Tag: Vikrant Rona

  • ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

    ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿಸಿರುವ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣದಿಂದ ಚಿತ್ರತಂಡ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡುವುದಾಗಿ ಘೋಷಿಸಿದೆ.

    ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಸಿನಿಮಾ ಫೆಬ್ರವರಿ 24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಸಿನಿಮಾ ಸೇರಿದಂತೆ ಎಲ್ಲಾ ವಾಣಿಜ್ಯ ಉದ್ಯಮಗಳು ಆತಂಕಕ್ಕೆ ಒಳಗಾಗಿವೆ. ಹೀಗಾಗಿ ಸಿನಿಮಾವನ್ನು ಮುಂದೂಡುವುದಾಗಿ ಚಿತ್ರ ತಂಡ ಘೋಷಿಸಿದೆ. ಇದನ್ನೂ ಓದಿ: ಚಿರು ಸ್ನೇಹಿತನ ಮಗನಿಗೆ ಹೇರ್ ಸ್ಟೈಲಿಸ್ಟ್ ಆದ ರಾಯನ್- ಫೋಟೋ ವೈರಲ್

    ‘ನಮ್ಮ ಕನಸು ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿಸಿದ ನಿಯಮಾವಳಿಗಳು, ಪ್ರಪಂಚದಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ. ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ, ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎಂಬ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಇನ್‍ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನಿದ್ದೆಗಳಿಲ್ಲದ ರಾತ್ರಿ ಕಳೆಯಲು ಸಿದ್ಧರಾಗಿ – ಪ್ರಿಯಾಂಕಾಗೆ ಅನುಷ್ಕಾ ಶರ್ಮಾ ವಿಶ್

     

    View this post on Instagram

     

    A post shared by Manjunathgowda (@jack_manjunath_)

    ಬಹು ನಿರೀಕ್ಷಿತ ಸ್ಯಾಂಡಲ್‍ವುಡ್ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಒಟಿಟಿ ಮುಖಾಂತರ ಸಿನಿಮಾವನ್ನು ಬಿಡುಗಡೆ ಮಾಡಲು ಒಪ್ಪದ ಚಿತ್ರತಂಡ ನೇರವಾಗಿ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ಸರಿಯಾದ ಸಮಯಕ್ಕೆ ನಿರೀಕ್ಷಿಸುತ್ತಿದೆ.

  • ವಿಕ್ರಾಂತ್ ರೋಣ ಚಿತ್ರಕ್ಕೆ ಭರ್ಜರಿ ಆಫರ್ ನೀಡಿದ ಓಟಿಟಿ!

    ವಿಕ್ರಾಂತ್ ರೋಣ ಚಿತ್ರಕ್ಕೆ ಭರ್ಜರಿ ಆಫರ್ ನೀಡಿದ ಓಟಿಟಿ!

    ಬೆಂಗಳೂರು: ಕೊರೊನಾ ಮೂರನೇ ಅಲೆಯಿಂದ ಆನಿಶ್ಚಿತತೆ ಉಂಟಾಗಿರುವ ಈ ಸಂದರ್ಭದಲ್ಲಿ ಓಟಿಟಿಗಳು ಬಹುನೀರಿಕ್ಷಿತ ಸಿನಿಮಾಗಳ ಹಿಂದೆ ಬಿದ್ದಿವೆ. ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾಗೆ ಭರ್ಜರಿ ಆಫರ್ ಬಂದಿದೆ.

    3ಡಿ ತಂತ್ರಜ್ಞಾನದಲ್ಲಿ, ಭರ್ಜರಿ ವೆಚ್ಚದಲ್ಲಿ ತಯಾರಾಗಿರುವ ವಿಕ್ರಾಂತ್ ರೋಣದ, ನೇರ ಪ್ರಸಾದ ಹಕ್ಕುಗಳಿಗಾಗಿ ಎರಡು ಓಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ. ಇದನ್ನೂ ಓದಿ: ವಯೋಮಿತಿ ಏರಿಕೆ ಭೀತಿ- ಮುಸ್ಲಿಮರು ತರಾತುರಿ ಲಗ್ನ

    ಕನ್ನಡ, ಹಿಂದಿ, ತಮಿಳು, ತೆಲಗು, ಮಲಯಾಳಂ, ಇಂಗ್ಲಿಷ್ ಭಾಷೆಯಲ್ಲೂ ನೇರವಾಗಿ ಓಟಿಟಿಯಲ್ಲಿ ಪ್ರಸಾರ ಮಾಡಲು ಓಟಿಟಿ ಆಫರ್ ನೀಡಿದೆ. ಇದಕ್ಕಾಗಿ ನಿರೀಕ್ಷೆಗೂ ಮೀರಿದ ಹಣದ ಆಫರ್ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 2 ಓಟಿಟಿಗಳಲ್ಲಿ ಸ್ಪರ್ಧೇ ನಡೆಯುತ್ತಿದ್ದು, ಚಿತ್ರತಂಡ ಮಾತ್ರ ಈ ಕುರಿತಾಗಿ ಯಾವುದೇ ಮಾಹಿತಿ ನೀಡಿಲ್ಲ. ಗಾಂಧಿನಗರದಲ್ಲಿ ಚಾಲ್ತಿಯಲ್ಲಿರುವ ವದಂತಿಯ ಪ್ರಕಾರ ಓಟಿಟಿಯಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿ ಹಣ ನೀಡಲು ಮುಂದೆ ಬಂದಿದೆ. ಈ ಮೊತ್ತವನ್ನು ನಿರ್ಮಾಕರು ಖಚಿತ ಪಡಿಸಿಲ್ಲ. ಆದರೆ ಹಬ್ಬಿರುವ ಸುದ್ದಿಯ ಪ್ರಕಾರ ಓಟಿಟಿ ಪ್ರಸಾರ ಹಕ್ಕುಗಳಿಗೆ ದಕ್ಷಿಣ ಭಾರತೀಯ ಚಿತ್ರವೊಂದಕ್ಕೆ ಬಂದಿರುವ ಅತೀ ಹೆಚ್ಚಿನ ಆಫರ್ ಇದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ


    ಈ ಕುರಿತಾಗಿ ಮಾತನಾಡಿದ ಚಿತ್ರದ ನಿರ್ಮಾಪಕ ಜಾಕ್ ಮಂಜು, ಓಟಿಟಿಯಲ್ಲಿ ನೇರವಾಗಿ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೆ 2 ಓಟಿಟಿ ಸಂಸ್ಥೆಗಳು ಬಂದಿವೆ. ಒಬ್ಬರು ಈಗಾಗಲೇ ಇಂತಿಷ್ಟು ಹಣವನ್ನು ಕೊಡುವುದಾಗಿ ಹೇಳಿದ್ದಾರೆ. ದೊಡ್ಡ ಮೊತ್ತವನ್ನೇ ಆಫರ್ ಮಾಡಿದ್ದಾರೆ. ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವ ಉದ್ದೇಶ ಇದೆ. ಆ ಕಾರಣಕ್ಕಾಗಿ 3ಡಿ ತಂತ್ರಜ್ಞಾನದಲ್ಲಿ ಸಿನಿಮಾವನ್ನು ಮಾಡಲಾಗಿದೆ ಎಂದಿದ್ದಾರೆ.

    ಸುದೀಪ್ ಅವರಿಗೆ ಇರುವ ಅಭಿಮಾನಿಗಳ ಬಗ್ಗೆ ಗೊತ್ತಿದೆ. ಮತ್ತೋಂದು ಕಡೆ ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತ ವೇಗವಾಗಿ ಹರಡುತ್ತಿದೆ. ವೀಕೆಂಡ್ ಕರ್ಫ್ಯೂ ಮತ್ತು ಶೇ.50 ರಷ್ಟು ಸೀಟು ಭರ್ತಿ ಆದೇಶ ಜಾರಿಯಾಗಿದ್ದು, ಇದು ಮತ್ತಷ್ಟು ಹೆಚ್ಚಾದರೆ ಎನ್ನುವ ಯೋಚನೆ ಕೂಡಾ ಇದೆ. ಈ ವಿಚಾರವಾಗಿ ಸುದೀಪ್ ಅವರ ಜೊತೆಗೆ ಮಾತನಾಡಿ ಎರಡ್ಮೂರು ವಾರಗಳ ನಂತರ ಸೂಕ್ತ ನಿರ್ಧಾರಕ್ಕೆ ಬರುತ್ತೇವೆ, ಸದ್ಯಕ್ಕಂತೂ ಓಟಿಟಿಯಿಂದ ಬೇಡಿಕೆ ಬಂದಿರುವುದು ನಿಜ ಎಂದಿದ್ದಾರೆ.

    ಅನೂಪ್ ಭಂಡಾರಿ ನಿರ್ದೇಶನ, ಕಾಜ್ ಮಂಜು ನಿರ್ಮಿಸಿರುವ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಫೆಬ್ರವರಿ 24ರಂದು ತೆರೆಗೆ ಬರುವ ತಯಾರಿಯಲ್ಲಿತ್ತು. ಆದರೆ ಕೊರೊನಾ ಕಾರಣದಿಂದಗಿ ಎಲ್ಲೂ ಅನಿಶ್ಷಿತವಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು ಪರದೆ ಮೇಲೆ ನೋಡಲು ಕಾದುಕುಳಿತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.

  • ವಿಕ್ರಾಂತ್ ರೋಣ ಡಿಸೆಂಬರ್​ನಲ್ಲಿ ಬಿಡುಗಡೆ ಸಾಧ್ಯತೆ

    ವಿಕ್ರಾಂತ್ ರೋಣ ಡಿಸೆಂಬರ್​ನಲ್ಲಿ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

    ನಿರ್ಮಾಪಕ ಜಾಕ್ ಮಂಜು ‘ವಿಕ್ರಾಂತ್ ರೋಣ’ ಸಿನಿಮಾ ಕುರಿತು ಮಾತನಾಡಿದ್ದು, ಪರಿಸ್ಥಿತಿ ಸರಿಯಾಗಿದ್ದರೆ ಡಿಸೆಂಬರ್‍ನಲ್ಲಿ ಚಿತ್ರವನ್ನು ರಿಲೀಸ್ ಮಾಡುತ್ತೇವೆ. ಡಿಸೆಂಬರ್‍ನಲ್ಲಿ ರಿಲೀಸ್ ಮಾಡುವ ಉದ್ದೇಶ ಇಟ್ಟುಕೊಂಡು ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಆದರೆ ದಿನಾಂಕವನ್ನು ನಾವು ಘೋಷಿಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್

    ದಿನಾಂಕ ಹೇಳಿ ಮತ್ತೆ ಮುಂದೆ ಹೋಗುವುದು ನಮಗೆ ಇಷ್ಟವಿಲ್ಲ. ಸಿನಿಮಾ ಬಿಡುಗಡೆಗೆ ಇನ್ನೂ 10 ದಿನ ಇದೆ ಎಂದಾಗ ದಿನಾಂಕ ಕುರಿತು ನಾವು ಹೇಳುತ್ತೇವೆ ಎಂದು ಹೇಳಿದ್ದಾರೆ.

