Tag: vijay malya

  • ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

    ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಯಾಗಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ.

    2017ರ ನ್ಯಾಯಾಂಗ ನಿಂದನೆ ಆದೇಶ ಮರು ಪರಿಶೀಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾ ಮಾಡಿದೆ. ನ್ಯಾ. ಅಶೋಕ್ ಭೂಷಣ್ ನೇತೃತ್ವದ ತ್ರಿ ಸದಸ್ಯ ಪೀಠ ಈ ಅರ್ಜಿ ವಜಾ ಮಾಡಿದೆ.

    ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಉದ್ಯಮಿ ವಿಜಯ್ ಮಲ್ಯ 40 ಮಿಲಿಯನ್ ಡಾಲರ್ ಹಣವನ್ನು ತನ್ನ ಮೂವರು ಮಕ್ಕಳಿಗೆ ವರ್ಗಾಯಿಸಿದ್ದರು. ಇದನ್ನು ಪ್ರಶ್ನಿಸಿ ಎಸ್‍ಬಿಐ ಒಕ್ಕೂಟದ ಬ್ಯಾಂಕುಗಳು ಸುಪ್ರೀಂಕೋರ್ಟ್ ನಲ್ಲಿ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಆದೇಶದ ಬಳಿಕ ಹಣ ವರ್ಗಾವಣೆ ಮಾಡಿದ ಹಿನ್ನೆಲೆ ವಿಜಯ್ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿತ್ತು.

    ಈ ಆದೇಶವನ್ನು ಪರಿಶೀಲಿಸುವಂತೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಕಳೆದ ವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ಅರ್ಜಾಗೊಳಿಸಿ ಆದೇಶ ನೀಡಿದೆ.

  • ನಾನೂ ಪರೋಕ್ಷವಾಗಿ ಸಿದ್ಧಾರ್ಥ್ ಸಾಲಿಗೆ ಸೇರುತ್ತೇನೆ: ವಿಜಯ್ ಮಲ್ಯ

    ನಾನೂ ಪರೋಕ್ಷವಾಗಿ ಸಿದ್ಧಾರ್ಥ್ ಸಾಲಿಗೆ ಸೇರುತ್ತೇನೆ: ವಿಜಯ್ ಮಲ್ಯ

    – ಕಾಫಿ ಸಾಮ್ರಾಟ ನಾಪತ್ತೆಯಾಗಿದ್ದ ಕುರಿತು ಮಲ್ಯ ಟ್ವೀಟ್‍

    ನವದೆಹಲಿ: ನಾನೂ ಕೂಡ ಪರೋಕ್ಷವಾಗಿ ಸಿದ್ಧಾರ್ಥ್ ಅವರ ಸಾಲಿಗೆ ಸೇರುತ್ತೇನೆ. ನನ್ನ ಪರಿಸ್ಥಿತಿ ಕೂಡ ಅವರಂತೆ ಆಗಿದೆ ಎಂದು ಮದ್ಯದ ದೊರೆ ವಿಜಯ್ ಮಲ್ಯ ಟ್ವೀಟ್‍ನಲ್ಲಿ ಹೇಳಿಕೊಂಡಿದ್ದಾರೆ.

    ಭಾರತೀಯ ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಸದ್ಯ ಮಲ್ಯ ಇಂಗ್ಲೆಂಡಿನಲ್ಲಿದ್ದಾರೆ. ಆದರೆ ಕೆಫೆ ಕಾಫಿ ಡೇ ಸ್ಥಾಪಕ ವಿ.ಜಿ ಸಿದ್ಧಾರ್ಥ್ ಅವರ ನಾಪತ್ತೆ ಸುದ್ದಿ ತಿಳಿದ ಕೂಡಲೇ ಟ್ವೀಟ್ ಮಾಡಿದ ಮಲ್ಯ, ತನಿಖಾ ಸಂಸ್ಥೆ ಹಾಗೂ ಬ್ಯಾಂಕುಗಳನ್ನು ದೂರಿದ್ದಾರೆ. ನಾನು ಕೂಡ ಪರೋಕ್ಷವಾಗಿ ಸಿದ್ಧಾರ್ಥ್ ಅವರ ಸಾಲಿಗೆ ಸೇರುತ್ತೇನೆ. ನನ್ನ ಪರಿಸ್ಥಿತಿ ಕೂಡ ಅವರಂತೆ ಆಗಿದೆ. ತನಿಖಾ ಸಂಸ್ಥೆ ಮತ್ತು ಬ್ಯಾಂಕುಗಳು ಎಂಥವರನ್ನಾದರೂ ಹತಾಶೆಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ವಿ.ಜಿ. ಸಿದ್ಧಾರ್ಥ ಒಳ್ಳೆಯ ಮನುಷ್ಯ ಹಾಗೂ ಅದ್ಭುತ ಉದ್ಯಮಿಯಾಗಿದ್ದರು. ಅವರು ಬರೆದಿರುವ ಪತ್ರವನ್ನು ನೋಡಿ ನನಗೆ ಆಘಾತವಾಗಿದೆ. ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕುಗಳು ಎಂಥವರನ್ನಾದರೂ ಹತಾಶೆಗೆ ದೂಡಬಹುದು. ಸಾಲವನ್ನು ಪೂರ್ಣ ಮರುಪಾವತಿ ಮಾಡುತ್ತೇನೆ ಎಂದರೂ ಅವರು ನನಗೆ ಏನು ಮಾಡುತ್ತಿದ್ದಾರೆಂದು ನೋಡಿ. ಇದೊಂದು ಕೆಟ್ಟ ವರ್ತನೆಯಾಗಿದೆ ಎಂದು ಬರೆದು ಸರ್ಕಾರದ ತನಿಖಾ ಸಂಸ್ಥೆ, ಬ್ಯಾಂಕ್‍ಗಳ ವಿರುದ್ಧ ವಿಜಯ್ ಮಲ್ಯ ಕಿಡಿಕಾರಿದ್ದಾರೆ.

    ಇನ್ನೊಂದು ಟ್ವೀಟ್‍ನಲ್ಲಿ, ಪಾಶ್ಚಿಮಾತ್ಯ ದೇಶಗಳಲ್ಲಿ ಸರ್ಕಾರ ಹಾಗೂ ಬ್ಯಾಂಕುಗಳು ಸಾಲವನ್ನು ಮರುಪಾವತಿಸಲು ಸಾಲಗಾರರಿಗೆ ಸಹಾಯ ಮಾಡುತ್ತವೆ. ನನ್ನ ವಿಷಯದಲ್ಲಿ ಅವರು ನನ್ನ ಸಾಲವನ್ನು ಮರುಪಾವತಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ತಡೆಯುತ್ತಿದ್ದಾರೆ ಮತ್ತು ನನ್ನ ಆಸ್ತಿಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಕಾಣುವ ಪ್ರಕರಣ ಮೇಲ್ಮನವಿಗಾಗಿ ಕಾಯುತ್ತಿದೆ ಎಂದು ಬರೆದಿದ್ದಾರೆ.

    ಸೋಮವಾರ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಅವರ ಮೃತದೇಹ ಇಂದು ಪತ್ತೆಯಾಗಿದೆ. ಸೋಮವಾರ ರಾತ್ರಿಯಿಂದ ಮಂಗಳವಾರ ತಡರಾತ್ರಿಯವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ರಾತ್ರಿ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.

