Tag: vijay mallya

  • ವಿಜಯ್ ಮಲ್ಯಗೆ ಮತ್ತೊಂದು ಸಂಕಷ್ಟ- ಶೀಘ್ರದಲ್ಲಿ ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು

    ವಿಜಯ್ ಮಲ್ಯಗೆ ಮತ್ತೊಂದು ಸಂಕಷ್ಟ- ಶೀಘ್ರದಲ್ಲಿ ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು

    ನವದೆಹಲಿ: ಬ್ಯಾಂಕ್‍ಗಳಿಗೆ ವಂಚಿಸಿದ ಆರೋಪ ಹೊತ್ತು ದೇಶ ತೊರೆದಿರುವ ಉದ್ಯಮಿ ವಿಜಯ್ ಮಲ್ಯ, ತನ್ನ ಮಕ್ಕಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ.

    2017ರ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮರು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಯು.ಯು ಲಲಿತ್ ಹಾಗೂ ನ್ಯಾ. ಅಶೋಕ್ ಭೂಷಣ್ ನೇತೃತ್ವದ ದ್ವಿ-ಸದಸ್ಯ ಪೀಠ ಶೀಘ್ರದಲ್ಲಿ ಅಂತಿಮ ತೀರ್ಪು ನೀಡಲಿದೆ.

    ಬ್ಯಾಂಕುಗಳಿಗೆ ವಂಚನೆ ಆರೋಪದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಉದ್ಯಮಿ ವಿಜಯ್ ಮಲ್ಯ ತನ್ನ ಮಕ್ಕಳಾದ ಸಿದಾರ್ಥ ಮಲ್ಯ ಮತ್ತು ಲಿಯಾನಾ, ತಾನ್ಯ ಮಲ್ಯಗೆ 40 ಮಿಲಿಯನ್ ಡಾಲರ್ ಹಣವನ್ನು ವರ್ಗಾಯಿಸಿದ್ದರು.

    ಇದನ್ನು ಪ್ರಶ್ನಿಸಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ  ಸುಪ್ರೀಂ ಕೋರ್ಟ್ 2017 ರಲ್ಲಿ ಇದೊಂದು ಅಕ್ರಮ ಹಣ ವರ್ಗಾವಣೆ ಎಂದು ತೀರ್ಪು ನೀಡಿತ್ತು ಮತ್ತು ಹಣ ಹಿಂದುರಿಗಿಸಲು ವಿಜಯ್ ಮಲ್ಯ ಮಕ್ಕಳಿಗೆ ಸೂಚನೆ ನೀಡಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿಜಯ್ ಮಲ್ಯ ಸುಪ್ರೀಂಕೋರ್ಟ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

    ಪ್ರಕರಣ ವಿಚಾರಣೆ ವೇಳೆ ಕಳೆದ ಮೂರು ವರ್ಷಗಳಿಂದ ಮಲ್ಯ ಸಲ್ಲಿಸಿದ ಪರಿಶೀಲನಾ ಅರ್ಜಿಯನ್ನು ಏಕೆ ಪಟ್ಟಿ ಮಾಡಲಾಗಿಲ್ಲ ಎಂದು ಜೂನ್ 19 ರಂದು ನ್ಯಾಯಾಲಯವು ತನ್ನದೇ ನೋಂದಾವಣಿ ಕಚೇರಿಯಿಂದ ವಿವರಣೆಯನ್ನು ಕೋರಿತು. ಈ ಸಮಯದಲ್ಲಿ ಈ ಪ್ರಕರಣವನ್ನು ಏಕೆ ಪಟ್ಟಿ ಮಾಡಲಾಗಿಲ್ಲ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಿಂದ ಈಗ ವಿವರಣೆ ಕೋರಿದೆ. ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಹೆಸರನ್ನು ಸಹ ಕೇಳಿದೆ.

  • ವಿಜಯ್ ಮಲ್ಯಗೆ ಸಂಬಂಧಿಸಿದ ಮಹತ್ವದ ದಾಖಲೆ ಮಿಸ್

    ವಿಜಯ್ ಮಲ್ಯಗೆ ಸಂಬಂಧಿಸಿದ ಮಹತ್ವದ ದಾಖಲೆ ಮಿಸ್

    -ವಿಚಾರಣೆ ಆಗಸ್ಟ್ 20ಕ್ಕೆ ಮುಂದೂಡಿಕೆ

    ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದು ಲಭ್ಯವಿಲ್ಲದ ಹಿನ್ನೆಲೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.

    2017 ಜುಲೈ 14ರಂದು ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಬೇಕಿತ್ತು. ದಾಖಲೆ ಲಭ್ಯವಿಲ್ಲದ ಹಿನ್ನೆಲೆ ದ್ವಿಸದಸ್ಯ ಪೀಠ ವಿಚಾರಣೆ ಮುಂದೂಡಿದೆ. ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿರುವ ವಿಜಯ್ ಮಲ್ಯ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.

    ವಿಜಯ್ ಮಲ್ಯ ನ್ಯಾಯಾಂಗ ಆದೇಶಗಳನ್ನು ಉಲ್ಲಂಘಿಸಿ ಅಂದಾಜು 299 ಕೋಟಿ ರೂಪಾಯಿ ಹಣವನ್ನು ಮಕ್ಕಳಿಗೆ ಅಕ್ರಮವಾಗಿ ವರ್ಗಾಯಿಸಿದ್ದಾರೆ ಎಂದು ವಿವಿಧ ಬ್ಯಾಂಕುಗಳು ದೂರು ಸಲ್ಲಿಸಿದ್ದವು. ಈ ಅರ್ಜಿಯ ವಿಚಾರಣೆಯ ನಡೆಸಿದ್ದ ನ್ಯಾಯಾಲತ ಮಲ್ಯ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪು ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.

  • ಶೀಘ್ರದಲ್ಲೇ ಮದ್ಯದ ದೊರೆ ಮಲ್ಯ ಭಾರತಕ್ಕೆ

    ಶೀಘ್ರದಲ್ಲೇ ಮದ್ಯದ ದೊರೆ ಮಲ್ಯ ಭಾರತಕ್ಕೆ

    ನವದೆಹಲಿ: ಭಾರತದ ಬ್ಯಾಂಕ್‍ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.

    ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಸಂಬಂಧ ಬ್ರಿಟನ್‍ನಲ್ಲಿ ಎಲ್ಲಾ ಕಾನೂನು ವಿಧಿವಿಧಾನಗಳು ಪೂರ್ಣಗೊಂಡಿವೆ. ಹೀಗಾಗಿ ಅವರನ್ನು ಯಾವುದೇ ಸಮಯದಲ್ಲಿ ಭಾರತಕ್ಕೆ ಮರಳಿ ತರಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಮಲ್ಯ ಅವರನ್ನು ಬಂಧಿಸಿದ ಬಳಿಕ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ವೈದ್ಯಕೀಯ ತಂಡವು ಮದ್ಯದ ದೊರೆಯ ಆರೋಗ್ಯ ತಪಾಸಣೆ ನಡೆಸಲಿದೆ. ಒಂದು ವೇಳೆ ರಾತ್ರಿಯಾಗಿದ್ದರೆ ಮುಂಬೈನ ಸಿಬಿಐ ಕಚೇರಿಯಲ್ಲಿ ಇರಿಸಿ, ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಲ್ಲವೇ ಹಗಲಿನಲ್ಲಿ ಭಾರತಕ್ಕೆ ಬಂದರೆ ನೇರವಾಗಿ ವಿಮಾನ ನಿಲ್ದಾಣದಿಂದ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ.

    ಬ್ರಿಟಿಷ್ ನ್ಯಾಯಾಲಯವು 2018ರ ಆಗಸ್ಟ್ ನಲ್ಲಿ ಭಾರತದ ಮನವಿಯನ್ನು ಆಲಿಸುತ್ತಿದ್ದಾಗ ಹಸ್ತಾಂತರದ ನಂತರ ಮಲ್ಯ ಅವರನ್ನು ಎಲ್ಲಿ ಇರಿಸಲಾಗುವುದು ಎಂದು ಪ್ರಶ್ನಿಸಿತ್ತು. ಆಗ ಭಾರತೀಯ ತನಿಖಾ ಸಂಸ್ಥೆಯು ಜೈಲಿನ ವಿವರಗಳನ್ನು ನೀಡಿತ್ತು.

    ಆರ್ಥರ್ ರೋಡ್ ಜೈಲು:
    ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಹೈ ಸೆಕ್ಯುರಿಟಿ ಬ್ಯಾರಕ್‍ನಲ್ಲಿ ಇಡುವುದಾಗಿ ಭಾರತೀಯ ತನಿಖಾ ಸಂಸ್ಥೆಯು ಬ್ರಿಟನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಆರ್ಥರ್ ರೋಡ್ ಜೈಲಿನಲ್ಲಿ ಅನೇಕ ಭೂಗತ ಪಾತಕಿಗಳು, ದೊಡ್ಡ ಅಪರಾಧಿಗಳು ಮತ್ತು ಭಯೋತ್ಪಾದಕರನ್ನು ಇರಿಸಲಾಗಿದೆ. ಶೀನ್ ಬೋರಾ ಕೊಲೆ ಪ್ರಕರಣದ ಆರೋಪಿ ಪೀಟರ್ ಮುಖರ್ಜಿ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13,500 ಕೋಟಿ ರೂ. ವಂಚಿಸಿದ್ದ ವಿಪುಲ್ ಅಂಬಾನಿಯನ್ನು ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.

    ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬು ಸೇಲಂ, ಛೋಟಾ ರಾಜನ್, ಮುಸ್ತಫಾ ದೋಸ ಸೇರಿದಂತೆ ಹಲವಾರು ಕುಖ್ಯಾತ ಅಪರಾಧಿಗಳನ್ನು ಆರ್ಥರ್ ರಸ್ತೆ ಜೈಲಿನಲ್ಲಿ ಇರಿಸಲಾಗಿದೆ. ಮುಂಬೈ ದಾಳಿ ನಡೆಸಿದ ಪಾಕಿಸ್ತಾನದ ಭಯೋತ್ಪಾದಕ ಅಜ್ಮಲ್ ಕಸಬ್ ಅವರನ್ನು ಸಹ ಅದೇ ಜೈಲಿನಲ್ಲಿ ಅತ್ಯಂತ ಬಿಗಿ ಭದ್ರತೆಯಲ್ಲಿ ಇರಿಸಲಾಗಿತ್ತು.

    ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶದಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಈಗಾಗಲೇ ಬ್ಯಾಂಕುಗಳು ಪ್ರಕಟಿಸಿವೆ.

    ವಿಜಯ್ ಮಲ್ಯ ಬ್ರಿಟನ್ ಪ್ರಜೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಗಡಿಪಾರು ಮಾಡುವಂತೆ ಇಂಗ್ಲೆಂಡ್ ಸರ್ಕಾರವನ್ನು ಕೇಳಿಕೊಂಡಿತ್ತು. ಸುಮಾರು 9,000 ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು 2018ರ ಡಿಸೆಂಬರ್‍ನಲ್ಲಿ ಬ್ರಿಟನ್‍ನ ವೆಸ್ಟ್ ಮಿನ್‍ಸ್ಟರ್ ನ್ಯಾಯಾಲಯ ಆದೇಶ ನೀಡಿತ್ತು. ಮಲ್ಯ ಗಡಿಪಾರಿಗೆ 2019ರ ಫೆಬ್ರವರಿಯಲ್ಲಿ ಬ್ರಿಟನ್ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಏ.4 ರಂದು ತಿರಸ್ಕರಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ಟೀಫನ್ ಒರ್ವಿನ್ ಮತ್ತು ಎಲಿಜಬೆತ್ ಲೇಯಿಂಗ್ ಅವರಿದ್ದ ದ್ವಿಸದಸ್ಯ ಪೀಠ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿತ್ತು.

    ಪ್ರಕರಣಕ್ಕೆ ಸಂಬಂಧ ಜಿಲ್ಲಾ ಹಿರಿಯ ನ್ಯಾಯಾಧೀಶರು ಕಂಡುಕೊಂಡಿರುವ ಪ್ರಾಥಮಿಕ ಅಂಶವು ಕೆಲವು ವಿಷಯಗಳಲ್ಲಿ ಭಾರತದ ಪ್ರತಿವಾದಿಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು ಮಾಡಿರುವ ಆರೋಪಗಳಿಗಿಂತಲೂ ವಿಸ್ತಾರವಾಗಿವೆ. ಈ ಅಂಶವು ಭಾರತ ಮಾಡಿರುವ ಏಳು ಆರೋಪಗಳಿಗೆ ಹೊಂದಿಕೆಯಾಗುತ್ತಿದ್ದು, ಮಲ್ಯ ಸಲ್ಲಿಸಿರುವ ಅರ್ಜಿ ಮಾನ್ಯ ಮಾಡಲು ಯಾವುದೇ ಪ್ರಮುಖ ಅಂಶಗಳಿಲ್ಲ ಎಂದು ಪೀಠ ಹೇಳಿತ್ತು.

