Tag: Vikrant Rona

  • ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್ ಡ್ರೆಸ್ ಗೆ ಫ್ಯಾನ್ಸ್ ಫಿದಾ

    ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್ ಡ್ರೆಸ್ ಗೆ ಫ್ಯಾನ್ಸ್ ಫಿದಾ

    ಬಾಲಿವುಡ್ (Bollywood) ನಟಿ, ಸುದೀಪ್ ನಟನೆಯ ವಿಕ್ರಾಂತ್ ರೋಣ (Vikrant Rona) ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ’ (Rakkamma) ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ನಿನ್ನೆಯಷ್ಟೇ ‘ಟೆಲ್ ಇಟ್ ಲೈಕ್ ಎ ವುಮೆನ್’ ಸಿನಿಮಾದ ಡಿನ್ನರ್ ಪಾರ್ಟಿಗೆ ಆಗಮಿಸಿದ್ದರು. ಈ ಪಾರ್ಟಿಗೆ ಬಂದಾಗ ಅವರು ಧರಿಸಿದ್ದ ಡ್ರೆಸ್ (Dress) ಎಲ್ಲರ ಗಮನ ಸೆಳೆದಿತ್ತು. ವಿಶೇಷ ರೀತಿಯ ವಿನ್ಯಾಸ ಹೊಂದಿದ್ದ ಈ ಬಟ್ಟೆ ತೊಟ್ಟ ಚಿಟ್ಟಿಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.

    ಆ ಫೋಟೋವನ್ನು ಅವರು ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೆಲವರು ಈ ಡ್ರೆಸ್ ಬಗ್ಗೆ ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ. ನೀಲಿ ಬಣ್ಣದ ಬಟ್ಟೆಯಲ್ಲಿ ಕಂಗೊಳಿಸಿರುವ ಜಾಕ್ವೆಲಿನ್ ಸಖತ್ ಹಾಟ್ ಹಾಟ್ ಆಗಿ ಕಂಡಿದ್ದಾರೆ. ಹೀಗಾಗಿ ಫೋಟೋ ಕೂಡ ವೈರಲ್ ಆಗಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ಟೆಲ್ ಇಟ್ ಲೈಕ್ ಎ ವುಮೆನ್ ಸಿನಿಮಾ ತಂಡ ವಿಶೇಷವಾದ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಈ ಸಿನಿಮಾಗೆ ಆಸ್ಕರ್ ಪ್ರಶಸ್ತಿ ಕೂಡ ಬಂದಿದ್ದು, ಹಲವು ಕಡೆ ಪ್ರದರ್ಶನ ಮತ್ತು ಪಾರ್ಟಿಗಳನ್ನು ಮಾಡುತ್ತಿದ್ದಾರೆ. ಕೆಲವು ಸೆಲಿಬ್ರಿಟಿಗಳನ್ನು ಆಹ್ವಾನಿಸುತ್ತಿದ್ದಾರೆ. ಇಂಥದ್ದೊಂದು ಆಹ್ವಾನ ಜಾಕ್ವೆಲಿನ್ ಗೆ ಬಂದಿದೆ. ಹಾಗಾಗಿ ಪಾಲ್ಗೊಂಡಿದ್ದಾರೆ. ಆ ನೆನಪುಗಳನ್ನು ಅವರು ಹಂಚಿಕೊಂಡಿದ್ದಾರೆ.

    ಜಾಕ್ವೆಲಿನ್ ಫರ್ನಾಂಡಿಸ್ ಗೆ ಒಂದು ಕಡೆ ಈ ರೀತಿಯ ಗೌರವಗಳು ದೊರೆಯುತ್ತಿದ್ದರೆ, ಮತ್ತೊಂದು ಕಡೆ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಕಡೆಯಿಂದ ನಾನಾ ರೀತಿಯ ಸಂದೇಶಗಳು ಬರುತ್ತಿವೆ. ಮೊನ್ನೆಯಷ್ಟೇ ಇನ್ನೂ ಜಾಕ್ವೆಲಿನ್ ನನ್ನು ಪ್ರೀತಿಸುತ್ತಿರುವ ವಿಚಾರವನ್ನು ಸುಕೇಶ್ ಹಂಚಿಕೊಂಡಿದ್ದಾರೆ. ಪ್ರೇಮಿಗಳ ದಿನಕ್ಕೆ ವಿಶ್ ಕೂಡ ಮಾಡಿದ್ದರು. ಈ ಎಲ್ಲ ಸಂಗತಿಗಳನ್ನು ಜಾಕ್ವೆಲಿನ್ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ.

  • ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ವಿಕ್ರಾಂತ್ ರೋಣ (Vikrant Rona) ಸಿನಿಮಾದ ನಂತರ ಈವರೆಗೂ ಹೊಸ ಸಿನಿಮಾದ (New Cinema) ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಕಿಚ್ಚ ಸುದೀಪ್ (Sudeep). ವಿಕ್ರಾಂತ್ ರೋಣ ಚಿತ್ರ ರಿಲೀಸ್ ಆಗಿ ಹಲವು ತಿಂಗಳು ಕಳೆದರೂ, ಹೊಸ ಚಿತ್ರದ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಲೇ ಇದ್ದಾರೆ. ಈ ನಡುವೆ ಮೂರ್ನಾಲ್ಕು ನಿರ್ದೇಶಕರ ಹೆಸರೂ ಕೇಳಿ ಬಂದಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಸುದೀಪ್ ನಟನೆಯ ಹೊಸ ಸಿನಿಮಾದ ಘೋಷಣೆ ಏಪ್ರಿಲ್ ನಲ್ಲಿ ನಡೆಯಲಿದೆ. ಅದು ಹಲವು ಭಾಷೆಗಳಲ್ಲಿ ಮೂಡಿ ಬರುವ ಚಿತ್ರವಾಗಲಿದೆ.

