Tag: Vijay Shankar

  • ಕ್ರಿಕೆಟಿಗೆ ಟ್ಯಾಲೆಂಟ್ ಮುಖ್ಯವೇ ಹೊರತು ಬಾಡಿ ಅಲ್ಲ: ಟ್ರೋಲಾದ ವಿಜಯ್ ಶಂಕರ್

    ಕ್ರಿಕೆಟಿಗೆ ಟ್ಯಾಲೆಂಟ್ ಮುಖ್ಯವೇ ಹೊರತು ಬಾಡಿ ಅಲ್ಲ: ಟ್ರೋಲಾದ ವಿಜಯ್ ಶಂಕರ್

    ನವದೆಹಲಿ: ಕ್ರಿಕೆಟ್‍ಗೆ ಟ್ಯಾಲೆಂಟ್ ಮುಖ್ಯವೇ ಹೊರತು ಬಾಡಿ ಮುಖ್ಯವಲ್ಲ ಎಂದು ಟೀಂ ಇಂಡಿಯಾ ಕ್ರಿಕೆಟರ್ ವಿಜಯ್ ಶಂಕರ್ ಅವರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

    28 ವರ್ಷದ ವಿಜಯ್ ಶಂಕರ್ ತಮ್ಮ ಬಾಡಿ ಬಿಲ್ಡ್ ಮಾಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಜಯ್ ಶಂಕರ್ ಎರಡು ಫೋಟೋಗಳನ್ನು ಹಂಚಿಕೊಂಡಿದ್ದು, ಒಂದರಲ್ಲಿ ಅವರ ಹಳೆಯ ನೋಟವು ಕಂಡುಬಂದರೆ, ಇನ್ನೊಂದರಲ್ಲಿ ಶರ್ಟ್ ಹಾಕದೆ ದೇಹವನ್ನು ತೋರಿಸಿದ್ದಾರೆ. ಈ ಫೋಟೋಗಳನ್ನು ನೋಡಿ, ಕೆಲವು ಕ್ರಿಕೆಟಿಗರು ಅವರನ್ನು ಹೊಗಳಿದರೆ, ಕೆಲ ನೆಟ್ಟಿಗರು ತಮ್ಮದೆ ಶೈಲಿಯಲ್ಲಿ ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.

    “ಬೆವರು, ಸಮಯ ಮತ್ತು ತಪಸ್ಸು ಅವು ಖಂಡಿತವಾಗಿಯೂ ಫಲಿತಾಂಶವನ್ನು ನೀಡುತ್ತವೆ. ಮಂಗಳವಾರದ ಬದಲಾವಣೆ” ಎಂದು ವಿಜಯ್ ಶಂಕರ್ ತಮ್ಮ ಫೋಟೋಗಳನ್ನು ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಮ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

    ವಿಜಯ್ ಶಂಕರ್ ಫೋಟೋಗಳಿಗೆ ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಶ್ರೇಯಸ್ ಅಯ್ಯರ್ ಅವರು ಪ್ರತಿಕ್ರಿಯಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಭುವನೇಶ್ವರ್ ಕುಮಾರ್ ಬಾಡಿ ಬಿಲ್ಡಿಂಗ್ ಫೋಟೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದರು. ಆದರೆ ಈಗ ವಿಜಯ್ ಶಂಕರ್ ಅವರನ್ನು ಭರ್ಜರಿ ಟ್ರೋಲ್ ಮಾಡುತ್ತಿದ್ದಾರೆ.

    ಯುವ ಪೀಳಿಗೆಗೆ ಜಿಮ್ ತರಬೇತಿಯನ್ನು ಪ್ರಾರಂಭಿಸಲು ಈಗ ನೀವು ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೀರಿ ಎಂದು ಪ್ರಭಾತ್ ನಿಗಮ್ ವ್ಯಂಗ್ಯವಾಡಿದ್ದಾರೆ. ಮೋನಿಷಾ ಉದಯ್ ರಿಟ್ವೀಟ್ ಮಾಡಿ, ಮುಂದಿನ ಕಾಲಿವುಡ್ ನಾಯಕ ಎಂದು ಕಾಲೆಳೆದಿದ್ದಾರೆ.

    ವಿಜಯ್ ಶಂಕರ್ ಟೀಂ ಇಂಡಿಯಾ ಪರ ಈವರೆಗೆ 12 ಏಕದಿನ ಮತ್ತು 9 ಟಿ-20 ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಪಂದ್ಯಗಳಲ್ಲಿ 31.85 ಸರಾಸರಿಯಲ್ಲಿ 223 ರನ್ ಗಳಿಸಿರುವ ಅವರು 4 ವಿಕೆಟ್ ಪಡೆದಿದ್ದಾರೆ. ಟಿ-20ಯಲ್ಲಿ ಅವರು 25.25 ರ ಸರಾಸರಿಯಲ್ಲಿ 101 ರನ್ ಗಳಿಸಿದ್ದಾರೆ ಮತ್ತು 5 ವಿಕೆಟ್ ಪಡೆದಿದ್ದಾರೆ.

    ಭಾರತದ 15 ಸದಸ್ಯರ ವಿಶ್ವಕಪ್ ತಂಡವನ್ನು ಘೋಷಿಸುವ ಸಮಯದಲ್ಲಿ, ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ಎಂ.ಎಸ್.ಕೆ ಪ್ರಸಾದ್, “ಮೂರು ಆಯಾಮದ ಕೌಶಲ್ಯಗಳನ್ನು” ಉಲ್ಲೇಖಿಸಿ ತಂಡದಲ್ಲಿ ಶಂಕರ್ ಸ್ಥಾನವನ್ನು ಸಮರ್ಥಿಸಿಕೊಂಡಿದ್ದರು.

    ಶಂಕರ್ ಆಯ್ಕೆಯಿಂದಾಗಿ ಕಡೆಗಣಿಸಲ್ಪಟ್ಟಿದ್ದ ಅಂಬಾಟಿ ರಾಯುಡು, ವಿಶ್ವಕಪ್ ವೀಕ್ಷಿಸಲು 3ಡಿ ಗ್ಲಾಸ್ ಖರೀದಿಸುತ್ತಿರುವೆ ಎಂದು ಟ್ವೀಟ್ ಮಾಡಿದ್ದರು. 2019ರ ವಿಶ್ವಕಪ್ ಟೂರ್ನಿಯಲ್ಲಿ ವಿಜಯ್ ಶಂಕರ್ ವಿಂಡೀಸ್ ವಿರುದ್ಧ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದಾರೆ. ನಂತರ ಹೆಬ್ಬೆರೆಳಿನ ಗಾಯದಿಂದಾಗಿ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದರು.