  • ದಯವಿಟ್ಟು ಸಾಲದ ಹಣವನ್ನ ಬೇಷರತ್ತಾಗಿ ಪಡೆದು ಪ್ರಕರಣ ಮುಚ್ಚಿ- ಕೇಂದ್ರಕ್ಕೆ ಮಲ್ಯ ಮನವಿ

    ದಯವಿಟ್ಟು ಸಾಲದ ಹಣವನ್ನ ಬೇಷರತ್ತಾಗಿ ಪಡೆದು ಪ್ರಕರಣ ಮುಚ್ಚಿ- ಕೇಂದ್ರಕ್ಕೆ ಮಲ್ಯ ಮನವಿ

    ನವದೆಹಲಿ: ನಾನು ಬ್ಯಾಂಕುಗಳಿಗೆ ಪಾವತಿಸಬೇಕಾದ ಎಲ್ಲಾ ಸಾಲದ ಮೊತ್ತವನ್ನು ತೆಗೆದುಕೊಳ್ಳಿ ಹಾಗೂ ನನ್ನ ಮೇಲಿರುವ ಪ್ರಕರಣಗಳನ್ನು ಕೈಬಿಡಿ ಎಂದು ಮದ್ಯದ ದೊರೆ, ವಿದೇಶಗಳಲ್ಲಿ ತಲೆಮರಿಸಿಕೊಂಡಿರುವ ವಿಜಯ್ ಮಲ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿರುವುದಕ್ಕೆ ಮಲ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇದಕ್ಕಾಗಿ ನಾನು ಪವತಿಸಬೇಕಾದ ಹಣವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

    ಈ ಕುರಿತು ಟ್ವಿಟ್ ಮಾಡಿರುವ ವಿಜಯ್ ಮಲ್ಯ, “ಕೋವಿಡ್-19 ವಿಪತ್ತು ಪರಿಹಾರಕ್ಕಾಗಿ ಭಾರೀ ಮೊತ್ತದ ಪ್ಯಾಕೇಜ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರವು ತನಗೆ ಬೇಕಾದಷ್ಟು ಹಣವನ್ನು ಮುದ್ರಣ ಮಾಡಬಹುದಾಗಿದೆ. ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ ಶೇ.100 ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ? ದಯವಿಟ್ಟು ನನ್ನ ಸಾಲದ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು ನನ್ನ ಮೇಲಿರುವ ಪ್ರಕರಣಗಳನ್ನು ಮುಚ್ಚಿ” ಎಂದು ಮನವಿ ಮಾಡಿಕೊಂಡಿದ್ದಾರೆ.

    ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶದಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಈಗಾಗಲೇ ಬ್ಯಾಂಕುಗಳು ಪ್ರಕಟಿಸಿವೆ.

    ವಿಜಯ್ ಮಲ್ಯ ಬ್ರಿಟನ್ ಪ್ರಜೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಗಡಿಪಾರು ಮಾಡುವಂತೆ ಇಂಗ್ಲೆಂಡ್ ಸರ್ಕಾರವನ್ನು ಕೇಳಿಕೊಂಡಿತ್ತು. ಸುಮಾರು 9,000 ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು 2018ರ ಡಿಸೆಂಬರ್‍ನಲ್ಲಿ ಬ್ರಿಟನ್‍ನ ವೆಸ್ಟ್ ಮಿನ್‍ಸ್ಟರ್ ನ್ಯಾಯಾಲಯ ಆದೇಶ ನೀಡಿತ್ತು. ಮಲ್ಯ ಗಡಿಪಾರಿಗೆ 2019ರ ಫೆಬ್ರವರಿಯಲ್ಲಿ ಬ್ರಿಟನ್ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಏ.4 ರಂದು ತಿರಸ್ಕರಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ಟೀಫನ್ ಒರ್ವಿನ್ ಮತ್ತು ಎಲಿಜಬೆತ್ ಲೇಯಿಂಗ್ ಅವರಿದ್ದ ದ್ವಿಸದಸ್ಯ ಪೀಠ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿತ್ತು.

    ಪ್ರಕರಣಕ್ಕೆ ಸಂಬಂಧ ಜಿಲ್ಲಾ ಹಿರಿಯ ನ್ಯಾಯಾಧೀಶರು ಕಂಡುಕೊಂಡಿರುವ ಪ್ರಾಥಮಿಕ ಅಂಶವು ಕೆಲವು ವಿಷಯಗಳಲ್ಲಿ ಭಾರತದ ಪ್ರತಿವಾದಿಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು ಮಾಡಿರುವ ಆರೋಪಗಳಿಗಿಂತಲೂ ವಿಸ್ತಾರವಾಗಿವೆ. ಈ ಅಂಶವು ಭಾರತ ಮಾಡಿರುವ ಏಳು ಆರೋಪಗಳಿಗೆ ಹೊಂದಿಕೆಯಾಗುತ್ತಿದ್ದು, ಮಲ್ಯ ಸಲ್ಲಿಸಿರುವ ಅರ್ಜಿ ಮಾನ್ಯ ಮಾಡಲು ಯಾವುದೇ ಪ್ರಮುಖ ಅಂಶಗಳಿಲ್ಲ ಎಂದು ಪೀಠ ಹೇಳಿತ್ತು.

  • ಚೋಕ್ಸಿ, ಮಲ್ಯ ಸೇರಿದಂತೆ 50 ಉದ್ಯಮಿಗಳ 68,607 ಕೋಟಿ ‘ಸಾಲ ಮನ್ನಾ’

    ಚೋಕ್ಸಿ, ಮಲ್ಯ ಸೇರಿದಂತೆ 50 ಉದ್ಯಮಿಗಳ 68,607 ಕೋಟಿ ‘ಸಾಲ ಮನ್ನಾ’

    – ರೈಟಾಫ್ ಮಾಹಿತಿ ನೀಡಿದ ಆರ್‌ಬಿಐ
    – ಆರ್‌ಟಿಐ ಅಡಿ ಮಾಹಿತಿ ಪಡೆದ ಸಾಕೇತ್ ಗೋಖಲೆ

    ನವದೆಹಲಿ: ಭಾರತದಿಂದ ಪರಾರಿಯಾಗಿ ವಿದೇಶದಲ್ಲಿ ನೆಲೆಸಿರುವ ಮದ್ಯದ ದೊರೆ ವಿಜಯ್ ಮಲ್ಯ ಮತ್ತು ಆಭರಣ ಉದ್ಯಮಿ ಮೆಹುಲ್ ಚೋಕ್ಸಿ ಸೇರಿದಂತೆ ಒಟ್ಟು 50 ಉದ್ಯಮಿಗಳ 68,607 ಕೋಟಿ ರೂ. ವಸೂಲಾಗದ ಸಾಲವನ್ನು ರಿಸರ್ವ್ ಬ್ಯಾಂಕ್(ಆರ್‌ಬಿಐ) ಮನ್ನಾ(ರೈಟಾಫ್) ಮಾಡಿದೆ.

