Tag: Vijaya Bank

  • ಬ್ಯಾಂಕ್ ಆಫ್ ಬರೋಡಾದಲ್ಲಿ ಏ.1ರಂದು ದೇನಾ, ವಿಜಯಾ ಬ್ಯಾಂಕ್ ವಿಲೀನ: ಗ್ರಾಹಕರು ಏನು ಮಾಡಬೇಕು?

    ಬ್ಯಾಂಕ್ ಆಫ್ ಬರೋಡಾದಲ್ಲಿ ಏ.1ರಂದು ದೇನಾ, ವಿಜಯಾ ಬ್ಯಾಂಕ್ ವಿಲೀನ: ಗ್ರಾಹಕರು ಏನು ಮಾಡಬೇಕು?

    ಮುಂಬೈ: ಬ್ಯಾಂಕ್ ಆಫ್ ಬರೋಡಾದಲ್ಲಿ ಏಪ್ರಿಲ್ 1ರಂದು ದೇನಾ ಮತ್ತು ವಿಜಯಾ ಬ್ಯಾಂಕ್‍ಗಳು ವಿಲೀನಗೊಳ್ಳಲಿವೆ. ಈ ಎರಡು ಬ್ಯಾಂಕ್‍ಗಳಲ್ಲಿರುವ ಖಾತೆಗಳು ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆಗೊಳ್ಳಲಿವೆ. ಈ ಎರಡು ಬ್ಯಾಂಕ್‍ಗಳ ವಿಲೀನದಿಂದಾಗಿ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಆಗಲಿದೆ.

    ಪಸ್ತುತ 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. 15.8 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಎಚ್‍ಡಿಎಫ್‍ಸಿ ಎರಡನೇ ಸ್ಥಾನದಲ್ಲಿ, 11.02 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಐಸಿಐಸಿಐ ಮೂರನೇ ಸ್ಥಾನದಲ್ಲಿವೆ. ದೇನಾ ಮತ್ತು ವಿಜಯಾ ಬ್ಯಾಂಕ್‍ಗಳ ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೌಲ್ಯ 15.4 ಲಕ್ಷ ಕೋಟಿ ಆಗಲಿದೆ. ಐಸಿಐಸಿಐ ಬ್ಯಾಂಕ್ ನ್ನು ಹಿಂದೆ ತಳ್ಳಿ ಬ್ಯಾಂಕ್ ಆಫ್ ಬರೋಡಾ ಮೂರನೇ ಸ್ಥಾನವನ್ನ ಅಲಂಕರಿಸಲಿದೆ.

    ದೇನಾ, ವಿಜಯ ಬ್ಯಾಂಕ್ ಗ್ರಾಹಕರು ಏನು ಮಾಡಬೇಕು?
    1. ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ಸಿಗಲಿದೆ.
    2. ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲರಿಗೂ ಹೊಸ ಖಾತೆ ನಂಬರ್ ದೊರೆತ ಕೂಡಲೇ, ಆದಾಯ ತೆರಿಗೆ ಇಲಾಖೆ, ವಿಮೆ, ಪಿಂಚಣಿಗಳಿಗೆ ಮಾಹಿತಿಯನ್ನು ನೀಡಬೇಕು.
    3. ಸಾಲಗಾರರು ಅಥವಾ ಇಎಂಐ ಗ್ರಾಹಕರು ಹೊಸ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.
    4. ಬ್ಯಾಂಕ್ ಆಫ್ ಬರೋಡಾಗೆ ಸೇರ್ಪಡೆಯಾಗುವ ಎಲ್ಲ ಗ್ರಾಹಕರಿಗೆ ಹೊಸ ಡೆಬಿಟ್ ಕಾರ್ಡ್, ಚೆಕ್‍ಬುಕ್ ಮತ್ತು ಕ್ರೆಡಿಟ್ ಕಾರ್ಟ್ ನೀಡಲಾಗುತ್ತದೆ.
    6. ವಾಹನಗಳ ಮೇಲಿನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ ಪಡೆದ ಗ್ರಾಹಕರು ಪಾವತಿಸುತ್ತಿರುವ ಬಡ್ಡಿ ಮೊತ್ತದಲ್ಲಿ ಯಾವುದೇ ಬದಲಾವಣೆಗಳಿಲ್ಲ.
    7. ಬ್ಯಾಂಕ್‍ಗಳ ವಿಲೀನದಿಂದಗ ಕೆಲ ಶಾಖೆಗಳು ಬಂದ್ ಆಗಲಿವೆ. ಹಾಗಾಗಿ ಗ್ರಾಹಕರು ಸಮೀಪದ ಬ್ಯಾಂಕ್ ಬರೋಡಾ ಬ್ಯಾಂಕ್ ಸಂಪರ್ಕಿಸಬೇಕು.