    ಕನ್ನಡದ ನಿರ್ದೇಶಕರಾದ ನಂದಕಿಶೋರ್ (Nandakishor), ಅನೂಪ್ ಭಂಡಾರಿ (Anoop Bhandari) ಸೇರಿದಂತೆ ಕೆಲ ನಿರ್ದೇಶಕರು ಈಗಾಗಲೇ ಸುದೀಪ್ ಗಾಗಿ ಕಥೆ ಬರೆದುಕೊಂಡು ಕೂತಿದ್ದಾರೆ. ಜೊತೆಗೆ  ಕಬಾಲಿ ಅಂತಹ ಭಾರೀ ಬಜೆಟ್ ಸಿನಿಮಾ ಮಾಡಿರುವ ಕಲೈಪುಲಿ ಎಸ್ ಥಾನು ಕೂಡ ಸುದೀಪ್ ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ಈ ಸಿನಿಮಾವನ್ನು ವಿಜಯ್ ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾವೇ ಏಪ್ರಿಲ್ ನಲ್ಲಿ ಘೋಷಣೆ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ವಿಜಯ್ (Vijay) ನಿರ್ದೇಶನದಲ್ಲಿ ಮೂಡಿ ಬರಲಿರುವ ಆ ಸಿನಿಮಾ ಕನ್ನಡ ಹಾಗೂ ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸವನ್ನೂ ಶುರು ಮಾಡಿದ್ದಾರಂತೆ ನಿರ್ದೇಶಕರು. ಈ ಸಿನಿಮಾದ ಮಾಹಿತಿಯನ್ನೂ ನಿರ್ಮಾಣ ತಂಡ ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗಲಿದ್ದು, ನೂರು ಕೋಟಿ ಬಜೆಟ್ ಚಿತ್ರ ಇದಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ವಿಜಯ್ ನಿರ್ದೇಶನದ ಸಿನಿಮಾ ನಂತರ ಅನೂಪ್ ಭಂಡಾರಿ ನಿರ್ದೇಶನದ ಬಿಲ್ಲಾ ರಂಗ ಬಾಷಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಆ ನಂತರ ನಂದಕಿಶೋರ್ ಅವರಿಗೆ ಕಿಚ್ಚ ಡೇಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಸುದೀಪ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ.

  • ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

    ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

    ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ಇಂದು ಆಸ್ಕರ್ (Oscar) ಪ್ರಶಸ್ತಿಯ ನಾಮ ನಿರ್ದೇಶನ (Nomination) ಘೋಷಣೆ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆಯಲಿದ್ದು, ಯಾವೆಲ್ಲ ಸಿನಿಮಾಗಳು ನಾಮಿನೇಷನ್ ಆಗಲಿವೆ ಎನ್ನುವ ಕುತೂಹಲ ಮೂಡಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಈ ಬಾರಿ ರೇಸ್ ನಲ್ಲಿ ಇರುವುದರಿಂದ ನಾಮ ನಿರ್ದೇಶನ ಪಟ್ಟಿಯಲ್ಲಿ ಇವುಗಳಿಗೆ ಸ್ಥಾನ ಸಿಗಲಿದೆಯಾ ಎಂದು ಕಾದು ನೋಡಬೇಕು.

    ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಕನ್ನಡದಿಂದ ಕಾಂತಾರ (Kantara)ಮತ್ತು ವಿಕ್ರಾಂತ್ ರೋಣ (Vikrant Rona) ಸ್ಪರ್ಧೆಯಲ್ಲಿ ಇದ್ದರೆ, ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್ (RRR), ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ  ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿ ಇವೆ. ಇವುಗಳಲ್ಲಿ ಯಾವೆಲ್ಲ ಚಿತ್ರಗಳು ನಾಮಿನೇಷನ್ ಸುತ್ತಿಗೆ ಅರ್ಹತೆ ಪಡೆಯುತ್ತವೆ ಎನ್ನುವುದು ಸಂಜೆ 7 ಗಂಟೆಯ ನಂತರ ಗೊತ್ತಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎರಡನೇ ಸಲ ‘ಆಸ್ಕರ್’ ಅಂಗಳದಲ್ಲಿ ಕನ್ನಡದ ನಿರ್ದೇಶಕ ಅನೂಪ್ ಭಂಡಾರಿ

    ಎರಡನೇ ಸಲ ‘ಆಸ್ಕರ್’ ಅಂಗಳದಲ್ಲಿ ಕನ್ನಡದ ನಿರ್ದೇಶಕ ಅನೂಪ್ ಭಂಡಾರಿ

    ನ್ನಡದ ಹೆಸರಾಂತ ನಿರ್ದೇಶಕ ಅನೂಪ್ ಭಂಡಾರಿ ಎರಡನೇ ಬಾರಿ ಆಸ್ಕರ್ ಅಂಗಳದಲ್ಲಿ ಇದ್ದಾರೆ. ಎರಡು ಬಾರಿ ಇಂಥದ್ದೊಂದು ಅವಕಾಶ ಪಡೆದ ದಕ್ಷಿಣದ ನಿರ್ದೇಶಕ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರ ‘ರಂಗಿತರಂಗ’ ಸಿನಿಮಾ ಕೂಡ ಆಸ್ಕರ್ ಗೆ ಅರ್ಹತೆಯ ಯಾದಿಯಲ್ಲಿತ್ತು. ಇದೀಗ ಸುದೀಪ್ ನಟನೆಯ ವಿಕ್ರಾಂತ್ ರೋಣ ಕೂಡ ಅರ್ಹತೆಯ ಯಾದಿಯಲ್ಲಿ ಸ್ಥಾನ ಪಡೆದುಕೊಂಡಿದೆ.