    ಸ್ಥಳೀಯ ಮೀನುಗಾರರು ಗಮನಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಶವವಾಗಿ ಪತ್ತೆಯಾಗಿದ್ದಾರೆ. ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಹೊಯಿಗೆ ಬಜಾರ್‍ನಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ.

    https://www.youtube.com/watch?v=i3MTQLbm1KE

  • ಮಲ್ಯ ಮನೆ ಇಂಟೀರಿಯರ್ ಡಿಸೈನ್‍ಗೆ ಸಿಗ್ತಿಲ್ಲ ಎಂಜಿನಿಯರ್ಸ್..!

    ಮಲ್ಯ ಮನೆ ಇಂಟೀರಿಯರ್ ಡಿಸೈನ್‍ಗೆ ಸಿಗ್ತಿಲ್ಲ ಎಂಜಿನಿಯರ್ಸ್..!

    ಬೆಂಗಳೂರು: ಸಾವಿರಾರು ಕೋಟಿ ಸಾಲ ಮಾಡಿ ಬ್ಯಾಂಕ್‍ಗಳಿಗೆ ನಾಮ ಹಾಕಿ ವಿದೇಶಕ್ಕೆ ಓಡಿಹೋಗಿರುವ ವಿಜಯ್ ಮಲ್ಯಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಮಲ್ಯ ಅವರ ಬೆಂಗಳೂರಿನಲ್ಲಿರುವ ಮನೆಯ ಇಂಟೀರಿಯರ್ ಡಿಸೈನ್ ಮಾಡೋಕೆ ಎಂಜಿನಿಯರ್ ಸಿಗುತ್ತಿಲ್ಲ.

    ಹೌದು. ಮಲ್ಯ ಕನಸಿನ ಅರಮನೆ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಬೆಂಗಳೂರಿನ ಯುಬಿಸಿಟಿ ಪಕ್ಕದಲ್ಲಿ ಅಮೆರಿಕಾದ ವೈಟ್ ಹೌಸ್ ಮಾದರಿಯಲ್ಲಿ ಅರಮನೆ ನಿರ್ಮಾಣ ಕಾರ್ಯ ನಡೀತಿತ್ತು. 8 ವರ್ಷಗಳ ಹಿಂದೆಯೇ ಮನೆ ನಿರ್ಮಾಣ ಕಾರ್ಯ ಶುರುವಾಗಿದ್ದು, ಈಗಾಗಲೇ ಔಟ್‍ಲುಕ್ ಪೂರ್ಣಗೊಂಡಿದೆ.

    ಆದ್ರೆ ಇದೀಗ ಇಂಟೀರಿಯರ್ ಡಿಸೈನ್ ಮಾಡಲು ಎಂಜಿನಿಯರ್‍ಗಳೇ ಸಿಗುತ್ತಿಲ್ಲ. ಮಲ್ಯ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರೋದ್ರಿಂದ ಯಾವ ಎಂಜಿನಿಯರ್‍ಗಳೂ ಅರಮನೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಹೀಗಾಗಿ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿರುವ ಪ್ರೆಸ್ಟೀಜ್ ಗ್ರೂಪ್ ಎಂಜಿನಿಯರ್‍ಗಳ ಹುಡುಕಾಟದಲ್ಲಿದೆ. ಈ ಬಗ್ಗೆ ಕಿಂಗ್‍ಫಿಶರ್ ಸಿಬ್ಬಂದಿಯೇ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    100 ಕೋಟಿ ವೆಚ್ಚದಲ್ಲಿ ಮನೆ:
    ಬೆಂಗಳೂರಿನ ಟಾಪ್ ಅಪಾರ್ಟ್ ಮೆಂಟ್ ಇದಾಗಿದ್ದು, ಅತ್ಯಂತ ದುಬಾರಿ ವೆಚ್ಚದ್ದಾಗಿದೆ. ಈ ಅಪಾರ್ಟ್ ಮೆಂಟ್ ಅನ್ನು ಮಲ್ಯ ಒಡೆತನದ ಯುಬಿ ಗ್ರೂಫ್ ಹಾಗೂ ಪ್ರೆಸ್ಟೀಜ್ ಪಾಲುದಾರರಾಗಿ ಕಟ್ಟಿದೆ. 82 ಪ್ಲ್ಯಾಟ್ ಇದೆ. ಪ್ಲೋರ್ ರೂಪ್ ಟಾಫ್‍ನಲ್ಲಿ ಪೆಂಟ್ ಹೌಸ್‍ನಲ್ಲಿ ಮಲ್ಯನ ರಾಜ ದರ್ಬಾರ್ ನಡೆಯಲಿದೆ. ಅಮೆರಿಕದ ವೈಟ್ ಹೌಸ್ ಮಾದರಿಯಲ್ಲಿ ನಿರ್ಮಾಣವಾಗುತ್ತಿದೆ.

    ಮಲ್ಯನ ಭವ್ಯ ಅರಮನೆ 400 ಅಡಿ ಎತ್ತರದಲ್ಲಿದ್ದು, 34 ಹಾಗೂ 35ನೇ ಲೆವಲ್‍ನಲ್ಲಿ ಮಲ್ಯ ಮನೆಯಿದೆ. ಮನೆಯ ಟಾಪ್‍ನಲ್ಲಿ ಹೆಲಿಪ್ಯಾಡ್, ಜೊತೆಗೆ ದೊಡ್ಡ ಸ್ವಿಮ್ಮಿಂಗ್ ಪೂಲ್ ಮತ್ತು ದೊಡ್ಡದಾದ ಬಾರ್ ಹೌಸ್ ಕೂಡ ಇದೆ. ಜಗತ್ತಿನ ದುಬಾರಿ ಎಣ್ಣೆಗಳು ಇಲ್ಲಿ ಸಿಗಲಿದೆ. ಬರೋಬ್ಬರಿ ನೂರು ಕೋಟಿಯಷ್ಟು ವೆಚ್ಚದಲ್ಲಿ ಈ ವೈಟ್ ಹೌಸ್ ನಿರ್ಮಾಣವಾಗುತ್ತಿದೆ. ಆದರೆ ಮಾರ್ಕೆಟ್ ನ ಮೌಲ್ಯ 500 ಕೋಟಿ ಎಂದು ಹೇಳಲಾಗುತ್ತಿದೆ.

    ಈ ಅಪಾರ್ಟ್ ಮೆಂಟ್ ಎರಡು ಸಾವಿರ ಚದರಡಿ ವಿಸ್ತೀರ್ಣದಲ್ಲಿ ನಿರ್ಮಾಣಗಲಿದ್ದು, ಪ್ರತಿ ರೂಂಗೂ ಅದ್ಭುತ ಇಂಟಿರಿಯರ್ ವರ್ಕ್, ಜಗತ್ತಿನ ದುಬಾರಿ ಸೋಫಾಸೆಟ್, ಬಂಗಾರದ ಬಣ್ಣದಂತೆ ಹೊಳೆಯುವ ಬೆಡ್‍ಗಳು. ಇಟಲಿಯನ್ ಮಾರ್ಬಲ್ ಸ್ಟೋನ್, ಕೇನ್ಯನ್ ಹಾರ್ಡ್ ವುಡ್ ಮಾರ್ಬಲ್, ಗೋಲ್ಡನ್ ಬಾತ್ ರೂಂ ಟೈಲ್ಸ್, ಅಲ್ಲದೇ ಕಣ್ಣು ಕೋರೈಸುವ ಮಂದ ಬೆಳಕಲ್ಲಿ ಪಬ್ ಕೂಡ ಇದ್ದು, ಇದು ಮಲ್ಯ ಅರಮನೆಯ ಸ್ಪೆಷಾಲಿಟಿಯಾಗಿದೆ.

