Tag: Vikranth Rona

  • ಅನಾಥ ಮಹಿಳೆಗೆ ಮನೆ ಕಟ್ಟಿಸಿಕೊಟ್ಟ ಕಿಚ್ಚ ಸುದೀಪ್

    ಅನಾಥ ಮಹಿಳೆಗೆ ಮನೆ ಕಟ್ಟಿಸಿಕೊಟ್ಟ ಕಿಚ್ಚ ಸುದೀಪ್

    ಸ್ಯಾಂಡಲ್‌ವುಡ್‌ನಲ್ಲಿ ಮಾತ್ರ ಅಲ್ಲ ದೇಶದ ಮೂಲೆ ಮೂಲೆಯಲ್ಲೂ ಕಿಚ್ಚ ಸುದೀಪ್ ಅವರದ್ದೇ ಹವಾ. ಸದ್ಯ `ವಿಕ್ರಾಂತ್ ರೋಣ’ ಚಿತ್ರ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಚಾರದ ನಡುವೆಯೂ ಸಂಕಷ್ಟದಲ್ಲಿರುವ ಓರ್ವ ಮಹಿಳೆಗೆ ಸುದೀಪ್ ಸಹಾಯ ಮಾಡಿದ್ದಾರೆ.

    ಸದ್ಯ ರಿಲೀಸ್‌ಗೆ ರೆಡಿಯಿರುವ `ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದಲ್ಲಿ ಸುದೀಪ್ ಬ್ಯುಸಿಯಾಗಿದ್ದರೂ ಅವರ ಸಮಾಜ ಸೇವೆ ಕೆಲಸಗಳು ಮಾತ್ರ ನಿರಂತರವಾಗಿ ನಡೆಯುತ್ತಿವೆ. ತೆರೆಯ ಮರೆಯಲ್ಲಿ ಕಿಚ್ಚ ಸುದೀಪ್ ಬಡವರಿಗೆ, ಶ್ರಮಿಕರಿಗೆ ಸಹಾಯ ಮಾಡುವುದನ್ನು ಮರೆಯುವುದಿಲ್ಲ. ಈಗ ತಮ್ಮದೇ ಟ್ರಸ್ಟ್ ಮೂಲಕ ಸಮಾಜಮುಖಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಈಗ ಅನಾಥ ಮಹಿಳೆಯ ಸಂಕಷ್ಟಕ್ಕೆ ಸುದೀಪ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ನಟ ನರೇಶ್ ಆತ್ಮೀಯರಾಗಿದ್ದು ದುಡ್ಡಿನ ಕಾರಣಕ್ಕೆ ಅಲ್ಲ, ನಾನು ದುಡ್ಡಿನ ಹಿಂದೆ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ಚಿತ್ರದುರ್ಗದ ಚಳ್ಳಕೆರೆಯ ಪುಟ್ಟ ಗ್ರಾಮದ ಅನಾಥೆ ಮಹಿಳೆ ಹೊನ್ನೂರಮ್ಮ ಒಂದು ಹಳೆಯ ಮನೆಯಿತ್ತು ಬೀಳುವ ಸ್ಥಿತಿಯಲ್ಲಿತ್ತು. ಈ ವಿಚಾರ ಸುದೀಪ್‌ಗೆ ತಿಳಿದ ಬೆನ್ನಲ್ಲೇ, ಹಳೆ ಮನೆ ದುರಸ್ಥಿ ಮಾಡಿಸಿ, ಖಾಲಿಯಿದ್ದ ಜಾಗದಲ್ಲಿ ಪುಟ್ಟದೊಂದು ಶೀಟ್ ಮನೆ ಕಟ್ಟಿಸಿ ಕೊಟ್ಟಿದ್ದಾರೆ.ಸುಮಾರು 2 ಲಕ್ಷ ರೂ ವೆಚ್ಚದಲ್ಲಿ ಒಂದು ಕೋಣೆ, ಬಚ್ಚಲುಮನೆ ಇರೋ ಪುಟ್ಟ ಶೀಟ್ ಮನೆ ಕಟ್ಟಿಸಿದ್ದಾರೆ. ಅಗತ್ಯದ ವೇಳೆಯಲ್ಲಿ ಸುದೀಪ್ ಸಹಾಯ ಮಾಡಿರುವುದಕ್ಕೆ ಹೊನ್ನೂರಮ್ಮ ಧನ್ಯವಾದ ತಿಳಿಸಿದ್ದಾರೆ. ಕಿಚ್ಚನ ನಡೆಯಿಂದ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

    Live Tv

  • ಕಿಚ್ಚ ಸುದೀಪ್ ಅವರನ್ನ ಕಾಪಿ ಹೊಡೆದ ಸ್ಟಾರ್ ನಟ ಕಮಲ್ ಹಾಸನ್

    ಕಿಚ್ಚ ಸುದೀಪ್ ಅವರನ್ನ ಕಾಪಿ ಹೊಡೆದ ಸ್ಟಾರ್ ನಟ ಕಮಲ್ ಹಾಸನ್

    ನ್ನಡ ಸಿನಿಮಾಗಳ ಮಾರುಕಟ್ಟೆ ಈಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಅದಲ್ಲದೇ ಯಶ್, ಸುದೀಪ್ ಇಂತಹ ಸ್ಟಾರ್‌ಗಳನ್ನ ಎಲ್ಲಾ ರಂಗದ ಸ್ಟಾರ್‌ಗಳು ಫಾಲೋವ್ ಮಾಡ್ತಿದ್ದಾರೆ. ಇನ್ನು ಕಿಚ್ಚ ಸುದೀಪ್ ತೋರಿಸಿಕೊಟ್ಟ ಹಾದಿಯಲ್ಲೇ ಕಾಲಿವುಡ್ ಸ್ಟಾರ್ ಕಮಲ್ ಹಾಸನ್  ಫಾಲೋವ್ ಮಾಡುತ್ತಿದ್ದಾರೆ.