  • ಐಎಂಎ ಲಂಚ ತಿಂದ ಡಿಸಿ ವಿಜಯ್ ಶಂಕರ್ ಅರೆಸ್ಟ್

    ಐಎಂಎ ಲಂಚ ತಿಂದ ಡಿಸಿ ವಿಜಯ್ ಶಂಕರ್ ಅರೆಸ್ಟ್

    ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಎಸ್‍ಐಟಿ ಬಂಧಿಸಿದೆ.

    ಐಎಂಎ ಹಗರಣದ ಸಂಬಂಧ ಈಗಾಗಲೇ ಬಂಧನದಲ್ಲಿರುವ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಎಸ್‍ಐಟಿ ತಂಡವು ವಿಜಯ್ ಶಂಕರ್ ಅವರನ್ನು ಬಂಧಿಸಿದೆ.

    ಸೋಮವಾರ ಬೆಳಗ್ಗೆ ವಿಜಯ್ ಶಂಕರ್ ಅವರನ್ನು ವಿಚಾರಣೆಗೆ ಕರೆದುಕೊಂಡು ಹೋಗಲಾಗಿತ್ತು. ಅಷ್ಟೇ ಅಲ್ಲದೆ ಬಿಲ್ಡರ್ ಕೃಷ್ಣಮೂರ್ತಿ ಅವರನ್ನು ಕೂಡ ಎಸ್‍ಐಟಿ ತಂಡವು ವಿಚಾರಣೆ ನಡೆಸಿದೆ.

    ಈ ಪ್ರಕರಣದ ಸಂಬಂಧ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ಎಲ್.ಸಿ.ನಾಗರಾಜ್ ಅವರನ್ನು ಶನಿವಾರ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿನ ಪ್ರಧಾನ ನ್ಯಾಯಾಧೀಶ ಶಿವಶಂಕರ ಅಮರಣ್ಣವರ ಅವರ ಮುಂದೆ ಹಾಜರಿಪಡಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 12ರವರೆಗೆ ನಾಗರಾಜ್‍ರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

  • ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಕನ್ನಡಿಗ – ಮಯಾಂಕ್ ಕುರಿತ ಮಾಹಿತಿ ಇಂತಿದೆ

    ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಕನ್ನಡಿಗ – ಮಯಾಂಕ್ ಕುರಿತ ಮಾಹಿತಿ ಇಂತಿದೆ

    ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಭಾರೀ ಹೊಡೆತ ನೀಡಿದ್ದು, ಧವನ್ ಬಳಿಕ ವಿಜಯ್ ಶಂಕರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದಾರೆ. ಸದ್ಯ ಈ ಸ್ಥಾನದಲ್ಲಿ ಆಯ್ಕೆ ಸಮಿತಿ ಕನ್ನಡಿಗ ಮಯಾಂಕ್ ಅರ್ಗವಾಲ್ ಅವರಿಗೆ ಸ್ಥಾನ ನೀಡಿದ್ದು, ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದಾರೆ.

    28 ವರ್ಷದ ಮಯಾಂಕ್ ಅರ್ಗವಾಲ್ ಇದುವರೆಗೂ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. 6 ವರ್ಷಗಳ ಹಿಂದೆ ಕರ್ನಾಟಕ ಪರ ಫಸ್ಟ್ ಕ್ಲಾಸ್ ಕ್ರಿಕೆಟ್‍ಗೆ ಜಾರ್ಖಂಡ್ ವಿರುದ್ಧ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಮಯಾಂಕ್ 144 ಎಸೆತಗಳಲ್ಲಿ 90 ರನ್ ಸಿಡಿಸಿದ್ದರು. ಇದುವರೆಗೂ ಫಸ್ಟ್ ಕ್ಲಾಸ್ ಕ್ರಿಕೆಟ್‍ನಲ್ಲಿ 50 ಪಂದ್ಯಗಳನ್ನಾಡಿರುವ ಇವರು 3,964 ರನ್ ಗಳಿಸಿದ್ದು, ಮಹಾರಾಷ್ಟ್ರ ವಿರುದ್ಧ ಅಜೇಯ 304 ರನ್ ಸಿಡಿಸಿದ್ದಾರೆ.

    ಐಪಿಎಲ್ ಟೂರ್ನಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಮಯಾಂಕ್, ಡೆಲ್ಲಿ, ಪುಣೆ, ಬೆಂಗಳೂರು, ಪಂಜಾಬ್ ತಂಡಗಳ ಪರ ಆಗಿದ್ದಾರೆ. 2019ರ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪರ ಆಡಿದ್ದ ಮಯಾಂಕ್ 13 ಪಂದ್ಯಗಳಿಂದ 332 ರನ್ ಸಿಡಿಸಿದ್ದರು.

    ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಯಲ್ಲಿ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿರುವ ಮಯಾಂಕ್, ಮೆಲ್ಬೋರ್ನ್ ನಲ್ಲಿ ನಡೆದ ಪಂದ್ಯದಲ್ಲಿ 42 ಎಸೆತಗಳಲ್ಲಿ 76 ರನ್ ಸಿಡಿಸಿ ಮಿಂಚಿದ್ದರು. ಆ ಬಳಿಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ 77 ರನ್ ಗಳಿಸಿದ್ದರು. 2 ಟೆಸ್ಟ್ ಪಂದ್ಯಗಳ 3 ಇನ್ನಿಂಗ್ಸ್ ಗಳಲ್ಲಿ  ಆಡಿರುವ ಮಯಾಂಕ್ 195 ರನ್ ಗಳಿಸಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ರಿಷಬ್ ಪಂತ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದು, ಮಯಾಂಕ್ ಈ ಬಳಗದಲ್ಲಿ ಅವಕಾಶ ಪಡೆಯುತ್ತಾರ ಎಂಬ ಕುತೂಹಲ ಮೂಡಿದೆ. ಮಯಾಂಕ್ ಅವರಿಗೆ ಒಂದೊಮ್ಮೆ ಅವಕಾಶ ಲಭಿಸಿದರೆ ಆರಂಭಿಕರಾಗಿ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದ್ದು, 4ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಆಡುವುದು ಸೂಕ್ತ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

