನ ವಕೀಲರಿಗೆ ನೀಡುವ ಹಣವನ್ನು ಸೇರಿಸಿರಲಿಲ್ಲ. ಹೀಗಾಗಿ ಇದೀಗ ಭಾರತದಲ್ಲಿನ ವಕೀಲರ ಶುಲ್ಕವನ್ನು ಸಹ ಕೋಟ್ರ್ಸ್ ಫಂಡ್ಸ್ ಆಫೀಸ್‍ನಿಂದ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 12 ಕೋಟಿ ರೂ. ಆಸ್ತಿಯನ್ನು ಬಳಸಲು ಮಲ್ಯಗೆ ಬರ್ನೆಟ್ ಅವರು ಆಗ ಅನುಮತಿ ನೀಡಿದ್ದರು.

    ಈಗಾಗಲೇ ಮಲ್ಯ ಭಾರತದಲ್ಲಿನ ಕಾನೂನು ಸಂಸ್ಥೆಗಳಿಗೆ ನೀಡುವ 5.7 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅಲ್ಲದೆ ಭಾರತದಲ್ಲಿನ ಭವಿಷ್ಯದ ಕಾನೂನು ವೆಚ್ಚಗಳಿಗಾಗಿ ಅವರಿಗೆ ಇನ್ನೂ 2 ಕೋಟಿ ರೂ. ಅಗತ್ಯವಿದೆ ಎಂದು ಬ್ರಿಟಿಷ್ ನ್ಯಾಯಾಲಯಕ್ಕೆ ತಿಳಿಸಲಾಗಿದೆ.

    ಮಲ್ಯ ಪರ ವಕೀಲ ಫಿಲಿಪ್ ಮಾರ್ಷಲ್ ಕ್ಯೂಸಿ ಅವರು ಈ ಕುರಿತು ನ್ಯಾಯಾಲಯಕ್ಕೆ ತಿಳಿಸಿದ್ದು, ನನ್ನ ಕಕ್ಷಿದಾರ ಈ ಪ್ರಕರಣಗಳಿಗೆ ಸ್ವತಃ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಅವರು ‘ಜೈಲುವಾಸ ಅನುಭವಿಸುತ್ತಿದ್ದಾರೆ’. ವಿಜಯ್ ಮಲ್ಯ ಅವರ ರಾಜಿ ಇತ್ಯರ್ಥದ 3 ಪ್ರೊಸಿಡಿಂಗ್ಸ್‍ಗಳು ಭಾರತದ ಸುಪ್ರೀಂ ಕೋರ್ಟ್ ಮುಂದಿವೆ. ತೀರ್ಪಿನ ಸಾಲದ ಮೇಲೆ ವಿಧಿಸಲಾಗುತ್ತಿರುವ ಶೇ.11.5 ಬಡ್ಡಿ ಹಾಗೂ ‘ಪರಾರಿಯಾದ ಆರ್ಥಿಕ ಅಪರಾಧಿ’ ಹಣೆಪಟ್ಟಿ ಕುರಿತು ಮೂರು ಸೆಟ್‍ಗಳ ವಿಚಾರಣೆಗಳು ಭಾರತದ ಸುಪ್ರೀಂ ಕೋರ್ಟ್‍ನಲ್ಲಿ ನಡೆಯುತ್ತಿವೆ ಎಂದು ಅವರು ಹೇಳಿದರು.

    ಬಡ್ಡಿದರ ಪಾವತಿಸುವ ಸವಾಲಿನಲ್ಲಿ ಮಲ್ಯ ಯಶಸ್ವಿಯಾದರೆ, ತೀರ್ಪಿನ ಸಾಲವನ್ನು 5,851 ಕೋಟಿ ರೂ.ಗೆ ಇಳಿಸಲಾಗುತ್ತದೆ. ಉಳಿದ ಹಣವನ್ನು ಆಸ್ತಿಗಳ ಮೂಲಕ ಪೂರೈಸಬಹುದು. ಅವರ ಆಸ್ತಿಗಳು ಮೂರನೇ ವ್ಯಕ್ತಿಗಳ ಕೊಡುಗೆಗಳಾಗಿವೆ. ರಾಜಿ ಇತ್ಯರ್ಥಕ್ಕೆ ಅನುಮೋದನೆ ನೀಡಿದರೆ ತೀರ್ಪಿನ ಸಂಪೂರ್ಣ ಸಾಲವನ್ನು ತೀರಿಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

    ಭಾರತದಲ್ಲಿನ ವಕೀಲರಿಗೆ ಸೂಚನೆ ನೀಡಲು ಅವಕಾಶ ನೀಡದಿರುವುದು ಆಕ್ರಮಣಕಾರಿ. ಅಲ್ಲದೆ ಭಾರತದಲ್ಲಿ ಈ ಪ್ರಕರಣಗಳು ಪ್ರಗತಿ ಸಾಧಿಸುತ್ತಿಲ್ಲ. ವಿಚಾರಣೆಗಳು ಪ್ರಗತಿ ಸಾಧಿಸದಿರಲು ಹಣದ ಕೊರತೆ ಹಾಗೂ ಕೊರೊನಾ ಪರಿಸ್ಥಿತಿ ಕಾರಣ ಎಂದು ಮಲ್ಯ ಪರ ವಕೀಲ ಮಾರ್ಷಲ್ ಅವರು ಕೋರ್ಟ್‍ಗೆ ತಿಳಿಸಿದ್ದಾರೆ.