    ಈ ಮನೆಯಲ್ಲಿ ಎರಡು ಲಿಫ್ಟ್ ಇದ್ದು, ಒಂದು ವಿಜಯಮಲ್ಯಗಷ್ಟೇ ಮೀಸಲು. ಇನ್ನೊಂದು ಗೆಸ್ಟ್ ಗಳಿಗೆ ಮೀಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಇರುವ ಈ ಲಿಫ್ಟ್ ಮಲ್ಯ ಪಿಂಗರ್ ಫ್ರಿಂಟ್ ಇಲ್ಲದೇ ತೆರೆಯಲ್ಲ. ಅಷ್ಟೊಂದು ಭದ್ರತೆಯಿಂದ ಕೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಲ್ಯ ಗಡಿಪಾರು ಆಗ್ತಾರಾ? ಮುಂದಿನ ಕಾನೂನು ಪ್ರಕ್ರಿಯೆ ಹೇಗೆ ನಡೆಯುತ್ತದೆ?

    ಮಲ್ಯ ಗಡಿಪಾರು ಆಗ್ತಾರಾ? ಮುಂದಿನ ಕಾನೂನು ಪ್ರಕ್ರಿಯೆ ಹೇಗೆ ನಡೆಯುತ್ತದೆ?

    ಲಂಡನ್: ಮದ್ಯದೊರೆ ವಿಜಯ್ ಮಲ್ಯರನ್ನು ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ಭಾರತಕ್ಕೆ ಗಡಿಪಾರು ಗೊಳಿಸಿದ್ದರ ಬೆನ್ನಲ್ಲೇ, ಮಲ್ಯರ ಮುಂದಿನ ನಡೆ ಏನೆಂಬುದು ಕುತೂಹಲ ಮೂಡಿಸಿದೆ.

    ಹಣಕಾಸಿನ ವಿಚಾರದಲ್ಲಿ ಹಾಗೂ ವಂಚನೆಗೆ ಸಂಬಂಧಪಟ್ಟಂತೆ ಮಲ್ಯ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಗಳು ಲಭ್ಯವಾಗಿದ್ದರಿಂದ ಮಲ್ಯರನ್ನು ಗಡಿಪಾರು ಮಾಡಲು ನ್ಯಾಯಾಧೀಶರು ಆದೇಶ ನೀಡಿದ್ದರು.

    ಮಲ್ಯ ಮುಂದಿನ ನಡೆ ಏನು?
    * ಬ್ರಿಟನ್ ಕೋರ್ಟ್ ಗಡಿಪಾರಿನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿಯನ್ನು ಸಲ್ಲಿಸಬಹುದು.
    * ಮೇಲ್ಮನವಿ ಸಲ್ಲಿಸಲು 14 ದಿನಗಳ ಕಾಲಾವಕಾಶ ಇದೆ.

    ಮೇಲ್ಮನವಿ ಸಲ್ಲಿಸದೇ ಇದ್ರೆ ಏನಾಗುತ್ತೆ?
    ಮಲ್ಯ ಗಡಿಪಾರಿನ ಆದೇಶವನ್ನು ಪ್ರಶ್ನಿಸಿ 14 ದಿನಗಳೊಳಗಾಗಿ ಮೇಲ್ಮನವಿ ಸಲ್ಲಿಸದೇ ಇದ್ದರೆ, 22 ದಿನಗೊಳಗೆ ಅಲ್ಲಿನ ಗೃಹ ಕಾರ್ಯದರ್ಶಿಗಳು ಮಲ್ಯ ಗಡಿಪಾರಿಗೆ ಆದೇಶ ನೀಡುತ್ತಾರೆ. ಈ ಆದೇಶ ಪ್ರಕಟಗೊಂಡ ಬಳಿಕ ಸಿಬಿಐ ಅಧಿಕಾರಿಗಳು ಲಂಡನ್ ನಿಂದ ಮಲ್ಯರನ್ನು ಭಾರತಕ್ಕೆ ಕರೆತರುತ್ತಾರೆ.

    ಗಡಿಪಾರು ಆಗ್ತಾರಾ?
    ಅಪರಾಧಿಗಳ ಗಡಿಪಾರು ಸಂಬಂಧ 1992 ರಲ್ಲಿ ಭಾರತ ಮತ್ತು ಬ್ರಿಟನ್ ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದೂವರೆಗೂ ಕೇವಲ ಒಬ್ಬ ವ್ಯಕ್ತಿಯನ್ನು ಮಾತ್ರ ಭಾರತ ಸ್ವದೇಶಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ಭಾರತಕ್ಕೆ ಗಡಿಪಾರು ಮಾಡುವವರ ಪಟ್ಟಿಯಲ್ಲಿ ಲಲಿತ್ ಮೋದಿ, ಟೈಗರ್ ಹನೀಫ್, ನದೀಪ್ ಸೈಫ್, ರವಿ ಶಂಕರಮ್ ಹಾಗೂ ವಿಜಯ್ ಮಲ್ಯ ಹೆಸರಿದೆ.

    ಪ್ರಪ್ರಥಮವಾಗಿ 2002ರಲ್ಲಿ ಗುಜರಾತ್ ದಂಗೆಗೆ ಸಂಬಂಧಿಸಿದಂತೆ 2016ರ ಅಕ್ಟೋಬರ್ ನಲ್ಲಿ ಸಮೀರ್ ಭಾಯ್ ವಿನುಭಾಯ್ ಪಟೇಲ್ ನನ್ನು ಬ್ರಿಟನ್ ಭಾರತಕ್ಕೆ ಹಸ್ತಾಂತರಿಸಿತ್ತು. 2018ರ ಫೆಬ್ರವರಿಯಲ್ಲಿ ಇಂಗ್ಲೆಂಡ್ ಅಧಿಕಾರಿಗಳು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕಾರಿಗಳೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸಿ, ಮಾತುಕತೆಯನ್ನು ಸಹ ನಡೆಸಿದ್ದರು. ಈ ವೇಳೆ ಭಾರತ 17 ಮಂದಿಯ ಮಾಹಿತಿಯನ್ನು ಹಂಚಿಕೊಂಡಿತ್ತು.

    ಇದರಲ್ಲಿ ಪ್ರಮುಖವಾಗಿ ರವಿ ಶಂಕರನ್ (ಭಾರತೀಯ ಜಲಂತರ್ಗಾಮಿ ಯುದ್ಧ ನೌಕೆಯಲ್ಲಿ ನೀರು ಸೋರಿಕೆಯ ಪ್ರಮುಖ ಆರೋಪಿ), ಟೈಗರ್ ಹನೀಫ್ (1993ರಲ್ಲಿ ಗುಜರಾತ್ ನಲ್ಲಿ ನಡೆದ 2 ಸ್ಫೋಟ ಪ್ರಕರಣಕ್ಕೆ ಬೇಕಾದ ಆರೋಪಿ), ಸಂಗೀತ ನಿರ್ದೇಶಕ ನದೀಮ್ ಸೈಫ್ (ಗುಲ್ಷನ್ ಕುಮಾರ್ ಕೊಲೆ ಪ್ರಕರಣ ಆರೋಪಿ)ಯ ಹೆಸರುಗಳು ಪ್ರಸ್ತಾಪವಾಗಿದ್ದವು.