    ಈ ಸಮಯಕ್ಕೆ ಬೇರೆ ರಾಜ್ಯಗಳ ಚಿತ್ರರಂಗದಸ್ಥಿತಿಯನ್ನ ನೋಡಿ ಆ ಭಾಷೆಗಳಲ್ಲಿ ರಿಲೀಸ್ ಮಾಡುವುದರ ಬಗ್ಗೆ ನಾವು ಯೋಚಿಸುತ್ತೇವೆ. ಅಂಧ್ರದಲ್ಲಿ 100% ಸೀಟು ಭರ್ತಿಗೆ ಆದೇಶ ಬರಲಿದೆ. ಅದು ಅಲ್ಲದೇ ಬೇರೆ ಭಾಷೆಗಳಲ್ಲಿ ರಿಲೀಸ್ ಮಾಡಲು ಸಾಕಷ್ಟು ಖರ್ಚು ಮಾಡಬೇಕು. ಇವೆಲ್ಲ ಸೇರಿ ಸಿನಿಮಾದ ಬಜೆಟ್ 100 ಕೋಟಿ ರೂ. ಆಗಬಹುದು ಎಂದಿದ್ದಾರೆ. ಇದನ್ನೂ ಓದಿ: ಮಗನಿಗೆ 6 ತಿಂಗಳು ತುಂಬಿರೋ ಸಂಭ್ರಮ- ಮುಯೂರಿ ಫೋಟೋಶೂಟ್

    ಓಟಿಟಿಗಳಿಂದ ನಮಗೆ ಸಾಕಷ್ಟು ಆಫರ್ ಬರುತ್ತಿದೆ. ಆದರೆ ನಾವು ಅಲ್ಲಿ ಈ ಸಿನಿಮಾವನ್ನು ಬಿಡುವುದಿಲ್ಲ. ಮೊದಲು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತೇವೆ. ಬಳಿಕ ಜನರ ಪ್ರತಿಕ್ರಿಯೆ ನೋಡಿಕೊಂಡು ಓಟಿಟಿಯಲ್ಲಿ ಬಿಡುಗಡೆ ಮಾಡುತ್ತೇವೆ. ಸುದೀಪ್ ಅವರು ಈಗಾಗಲೇ ಕನ್ನಡದಲ್ಲಿ ಡಬ್ಬಿಂಗ್ ಮುಗಿಸಿದ್ದಾರೆ. ಮಲಯಾಳಂ ಬಿಟ್ಟು, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಕಿಚ್ಚ ಅವರೇ ಧ್ವನಿ ನೀಡುತ್ತಿದ್ದಾರೆ ಎಂದರು. ಇದನ್ನೂ ಓದಿ:  ಆಹಾರ, ಸೆಕ್ಸ್ ಯಾವುದನ್ನ ಆಯ್ಕೆ ಮಾಡಿಕೊಳ್ಳುತ್ತೀರಾ..?: ಶೃತಿ ಕೊಟ್ರು ಬೋಲ್ಡ್ ಆನ್ಸರ್

  • ವಿಕ್ರಾಂತ್ ರೋಣ ‘ಡೆಡ್ ಮ್ಯಾನ್ ಆಂಥೆಮ್’ ಔಟ್- ಸ್ಟೈಲಿಶ್ ಲುಕ್‍ನಲ್ಲಿ ಸುದೀಪ್

    ವಿಕ್ರಾಂತ್ ರೋಣ ‘ಡೆಡ್ ಮ್ಯಾನ್ ಆಂಥೆಮ್’ ಔಟ್- ಸ್ಟೈಲಿಶ್ ಲುಕ್‍ನಲ್ಲಿ ಸುದೀಪ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ ಅಭಿಮಾನಿಗೆ ಚಿತ್ರತಂಡ ಸಿಹಿ ಸುದ್ದಿ ನೀಡಿದೆ. ಇದನ್ನೂ ಓದಿ: ಅಭಿನಯ ಚಕ್ರವರ್ತಿಗೆ 50ನೇ ಹುಟ್ಟುಹಬ್ಬದ ಸಂಭ್ರಮ

    sudeep

    ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್‍ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ. ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಈ ಸಿನಿಮಾದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಇದ್ದು, ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಚಿತ್ರತಂಡ ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಸಿನಿಮಾದ ಡೆಡ್ ಮ್ಯಾನ್ ಆಂಥೆಮ್ ಎಂಬ ಟೀಸರ್‌ನನ್ನು ಬಿಡುಗಡೆಗೊಳಿಸಿ ಅಭಿಮಾನಿಗಳ ಕೂತುಹಲವನ್ನು ಮತ್ತಷ್ಟು ಕೆರಳಿಸಿದೆ.

    sudeep

    ಈ ಟೀಸರ್‌ನನ್ನು ನಿರ್ದೇಶಕ ನಿರೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಟೀಸರ್‍ನಲ್ಲಿ ಸುದೀಪ್ ಬ್ಲಾಕ್ ಕಲರ್ ಲಾಂಗ್ ಜಾಕೆಟ್ ಹಾಗೂ ಕ್ಯಾಪ್ ತೊಟ್ಟು ಮಳೆಯಲ್ಲಿ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಕಿಚ್ಚ ಆ್ಯಕ್ಷನ್ ದೃಶ್ಯವಳಿಯಲ್ಲಿ ಕಾಣಿಸಿಕೊಂಡಿದ್ದು, ಟೀಸರ್ ನೋಡಲು ಸಖತ್ ಥ್ರಿಲಿಂಗ್ ಆಗಿದೆ. ಇದನ್ನೂ ಓದಿ: ಚಂದನವನದಲ್ಲಿ ಸುದೀಪ್ ಸಿನಿ ಜರ್ನಿ

    ವಿಶೇಷವೆಂದರೆ ಈ ಟೀಸರ್‍ನನ್ನು ಚಿತ್ರತಂಡ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಇಂದೇ ಬಿಡುಗಡೆಗೊಳಿಸಿದೆ. ಒಟ್ಟಾರೆ ವಿಕ್ರಾಂತ್ ರೋಣ ಟೀಸರ್ ಸಖತ್ ರಿಚ್ ಆಗಿ ಮೂಡಿಬಂದಿದ್ದು, ಸಿನಿಮಾ ಹೇಗಿರಲಿದೆ ಎಂದು ಮುಂದೆ ಕಾದು ನೋಡಬೇಕಾಗಿದೆ.