    ಬ್ಯಾಂಕ್ ಗಳಿಗೆ ವಂಚನೆ ಎಸಗಿ ವಿದೇಶಕ್ಕೆ ಪರಾರಿಯಾದ ವ್ಯಕ್ತಿಗಳ ಪೈಕಿ ಯಾರ ಸಾಲವನ್ನು ಸರ್ಕಾರ ಎಷ್ಟು ಪ್ರಮಾಣದಲ್ಲಿ ರೈಟಾಫ್ ಮಾಡಿದೆ? ಈ ಮಾಹಿತಿ ನೀಡಿ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದ ಪ್ರಶ್ನೆಗೆ ಆರ್‌ಬಿಐ ಈ ಉತ್ತರವನ್ನು ನೀಡಿದೆ.

     

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಳಿದ್ದ ಪ್ರಶ್ನೆಗೆ  ಬಜೆಟ್ ಅಧಿವೇಶನದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹಾಗೂ ರಾಜ್ಯ ಖಾತೆಯ ಸಚಿವ ಅನುರಾಗ್ ಠಾಕೂರ್ ಸಂಸತ್ತಿನಲ್ಲಿ ಉತ್ತರ ನೀಡಲು ನಿರಾಕರಿಸಿದ್ದರು. ಈ ಕಾರಣಕ್ಕೆ ನಾನು ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಸಾಕೇತ್ ಗೋಖಲೆ, ಆರ್‌ಬಿಐನ ಮಾಹಿತಿ ಅಧಿಕಾರಿ ಅಭಯ್ ಕುಮಾರ್ ಅವರು 2019ರ ಸೆಪ್ಟೆಂಬರ್ 30 ರವರೆಗಿನ 68,607 ಕೋಟಿ ರೂ. ಸುಸ್ತಿಸಾಲವನ್ನು ತಾಂತ್ರಿಕವಾಗಿ ಮನ್ನಾ ಮಾಡಲಾಗಿದೆ ಎಂದು ಏ.24ರಂದು ಲಿಖಿತ ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    2015 ಡಿಸೆಂಬರ್ 16ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಆರ್‌ಬಿಐ ವಿದೇಶಿ ಸುಸ್ತಿಗಾರರ ಮಾಹಿತಿಯನ್ನು ನೀಡಿಲ್ಲ. ಸುಸ್ತಿದಾರರು ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾಲವನ್ನು ಪಡೆದು ವಂಚಿಸಿದ್ದಾರೆ. ಈ ಪೈಕಿ ಕೆಲವರು ದೇಶ ಬಿಟ್ಟು ಪರಾರಿಯಾಗಿದ್ದು ಅವರ ವಿರುದ್ಧ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಅತಿ ಹೆಚ್ಚು ಸಾಲ ಮನ್ನಾ ಮಾಡಿಸಿಕೊಂಡ ಉದ್ದೇಶಪೂರ್ವಕ ಸುಸ್ತಿದಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮೆಹುಲ್ ಚೋಕ್ಸಿ ಇದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ಸಾಲ ಮರುಪಾವತಿಸದೆ ಬಾರ್ಬಡೋಸ್‍ನ ಆಂಟಿಂಟಿಗುವಾದಲ್ಲಿ ತಲೆಮರೆಸಿಕೊಂಡಿರುವ ಮೆಹುಲ್ ಚೋಕ್ಸಿ ಅವರ ಗೀತಾಂಜಲಿ ಜೆಮ್ಸ್‍ನ 5,492 ಕೋಟಿ ರೂ. ಗಿಲಿ ಇಂಡಿಯಾ ಲಿಮಿಟೆಡ್‍ನ 1,447 ಕೋಟಿ ರೂ. ಹಾಗೂ ನಕ್ಷತ್ರ ಬ್ರಾಂಡ್ಸ್ ನ 1,109 ಕೋಟಿ ರೂ. ಸಾಲ ಮನ್ನಾವಾಗಿದೆ.

    ಲಂಡನ್‍ನಲ್ಲಿದ್ದು ಕಾನೂನು ಹೋರಾಟ ನಡೆಸುತ್ತಿರುವ ವಿಜಯ್ ಮಲ್ಯ ಅವರ ಕಿಂಗ್‍ಫಿಶರ್ ಏರ್‍ಲೈನ್ಸ್‍ನ 1,943 ಕೋಟಿ ರೂ., ರುಚಿ ಸೋಯಾ ಕಂಪನಿಯ 2,212 ಕೋಟಿ ರು. ಸುಸ್ತಿಸಾಲ ಕೂಡ ಮನ್ನಾ ಮಾಡಲಾಗಿದೆ.

    ಯಾರ ಸಾಲ ಎಷ್ಟು ಮನ್ನಾ?
    ಮೆಹುಲ್ ಚೋಕ್ಸಿ – 8,048 ಕೋಟಿ ರೂ.
    ಆರ್‍ಇಐ ಅಗ್ರೋ ಲಿ. 4,314 ಕೋಟಿ ರೂ.
    ವಿನ್ಸಮ್ ಡೈಮಂಡ್ಸ್ – 4,076 ಕೋಟಿ ರೂ.

    ರೊಟೋಮ್ಯಾಕ್ ಗ್ಲೋಬಲ್ – 2,850 ಕೋಟಿ ರೂ.
    ಕುಡೋಸ್ ಕೆಮಿ, ಪಂಜಾಬ್ – 2,326 ಕೋಟಿ ರೂ.
    ರುಚಿ ಸೋಯಾ ಇಂಡಸ್ಟ್ರೀಸ್ – 2,212 ಕೋಟಿ ರೂ.
    ಜೂಮ್ ಡೆವಲಪರ್ಸ್ – 2,012 ಕೋಟಿ ರೂ.
    ಕಿಂಗ್‍ಫಿಶರ್ ಏರ್‍ಲೈನ್ಸ್ – 1,943 ಕೋಟಿ ರೂ.
    ಫಾರೆವರ್ ಪ್ರಿಶಿಯಸ್ ಜುವೆಲ್ಲರಿ -1,962 ಕೋಟಿ ರೂ.