    ಬ್ರಿಟನ್ ನ್ಯಾಯಾಲಯ ಸಾಮಾನ್ಯವಾಗಿ ರಾಜಕೀಯ ಕಾರಣ ಹಾಗೂ ವ್ಯಕ್ತಿಗೆ ಚಿತ್ರ ಹಿಂಸೆ ಅಥವಾ ಮರಣದಂಡನೆಗೆ ಒಳಪಟ್ಟ ವ್ಯಕ್ತಿಗಳನ್ನು ಗಡಿಪಾರು ಮಾಡಲು ನಿರಾಕರಿಸುತ್ತದೆ. ಇಂತಹ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ಬ್ರಿಟನ್ ತಿರಸ್ಕರಿಸಿದೆ. ಯೂರೋಪಿನ್ ಮಾನವ ಹಕ್ಕುಗಳ ಆರ್ಟಿಕಲ್ 8ರ ಪ್ರಕಾರ ಯಾವುದೇ ವ್ಯಕ್ತಿಗೂ ಸಹ ಕುಟುಂಬ ಜೀವನವನ್ನು ನಡೆಸುವ ಹಕ್ಕು ಇದೆ ಎಂದು ಅದು ಪ್ರತಿಪಾದಿಸುತ್ತದೆ. ಬ್ಯಾಂಕ್ ಗಳಿಗೆ ವಂಚಿಸಿದ ಆರೋಪ ಇರುವ ಕಾರಣ ಮಲ್ಯ ಗಡಿಪಾರಿಗೆ ಕೋರ್ಟ್ ಒಪ್ಪಿಗೆ ನೀಡಬಹುದು ಎನ್ನುವ ನಿರೀಕ್ಷೆಯನ್ನು ಮೊದಲೇ ಭಾರತ ಸರ್ಕಾರ ಇಟ್ಟುಕೊಂಡಿತ್ತು.

    ಕೋರ್ಟ್ ಆದೇಶಕ್ಕೂ ಮುನ್ನ ಮಲ್ಯ ಹೇಳಿದ್ದೇನು?
    ನನ್ನ ನೌಕಕರಿಗೆ ನನ್ನ ಮೊದಲ ಆದ್ಯತೆ ನೀಡುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ನಮ್ಮ ಸಂಸ್ಥೆಯ ನೌಕರರಿಗೆ ಸಂಬಳ ನೀಡುವುದಕ್ಕಾಗಿ ನಾವು ನ್ಯಾಯಾಲಯದಲ್ಲಿ ಠೇವಣಿಯ ಹಣ ಬಳಸಬೇಕು. ಈ ಸಂಬಂಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದೆವು. ಆದರೆ ಈ ಬಗ್ಗೆ ನ್ಯಾಯಾಲಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಒಂದು ವೇಳೆ ನ್ಯಾಯಾಲಯ ಪ್ರಕರಣ ಇತ್ಯರ್ಥ ಮಾಡಲು ಒಪ್ಪಿದರೆ, ಮೊದಲು ನನ್ನ ನೌಕರರಿಗೆ ಸಂಬಳ ನೀಡುವಂತೆ ಮನವಿ ಮಾಡಿಕೊಳ್ಳುತ್ತೇನೆ. ಅಲ್ಲದೇ ನ್ಯಾಯಾಲಯ ಯಾವ ರೀತಿ ತೀರ್ಪು ನೀಡುತ್ತದೆಯೋ, ಅದನ್ನು ಸ್ವೀಕರಿಸಲು ನಾನು ಸಿದ್ಧ. ಅಲ್ಲದೇ ಈ ಬಗ್ಗೆ ನನ್ನ ಕಾನೂನು ಸಲಹಗಾರರ ಬಳಿ ಚರ್ಚಿಸಿ, ಸೂಕ್ತ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬ್ರಿಟನ್‍ನಿಂದ ವಿಜಯ್ ಮಲ್ಯ ಭಾರತಕ್ಕೆ ಗಡಿಪಾರು

    ಬ್ರಿಟನ್‍ನಿಂದ ವಿಜಯ್ ಮಲ್ಯ ಭಾರತಕ್ಕೆ ಗಡಿಪಾರು

    ಲಂಡನ್: ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚನೆ ಮಾಡಿ ಲಂಡನ್‍ಗೆ ಪರಾರಿಯಾಗಿರುವ ಮದ್ಯದೊರೆ ವಿಜಯ್ ಮಲ್ಯ ಭಾರತಕ್ಕೆ ಗಡಿಪಾರು ಮಾಡಲು ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ಅನುಮತಿ ನೀಡಿದೆ.

    ಇತ್ತೀಚೆಗಷ್ಟೆ ಯುಪಿಎ ಅವಧಿಯ ಹೆಲಿಕಾಪ್ಟರ್ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍ನನ್ನು ಸಿಬಿಐ ಭಾರತಕ್ಕೆ ಯುಎಯಿಯಿಂದ ಗಡಿಪಾರು ಮಾಡಲಾಗಿತ್ತು. ಈಗ ವಿಜಯ್ ಮಲ್ಯ ಗಡಿಪಾರಿಗೆ ಕೋರ್ಟ್ ಆದೇಶ ನೀಡಿದ್ದು ಸಾಲ ಮಾಡಿ ಪರಾರಿಯಾದವರನ್ನು ದೇಶಕ್ಕೆ ಕರೆ ತರುವ ಕೇಂದ್ರ ಸರ್ಕಾರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ಈ ಹಿಂದೆ ಮಲ್ಯ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.

    ಮುಂದೇನು?
    ಒಂದು ವೇಳೆ ಮಲ್ಯ ಗಡಿಪಾರು ಮಾಡುವಂತೆ ಕೋರ್ಟ್ ತೀರ್ಪು ನೀಡಿದರೆ, ಈ ಆದೇಶ ಬ್ರಿಟನ್ ಗೃಹ ಕಾರ್ಯದರ್ಶಿಗೆ ತಲುಪುತ್ತದೆ. ಸರ್ಕಾರದ ಪರವಾಗಿ ಕಾರ್ಯದರ್ಶಿ ಗಡಿಪಾರು ಆದೇಶ ಹೊರಡಿಸಿ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡುತ್ತಾರೆ. ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲು ಮಲ್ಯಗೆ ಅವಕಾಶವಿದೆ. ಒಂದು ವೇಳೆ ಮೇಲ್ಮನವಿ ಸಲ್ಲಿಸಿದರೆ ಮತ್ತೆ ಸಿಬಿಐ ಕಾನೂನು ಹೋರಾಟ ನಡೆಸಬೇಕಾಗುತ್ತದೆ.

    ನಾನು ಸಾಲಗಾರನಲ್ಲ. ಕಿಂಗ್ ಫಿಷರ್ ಏರ್ ಲೈನ್ಸ್ ತೆಗೆದುಕೊಂಡಿದ್ದ ಸಾಲಕ್ಕೆ ಜಾಮೀನು ನಿಂತಿದ್ದೆ. ಆದರೆ ಕಿಂಗ್ ಫಿಷರ್ ಏರ್ ಲೈನ್ಸ್ ಉದ್ಯಮದಿಂದ ನಷ್ಟವಾಯಿತು. ಹೀಗಾಗಿ ಸಂಸ್ಥೆ ನಷ್ಟದ ಪಾಲಾಗಿದ್ದು, ನಾನು ಆ ನಷ್ಟದ ಜವಾಬ್ದಾರನಾಗಿದ್ದೇನೆ ಎಂದು ಮಲ್ಯ ಹೇಳಿದ್ದಾರೆ.