  • ವಿಶ್ವಕಪ್‍ನಿಂದ ವಿಜಯ್ ಶಂಕರ್ ಔಟ್ – ಕನ್ನಡಿಗ ಮಯಾಂಕ್ ಆಯ್ಕೆ ಸಾಧ್ಯತೆ

    ವಿಶ್ವಕಪ್‍ನಿಂದ ವಿಜಯ್ ಶಂಕರ್ ಔಟ್ – ಕನ್ನಡಿಗ ಮಯಾಂಕ್ ಆಯ್ಕೆ ಸಾಧ್ಯತೆ

    ನವದೆಹಲಿ: ವಿಶ್ವಕಪ್‍ನಲ್ಲಿ ಭಾರತಕ್ಕೆ ಸಾಲು ಸಾಲು ಗಾಯದ ಸಮಸ್ಯೆ ಕಾಡುತ್ತಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯದ ಸಮಸ್ಯೆಯಿಂದ ಹೊರಹೋಗಿದ್ದರು. ಈಗ ಭಾರತಕ್ಕೆ ಮತ್ತೊಂದು ಹೊಡೆತ ಬಿದ್ದಿದ್ದು ಆಲ್‍ರೌಂಡರ್ ವಿಜಯ್ ಶಂಕರ್ ಕೂಡ ಹೊರಹೋಗಿದ್ದಾರೆ. ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್  ಅಗರ್ವಾಲ್‍ಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ನೆಟ್‍ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿಜಯ್ ಶಂಕರ್ ಅವರ ಕಾಲಿನ ಬೆರಳಿಗೆ ಚೆಂಡು ಬಡಿದಿತ್ತು. ನಂತರ ಅವರು ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು ಆದರೆ ಮತ್ತೆ ಆ ಗಾಯದ ಸಮಸ್ಯೆ ಹೆಚ್ಚು ಉಲ್ಬಣವಾಗಿರುವ ಕಾರಣ ಅವರು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ.

    ಈಗ ವಿಚಾರವಾಗಿ ಮಾತನಾಡಿರುವ ಬಿಸಿಸಿಐನ ಅಧಿಕಾರಿಯೊಬ್ಬರು, ಜಸ್ಪ್ರೀತ್ ಬುಮ್ರಾ ಬೌಲಿಂಗ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿಜಯ್ ಶಂಕರ್ ಅವರ ಕಾಲಿನ ಬೆರಳಿಗೆ ಚೆಂಡು ಬಡಿದಿತ್ತು. ಇದರಿಂದ ಈಗ ಅವರ ಗಾಯದ ಪರಿಸ್ಥಿತಿ ಉತ್ತಮವಾಗಿಲ್ಲ ಮತ್ತು ಅವರು ಮುಂದಿನ ಪಂದ್ಯಗಳನ್ನು ಆಡಲು ಆಗುವುದಿಲ್ಲ. ಅವರನ್ನು ಭಾರತಕ್ಕೆ ವಾಪಸ್ ಕಳಿಸುತ್ತೇವೆ ಎಂದು ಹೇಳಿದ್ದಾರೆ.

    ವಿಶ್ವಕಪ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ವಿಜಯ್ ಶಂಕರ್ ಅವರು ಪಾಕಿಸ್ತಾನ ವಿರುದ್ಧದ ತನ್ನ ಮೊದಲ ಪಂದ್ಯದ ಮೊದಲನೇ ಎಸೆತದಲ್ಲಿ ವಿಕೆಟ್ ಕಿತ್ತು ಮಿಂಚಿದ್ದರು. ವಿಶ್ವಕಪ್‍ನಲ್ಲಿ ಭಾರತದ ಪರ ಎರಡು ಪಂದ್ಯಗಳನ್ನು ಆಡಿದ ವಿಜಯ್ ಶಂಕರ್ 58 ರನ್ ಗಳಿಸಿ 2 ವಿಕೆಟ್ ಪಡೆದಿದ್ದರು.

    ಈಗ ವಿಜಯ್ ಶಂಕರ್ ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಬದಲಿ ಆಟಗಾರನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಂದು ವೇಳೆ ಮುಂದಿನ ಪಂದ್ಯಗಳಲ್ಲಿ ರಿಷಬ್ ಪಂತ್ ವಿಫಲವಾದರೆ ಕೆ.ಎಲ್ ರಾಹುಲ್ ಅವರನ್ನು 4ನೇ ಕ್ರಮಾಂಕದಲ್ಲಿ ಆಡಿಸಿ ಮಯಾಂಕ್  ಅಗರ್ವಾಲ್ ಅವರನ್ನು ಆರಂಭಿಕನಾಗಿ ಆಡಿಸಲು ಟೀಂ ಇಂಡಿಯಾ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಭಾನುವಾರ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಟಾಸ್ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಆಲ್‍ರೌಂಡರ್ ವಿಜಯ್ ಶಂಕರ್ ಅವರು ಕಾಲಿನ ಬೆರಳಿಗೆ ಪೆಟ್ಟಗಿದೆ ಅವರ ಬದಲು ರಿಷಬ್ ಪಂತ್ ಅವರನ್ನು ಆಡಿಸಲಾಗುತ್ತಿದೆ ಎಂದು ಹೇಳಿದ್ದರು. ಈಗ ವಿಶ್ವಕಪ್‍ನಿಂದಲೇ ಹೊರಹೋಗಿರುವ ವಿಜಯ್ ಶಂಕರ್ ಅವರ ಬದಲು ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದ ಕರ್ನಾಟಕದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅವರು ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

  • ವಿಶ್ವಕಪ್ ಟೂರ್ನಿಗೆ ರಿಷಬ್ ಪಂತ್ ಪಾದಾರ್ಪಣೆ – ಹೀಗಿದೆ ಅಭಿಮಾನಿಗಳ ರಿಯಾಕ್ಷನ್

    ವಿಶ್ವಕಪ್ ಟೂರ್ನಿಗೆ ರಿಷಬ್ ಪಂತ್ ಪಾದಾರ್ಪಣೆ – ಹೀಗಿದೆ ಅಭಿಮಾನಿಗಳ ರಿಯಾಕ್ಷನ್

    ಲಂಡನ್: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಮೂಲಕ ವಿಶ್ವಕಪ್ ಟೂರ್ನಿಗೆ ಪಾದಾರ್ಪಣೆ ಮಾಡಿದ್ದಾರೆ.

    ಟೂರ್ನಿಯ ಕಳೆದ 2 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ವಿಜಯ್ ಶಂಕರ್ ಅವರಿಗೆ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕೊಕ್ ನೀಡಲಾಗಿದ್ದು, 21 ವರ್ಷದ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಲಾಗಿದೆ. ಶಂಕರ್ ಕಳೆದ ಎರಡು ಪಂದ್ಯಗಳಲ್ಲಿ 58 ರನ್ ಗಳಿಸಿ, 2 ವಿಕೆಟ್ ಪಡೆದಿದ್ದಾರೆ. ಟೀಂ ಇಂಡಿಯಾ ಪರ ಕೇವಲ 5 ಏಕದಿನ ಪಂದ್ಯಗಳನ್ನು ಆಡಿರುವ ರಿಷಬ್ 93 ರನ್ ಗಳಿಸಿದ್ದಾರೆ.