    ಒಟ್ಟು 18 ಕಂಪನಿಗಳು 1 ಸಾವಿರ ಕೋಟಿ ಸಾಲ ಮಾಡಿದ್ದರೆ 25 ಕಂಪನಿಗಳು 1 ಸಾವಿರ ಕೋಟಿ ರೂ.ಗಿಂತ ಕಡಿಮೆ ಸಾಲ ಮಾಡಿದೆ. 50 ಮಂದಿ ಸುಸ್ತಿದಾರರ ಪೈಕಿ 6 ಮಂದಿ ವಜ್ರ ಮತ್ತು ಚಿನ್ನದ ಉದ್ಯಮಗಳನ್ನು ನಡೆಸಿದವರಾಗಿದ್ದಾರೆ.

    ರೈಟಾಫ್ ಎಂದರೇನು?
    ಸರ್ಕಾರಗಳು ರೈತರ ಸಾಲಮನ್ನಾ ಮಾಡಿದಂತೆ ಉದ್ಯಮಿಗಳ ಸಾಲವನ್ನು ಬ್ಯಾಂಕುಗಳು ಮನ್ನಾ ಮಾಡುವುದಿಲ್ಲ. ಕೋಟ್ಯಂತರ ರೂ ಸಾಲ ಮಾಡಿ ದೇಶ ತೊರೆದ ಉದ್ಯಮಿಗಳನ್ನು ಉದ್ದೇಶಪೂರ್ವಕ ಸುಸ್ತಿದಾರ ಎಂದು ಬ್ಯಾಂಕುಗಳು ಮೊದಲೇ ಗುರುತಿಸುತ್ತದೆ. ಸಾಲ ಪಾವತಿಸದೇ ಇದ್ದರೆ ಕೋಟ್ಯಂತರ ರೂ. ಸಾಲ ಬ್ಯಾಲೆನ್ಸ್ ಶೀಟ್ ನಲ್ಲಿ ಹಾಗೆಯೇ ಇರುತ್ತದೆ. ಈ ಸಾಲವನ್ನು ಬ್ಯಾಲೆನ್ಸ್ ಶೀಟ್ ನಿಂದ ತೆಗೆದು ಹಾಕಲು ರೈಟಾಫ್ ಮಾಡುತ್ತದೆ. ರೈಟಾಫ್ ಮಾಡಿದರೂ ಉದ್ಯಮಿಗಳ ಸಾಲ ವಸೂಲಾತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಸಿಬಿಐ, ಜಾರಿ ನಿರ್ದೇಶನಾಲಯ(ಇಡಿ) ವಂಚನೆಗೈದವರ ವಿರುದ್ಧ ತನಿಖೆ ನಡೆಸುತ್ತಿರುತ್ತದೆ. ಮುಂದೆ ಈ ಸಾಲ ವಸೂಲಾದರೆ ಲೆಕ್ಕಪತ್ರದಲ್ಲಿ ಅದನ್ನು ಲಾಭ ಎಂಬುದಾಗಿ ತೋರಿಸುತ್ತದೆ.

  • ಮದ್ಯದ ದೊರೆ ಮಲ್ಯಗೆ ಮತ್ತೊಮ್ಮೆ ಸೋಲು

    ಮದ್ಯದ ದೊರೆ ಮಲ್ಯಗೆ ಮತ್ತೊಮ್ಮೆ ಸೋಲು

    ನವದೆಹಲಿ: ಭಾರತದ ಬ್ಯಾಂಕುಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಲಂಡನ್ ಸೇರಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯಗೆ ನ್ಯಾಯಾಲಯದಲ್ಲಿ ಮತ್ತೊಮ್ಮೆ ಸೋಲಾಗಿದೆ. ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ತಿರಸ್ಕರಿಸಿದೆ.

    ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ಟೀಫನ್ ಒರ್ವಿನ್ ಮತ್ತು ಎಲಿಜಬೆತ್ ಲೇಯಿಂಗ್ ಅವರಿದ್ದ ದ್ವಿಸದಸ್ಯ ಪೀಠ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ.

    ಪ್ರಕರಣಕ್ಕೆ ಸಂಬಂಧ ಜಿಲ್ಲಾ ಹಿರಿಯ ನ್ಯಾಯಾಧೀಶರು ಕಂಡುಕೊಂಡಿರುವ ಪ್ರಾಥಮಿಕ ಅಂಶವು ಕೆಲವು ವಿಷಯಗಳಲ್ಲಿ ಭಾರತದ ಪ್ರತಿವಾದಿಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು ಮಾಡಿರುವ ಆರೋಪಗಳಿಗಿಂತಲೂ ವಿಸ್ತಾರವಾಗಿವೆ. ಈ ಅಂಶವು ಭಾರತ ಮಾಡಿರುವ ಏಳು ಆರೋಪಗಳಿಗೆ ಹೊಂದಿಕೆಯಾಗುತ್ತಿದ್ದು, ಮಲ್ಯ ಸಲ್ಲಿಸಿರುವ ಅರ್ಜಿ ಮಾನ್ಯ ಮಾಡಲು ಯಾವುದೇ ಪ್ರಮುಖ ಅಂಶಗಳಿಲ್ಲ ಎಂದು ಪೀಠ ಹೇಳಿದೆ.

    ಸುಮಾರು 9,000 ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು 2018ರ ಡಿಸೆಂಬರ್‌ನಲ್ಲಿ ಬ್ರಿಟನ್‍ನ ವೆಸ್ಟ್ ಮಿನ್‍ಸ್ಟರ್ ನ್ಯಾಯಾಲಯ ಆದೇಶ ನೀಡಿತ್ತು. ಮಲ್ಯ ಗಡಿಪಾರಿಗೆ 2019ರ ಫೆಬ್ರವರಿಯಲ್ಲಿ ಬ್ರಿಟನ್ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಅರ್ಜಿ ಕೂಡ ವಜಾ ಆಗಿದ್ದು, ಮಲ್ಯ ಮತ್ತಷ್ಟು ಸಂಕಷ್ಟ ಸಿಲುಕಿದ್ದಾರೆ.

  • ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ: ನೆಟ್ಟಿಗರ ವಿರುದ್ಧ ಮಲ್ಯ ಕಿಡಿ

    ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ: ನೆಟ್ಟಿಗರ ವಿರುದ್ಧ ಮಲ್ಯ ಕಿಡಿ

    ನವದೆಹಲಿ: ನನ್ನನ್ನು ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ. ಮೊದಲು ಸತ್ಯ ಹಾಗೂ ವಾಸ್ತವ ಅರ್ಥ ಮಾಡಿಕೊಳ್ಳಿ ಎಂದು ಮದ್ಯದ ದೊರೆ, ಉದ್ಯಮಿ ವಿಜಯ ಮಲ್ಯ ನೆಟ್ಟಿಗರ ವಿರುದ್ಧ ಕಿಡಿಕಾರಿದ್ದಾರೆ.