    ರಂಗಿತರಂಗ ಅನೂಪ್ ಭಂಡಾರಿ ಅವರ ಚೊಚ್ಚಲು ನಿರ್ದೇಶನದ ಸಿನಿಮಾ. ಬಾಕ್ಸ್ ಆಫೀಸಿನಲ್ಲಿ ಹೊಸ ದಾಖಲೆ ಬರೆದಿದ್ದ ಈ ಸಿನಿಮಾ ಆಸ್ಕರ್ ಪ್ರಶಸ್ತಿಯ ಲಿಸ್ಟ್ ನಲ್ಲಿ ಕಾಣಿಸಿಕೊಳ್ಳುವುದರ ಮೂಲಕ ಸಾಕಷ್ಟು ಸದ್ದು ಮಾಡಿತ್ತು. ಈ ಸಿನಿಮಾದಲ್ಲಿ ಬಹುತೇಕ ಹೊಸಬರೇ ಕೆಲಸ ಮಾಡಿದ್ದರೂ, ಜನಪ್ರಿಯತೆಯಲ್ಲಿ ಅದು ಯಾವತ್ತೂ ಹಿಂದೆ ಬೀಳಲಿಲ್ಲ. ಆಸ್ಕರ್ ನಲ್ಲೂ ಸರಿಯಾದ ಫೈಟ್ ಅನ್ನೇ ಅದು ಮಾಡಿತ್ತು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ

    ಪ್ರತಿಷ್ಠಿತ 95ನೇ ಆಸ್ಕರ್ ಅಕಾಡಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಕಾಣಿಸಿಕೊಂಡಿದೆ. ನಟನಾ ವಿಭಾಗದಲ್ಲಿ ಈ ಸಿನಿಮಾ ಆಯ್ಕೆಯಾಗಿದ್ದು, ಕನ್ನಡದ ಎರಡು ಚಿತ್ರಗಳು ಈ ಬಾರಿ ಆಸ್ಕರ್ ಅಂಗಳದಲ್ಲಿವೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರೂಪ್ ಭಂಡಾರಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

    ವಿಕ್ರಾಂತ್ ರೋಣ ಜೊತೆ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ಎರಡು ವಿಭಾಗದಲ್ಲಿ ಅದು ಅರ್ಹತೆ ಸುತ್ತನ್ನು ಪಾಸು ಮಾಡಿದ್ದು, ಮುಂದಿನ ಹಂತಕ್ಕೆ ಸಿನಿಮಾ ಹೋಗಬೇಕಾದರೆ, ಆಸ್ಕರ್ ಸದಸ್ಯರು ಮತ ಚಲಾಯಿಸುವುದು ಕಡ್ಡಾಯವಾಗಿದೆ. ವಿಶ್ವದಾದ್ಯಂತ ಒಟ್ಟು 301 ಸಿನಿಮಾಗಳು ಅರ್ಹತೆ ಸುತ್ತಿನಲ್ಲಿ ಪಾಸಾಗಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಆಸ್ಕರ್’ ಅರ್ಹತೆ ಯಾದಿಯಲ್ಲಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರ

    ‘ಆಸ್ಕರ್’ ಅರ್ಹತೆ ಯಾದಿಯಲ್ಲಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರ

    ಪ್ರತಿಷ್ಠಿತ 95ನೇ ಆಸ್ಕರ್ ಅಕಾಡಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಕೂಡ ಕಾಣಿಸಿಕೊಂಡಿದೆ. ನಟನಾ ವಿಭಾಗದಲ್ಲಿ ಈ ಸಿನಿಮಾ ಆಯ್ಕೆಯಾಗಿದ್ದು, ಕನ್ನಡದ ಎರಡು ಚಿತ್ರಗಳು ಈ ಬಾರಿ ಆಸ್ಕರ್ ಅಂಗಳದಲ್ಲಿವೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರೂಪ್ ಭಂಡಾರಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

    ವಿಕ್ರಾಂತ್ ರೋಣ ಜೊತೆ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ಎರಡು ವಿಭಾಗದಲ್ಲಿ ಅದು ಅರ್ಹತೆ ಸುತ್ತನ್ನು ಪಾಸು ಮಾಡಿದ್ದು, ಮುಂದಿನ ಹಂತಕ್ಕೆ ಸಿನಿಮಾ ಹೋಗಬೇಕಾದರೆ, ಆಸ್ಕರ್ ಸದಸ್ಯರು ಮತ ಚಲಾಯಿಸುವುದು ಕಡ್ಡಾಯವಾಗಿದೆ. ವಿಶ್ವದಾದ್ಯಂತ ಒಟ್ಟು 301 ಸಿನಿಮಾಗಳು ಅರ್ಹತೆ ಸುತ್ತಿನಲ್ಲಿ ಪಾಸಾಗಿವೆ. ಇದನ್ನೂ ಓದಿ:ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾಯಕಿ ಮಂಗ್ಲಿ