  • ವಿಕ್ರಾಂತ್ ರೋಣದಲ್ಲಿ ಸುದೀಪ್ ಜೊತೆ ಅದ್ಭುತ ಕಾಲ ಕಳೆದೆ: ಜಾಕ್ವೆಲಿನ್

    ವಿಕ್ರಾಂತ್ ರೋಣದಲ್ಲಿ ಸುದೀಪ್ ಜೊತೆ ಅದ್ಭುತ ಕಾಲ ಕಳೆದೆ: ಜಾಕ್ವೆಲಿನ್

    ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೇ ಮೊದಲ ಬಾರಿಗೆ ಕನ್ನಡದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಭಿನಯಿಸಿದರ ಕುರಿತು ತಮ್ಮ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಈ ಕುರಿತಂತೆ ಜಾಕ್ವೆಲಿನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ವಿಕ್ರಾಂತ್ ರೋಣ ಚಿತ್ರೀಕರಣದ ವೇಳೆ ಕಿಚ್ಚ ಸುದೀಪ್ ಅವರೊಂದಿಗೆ ಅದ್ಭುತ ಕಾಲ ಕಳೆದೆ. ಶಾಲಿನಿ ಹಾಗೂ ಜಾಕ್ ಮಂಜುರವರ ಸ್ವಾಗತ ಮತ್ತು ಆತಿಥ್ಯಕ್ಕೆ ಧನ್ಯವಾದಗಳು.

    ಕಿಚ್ಚ ಸುದೀಪ್ ಅವರೊಟ್ಟಿಗೆ ದೀರ್ಘಕಾಲದಿಂದ ಕೆಲಸ ಮಾಡಿದ ಅನುಭವ. ಮುಂದಿನ ಬಾರಿ ಟಫ್ ಚೆಸ್ ಆಟಕ್ಕೆ ಸಿದ್ಧರಾಗಿ. ಅನೂಪ್ ಭಂಡಾರಿ ನಿಮ್ಮ ಯೋಜನೆಗಳ ಬಗೆಗಿನ ಸ್ಪಷ್ಟತೆ ಮತ್ತು ವಿಕ್ರಾಂತ್ ರೋಣ ಚಿತ್ರೀಕರಿಸುತ್ತಿರುವ ರೀತಿ ಅದ್ಭುತವಾಗಿದೆ. ಇಡೀ ಚಿತ್ರತಂಡಕ್ಕೆ ಧನ್ಯವಾದ. ಮತ್ತೆ ಶೀಘ್ರದಲ್ಲಿಯೇ ಸಿಗೋಣಾ. ವಿಕ್ರಾಂತ್ ರೋಣ ಸಿನಿಮಾ ಖಂಡಿತಾ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡಿಸುತ್ತದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಇದೇ ಪ್ರಥಮ ಬಾರಿಗೆ ಜಾಕ್ವೆಲಿನ್ ಫರ್ನಾಂಡಿಸ್ ದಕ್ಷಿಣ ಭಾರತದ ಸಿನಿಮಾಕ್ಕೆ ಬಣ್ಣ ಹಚ್ಚಿದ್ದು, ವಿಕ್ರಾಂತ್‍ರೋಣ ಸಿನಿಮಾದ ನಾಯಕನಾಗಿ ನಟ ಕಿಚ್ಚ ಸುದೀಪ್ ನಟಿಸುತ್ತಿದ್ದು, ಚಿತ್ರದ ವಿಶೇಷ ಹಾಡೊಂದಕ್ಕೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಹಾಡಿಗೆ ನೃತ್ಯ ಮಾಡಲು ಇತ್ತೀಚೆಗಷ್ಟೇ ಮುಂಬೈನಿಂದ ಜಾಕ್ವೆಲಿನ್ ಬೆಂಗಳೂರಿಗೆ ಬಂದಿದ್ದರು. ಸದ್ಯ ಹಾಡಿನ ಚಿತ್ರೀಕರಣ ಪೂರ್ಣಗೊಂಡಿದ್ದು, ಜಾಕ್ವೆಲಿನ್ ಮತ್ತೆ ಮುಂಬೈಗೆ ಹಾರಿದ್ದಾರೆ. ಇದನ್ನೂ ಓದಿ: ಜಾಕ್ವೆಲಿನ್ ಜೊತೆ ಫೇವರೆಟ್ ಫೋಟೋ ಶೇರ್ ಮಾಡಿದ ಸುದೀಪ್

  • ವಿಕ್ರಾಂತ್ ರೋಣ ಚಿತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದ ಮರ್ಡರ್ ಬೆಡಗಿ

    ವಿಕ್ರಾಂತ್ ರೋಣ ಚಿತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದ ಮರ್ಡರ್ ಬೆಡಗಿ

    ಬೆಂಗಳೂರು: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಡೀಸ್‍ರವರು ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ. ಈ ಸಿನಿಮಾದಲ್ಲಿ ಬರುವ 5 ನಿಮಿಷದ ಹಾಡಿಗೆ ಜಾಕ್ವೆಲಿನ್ ಫರ್ನಾಡೀಸ್ ಪಡೆದಿರುವ ಸಂಭಾವನೆ ಕೇಳಿದರೆ ಎಲ್ಲರೂ ಖಂಡಿತ ಅಚ್ಚರಿ ಪಡುತ್ತಾರೆ.

    ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ರವರ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ. ಬಹು ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತ್ರಿಡಿ ಟೆಕ್ನಾಲಜಿಯಲ್ಲಿ ತೆರೆ ಮೇಲೆ ಬರಲಿದೆ. ಸದ್ಯ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಇದನ್ನೂ ಓದಿ:ವಿಕ್ರಾಂತ್ ರೋಣ ಡಬ್ಬಿಂಗ್ ಶುರು ಮಾಡಿದ ನಟ ಕಿಚ್ಚ

    ಹಲವು ವಿಶೇಷಗಳೊಂದಿಗೆ ಮೂಡಿಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಹಾಡೊಂದಕ್ಕೆ ಇದೇ ಮೊದಲ ಬಾರಿಗೆ ಬಾಲಿವುಡ್‍ನ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಡೀಸ್ ನೃತ್ಯ ಮಾಡಲಿದ್ದಾರೆ. ಸಿನಿಮಾದಲ್ಲಿ ಬರುವ ಕೇವಲ 5 ನಿಮಿಷದ ಹಾಡಿಗೆ ಡ್ಯಾನ್ಸ್ ಮಾಡಲು ಗ್ರೀನ್ ಸಿಗ್ನಲ್ ನೀಡುವ ಜಾಕ್ವೆಲಿನ್, ಇದಕ್ಕಾಗಿ ಬರೋಬ್ಬರಿ 3 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಅದ್ಭುತ ಅನುಭವ, ನೂತನ ಪಾತ್ರ: ಸುದೀಪ್

    ಮೇ ತಿಂಗಳಿನಲ್ಲಿಯೇ ನಡೆಯಬೇಕಾಗಿದ್ದ ಹಾಡಿನ ಶೂಟಿಂಗ್, ಕೊರೊನಾ ಲಾಕ್‍ಡೌನ್‍ನಿಂದಾಗಿ ಇದೀಗ ಅದ್ದೂರಿಯಾಗಿ ಬೆಂಗಳೂರಿನಲ್ಲಿ ಹಾಡನ್ನು ಚಿತ್ರೀಕರಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ವಿಕ್ರಾಂತ್ ರೋಣ ಸಿನಿಮಾಕ್ಕೆ ನಿರ್ದೇಶಕ ಅನುಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ನಿರ್ಮಾಪಕ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಇತ್ತೀಚೆಗಷ್ಟೇ ಸುದೀಪ್‍ರವರು ಸಿನಿಮಾದ ವಾಯ್ಸ್ ಡಬ್ಬಿಂಗ್ ಕಾರ್ಯವನ್ನು ಮುಗಿಸಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು.

     

    View this post on Instagram

     

    A post shared by KicchaSudeepa (@kichchasudeepa)

     

  • ಅದ್ಭುತ ಅನುಭವ, ನೂತನ ಪಾತ್ರ: ಸುದೀಪ್

    ಅದ್ಭುತ ಅನುಭವ, ನೂತನ ಪಾತ್ರ: ಸುದೀಪ್

    ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾದ ವಾಯ್ಸ್ ಡಬ್ಬಿಂಗ್ ಕಾರ್ಯ ಮುಕ್ತಾಯವಾಗಿದೆ ಎಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ವಿಕ್ರಾಂತ್ ರೋಣ ಸಿನಿಮಾಕ್ಕೆ ವಾಯ್ಸ್ ಡಬ್ಬಿಂಗ್ ಆರಂಭಿಸಿರುವುದ ಬಗ್ಗೆ ತಿಳಿಸಿದ್ದ ಸುದೀಪ್, ಇದೀಗ ಚಿತ್ರದ ವಾಯ್ಸ್ ಡಬ್ಬಿಂಗ್ ಮುಗಿದಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿದ ಸುದೀಪ್, ವಿಕ್ರಾಂತ್ ರೋಣ ವಾಯ್ಸ್ ಡಬ್ಬಿಂಗ್‍ನನ್ನು ಮುಗಿಸಿದೆ. ಅದ್ಭುತವಾದ ಅನುಭವ, ನೂತನ ಪಾತ್ರ. 3ಡಿ ಆವೃತ್ತಿಯಲ್ಲಿರುವ ಕೆಲವು ಸ್ಯಾಂಪಲ್‍ಗಳನ್ನು ನೋಡಿದೆ. ವಿಆರ್ ಪ್ರಪಂಚದಲ್ಲಿ ನೋಡಿ ರೋಮಾಂಚನವಾಯಿತು. ಇದೀಗ ಸಾಂಗ್ ಶೂಟಿಂಗ್‍ಗಾಗಿ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ವಿಕ್ರಾಂತ್ ರೋಣ ಸಿನಿಮಾಕ್ಕೆ ನಿರ್ದೇಶಕ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾಕ್ಕೆ ನಿರ್ಮಾಪಕ ಕೆ.ಮಂಜು ಬಂಡವಾಳ ಹೂಡಿದ್ದಾರೆ. ತ್ರಿಡಿ ಟೆಕ್ನಾಲಜಿಯಲ್ಲಿ ಮೂಡಿ ಬರುತ್ತಿರುವ ದೊಡ್ಡ ಬಜೆಟ್‍ನ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿಯಲ್ಲಿ ತೆರೆ ಕಾಣಲಿದೆ. ವಿಶೇಷವೆಂದರೆ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸುದೀಪ್ ಅವರೇ ವಾಯ್ಸ್ ಡಬ್ ನೀಡುತ್ತಿದ್ದಾರೆ. ಇದನ್ನೂ ಓದಿ: ವಿಕ್ರಾಂತ್ ರೋಣ ಡಬ್ಬಿಂಗ್ ಶುರು ಮಾಡಿದ ನಟ ಕಿಚ್ಚ