    ಸುದೀಪ್ ಕನ್ನಡ ಮಾತ್ರವಲ್ಲದೇ ಪರಭಾಷಾ ಚಿತ್ರರಂಗದಲ್ಲೂ ಗುರುತಿಸಿಕೊಂಡ ಮಹಾನ್ ಪ್ರತಿಭೆ, ಅಕ್ಕ ಪಕ್ಕದ ರಾಜ್ಯದ ಸೂಪರ್ ಸ್ಟಾರ್‌ಗಳ ಜತೆಗೂ ಕಿಚ್ಚನಿಗೆ ಒಳ್ಳೆಯ ಒಡನಾಟವಿದೆ. ಕಿಚ್ಚನ ಸಿನಿಮಾ ಪ್ರಚಾರದ ವೈಖರಿ ಪರಭಾಷಾ ಮಂದಿಗೂ ಇಷ್ಟವಾಗುತ್ತಿದೆ. `ವಿಕ್ರಾಂತ್ ರೋಣ’ ಚಿತ್ರದ ಪ್ರಚಾರವನ್ನ ಭಿನ್ನವಾಗಿ ಮಾಡಿದ್ದರು. ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಟೈಟಲ್ ಲಾಂಚ್ ಮಾಡಿದ್ದರು. ಕಮಲ್ ಹಾಸನ್ ಕೂಡ ಇದೇ ಟ್ರೇಂಟ್ ಫಾಲೋವ್ ಮಾಡುತ್ತಿದ್ದಾರೆ.

    ಕಮಲ್ ಹಾಸನ್ ನಟನೆಯ ನಿರೀಕ್ಷಿತ `ವಿಕ್ರಮ್’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಜೂನ್ 1ರಂದು ರಾತ್ರಿ 8.10ಕ್ಕೆ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಚಿತ್ರದ ಕೆಲ ತುಣುಕುಗಳನ್ನು ಬಿತ್ತರಿಸಲು ಸಕಲ ಸಿದ್ಧತೆ ಮಾಡಲಾಗಿದೆ. ವಿಕ್ರಮ್ ಚಿತ್ರದ ತುಣುಕುಗಳನ್ನು ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಈ ಮೂಲಕ ಕಿಚ್ಚನ ಟ್ರೆಂಡ್ ಅನ್ನು ಕಮಲ್ ಹಾಸನ್ ಅನುಸರಿಸುತ್ತಿದ್ದಾರೆ. ಇದನ್ನು ಓದಿ:`ಕೆಜಿಎಫ್’ ನಿರ್ದೇಶಕನಿಗೆ ಟಕ್ಕರ್ ಕೊಡಲು ಸಜ್ಜಾದ `ಪುಷ್ಪ’ ಡೈರೆಕ್ಟರ್ ಸುಕುಮಾರ್

    ರಾಜ್ ಕಮಲ್ ಫಿಲ್ಮ್÷್ಸ ಇಂಟರ್‌ನ್ಯಾಷನಲ್ ನಿರ್ಮಾಣದ `ವಿಕ್ರಮ್’ ಜೂನ್ 3ಕ್ಕೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಕಮಲ್ ಹಾಸನ್ ಅವರ ವಿಕ್ರಮಾವತಾರ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

  • `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ ಸ್ಯಾಂಡಲ್‌ವುಡ್ ತಾರೆಯರು

    `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ ಸ್ಯಾಂಡಲ್‌ವುಡ್ ತಾರೆಯರು

    ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ `ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ವಿಚಾರಗಳಿಂದ ಅಟ್ರಾಕ್ಟ್ ಮಾಡುತ್ತಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿರೋ `ರಾ ರಾ ರಕ್ಕಮ್ಮಾ’ ಸಾಂಗ್ ಅಂತೂ ಸಿನಿರಸಿಕರಿಗೆ ಮೋಡಿ ಮಾಡುತ್ತಿದೆ. ಸದ್ಯ ರಕ್ಕಮ್ಮಾ ಫೀವರ್ ಜೋರಾಗಿದ್ದು, ಈ ಹಾಡಿಗೆ ಸ್ಯಾಂಡಲ್‌ವುಡ್ ಸಲೆಬ್ರೆಟಿಸ್ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋಗಳ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಕಮಾಲ್ ಮಾಡುತ್ತಿದೆ.

     

    View this post on Instagram

     

    A post shared by Ashika Ranganath (@ashika_rangnath)

    `ವಿಕ್ರಾಂತ್ ರೋಣ’ ಚಿತ್ರದ ಸುದೀಪ್ ಮತ್ತು ಜಾಕ್ವೆಲಿನ್ ನಟನೆಯ `ರಾ ರಾ ರಕ್ಕಮ್ಮಾ’ ಸಾಂಗ್ ರಿಲೀಸ್ ಆಗಿ ಮಿಲಿಯನ್ ಗಟ್ಟಲೇ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. ಹಾಡಷ್ಟೇ ಟ್ರೆಂಡ್ ಆಗಿರೋದಲ್ಲ, ಈ ಹಾಡಿನ ರೀಲ್ಸ್ ಕೂಡ ಟ್ರೇಂಡ್ ಆಗಿದೆ. ಸಿನಿಪ್ರೇಕ್ಷಕರಷ್ಟೇ ಫಿದಾ ಆಗಿರೋದಲ್ಲ, ಇಡೀ ಚಿತ್ರರಂಗವೇ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಿನಿ ಸಲೆಬ್ರೆಟಿಸ್ ಕೂಡ ರಕ್ಕಮ್ಮ ಹಾಡಿಗೆ ಜಬರ್‌ದಸ್ತ್ ಆಗಿ ಹೆಜ್ಜೆ ಆಗಿದ್ದಾರೆ. ಇದನ್ನೂ ಓದಿ: ಲೀಕ್ ಆಯ್ತು ನಯನತಾರಾ-ವಿಘ್ನೇಶ್ ಶಿವನ್ ಮದುವೆ ಆಮಂತ್ರಣ