    ಈ ಕುರಿತು ನಿರ್ದೇಶಕ ರಿಷಬ್ ಶೆಟ್ಟಿ ಟ್ವಿಟ್ ಮಾಡಿದ್ದು, ‘ಕಾಂತಾರ ಸಿನಿಮಾ ಆಸ್ಕರ್ ಅರ್ಹತೆಯ ಸುತ್ತಿನಲ್ಲಿ ಎರಡು ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ. ಈ ವಿಚಾರ ತಿಳಿಸಲು ಸಂತಸವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಅಲ್ಲದೇ, ಮುಂದಿನ ಹಂತಕ್ಕೆ ಹೋಗಿದ್ದು ಸಂಭ್ರಮ ತಂದಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಸಿನಿಮಾ ಶತದಿನೋತ್ಸವ ಪೂರೈಸಿದೆ. ಸದ್ಯದಲ್ಲೇ ಅದು ಟಿವಿಯಲ್ಲೂ ಪ್ರಸಾರವಾಗಲಿದೆ. ಇಷ್ಟೊಂದು ಸಂಭ್ರಮಗಳೊಂದಿಗೆ ಚಿತ್ರತಂಡ ಕಾಂತಾರ 2 ಸಿನಿಮಾದ ಸಿದ್ಧತೆಯನ್ನು ಸದ್ದಿಲ್ಲದೇ ಮಾಡುತ್ತಿದೆ. ಈಗಾಗಲೇ ಚಿತ್ರಕಥೆಯನ್ನು ಬರೆಯುವುದರಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನುವ ಮಾಹಿತಿ ಇದೆ. ಆದರೆ, ಈ ವಿಷಯವನ್ನು ಸಿನಿಮಾ ಟೀಮ್ ಬಹಿರಂಗ ಪಡಿಸುತ್ತಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಕೀಯ ಅಖಾಡಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

    ರಾಜಕೀಯ ಅಖಾಡಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಸಿನಿಮಾಗಳಲ್ಲಿ ಬ್ಯುಸಿಯಿರುವಾಗಲೇ ರಾಜಕೀಯ (Politics) ಎಂಟ್ರಿಯ ಕುರಿತು ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಸುದೀಪ್ ರಾಜಕೀಯ ರಂಗಕ್ಕೆ ಬರುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಕಡೆಯಿಂದ ಕಿಚ್ಚನಿಗೆ ಬಂಪರ್ ಆಫರ್ ಸಿಕ್ಕಿದೆ.

    ಇತ್ತೀಚೆಗಷ್ಟೇ `ವಿಕ್ರಾಂತ್ ರೋಣ’ (Vikrant Rona) ಸಕ್ಸಸ್‌ನಲ್ಲಿದ್ದ ಸುದೀಪ್, ಬಿಗ್ ಬಾಸ್ ರಿಯಾಲಿಟಿ ಶೋ (Bigg Boss) ನಿರೂಪಣೆ ಮುಗಿಸಿ ಸ್ವಲ್ಪ ಫ್ರಿ ಆಗಿದ್ದಾರೆ. ಈ ಬೆನ್ನಲ್ಲೇ ಸುದೀಪ್‌ಗೆ ರಾಜಕೀಯ ರಂಗಕ್ಕೆ ಎಂಟ್ರಿ ಕೊಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಮಣೆ ಹಾಕ್ತಿದ್ದಾರೆ. ನಟಿ ರಮ್ಯಾ (Actress Ramya) ಮೂಲಕ ಸುದೀಪ್ ಅವರನ್ನ ಕಾಂಗ್ರೆಸ್ (Congress) ನಾಯಕರು ಈಗಾಗಲೇ ಸಂಪರ್ಕಿಸಿದ್ದಾರೆ.

    ಸಿನಿಮಾರಂಗದಲ್ಲಿ ಅಗ್ರ ಸ್ಥಾನದಲ್ಲಿರುವ ಸುದೀಪ್‌ಗೆ ಕಾಂಗ್ರೆಸ್ ಪಕ್ಷದ ಕಡೆಯಿಂದ ಬಂದಿರುವ ಆಫರ್ ಬಂದಿದೆ. ನಟಿ ರಮ್ಯಾ ಮೂಲಕ ಕಾಂಗ್ರೆಸ್ ನಾಯಕರು ಈಗಾಗಲೇ ನಟ ಸುದೀಪ್ ಜೊತೆ ಒಂದು ಹಂತದ ಮಾತುಕತೆ ನಡೆಸಿದ್ದಾರೆ. ಆದರೆ ತಮ್ಮ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ಸುದೀಪ್ ಕಡೆಯಿಂದ ಬಂದಿಲ್ಲ. ರಾಜಕೀಯ ಪ್ರವೇಶದ ಬಗ್ಗೆ ಸುದೀಪ್ ಕೂಡ ಮೌನ ವಹಿಸಿದ್ದಾರೆ. ಇದನ್ನೂ ಓದಿ:ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾಯಕಿ ಮಂಗ್ಲಿ