     

    View this post on Instagram

     

    A post shared by KicchaSudeepa (@kichchasudeepa)

  • ವಿಕ್ರಾಂತ್ ರೋಣ ಸಿನಿಮಾ ನೋಡ್ತಾಯಿದ್ರೆ ಜೀವ ನಡುಗುತ್ತೆ: ನಟ ರವಿಶಂಕರ್ ಗೌಡ

    ವಿಕ್ರಾಂತ್ ರೋಣ ಸಿನಿಮಾ ನೋಡ್ತಾಯಿದ್ರೆ ಜೀವ ನಡುಗುತ್ತೆ: ನಟ ರವಿಶಂಕರ್ ಗೌಡ

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ಸಿನಿಮಾ ಡಬ್ಬಿಂಗ್‍ನಲ್ಲಿ ಭಾಗವಹಿಸಿದ ನಟ ರವಿಶಂಕರ್ ಗೌಡ ಸಿನಿಮಾ ಕುರಿತಾಗಿ ಅಚ್ಚರಿಯ ಮಾಹಿತಿಯನ್ನು ಹೊರಹಾಕಿದ್ದಾರೆ.

    ವಿಕ್ರಾಂತ್ ರೋಣ ಡಬ್ಬಿಂಗ್ ಮಾಡಿದೆ. ಅಬ್ಬಾ!! ಸಿನಿಮಾ ಪ್ರಾರಂಭವಾದಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾಧ್ಯವಿಲ್ಲ ಕುತೂಹಲದ ಮಹಾಪೂರವಾಗಿದೆ. ಗೆಳೆಯ ದೀಪುವಿನ ಅಭಿನಯಕ್ಕೆ ಮನಸೋಲದವರಿಲ್ಲ. ಹೊಸ ಕಲಾವಿದರು ಅಚ್ಚುಕಟ್ಟಾದ ಅಭಿನಯಿಸಿದ್ದಾರೆ. ಎಂದು ರವಿಶಂಕರ್ ಗೌಡ ಡಬ್ಬಿಂಗ್ ಮಾಡಿದ ಅನುಭವವನ್ನು ಟ್ವೀಟ್ ಮಾಡಿದ್ದಾರೆ.

    ಪೂರ್ತಿ ಸಿನಿಮಾ ನೋಡುತ್ತಿದ್ದರೆ ಜೀವ ನಡುಗತ್ತದೆ. ನಿರ್ದೇಶಕ ಅನೂಪ್ ಭಂಡಾರಿಗೆ ಹಾಗೂ ನಿರ್ಮಾಪಕ ಜಾಕ್ ಮಂಜು ಸರ್‌ಗೆ ಅಭಿನಂದನೆಗಳು ಎಂದು ರವಿಶಂಕರ್ ಗೌಡ ವಿಕ್ರಾಂತ್ ರೋಣ ಸಿನಿಮಾದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ನಿರೂಪ್ ಭಂಡಾರಿಯೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನೀತಾ ಅಶೋಕ್ ಪ್ರಮುಖ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತುಂಬಾ ವಿಶೇಷವಾದ ಪಾತ್ರದಲ್ಲಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ರವಿಶಂಕರ್ ಗೌಡ ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಜಾಕ್ ಮಂಜು ನಿರ್ಮಾಣ ಮಾಡಿದ್ದು, ಬಿಡುಗಡೆ ಬಗ್ಗೆ ಸದ್ಯಕ್ಕೆ ಯಾವುದೇ ಅಪ್‍ಡೇಟ್ ಇಲ್ಲ.

    ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ವಿಷಯಕ್ಕೆ ಕುತೂಹಲ ಹೆಚ್ಚಿಸುತ್ತಿರುವ ಈ ಚಿತ್ರ ಈಗ ಸಂಪೂರ್ಣವಾಗಿ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಹಾಗೂ ದುಬೈನ ಬುರ್ಜ್ ಖಲೀಫಾ ಕಟ್ಟಡ ಮೇಲೆ ಬಿಡುಗಡೆಯಾದ ಟೀಸರ್ ನೋಡಿದ್ಮೇಲೆ ಪ್ರೇಕ್ಷಕರು ಬಹಳ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

  • ಆಗಸ್ಟ್ 19ರಂದು ಭಾರತದಾದ್ಯಂತ ವಿಕ್ರಾಂತ್ ರೋಣ ರಿಲೀಸ್

    ಆಗಸ್ಟ್ 19ರಂದು ಭಾರತದಾದ್ಯಂತ ವಿಕ್ರಾಂತ್ ರೋಣ ರಿಲೀಸ್

    ಬೆಂಗಳೂರು: ದುಬೈನ ಬುರ್ಜ್ ಖಲೀಫಾದ 148ನೇ ಮಹಡಿಯಲ್ಲಿ ಟೈಟಲ್ ಲೋಗೋ ರಿವೀಲ್ ಮಾಡಿರುವ ಮೂಲಕ ಭಾರೀ ಸುದ್ದಿಯಾದ ವಿಕ್ರಾಂತ್ ರೋಣ ಸಿನಿಮಾದಿಂದ ಇದೀಗ ರೋಮಾಂವನಕಾರಿ ಸುದ್ದಿಯೊಂದು ಹೊರಬಿದ್ದಿದೆ.