    ಶಿಖರ್ ಧವನ್ ಗಾಯಗೊಂಡ ಬಳಿಕ ತಂಡಕ್ಕೆ ಸೇರ್ಪಡೆಯಾಗಿದ್ದ ರಿಷಬ್ ಪಂತ್ ಅವರಿಗೆ ವಿಶ್ವಕಪ್ ನಲ್ಲಿ ದೊರೆತ ಮೊದಲ ಅವಕಾಶ ಇದಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಕಳೆದ ಬಾರಿ ಇಂಗ್ಲೆಂಡ್ ಟೂರ್ನಿಯಲ್ಲಿ ಭಾಗವಹಿಸಿದ್ದ ರಿಷಬ್, ಉತ್ತಮ ಪ್ರದರ್ಶನ ನೀಡಿ ಆಯ್ಕೆ ಸಮಿತಿ ಗಮನ ಸೆಳೆದಿದ್ದರು. ಸದ್ಯ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಿರುವುದರಿಂದ ದಿನೇಶ್ ಕಾರ್ತಿಕ್ ಅವಕಾಶ ವಂಚಿತರಾಗಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ರಿಷಬ್ ಪಂತ್ ಅವಕಾಶ ನೀಡಲು ಹಲವು ಹಿರಿಯ ಆಟಗಾರರು ಸಲಹೆ ನೀಡಿದ್ದರು. ಆ ಮೂಲಕ ರಿಷಬ್ ಪಂತ್ ಪರ ಬ್ಯಾಟ್ ಬೀಸಿದ್ದರು. ಇಂಗ್ಲೆಂಡ್ ವಾತಾವರಣದಲ್ಲಿ ಆಡಲು ರಿಷಬ್ ಪಂತ್ ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿತ್ತು. ಇತ್ತ ಆಯ್ಕೆ ಸಮಿತಿ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಿರುವುದಕ್ಕೆ ಹಲವು ಮಂದಿ ವಿವಿಧ ರೀತಿಯ ಮಿಮ್ಸ್‍ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಕೆಲವರು ದಿನೇಶ್ ಕಾರ್ತಿಕ್ ಪರ ಬ್ಯಾಟ್ ಬೀಸಿದ್ದರೆ, ಮತ್ತೆ ಕೆಲವರು ಆಯ್ಕೆ ಸಮಿತಿಯ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

    https://twitter.com/PantArmy/status/1145259190971035649

    https://twitter.com/Uthaleredeva92/status/1145261606026137600

  • ಪಂತ್‍ಗಿಂತ ಮುಂದಿನ ಪಂದ್ಯಗಳಿಗೆ ವಿಜಯ್ ಶಂಕರ್ ಸೂಕ್ತ: ಹರ್ಭಜನ್

    ಪಂತ್‍ಗಿಂತ ಮುಂದಿನ ಪಂದ್ಯಗಳಿಗೆ ವಿಜಯ್ ಶಂಕರ್ ಸೂಕ್ತ: ಹರ್ಭಜನ್

    – ಭುವಿ ಬದಲು ಶಮಿ ಒಳ್ಳೆಯ ಆಯ್ಕೆ

    ನವದೆಹಲಿ: ಶನಿವಾರ ನಡೆಯಲಿರುವ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್‍ಗಿಂತ ವಿಜಯ್ ಶಂಕರ್ ಅವರನ್ನು ಆಡಿಸುವುದು ಸೂಕ್ತ ಎಂದು ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ಉಳಿದಿದ್ದು, ಆ ಜಾಗಕ್ಕೆ ಬದಲಿ ಆಟಗಾರ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ವೇಳೆ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ವಿಜಯ್ ಅವರನ್ನು ಆಡಿಸಬೇಕಾ ಇಲ್ಲವೇ ಬದಲಿ ಆಟಗಾರ ರಿಷಭ್ ಪಂತ್ ಅವರನ್ನು ಆಡಸಬೇಕಾ ಎಂಬ ಪ್ರಶ್ನೆ ಎದ್ದಿದೆ.

    ಇದರ ನಡುವೇ ಭಾರತ ತಂಡಕ್ಕೆ ಇನ್ನೊಂದು ಸಮಸ್ಯೆ ಎದುರಾಗಿದ್ದು ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರು ಸ್ನಾಯು ಸೆಳೆತಕ್ಕೆ ತುತ್ತಾಗಿ ಪಂದ್ಯದಿಂದ ಹೊರ ಉಳಿದಿದ್ದಾರೆ. ಹೀಗಾಗಿ ಅವರ ಜಾಗದಲ್ಲಿ ಯಾರನ್ನು ಆಡಿಸಬೇಕು ಎಂಬುದು ಕೂಡ ಭಾರತಕ್ಕೆ ಬಂದು ಸವಾಲಾಗಿದೆ. ಭುವಿ ಬದಲು ಅನುಭವಿ ಮೊಹಮ್ಮದ್ ಶಮಿ ಅವರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಈ ವಿಚಾರವಾಗಿ ಮಾತನಾಡಿರುವ ಹರ್ಭಜನ್ ಸಿಂಗ್ ಅವರು, ರಿಷಭ್ ಪಂತ್‍ಗಿಂತ ಮುಂದಿನ ಪಂದ್ಯಗಳಿಗೆ ವಿಜಯ್ ಶಂಕರ್ ಆಡಿಸುವುದು ಸೂಕ್ತ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅವರು ಉತ್ತಮ ಪ್ರದರ್ಶನ ತೋರಿದ್ದಾರೆ. ಅದ್ದರಿಂದ ಪಂತ್‍ಗಿಂತ ಮುಂದಿನ ಪಂದ್ಯದಲ್ಲಿ ವಿಜಯ್ ಶಂಕರ್ ಅವರನ್ನು ಆಡಿಸುವುದು ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಭುವನೇಶ್ವರ್ ಕುಮಾರ್ ಅವರು ಗಾಯಗೊಂಡ ಕಾರಣ ಅವರ ಬದಲು ಶಮಿ ಅವರನ್ನು ಆಡಿಸಬಹುದು, ಆದನ್ನು ಬಿಟ್ಟರೆ ಈಗ ಇರುವ ಕಾಂಬಿನೇಷನ್‍ನಲ್ಲೇ ಇಂಡಿಯಾ ಆಡುವುದು ಒಳಿತು. ಭಾರತ ತಂಡದಲ್ಲಿ ಆಗಲೇ ಒಳ್ಳೆಯ ಸ್ಫೋಟಕ ಬ್ಯಾಟ್ಸ್‌ಮ್ಯಾನ್‍ಗಳು  ಇದ್ದಾರೆ. ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸಿಕ್ಸರ್ ಹೊಡೆಯಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಈಗ ಇರುವ ಆಟಗಾರರೇ ಭಾರತವನ್ನು 400 ರನ್‍ಗಳವರೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಿದ್ದಾರೆ.