    ಬಣ್ಣಲೋಕದಲ್ಲಿ ಭರ್ಜರಿ ಡಿಮ್ಯಾಂಡ್ ಇರುವಾಗ ನಟಿ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಮಣಿದು ರಾಜಕೀಯ ಅಖಾಡಕ್ಕೆ ಕಿಚ್ಚ ಸುದೀಪ್ (Kiccha Sudeep) ಬರುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಬ್ಲಿಂಕ್’ ಸಿನಿಮಾದಲ್ಲಿ ಕಾಣಿಸಿಕೊಂಡ ವಿಕ್ರಾಂತ್ ರೋಣ ಪಿಟಿ ಮೇಸ್ಟ್ರು

    ‘ಬ್ಲಿಂಕ್’ ಸಿನಿಮಾದಲ್ಲಿ ಕಾಣಿಸಿಕೊಂಡ ವಿಕ್ರಾಂತ್ ರೋಣ ಪಿಟಿ ಮೇಸ್ಟ್ರು

    ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಪಿಟಿ ಮೇಷ್ಟ್ರು ಪಾತ್ರದ ಮೂಲಕ ಗಮನ ಸೆಳೆದ ಕಲಾವಿದ ವಜ್ರಧೀರ್ ಜೈನ್. ಚಿತ್ರದಲ್ಲಿ ಲಾರೆನ್ಸ್ ಪಿಂಟೋ ಪಾತ್ರದ ಮೂಲಕ ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿದ್ರು. ಅಚ್ಚುಕಟ್ಟಾದ ನಟನೆ ಮೂಲಕ ಗಮನ ಸೆಳೆದು ಪ್ರೇಕ್ಷಕರ ಮನಗೆದ್ದಿರುವ ಇವರು ಈಗ ಸ್ಯಾಂಡಲ್ ವುಡ್ ಅಂಗಳದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಟೈಟಲ್ ಮೂಲಕವೇ ಗಮನ ಸೆಳೆದಿರೋ ‘ಬ್ಲಿಂಕ್’ ಸಿನಿಮಾದಲ್ಲಿ ಮತ್ತೊಂದು ದೊಡ್ಡ ಪಾತ್ರ ನಿಭಾಯಿಸಿದ್ದಾರೆ ವಜ್ರಧೀರ್ ಜೈನ್.

    ‘ರಾಜರಥ’ ಸಿನಿಮಾದಲ್ಲಿ ನಟಿಸಿದ್ದ ವಜ್ರಧೀರ್ ಜೈನ್, ‘ವಿಕ್ರಾಂತ್ ರೋಣ’ ಚಿತ್ರದ ಪಾತ್ರದ ಮೂಲಕ ಮನೆ ಮಾತಾಗಿದ್ದಾರೆ. ಮೂಲತಃ ರಂಗಭೂಮಿ ಕಲಾವಿದರಾದ ವಜ್ರಧೀರ್ ಜೈನ್ ಸಮಸ್ಟಿ ನಾಟಕ ತಂಡದಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ನೀನಾಸಂನಲ್ಲೂ ತರಭೇತಿ ಪಡೆದಿದ್ದಾರೆ. ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ‘ರಾಜರಥ’ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಎಂಟ್ರಿಕೊಟ್ಟ ಇವರು ವಿಜಯ ರಾಘವೇಂದ್ರ ಅಭಿನಯದ ‘ಮಾಲ್ಗುಡಿ ಡೇಸ್’ ಚಿತ್ರದಲ್ಲೂ ಅಭಿನಯಿಸಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾ ದೊಡ್ಡ ಬ್ರೇಕ್ ನೀಡಿದ್ದು ನೈಜ ಅಭಿನಯ, ಪಾತ್ರವನ್ನು ಜೀವಿಸುವ ರೀತಿ ಎಲ್ಲವೂ ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆಗೆ ಪಾತ್ರವಾಗಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಅರವಿಂದ್‌ಗಾಗಿ ಬೇಡಿಕೆಯಿಟ್ಟ ದಿವ್ಯಾ ಉರುಡುಗ

    ಸ್ಯಾಂಡಲ್ ವುಡ್ ನಲ್ಲಿ ಕ್ಯೂರಿಯಾಸಿಟಿ ಮೂಡಿಸಿರುವ ‘ಬ್ಲಿಂಕ್’ ಸಿನಿಮಾದಲ್ಲೂ ವಜ್ರಧೀರ್ ಜೈನ್ ನಟಿಸಿದ್ದಾರೆ. ಶ್ರೀನಿಧಿ ಬೆಂಗಳೂರು ನಿರ್ದೇಶನದ ಈ ಚಿತ್ರದಲ್ಲಿ ವಜ್ರಧೀರ್ ಜೈನ್ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಈ ಬಗ್ಗೆ ಚಿತ್ರದ  ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡಿದ್ದು ಒಂದು ಹೊಸ ಅನುಭವ ನೀಡಿದೆ. ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ದೊಡ್ಡ ಪಾತ್ರ ನಿಭಾಯಿಸಿದ್ದಾರೆ ಎಂದು ನಮಗೆ ಗೊತ್ತಿರಲಿಲ್ಲ. ಅವರು ಕೂಡ ಈ ಬಗ್ಗೆ ಹೇಳಿ ಕೊಂಡಿರಲಿಲ್ಲ. ನಮಗೆ ನಾಟಕ ತಂಡದ ಮೂಲಕ ಅವರ ಪರಿಚಯವಾಗಿದ್ದು, ಬ್ಲಿಂಕ್ ನಲ್ಲೂ ಬಹಳ ಪ್ರಾಮುಖ್ಯತೆ ಇರೋ ಪಾತ್ರವನ್ನು ನಿಭಾಯಿಸಿದ್ದಾರೆ. ಪಾತ್ರವನ್ನು ತುಂಬಾ ಕ್ಯಾಚಿಯಾಗಿ, ಸೆಟಲ್ ಆಗಿ ನಿರ್ವಹಿಸಿದ್ದಾರೆ ಆ ಮೂಲಕ ಅವರ ಪಾತ್ರಕ್ಕೆ ತೂಕ ತಂದು ಕೊಟ್ಟಿದ್ದಾರೆ. ನೋಡುಗರಿಗೆ ಬಹಳ ಬೇಗ ಅವರ ಪಾತ್ರ ಕನೆಕ್ಟ್ ಆಗುತ್ತೆ. ಆದ್ರಿಂದಲೇ ಅವರ ಪಾತ್ರಕ್ಕೆ ಅರಿವು ಎಂದು ಹೆಸರಿಟ್ಟಿದ್ದೇವೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಸಂತಸ ಹಂಚಿಕೊಂಡಿದ್ದಾರೆ.