    ಈ ಮೊದಲು ಸ್ಟೇಟ್ ಬ್ಯಾಂಕ್ ಆಫ್ ಜೈಪುರ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ತ್ರವಾಂಕೋರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ ಬ್ಯಾಂಕ್‍ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನಗೊಳಿಸಲಾಗಿತ್ತು.

  • ಸಾಲ ಪಾವತಿಸದ ವಾಟಾಳ್ – ಮನೆಗೆ ಎಂಟ್ರಿಕೊಟ್ಟು ಶಾಕ್ ಕೊಟ್ಟ ಬ್ಯಾಂಕ್ ಸಿಬ್ಬಂದಿ!

    ಸಾಲ ಪಾವತಿಸದ ವಾಟಾಳ್ – ಮನೆಗೆ ಎಂಟ್ರಿಕೊಟ್ಟು ಶಾಕ್ ಕೊಟ್ಟ ಬ್ಯಾಂಕ್ ಸಿಬ್ಬಂದಿ!

    ಬೆಂಗಳೂರು: ಮಾತೆತ್ತಿದ್ರೆ ಬಂದ್ ಬಂದ್ ಎನ್ನುವ ವಾಟಾಳ್ ನಾಗರಾಜ್‍ಗೆ ಇಂದು ಬ್ಯಾಂಕ್‍ನವರು ದಿಢೀರ್ ಶಾಕ್ ಕೊಟ್ಟಿದ್ದಾರೆ. ಕತ್ತೆ ಕುರಿ ಎಮ್ಮೆ ಜೊತೆ ಬೀದಿಗೆ ಬಂದು ಪ್ರತಿಭಟನೆ ನಡೆಸುವ ವಾಟಾಳ್ ಮನೆ ಮುಂದೆ ಮಧ್ಯಾಹ್ನ ಬ್ಯಾಕ್‍ನವರು ಬಂದಿದ್ದರು.

    ವಾಟಾಳ್ ವಿಜಯ ಬ್ಯಾಂಕಿನಿಂದ ಗೃಹ ಸಾಲವನ್ನು ಪಡೆದಿದ್ದರು. ಗೃಹ ಸಾಲದ 17 ಲಕ್ಷ ರೂ. ಹಣವನ್ನು ವಾಟಾಳ್ ಪಾವತಿಸಬೇಕಿತ್ತು. 2017ಕ್ಕೆ ಜುಲೈ ತಿಂಗಳಿಗೆ ಸಾಲ ಪಾವತಿಸಬೇಕಿತ್ತು. ಈ ಸಾಲದ ಹಣವನ್ನು ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ನೋಟಿಸ್ ನೀಡಿತ್ತು.

    ಮೂರು ನೋಟಿಸ್ ಕಳುಹಿಸಿದರೂ ವಾಟಾಳ್ ನಾಗರಾಜ್ ಅವರು ಉತ್ತರ ನೀಡಿರಲಿಲ್ಲ. ನೋಟಿಸ್ ಗೆ ಕ್ಯಾರೇ ಅನ್ನದ ವಾಟಾಳ್ ಮನೆಗೆ ಇಂದು ವಿಜಯ ಬ್ಯಾಂಕ್ ಸಿಬ್ಬಂದಿ ಲಾಯರ್ ಜೊತೆ ಆಗಮಿಸಿದ್ದರು.

    ಬ್ಯಾಂಕ್‍ನವರು ಬಂದಿರುವ ಸುದ್ದಿ ಕೇಳುತ್ತಿದ್ದಂತೆ ವಾಟಾಳ್ ಮನೆಗೆ ಆಗಮಿಸಿದ್ದಾರೆ. ಬ್ಯಾಂಕ್‍ನವರನ್ನು ಹೆಂಗೋ ಮಾತಾನಾಡಿ ಸಾಗ ಹಾಕಿದ್ದಾರೆ. ವಾಟಾಳ್ ಮನವಿಯ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ಸ್ಥಳದಿಂದ ತೆರಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ಮಂಗಳೂರು: ಸಂಸದ ನಳಿನ್‍ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಗರದ ಜಿಲ್ಲಾ ಕಚೇರಿ ಎದುರಲ್ಲಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಚಿವರು, ಲಾಭದಲ್ಲಿರುವ ವಿಜಯ ಬ್ಯಾಂಕ್ ಜೊತೆಗೆ ನಷ್ಟದಲ್ಲಿರುವ ದೇನಾ ಬ್ಯಾಂಕನ್ನು ವಿಲೀನಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಹರಿಹಾಯ್ದರು.

