Tag: Vijugowda Patil

  • ವಿಜಯಪುರ | ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

    ವಿಜಯಪುರ | ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

    ವಿಜಯಪುರ: ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ (BJP) ಮುಖಂಡ ವಿಜೂಗೌಡ ಪಾಟೀಲ್ (Vijugouda Patil) ಪುತ್ರ ಹಲ್ಲೆ ನಡೆಸಿರುವ ಘಟನೆ ವಿಜಯಪುರ-ಕಲಬುರಗಿ ಟೋಲ್‌ನಲ್ಲಿ ನಡೆದಿದೆ.

    ಬಿಜೆಪಿ ಮುಖಂಡ ವಿಜೂಗೌಡ ಪಾಟೀಲ್ ಅವರ ಪುತ್ರ ಸಮರ್ಥಗೌಡ ಪಾಟೀಲ್ ಹಾಗೂ ಸ್ನೇಹಿತರು ವಿಜಯಪುರದಿಂದ ಕಪ್ಪು ಬಣ್ಣದ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟಿದ್ದರು. ಈ ವೇಳೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯಿರುವ ಟೋಲ್‌ನಲ್ಲಿ ಹಣ ಪಾವತಿಸಲು ಕೇಳಿದ್ದಾರೆ. ಆಗ ಸಮರ್ಥಗೌಡ ನಾನು ವಿಜೂಗೌಡ ಪಾಟೀಲ್ ಪುತ್ರ ಎಂದು ಹೇಳಿದ್ದಾನೆ. ಆಗ ಟೋಲ್ ಸಿಬ್ಬಂದಿ ಯಾವ ವಿಜೂಗೌಡ ಎಂದು ಕೇಳಿದ್ದಾರೆ. ಇದರಿಂದ ಕೋಪಗೊಂಡ ಸಮರ್ಥಗೌಡ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ.ಇದನ್ನೂ ಓದಿ: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡು ಪ್ರಮೋಷನ್: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

    ಸಮರ್ಥಗೌಡ ಮಾತ್ರವಲ್ಲದೇ ಆತನ ಸ್ನೇಹಿತರು ಕೂಡ ಹಲ್ಲೆ ನಡೆಸಿದ್ದಾರೆ. ಇದರಿಂದ ಟೋಲ್ ಸಿಬ್ಬಂದಿ ಹಣ ತೆಗೆದುಕೊಳ್ಳದೇ ಹಾಗಾಯೇ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಹಲ್ಲೆ ನಡೆಸಿದ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಗಾಯಾಳು ಸಂಗಪ್ಪ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದು, ಟೋಲ್ ಸಿಬ್ಬಂದಿ ದೂರು ದಾಖಲಿಸಲು ಮುಂದಾಗಿದ್ದಾರೆ.ಇದನ್ನೂ ಓದಿ: ಚಿತ್ತಾಪುರ RSS ಪಥಸಂಚಲನ ವಿವಾದ – ನ.5ಕ್ಕೆ ಬೆಂಗಳೂರಲ್ಲಿ ಶಾಂತಿಸಭೆ, ನ.7ಕ್ಕೆ ಮತ್ತೆ ವಿಚಾರಣೆ

  • ಬಿಜೆಪಿ ಕೂಸಿಗೆ ಕಾಂಗ್ರೆಸ್ ಅಪ್ಪ ಆಗಲು ಹೊರಟಿದೆ: ವಿಜುಗೌಡ ಪಾಟೀಲ್

    ಬಿಜೆಪಿ ಕೂಸಿಗೆ ಕಾಂಗ್ರೆಸ್ ಅಪ್ಪ ಆಗಲು ಹೊರಟಿದೆ: ವಿಜುಗೌಡ ಪಾಟೀಲ್

    ವಿಜಯಪುರ: ಬಿಜೆಪಿ ಹುಟ್ಟಿಸಿದ ಕೂಸಿಗೆ ಕಾಂಗ್ರೆಸ್ ತಂದೆಯಾಗಲು ಹೊರಟಿದೆ ಎಂದು ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ್ ವ್ಯಂಗ್ಯವಾಡಿದರು.