    ಬುಧವಾರ ಅಭ್ಯಾಸ ಮಾಡುತ್ತಿರುವ ವೇಳೆ ಜಸ್ಪ್ರಿತ್ ಬುಮ್ರಾ ಅವರ ಎಸೆದ ಯಾರ್ಕರ್ ವಿಜಯ್ ಅವರ ಕಾಲಿನ ಬೆರಳನ್ನು ಗಾಯಗೊಳಿಸಿತ್ತು. ಅವರ ಗಾಯಗೊಂಡಿದ್ದಾರೆ ಮುಂದಿನ ಪಂದ್ಯಗಳಿಗೆ ಲಭ್ಯವಿಲ್ಲ ಎಂದು ಸುದ್ದಿಯಾಗಿತ್ತು. ಆದರೆ ಈಗ ಚೇತರಿಸಿಕೊಂಡಿರುವ ವಿಜಯ್ ಶಂಕರ್ ಗುರುವಾರ ಮತ್ತೆ ನೆಟ್ಸ್ ನಲ್ಲಿ ಕಾಣಿಸಿಕೊಂಡಿದ್ದು ಅವರು ಮುಂದಿನ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ ಎನ್ನಲಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಟೀಂ ಇಂಡಿಯಾಗೆ ಬೆಂಬಿಡದ ಗಾಯದ ಸಮಸ್ಯೆ – ಧವನ್ ಬಳಿಕ ವಿಜಯ್ ಶಂಕರ್‌ಗೆ  ಗಾಯ

    ಟೀಂ ಇಂಡಿಯಾಗೆ ಬೆಂಬಿಡದ ಗಾಯದ ಸಮಸ್ಯೆ – ಧವನ್ ಬಳಿಕ ವಿಜಯ್ ಶಂಕರ್‌ಗೆ ಗಾಯ

    ಲಂಡನ್: ಟೀಂ ಇಂಡಿಯಾ ಆಲೌಂಡರ್ ಆಟಗಾರ ವಿಜಯ್ ಶಂಕರ್ ಅಫ್ಘಾನಿಸ್ತಾನದ ಎದುರಿನ ಪಂದ್ಯಕ್ಕಾಗಿ ತರಬೇತಿ ಪಡೆಯುತ್ತಿದ್ದ ವೇಳೆ ಗಾಯಗೊಂಡಿದ್ದಾರೆ.

    ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ವಿಜಯ್ ಶಂಕರ್ ಗಾಯಗೊಂಡಿರುವುದು ಟೀಂ ಇಂಡಿಯಾ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಗಾಯದ ಸಮಸ್ಯೆಯಿಂದ ವಿಜಯ್ ಶಂಕರ್ ತರಬೇತಿಯನ್ನು ಅರ್ಧಕ್ಕೆ ನಿಲ್ಲಿಸಿ ಮೈದಾನದಿಂದ ಹೊರ ನಡೆದಿದ್ದಾರೆ.

    ತರಬೇತಿಯ ವೇಳೆ ವೇಗಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿಜಯ್ ಶಂಕರ್ ಅವರ ಕಾಲಿನ ಬೆರಳಿಗೆ ಚೆಂಡು ಬಡಿದಿದೆ. ಪರಿಣಾಮ ನೋವಿನಿಂದ ಶಂಕರ್ ತೆರಳಿದ್ದಾರೆ. ಸದ್ಯ ವಿಜಯ್ ಶಂಕರ್ ಅವರ ಗಾಯದ ಸಮಸ್ಯೆ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆದರೆ ಮೂಲಗಳ ಪ್ರಕಾರ ವಿಜಯ್ ಶಂಕರ್ ಅವರ ಗಾಯದ ಬಗ್ಗೆ ಹೆಚ್ಚಿನ ಆತಂಕ ಪಡುವಂತಿಲ್ಲ ಎಂಬ ಮಾಹಿತಿ ಲಭಿಸಿದೆ.

    ಧವನ್ ಅವರು ತಂಡದಿಂದ ಹೊರಗುಳಿದ ಪರಿಣಾಮ ರಾಹುಲ್ ಬ್ಯಾಟಿಂಗ್ ಬಡ್ತಿ ನೀಡಿ ಆರಂಭಿಕರಾಗಿ ಕಣಕ್ಕೆ ಇಳಿಸಲಾಗಿತ್ತು. ರಾಹುಲ್ ಅವರ ನಂ.4 ಸ್ಥಾನದಲ್ಲಿ ವಿಜಯ್ ಶಂಕರ್ ಅವರಿಗೆ ಸ್ಥಾನ ನೀಡಲಾಗಿತ್ತು. ಇತ್ತ ಟೀಂ ಇಂಡಿಯಾ ಪ್ರಮುಖ ವೇಗಿ ಭುವನೇಶ್ವರ್ ಅವರು ಕೂಡ ಗಾಯದ ಸಮಸ್ಯೆಗೆ ಸಿಲುಕಿದ್ದು, 8 ದಿನಗಳ ಕಾಲ ವಿಶ್ರಾಂತಿ ಪಡೆದಿದ್ದಾರೆ. ಅಫ್ಘಾನಿಸ್ತಾನ ಪಂದ್ಯ ಸೇರಿದಂತೆ ಜೂನ್ 30 ರಂದು ನಡೆಲಿರುವ ಇಂಗ್ಲೆಂಡ್ ವಿರುದ್ಧ ಪಂದ್ಯಕ್ಕೂ ಭುವನ್ ಅಲಭ್ಯರಾಗಿದ್ದಾರೆ.