    ‘ಬ್ಲಿಂಕ್’ ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು, ನವ ನಿರ್ದೇಶಕ ಶ್ರೀನಿಧಿ ಬೆಂಗಳೂರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡು ಭರವಸೆ ಮೂಡಿಸಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನನಿ ಪಿಕ್ಚರ್ಸ್ ಬ್ಯಾನರ್ ನಡಿ ರವಿಚಂದ್ರ ಎ.ಜೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಆರು ಪ್ರಮುಖ ಪಾತ್ರಗಳು ಟ್ರಾವೆಲ್ ಮಾಡಲಿದ್ದು, ದಿಯಾ ಖ್ಯಾತಿಯ ದೀಕ್ಷಿತ್, ವಜ್ರದೀರ್ ಜೈನ್, ಚೈತ್ರ ಜೆ ಆಚಾರ್, ಮಂದಾರ ಬಟ್ಟಲಹಳ್ಳಿ, ಗೋಪಾಲ ಕೃಷ್ಣ ದೇಶಪಾಂಡೆ, ಯಶಸ್ವಿನಿ ರಾವ್, ಕಿರಣ್ ನಾಯ್ಕ್, ಸುರೇಶ್ ಅನಗಳ್ಳಿ ಮುಖ್ಯ ತಾರಾಗಣದಲ್ಲಿದ್ದಾರೆ. ಅವಿನಾಶ ಶಾಸ್ತ್ರಿ ಛಾಯಾಗ್ರಾಹಣ, ಪ್ರಸನ್ನ ಕುಮಾರ್ ಮ್ಯೂಸಿಕ್, ಸಂಜೀವ್ ಜಗೀರ್ದಾರ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಹಸೆಮಣೆ ಏರಲು ರೆಡಿಯಾದ `ವಿಕ್ರಾಂತ್ ರೋಣ’ ಸುಂದರಿ ನೀತಾ ಅಶೋಕ್

    ಹಸೆಮಣೆ ಏರಲು ರೆಡಿಯಾದ `ವಿಕ್ರಾಂತ್ ರೋಣ’ ಸುಂದರಿ ನೀತಾ ಅಶೋಕ್

    ಸ್ಯಾಂಡಲ್‌ವುಡ್ (Sandalwood) ನಟಿ ನೀತಾ ಅಶೋಕ್ (Neetha Ashok) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ.

    ಖಾಸಗಿ ವಾಹಿನಿಯ `ಯಶೋದೆ’ (Yashode) ಸೀರಿಯಲ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಕರಾವಳಿ ಚೆಲುವೆ ನೀತಾ ಅಶೋಕ್, ತುಳುವಿನ `ಜಬರ್‌ದಸ್ತ್ ಶಂಕರ’ ಸಿನಿಮಾಗೆ ನಾಯಕಿಯಾದ್ರು. ಬಳಿಕ ಸುದೀಪ್ (Sudeep) ನಟನೆಯ `ವಿಕ್ರಾಂತ್ ರೋಣ’ (Vikant Rona) ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದರು. ವರ್ಲ್ಡ್ ವೈಡ್ ನಾಯಕಿಯಾಗಿ ರೀಚ್ ಆಗಿದ್ದರು. ಈ ಚಿತ್ರದ ನಂತರ ಮುಂದೆ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾದು ಕೂತಿದ್ದ ಫ್ಯಾನ್ಸ್‌ಗೆ ಮದುವೆಯ ಸುದ್ದಿ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ತಮ್ಮ ಬಹುಕಾಲದ ಗೆಳೆಯ ಸತೀಶ್ (Satish) ಜೊತೆ ಇತ್ತೀಚೆಗೆ ನೀತಾ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕ್ಲಾಸ್‌ಮೇಟ್ ಟು ಸೋಲ್‌ಮೇಟ್ ಎಂಬ ಪೋಸ್ಟ್ ಹಾಕುವ ಮೂಲಕ ತಾವು ಎಂಗೇಜ್ ಆಗಿರುವ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಚಿರು ಸಿನಿಮಾ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

