Tag: vijay singla

  • ಭ್ರಷ್ಟಾಚಾರ ಆರೋಪ – ಪಂಜಾಬ್ ಆಪ್ ಶಾಸಕ ಬಂಧನ

    ಭ್ರಷ್ಟಾಚಾರ ಆರೋಪ – ಪಂಜಾಬ್ ಆಪ್ ಶಾಸಕ ಬಂಧನ

    ಚಂಡೀಗಢ: ಆಡಳಿತ ಪಕ್ಷ ಆಮ್ ಆದ್ಮಿಯ ಶಾಸಕ (AAP) ಅಮಿತ್ ರತ್ತನ್ ಕೋಟ್ಛಟ್ಟಾ (Amit Rattan Kotfatta) ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್ ( Punjab) ವಿಜಿಲೆನ್ಸ್ ಬ್ಯುರೋ ಪಟಿಯಾಲದಲ್ಲಿ ಬಂಧಿಸಿದೆ.

     

    ಸಹಾಯಕ ನಾಲ್ಕು ಲಕ್ಷ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ. ಈ ಪ್ರಕರಣದಲ್ಲಿ ಬಟಿಂಡಾ ಗ್ರಾಮೀಣ ಕ್ಷೇತ್ರದ ಪ್ರತಿನಿಧಿಯಾಗಿರುವ ಕೋಟ್ಫಟ್ಟಾ ಅವರ ಪಾತ್ರ ಇರುವುದಕ್ಕೆ ಬಲವಾದ ಸಾಕ್ಷಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ

    ಘುದ್ದಾ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಕೋಟ್ಫಟ್ಟಾ ಮತ್ತು ಅವರ ಸಹಾಯಕ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಟಿಂಡಾ ನಿವಾಸಿ ಪ್ರೀತ್ಪಾಲ್ ಕುಮಾರ್ ಆರೋಪಿಸಿದ್ದಾರೆ. ಕುಮಾರ್ ನೀಡಿದ ದೂರಿನಲ್ಲಿ ರಶಿಮ್ ಗಾರ್ಗ್ ಅವರನ್ನು ಬಟಿಂಡಾದಲ್ಲಿರುವ ಕೋಟ್ಫಟ್ಟಾ ಅವರ ನಿವಾಸಕ್ಕೆ ಆಹ್ವಾನಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ವಾಯ್ಸ್ ರೆಕಾರ್ಡ್‍ನ್ನು ತಮ್ಮ ದೂರಿನೊಂದಿಗೆ ಸಲ್ಲಿಸಿದ್ದರು. ಸರ್ಕಾರದ ಅತಿಥಿ ಗೃಹದಲ್ಲಿ ಗಾರ್ಗ್ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಕೋಟ್ಫಾಟ್ಟಾ ಅವರನ್ನು ಪ್ರಶ್ನಿಸಲಾಗಿತ್ತು.

    ಕೋಟ್ಫಾಟ್ಟಾ ಪರವಾಗಿ ಅವರ ಸಹಾಯಕ ರಶೀಮ್ ಗಾರ್ಗ್ (Rashim Garg) ಲಂಚ ಸಂಗ್ರಹಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ʻಮಾರ್ಕ್ ಆ್ಯಂಟನಿʼ ಶೂಟಿಂಗ್‌ ವೇಳೆ ಅವಘಢ: ಅಪಘಾತದಿಂದ ಪಾರಾದ ನಟ ವಿಶಾಲ್‌

    ಬಂಧನದ ನಂತರ ಅವರನ್ನು ಬಟಿಂಡಾಗೆ ಕರೆದೊಯ್ಯಲಾಯಿತು. ಅಲ್ಲಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭ್ರಷ್ಟಾಚಾರ ಆರೋಪದ ಮೇಲೆ ಬಂಧನವಾಗುತ್ತಿರುವ ಆಪ್ ಪಕ್ಷದ ಎರಡನೇ ಶಾಸಕ ಇವರಾಗಿದ್ದಾರೆ. ಕಳೆದ ಮೇ ತಿಂಗಳಲ್ಲಿ ಟೆಂಡರ್ ಹಂಚಿಕೆಯಲ್ಲಿ 1% ಕಮಿಷನ್ ಬೇಡಿಕೆ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ (Vijay Singla) ಅವರನ್ನು ಬಂಧಿಸಲಾಗಿತ್ತು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟೆಂಡರ್‌ನಲ್ಲಿ 1 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್‌ ಮಾನ್‌

    ಟೆಂಡರ್‌ನಲ್ಲಿ 1 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್‌ ಮಾನ್‌

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ವರದಿಯಾಗಿದೆ.

    ಸಿಂಗ್ಲಾ ಅವರು ಟೆಂಡರ್‌ಗಳಲ್ಲಿ ಶೇಕಡಾ ಒಂದರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಅವರನ್ನು ಪದಚ್ಯುತಿಗೊಳಿಸಿದ ಕೂಡಲೇ ಪಂಜಾಬ್ ಭ್ರಷ್ಟಾಚಾರ ನಿಗ್ರಹ ದಳದಿಂದ ಬಂಧಿಸಲಾಯಿತು. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    Bhagwant Mann

    ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಚಿವರ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಂಪುಟದ ಸಚಿವರೊಬ್ಬರನ್ನು ವಜಾಗೊಳಿಸಿದ್ದರು.

    ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಭಗವಂತ್‌ ಮಾನ್ ವೀಡಿಯೋದಲ್ಲಿ ಸಂದೇಶ ರವಾನಿಸಿದ್ದಾರೆ. ʼಸಿಂಗ್ಲಾ ಅವರು ಭ್ರಷ್ಟಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಜನರು ಸಾಕಷ್ಟು ಭರವಸೆಯೊಂದಿಗೆ ಎಎಪಿಗೆ ಮತ ಹಾಕಿದ್ದಾರೆ. ನಾವು ಅದನ್ನು ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆʼ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಕ್ಷ ಹೇಳಿದೆ. ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

    ಭಗವಂತ್‌ ಮಾನ್‌ ಅವರ ನಿರ್ಧಾರವನ್ನು ಪ್ರಶಂಶಿಸಿ ಟ್ವೀಟ್‌ ಮಾಡಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ನಿಮ್ಮ ಬಗ್ಗೆ ಹೆಮ್ಮೆ ಇದೆ ಭಗವಂತ್‌ ಮಾನ್. ನಿಮ್ಮ ಕಾರ್ಯ ನನ್ನ ಕಣ್ಣಲ್ಲಿ ನೀರು ತರಿಸಿದೆ. ಇಡೀ ರಾಷ್ಟ್ರ ಇಂದು ಎಎಪಿ ಬಗ್ಗೆ ಹೆಮ್ಮೆ ಪಡುತ್ತಿದೆ‌ ಎಂದು ಹೇಳಿದ್ದಾರೆ.