ತುಮಕೂರು: ರಾಜ್ಯದಲ್ಲಿ ಈಗ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ, ಒಂದು ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೊಂದು ಡಿಫ್ಯಾಕ್ಟ್ ಸಿಎಂ ವಿಜಯೇಂದ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವ್ಯಂಗ್ಯವಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹ್ಮದ್ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ಗೂ ಪಾಲು ಇದೆ ಎಂಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಅಲ್ಲಗಳೆದರು. ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ, ಅವರ ಪಕ್ಷದ ಮುಖಂಡರು ಹೇಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಹಮಾರ ಕುತ್ತಾ ಹಮಾರ ಗಲ್ಲಿ ಮೇ ಷೇರ್ ತರಹ ಬಿಎಸ್ವೈ: ಸಿದ್ದರಾಮಯ್ಯ
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ತನಿಖೆ ಮಾಡಿ ಎಂದು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಟೆಂಡರ್ ಪ್ರಕ್ರಿಯೆಯಲ್ಲಿ ಹಣಲೂಟಿ ಮಾಡಿದ್ದಾರೆ ಎಂದು ಮಂತ್ರಿಗಳು, ಮಾಜಿ ಮಂತ್ರಿಗಳು ಹೇಳುತ್ತಿದ್ದಾರೆ. ಹೀಗಾಗಿ ಇದೊಂದು ಭ್ರಷ್ಟ ಸರ್ಕಾರ ನಾಯಕನಿಲ್ಲದ ಸರ್ಕಾರವಾಗಿದೆ ಎಂದು ಟೀಕಿಸಿದರು.
ಮಂಡ್ಯ: ಕೆ.ಆರ್ ಪೇಟೆ ಉಪಚುನಾವಣೆಯ ಫಲಿತಾಂಶ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಉಲ್ಟಾ ಮಾಡುವುದರ ಜೊತೆಗೆ ಜೆಡಿಎಸ್ ಭದ್ರಕೋಟೆಯನ್ನು ಒಡೆದು ಬಿಜೆಪಿ ತನ್ನ ಅಸ್ತಿತ್ವಕ್ಕೆ ಇದೀಗ ಭದ್ರ ಬುನಾದಿ ಹಾಕಿಕೊಂಡಿದೆ.
ತೋಟದ ಮನೆಯ ಗೆಲುವಿನ ರಹಸ್ಯ:
ವಿಜಯೇಂದ್ರ ಉಸ್ತುವಾರಿ ವಹಿಸಿಕೊಂಡರೂ ಪ್ರತಿದಿನ ಬೆಂಗಳೂರಿನಿಂದ ಬರುವುದು ಕಷ್ಟ. ಮೈಸೂರಿನ ಯಾವುದೋ ಹೋಟೆಲ್ನಲ್ಲಿ ಉಳಿದುಕೊಂಡು ಬರಬಹುದು ಎಂದು ಬಿಜೆಪಿ ಕಾರ್ಯಕರ್ತರು ಊಹಿಸಿದ್ದರು. ಆದರೆ ವಿಜಯೇಂದ್ರ ಉಪಚುನಾವಣೆ ಘೋಷಣೆ ಆದಾಗಿನಿಂದಲೂ ಕೆಆರ್ಪೇಟೆ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಿದ್ದರು.