     

    View this post on Instagram

     

    A post shared by Vaishnavi (@iamvaishnavioffl)

    `ಬಿಗ್ ಬಾಸ್’ ಖ್ಯಾತಿಯ ನಟಿ ವೈಷ್ಣವಿ ಗೌಡ, `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬ್ಲಾಕ್ ಕಲರ್ ಡ್ರೆಸ್‌ನಲ್ಲಿ ಜದರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಬಿಗ್ ಬಾಸ್‌ನ ಮತ್ತೊರ್ವ ಜೋಡಿ ಚಂದನ ಮತ್ತು ವಾಸುಕಿ ವೈಭವ್ ಕೂಡ ರಕ್ಕಮ್ಮಾ ಹಾಡಿಗೆ ಹೆಜ್ಜೆ ಹಾಕಿರೋದು ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

    ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ, ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಕೂಡ `ವಿಕ್ರಾಂತ್ ರೋಣ’ ಹಾಡಿಗೆ ಬೋಲ್ಡ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಬಾರೀ ವೈರಲ್ ಆಗುತ್ತಿದೆ. ಚಂದನವನದ ಪಟಾಕಿ ಪೋರಿ ಆಶಿಕಾ ರಂಗನಾಥ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಒಟ್ನಲ್ಲಿ ಚಿತ್ರರಂಗದ ತಾರೆಯರೆಲ್ಲ `ರಾ ರಾ ರಕ್ಕಮ್ಮ’ ಹಾಡಿಗೆ ಎಂಜಾಯ್ ಮಾಡ್ತಾ ಜಬರ್‌ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

  • ಕಿಚ್ಚನ ಜೊತೆ ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್: ರಕ್ಕಮ್ಮಗಾಗಿ ರೀಲ್ಸ್ ಮಾಡಿದ ಸುದೀಪ್

    ಕಿಚ್ಚನ ಜೊತೆ ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್: ರಕ್ಕಮ್ಮಗಾಗಿ ರೀಲ್ಸ್ ಮಾಡಿದ ಸುದೀಪ್

    ಚಿತ್ರರಂಗದಲ್ಲಿ ಈ ಸದ್ದು ಸುದ್ದಿ ಎಲ್ಲಾ ಕನ್ನಡ ಸಿನಿಮಾಗಳದ್ದೇ. ಅದೇ ಹಾದಿಯಲ್ಲೀಗ ಕಿಚ್ಚ ಸುದೀಪ್ ನಟನೆಯ `ವಿಕ್ರಾಂತ್ ರೋಣ’ ಸಿನಿಮಾ ಕೂಡ ಸಾಗುತ್ತಿದೆ. ಇನ್ನು ಜಾಕ್ವೆಲಿನ್ ಫರ್ನಾಂಡೀಸ್‌ಗೆ ವಿಡಿಯೋ ಕರೆ ಮಾಡಿ ಮಾತನಾಡಿರುವ ಸುದೀಪ್, ನಟಿಯನ್ನು ಕನ್ನಡದಲ್ಲೇ ಮಾತನಾಡಿಸಿದ್ದಾರೆ. ಶ್ರೀಲಂಕಾ ಬ್ಯೂಟಿ ಜಾಕ್ವೆಲಿನ್ ಕೋರಿಕೆಯಂತೆ `ರಾ ರಾ ರಕ್ಕಮ್ಮ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸದ್ಯ ಕಿಚ್ಚನ ರೀಲ್ಸ್ ಸಖತ್ ವೈರಲ್ ಆಗುತ್ತಿದೆ.

    ಕಿಚ್ಚನ ಸಿನಿಮಾ `ವಿಕ್ರಾಂತ್‌ರೋಣ’ ರಿಲೀಸ್‌ಗೆ ಹತ್ತಿರ ಬರುತ್ತಿದ್ದಂತೆ ಒಂದಲ್ಲಾ ಒಂದು ವಿಚಾರವಾಗಿ ಈ ಚಿತ್ರ ಸೌಂಡ್ ಮಾಡುತ್ತಿದೆ. ಇಷ್ಟುದಿನವಾದ್ರೂ ಯಾವುದೇ ರೀಲ್ಸ್ ಮಾಡಿರಲಿಲ್ಲ ಸುದೀಪ್, ಆದರೆ ಇದೀಗ ಜಾಕ್ವಲೀನ್ ಕೋರಿಕೆಗೆ ಮಣಿದು `ರಾ ರಾ ರಕ್ಕಮ್ಮ’ ಸಾಂಗ್‌ಗೆ ರೀಲ್ಸ್ ಮಾಡಿದ್ದಾರೆ. ರಕ್ಕಮ್ಮ ಹಾಡಿಗೆ ಕಿಚ್ಚ ಜಬರ್‌ದಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಕಿಚ್ಚನ ಫಸ್ಟ್ ರೀಲ್ ಗೆ ಫ್ಯಾನ್ಸ್ ಪಿಧಾ ಆಗಿದ್ದಾರೆ.