    ಧವನ್ ಪ್ರಕರಣದಂತೆಯೇ ಭುವನೇಶ್ವರ್ ಮೇಲೆ ವಿಶ್ವಾಸ ಹೊಂದಿರುವ ಬಿಸಿಸಿಐ ಸಮಿತಿ ಭುವಿ ಚೇತರಿಸಿಕೊಳ್ಳಲಿದ್ದಾರೆ ಎಂದಿದೆ. ಇತ್ತ ಭುವನೇಶ್ವರ್ ಅವರು ಕೂಡ ಕಠಿಣ ಅಭ್ಯಾಸದಿಂದ ದೂರ ಉಳಿದಿದ್ದಾರೆ. ಒಂದೊಮ್ಮೆ ಭುವನೇಶ್ವರ್ ಕೂಡ ಸರಣಿಯಿಂದ ಹೊರಗುಳಿದರೆ ಯುವ ವೇಗಿ ಖಲೀಲ್ ಅಹ್ಮದ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆದರೆ ಅನುಭವಿ ಆಟಗಾರರ ಪರ ಬಿಸಿಸಿಐ ಒಲವು ತೋರಿದರೆ ಇಶಾಂತ್ ಶರ್ಮಾ ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

    ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

    ಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದರೂ ಸಹ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ. ಜನತಾದಳವೂ ಗೆದ್ದಿಲ್ಲ. ಒಟ್ಟು 16 ಚುನಾವಣೆಗಳು ನಡೆದಿದ್ದು, ಇಲ್ಲಿ ಕಾಂಗ್ರೆಸ್ 13 ಸಲ, ಬಿಜೆಪಿ 3 ಸಲ ಗೆದ್ದಿದೆ. ಗುರುಪಾದಸ್ವಾಮಿ, ಹೆಚ್.ಡಿ.ತುಳಸಿದಾಸಪ್ಪ, ಎಂ.ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಹೆಚ್.ವಿಶ್ವನಾಥ್ ಘಟಾನುಘಟಿ ನಾಯಕರು ಸಂಸದರಾಗಿದ್ದ ಕ್ಷೇತ್ರ ಇದು. ನಾಲ್ಕು ಬಾರಿ ಈ ಕೇತ್ರದಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಗೆದ್ದಿದ್ದಾರೆ. ದೇವರಾಜ ಅರಸು ಪುತ್ರಿ ಚಂದ್ರಪ್ರಭಾ ಅರಸ್ ಅವರು ಈ ಕ್ಷೇತ್ರದಿಂದ 1991ರಲ್ಲಿ ಗೆದ್ದಿದ್ರು.

    ಈಗ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೀಗ ಆಗ್ನಿ ಪರೀಕ್ಷೆ ಎದುರಾಗಿದ್ದು, ಕಾಳಗ ಜೋರಾಗಿಯೇ ಇದೆ. ಇಡೀ ಕ್ಷೇತ್ರದಲ್ಲಿ ಜಾತಿಯೇ ದೊಡ್ಡ ಟ್ರಂಪ್ ಕಾರ್ಡ್. ಅದರಲ್ಲೂ ಈ ಬಾರಿ ಒಕ್ಕಲಿಗ ಸಮುದಾಯದ ಮತಗಳ ಕ್ಷೇತ್ರದಲ್ಲಿ ನಿರ್ಣಾಯಕ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾದರೂ ಕೂಡ ಜೆಡಿಎಸ್ ನ ಸಂಪ್ರದಾಯಿಕ ಮತಗಳಾದ ಒಕ್ಕಲಿಗರ ಮತಗಳು ಮೈತ್ರಿ ಅಭ್ಯರ್ಥಿಗೆ ಬರುವುದು ಅಷ್ಟು ಸುಲಭವಿಲ್ಲ.

    ಎರಡು ಬಾರಿ ಬಿಜೆಪಿಯಿಂದ ಗೆದ್ದಿದ್ದ ವಿಜಯ್ ಶಂಕರ್‍ಗೆ ಕಳೆದ ಬಾರಿ ಮೈಸೂರಿನಿಂದ ಟಿಕೆಟ್ ಸಿಗದೇ ಹಾಸನದಲ್ಲಿ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಈಗ ಅದೇ ವಿಜಯಶಂಕರ್ ಸಿದ್ದರಾಮಯ್ಯ ಬಲದಿಂದ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದು, ಎದುರಾಳಿಯಾಗಿ ಬಿಜೆಪಿಯ ಪ್ರತಾಪ್ ಸಿಂಹ ಇದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗುದ್ದಾಟ ಈಗ ಮೈತ್ರಿ ಪಕ್ಷಗಳಿಗೆ ದೊಡ್ಡ ತಲೆನೋವಾಗಿದ್ದು, ಅಖಾಡ ಸಾಕಷ್ಟು ಕುತೂಹಲ ಮೂಡಿಸಿದ್ದು ಗೆಲುವಿನ ಮಾಲೆ ಯಾರಿಗೆ ಅನ್ನೋದನ್ನ ಮತದಾರ ಪ್ರಭು ನಿರ್ಧರಿಸಲಿದ್ದಾನೆ.

    ಒಟ್ಟು ಮತದಾರರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ 18,79,659 ಮತದಾರರಿದ್ದಾರೆ. ಇದರಲ್ಲಿ 9,40,687 ಮಹಿಳಾ ಮತದಾರರು ಮತ್ತು 9,38,826 ಪುರುಷ ಮತದಾರರಿದ್ದಾರೆ. ಜಾತಿವಾರು ನೋಡೋದಾದರೆ ಒಕ್ಕಲಿಗರು 4 ಲಕ್ಷ, ಮುಸ್ಲಿಮರು 2.10 ಲಕ್ಷ, ಲಿಂಗಾಯತರು 2 ಲಕ್ಷ, ಕುರುಬರು 1.80 ಲಕ್ಷ, ಎಸ್ಸಿ (ಬಲಗೈ) 1.75 ಲಕ್ಷ, ಎಸ್ಸಿ (ಎಡಗೈ) 1.25 ಲಕ್ಷ, ಎಸ್‍ಟಿ 1.25 ಲಕ್ಷ, ಕೊಡವರು 1 ಲಕ್ಷ, ಅರೆ ಭಾಷೆ ಒಕ್ಕಲಿಗರು 1 ಲಕ್ಷ, ಬ್ರಾಹ್ಮಣರು 1.10 ಲಕ್ಷ ಮತ್ತು ಇತರೆ/ಹಿಂದುಳಿದ ವರ್ಗ 2.30 ಲಕ್ಷ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.

    2014ರ ಫಲಿತಾಂಶ:
    2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ 31,608 (2.72%) ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆಲುವು ಕಂಡಿದ್ದರು. ಪ್ರತಾಪ್‍ಸಿಂಹ (ಬಿಜೆಪಿ) 5,03,908 (43.45%), ಹೆಚ್.ವಿಶ್ವನಾಥ್ (ಕಾಂಗ್ರೆಸ್) 4,72,300 (40.73%), ಚಂದ್ರಶೇಖರಯ್ಯ(ಜೆಡಿಎಸ್) 1,38,587(11.95%) ಮತಗಳನ್ನು ಪಡೆದುಕೊಂಡಿದ್ದರು.