     

    View this post on Instagram

     

    A post shared by Neetha Ashok (@neethaashok01)

    ನಿಶ್ಚಿತಾರ್ಥದಲ್ಲಿ (Engagement) ಕುಟುಂಬದವರು, ಆಪ್ತರು ಅಷ್ಟೇ ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ. ಹಲವಾರು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ರೆಡಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ಟೋಬರ್ 15 ರಂದು ಜೀ ಕನ್ನಡ ವಾಹಿನಿಯಲ್ಲಿ ‘ವಿಕ್ರಾಂತ್ ರೋಣ’

    ಅಕ್ಟೋಬರ್ 15 ರಂದು ಜೀ ಕನ್ನಡ ವಾಹಿನಿಯಲ್ಲಿ ‘ವಿಕ್ರಾಂತ್ ರೋಣ’

    ವಿಕ್ರಾಂತ್ ರೋಣ (Vikrant Rona) ಕನ್ನಡ ಸಿನಿ ಪ್ರಿಯರು ಹಿಂದೆಂದೂ ಕಾಣದಂತ 3D ಅನುಭವ ನೀಡಿದಂತ ಅತ್ಯದ್ಭುತ ದೃಶ್ಯ ವೈಭವ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿನಯದ ಈ ಚಿತ್ರ ಒಂದು ವಿಭಿನ್ನ ಸಸ್ಪೆನ್ಸ್ ಥ್ರಿಲ್ಲರ್ ಕಥೆಯ ಮೂಲಕ ಹೊಸತೊಂದು ಪ್ಯಾಂಟಸಿ ಲೋಕಕ್ಕೆ ಪ್ರೇಕ್ಷಕರನ್ನು ಕರೆದುಕೊಂಡ ಹೋದ ಹೆಗ್ಗಳಿಕೆ ಹೊಂದಿದೆ. ಇದೀಗ ಕನ್ನಡದ ನಂಬರ್ 1 ಮನರಂಜನಾ ವಾಹಿನಿ  ಜೀ ಕನ್ನಡ ಇದೇ ಅಕ್ಟೋಬರ್ 15 ಶನಿವಾರ ರಾತ್ರಿ 7.30ಕ್ಕೆ ಈ ಸಿನಿಮಾವನ್ನು ಅದ್ಧೂರಿಯಾಗಿ World Television premiere ಮಾಡಲಿದೆ.

    ಏಕಕಾಲಕ್ಕೆ ಹಲವಾರು ಭಾಷೆಗಳಲ್ಲಿ ತೆರೆಕಂಡು ಅದ್ಭುತ ಯಶಸ್ಸುಗಳಿಸಿರುವ ಈ ಸಿನಿಮಾ ಕೂಡ ಕನ್ನಡ ಚಿತ್ರರಂಗದ ಶಕ್ತಿ ಪ್ರದರ್ಶನ ಮಾಡಿದ ಶ್ರೇಯಸ್ಸನ್ನು ತನ್ನದಾಗಿಸಿಕೊಂಡಿದೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಇದರ ನಿರ್ದೇಶನದ ಜವಾಬ್ದಾರಿ ಹೊತ್ತು ಯಶಸ್ವಿಯಾಗಿದ್ದರೇ ಜಾಕ್ ಮಂಜು ಅವರು ಹಣಹೂಡಿಕೆ ಮಾಡಿದ್ದಾರೆ. ಇದನ್ನೂ ಓದಿ:‘ಆದಿಪುರುಷ್’ ಸಿನಿಮಾ ಟೀಮ್ ಮೇಲೆ ಬಿತ್ತು ಕೇಸ್: ಅ.27ಕ್ಕೆ ವಿಚಾರಣೆ ನಿಗದಿ

    ಚಂದನವನದ ಸದ್ಯದ ಟ್ರೆಂಡ್ ಸೆಟ್ಟಿಂಗ್ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಸಂಗೀತ  ಸಂಯೋಜನೆ ಹಾಗೂ ವಿಲಿಯಮ್ ಡೇವಿಡ್ ಅವರ ಭರ್ಜರಿ ಛಾಯಾಗ್ರಹಣವಿದೆ. ಬಹುಕೋಟಿ ವೆಚ್ಚದ ಈ ಚಿತ್ರದ ಹಂಚಿಕೆ ಜವಾಬ್ದಾರಿಯನ್ನು ದೇಶದ ಅತಿದೊಡ್ಡ ಮನರಂಜನಾ ಸಂಸ್ಥೆಯಾದ ಜೀ ಸ್ಟುಡಿಯೋಸ್ ವಹಿಸಿದ್ದು ವಿಶೇಷ .

    ಇನ್ನು ವಿಕ್ರಾಂತ್ ರೋಣ ಚಿತ್ರ ಶ್ರೀಮಂತ ತಾರಾಗಣಕ್ಕೆ ಸಾಕ್ಷಿಯಾಗಿದ್ದು ಕಿಚ್ಚ ಸುದೀಪ್ ಸೇರಿದಂತೆ  ನಿರೂಪ್ ಭಂಡಾರಿ , ನೀತಾ ಅಶೋಕ್, ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ಇನ್ನು ಅನೇಕರು ಇದರ ಭಾಗವಾಗಿದ್ದಾರೆ. ಅಷ್ಟೇ ಅಲ್ಲದೆ ವಿಶ್ವದ ಅತಿದೊಡ್ಡ ಕಟ್ಟಡವಾದ ಬುರ್ಜ್ ಖಲೀಫಾದ ಮೇಲೆ ಕನ್ನಡದ ಬಾವುಟ ಹಾರಿಸಿದ ಹೆಮ್ಮೆಯ ವಿಷಯಕ್ಕೆ ಪಾತ್ರವಾಗಿದೆ ಈ ಚಿತ್ರತಂಡ.