    ಇನ್ನು ಜಾಕ್ವೆಲಿನ್‌ಗೆ ವಿಡಿಯೋ ಕರೆ ಮಾಡಿ ಮಾತನಾಡಿರುವ ಕಿಚ್ಚ, ನಟಿಗೆ ಕನ್ನಡದಲ್ಲಿ ಮಾತನಾಡುವ ಸವಾಲನ್ನ ಕೊಟ್ಟಿದ್ದರು. ಕಿಚ್ಚನಿಗೆ ಪ್ರತಿಸವಾಲಾಗಿ `ರಾ ರಾ ರಕ್ಕಮ್ಮ’ ಹಾಡಿಗೆ ರೀಲ್ಸ್ ಮಾಡಿದ್ದಾರೆ.

     

    View this post on Instagram

     

    A post shared by KicchaSudeepa (@kichchasudeepa)

    ಕರ್ನಾಟಕದ ನನ್ನ ಎಲ್ಲಾ ಸ್ನೇಹಿತರಿಗೆ ನನ್ನ ನಮಸ್ಕಾರಗಳು. ರಕ್ಕಮ್ಮ ಬೇಗ ಬರ್ತಾ ಇದೀನಿ ಅಂತಾ ಹೇಳುವಂತೆ ಸುದೀಪ್, ನಟಿಗೆ ಹೇಳಿದ್ದರು. ನಂತರ ಸುದೀಪ್ ಸವಾಲಿನಂತೆ ಫಟ್ ಅಂತಾ ಜಾಕ್ವೆಲಿನ್ ಕೂಡ ಕನ್ನಡದಲ್ಲೇ ಮಾತನಾಡಿದ್ದಾರೆ. ಸದ್ಯ ಶ್ರೀಲಂಕಾ ಬ್ಯೂಟಿ ಜಾಕ್ವೆಲಿನ್ ಕನ್ನಡದ ಪ್ರೇಮಕ್ಕೆ ಮತ್ತು ಕಿಚ್ಚನ ರೀಲ್ಸ್ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಫಿಲ್ಮ್ ಚೇಂಬರ್ ನಲ್ಲಿ ಅಕ್ರಮ : ಬಾಂಬ್ ಸಿಡಿಸಿದ ರಾಜೇಂದ್ರ ಸಿಂಗ್ ಬಾಬು

     

    View this post on Instagram

     

    A post shared by KicchaSudeepa (@kichchasudeepa)

    ಚಿತ್ರದ ಟೀಸರ್ ಮತ್ತು `ರಾ ರಾ ರಕ್ಕಮ್ಮ’ ಹಾಡಿನ ಮೂಲಕ ಗಮನ ಸೆಳೆದಿರೋ `ವಿಕ್ರಾಂತ್ ರೋಣ’ ಚಿತ್ರ ಜುಲೈ 28ಕ್ಕೆ ಬಹುಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

  • ಆರ್‌ಆರ್‌ಆರ್ ಅಲ್ಲ, ಕೆಜಿಎಫ್ 2 ಸಿನಿಮಾ ನನ್ನ ಆಯ್ಕೆ ಎಂದ ಕಿಚ್ಚ ಸುದೀಪ್

    ಆರ್‌ಆರ್‌ಆರ್ ಅಲ್ಲ, ಕೆಜಿಎಫ್ 2 ಸಿನಿಮಾ ನನ್ನ ಆಯ್ಕೆ ಎಂದ ಕಿಚ್ಚ ಸುದೀಪ್

    ಸಿನಿಮಾ ರಂಗದ ಇತಿಹಾಸದಲ್ಲೇ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಟಾಪ್ ಚಿತ್ರಗಳಲ್ಲಿ `ಕೆಜಿಎಫ್ 2′ ಸಿನಿಮಾ ಕೂಡ ಸ್ಥಾನ ಗಿಟ್ಟಿಸಿಕೊಂಡಿದೆ. ಒಟ್ಟು 1227 ಕೋಟಿ ಗಳಿಕೆ ಮಾಡಿದ್ದು, ಹಿಂದಿಯಲ್ಲಿ 430ಕ್ಕೂ ಅಧಿಕ ಕೋಟಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರದ ಬಗ್ಗೆ ಹಲವು ಸ್ಟಾರ್‌ಗಳು ಪ್ರತಿಕ್ರಿಯೆ ನೀಡಿದ್ದರು. ಈಗ ಕಿಚ್ಚ ಸುದೀಪ್ ಕೂಡ ಈ ಚಿತ್ರದ ಕುರಿತು ಮಾತನಾಡಿದ್ದಾರೆ.

    ಈ ಹಿಂದೆ ಕೆಲ ಕಿಡಿಗೇಡಿಗಳು ಸುದೀಪ್ ಮಾತನಾಡಿದ್ದ ವಿಡಿಯೋವೊಂದು ಹರಿಬಿಟ್ಟು ತಂದಿಟ್ಟು ತಮಾಷೆ ನೋಡಿದ್ದರು. `ಕೆಜಿಎಫ್ 2′ ಚಿತ್ರದ ವಿರುದ್ಧ ಸುದೀಪ್ ಕಿಡಿಕರ‍್ತಿದ್ದಾರೆ ಅನ್ನೋ ಹಾಗೇ ಸುದ್ದಿ ಹಬ್ಬಿಸಿದ್ದರು. ಸುದೀಪ್ ನೀಡಿರೋ ಉತ್ತರ ಈಗ ಎಲ್ಲಾ ಗಾಸಿಪ್‌ ತೆರೆ ಎಳೆದಂತೆ ಆಗಿದೆ.

    ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ನೀಡಿದ ಸಂದರ್ಶನವೊಂದರಲ್ಲಿ ರ‍್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದು, ಈ ವೇಳೆ ನನಗೆ ಕೆಜಿಎಫ್ ಸಿನಿಮಾ ಎಂದರೆ ಇಷ್ಟ ಅಂತಾ ಮಾತನಾಡಿದ್ದಾರೆ. ನಿರೂಪಕ ಆರ್‌ಆರ್‌ಆರ್ ಮತ್ತು ಕೆಜಿಎಫ್ ಚಿತ್ರದಲ್ಲಿ ಒಂದನ್ನು ಆಯ್ಕೆ ಮಾಡಿ ಅಂತಾ ಹೇಳಿದಾಗ ಥಟ್ ಅಂತ ಕೆಜಿಎಫ್ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಈ ವೇಳೆ ಬೇರೆ ಪ್ರಶ್ನೆಗಳಿಗೂ ಉತ್ತರಿಸಿರುವ ಕಿಚ್ಚ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ‌ ಆಯ್ಕೆ ಮಾಡಿ ಎಂದಾಗ ವಿರಾಟ್‌ನ ಆಯ್ಕೆ ಮಾಡಿದ್ದಾರೆ. ಅಜಯ್ ದೇವಗನ್ ಮತ್ತು ಸಲ್ಮಾನ್ ಖಾನ್ ಎಂದಾಗ ಸಲ್ಮಾನ್ ಖಾನ್‌ನ ಆಯ್ಕೆ ಮಾಡಿದ್ರು. ಟೆಸ್ಟ್ ಮತ್ತು ಟಿ20 ಅಲ್ಲಿ ಟಿ20 ಇಷ್ಟ ಅಂದ್ರು. ಬಳಿಕ ಆರ್‌ಆರ್‌ಆರ್ ಮತ್ತು ಕೆಜಿಎಫ್ ಚಿತ್ರದಲ್ಲಿ ಒಂದನ್ನು ಆಯ್ಕೆ ಮಾಡಿ ಅಂತಾ ಹೇಳಿದಾಗ ಥಟ್ ಅಂತ ಕೆಜಿಎಫ್ ಎಂದು ಹೇಳಿದ್ದಾರೆ. ಒಟ್ನಲ್ಲಿ `ಕೆಜಿಎಫ್’ ಚಿತ್ರಕ್ಕೆ ನನ್ನ ಸಹಮತವಿದೆ ಕೆಜಿಎಫ್ ಚಿತ್ರ ಇಷ್ಟ ಅಂತಾ ಹೇಳೋದರ ಮೂಲಕ ಎಲ್ಲಾ ಗಾಸಿಪ್‌ಗಳಿಗೂ ಸುದೀಪ್ ಫುಲ್ ಸ್ಟಾಪ್ ಇಟ್ಟಿದ್ದಾರೆ.

  • ರಿಲೀಸ್‌ಗೂ ಮುನ್ನವೇ ದಾಖಲೆ ಮೊತ್ತಕ್ಕೆ ಬ್ಯುಸಿನೆಸ್ ಮಾಡಿದ `ವಿಕ್ರಾಂತ್ ರೋಣ’ ಚಿತ್ರ

    ರಿಲೀಸ್‌ಗೂ ಮುನ್ನವೇ ದಾಖಲೆ ಮೊತ್ತಕ್ಕೆ ಬ್ಯುಸಿನೆಸ್ ಮಾಡಿದ `ವಿಕ್ರಾಂತ್ ರೋಣ’ ಚಿತ್ರ

    ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ `ವಿಕ್ರಾಂತ್ ರೋಣ’ ರಿಲೀಸ್‌ಗೆ ರೆಡಿಯಿದೆ. ಬಿಡುಗಡೆಯ ಮುನ್ನವೇ ಸುದೀಪ್ ಸಿನಿಮಾ ದಾಖಲೆ ಮಾಡಿದೆ. ವಿದೇಶದ ವಿತರಕರು `ವಿಕ್ರಾಂತ್ ರೋಣ’ ಚಿತ್ರದ ಹಕ್ಕುಗಳನ್ನ ಭಾರೀ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.

    ಇದೀಗ ಹೊರ ರಾಜ್ಯ, ಹೊರ ದೇಶ ಎಲ್ಲಾ ಕಡೆ ಕನ್ನಡ ಸಿನಿಮಾಗಳು ಸದ್ದು ಮಾಡುತ್ತಿದೆ. `ಕೆಜಿಎಫ್ 2′ ಭರ್ಜರಿ ಸಕ್ಸಸ್ ನಂತರ ಕನ್ನಡದ `ವಿಕ್ರಾಂತ್ ರೋಣ’ ಸಿನಿಮಾಗೆ ವಿದೇಶದ ವಿತರಕರು ಮಣೆ ಹಾಕಿದ್ದಾರೆ. ಇನ್ನು ರಿಲೀಸ್‌ಗೂ ಮುನ್ನವೇ ಕಿಚ್ಚ ಸುದೀಪ್‌ ನಟನೆಯ ವಿಕ್ರಾಂತ್‌ ರೋಣ ಚಿತ್ರದ ಹಕ್ಕನ್ನು ಭಾರೀ ಮೊತ್ತಕ್ಕೆ ಖರೀದಿಸಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.

    ವಿದೇಶಿ ಮಾರುಕಟ್ಟೆಯ `ವಿಕ್ರಾಂತ್ ರೋಣ’ ಚಿತ್ರದ ಹಕ್ಕುಗಳನ್ನು `ಒನ್ ಟ್ವೆಂಟಿ 8 ಮೀಡಿಯಾ’ ಭಾರಿ ಮೊತ್ತಕ್ಕೆ ಪಡೆದುಕೊಂಡಿದೆ. ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದರ ವಿದೇಶಿ ಹಕ್ಕುಗಳು ಬಿಡುಗಡೆಗೂ ಮುನ್ನವೇ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ರಿಲೀಸ್‌ಗೂ ಮುಂಚೆನೇ ಚಿತ್ರ ಈ ಮಟ್ಟಿಗೆ ಹವಾ ಕ್ರಿಯೇಟ್ ಮಾಡಿರೋದು ಚಿತ್ರತಂಡಕ್ಕೆ ಖುಷಿಕೊಟ್ಟಿದೆ.

    ಅನುಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಜುಲೈ 28 ರಂದು ವಿಶ್ವಾದ್ಯಂತ ೩ಡಿ ಅವತರಣಿಕೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜುನಾಥ್ ಅವರು ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ: ಪೂಜಾ ಹೆಗ್ಡೆ ಜತೆ ವಿಜಯ್ ದೇವರಕೊಂಡ ಡ್ಯುಯೆಟ್

    ʻವಿಕ್ರಾಂತ್‌ ರೋಣʼ ಚಿತ್ರದಲ್ಲಿ ಸುದೀಪ್‌ ಎಂದೂ ಮಾಡಿರದ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್‌ ಲುಕ್‌, ಟೀಸರ್‌ನಿಂದ ಗಮನ ಸೆಳೆದಿರೋ ʻವಿಕ್ರಾಂತ್‌ ರೋಣʼ ಚಿತ್ರ ನೋಡಲು ಫ್ಯಾನ್ಸ್‌ ಕಾಯ್ತಿದ್ದಾರೆ.

  • ಸುಲಿಗೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸೇರಿದ 7 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಸುಲಿಗೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸೇರಿದ 7 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಸುಕೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ ತಾರೆ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಜಪ್ತಿ ಮಾಡಿದೆ. ಜಾಕ್ವೆಲಿನ್ ಕನ್ನಡದಲ್ಲೂ ನಟಿಸಿದ್ದು, ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ  ನಟಿಸಿದ್ದಾರೆ. ಇನ್ನಷ್ಟೇ ಈ ಸಿನಿಮಾ ರಿಲೀಸ್ ಆಗಬೇಕಿದೆ.

    ಜಾಕ್ವೆಲಿನ್ ಹೆಸರಿನಲ್ಲಿ 7.12 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಠೇವಣಿಗಳನ್ನು ಲಗತ್ತಿಸಲಾದ ಆಸ್ತಿಗಳು ಸೇರಿವೆ ಎಂದು ಮೂಲಗಳು ತಿಳಿಸಿವೆ. ಜಾಕ್ವೆಲಿನ್ ಫೆರ್ನಾಂಡಿಸ್ ಸುಲಿಗೆ ಮಾಡಿದ ಹಣದ ಫಲಾನುಭವಿಯಾಗಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಸುಕೇಶ್ ಚಂದ್ರಶೇಖರ್ ಸುಲಿಗೆ ಮಾಡಿದ ಹಣವನ್ನು ಬಳಸಿಕೊಂಡು ಜಾಕ್ವೆಲಿನ್ ಫರ್ನಾಂಡೀಸ್‌ಗೆ 5.71 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ನೀಡಿದ್ದ ಎಂಬ ಪುರಾವೆಗಳು ಅಧಿಕಾರಿಗಳಿಗೆ ಸಿಕ್ಕಿವೆ. ಉಡುಗೊರೆಗಳ ಹೊರತಾಗಿ, ಅವನು ಜಾಕ್ವೆಲಿನ್ ಅವರ ಕುಟುಂಬ ಸದಸ್ಯರಿಗೆ 173,000 ಯುಎಸ್ ಡಾಲರ್ ಮತ್ತು ಸುಮಾರು 27,000 ಆಸ್ಟ್ರೇಲಿಯನ್ ಡಾಲರ್‌ಗಳನ್ನು ನೀಡಿದ್ದನು.

    ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಸುಕೇಶ್ ಚಂದ್ರಶೇಖರ್ ಜೊತೆಗಿನ ಸಂಪರ್ಕಕ್ಕಾಗಿ ಇಡಿ ಹಲವು ಬಾರಿ ಪ್ರಶ್ನಿಸಿತ್ತು. ಜಾಕ್ವೆಲಿನ್ ಸದ್ಯಕ್ಕೆ ಆರೋಪಿಯಲ್ಲ. ಆದರೆ ತನಿಖಾಧಿಕಾರಿಗಳು ಇನ್ನೂ ಜಾಕ್ವೆಲಿನ್‌ಗೆ ಕ್ಲೀನ್ ಚಿಟ್ ನೀಡಿಲ್ಲ. ಶ್ರೀಲಂಕಾ ಮೂಲದ ನಟಿಗೆ ದೇಶ ತೊರೆಯದಂತೆ ನಿಷೇಧ ಹೇರಲಾಗಿತ್ತು.

    ದೆಹಲಿಯ ಉದ್ಯಮಿಯೊಬ್ಬರ ಪತ್ನಿಯಿಂದ ಸ್ಪೂಫ್ ಕರೆಗಳ ಮೂಲಕ ಸುಕೇಶ್ ಚಂದ್ರಶೇಖರ್ 215 ಕೋಟಿ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸುಕೇಶ್ ದೆಹಲಿಯ ಜೈಲಿನಲ್ಲಿದ್ದಾಗ, ಪ್ರಧಾನಿ ಕಚೇರಿ, ಕಾನೂನು ಸಚಿವಾಲಯ ಮತ್ತು ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಸಂತ್ರಸ್ತ ಮಹಿಳೆಯಿಂದ ಹಣ ವಸೂಲಿ ಮಾಡಿದ್ದಾನೆ. ಸಂತ್ರಸ್ತೆಯ ಪತಿಗೆ ಜಾಮೀನು ದೊರಕಿಸಿಕೊಡುವುದಾಗಿ ಮತ್ತು ಅವರ ಔಷಧ ವ್ಯಾಪಾರವನ್ನು ನಡೆಸುವುದಾಗಿ ಸುಕೇಶ್ ದೂರವಾಣಿ ಕರೆಗಳಲ್ಲಿ ಹೇಳಿಕೊಂಡಿದ್ದನು.