    ವಿಜಯ್ ಬ್ಯಾಂಕನ್ನು ನಮ್ಮ ಸಮುದಾಯದ ನಾಯಕರು ಸ್ಥಾಪಿಸಿ ಬೆಳೆಸಿದರು. ಅದು ರಾಷ್ಟ್ರೀಕೃತಗೊಂಡು ಲಾಭದಾಯಕ ಬ್ಯಾಂಕ್ ಆಗುತ್ತಿದೆ. ಆದರೆ ಈಗ ಅದರೊಂದಿಗೆ ನಷ್ಟದಲ್ಲಿರುವ ದೇನಾ ಬ್ಯಾಂಕ್ ವಿಲೀನಗೊಳಿಸಲಾಗುತ್ತಿದೆ. ಇದನ್ನು ತಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಿಜೆಪಿ ಶಾಸಕರು, ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಅವರು ಜೀವಂತ ಇದ್ದೂ ಸತ್ತ ಹಾಗೆ ಎಂದು ಗುಡುಗಿದರು.

    ಬ್ಯಾಂಕ್ ವಿಲೀನ ತಪ್ಪಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಸಂಸದ ನಳಿನ್ ಕುಮಾರ್ ಕಟೀಲ್ ಸತ್ತಿದ್ದಾರೆಯೇ ಅಂತ ಪ್ರಶ್ನೆ ಮಾಡುತ್ತೇನೆ ಎಂದ ಮಾಜಿ ಸಚಿವರು, ಸಂಸದರ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದರು.

    ಲೋಕಪಾಲ್ ಜಾರಿಗೆ ತರುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಆದರೆ ಗುಜರಾತಿನಲ್ಲೇ ಲೋಕಾಯುಕ್ತರು ಇಲ್ಲ. ಬೇರೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಬೋಧನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಬ್ಯಾಂಕ್ ಸಿಬ್ಬಂದಿ ಗಮನ ಬೇರೆಡೆ ಸೆಳೆದು 7 ಮಂದಿಯಿಂದ 10 ಲಕ್ಷ ಕಳವು!

    ಬ್ಯಾಂಕ್ ಸಿಬ್ಬಂದಿ ಗಮನ ಬೇರೆಡೆ ಸೆಳೆದು 7 ಮಂದಿಯಿಂದ 10 ಲಕ್ಷ ಕಳವು!

    ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಹಣ ಕಳ್ಳತನ ಮಾಡಿರುವ ಘಟನೆ ನಗರದ ಸಂಪಿಗೆ ರಸ್ತೆಯ ವಿಜಯಾ ಬ್ಯಾಂಕ್ ನಲ್ಲಿ ನಡೆದ ನಡೆದಿದೆ.

    ಕಳೆದ ತಿಂಗಳ 31 ರಂದು ಈ ಘಟನೆ ನಡೆದಿದೆ. ಏಳು ಜನ ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕ್ಯಾಶ್ ಕೌಂಟರ್ ಗೆ ಹೋಗಿದ್ದ ಖದೀಮರು ಅಲ್ಲಿದ್ದ ಹತ್ತು ಲಕ್ಷ ಹಣ ಎಗರಿಸಿ ಪರಾರಿಯಾಗಿದ್ದಾರೆ. ಬಳಿಕ ಬ್ಯಾಂಕ್ ವಹಿವಾಟು ಅಂತ್ಯವಾದ ನಂತ್ರ ಹತ್ತು ಲಕ್ಷ ಹಣ ಕಡಿಮೆಯಾಗಿತ್ತು. ಹಣದ ವಹಿವಾಟು ತನಿಖೆ ವೇಳೆ ಹಣ ಕಡಿಮೆಯಾಗಿದ್ದು ಬೆಳಕಿಗೆ ಬಂದಿದೆ.

    ಬ್ಯಾಂಕ್ ಸಿಸಿಟಿವಿ ಪರಿಶೀಲನೆ ನಡೆಸಿದ ಸಿಬ್ಬಂದಿ, ಈ ವೇಳೆ ಏಳು ಜನ ವ್ಯಕ್ತಿಗಳು ಅನುಮಾನಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಎಸ್ ಸಿ ನಾಯಕ್ ದೂರು ದಾಖಲಿದ್ದಾರೆ.

    ಸದ್ಯ ದೂರು ದಾಖಲಿಸಿಕೊಂಡಿರೋ ಪೊಲೀಸರು ವಂಚಕ ಗ್ಯಾಂಗ್ ಗಾಗಿ ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗ್ರಾಮದಲ್ಲಿದ್ದ ಬ್ಯಾಂಕ್ ಬೇರೆ ಕಡೆಗೆ ಶಿಫ್ಟ್: ರೊಚ್ಚಿಗೆದ್ದ ಉಡುಪಿ ಗ್ರಾಮಸ್ಥರಿಂದ ಪ್ರತಿಭಟನೆ

    ಗ್ರಾಮದಲ್ಲಿದ್ದ ಬ್ಯಾಂಕ್ ಬೇರೆ ಕಡೆಗೆ ಶಿಫ್ಟ್: ರೊಚ್ಚಿಗೆದ್ದ ಉಡುಪಿ ಗ್ರಾಮಸ್ಥರಿಂದ ಪ್ರತಿಭಟನೆ

    ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ವಿಜಯ ಬ್ಯಾಂಕ್ ನ ಆಲೂರು ಶಾಖೆಯನ್ನು ಬೇರೆ ಗ್ರಾಮಕ್ಕೆ ಶಿಫ್ಟ್ ಮಾಡುವ ಕುರಿತು ಭಾರೀ ಜನಾಕ್ರೋಶ ವ್ಯಕ್ತವಾಗಿದೆ.

    ಆಲೂರು ಗ್ರಾಮದಿಂದ ನಾಡ ಗ್ರಾಮಕ್ಕೆ ವಿಜಯಬ್ಯಾಂಕ್ ಶಾಖೆಯನ್ನು ಶಿಫ್ಟ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಗ್ರಾಹಕರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ನೂರಾರು ಗ್ರಾಮಸ್ಥರು ಬ್ಯಾಂಕ್ ಮುಂಭಾಗ ಜಮಾಯಿಸಿದ್ದರು. ಬ್ಯಾಂಕ್ ಶಿಫ್ಟ್ ಮಾಡುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬ್ಯಾಂಕ್ ನಲ್ಲಿ ತಿಂಗಳಿಗೆ 25 ಕೋಟಿಗೂ ಹೆಚ್ಚು ವ್ಯವಹಾರವಿದೆ. ಬ್ಯಾಂಕ್ ನಾಡ ಗ್ರಾಮಕ್ಕೆ ಶಿಫ್ಟಾದರೆ ವ್ಯವಹಾರ ಮಾಡಲು ಗ್ರಾಹಕರು 10 ಕಿಲೋಮೀಟರ್ ನಷ್ಟು ದೂರ ಹೋಗಬೇಕು. ಈ ಹಿನ್ನೆಲೆಯಲ್ಲಿ ಗ್ರಾಹಕರು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ರು.

    ಪ್ರಧಾನಿ ಮೋದಿ ಡಿಜಿಟಲ್ ವ್ಯವಹಾರ ಮಾಡಲು ಒಂದೆಡೆ ಉತ್ತೇಜನ ಕೊಡುತ್ತಿದ್ದರೆ, ಮತ್ತೊಂದೆಡೆ ಬ್ಯಾಂಕ್ ಅಧಿಕಾರಿಗಳು ಈ ಯೋಜನೆಗೆ ಸ್ಪಂದನೆ ನೀಡುತ್ತಿಲ್ಲ ಅಂತ ಆರೋಪಿಸಿದರು. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದರು. ಪ್ರತಿಭಟನಾಕಾರರಿಗೆ ಬ್ಯಾಂಕ್ ಉಳಿಸಿಕೊಡುವ ಭರವಸೆ ನೀಡಿದರು.

    ಬ್ಯಾಂಕ್ ಗ್ರಾಹಕ ಜಯರಾಂ ಆಲೂರು ಮಾತನಾಡಿ, ನಮಗೆ ನಮ್ಮ ಬ್ಯಾಂಕ್ ಉಳಿಸಿಕೊಡಿ. ದೂರದ ಊರಿಗೆ ವ್ಯವಹಾರಕ್ಕೆ ಹೋಗಲು ಕಷ್ಟವಾಗುತ್ತದೆ. ಬ್ಯಾಂಕ್ ಶಿಫ್ಟ್ ಆದ್ರೆ ನಮ್ಮ ಅಕೌಂಟ್ ಕ್ಲೋಸ್ ಮಾಡಬೇಕಾಗುತ್ತದೆ ಎಂದು ಹೇಳಿದರು.