    ಇನ್ನು ಕಿಚ್ಚ ಸುದೀಪ್ ಅವರು ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandes)  ಜೊತೆ ಹೆಜ್ಜೆ ಹಾಕಿರುವ ʼರಾರಾ ರಕ್ಕಮ್ಮ ಹಾಡುʼ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದು ಈಗಲೂ ಸೋಷಿಯಲ್ ಮೀಡಿಯಾದಲ್ಲಿ, ರೀಲ್ಸ್ ಗಳಲ್ಲಿ ಅತಿಹೆಚ್ಚು ಬಳಕೆಯಲ್ಲಿದೆ. ಇದೇ ಅಕ್ಟೋಬರ್ 15 ಶನಿವಾರ ರಾತ್ರಿ 7.30ಕ್ಕೆ ಈ ಸಿನಿಮಾ ಅದ್ಧೂರಿಯಾಗಿ World Television premiere ಆಗುತ್ತಿದ್ದು, ಮನೆಮಂದಿಯೆಲ್ಲಾ ಕೂತು ನೋಡಿ ವಿಶೇಷವಾದ ಪ್ಯಾಂಟಸಿ ಲೋಕಕ್ಕೆ ಹೋಗಿ.

    Live Tv
    [brid partner=56869869 player=32851 video=960834 autoplay=true]

  • ಒಟಿಟಿ ಟ್ರೇಡಿಂಗ್ ಟಾಪ್ 3 ಸ್ಥಾನದಲ್ಲಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’

    ಒಟಿಟಿ ಟ್ರೇಡಿಂಗ್ ಟಾಪ್ 3 ಸ್ಥಾನದಲ್ಲಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’

    ಕಿಚ್ಚ ಸುದೀಪ್ (Sudeep) ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ (Vikrant Rona) ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ (OTT) ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು ನಿಮಿಷದಲ್ಲಿ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ 3 (Top) ಸ್ಥಾನ ಕೂಡ ಗಿಟ್ಟಿಸಿಕೊಂಡಿದೆ.

    #VikranthronaZEE5Contest ನಡಿ ಜೀ5 ಒಟಿಟಿ ಸಂಸ್ಥೆ ರಕ್ಕಮ್ಮ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದವರಿಗೆ 25 ಸಾವಿರ ಬಹುಮಾನ ಹಾಗೂ ಪ್ರಮುಖ 10 ಸ್ಪರ್ಧಿಗಳಿಗೆ ಉಡುಗೊರೆ ಹಾಗೂ ಸುದೀಪ್ ವೈಯಕ್ತಿಕ ಪಾತ್ರ ಕೊಡುವುದಾಗಿ ಸ್ಪರ್ಧೆ ಆಯೋಜಿಸಲಾಗಿತ್ತು. ಅದರಂತೆ ರಕ್ಕಮ್ಮ ಹಾಡಿಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿದವರಿಗೆ 25 ಸಾವಿರ ಹಣ ಹಾಗೂ 10 ಜನಕ್ಕೆ ಕಿಚ್ಚನ ಕಡೆಯಿಂದ ಪತ್ರ ಹಾಗೂ ಉಡುಗೊರೆ ನೀಡಲಾಗಿದೆ. ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

    ಅದ್ದೂರಿ ಬಜೆಟ್​ನಲ್ಲಿ ‘ವಿಕ್ರಾಂತ್​ ರೋಣ’  ಜಾಕ್​ ಮಂಜು ನಿರ್ಮಾಣ ಮಾಡಿದ್ದರು. ಕಿಚ್ಚ ಸುದೀಪ್​, ಅನೂಪ್​ ಭಂಡಾರಿ (Anoop Bhandari), ನೀತಾ ಅಶೋಕ್​, ಮಿಲನಾ ನಾಗರಾಜ್​, ಜಾಕ್ವೆಲಿನ್​ ಫರ್ನಾಂಡಿಸ್​, ಮಧುಸೂದನ್​ ರಾವ್​, ರವಿಶಂಕರ್ ಗೌಡ ಮುಂತಾದವರು ನಟಿಸಿದ್ದರು. ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಎಲ್ಲ ಹಾಡುಗಳು ಸೂಪರ್ ಹಿಟ್ ಆಗಿದ್ದವು. ಜಾಕ್ವೆಲಿನ್ ಫರ್ನಾಂಡಿಸ್​ ಜೊತೆ ಕಿಚ್ಚ ಸುದೀಪ್ ಹೆಜ್ಜೆ ಹಾಕಿದ ‘ರಾ ರಾ ರಕ್ಕಮ್ಮ..’ ಹಾಡಿಗೆ​ ಅಭಿಮಾನಿಗಳು ಫಿದಾ ಆಗಿದ್ದರು. ಥಿಯೇಟರ್ ನಲ್ಲಿಯೂ ಭರ್ಜರಿ ಕಮಾಯಿ ಮಾಡಿದ್ದ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಹಂಗಾಮ ಸೃಷ್ಟಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]