    ನನ್ನ ನೆಚ್ಚಿನ ಗೆಳೆಯ ಹಾಗೂ ಯೂನಿವರ್ಸಲ್ ಬಾಸ್ ಎಂದು ವಿಜಯ್ ಮಲ್ಯ ವೆಸ್ಟ್ ಇಂಡೀಸ್‍ನ ಕ್ರಿಕೆಟರ್ ಕ್ರಿಸ್ ಗೇಲ್ ಜೊತೆಗಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಕ್ರಿಸ್ ಗೇಲ್ ಅವರು ಕೂಡ ಅದೇ ಫೋಟೋವನ್ನು ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡು, ಬಿಗ್ ಬಾಸ್ ಗ್ರೇಟ್ ವಿಜಯ್ ಮಲ್ಯ ಅವರೊಂದಿಗಿನ ಅದ್ಭುತ ಕ್ಷಣ ಎಂದು ಬರೆದುಕೊಂಡಿದ್ದಾರೆ.

    ಈ ಫೋಟೋಗೆ ಅನೇಕ ನೆಟ್ಟಿಗರು ಚೋರ್ ಎಂದು ರೀ ಟ್ವೀಟ್ ಮಾಡಿದ್ದಾರೆ. ವಿಜಯ್ ಮಲ್ಯಗೆ ನಿಮ್ಮ ಖಾತೆಯ ಮಾಹಿತಿ ನೀಡಬೇಡಿ. ಅವರೊಂದಿಗೆ ಯಾವುದೇ ವಹಿವಾಟು ನಡೆಸಬೇಡಿ. ಭಾವನಾತ್ಮಕವಾಗಿ ನಿಮ್ಮ ಬಳಿಗೆ ಬಂದು ಸಾಲ ಕೇಳಿದರೆ ಕೊಡಬೇಡಿ ಎಂದು ಹಿರೆನ್ ಎಂಬವರು ರೀ ಟ್ವೀಟ್ ಮಾಡಿದ್ದಾರೆ.

    ವಿಜಯ್ ಮಲ್ಯ ಮೋಸಗಾರನೆಂದು ನಿಮಗೆ ತಿಳಿದಿದೆ. 9 ಸಾವಿರ ಕೋಟಿ ರೂ. ಸಾಲ ಮಾಡಿ ಭಾರತ ಬಿಟ್ಟು ಬಂದು ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಿಗ್ ಬಾಸ್ ಎಂದು ಕರೆಯುವ ಮುನ್ನ ನಮ್ಮ ಭಾವನೆ ಅರ್ಥ ಮಾಡಿಕೊಳ್ಳಬೇಕು ಎಂದು ಸಮೀಂ ರಾಜಾ ಎಂಬವರು ಗೇಲ್ ಅವರನ್ನು ಕುಟುಕಿದ್ದಾರೆ.

    https://twitter.com/tige7r_/status/1150072213686476800

    ನೆಟ್ಟಿಗರ ಟ್ವೀಟ್‍ನಿಂದ ಬೇಸತ್ತು ರೀಟ್ವೀಟ್ ಮಾಡಿರುವ ವಿಜಯ್ ಮಲ್ಯ, ನನ್ನನ್ನು ಚೋರ್ ಎಂದು ಕರೆಯುವವರು ಮೊದಲು ಸತ್ಯ ಹಾಗೂ ವಾಸ್ತವತೆಯನ್ನು ಅರಿತು ಮಾತನಾಡಿದರೆ ಒಳ್ಳೆಯದು. ನಿಮ್ಮ ಬ್ಯಾಂಕುಗಳಿಗೆ ಪೂರ್ತಿ ಸಾಲ ಮರುಪಾವತಿ ಮಾಡುತ್ತೇನೆ ಎಂದು ಕಳೆದ ಒಂದು ವರ್ಷದಿಂದ ಹೇಳುತ್ತಾ ಬಂದಿದ್ದೇನೆ. ಆದರೆ ಅದನ್ನು ಅವರು ಪಡೆದುಕೊಳ್ಳಲು ನಿರಾಕರಿಸುತ್ತಿದ್ದಾರೆ. ಈ ಬಗ್ಗೆ ನಿಮ್ಮ ಬ್ಯಾಂಕ್‍ಗಳನ್ನು ಪ್ರಶ್ನಿಸಿ. ನಂತರ ಯಾರು ಚೋರ್ ಎಂದು ನಿರ್ಧರಿಸಿ ಎಂದು ಗುಡುಗಿದ್ದಾರೆ.

  • ಮ್ಯಾಚ್ ನೋಡಲು ಬಂದ ವಿಜಯ್ ಮಲ್ಯ

    ಮ್ಯಾಚ್ ನೋಡಲು ಬಂದ ವಿಜಯ್ ಮಲ್ಯ

    ಟೌಂಟನ್: ಲಂಡನ್‍ನ ಕೆನ್ನಿಂಗ್ಟನ್ ಓವಲ್‍ನಲ್ಲಿ ಇಂದು ನಡೆಯುತ್ತಿರುವ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಪಂದ್ಯವನ್ನು ನೋಡಲು ಉದ್ಯಮಿ ವಿಜಯ್ ಮಲ್ಯ ಆಗಮಿಸಿದ್ದಾರೆ.

    ವಿಜಯ್ ಮಲ್ಯ ಕ್ರೀಡಾಂಗಣದ ಗೇಟ್ ಬಳಿ ಟಿಕೆಟ್ ನೀಡಿ ಒಳ ಹೋಗುತ್ತಿದ್ದವೇಳೆ ಮಾಧ್ಯಮಗಳು ಪ್ರಶ್ನೆ ಕೇಳುತ್ತಿದ್ದರೂ ಮೌನವಾಗಿದ್ದು ಸ್ವಲ್ಪ ಸಮಯದ ಬಳಿಕ, ನಾನು ಮ್ಯಾಚ್ ನೋಡಲು ಬಂದಿದ್ದೇನೆ ಎಂದು ಕ್ರಿಡಾಂಗಣದ ಒಳಗೆ ಹೋದರು.