    ಇತ್ತೀಚೆಗಷ್ಟೆ ಯುಪಿಎ ಅವಧಿಯ ಹೆಲಿಕಾಪ್ಟರ್ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍ನನ್ನು ಸಿಬಿಐ ಭಾರತಕ್ಕೆ ಕರೆತರುತ್ತಿದ್ದಂತೆ, ಸಾರ್ವಜನಿಕ ಬ್ಯಾಂಕ್‍ಗಳಿಗೆ ವಂಚಿಸಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಎಚ್ಚೆತ್ತು ಸರಣಿ ಟ್ವೀಟ್ ಮಾಡಿದ್ದರು. ತಮ್ಮ ಟ್ವೀಟ್ ನಲ್ಲಿ ನಾನು ಪಡೆದಿರುವುದು ಸಾರ್ವಜನಿಕ ಹಣ. ಹೀಗಾಗಿ ಶೇ.100 ರಷ್ಟು ಸಾಲವನ್ನು ಮರು ಪಾವತಿ ಮಾಡುತ್ತೇನೆಂದು ಹೇಳಿ, ರಾಜಕಾರಣಿಗಳು ಹಾಗೂ ಮಾಧ್ಯಮಗಳ ವಿರುದ್ಧವೂ ಕಿಡಿಕಾರಿದ್ದರು.

    ಟ್ವೀಟ್‍ನಲ್ಲಿ ಏನಿತ್ತು?
    ನಾನು ಸಾರ್ವಜನಿಕರ ಹಣವನ್ನು ದೋಚಿ ಪರಾರಿಯಾಗಿದ್ದೇನೆ ಎಂದು ರಾಜಕಾರಣಿಗಳು ಹಾಗೂ ಮಾಧ್ಯಮಗಳು ನನ್ನ ವಿರುದ್ಧ ಜೋರಾಗಿ ಮಾತನಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣವಿರುವಾಗಲೇ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ.

    ಕಿಂಗ್‍ಫಿಶರ್ ಅದ್ಭುತ ವಿಮಾನಯಾನ ಸಂಸ್ಥೆಯಾಗಿತ್ತು. ಆದರೆ ವಿಮಾನಕ್ಕೆ ಬಳಸುವ ಇಂಧನದ ಬೆಲೆಯು ಪ್ರತಿ ಬ್ಯಾರೆಲ್‍ಗೆ 140 ಅಮೆರಿಕನ್ ಡಾಲರ್ ಹೆಚ್ಚಾಗಿತ್ತು. ಇದನ್ನು ಸಂಸ್ಥೆ ಎದುರಿಸುವಲ್ಲಿ ವಿಫಲವಾಗಿತ್ತು. ಇದರಿಂದಾಗಿ ಬ್ಯಾಂಕ್ ಹಣವೆಲ್ಲವೂ ಅಲ್ಲಿ ಹೋಗಿತ್ತು. ನಾನು ಶೇಕಡಾ 100ರಷ್ಟು ಹಣ ಮರು ಪಾವತಿ ಮಾಡಲು ಸಿದ್ಧವಾಗಿದ್ದೇನೆ. ದಯವಿಟ್ಟು ಸ್ವೀಕರಿಸಿ.

    ಕಳೆದ ಮೂರು ದಶಕಗಳಿಂದ ಕಿಂಗ್‍ಫಿಶರ್ ಮದ್ಯದ ಕಂಪನಿ ಉತ್ತಮ ಪ್ರಗತಿಯಲ್ಲಿದೆ. ಆದರೆ ವಿಮಾನ ಯಾನದಿಂದ ನಷ್ಟಕ್ಕೆ ಒಳಗಾಗಬೇಕಾಯಿತು. ಅನೇಕ ರಾಜ್ಯಗಳ ಪ್ರಗತಿಗೆ ಹಣವನ್ನು ನೀಡಿರುವೆ. ಎಂದಿಗೂ ಬ್ಯಾಂಕ್‍ಗೆ ಮೋಸ ಮಾಡುವುದಿಲ್ಲ. ಎಲ್ಲ ಹಣವನ್ನು ಪಾವತಿ ಮಾಡುತ್ತೇನೆಂದು ಹೇಳಿದ್ದರು.

    ಏನಿದು ಪ್ರಕರಣ?
    ಭಾರತದ ವಿವಿಧ ಬ್ಯಾಂಕ್ ಗಳಿಗೆ ಮಲ್ಯ 9 ಸಾವಿರ ಕೋಟಿ ರೂ. ಸಾಲ ಮರುಪಾವತಿ ಮಾಡದೇ ಇಂಗ್ಲೆಂಡ್ ಗೆ ಪಲಾಯನ ಮಾಡಿದ್ದ ವಿಜಯ್ ಮಲ್ಯರನ್ನು ಭಾರತಕ್ಕೆ ವಾಪಸ್ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿತ್ತು. ಅಲ್ಲದೇ ಇಂಗ್ಲೆಂಡಿನಿಂದ ಗಡಿಪಾರು ಮಾಡುವಂತೆ ಅಲ್ಲಿನ ಸರ್ಕಾರಕ್ಕೂ ಮನವಿ ಮಾಡಿಕೊಂಡಿತ್ತು. ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಸೆಪ್ಟೆಂಬರ್ 3ರಂದು ಮಲ್ಯರಿಗೆ ನೋಟಿಸ್ ಜಾರಿ ಮಾಡಿ 1 ವಾರದೊಳಗೆ ಉತ್ತರಿಸುವಂತೆ ಸೂಚಿಸಿತ್ತು. ಆದರೂ ಸಹ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

    ಈ ಹಿಂದೆ ಭಾರತಕ್ಕೆ ಮಲ್ಯರನ್ನು ಗಡಿಪಾರು ಮಾಡುವ ಕುರಿತು ಲಂಡನ್ ನ್ಯಾಯಾಲಯ ಮುಂಬೈ ಜೈಲಿನ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿತ್ತು. ನ್ಯಾಯಾಲಯದ ಸೂಚನೆಯಂತೆ ಸಿಬಿಐ ಅಧಿಕಾರಿಗಳು ಮುಂಬೈ ಆರ್ಥರ್ ರೋಡ್ ಜೈಲಿನ ವಿಡಿಯೋವನ್ನು ಸಲ್ಲಿಸಿದ್ದರು. ಆದರೆ ಮಲ್ಯ ಭಾರತದ ಜೈಲುಗಳು ಅಮಾನವೀಯವಾಗಿದೆ, ಅಲ್ಲಿ ಬೆಳಕು ಸರಿ ಇಲ್ಲ ಎಂದು ಮಲ್ಯ ಪರ ವಕೀಲರು ದೂರಿದ್ದರು. ಸಿಬಿಐ ಪರ ವಕೀಲರು ಎಲ್ಲಾ ವ್ಯವಸ್ಥೆಗಳು ಸರಿಯಾಗಿಯೇ ಇವೆ. ಎಲ್ಲವನ್ನು ಸರಿಮಾಡಿದ್ದೇವೆಂದು ಕೋರ್ಟ್ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಲಂಡನ್ ಮನೆಯಿಂದ ವಿಜಯ್ ಮಲ್ಯ ಔಟ್?