    ವಿಧಾನಸಭಾ ಎಲೆಕ್ಷನ್ ಫಲಿತಾಂಶ: 2018ರ ವಿಧಾನಸಭಾ ಚುನಾವಣೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಬಿಜೆಪಿ, 3ರಲ್ಲಿ ಜೆಡಿಎಸ್ ಮತ್ತು ಒಂದರಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಮಡಿಕೇರಿ – ಅಪ್ಪಚ್ಚು ರಂಜನ್ (ಬಿಜೆಪಿ), ವಿರಾಜಪೇಟೆ – ಕೆ.ಜಿ.ಬೋಪಯ್ಯ (ಬಿಜೆಪಿ), ಕೃಷ್ಣರಾಜ – ಎಸ್.ಎ.ರಾಮದಾಸ್ (ಬಿಜೆಪಿ), ಚಾಮರಾಜ – ಎಲ್.ನಾಗೇಂದ್ರ (ಬಿಜೆಪಿ), ಚಾಮುಂಡೇಶ್ವರಿ – ಜಿ.ಟಿ.ದೇವೇಗೌಡ (ಜೆಡಿಎಸ್), ಹುಣಸೂರು – ಹೆಚ್.ವಿಶ್ವನಾಥ್ (ಜೆಡಿಎಸ್), ಪಿರಿಯಾಪಟ್ಟಣ – ಕೆ.ಮಹದೇವ್ (ಜೆಡಿಎಸ್) ಮತ್ತು ನರಸಿಂಹರಾಜ – ತನ್ವೀರ್ ಸೇಠ್ (ಕಾಂಗ್ರೆಸ್)

    ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
    ಪ್ರತಾಪ್ ಸಿಂಹ- ಬಿಜೆಪಿ
    ವಿಜಯಶಂಕರ್ – ಕಾಂಗ್ರೆಸ್
    ಡಾ.ಬಿ.ಚಂದ್ರ- ಬಿಎಸ್‍ಪಿ

    ಪ್ರತಾಪ್ ಸಿಂಹ
    ಪ್ಲಸ್ ಪಾಯಿಂಟ್: ಮೈತ್ರಿ ಇದ್ದರೂ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಒಳ ಜಗಳ ಲಾಭವಾಗಬಹುದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ವಿರುದ್ಧ ತುಟಿ ಬಿಚ್ಚದೆ ಒಕ್ಕಲಿಗರಿಗೆ ಹತ್ತಿರವಾಗುತ್ತಿರೋದು. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಹೊಂದಿದ್ದು ಗೆಲುವಿನ ಸಮೀಪ ತಲುಪಿಸುವಲ್ಲಿ ಸಹಾಯ ಮಾಡಬಲ್ಲದು. ಸಂಸದರ ಅನುದಾನ ಬಳಕೆಯಲ್ಲಿ ಮೊದಲಿಗ ಅನ್ನೋದು ಮತ್ತೊಂದು ಪ್ಲಸ್ ಪಾಯಿಂಟ್. ಮೈಸೂರಿನಲ್ಲಿ ಸ್ವತಃ ಮೋದಿ ಪ್ರಚಾರ ಹೆಚ್ಚಿನ ಮತಗಳನ್ನು ಸೆಳೆಯುವ ಸಾಧ್ಯತೆಗಳಿವೆ.

    ಮೈನಸ್ ಪಾಯಿಂಟ್: ಸಂಸದರು ಮತ್ತು ಕೆಲ ಸ್ಥಳೀಯ ಜನಪ್ರತಿನಿಧಿಗಳ ಸಂಬಂಧದಲ್ಲಿ ಬಿರುಕು ಹೊಡೆತ ನೀಡಬಹುದು. ಒಕ್ಕಲಿಗ ಸಮುದಾಯದ ಮತಗಳು ಈ ಬಾರಿ ಹಂಚಿ ಹೋಗಿದ್ದು, ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್, ಕಾಂಗ್ರೆಸ್ ಬಲಿಷ್ಠವಾಗಿರೋದು ಮತಗಳು ಮೈತ್ರಿ ಅಭ್ಯರ್ಥಿಯ ಪಾಲಾಗಬಹುದು. ಸಹಜವಾಗಿಯೇ ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಕಾಣಿಸಿಕೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

    ವಿಜಯಶಂಕರ್
    ಪ್ಲಸ್ ಪಾಯಿಂಟ್: ಕೈ ಅಭ್ಯರ್ಥಿ ವಿಜಯಶಂಕರ್ ಬೆನ್ನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಬಲಿಷ್ಠವಾಗಿರೋದು ಮತಗಳ ಕ್ರೋಢಿಕರಣವಾಗುವ ಸಾಧ್ಯತೆಗಳಿವೆ. ಕಳೆದ ಎರಡು ಚುನಾವಣೆಗಳಲ್ಲಿ ಸೋತ ಅನುಕಂಪದ ಅಲೆ ವರ್ಕ್‍ಔಟ್ ಆಗಬಹುದು. ದೇವೇಗೌಡ, ಕುಮಾರಸ್ವಾಮಿ ಅವರು ಬೆಂಬಲ ಕೊಡಿ ಅಂತಾ ಸಭೆ ನಡೆಸಿರೋದು. ಕ್ಷೇತ್ರದ ಸೋಲು ಗೆಲುವಿನ ಜಾಡುಗಳು ಬಗ್ಗೆ ಸೂಕ್ಷ್ಮತೆ ಗೊತ್ತಿರುವುದು.

    ಮೈನಸ್ ಪಾಯಿಂಟ್: ಚಾಮುಂಡೇಶ್ವರಿ ಸೋಲಿನ ಕಹಿಯ ಒಳ ಗುದ್ದಾಟ ನಿಲ್ಲದಿರುವುದು. ಸ್ವತಃ ಪ್ರಧಾನಿ ಮೋದಿಯೇ ಮೈಸೂರಿಗೆ ಪ್ರಚಾರಕ್ಕೆ ಬಂದು ಅಬ್ಬರಿಸಿರೋದು. ನಗರ ಪ್ರದೇಶ, ಕೊಡಗು ಭಾಗದಲ್ಲಿ ಬಿಜೆಪಿ ಬಲವಾಗಿರುವುದು. ಕಾಂಗ್ರೆಸ್, ಜೆಡಿಎಸ್ ನಲ್ಲಿ ಹೊಂದಾಣಿಕೆ ಕೊರತೆ ಹೆಚ್ಚಿರುವುದು.

  • ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

    ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

    ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿದೆ. ಬೆಂಗಳೂರಿನಲ್ಲಿ ಬಹುಕೋಟಿ ಮೊತ್ತದ ವಿಸ್ತಾರವಾದ ನಿವೇಶನವನ್ನು ಬ್ರಾಹ್ಮಣ ಮಹಾಸಭಾಗೆ ನೀಡಿದೆ. ಆದರಿಂದ ಮೈತ್ರಿ ಅಭ್ಯರ್ಥಿಗೆ ಬ್ರಾಹ್ಮಣ ಸಮುದಾಯ ಮತ ಹಾಕಲಾಗುತ್ತದೆ ಎಂದು ತಿಳಿಸಿದರು.