    ಐಸಿಸಿ 2019 ಏಕದಿನ ವಿಶ್ವಕಪ್‍ನಲ್ಲಿ ಟೀ ಇಂಡಿಯಾವು ತನ್ನ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಕೊಹ್ಲಿ ಪಡೆ 27 ಓವರ್ ನಲ್ಲಿ ಒಂದು ವಿಕೇಟ್ ನಷ್ಟಕ್ಕೆ 153 ರನ್ ಕಲೆ ಹಾಕಿದೆ.

    ಮದ್ಯದ ದೊರೆ ವಿಜಯ್ ಮಲ್ಯ ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದಾರೆ. ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ. ಆದರೆ ಈ ಸಂಬಂಧ ವಿಚಾರಣೆ ಮುಂದೂಡಲಾಗಿದೆ.

    ಕಳೆದ ವರ್ಷ ಡಿಸೆಂಬರಿನಲ್ಲಿ ಈ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಮಲ್ಯ ಗಡಿಪಾರಿಗೆ ಅನುಮತಿ ನೀಡಿತ್ತು. ಅಲ್ಲದೇ ಗಡಿಪಾರು ಆದೇಶ ನೀಡುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ನ್ಯಾಯಾಲಯದ ತೀರ್ಪಿಗೆ ಸಂಸತ್ ಒಪ್ಪಿಗೆ ಮಾತ್ರ ಬಾಕಿ ಇತ್ತು. ಆದರೆ ಮಲ್ಯ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ ಬ್ಯಾಂಕ್ ಸಾಲ ಮರು ಪಾವತಿ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

    ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶದಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಅಕ್ರಮ ಹಣ ವರ್ಗಾವಣೆ ತಡೆ ನ್ಯಾಯಾಲಯ (ಪಿಎಂಎಲ್‍ಎ) ಘೋಷಿಸಿದೆ. ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ ಜಾರಿಗೆ ಬಂದ ಬಳಿಕ ಘೋಷಣೆಯಾದ ಮೊದಲ ಉದ್ಯಮಿ ವಿಜಯ್ ಮಲ್ಯ ಆಗಿದ್ದಾರೆ.

    ಸಾಲ ತೆಗೆದುಕೊಂಡು ಮರು ಪಾವತಿಸದೇ ವಿದೇಶದಲ್ಲಿ ನೆಲೆಸಿರುವ ವಿಜಯ್ ಮಲ್ಯರನ್ನ ಆರ್ಥಿಕ ಅಪರಾಧಿ ಎಂದು ಘೋಷಿಸಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ 2018, ನವೆಂಬರ್ ನಲ್ಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಇಡಿ ಮತ್ತು ಸಿಬಿಐ ಸುಳ್ಳು ಆರೋಪ ಮಾಡುತ್ತಿದ್ದು, ಸಾಲ ಮರುಪಾವತಿಸಲು ನ್ಯಾಯಾಲಯ ಅವಕಾಶ ನೀಡಬೇಕೆಂದು ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯ ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಕೋರ್ಟ್ 2019 ಜನವರಿ 1ರಂದು ತೀರ್ಪು ನೀಡಿತ್ತು.

  • ಬೆಂಗಳೂರು ತಂಡ ಪೇಪರ್ ಮೇಲೆ ಬಲಿಷ್ಠ: ವಿಜಯ್ ಮಲ್ಯ ವ್ಯಂಗ್ಯ

    ಬೆಂಗಳೂರು ತಂಡ ಪೇಪರ್ ಮೇಲೆ ಬಲಿಷ್ಠ: ವಿಜಯ್ ಮಲ್ಯ ವ್ಯಂಗ್ಯ

    ಬೆಂಗಳೂರು: 2019ರ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪ್ರದರ್ಶನದ ಕುರಿತು ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ವ್ಯಂಗ್ಯವಾಡಿದ್ದಾರೆ.

    ಬೆಂಗಳೂರು ತಂಡ ಯಾವಾಗಲೂ ಬಲಿಷ್ಠ ತಂಡವಾಗಿರುತ್ತದೆ. ಆದರೆ ಅದು ಪೇಪರ್ ಮೇಲೆ ಮಾತ್ರ ಎಂದು ಹೇಳಿದ್ದಾರೆ.

    ಬ್ಯಾಂಕ್‍ಗಳಿಗೆ ಸಾಲ ಮರುಪಾವತಿ ಮಾಡದೇ ಮಲ್ಯ ದೇಶ ತೋರೆದು ಹೋಗಿರುವುದು ಲ್ಲರಿಗೂ ತಿಳಿಸಿದ ಸಂಗತಿ. 2008 ರಲ್ಲಿ ನಡೆದ ಹರಾಜುಪ್ರಕ್ರಿಯೆಯಲ್ಲಿ ವಿಜಯ್ ಮಲ್ಯ ಆರ್ ಸಿಬಿ ತಂಡ ಮಾಲೀಕತ್ವ ಪಡೆದಿದ್ದರು. ಆದರೆ ಆರಂಭದ ಸೀಸನ್ ಗಳಲ್ಲಿ ತಂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದುವರೆಗೂ ನಡೆದಿರುವ 12 ಟೂರ್ನಿಗಳಲ್ಲಿ ಬೆಂಗಳೂರು ತಂಡ 2 ಬಾರಿ ಮಾತ್ರ ಫೈನಲ್ ಪ್ರವೇಶ ಮಾಡಿದ್ದು, ಒಮ್ಮೆಯೂ ಪ್ರಶಸ್ತಿಯನ್ನು ಗೆದ್ದಿಲ್ಲ.

    2019ರ ಟೂರ್ನಿಯಲ್ಲೂ ಕೂಡ ಆರ್‍ಸಿಬಿ ನೀರಸ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ತಂಡಕ್ಕೆ ಬೆಂಬಲ ನೀಡಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಮಲ್ಯ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿ ವ್ಯಂಗ್ಯವಾಡಿದ್ದಾರೆ. ಆರ್ ಸಿಬಿ ಯಾವಾಗಲೂ ಉತ್ತಮ ಲೈನಪ್ ಹೊಂದಿರುತ್ತದೆ. ಇಲ್ಲಿ ಯೋಚನೆ ಮಾಡಬೇಕಾದ ವಿಷಯ ಏನೆಂದರೆ ಅದು ಪೇಪರ್ ಮೇಲೆ ಮಾತ್ರ ಎಂದು ಹೇಳಿ ಟ್ವಿಟ್ಟರ್‍ನಲ್ಲಿ ವಂಗ್ಯವಾಡಿದ್ದಾರೆ.