    ಲಂಡನ್ ಮನೆಯಿಂದ ವಿಜಯ್ ಮಲ್ಯ ಔಟ್?

    ಬ್ರಿಟನ್: ದೇಶದ ಬ್ಯಾಂಕ್‍ಗಳಿಂದ ಸಾಲ ಪಡೆದು ಮರುಪಾವತಿ ಮಾಡದೆ ಲಂಡನ್‍ಗೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಈಗ ಹೊಸ ಸಂಕಷ್ಟ ಎದುರಾಗಿದೆ.

    ಲಂಡನ್ ನ ರೀಜೆಂಟ್ ಪಾರ್ಕ್ ನಲ್ಲಿರುವ ಬಹುಕೋಟಿ ಮೌಲ್ಯದ ಮನೆಯಿಂದ ಮಲ್ಯರನ್ನ ಹೊರಹಾಕಲು ಸ್ವಿಸ್ ಬ್ಯಾಂಕ್ ಬ್ರಿಟನ್ ಹೈಕೋರ್ಟ್ ಮೆಟ್ಟಿಲೇರಿದೆ.

    ವಿಜಯ್ ಮಲ್ಯ ಸದ್ಯಕ್ಕೆ ಅವರ ತಾಯಿ ಲಲಿತಾ ಮಲ್ಯ ಮತ್ತು ಅವರ ಮಗ ಸಿದ್ಧಾರ್ಥ್ ಮಲ್ಯರ ಜೊತೆ ರೀಜೆಂಟ್ ಪಾರ್ಕ್ ನಲ್ಲಿರುವ ಮಲ್ಟಿ ಮಿಲಿಯನ್ ಮ್ಯಾನ್ಷನ್ ನಲ್ಲಿ ವಾಸಿವಿದ್ದಾರೆ. ಆದರೆ ಈ ಮನೆಯನ್ನ ಅಡವಿಟ್ಟಿದ್ದ ವಿಜಯ್ ಮಲ್ಯ, ಸೆಪ್ಟೆಂಬರ್ 2017 ರಲ್ಲಿ ಸುಮಾರು 198 ಕೋಟಿಗಳಷ್ಟು ಹಣವನ್ನ ಸಾಲ ಪಡೆದಿದ್ದು, 5 ವರ್ಷಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಆದರೆ ಇಲ್ಲಿಯ ವರೆಗೆ ಸಾಲ ಮರುಪಾವತಿ ಮಾಡದ ಹಿನ್ನಲೆ ವಿಜಯ್ ಮಲ್ಯ ಅವರನ್ನು ಮ್ಯಾನ್ಷನ್ ನಿಂದ ಹೊರಹಾಕುವುದಕ್ಕೆ ಅನುಮತಿ ನೀಡಬೇಕೆಂದು ಸ್ವಿಸ್ ಬ್ಯಾಂಕ್ ಬ್ರಿಟನ್ ಕೋರ್ಟ್ ಮೆಟ್ಟಿಲೇರಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಿಂಗ್‍ಫಿಶರ್ ಏರ್‌ಲೈನ್ಸ್‌ನ ಭಾಗಶಃ ಮಾಲೀಕತ್ವವನ್ನು ಬೇನಾಮಿ ಹೆಸ್ರಲ್ಲಿ ರಾಗಾ ಕುಟುಂಬ ಹೊಂದಿತ್ತು: ಬಿಜೆಪಿ ವಕ್ತಾರ

    ಕಿಂಗ್‍ಫಿಶರ್ ಏರ್‌ಲೈನ್ಸ್‌ನ ಭಾಗಶಃ ಮಾಲೀಕತ್ವವನ್ನು ಬೇನಾಮಿ ಹೆಸ್ರಲ್ಲಿ ರಾಗಾ ಕುಟುಂಬ ಹೊಂದಿತ್ತು: ಬಿಜೆಪಿ ವಕ್ತಾರ

    ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಒಡೆತನದ ಕಿಂಗ್‍ಫಿಶರ್ ಏರ್‌ಲೈನ್ಸ್‌ ಸಂಸ್ಥೆಯ ಭಾಗಶಃ ಮಾಲೀಕತ್ವವನ್ನು ರಾಹುಲ್ ಗಾಂಧಿ ಕುಟುಂಬ ಬೇನಾಮಿಯಾಗಿ ಹೊಂದಿತ್ತೆಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ.

    ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯರೊಂದಿಗೆ ಕಳೆದ ಯುಪಿಎ ಸರ್ಕಾರ ಸಾಕಷ್ಟು ಸ್ವೀಟ್ ಡೀಲ್‍ಗಳನ್ನು ಮಾಡಿಕೊಂಡಿತ್ತು. ಅಲ್ಲದೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕುಟುಂಬ ತಮ್ಮ ಪ್ರತಿನಿಧಿಗಳ ಮೂಲಕ ಕಿಂಗ್‍ಫಿಶರ್ ಏರ್‌ಲೈನ್ಸ್‌ನ ಭಾಗಶಃ ಮಾಲೀಕತ್ವವನ್ನು ಹೊಂದಿದ್ದರು. ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಆರ್‌ಬಿಐ ಕಿಂಗ್‍ಫಿಶರ್ ಏರ್‌ಲೈನ್ಸ್‌ಗಳೊಂದಿಗೆ ಹೇಗೆ ಸ್ವೀಟ್ ಡೀಲ್ ಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ.

    ಕಷ್ಟದ ಪರಿಸ್ಥಿತಿಯಲ್ಲಿದ್ದ ಕಾಲದಲ್ಲಿ ವಿಜಯ್ ಮಲ್ಯ ಜೊತೆ ಯುಪಿಎ ಸರ್ಕಾರ ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿದ್ದರು. ಗಾಂಧಿ ಕುಟುಂಬದ ಪ್ರಭಾವದಿಂದಲೇ ಮಲ್ಯಗೆ ಅನುಕೂಲಕರವಾಗಿರುವ ವಾತಾವರಣ ಕಲ್ಪಿಸಿಕೊಟ್ಟಿದ್ದರು. ಮಲ್ಯ ಹಾಗೂ ಗಾಂಧಿ ಕುಟುಂಬ ಆಪ್ತರಾಗಿದ್ದರು ಎಂಬುದನ್ನು ಯಾರು ಮರೆತಿಲ್ಲ. ಅಲ್ಲದೇ ಗಾಂಧಿ ಕುಟುಂಬ ಮಲ್ಯ ಅವರ ಕಿಂಗ್‍ಫಿಶರ್ ವಿಮಾನಗಳ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದರು ಎನ್ನುವ ಮೂಲಕ ರಾಹುಲ್ ಗಾಂಧಿಯವರು ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮಲ್ಯ, ಅರುಣ್ ಜೇಟ್ಲಿ ಭೇಟಿ ಮಾಡಿದ್ದನ್ನ ಕಾಂಗ್ರೆಸ್ ಎಂಪಿ ನೋಡಿದ್ದಾರೆ: ರಾಹುಲ್ ಗಾಂಧಿ