    ರಾಜಕಾರಣಿ ಟಿಟಿವಿ ದಿನಕರನ್ ಒಳಗೊಂಡ ಐದು ವರ್ಷಗಳ ಹಿಂದಿನ ವಂಚನೆ ಪ್ರಕರಣದಲ್ಲಿ ಸುಕೇಶ್ ಕೂಡ ಭಾಗಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಇಡಿ ಅವರನ್ನು ಬಂಧಿಸಿತ್ತು.

  • ಕಿಚ್ಚ ಸುದೀಪ್‌ ಅಭಿನಯದ ʼವಿಕ್ರಾಂತ್‌ ರೋಣʼ ರಿಲೀಸ್‌ ಡೇಟ್‌ ಅನೌನ್ಸ್‌

    ಕಿಚ್ಚ ಸುದೀಪ್‌ ಅಭಿನಯದ ʼವಿಕ್ರಾಂತ್‌ ರೋಣʼ ರಿಲೀಸ್‌ ಡೇಟ್‌ ಅನೌನ್ಸ್‌

    ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ʼವಿಕ್ರಾಂತ್‌ ರೋಣʼ ತೆರೆಯ ಮೇಲೆ ಬರಲು ಸಜ್ಜಾಗಿದ್ದು, ಇದೇ ಡಿ.5ರಂದು ಬೆಳಿಗ್ಗೆ 11:05ಕ್ಕೆ ಸಿನಿಮಾ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

    ಸಿನಿಮಾ ಬಿಡುಗಡೆ ಕುರಿತು ನಟ ಸುದೀಪ್‌ ಟ್ವೀಟ್‌ ಮಾಡಿದ್ದಾರೆ. ಚಿತ್ರದ ರಿಲೀಸ್‌ ದಿನಾಂಕ ಇರುವ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಸುದೀಪ್‌, ಡಿ.7ರಂದು ಸಿನಿಮಾ ತೆರೆ ಕಾಣಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫ್ಯೂಚರ್ ಗಂಡನಿಗೆ ಈಗಲೇ ಷರತ್ತು ಹಾಕಿದ ಸಾರಾ ಅಲಿ ಖಾನ್

    ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್‌ ಇಂಡಿಯಾ ಬಿಗ್‌ಬಜೆಟ್‌ ಸಿನಿಮಾ ವಿಕ್ರಾಂತ್‌ ರೋಣ. ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್‌ ಖಲೀಫಾದ ಮೇಲೆ ಈ ಸಿನಿಮಾದ ಟೀಸರ್‌ ಬಿಡುಗಡೆ ಮಾಡಿದ್ದು, ವಿಶ್ವದ ಗಮನ ಸೆಳೆದಿತ್ತು. ಇದನ್ನೂ ಓದಿ: ವಂಚಕನಿಂದಲೇ ಜಾಕ್ವೆಲಿನ್‌ಗೆ ಸಿಕ್ತು 10 ಕೋಟಿ ರೂ. ಬೆಲೆಯ ಗಿಫ್ಟ್

    ಕಳೆದ ಆಗಸ್ಟ್‌ ತಿಂಗಳಲ್ಲಿ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್‌ ಲಾಕ್‌ಡೌನ್‌ ಕಾರಣದಿಂದಾಗಿ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು.

  • ಭಾರೀ ಮೊತ್ತಕ್ಕೆ ಸೇಲ್ – ವಿಕ್ರಾಂತ್ ರೋಣ ಆಡಿಯೋ ರೈಟ್ಸ್ ಲಹರಿ ಮ್ಯೂಸಿಕ್‍ಗೆ

    ಭಾರೀ ಮೊತ್ತಕ್ಕೆ ಸೇಲ್ – ವಿಕ್ರಾಂತ್ ರೋಣ ಆಡಿಯೋ ರೈಟ್ಸ್ ಲಹರಿ ಮ್ಯೂಸಿಕ್‍ಗೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ಆಡಿಯೋ ಹಕ್ಕನ್ನು ಲಹರಿ ಮ್ಯೂಸಿಕ್ ಸಂಸ್ಥೆ ಖರೀದಿಸಿದೆ.

    ಕಿಚ್ಚ ಸುದೀಪ್ ನಟಿಸಿರುವ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಕೂಡ ಕಂಪ್ಲೀಟ್ ಹಂತದಲ್ಲಿದೆ. ಈಗಾಗಲೇ ಫಸ್ಟ್ ಲುಕ್ ಮತ್ತು ಚಿತ್ರದ ಪೋಸ್ಟರ್ ಮೂಲಕವೇ ಭಾರೀ ಕೂತೂಹಲ ಕೆರಳಿಸಿರುವ ವಿಕ್ರಾಂತ್ ರೋಣ ಸಿನಿಮಾ, ಇತ್ತೀಚೆಗಷ್ಟೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಫಸ್ಟ್ ಲುಕ್ ರಿಲೀಸ್ ಮಾಡಿ ಪ್ರೇಕ್ಷಕರಲ್ಲಿ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.  ಇದನ್ನೂ ಓದಿ:ವಿಕ್ರಾಂತ್ ರೋಣ ಸಿನಿಮಾದಲ್ಲಿ ಗಡಂಗ್ ರಕ್ಕಮ್ಮನ ಪಾತ್ರ ರಿವೀಲ್

    ಇದೀಗ ವಿಕ್ರಾಂತ್ ರೋಣ ಸಿನಿಮಾದ ಆಡಿಯೋ ಹಕ್ಕು ಮಾರಾಟವಾಗಿದ್ದು, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಲಹರಿ ಮ್ಯೂಸಿಕ್ ಸಂಸ್ಥೆ ಖರೀದಿಸಿದೆ ಮತ್ತು ಹಿಂದಿಯಲ್ಲಿ ಟಿ-ಸಿರೀಸ್ ಆಡಿಯೋ ಹಕ್ಕನ್ನು ಖರೀದಿಸಿದೆ. ಈ ಬಗ್ಗೆ ಲಹರಿ ಮ್ಯೂಸಿಕ್ ಸಂಸ್ಥೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದೆ. ಅಲ್ಲದೇ ಎಲ್ಲಾ ಭಾಷೆಯಲ್ಲಿಯೂ ದುಬಾರಿ ಬೆಲೆಗೆ ವಿಕ್ರಾಂತ್ ರೋಣ ಸಿನಿಮಾದ ಆಡಿಯೋ ಹಕ್ಕು ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ.