ತನ್ನ ಮೇಲೆ ಹೊರಿಸಿದ್ದ ಉಸ್ತುವಾರಿ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕೆ.ಆರ್ ಪೇಟೆ ಕ್ಷೇತ್ರದಲ್ಲೇ 15 ದಿನಗಳ ಕಾಲ ವಾಸ್ತವ್ಯ ಹೂಡಿದ್ದರು. ಅದು ಕೂಡ ಒಂದು ತೋಟದ ಮನೆಯಲ್ಲಿ. ಕೆ.ಆರ್ ಪೇಟೆಯಿಂದ 4 ಕಿ.ಮೀ ದೂರವಿರುವ ಪುರ ಗ್ರಾಮದ ಹೊರಭಾಗದ ಒಂದು ತೋಟದ ಮನೆಯಲ್ಲಿ ವಿಜಯೇಂದ್ರ ನೆಲೆಸಿದ್ದರು. ಇದನ್ನು ಓದಿ: ಅಭಿವೃದ್ಧಿಯೇ ನನ್ನ ಗುರಿ, ತಾಲೂಕಿನ ಕನಸನ್ನು ನನಸು ಮಾಡ್ತೀನಿ: ನಾರಾಯಣ ಗೌಡ
ವಿಜಯೇಂದ್ರ ಈ ತೋಟದ ಮನೆಯಲ್ಲಿ ಸುಮ್ಮನೆ ಮಲಗಿಕೊಂಡು ಅಥವಾ ವಿಶ್ರಾಂತಿ ಪಡೆಯುತ್ತ ಕಾಲ ಕಳೆಯುತ್ತಿರಲಿಲ್ಲ. ಈ ತೋಟದ ಮನೆಯಲ್ಲಿ ಜೆಡಿಎಸ್ ಭದ್ರ ಕೋಟೆಯನ್ನು ಭೇದಿಸುವುದು ಹೇಗೆ ಎಂದು ರಣತಂತ್ರವನ್ನು ಹೆಣೆಯುತ್ತಿದ್ದರು. ಪ್ರತಿನಿತ್ಯ ಈ ತೋಟದ ಮನೆಯಲ್ಲಿ ಕಾರ್ಯಕರ್ತರನ್ನು ಕರೆದು ಸಭೆ ಮಾಡಿ ಯಾವ ಊರುಗಳಲ್ಲಿ ಎಷ್ಟು ಮತಗಳಿವೆ ಎಷ್ಟು ಮತಗಳನ್ನು ಪಡೆಯಬೇಕು ಎಂಬ ಸ್ಟಾಟರ್ಜಿ ಮಾಡುತ್ತಿದ್ದರು. ಇದನ್ನೂ ಓದಿ: 43 ರೋಡ್ ಶೋ, 10 ಬೈಕ್ ರ್ಯಾಲಿ – ತವರಿನಲ್ಲಿ ಅಪ್ಪನ ಕೈಲಾಗದ್ದು ಮಗನಿಗೆ ಸಾಧ್ಯವಾಗಿದ್ದು ಹೇಗೆ?
ಪ್ರಶಾಂತ ವಾತಾವರಣ:
ಕೆ.ಆರ್ ಪೇಟೆಯ ಹೊರವಲಯದ ತೋಟದ ಮನೆಯಲ್ಲಿ ಉಳಿದುಕೊಂಡಿದ್ದ ವಿಜಯೇಂದ್ರ ಅಲ್ಲಿನ ಪ್ರಶಾಂತ ವಾತಾವರಣವನ್ನು ಸವಿಯುತ್ತಿದ್ದರು. ಪ್ರತಿದಿನ ವಿಜಯೇಂದ್ರ ತೋಟದಲ್ಲಿ ಇದ್ದ ಕೆರೆಯ ಏರಿ ಮೇಲೆ ವಾಕ್ ಮಾಡುತ್ತಿದ್ದರು. ಇದಲ್ಲದೇ ಇಡೀ ತೋಟವನ್ನು ಒಂದು ಸುತ್ತು ಹಾಕುತ್ತಿದ್ದರು. ವಿಜಯೇಂದ್ರ ರಣತಂತ್ರ ಹೆಣೆಯಲು ಈ ಪ್ರಶಾಂತವಾದ ವಾತಾವರಣ ತುಂಬಾ ಅನುಕೂಲವಾಗಿದೆ ಎಂದು ಅವರ ಆಪ್ತರು ಸಹ ಹೇಳಿದ್ದಾರೆ. ಇದಲ್ಲದೇ ಈ ತೋಟದ ಮನೆ ವಿಜಯೇಂದ್ರ ಅವರಿಗೆ ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಅದೃಷ್ಟವನ್ನು ತಂದುಕೊಟ್ಟಿದೆ ಎಂದು ಸಹ ವಿಜಯೇಂದ್ರ ಆಪ್ತರು ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೇಳುತ್ತಿದ್ದಾರೆ.