    ಗಾಂಧಿ ಕುಟುಂಬ ಮಲ್ಯ ಹಾಗೂ ಕಿಂಗ್‍ಫಿಶರ್ ಏರ್‌ಲೈನ್ಸ್‌ ಸಂಸ್ಥೆಗೆ ಸಾಕಷ್ಟು ಸಹಾಯ ಮಾಡಿದೆ. ಅಲ್ಲದೇ ಇದಕ್ಕಾಗಿ ಅನೇಕ ಒಳ ಒಪ್ಪಂದಗಳನ್ನು ಸಹ ಮಾಡಿಕೊಂಡಿದ್ದವು. ಈ ವೇಳೆ ಏರ್‌ಲೈನ್ಸ್‌ಗಾಗಿ ಬ್ಯಾಂಕುಗಳಿಂದ ಪಡೆದುಕೊಂಡಿರುವ ಸಾಲದ ದಾಖಲೆಗಳನ್ನು ಬಹಿರಂಗಪಡಿಸಿ, ಕಿಂಗ್‍ಫಿಶರ್ ಏರ್‌ಲೈನ್ಸ್‌ ಗೆ ನೀಡಿರುವ ಸಾಲದ ಸಂಬಂಧ ಆರ್‌ಬಿಐ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಹಲವಾರು ಪತ್ರಗಳನ್ನು ಬರೆದಿದೆ. ಇವುಗಳ ಮೂಲಕ ಸೋನಿಯಾ ಗಾಂಧಿ ಯಾರ ಪರವಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅವರ ಅವಧಿಯಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ವಿಜಯ್ ಮಲ್ಯಗೆ ಸಾಲ ನೀಡಿದ್ದರು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

    ಇದೇ ವೇಳೆ ಅರುಣ್ ಜೇಟ್ಲಿ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಜಾಮೀನಿನ ಮೇಲೆ ಹೊರಗಿದ್ದಾರೆ. ಇಂತಹ ವ್ಯಕ್ತಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ಅರ್ಹತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!

    ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!

    ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ ಮಲ್ಯರವರು ಹಣಕಾಸು ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿ ಮಾಡಿ ಮಾತನಾಡಿದ್ದೆ ಎನ್ನುವ ಹೇಳಿಕೆ ರಾಜಕೀಯ ವಲಯದಲ್ಲಿ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

    9 ಸಾವಿರ ಕೋಟಿ ಸಾಲ ಮಾಡಿ ಬ್ರಿಟನ್‍ನಲ್ಲಿ ತಲೆ ಮರೆಸಿಕೊಂಡಿರೋ ಮದ್ಯದ ದೊರೆ ವಿಜಯ್ ಮಲ್ಯ, ತಾನು ಲಂಡನ್‍ಗೆ ಹೋಗುವ ಮೊದಲು ಅರುಣ್ ಜೇಟ್ಲಿಯನ್ನು ಭೇಟಿಯಾಗಿದ್ದೆ. ಈ ವೇಳೆ ಎಲ್ಲ ಬಾಕಿ ಚುಕ್ತಾ ಮಾಡೋದಾಗಿ ಭರವಸೆ ಕೂಡ ನೀಡಿದ್ದೆ ಅಂತ ಹೇಳಿಕೆ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

    ಈ ಕುರಿತು ವಿಜಯ್ ಮಲ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವ ಅರುಣ್ ಜೇಟ್ಲಿಯವರು, ವಿಜಯ್ ಮಲ್ಯ ಹೇಳಿಕೆ ಶುದ್ಧ ಸುಳ್ಳು. ನಾನು ಮಲ್ಯಗೆ ಯಾವುದೇ ಭೇಟಿಯ ಅವಕಾಶವನ್ನೇ ಕೊಟ್ಟಿರಲ್ಲಿಲ್ಲ. ಹೀಗಾಗಿ ಅವರನ್ನು ಭೇಟಿಯಾಗೋದು ಎಲ್ಲಿಂದ ಬಂತು ಎಂದು ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

    ಅರುಣ್ ಜೇಟ್ಲಿ ಹೇಳಿಕೆಯಿಂದ ಕೂಡಲೇ ಎಚ್ಚೆತ್ತ ಮಲ್ಯರವರು, ಸಂಸತ್ತಿನಲ್ಲಿ ಒಮ್ಮೆ ಜೇಟ್ಲಿ ಅವರು ಸಿಕ್ಕಿದ್ದರು. ಆಗ ಹೇಳಿದ್ದೆ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯಿಂದ ಜಾರಿಕೊಂಡಿದ್ದಾರೆ. ವಿಜಯ್ ಮಲ್ಯ ಹೇಳಿಕೆಯನ್ನೆ ಅಸ್ತ್ರವನ್ನಾಗಿ ಬಳಸಿಕೊಂಡಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವು ಲೂಟಿ ಹೊಡೆಯಲು ಅವಕಾಶ ಕೊಟ್ಟಿದ್ದಲ್ಲದೇ, ಎಸ್ಕೇಪ್‍ಗೂ ಕೇಂದ್ರ ಕುಮ್ಮಕ್ಕಿದೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೇಶ ಬಿಡುವ ಮುನ್ನ ಅರುಣ್ ಜೇಟ್ಲಿ ಜೊತೆ ಮಾತನಾಡಿದ್ದೆ: ವಿಜಯ್ ಮಲ್ಯ

    ಮುಂಬೈ ಅರ್ಥರ್ ರೋಡ್ ಜೈಲಿನ ಕೋಣೆ ಬಗ್ಗೆ ವೆಸ್ಟ್ ಮಿನಿಸ್ಟರ್ ಕೋರ್ಟ್ ಹಾಗೂ ದೇಶದ್ರೋಹಿ ಮಲ್ಯ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಮಲ್ಯ ಹಸ್ತಾಂತರ ಸಂಬಂಧ ಡಿಸೆಂಬರ್ 10ಕ್ಕೆ ತೀರ್ಪು ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇವಲ ವೋಟಿಗಾಗಿ ನನ್ನನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗ್ತಿದೆ: ಕೇಂದ್ರದ ವಿರುದ್ಧ ಮಲ್ಯ ಕಿಡಿ

    ಕೇವಲ ವೋಟಿಗಾಗಿ ನನ್ನನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗ್ತಿದೆ: ಕೇಂದ್ರದ ವಿರುದ್ಧ ಮಲ್ಯ ಕಿಡಿ

    ಲಂಡನ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಗಳಿಸಲು ನನ್ನನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮದ್ಯ ದೊರೆ ವಿಜಯ್ ಮಲ್ಯ ಹೇಳಿದ್ದಾರೆ.

    ಬ್ರಿಟನ್ ನಲ್ಲಿರುವ ವಿಜಯ್ ಮಲ್ಯ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬ್ರಿಟನ್ ಕೋರ್ಟ್ ಜಾರಿ ಆದೇಶ ಹೊರಡಿಸಿದೆ. ನ್ಯಾಯಾಲಯದ ತೀರ್ಪಿಗೆ ತಲೆಬಾಗಿದ್ದು, ಅಧಿಕಾರಿಗಳಿಗೆ ಸಹಕರಿಸುವುದಾಗಿ ವಿಜಯ್ ಮಲ್ಯ ತಿಳಿಸಿದ್ದಾರೆ.