    ಈ ನಡುವೆ ಸೆಪ್ಟೆಂಬರ್ 2ರಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಬೆಳಗ್ಗೆ 11 ಗಂಟೆಗೆ ಡೆಡ್ ಮ್ಯಾನ್ ಆಂಥೆಮ್ ಸಾಂಗ್ ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಘೋಷಿಸಿದೆ. ಇದನ್ನೂ ಓದಿ:ವಿಕ್ರಾಂತ್ ರೋಣದಲ್ಲಿ ಸುದೀಪ್ ಜೊತೆ ಅದ್ಭುತ ಕಾಲ ಕಳೆದೆ: ಜಾಕ್ವೆಲಿನ್

    ವಿಕ್ರಾಂತ್ ರೋಣ ಸಿನಿಮಾಕ್ಕೆ ನಿರ್ದೇಶಕ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ನಿರ್ಮಾಪಕ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಈ ಚಿತ್ರದ ವಿಶೇಷ ಹಾಡೋಂದಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಡೀಸ್ ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವಾರು ಕಲಾವಿದರು ಬಣ್ಣಹಚ್ಚಿದ್ದು, ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಗೊಳ್ಳುತ್ತಿದೆ.

  • ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್

    ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಸಿನಿಮಾ ತಂಡದಿಂದ ಒಂದು ಸಿಹಿ ಸುದ್ದಿ ಸಿಗಲಿದೆ ಎಂದು ಚಿತ್ರತಂಡ ಹೇಳಿದೆ.

    ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ತಮ್ಮ 50ನೇ ವಸಂತಕ್ಕೆ ಕಾಲಿಡಲಿದ್ದಾರೆ. ಕಿಚ್ಚನ ಹುಟ್ಟುಹಬ್ಬದ ದಿನ ಸುದೀಪ್ ಅವರ ಮುಂದಿನ ಸಿನಿಮಾ ಅನ್ಸೌಮೆಂಟ್ ಆಗಲಿದೆ. ಕಿಚ್ಚ ಅಭಿನಯದ ಬಹುನೀರಿಕ್ಷಿತ ಪ್ಯಾನ್ ಇಂಡಿಯಾ ಸಿನಿಮಾವಾದ ವಿಕ್ರಾಂತ್ ರೋಣ ಚಿತ್ರದ ಝಲಕ್ ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ. ಈ ಕುರಿತಾಗಿ ಚಿತ್ರ ತಂಡ ಸೋಶಿಯಲ್ ಮೀಡಿಯಾ ಮೂಲಕವಾಗಿ ತಿಳಿಸಿದೆ. ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ವಿಕ್ರಾಂತ್ ರೋಣ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ಅವರು ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಸಿನಿಮಾದ ಫಸ್ಟ್ ಗ್ಲಿಂಪ್ಸ್ ವೀಡಿಯೋವನ್ನು ಸೆಪ್ಟೆಂಬರ್ 2ರಂದು ರಿಲೀಸ್ ಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಸೆ. 2ರಂದು ಬೆಳಿಗ್ಗೆ 11.5ಕ್ಕೆ ಹುಟ್ಟುಹಬ್ಬದ ಉಡುಗೊರೆಯಾಗಿ ವಿಕ್ರಾಂತ್ ರೋಣ ಚಿತ್ರದ ಗ್ಲಿಂಪ್ಸ್ ದ ಡೆಡ್ ಮ್ಯಾನ್ಸ್ ಆ್ಯಂಥಮ್ ರಿಲೀಸ್ ಆಗಲಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

    ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಬಿಡುಗಡೆಯ ಹೊಸ್ತಿಲಿನಲ್ಲಿರುವ ಈ ಸಿನಿಮಾದ ಕಡೆಯಿಂದ ಕಿಚ್ಚನ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ಸಿಗಲಿದೆ. ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ

     

    View this post on Instagram

     

    A post shared by KicchaSudeepa (@kichchasudeepa)

    ಕೊರೊನಾ ಕಾರಣದಿಂದಾಗಿ ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಭೇಟಿಯಾಗಲು ಆಗುತ್ತಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದರು. ಕೊರೊನಾ ನಿಯಮಗಳನ್ನು ಪಾಲಿಸುತ್ತಾ ಮನೆಯಗಳಲ್ಲೇ ಇದ್ದು ಅಲ್ಲಿಂದಲೇ ಶುಭ ಕೋರಿ ಎಂದು ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಈಗ ಈ ಸಂಬಂಧ ಮತ್ತೊಂದು ಪೋಸ್ಟ್ ಮಾಡಿರುವ ಸುದೀಪ್ ಎಲ್ಲ ಸರಿಹೋದ ನಂತರ ಅಭಿಮಾನಿಗಳನ್ನು ಭೇಟಿಯಾಗುವುದಾಗಿಯೂ ಹಾಗೂ ಈ ಸಲ ಹುಟ್ಟುಹಬ್ಬದಂದು ಸಿಗಲು ಆಗದ ಕಾರಣಕ್ಕೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.