  • ನನ್ನ ಹಣದಿಂದ ಜೆಟ್ ಏರ್‍ವೇಸ್ ಉಳಿಸಿ: ಮಲ್ಯ ಸಾಲು ಸಾಲು ಟ್ವೀಟ್

    ನನ್ನ ಹಣದಿಂದ ಜೆಟ್ ಏರ್‍ವೇಸ್ ಉಳಿಸಿ: ಮಲ್ಯ ಸಾಲು ಸಾಲು ಟ್ವೀಟ್

    – ಎನ್‍ಡಿಎ ಸರ್ಕಾರ ದ್ವಿಮುಖ ನೀತಿ ವಿರುದ್ಧ ಕಿಡಿ

    ನವದೆಹಲಿ: ಜೆಟ್ ಏರ್‍ವೇಸ್ ಮುಖ್ಯಸ್ಥ ನರೇಶ್ ಗೋಯಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ಬಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮದ್ಯದ ದೊರೆ ವಿಜಯ್ ಮಲ್ಯ, ನನ್ನ ಹಣವನ್ನ ನೀಡಿ ಜೆಟ್ ಏರ್‍ವೇಸ್ ಸಂಸ್ಥೆಯನ್ನು ಉಳಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರಿ ಬ್ಯಾಂಕುಗಳು ನನ್ನ ಹಣವನ್ನು ಪಡೆದುಕೊಂಡು ನಷ್ಟದಲ್ಲಿರುವ ಸಂಸ್ಥೆ ಉಳಿಸಬೇಕೆಂದು ಹೇಳಿದ್ದಾರೆ.

    ದೇಶದ ರಾಷ್ಟ್ರೀಕೃತ ಬ್ಯಾಂಕ್‍ಗಳು ಜೆಟ್ ಏರ್‍ವೇಸ್ ಸಂಸ್ಥೆಯನ್ನು ಉಳಿಸಲು ಆರ್ಥಿಕ ಸಹಕಾರ ಘೋಷಣೆ ಮಾಡಿರುವುದು ಸಂತಸದ ವಿಚಾರ. ಇದೇ ರೀತಿ ನನ್ನ ಸಂಸ್ಥೆ ಕಿಂಗ್ ಫಿಶರ್ ಏರ್‍ಲೈನ್ಸ್ ಉಳಿಸಲು ಬ್ಯಾಂಕ್‍ಗಳು ಮುಂದಾಗಲಿ ಎಂಬುವುದು ನನ್ನ ಆಸೆಯಾಗಿದೆ ಎಂದು ಹೇಳಿದ್ದಾರೆ.

    ಕರ್ನಾಟಕದ ಹೈಕೋರ್ಟ್ ಮುಂದೆ ನನ್ನ ಎಲ್ಲ ಆಸ್ತಿಯನ್ನು ಹಾಜರುಪಡಿಸಿದ್ದೇನೆ. ಈ ಆಸ್ತಿಗಳಿಂದ ಬ್ಯಾಂಕ್ ಮತ್ತು ನನಗೆ ಸಾಲ ನೀಡಿದ ಎಲ್ಲರಿಗೂ ಹಣ ಪಾವತಿಸಬಹುದಾಗಿದೆ. ಬ್ಯಾಂಕುಗಳು ನನ್ನ ಹಣವನ್ನ ಏಕೆ ಪಡೆಯುತ್ತಿಲ್ಲ ಎನ್ನುವುದು ಗೊತ್ತಾಗುತ್ತಿಲ್ಲ. ಹೀಗಾಗಿ ಇದೇ ಹಣವನ್ನು ನೀವು ಜೆಟ್ ಏರ್‍ವೇಸ್ ಸಂಸ್ಥೆಯನ್ನು ಉಳಿಸಲು ಬಳಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

    ಕಿಂಗ್ ಫಿಶರ್ ಏರ್‍ಲೈನ್ಸ್ ನಲ್ಲಿ 4 ಸಾವಿರ ಕೋಟಿ ಹಣವನ್ನು ಹೂಡಿಕೆ ಮಾಡಿದ್ದೇನೆ. ಅಂದು ನನ್ನ ಕಂಪನಿಯ ರಕ್ಷಣೆಗಾಗಿ ಯಾರು ಮುಂದಾಗಿಲಿಲ್ಲ. ಸಾರ್ವಜನಿಕರ ಉತ್ತಮ ಸೇವೆ ನೀಡುತ್ತಿದ್ದ ಕಂಪನಿ ಇಂದು ಇಲ್ಲದಂತಾಗಿದೆ. ಇದೊಂದು ಎನ್‍ಡಿಎ ಸರ್ಕಾರದ ದ್ವಿಮುಖ ಧೋರಣೆ ಇದಾಗಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಸಾವಿರಾರು ಕೋಟಿ ನಷ್ಟದಿಂದ ಬಳಲುತ್ತಿದ್ದ ಜೆಟ್ ಏರ್‍ವೇಸ್ ಸಂಸ್ಥೆಯಿಂದ ನರೇಶ್ ಗೋಯಲ್ ಹಾಗು ಪತ್ನಿ ಅನಿತಾ ಹೊರ ಬಂದಿದ್ದಾರೆ. ಇಬ್ಬರು ಹೊರಬಂದ ಬಳಿಕ ಸಾರ್ವಜನಿಕ ರಂಗದ ಬ್ಯಾಂಕ್ ಗಳು 1500 ಕೋಟಿ ರೂ. ನೆರವು ನೀಡುವುದಾಗಿ ಘೋಷಿಸಿದೆ.

    1993ರಲ್ಲಿ ನರೇಶ್ ಮತ್ತು ಅನಿತಾ ಈ ಸಂಸ್ಥೆಯನ್ನು ಸ್ಥಾಪಿಸಿದ್ದರು. ಜೆಟ್ ಏರ್‍ವೇಸ್ ಸುಮಾರು 7 ಸಾವಿರ ಕೋಟಿಗೂ ಅಧಿಕ ಸಾಲವನ್ನು ಮಾಡಿಕೊಂಡಿದೆ. 2013ರಲ್ಲಿ ಸಾಲದ ಸುಳಿಯಲ್ಲಿ ಸಂಸ್ಥೆ ಸಿಲುಕಿದ್ದಾಗ, ಅಬುದಾಭಿಯ ಎತಿಹಾದ್ ಏರ್‍ವೇಸ್ ಸಂಸ್ಥೆ ಶೇ.24ರಷ್ಟು (ಸುಮಾರು 4 ಸಾವಿರ ಕೋಟಿ) ಪಾಲನ್ನು ಖರೀದಿಸಿತ್ತು. ಇದೀಗ ಈ ಸಂಸ್ಥೆ ಮತ್ತೋರ್ವ ಹೂಡಿಕೆದಾರರ ನಿರೀಕ್ಷೆಯಲ್ಲಿದೆ.