    ಬ್ರಿಟಿಷ್ ಫಾರ್ಮುಲಾ ಒನ್ ರೇಸ್ ವೇಳೆ ಪಾಲ್ಗೊಂಡಿದ್ದ ಮಲ್ಯ ಅವರನ್ನು ಮಾಧ್ಯಮವೊಂದು ಮಾತನಾಡಿಸಿದ್ದು ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

    ಭಾರತದ 13 ಬ್ಯಾಂಕ್ ಗಳ ಸಾಲ ಮರುಪಾವತಿಗಾಗಿ ಇಂಗ್ಲೆಂಡಿನಿಂದ ಗಡಿಪಾರು ಮಾಡುವಂತೆ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶದಿಂದ ನನ್ನನ್ನು ಇಂಗ್ಲೆಂಡ್ ನಿಂದ ಭಾರತಕ್ಕೆ ಕರೆತರಲು ಯತ್ನಿಸುತ್ತಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ರೀತಿ ಮಾಡಿದರೆ ಮತಗಳು ಹೆಚ್ಚಿಗೆ ಸಿಗುತ್ತವೆ ಎಂದು ಕೇಂದ್ರ ಸರ್ಕಾರ ಭಾವಿಸಿದೆ ಎಂದು ಆರೋಪಿಸಿದರು.

    ಇಂಗ್ಲೆಂಡಿನಲ್ಲಿರುವ ನನ್ನ ಆಸ್ತಿಯ ವಿವರಗಳ ಬಗ್ಗೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದೇನೆ. ನನ್ನಲ್ಲಿ ಕೆಲವೊಂದು ಕಾರುಗಳು, ಚಿನ್ನಾಭರಣಗಳು ಇವೆ. ಅದನ್ನು ವಶಕ್ಕೆ ಪಡೆಯಲು ನೀವು ನನ್ನ ಮನೆಗೆ ಬರಬೇಕಿಲ್ಲ. ದಿನಾಂಕ, ಸಮಯ ಹಾಗೂ ಸ್ಥಳವನ್ನು ತಿಳಿಸಿದರೆ ನಾನೇ ಅವುಗಳನ್ನು ತಮ್ಮ ವಶಕ್ಕೆ ನೀಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    ನನ್ನ ಹೆಸರಿನಲ್ಲಿರುವ ಆಸ್ತಿಗಳನ್ನು ಮಾತ್ರ ಬ್ಯಾಂಕ್‍ಗಳು ವಶಕ್ಕೆ ಪಡೆಯಬಹುದೇ ಹೊರತು ಇತರೆ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ವಿಜಯ ಮಲ್ಯ ಇಂಗ್ಲೆಂಡಿನಲ್ಲಿರುವ ಬೆಲೆ ಬಾಳುವ ಆಸ್ತಿಗಳನ್ನು ತಮ್ಮ ಹೆಸರಿನಲ್ಲಿರಿಸಿಕೊಳ್ಳದೇ ಕುಟುಂಬ ಸದಸ್ಯರ ಹೆಸರಿನಲ್ಲಿರಿಸಿದ್ದಾರೆ.

  • ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    ಲಂಡನ್: ಮದ್ಯ ದೊರೆ ವಿಜಯ್ ಮಲ್ಯರವರ ಇಂಗ್ಲೆಂಡ್ ನಲ್ಲಿರುವ ಒಟ್ಟು 963 ಕೋಟಿ ಮೌಲ್ಯದ ಆಸ್ತಿಯನ್ನು ಎಸ್‍ಬಿಐ ವಶಪಡಿಸಿಕೊಂಡಿದೆ.

    ಎಸ್‍ಬಿಐ ಮುಖ್ಯಸ್ಥ ಅರ್ಜಿತ್ ಬಸು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಇಂಗ್ಲೆಂಡಿನಲ್ಲಿರುವ ಒಟ್ಟಾರೆ 963 ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದೇವೆ. ಇದು ಬ್ಯಾಂಕುಗಳಿಗೆ ಸಿಕ್ಕ ಜಯವಾಗಿದೆ. ಅಲ್ಲದೇ ಇನ್ನೂ ಹೆಚ್ಚಿನ ರೀತಿಯಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತಿಳಿಸಿದ್ದಾರೆ.

    ಸರಿಯಾದ ಮಾಹಿತಿಯನ್ನು ನೀಡಿದ್ದರಿಂದ ಲಂಡನ್‍ನಲ್ಲಿರುವ ವಿಜಯ್ ಮಲ್ಯರವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ಟೆವಿನ್, ವೆಲ್ವಿಯನ್ ಬಳಿ ಇರುವ ಲೇಡಿವಾಕ್ ಹಾಗೂ ಬ್ರಾಂಬಲ್ ವಸತಿನಿಲಯಗಳನ್ನು ಸಹ ಮುಟ್ಟುಗೋಲನ್ನು ಹಾಕಿಕೊಂಡು ಸುಮಾರು 9 ಸಾವಿರ ಕೋಟಿ ರೂಪಾಯಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಅಲ್ಲದೇ ವಿಶ್ವವ್ಯಾಪಿ ಮಲ್ಯರವರ ಆಸ್ತಿಮುಟ್ಟಿಗೋಲು ಕುರಿತು ಇಂಗ್ಲೆಂಡ್ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ವೇಳೆ ಮಾತನಾಡಿದ ಎಸ್‍ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ ಪಲ್ಲವ್ ಮೊಹಪತ್ರಾ, ಮಲ್ಯ ಹೊಂದಿರುವ ಆಸ್ತಿಯ ಮಾಲೀಕತ್ವ ವಿಚಾರದಲ್ಲಿ ಗೊಂದಲದಲ್ಲಿರುವ ಕಾರಣ ವಶ ಪಡಿಸುಕೊಳ್ಳುವ ಪ್ರಕ್ರಿಯೆ ಕಠಿಣವಾಗಿದೆ. ಭಾರತೀಯ ಬ್ಯಾಂಕುಗಳಿಗೆ ಮಲ್ಯ ಸುಮಾರು 6,500 ಕೋಟಿ ರೂ. ನೀಡಬೇಕಿದೆ. ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಮಲ್ಯನನ್ನು ದಿವಾಳಿ ಎಂದು ಘೋಷಿಸಲು ಮನವಿ ಮಾಡಿಕೊಂಡಿದೆ ಎಂದು ತಿಳಿಸಿದೆ.

    9 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಗಳಿಗೆ ಬಾಕಿ ಹಣ ನೀಡಬೇಕಿರುವ ವಿಜಯ್ ಮಲ್ಯ ಅವರ ಲಂಡನ್ ನಲ್ಲಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ನ್ಯಾಯಾಲಯದಲ್ಲಿ 13 ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಕಾನೂನು ಸಮರ ನಡೆಸುತಿತ್ತು. ಗುರುವಾರ ಕೋರ್ಟ್ ಆಸ್ತಿ ವಶಪಡಿಸಿಕೊಳ್ಳಲು ಆದೇಶ ನೀಡಿತ್ತು.

    ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡಲು ಸಿದ್ಧರಾಗಿರುವ ಉದ್ದೇಶಪೂರ್ವಕ ಸುಸ್ತಿದಾರ ವಿಜಯ್ ಮಲ್ಯ ಅವರಿಗೆ ಸೇರಿದ 159 ಆಸ್ತಿಗಳನ್ನು ಬೆಂಗಳೂರು ನಗರ ಪೊಲೀಸರು ಗುರುವಾರ ಪತ್ತೆ ಹಚ್ಚಿದ್ದಾರೆ.