    ಹೌದು. ವಿಕ್ರಾಂತ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

    ಈ ಸಂಬಂಧ ಟ್ವೀಟ್ ಮಾಡಿರುವನಟ ಕಿಚ್ಚ ಸುದೀಪ್, ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ಧತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ ರೋಮಾಂಚನಕಾರಿ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ. ವಿಕ್ರಾಂತ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    https://twitter.com/KicchaSudeep/status/1382570109034635274

    ಇದೇ ವರ್ಷ ಜನವರಿ 31ರಂದು ದುಬೈನ ಬುರ್ಜ್ ಖಲೀಫಾದ 148ನೇ ಮಹಡಿಯಲ್ಲಿ ಟೈಟಲ್ ಲೋಗೋ ರಿವೀಲ್ ಮಾಡಲಾಗಿತ್ತು. ಇದರ ಜೊತೆಗೆ 2 ಸಾವಿರ ಅಡಿ ಎತ್ತರದ ವರ್ಚೂವಲ್ ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಇದೇ ವೇಳೆ ಕಿಚ್ಚನ 25 ವರ್ಷಗಳ ಸಿನಿ ಪಯಣ ಕುರಿತ 3 ನಿಮಿಷದ ವೀಡಿಯೋ ಪ್ರಸಾರವಾಗಿತ್ತು.

    ಬುರ್ಜ್ ಖಲೀಫಾ ಕಟ್ಟಡದಲ್ಲಿ 3 ನಿಮಿಷಗಳ ಕಾಲ ಇದ್ದ ಕಟೌಟ್ ನೋಡಿ ಸುದೀಪ್ ಅಭಿಮಾನಿಗಳು ಥ್ರಿಲ್ ಆಗಿದ್ದರು. ಈ ಸುಂದರ ಸಂಭ್ರಮವನ್ನು 6 ಕ್ಯಾಮೆರಾದಲ್ಲಿ ಕಿಚ್ಚನ ತಂಡ ಸೆರೆ ಹಿಡಿದಿತ್ತು. ಈ ವೀಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಅಲ್ಲದೆ ಚಿತ್ರರಂಗದಲ್ಲಿ 25 ವರ್ಷಗಳು ಪೂರೈಸಿರುವ ಕಿಚ್ಚ ಸುದೀಪ್‍ಗೆ ಸಿನಿರಂಗದ ಹಲವು ಗಣ್ಯರು ಶುಭಹಾರೈಸಿದ್ದರು.

  • ಬುರ್ಜ್ ಖಲೀಫಾ ಮೇಲೆ ಕಿಚ್ಚನ ಕಟೌಟ್- ಖರ್ಚಾಗಿದ್ದೆಷ್ಟು? ಮುಂದೆ ಯಾರದ್ದು ಬರಲಿದೆ?

    ಬುರ್ಜ್ ಖಲೀಫಾ ಮೇಲೆ ಕಿಚ್ಚನ ಕಟೌಟ್- ಖರ್ಚಾಗಿದ್ದೆಷ್ಟು? ಮುಂದೆ ಯಾರದ್ದು ಬರಲಿದೆ?

    ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಸ್ಯಾಂಡಲ್‍ವುಡ್ ನಟರೊಬ್ಬರ ಕಟೌಟ್ ಕಾಣಿಸುವ ಮೂಲಕ ದಾಖಲೆ ನಿರ್ಮಿಸಲಾಗಿದ್ದು, ಅದೂ ಸಹ ಕಿಚ್ಚ ಸುದೀಪ್ ಅವರದ್ದು ಎನ್ನುವುದು ಇನ್ನೂ ವಿಶೇಷ. ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ವಿಕ್ರಾಂತ್ ರೋಣ ಚಿತ್ರತಂಡ ಬೆಳ್ಳಿ ಹಬ್ಬ ಆಚರಣೆ ಮಾಡುವ ಮೂಲಕ ಅವರಿಗೆ ಗಿಫ್ಟ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ಈ ಪ್ರಚಾರಕ್ಕೆ ಎಷ್ಟು ಖರ್ಚು ಆಗಿರಬಹದು ಎಂಬ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿದೆ.

    ಹೌದು ಕನ್ನಡ ಬಾವುಟದ ಬಣ್ಣ ಹಾಗೂ ಕಿಚ್ಚ ಕಾಣಿಸುತ್ತಿದ್ದಂತೆ ಕೇವಲ ಅವರ ಅಭಿಮಾನಿಗಳು ಮಾತ್ರವಲ್ಲ, ಇಡೀ ರಾಜ್ಯದ ಜನರೇ ಸಂತಸಗೊಂಡಿದ್ದರು. ರಾಜ್ಯದ ಹೆಮ್ಮೆ ಎಂದು ಸಹ ಕೊಂಡಾಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಹೇಗಾಯಿತು? ಬುರ್ಜ್ ಖಲೀಫಾ ಮೇಲೆ ಕಟೌಟ್ ಹಾಕಲು ಖರ್ಚಾಗಿದ್ದೆಷ್ಟು ಎಂಬ ಚರ್ಚೆ ಸಹ ಎದ್ದಿತ್ತು.

    ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲಿನ ಈ ಲೇಸರ್ ಪರದೆ ಮೇಲೆ ಮಿಂಚಲು ಲಕ್ಷಾಂತರ ರೂ. ಹಣ ಖರ್ಚು ಮಾಡಬೇಕು. ಹೀಗಾಗಿ ಚಿತ್ರ ತಂಡ ದುಬಾರಿ ಪ್ರಚಾರ ಮಾಡಿದೆ ಎಂದು ಇದೀಗ ತಿಳಿದು ಬಂದಿದೆ. ಕಿಚ್ಚನ ದುಬೈ ಸಂಭ್ರಮಕ್ಕೆ ಬರೋಬ್ಬರಿ 3 ಕೋಟಿ ರೂ.ಗೂ ಅಧಿಕ ಹಣ ಖರ್ಚಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾದ ಲೇಸರ್ ಪರದೆ ಮೇಲೆ ವಿಡಿಯೋ ಪ್ರಸಾರ ಮಾಡಲು ನಿಮಿಷಕ್ಕೆ ಲಕ್ಷಗಟ್ಟಲೇ ಹಣ ವ್ಯಯಿಸಬೇಕು.

    ಬುರ್ಜ್ ಖಲೀಫಾದ ಲೇಸರ್ ಸ್ಕ್ರೀನ್ ಮೇಲೆ ಪ್ರಸಾರವಾಗುವ 3 ನಿಮಿಷ ಅಂದರೆ 180 ಸೆಕೆಂಡ್‍ಗಳ ವಿಡಿಯೋಗೆ 50 ಲಕ್ಷ ರೂ. ನೀಡಬೇಕು. ಇದು ಕನಿಷ್ಟ ದರವಾಗಿದ್ದು, ವೀಕೆಂಡ್‍ಗಳಲ್ಲಿ ಇದರ ದರ 70-80 ಲಕ್ಷ ರೂ. ದಾಟುತ್ತದೆ ಎಂಬ ಮಾಹಿತಿ ಇದೆ. ಲೇಸರ್ ಶೋಗೆ ನಾಲ್ಕು ವಾರ ಮೊದಲೇ ಅರ್ಜಿ ಸಲ್ಲಿಸಬೇಕು. ಜಾಹೀರಾತು ಏಜೆನ್ಸಿ ಮೂಲಕ ಮೊದಲೇ ಪೂರ್ತಿ ಹಣವನ್ನು ಕಟ್ಟಬೇಕು. ಬಳಿಕ ಆಡಳಿತ ಮಂಡಳಿ ನೀಡಿದ ದಿನಾಂಕದಂದು ರಾತ್ರಿ 8ರ ಬಳಿಕ ವಿಡಿಯೋ ಲೇಸರ್ ಪರದೆ ಮೇಲೆ ಪ್ರಸಾರವಾಗುತ್ತದೆ.

     

    View this post on Instagram

     

    A post shared by KicchaSudeepa (@kichchasudeepa)

    ಈ ಮೊದಲು ಬಾಲಿವುಡ್ ನಟ ಶಾರುಖ್ ಖಾನ್ ಹುಟ್ಟುಹಬ್ಬಕ್ಕೂ ಇದೇ ರೀತಿ ಶುಭ ಕೋರಲಾಗಿತ್ತು. ಜಗತ್ತಿನ ಎತ್ತರದ ಕಟ್ಟಡದಲ್ಲಿ ಗೌರವ ಪಡೆದ ಭಾರತದ ಮೊದಲ ನಟ ಎಂದು ಸಹ ಹೇಳಲಾಗಿತ್ತು. ಬಳಿಕ ಶಾರುಖ್ ಖಾನ್ ಅಭಿಮಾನಿಯೊಬ್ಬ ಹಣ ನೀಡಿ ಈ ವಿಡಿಯೋ ಹಾಕಿಸಿದ್ದ ಎಂಬುದು ತಿಳಿದಿತ್ತು. ಹಣ ನೀಡಿದರೆ ಬುರ್ಜ್ ಖಲೀಫಾ ಮೇಲೆ ಯಾರ ಬಗ್ಗೆ ಬೇಕಾದರೂ ಪ್ರಸಾರ ಮಾಡಲಾಗುತ್ತದೆ. ಅಲ್ಲದೆ ಎಲ್ಲ ಸಿನಿಮಾಗಳನ್ನು ಪ್ರಚಾರ ಮಾಡಲಾಗುತ್ತದೆ. ಆದರೆ ಈ ಹಿಂದೆ ಮಹಾತ್ಮಾ ಗಾಂಧಿಯವರ 151ನೇ ಜನ್ಮ ದಿನದಂದು ಭಾರತೀಯ ರಾಯಭಾರಿ ಕಚೇರಿಯ ಪ್ರಯತ್ನದ ಫಲವಾಗಿ ಗಾಂಧೀಜಿ ಸಂದೇಶದೊಂದಿಗೆ ತ್ರಿವರ್ಣ ಧ್ವಜವನ್ನು ಬುರ್ಜ್ ಖಲೀಫಾ ಉಚಿತವಾಗಿ ಪ್ರದರ್ಶನ ಮಾಡಿತ್ತು. ಇದನ್ನು ಹೊರತುಪಡಿಸಿದರೆ ಭಾರತದ ಇನ್ನಾವುದೇ ವಿಡಿಯೋಗಳು ಉಚಿತವಾಗಿ ಪ್ರಸಾರವಾಗಿಲ್ಲ ಎಂದು ಹೇಳಲಾಗುತ್ತದೆ. ಇದೀಗ ಕಿಚ್ಚ ಸುದೀಪ್ ಹಾಗೂ ವಿಕ್ರಾಂತ್ ರೋಣ ಸಿನಿಮಾದ ವಿಡಿಯೋವನ್ನು ಸಹ ಹಣ ನೀಡಿ ಹಾಕಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಮುಂದೆ ತೆಲುಗಿನ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರಕ್ಕೂ ಈ ರೀತಿ ಪ್ರಚಾರ ನೀಡಲಾಗುತ್ತದೆ ಎಂದು ವರದಿಯಾಗಿದೆ.