    ಆರ್. ಗುಂಡೂರಾವ್ ಅವರು ನಮ್ಮೊಂದಿಗಿಲ್ಲ. ಅವರು ನಮ್ಮ ಸಮುದಾಯಕ್ಕಾಗಿ ಬಹಳಷ್ಟು ದುಡಿದಿದ್ದಾರೆ. ಇಂತಹ ಹಿರಿಯ ನಾಯಕರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುವುದು ಸರಿಯಲ್ಲ ಎಂದು ಇಲ್ಲಿ ಬಿಜೆಪಿ ಅಭ್ಯರ್ಥಿಯಾದವರಿಗೆ ನಾವು ಹೇಳಿದ್ದೇವೆ. ಅವರ ವಿರುದ್ಧ ಪ್ರತಿಭಟನೆಯನ್ನೂ ಕೂಡ ಮಾಡಿದ್ದೇವೆ. ಹೀಗಾಗಿ ಸಂಭಾವಿತ ಹಾಗೂ ಒಳ್ಳೆಯ ನಡತೆ ಹೊಂದಿರುವ ವಿಜಯ್ ಶಂಕರ್ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದರು.

  • ಸುಗಮವಾಯ್ತ ವಿಜಯ್ ಶಂಕರ್ ವಿಶ್ವಕಪ್ ಹಾದಿ?

    ಸುಗಮವಾಯ್ತ ವಿಜಯ್ ಶಂಕರ್ ವಿಶ್ವಕಪ್ ಹಾದಿ?

    ನಾಗ್ಪುರ: ಆಸೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಮಿಂಚಿದ ಯುವ ಆಟಗಾರ ವಿಜಯ್ ಶಂಕರ್ ಈ ಮೂಲಕ ತಮ್ಮ ವಿಶ್ವಕಪ್ ಹಾದಿಯನ್ನ ಸುಗಮ ಮಾಡಿಕೊಂಡಿದ್ದಾರೆ.

    ಇಂದಿನ ಪಂದ್ಯದಲ್ಲಿ ಅವರು ನೀಡಿದ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪ್ರಶಂಸೆಗೆ ಕಾರಣವಾಗಿದೆ. ಟೀಂ ಇಂಡಿಯಾಗೆ 500ನೇ ಗೆಲುವಿನ ಸವಿ ಪಡೆಯಲು ಕೂಡ ಶಂಕರ್ ಕಾರಣರಾದರು.

    ಅಂತಿಮ ಓವರಿನಲ್ಲಿ ಮ್ಯಾಜಿಕ್ ಮಾಡಿದ ಶಂಕರ್ ತಾವು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅರ್ಹರು ಎಂಬ ಸಂದೇಶವನ್ನು ಆಯ್ಕೆ ಸಮಿತಿಗೆ ರವಾನಿಸಿದರು. ಅರ್ಧ ಶತಕ ಸಿಡಿಸಿ ಸೆಟ್ ಬ್ಯಾಟ್ಸ್ ಮನ್ ಆಗಿದ್ದ ಸ್ಟೋಯಿನ್ಸ್ ಹಾಗೂ ಜಂಪಾ ವಿಕೆಟ್ ಪಡೆದ ಶಂಕರ್ ಪ್ರಶಂಸೆಗೆ ಪಡೆದಿದ್ದಾರೆ.

    ಇದಕ್ಕೂ ಮುನ್ನ ಬ್ಯಾಟಿಂಗ್‍ನಲ್ಲೂ ಮಿಂಚಿದ ಶಂಕರ್ ನಾಯಕ ಕೊಹ್ಲಿ ಅವರೊಂದಿಗೆ ಉಪಯುಕ್ತ ಇನ್ನಿಂಗ್ಸ್ ನಿರ್ಮಿಸಿದರು. ಒಂದಂತದಲ್ಲಿ ಕೊಹ್ಲಿಗಿಂತ ವೇಗವಾಗಿ ರನ್ ಗಳಿಸಿದ ಶಂಕರ್ 46 ರನ್ ಗಳಿಸಿದ್ದ ವೇಳೆ ದುದೃಷ್ಟವಶಾತ್ ರನೌಟ್ ಆದ್ರು. ಆದರೆ ಈ ಪಂದ್ಯದಲ್ಲಿ ಶಂಕರ್ ಅರ್ಧ ಶತಕ ಸಿಡಿಸಲು ಅರ್ಹರಾಗಿದ್ದರು.

    ಪಂದ್ಯ ಆರಂಭಕ್ಕೂ ಮುನ್ನವೇ ಅನುಭವಿ ಜಡೇಜಾ ಹಾಗು ಶಂಕರ್ ನಡುವೇ ವಿಶ್ವಕಪ್ ಆಯ್ಕೆಗೆ ಪೈಪೋಟಿ ನಡೆಯುತ್ತಿದೆ ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದರು. ಆಯ್ಕೆ ಸಮಿತಿ ಬೌಲಿಂಗ್ ವಿಭಾಗದಲ್ಲಿ ಬುಮ್ರಾ, ಭುವನೇಶ್ವರ್, ಶಮಿ ಮುಂದಾಳತ್ವದಲ್ಲಿ ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗುತ್ತಿದೆ. ಇತ್ತ ಗಾಯದ ಸಮಸ್ಯೆಯಿಂದ ಆಸೀಸ್ ಟೂರ್ನಿಗೆ ಅಲಭ್ಯವಾಗಿರುವ ಹಾರ್ದಿಕ್ ವಿಶ್ವಕಪ್‍ಗೆ ಚೇತರಿಕೊಳ್ಳುವ ವಿಶ್ವಾಸ ಇದೆ. ಇದರಂತೆ ಹೆಚ್ಚಿನ ಆಯ್ಕೆಯಾಗಿ ಶಂಕರ್ ಹಾಗೂ ರವೀಂದ್ರ ಜಡೇಜಾ ಪ್ರದರ್ಶನ ಮೇಲೆ ಆಯ್ಕೆ ಸಮಿತಿ ಕಣ್ಣಿಟ್ಟಿದೆ. ಒಂದು ಪ್ರದರ್ಶನ ಮೇಲೆ ಆಟಗಾರರ ಆಯ್ಕೆ ಖಚಿತ ಪಡಿಸುವುದು ಕಷ್ಟಸಾಧ್ಯವಾದರು. ಇಂದಿನ ಪಂದ್ಯದಲ್ಲಿ ಶಂಕರ್ ಆಯ್ಕೆ ಸಮಿತಿಯ ಗಮನ ಸೆಳೆದಿರುವುದು ಪಕ್ಕ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv