Tag: Vijayanand Kashappanavar

  • 2 ತಿಂಗಳಲ್ಲಿ ಮತ್ತೆ ನನ್ನನ್ನ ಬಿಜೆಪಿಗೆ ಸೇರಿಸಿಕೊಳ್ತಾರೆ: ಯತ್ನಾಳ್

    2 ತಿಂಗಳಲ್ಲಿ ಮತ್ತೆ ನನ್ನನ್ನ ಬಿಜೆಪಿಗೆ ಸೇರಿಸಿಕೊಳ್ತಾರೆ: ಯತ್ನಾಳ್

    – ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ, ಅದಕ್ಕೆ ಕಾಶಪ್ಪನವರ್ ಉರಿಯುತ್ತಿದ್ದಾನೆ
    – ಶ್ರೀಗಳ ಹತ್ಯೆ ವಿಚಾರ ನನಗೆ ಗೊತ್ತಿಲ್ಲ, ಬೆಲ್ಲದ್‌ರನ್ನೇ ಕೇಳಿ ಎಂದ ಶಾಸಕ

    ವಿಜಯಪುರ: ಬಿಜೆಪಿಯಿಂದ (BJP) ಉಚ್ಚಾಟನೆ ಆಗಿದ್ದೀನಿ, ಹಾಗೇ ನೋಡಿದ್ರೆ 18 ವರ್ಷ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು, ಆದರೆ ನೋಡಿ 2 ತಿಂಗಳಲ್ಲಿ ಮತ್ತೆ ಮರಳಿ ಬಿಜೆಪಿಗೆ ಸೇರಿಸಿಕೊಳ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಆಗಿರೋದು ನಾನು. ಹಾಗೇ ನೋಡಿದ್ರೆ 18 ವರ್ಷ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು. ಆದ್ರೆ ನೋಡಿ 2 ತಿಂಗಳಲ್ಲಿ ಮತ್ತೆ ಮರಳಿ ನನ್ನನ್ನ ಸೇರಿಸಿಕೊಳ್ತಾರೆ. ಏನು ಮಾಡೋದು? ನಮ್ಮ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ. ಇಲ್ಲ ಅಂದ್ರೆ ಅಪ್ಪಾಜಿ ಎನ್ನುತ್ತ ಯಡ್ಡಿಯೂರಪ್ಪ, ವಿಜಯೇಂದ್ರ ಕೈ, ಕಾಲು ಹಿಡಿಯಬೇಕಾಗುತ್ತೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ

    ಇದೇ ವೇಳೆ ಕೂಡಲಸಂಗಮಶ್ರೀ ವಿರುದ್ಧ ಹತ್ಯೆಗೆ ಸಂಚು ರೂಪಿಸಿದ ವಿಚಾರವಾಗಿ ಮಾತನಾಡಿದ ಅವರು, ಹತ್ಯೆಗೆ ಸಂಚು ರೂಪಿಸಿದ ಬಗ್ಗೆ ನನಗೆ ಯಾವ ಮಾಹಿತಿ ಇಲ್ಲ. ಅದರ ಬಗ್ಗೆ ಬೆಲ್ಲದ್ ಅವರನ್ನೇ ಕೇಳಿ. ನಾವು ಜಯಮೃತ್ಯುಂಜಯ ಸ್ವಾಮೀಜಿಗಳಿಗಾಗಿ 15 ಎಕರೆ ಜಮೀನು ತೆಗೆದುಕೊಂಡು ಹಾಸ್ಟೇಲ್ ಸಮೇತ ಮಠದ ವ್ಯವಸ್ಥೆ ಮಾಡುತ್ತೇವೆ. ಅದರ ಬಗ್ಗೆ ಬುಧವಾರ ನಾನು, ಸಿಸಿ ಪಾಟೀಲ್ ಸೇರಿದಂತೆ ಅನೇಕರು ಸೇರಿ ಸಭೆ ಮಾಡುತ್ತೇವೆ. ಶ್ರೀಗಳು ಅಲ್ಲಿಯೇ ಇರಲಿದ್ದಾರೆ. ಈ ಬಾರಿ ಯಾವುದೇ ರಾಜಕಾರಣಿ ಕೂಡ ಟ್ರಸ್ಟ್ನಲ್ಲಿ ಇರುವುದಿಲ್ಲ. ಕೇವಲ ಭಕ್ತರು ಮಾತ್ರ ಟ್ರಸ್ಟ್ನಲ್ಲಿ ಇರುತ್ತಾರೆ ಎಂದರು.

    ಉಚ್ಚಾಟನೆ ಮಾಡಲು ಕಾಶಪ್ಪನವರ್ ಯಾರು? ಇದೇನು ರಾಜಕೀಯ ಪಕ್ಷನಾ? ಸ್ವಾಮೀಜಿಗಳ ಜೊತೆ ಭಕ್ತರಿದ್ದಾರೆ. ಯಾವಾಗಲೂ ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ, ಅದಕ್ಕೆ ಕಾಶಪ್ಪನವರ್ ಉರಿಯುತ್ತಿದ್ದಾನೆ. ಇಡೀ ಸಮಾಜ ಸ್ವಾಮೀಜಿಗಳ ಜೊತೆಯಲ್ಲಿದೆ. ಆ ಟ್ರಸ್ಟ್ನಲ್ಲಿ ಅವರ ಹೆಸರು ಇಲ್ಲ ಎಂದ್ಮೇಲೆ ಅದರ ಮೇಲೆ ಆಸೆಯೂ ಕೂಡ ಇರಬಾರದು. ನಾವು ಆಸೆ ಬಿಟ್ಟು ಬಿಡಿ ಎಂದು ಹೇಳಿದ್ದೇವೆ. ಗದಗನ ಪ್ರಭಣ್ಣಾ ಹುಣಶಿಕಟ್ಟಿ, ಧಾರವಾಡದ ಅಸೂಟಿ ಎರಡು ಕುಟುಂಬದವರು ಸಮಾಜದ ಆಸ್ತಿಯನ್ನು ಖಾಸಗಿ ಟ್ರಸ್ಟ್ ಮಾಡಿಕೊಂಡಿದ್ದಾರೆ. ಅವರ ಮಕ್ಕಳು, ಮೊಮ್ಮಕಳೇ ಅದರ ಟ್ರಸ್ಟ್ನ ಸದಸ್ಯರಾಗಿರುತ್ತಾರೆ. ಬೇರೆಯವರು ಟ್ರಸ್ಟ್ನ ಸದಸ್ಯರಾಗುವ ಹಾಗಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

  • ನೀವೆಲ್ಲ ಮಠಕ್ಕೆ ಹೋಗೋಣ ಅಂದ್ರೆ ಬರುತ್ತೇನೆ, ಇಲ್ದಿದ್ರೆ ಭಕ್ತರ ಮನೆಯಲ್ಲೇ ಇರುತ್ತೇನೆ: ಭಾವುಕರಾದ ಜಯ ಮೃತ್ಯುಂಜಯ ಶ್ರೀ‌

    ನೀವೆಲ್ಲ ಮಠಕ್ಕೆ ಹೋಗೋಣ ಅಂದ್ರೆ ಬರುತ್ತೇನೆ, ಇಲ್ದಿದ್ರೆ ಭಕ್ತರ ಮನೆಯಲ್ಲೇ ಇರುತ್ತೇನೆ: ಭಾವುಕರಾದ ಜಯ ಮೃತ್ಯುಂಜಯ ಶ್ರೀ‌

    ಬಾಗಲಕೋಟೆ: ಮಠಕ್ಕೆ ಬೀಗ ಹಾಕಲಾಗಿದೆ, ನೀವೆಲ್ಲ ಮುಖಂಡರು ಸೇರಿ ಪೀಠಕ್ಕೆ ಹೋಗೋಣ ಅಂದ್ರೆ ಬರುತ್ತೇನೆ. ಇಲ್ಲದಿದ್ರೆ ಹುನಗುಂದ (Hanagunda) ಪಟ್ಟಣದಲ್ಲಿರುವ ಯಾವುದಾದ್ರೂ ಭಕ್ತರ ಮನೆಯಲ್ಲೇ ಇರುತ್ತೇನೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಭಾವುಕರಾಗಿ ನುಡಿದಿದ್ದಾರೆ.

    ಪೀಠಕ್ಕೆ ಬೀಗ ಹಾಕಿದ ವಿಚಾರ ವಿವಾದವಾಗುತ್ತಿದ್ದಂತೆ ಸ್ವಾಮೀಜಿ ಹುನಗುಂದ ಪಟ್ಟಣದ ಬಸವ ಮಂಟಪದಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಬೆಂಬಲಿಗರು ಹೇಳಿದಂತೆ ಮುನ್ನಡೆಯುವ ನಿರ್ಧಾರ ಕೈಗೊಂಡರು. ಸಭೆಯಲ್ಲಿ ಪೀಠಕ್ಕೆ ಬೀಗ ಹಾಕಿರುವ ವಿಚಾರದ ಬಗ್ಗೆ ಸ್ವಾಮೀಜಿ ಮಾತನಾಡುತ್ತ ಭಾವುಕರಾದ್ರು. ನಂತರ ಸಮಾಜದ ಮುಖಂಡರ ನಿರ್ಧಾರದಂತೆ ನಾನು ಮುನ್ನೆಡೆಯುತ್ತೇನೆ ಎಂದರು.

    ಪಂಚಮಸಾಲಿ ಪೀಠಕ್ಕೆ ಬೀಗ ಜಡಿದ ವಿಚಾರ ರಾಜ್ಯವ್ಯಾಪಿ ವಿವಾದವಾಗುತ್ತಿದ್ದಂತೆ ಪಂಚಮಸಾಲಿ ಸಮುದಾಯದ ನಾಯಕರಾದ ಮಾಜಿ ಸಚಿವ ಸಿ.ಸಿ.ಪಾಟೀಲ್ ಮತ್ತು ಅರವಿಂದ ಬೆಲ್ಲದ್ ಸೇರಿದಂತೆ ಅನೇಕರು ಶಾಸಕ ಕಾಶಪ್ಪನವರ (Vijayanand Kashappanavar) ನಡೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

    ಏನಿದು ವಿವಾದ?
    ಹುನಗುಂದ ಶಾಸಕ ವಿಜಯಾನಂದ್ ಕಾಶಪ್ಪನವರ್ ಹಾಗೂ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಧ್ಯೆ ನಡೆಯುತ್ತಿರುವ ಮುಸುಕಿನ ಗುದ್ದಾಟದಿಂದ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮ ಪಂಚಮಸಾಲಿ ಗುರು ಪೀಠಕ್ಕೆ ಬೀಗ ಜಡಿಯಲಾಗಿದೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಒಡಕು ಮೂಡ್ತಿದ್ದಂತೆ, ಶಾಸಕ ಕಾಶಪ್ಪನವರ ಹಾಗೂ ಸ್ವಾಮೀಜಿ ಸಂಬಂಧಲ್ಲಿ ಬಿರುಕು ಮೂಡಿತ್ತು. ಶಾಸಕ ಕಾಶಪ್ಪನವರ್ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್‌ನ ಅಧ್ಯಕ್ಷರಾದ ನಂತರ ಸ್ವಾಮೀಜಿ ಗುರುಪೀಠಕ್ಕೆ ಬರುವುದು ಅಪರೂಪವಾಗಿತ್ತು.

    ಪೀಠದ ಆವರಣದಲ್ಲಿ ರಾತ್ರಿ ಸಮಯದಲ್ಲಿ ಬೇರೆ ರೀತಿಯ ಚಟುವಟಿಕಗಳು ನಡೆಯುತ್ತಿವೆ ಎಂಬ ಆರೋಪದ ಮೇಲೆ ಕಾಶಪ್ಪನವರ ಅಣತಿಯಂತೆ ಪೀಠಕ್ಕೆ ಬೀಗ ಜಡಿಯಲಾಗಿತ್ತು. ಬೀಗ ಜಡಿದ ನಂತರ ಸ್ವಾಮೀಜಿಯವರ ಕೆಲ ಬೆಂಬಲಿಗರು ಪೀಠದ ಬೀಗ ಮುರಿದಿದ್ದಾರೆ ಎಂದು ಕಾಶಪ್ಪನವರ ಬೆಂಬಲಿಗ ಚಂದ್ರಶೇಖರ ಚಿತ್ತರಗಿ ಅವರು ಹುನಗುಂದ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

    ಮಲ್ಲನಗೌಡ ಪಾಟೀಲ್, ಬಾಬುಗೌಡ ಪಾಟೀಲ್, ಚಂದ್ರಶೇಖರ ದೇವಲಾಪುರ ಸೇರಿದಂತೆ 7 ಮಂದಿ ಪೀಠದ ಕೀ ನೀಡುವಂತೆ ಒತ್ತಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ. ಅಕ್ರಮವಾಗಿ ಕೀ ಮುರಿದು ಒಳಗಡೆ ಹೋಗಿ, ಮುಖ್ಯ ಗೇಟ್, ಮಠದ ಮರದ ಬಾಗಿಲು ಒಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಈಗ ಬೀಗ ಜಡಿದ ಪೀಠದ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.

    ಕಳೆದ ಕೆಲವು ದಿನಗಳ ಹಿಂದೆ ಹೊಸ ಪೀಠದ ಚರ್ಚೆ ಶುರುವಾಗಿತ್ತು. ಇನ್ನೊಂದೆಡೆ ವಿಜಯಾನಂದ ಕಾಶಪ್ಪನವರ್‌ ಅವರು ಪ್ರಸಂಗ ಬಂದರೆ ಪೀಠಾಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ ಎಂದಿದ್ದರು. ಮತ್ತೊಂದೆಡೆ ಮಾಜಿ ಸಚಿವ ಸಿ.ಸಿ ಪಾಟೀಲ್ ಅವರು ಗದಗ ಜಿಲ್ಲೆಯ ಮಲಪ್ರಭಾ ತೀರದಲ್ಲಿ ಹೊಸ ಪಂಚಮಸಾಲಿ ಪೀಠ ಕಟ್ಟಿಸಿಕೊಡುತ್ತೇವೆ ಎಂದು ಗುಡುಗಿದ್ದರು.

  • ಕಾಶಪ್ಪನವರ್ ಆಯ್ತು ಈಗ ಜಯ ಮೃತ್ಯುಂಜಯ ಶ್ರೀ ವಿರುದ್ಧ ಹೆಬ್ಬಾಳ್ಕರ್ ಅಸಮಾಧಾನ

    ಕಾಶಪ್ಪನವರ್ ಆಯ್ತು ಈಗ ಜಯ ಮೃತ್ಯುಂಜಯ ಶ್ರೀ ವಿರುದ್ಧ ಹೆಬ್ಬಾಳ್ಕರ್ ಅಸಮಾಧಾನ

    ವಿಜಯಪುರ: ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರ ಬಳಿಕ ಪಂಚಮಸಾಲಿ ಪೀಠದ ಶ್ರೀ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (lakshmi Hebbalkar) ಅಸಮಾಧಾನ ಹೊರಹಾಕಿದ್ದಾರೆ.

    ವಿಜಯಪುರ (vijayapura) ಜಿಲ್ಲೆಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutyunjaya Swamiji) ಅವರು ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯದಲ್ಲಿ ಪಂಚಮಸಾಲಿ ಹೋರಾಟ ಮಾಡುವುದಾಗಿ ಹೇಳಿದ್ದರು. ನಾವು ಸರ್ಕಾರದಲ್ಲಿದ್ದರೂ ಹೋರಾಟದಲ್ಲಿ ಭಾಗಿಯಾಗಿದ್ದೆವು. ಆದರೆ ಸ್ವಾಮೀಜಿಗಳು ಸರ್ಕಾರಕ್ಕೆ ಮುಜುಗರವಾಗುವಂತೆ ಹೋರಾಟ ಮಾಡಬಾರದು ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

    ಯಾವುದೇ ಸರ್ಕಾರ ಇದ್ದರೂ ಅತಿಯಾಗಿದೆ ಎನ್ನುವ ರೀತಿಯಲ್ಲಿ ಹೋರಾಟ ಮಾಡಬಾರದು. ಪಂಚಮಸಾಲಿ ಸಮಾಜವನ್ನು ಬಿಟ್ಟು ನಾನಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

    ಇದೇ ವೇಳೆ ಗೃಹಲಕ್ಷ್ಮಿ ಹಣದ ವಿಚಾರವಾಗಿ, ಉಪಚುನಾವಣೆ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಮಾತನಾಡಿದರು. ನೀವು ಎಲ್ಲಾ ಜಿಲ್ಲೆಗಳಲ್ಲಿಯೂ ಚೆಕ್ ಮಾಡಿಕೊಳ್ಳಿ ಎಂದು ತಿಳಿಸಿದರು.ಇದನ್ನೂ ಓದಿ: ಖಂಡನೆ, ಮಂಡನೆ, ಎಚ್ಚರಿಕೆ ಸಾಕು, ಬಾಂಗ್ಲಾದೇಶಕ್ಕೆ ಸರಿಯಾಗಿ ಬುದ್ಧಿ ಕಲಿಸಿ: ಮುತಾಲಿಕ್‌

  • ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

    ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

    ಬಾಗಲಕೋಟೆ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದಲ್ಲಿ (Panchamasali Lingayats’ Quota Demand) ಈಗ ಬಿರುಕು ಮೂಡಿದೆ. ಪಂಚಮಸಾಲಿ ಪೀಠದ ಶ್ರೀ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ವಿರುದ್ಧ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್‌ (Vijayanand Kashappanavar) ಕಿಡಿಕಾರಿದ್ದಲ್ಲದೇ ಪ್ರತ್ಯೇಕ ಹೋರಾಟಕ್ಕೆ ತಯಾರಿ‌ ನಡೆಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಶ್ರೀ ಪಂಚಮಸಾಲಿ ಜಗದ್ಗುರು ಮಹಾಪೀಠದ ಸಭಾಭವನದಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ‌ ಸಭೆ ಬಳಿಕ ಮಾತನಾಡಿದ ಅವರು, ಇಲ್ಲಿಯವರೆಗೆ ಹಿಂದುಳಿದ ಆಯೋಗದ ಸಂಪೂರ್ಣ ವರದಿ ಬಂದಿಲ್ಲ. ಸಂಪೂರ್ಣ ವರದಿ ಬಂದ ಬಳಿಕ 2ಎ ಮೀಸಲಾತಿ ಕುರಿತು ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddarmaiah) ನೀಡಿದರೂ ಕೂಡ ಸ್ವಾಮೀಜಿ ಬಿಜೆಪಿ ಪಕ್ಷದ ಬ್ಯಾನರ್ ಅಡಿಯಲ್ಲಿ ಹೋರಾಟ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಸಿಸೇರಿಯನ್‌ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ

    ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನದ ವೇಳೆ ಡಿ.10 ರಂದು ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲು ಸ್ವಾಮೀಜಿ ಹಾಗೂ ಯತ್ನಾಳ್‌ ಅವರು ತಯಾರಿ‌ ನಡೆಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷನಾದ ನನ್ನ ಹಾಗೂ ಸಮಾಜದ ಹಿರಿಯರ ಗಮನಕ್ಕೆ ತಂದಿಲ್ಲ. ತಾವೇ ಬಿಜೆಪಿ ಪಕ್ಷದ ಬ್ಯಾನರ್ ಅಡಿಯಲ್ಲಿ ಸಭೆ ಮಾಡುತ್ತಿದ್ದಾರೆ. ಹೀಗಾಗಿ ಸ್ವಾಮೀಜಿಯವರ ನಡೆಯನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಹೋರಾಟ ವಕ್ಫ್ ವಿರುದ್ಧ, ಯಾವುದೇ ಕುಟುಂಬದ ವಿರುದ್ಧವಲ್ಲ: ಯತ್ನಾಳ್

    2ಎ ಮೀಸಲಾತಿ ಹೋರಾಟ ಪಕ್ಷಾತೀತವಾಗಿ ಇರಬೇಕು. ಆದರೆ ಇವರ ಹೋರಾಟ ಒಂದು ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್‌ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ‌ ಪಂಚಮಸಾಲಿ ಸಮಾಜ ನನ್ನ ಬೆನ್ನ ಹಿಂದಿದೆ ಎಂದು ಹೇಳುತ್ತಿದ್ದಾರೆ. ತಾಕತ್ತು ದಮ್ಮು ಇದ್ದರೆ ಸಮಾಜದ ಹೆಸರನ್ನು ಬಳಸದೇ ವೈಯಕ್ತಿಕ ವರ್ಚಸ್ಸಿನ ಮೇಲೆ ಹೋರಾಟ ಮಾಡಲಿ ಎಂದು ಸವಾಲ್ ಎಸೆದರು.

     

    ಈ ಹಿಂದೆ ಯತ್ನಾಳ್‌ ಅವರು ನಮ್ಮ ದಿಕ್ಕು ತಪ್ಪಿಸಿ ಬೆಂಗಳೂರಿನವರೆಗೆ ಪ್ರಜ್ಞಾರಹಿತವಾಗಿ ಪಾದಯಾತ್ರೆ ಮಾಡಿದರು. ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಪಕ್ಷಾತೀತವಾಗಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಕರೆದು 2ಎ ಮೀಸಲಾತಿ ಹೋರಾಟ ಮುಂದುವರೆಸುತ್ತೇವೆ. ಆದರೆ ಈ ಸಭೆಗೆ ಸ್ವಾಮೀಜಿ ಹಾಗೂ ಯತ್ನಾಳ್‌ ಅವರನ್ನು ಆಹ್ವಾನಿಸುವುದಿಲ್ಲ. ಮಾಜಿ‌ ಸಚಿವ ಮುರಗೇಶ್‌ ನಿರಾಣಿ ಅವರಿಗೆ ಆಹ್ವಾನವಿರುತ್ತದೆ ಎಂದು ಹೇಳಿದರು.

     

  • ಪಂಚಮಸಾಲಿ ಮುಷ್ಕರ ಅಂತ್ಯ – ಮುಖಂಡರ ಮಧ್ಯೆ ಜಟಾಪಟಿ, ಕಣ್ಣೀರಿಟ್ಟ ಸ್ವಾಮೀಜಿ

    ಪಂಚಮಸಾಲಿ ಮುಷ್ಕರ ಅಂತ್ಯ – ಮುಖಂಡರ ಮಧ್ಯೆ ಜಟಾಪಟಿ, ಕಣ್ಣೀರಿಟ್ಟ ಸ್ವಾಮೀಜಿ

    ಬೆಂಗಳೂರು: ಪಂಚಮಸಾಲಿಗಳಿಗೆ (Panchamasali) ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಸಮಾಧಾನಗೊಂಡಿರುವ ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಷ್ಕರವನ್ನು ಅಂತ್ಯಗೊಳಿಸಲಾಗಿದೆ ಎಂದು ಘೋಷಿಸಿದರು. ಈ ಘೋಷಣೆ ಹೊರಬಿದ್ದ ಬೆನ್ನಲ್ಲೇ ಪಂಚಮಸಾಲಿ ಸಮುದಾಯದ ಕೆಲ ಮುಖಂಡರು ಹೋರಾಟ ಅಂತ್ಯಗೊಳಿಸಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಈ ವೇಳೆ ಸ್ವಾಮೀಜಿ ಎದುರೇ ಕೆಲ ಮುಖಂಡರ ನಡುವೆ ಜಟಾಪಟಿ ಏರ್ಪಟ್ಟಿತು.

    ಪಂಚಮಸಾಲಿ ಮುಖಂಡರು ಹಾಗೂ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತಿನ ಜಟಾಪಟಿ ನಡೆದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸಭೆಯಿಂದ ಅರ್ಧಕ್ಕೆ ಹೊರ ನಡೆದ ಪ್ರಸಂಗ ಫ್ರೀಡಂ ಪಾರ್ಕ್‍ನಲ್ಲಿ ಶನಿವಾರ ನಡೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ: ಶರದ್ ಪವಾರ್

    ಸರ್ಕಾರ ಶುಕ್ರವಾರ ಮೀಸಲಾತಿ ಪ್ರಕಟಿಸಿದ ಹಿನ್ನಲೆಯಲ್ಲಿ, ಫ್ರೀಡಂ ಪಾರ್ಕ್‍ನಲ್ಲಿ (Freedom Park) ಪಂಚಮಸಾಲಿ ಮುಖಂಡರು ಹಾಗೂ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಕುರಿತಾಗಿ ಸ್ವಾಮೀಜಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರತಿಭಟನೆ ಕೈಬಿಡಲು ನಿರ್ಧರಿಸಲಾಯಿತು. ಆದರೆ ಇದಕ್ಕೆ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ವಿರೋಧ ವ್ಯಕ್ತಪಡಿಸಿದರು.

    ವಿಜಯಾನಂದ ಕಾಶೆಪ್ಪನವರ್ ಮಾತನಾಡಿ, ನಾವು ಕೇಳಿರುವುದು 15% ಮೀಸಲಾತಿ. ಆದರೆ ಈಗ 7% ನೀಡಲಾಗಿದೆ. ಇದು ಚುನಾವಣಾ ತಂತ್ರ ಆಗಿರಬಹುದು. ನೋಟಿಫಿಕೇಶನ್ ಆಗಲಿ. ಬೇರೆ ಸಮುದಾಯದಿಂದ ಕಿತ್ತುಕೊಂಡು ನಮಗೆ ಮೀಸಲಾತಿ ಕೊಡುವುದು ಬೇಕಾಗಿಲ್ಲ. ಈಗ ಕೇವಲ 2% ಮಾತ್ರ ಮೀಸಲಾತಿ ಸಿಕ್ಕಂತಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಕಸಿದು ನಮಗೆ ಕೊಟ್ಟಿದ್ದಾರೆ. ಆ ಮೂಲಕ ಮುಸ್ಲಿಮರು ಮತ್ತು ನಮ್ಮ ನಡುವೆ ಜಗಳ ತಂದಿಡುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ವಿಚಾರವಾಗಿ ವಿಜಯಾನಂದ ಹಾಗೂ ಯತ್ನಾಳ್ ನಡುವೆ ವಾಕ್ಸ್‌ಮರ ನಡೆಯಿತು.

    ಕಣ್ಣೀರಿಟ್ಟ ಸ್ವಾಮೀಜಿ
    ಹೋರಾಟ ಅಂತ್ಯಗೊಳಿಸಿ ನಂತರ ಮಾತನಾಡಿದ ಸ್ವಾಮೀಜಿ ಭಾವುಕರಾದರು. ಮಾತನಾಡುತ್ತಾ ಕಣ್ಣೀರಿಟ್ಟರು. ದೇವರು ನಮಗೆ 2% ಮೀಸಲಾತಿಯನ್ನು ಕರುಣಿಸಿದ್ದಾರೆ. ಹೊಟ್ಟೆ ತುಂಬಾ ಊಟ ಸಿಕ್ಕಿಲ್ಲ. ಆದರೆ ಹಸಿದ ಹೊಟ್ಟೆಗೆ ಪ್ರಸಾದ ಸಿಕ್ಕಿದಂತೆ ಆಗಿದೆ. ನೀತಿಸಂಹಿತೆ ಜಾರಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮುಂದೆ ಯಾವ ಸರ್ಕಾರ ಆಡಳಿತಕ್ಕೆ ಬರುತ್ತದೆಯೋ ಗೊತ್ತಿಲ್ಲ. ದೊಡ್ಡ ದೊಡ್ಡ ಮಠದವರು ನನಗೆ ಬೆಂಬಲ ಕೊಟ್ಟಿಲ್ಲ. ನಮ್ಮ ಹೋರಾಟದ ಪರಿಣಾಮ ಇಡೀ ಲಿಂಗಾಯಿತ ಸಮುದಾಯಕ್ಕೆ ಅನುಕೂಲವಾಗಿದೆ. ಚುನಾವಣೆ ಮುಗಿದ ನಂತರ ಹೋರಾಟ ಮುಂದುವರೆಸೋಣ ಎಂದರು. ಇದನ್ನೂ ಓದಿ: Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

  • ಪಾದಯಾತ್ರೆ ಶಾಪದಿಂದ ಬಿಎಸ್‍ವೈ ಅಧಿಕಾರ ಕಳೆದುಕೊಂಡರು: ಕಾಶಪ್ಪನವರ್

    ಪಾದಯಾತ್ರೆ ಶಾಪದಿಂದ ಬಿಎಸ್‍ವೈ ಅಧಿಕಾರ ಕಳೆದುಕೊಂಡರು: ಕಾಶಪ್ಪನವರ್

    ದಾವಣಗೆರೆ: ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆ ಶಾಪದಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅಧಿಕಾರ ಕಳೆದುಕೊಂಡರು ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಶಾಪದ ಹೇಳಿಕೆಯನ್ನು ನೀಡಿದ್ದಾರೆ.

    ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ನಾನು ಹೇಳಿಕೆ ನೀಡಿದ್ದೆ 2ಎ ಮೀಸಲಾತಿಗಾಗಿ ಶ್ರೀಗಳಿಗೆ ಪಾದಯಾತ್ರೆ ಮಾಡುವಂತೆ ಮಾಡಿದ್ದರು. ಆದರೂ, ಅವರು ನೀಡಿದ ಮಾತನ್ನು ಉಳಿಸಿಕೊಳ್ಳಲಿಲ್ಲ. ಅದೇ ಕಾರಣಕ್ಕೆ ಶ್ರೀಗಳ ಪಾದಯಾತ್ರೆ ಶಾಪ ಅವರಿಗೆ ತಟ್ಟಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದರೆ ಯಾರಾದ್ರು ಸರಿ ಅವರಿಗೆ ಶಾಪ ತಟ್ಟುತ್ತದೆ ಎಂದು ಕಾಶಪ್ಪನವರ್ ಪರೋಕ್ಷವಾಗಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಾಪದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

    ವಚನಾನಂದ ಸ್ವಾಮೀಜಿಗೆ ಟಾಂಗ್ ಕೊಟ್ಟ ಕಾಶಪ್ಪನವರ್, ವಚನಾನಂದ ಸ್ವಾಮೀಜಿ ಸಾಫ್ಟ್ ವೇರ್ ನಾವು ಹಾರ್ಡ್‍ವೇರ್, ಅವರು ಎಸಿರೂಂ ನಲ್ಲಿ ಕೂತು ಹೋರಾಟ ಮಾಡುತ್ತಾರೆ ನಾವು ಬಿಸಿಲಲ್ಲಿ ಹೋರಾಟ ಮಾಡುತ್ತೇವೆ. ಹೋರಾಟಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಯಾವಾಗ ಹೋಗುತ್ತಾರೋ ಅವಾಗ ಬಿಳ್ಕೋಡುಗೆ ಕೊಡುತ್ತೇವೆ ಎಂದರು. ಇದನ್ನೂ ಓದಿ: ಮುಂದಿನ ಮುಖ್ಯಮಂತ್ರಿ ಯತ್ನಾಳ್, ನಾನು ಭವಿಷ್ಯ ನುಡಿಯುತ್ತೇನೆ: ಕಾಶಪ್ಪನವರ್

  • ಪಂಚಮಸಾಲಿಗಳು ನಿಜ ಲಿಂಗಾಯತರು: ಜಯಮೃತ್ಯುಂಜಯ ಸ್ವಾಮೀಜಿ

    ಪಂಚಮಸಾಲಿಗಳು ನಿಜ ಲಿಂಗಾಯತರು: ಜಯಮೃತ್ಯುಂಜಯ ಸ್ವಾಮೀಜಿ

    ಚಿತ್ರದುರ್ಗ: ಪಂಚಮಸಾಲಿಗಳು ಒರಿಜಿನಲ್ ಲಿಂಗಾಯತರು ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ನಗರದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ, 2ಎ ಮೀಸಲಾತಿ ಹಕ್ಕೊತ್ತಾಯಕ್ಕಾಗಿ, ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ದತ್ತಪೀಠದಲ್ಲಿ ಮುಜಾವರ್ ನೇಮಕ ರದ್ದು – ಮತ್ತೆ ಸರ್ಕಾರದ ಅಂಗಳಕ್ಕೆ ಚೆಂಡು

    ಈ ಸಭೆಯಲ್ಲಿ ಮಾತನಾಡಿದ ಅವರು, ನಾಡಿಗೆ ಮೂವರು ಮುಖ್ಯಮಂತ್ರಿಗಳಾದ ಎಸ್. ನಿಜಲಿಂಗಪ್ಪ, ಜೆ.ಹೆಚ್.ಪಾಟೀಲ್, ವೀರೇಂದ್ರ ಪಾಟೀಲ್ ರನ್ನು ನೀಡಿದ ಸಮಾಜ ನಮ್ಮದು. ಅಂತಹ ಸಮಾಜ ಇನ್ನೂ ಹಿಂದೆಯೇ ಉಳಿದಿದೆ. ನಾವು ಮೀಸಲಾತಿಗಾಗಿ ಕ್ರಾಂತಿಯ ಕಿಡಿಗಳಾಗಬೇಕು. ಪಂಚಮಸಾಲಿ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಅಷ್ಟ್ಟು ಶಕ್ತಿಯುತವಾದ ಸಮಾಜ ನಮ್ಮದು ಎಂದರು.

    ಪಂಚಮಸಾಲಿಗಳು ಒರಿಜಿನಲ್ ಲಿಂಗಾಯತರು, ನಮ್ಮ ಪಾದಯಾತ್ರೆಯ ಶಕ್ತಿ ಅತ್ಯುತ್ತಮವಾಗಿತ್ತು. ಸಾವಿರಾರು ವರ್ಷಗಳ ಇತಿಹಾಸದ ನಮ್ಮ ಸಮಾಜಕ್ಕೆ 2ಎ ಮೀಸಲಾತಿಬೇಕು. ಮತ್ತೆ ಹೋರಾಟ ಸತ್ಯಾಗ್ರಹ ಮಾಡೋಣ, ಬೃಹತ್ ರಾಜ್ಯ ಅಭಿಯಾನದಲ್ಲಿ ಸಿದ್ದರಾಗಿ ಎಂದು ಪಂಚಮಸಾಲಿಗಳಿಗೆ ಕರೆ ಕೊಟ್ಟರು. ಇದೇ ವೇಳೆ ಮಾತನಾಡಿದ ವಿಜಯಾನಂದ ಕಾಶಪ್ಪನವರ್, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವಲ್ಲಿ ಕೆಲವು ಲಿಂಗಾಯತ ಮಠಾಧೀಶರು ಮತ್ತು ಕೆಲವು ರಾಜಕಾರಣಿಗಳು ಹಿನ್ನಡೆ ಮಾಡುತ್ತಿದ್ದಾರೆ. ಆದರೆ 2ಎ ಮೀಸಲಾತಿಗಾಗಿ ಮತ್ತೆ ಬೃಹತ್ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ವರದಿ ಬೆನ್ನಲ್ಲೇ ಐವರ ಬಂಧನ, ಬಿಡುಗಡೆ

    ಲಿಂಗಾಯತ ಪಂಚಮಸಾಲಿ ಮೀಸಲಾತಿ ಬೇಡಿಕೆಗಾಗಿ ಮತ್ತೆ ಹೋರಾಟ ನಡೆಸಬೇಕಿದೆ. ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ಆದೇಶದಂತೆ, ಪಂಚಮಸಾಲಿ ಸಮುದಾಯದವರು ಸಿದ್ದರಾಗಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಮಗೆ ಮೀಸಲಾತಿ ಕೊಟ್ಟೇ ಕೊಡುತ್ತಾರೆ. ಈ ವೇಳೆ ಪಂಚಸೇನೆ ರಾಜ್ಯಾಧ್ಯಕ್ಷ ಬಿ.ಎಸ್.ಪಾಟೀಲ್ ಮಾತನಾಡಿ, ನಮ್ಮ ಹೋರಾಟ ಯಾರನ್ನೋ ಮಂತ್ರಿ, ಶಾಸಕರನ್ನು ಮಾಡಲು ಅಲ್ಲ. ನಮ್ಮ ಸಮಾಜದ ಬಡ ಮಕ್ಕಳಿಗೆ, ಬಡ ಜನರಿಗಾಗಿ, ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಮೀಸಲಾತಿ ಅಗತ್ಯ, ಅದಕ್ಕಾಗಿ ಎಲ್ಲರೂ ಒಂದಾಗಿ ಬನ್ನಿ ಎಂದರು.

    ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷರಾದ ಮಹಡಿ ಶಿವಮೂರ್ತಿ, ಗೌಡ ಲಿಂಗಾಯತ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗೇ ಗೌಡ ಪಾಟೀಲ್, ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಜ್ಯೋತಿ ದೇವೇಂದ್ರಪ್ಪ, ಜಿಪಂ ಮಾಜಿ ಅಧ್ಯಕ್ಷ ಸೌಭಾಗ್ಯ ಬಸವರಾಜನ್, ಪಂಚಮಸಾಲಿ ಸಮಾಜದ ಮಹಿಳಾ ಕಾರ್ಯದರ್ಶಿ ರೀನಾ ವೀರಭದ್ರಪ್ಪ, ಮುಖಂಡರಾದ ಜಿತೇಂದ್ರ ಎನ್ ಹುಲಿಕುಂಟೆ, ವೀರಶೈವ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್ ಎಂ ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

  • ನಿರಾಣಿಗೆ ಹುಚ್ಚು ಹಿಡಿದಿದೆ, ತಲೆ ಕೆಟ್ಟಿದೆ – ಕಾಶಪ್ಪನವರ್ ಕಿಡಿ

    ನಿರಾಣಿಗೆ ಹುಚ್ಚು ಹಿಡಿದಿದೆ, ತಲೆ ಕೆಟ್ಟಿದೆ – ಕಾಶಪ್ಪನವರ್ ಕಿಡಿ

    ಗದಗ: ಸಮಾಜ ಪೀಠವನ್ನ ಮಾಡಿದೆ. ನಿರಾಣಿಗೆ ಹುಚ್ಚು ಹಿಡಿದಿದೆ, ತಲೆ ಕೆಟ್ಟಿದೆ ಅಧಿಕಾರದ ವ್ಯಾಮೋಹ ಏರಿದೆ. ಹೀಗಾಗಿ ಬೇಕಾ ಬಿಟ್ಟಿ ಮಾತಾಡುತ್ತಿದ್ದಾರೆ ಎಂದು ವಿಜಯಾನಂದ ಕಾಶಪ್ಪನವರ್ ಕಿಡಿಕಾರಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮಖಂಡಿ ಕಾರ್ಯಕ್ರಮಕ್ಕೆ ತಾಕತ್ತಿದ್ರೆ ಕಲ್ಲು ಹೊಡೆಸಲಿ, ಪಂಚಮಸಾಲಿ ಪ್ರತಿಜ್ಞೆ ಅಭಿಯಾನ ಜಮಖಂಡಿಯಲ್ಲಿ ನಡದೇ ನಡೆಯುತ್ತೆ. ಸಮಾಜದ ಒಳಿತಿಗಾಗಿ ಅವರು ಕೆಲಸ ಮಾಡುತ್ತಿಲ್ಲ. ಕೆಲವರು ಮುಖ್ಯಮಂತ್ರಿಯಾಗ್ಬೇಕು, ಮಂತ್ರಿ ಆಗ್ಬೇಕು ಅನ್ನೋ ನಿಟ್ಟಿನಲ್ಲಿದ್ದಾರೆ. ಮೀಸಲಾತಿ ಸಿಗೋವರೆಗೂ ನಾವು ಹೋರಾಟ ನಿಲ್ಲಿಸಲ್ಲ. ಇವರ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಮುಂದೆ ಒಂದು ದಿನ ಸಮಾಜ ಇಂತವರಿಗೆ ತಕ್ಕಪಾಠ ಕಲಿಸಲಿದೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರದಂತ ದರಿದ್ರ ಸರ್ಕಾರ ಇನ್ನೊಂದಿಲ್ಲ, ದಮ್ಮಯ್ಯ ಅಂತೀನಿ ಕಣ್ರಯ್ಯ ಈ ಸರ್ಕಾರ ಕಿತ್ತು ಬಿಸಾಕಿ: ಸಿದ್ದರಾಮಯ್ಯ

    ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಆರಂಭದಿಂದಲೂ ಕೆಲವರು ಮಾಡುತ್ತಿದ್ದಾರೆ. ಪಂಚಮಸಾಲಿ ಪ್ರತಿಜ್ಞೆ ಅಭಿಯಾನ ಜಮಖಂಡಿಯಲ್ಲಿ ನಡದೇ ನಡೆಯುತ್ತೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

    ಕೂಡಲ ಸಂಗಮ ಪೀಠಕ್ಕೆ ಪರ್ಯಾಯ ಸ್ವಾಮೀಜಿ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಮಾಜದ ಪೀಠವನ್ನು ಯಾರಿಂದಲೂ ಒಡೆಯಲು ಸಾಧ್ಯವಿಲ್ಲ. ಅವರಿಗೆ ತಾಕತ್ ಇದ್ರೆ ಒಡೆದು ತೋರಿಸಲಿ. ಪೀಠ ಬದಲಾಗಲ್ಲ, ಇದೇ ಸ್ವಾಮಿಗಳು ಪೀಠದಲ್ಲಿ ಇರ್ತಾರೆ ಎಂದು ವಿಜಯಾನಂದ ಕಾಶಪ್ಪನವರ್ ತಿಳಿಸಿದರು.

     

  • ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ: ಕಾಶಪ್ಪನವರ್

    ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ: ಕಾಶಪ್ಪನವರ್

    ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ನಡೆಯುತ್ತಿರುವ ಹೋರಾಟ ಇಂದು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದು, ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಈ ಬಗ್ಗೆ ಮಾತನಾಡಿದ ಕಾಶಪ್ಪನವರ್, ಸಿಎಂ ಬೊಮ್ಮಾಯಿಯವರು ಮೀಸಲಾತಿ ನೀಡಿದರೆ ಅವರಿಗೂ ಗೌರವ, ನಮಗೂ ಗೌರವ. ಹೋರಾಟ ಬೆಂಗಳೂರು ತಲುಪುವ ಮುನ್ನ ಸರ್ಕಾರದಿಂದ ಸ್ಪಷ್ಟ ಉತ್ತರ ದೊರೆಯಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪರಿಂದ ನಿರಾಣಿಗೆ ಸಿಎಂ ಸ್ಥಾನ ಕೈತಪ್ಪಿದೆ, ಯತ್ನಾಳ್ ಬಾಹುಬಲಿ: ಜಯಮೃತ್ಯುಂಜಯ ಸ್ವಾಮೀಜಿ

    ಸಮಾವೇಶಕ್ಕೂ ಮುನ್ನ ಸಮುದಾಯದ ಬಾಂಧವರು ಚೆನ್ನಮ್ಮ ವೃತ್ತದಿಂದ ಬೈಕ್ ರ‍್ಯಾಲಿ ನಡೆಸಿದರು. ಚೆನ್ನಮ್ಮನ ಪ್ರತಿಮೆಗೆ ಮಾರ್ಲಾಪಣೆ ಮಾಡಿ ರ‍್ಯಾಲಿ ಆರಂಭಿಸಿದರು. ಪಂಚಮಸಾಲಿ ಪೀಠದ ಜಯಮೃತ್ಯುಂಜಯ್ಯ ಸ್ವಾಮೀಜಿ. ಶಾಸಕ ಅರವಿಂದ ಬೆಲ್ಲದ್. ಮಾಜಿ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ರ‍್ಯಾಲಿ ನಡೆಯಿತು. ಈ ವೇಳೆ ಮಾತನಾಡಿದ ಜಯ ಮೃತ್ಯುಂಜಯ್ಯ ಸ್ವಾಮೀಜಿ, ಸಪ್ಟೆಂಬರ್ 15 ರೊಳಗೆ ಮೀಸಲಾತಿ ನೀಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಈಗ ಕಾಲಾವಕಾಶ ಮೀರಿದೆ. ನಮ್ಮಹೋರಾಟ 31ನೇ ದಿನಕ್ಕೆ ಕಾಲಿರಿಸಿದೆ, ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ನೀಡುತ್ತಾರೆ ಎನ್ನುವ ನಂಬಿಕೆ ಇದೆ, ಸದನದಲ್ಲೂ ನಮಗೆ ಸರಿಯಾಗಿ ಉತ್ತರ ನೀಡಿಲ್ಲ, ನನ್ನ ಜೊತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ, ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿ, ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ನಾನು ಸದನದ ಬಾವಿಯೊಳಗೆ ಇಳಿದು ಹೋರಾಟ ಮಾಡಿದ್ದೇವೆ, ನಮ್ಮ ಹೋರಾಟದ ವೇಳೆ ಸ್ಪಷ್ಟ ಉತ್ತರ ಸಿಕ್ಕಿಲ್ಲ, ಸಿಎಂ ನಮಗೆ ನ್ಯಾಯ ಕೊಡುತ್ತಾರೆ ಎನ್ನುವ ನಂಬಿಕೆ ಇದೆ. ಆಯೋಗದ ವರದಿ ಬೇಗ ತರಿಸಿಕೊಂಡು ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಗದ್ದೆಗೆ ಹೋಗೋ ನೆನಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಆರೋಪಿಗೆ ಜೀವವಾಧಿ ಶಿಕ್ಷೆ

  • ಮುಂದಿನ ಮುಖ್ಯಮಂತ್ರಿ ಯತ್ನಾಳ್, ನಾನು ಭವಿಷ್ಯ ನುಡಿಯುತ್ತೇನೆ: ಕಾಶಪ್ಪನವರ್

    ಮುಂದಿನ ಮುಖ್ಯಮಂತ್ರಿ ಯತ್ನಾಳ್, ನಾನು ಭವಿಷ್ಯ ನುಡಿಯುತ್ತೇನೆ: ಕಾಶಪ್ಪನವರ್

    ಹಾವೇರಿ: ನಾನು ಭವಿಷ್ಯ ನುಡಿಯುತ್ತೇನೆ ಮುಂದಿನ ಮುಖ್ಯಮಂತ್ರಿ ನಮ್ಮ ಬಸನಗೌಡ ಪಾಟೀಲ್ ಯತ್ನಾಳ್. ಆ ಶಕ್ತಿ ಸಾಮರ್ಥ್ಯ ಅವರಲ್ಲಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ನಡೆದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಮುಂದಿನ ಶಾಸಕರು ಯಾರು ಅಂದ್ರೆ ಅದು ಪಂಚಮಸಾಲಿ ಸಮಾಜದವರು ಆಗಿರಬೇಕು. ನೀವು ಮನಸ್ಸು ಮಾಡಿದ್ರೆ ಇಲ್ಲಿಂದ ನಮ್ಮವರು ಒಬ್ಬರು ಶಾಸಕರಾಗೇ ಆಗ್ತಾರೆ. ಶಾಸಕ ಯತ್ನಾಳ್ ಮಂತ್ರಿ ಆಗ್ತಾರೆ, ಮುಖ್ಯಮಂತ್ರಿ ಆಗ್ತಾರೆ ಎಂದು ಅನೇಕರು ಹೊಟ್ಟೆಕಿಚ್ಚು ಪಟ್ಟರು. ನಾವು ಮನಸ್ಸು ಮಾಡಿದ್ದರೆ ಯತ್ನಾಳ್ ಮುಖ್ಯಮಂತ್ರಿ ಆಗಬಹುದಿತ್ತು. ನಮ್ಮ ಸಮಾಜಕ್ಕೆ ಮೊದಲು ಮೀಸಲಾತಿ ಕೊಡಿ, ಆಮೇಲೆ ಮಂತ್ರಿ, ಮುಖ್ಯಮಂತ್ರಿ ಎಂದು ಯತ್ನಾಳ್ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿಗಳಂತೆ ನಮ್ಮ ಸಮಾಜಕ್ಕೆ ಮೋಸ ಮಾಡುವುದಿಲ್ಲ: ಯತ್ನಾಳ್

    ನಮ್ಮ ಜೀವ ಹೋದರೂ ಪರವಾಗಿಲ್ಲ, ಸಮಾಜಕ್ಕೆ ಮೀಸಲಾತಿ ಸಿಗಬೇಕು. ಕೆಲವರು ಇದ್ದಾರೆ. ಅವರು ಮಂತ್ರಿ, ಮುಖ್ಯಮಂತ್ರಿ ಆಗಬೇಕಂತೆ. ಅದಕ್ಕಾಗಿ ಮೂರನೇ ಒಕ್ಕೂಟ ಮಾಡುವುದಕ್ಕೆ ಹೊರಟಿದ್ದಾರೆ. ಸಿದ್ದಲಿಂಗ ಸ್ವಾಮಿಗಳು ಸೇರಿದಂತೆ ಕೆಲವು ಸ್ವಾಮೀಜಿಗಳೆ ನೀವು ದಯವಿಟ್ಟು ಸಮಾಜ ಒಡೆಯೋ ಕೆಲಸ ಮಾಡಬೇಡಿ. ಸಮಾಜ ಒಗ್ಗಟ್ಟಾಗಿದೆ, ಸಮಾಜಕ್ಕೆ ಮೀಸಲಾತಿ ಬೇಕಾಗಿದೆ. ಅದು ಹೇಗೆ ನೀವು ಮತ್ತೊಂದು ಪೀಠ ಮಾಡುತ್ತಿರಿ ನಾನೂ ನೋಡುತ್ತೇನೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ನಿರಾಣಿಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ: ವಿಜಯಾನಂದ ಕಾಶಪ್ಪನವರ್

    ನಮ್ಮ ಸಮಾಜಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒಬ್ಬರೆ ಶ್ರೀಗಳು. ಅವರ ನೇತೃತ್ವದಲ್ಲಿ ನಾವು ಮೀಸಲಾತಿ ಪಡೆಯಬೇಕಾಗಿದೆ. ನಮಗೆ ರಾಜಕೀಯ ಮೀಸಲಾತಿ ಬೇಕಾಗಿಲ್ಲ. ನಾನು ಮಂತ್ರಿ, ಮುಖ್ಯಮಂತ್ರಿ ಆಗಬೇಕು ಎಂದು ಹೊರಟಿಲ್ಲ. ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ಮೀಸಲಾತಿಯಿಂದ ಅನುಕೂಲ ಆಗುತ್ತದೆ. ಸಂದರ್ಭ ಬಂದರೆ ನಾನು ರಾಜಕೀಯ ಬಿಡುತ್ತೇನೆ, ಆದರೆ ಮೀಸಲಾತಿ ಹೋರಾಟ ಬಿಡುವುದಿಲ್ಲ. ಒಕ್ಕೂಟ ಮಾಡಿಕೊಂಡು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ ಪುಣ್ಯಾತ್ಮರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.