    ವಿಜಯಪುರ ನಗರದಲ್ಲಿಂದು ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಫುಡ್ ಪಾರ್ಕ್ ನಿರ್ಮಾಣಕ್ಕೆ ಈ ಹಿಂದೆಯೇ ಜಿಲ್ಲೆಯ ರೈತ ಮುಖಂಡರೊಂದಿಗೆ ಚರ್ಚೆ ಮಾಡಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದೆ. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಬಳಿಕ ಕೃಷಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಗ ನನ್ನ ಮನೆಗೆ ಬಂದು ನನ್ನನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದರು. ವಿಶೇಷವಾಗಿ ನನ್ನ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಯೋಜನೆಯಾದ್ದರಿಂದ ನಾನೂ ವಿಶೇಷವಾಗಿ ಕಾಳಜಿ ವಹಿಸಿದ್ದೆ. ಆದರೆ ಕೆಲವರು ಅದನ್ನು ಹೈಜಾಕ್ ಮಾಡಲು ಹೊರಟಿದ್ದಾರೆ. ಇದು ಯಾರದೋ ಕೂಸಿಗೆ ಯಾರೋ ಹೆಸರಿಟ್ಟಿಂತೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಲೇವಡಿ ಮಾಡಿದರು.

    ಇನ್ನು ನಾವು ಹುಟ್ಟಿಸಿದ ಕೂಸಿಗೆ ನಾವೇ ಹೆಸರಿಡಬೇಕು. ನಾಮಕರಣಕ್ಕೆ ನಾವೇ ಕರೆಯುತ್ತೇವೆ. ಬೇಕಾದರೆ ಬರಲಿ, ಅದನ್ನು ಬಿಟ್ಟು ನಮ್ಮ ಕೂಸಿಗೆ ಕಾಂಗ್ರೆಸ್ ನವರು ಹೆಸರಿಡಲು ಓಡಾಡುತ್ತಿರುವುದು ಹಾಸ್ಯಸ್ಪದ ಎಂದರು.

    ಸಿಂದಗಿ ಮತಕ್ಷೇತ್ರದ ಉಪಚುನಾವಣೆ ಕುರಿತು ಮಾತನಾಡುತ್ತಾ, ಸಿಂದಗಿ ನನ್ನ ತವರು ಕ್ಷೇತ್ರ. ಹುಟ್ಟಿ ಬೆಳೆದಿದ್ದು ಸಿಂದಗಿಯಲ್ಲೇ. ನಮ್ಮ ತಂದೆ ತೀರಿದ ಬಳಿಕ ವಿಜಯಪುರಕ್ಕೆ ಬಂದೆ. ಮೂವರು ಸಹೋದರರು ಹಾಗೂ ಅಕ್ಕ ವಿಜಯಪುರಕ್ಕೆ ಬಂದೆವು. ನಮ್ಮ ಆಸ್ತಿ ಸಿಂದಗಿಯಲ್ಲಿದೆ. ಅಲ್ಲಿನವರು ಅಭಿಮಾನದಿಂದ ಸನ್ಮಾನ ಮಾಡಿದರು. ಮೆರವಣಿಗೆ ಮಾಡುತ್ತಾರೆಂದು ಅನ್ನಿಸಿರಲಿಲ್ಲ. ಅವರ ಅಭಿಮಾನಕ್ಕೆ ಋಣಿಯಾಗಿದ್ದೇನೆ, ನನಗೆ ಸಿಂದಗಿ ಮತಕ್ಷೇತ್ರದ ಕುರಿತು ಒಲವಿಲ್ಲ, ಹೈಕಮಾಂಡ್ ಕಳುಹಿಸಿದರೆ ಅವರ ಹೇಳಿಕೆಗೆ ನಾನು ಬದ್ಧ ಎಂದು ಸ್ಪರ್ಧೆ ವಿಚಾರಕ್ಕೆ ಅಡ್ಡ ಗೋಡೆ ಮೇಲೆ ದೀಪ ಇಟ್ಟರು.