Tag: Vilayat Buddha

  • ಯಶಸ್ವಿ ಶಸ್ತ್ರ ಚಿಕಿತ್ಸೆ ನಂತರ ಮನೆಗೆ ಮರಳಿದ ನಟ ಪೃಥ್ವಿರಾಜ್ ಸುಕುಮಾರನ್

    ಯಶಸ್ವಿ ಶಸ್ತ್ರ ಚಿಕಿತ್ಸೆ ನಂತರ ಮನೆಗೆ ಮರಳಿದ ನಟ ಪೃಥ್ವಿರಾಜ್ ಸುಕುಮಾರನ್

    ಶೂಟಿಂಗ್ ವೇಳೆ ಬಲಗಾಲಿಗೆ ಏಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದ ಮಲಯಾಳಂ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಇಂದು ಮನೆಗೆ ವಾಪಸ್ಸಾಗಿದ್ದಾರೆ. ಮೊನ್ನೆಯಷ್ಟೇ ಅವರ ಬಲಗಾಲಿಗೆ ಏಟಾಗಿತ್ತು. ಅದಕ್ಕೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದರು. ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿದುಕೊಂಡು ಶಸ್ತ್ರ ಚಿಕಿತ್ಸೆಯಲ್ಲಿ ಭಾಗಿಯಾಗಿದ್ದಾರೆ ನಟ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದದ್ದು, ಇದೀಗ ಅವರು ಮನೆಗೆ ವಾಪಸ್ಸಾಗಿದ್ದಾರೆ.

    ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರಿಗೆ ಶೂಟಿಂಗ್ ವೇಳೆ ಕಾಲಿಗೆ ಬಲವಾದ ಪೆಟ್ಟು ಬಿದ್ದಿತ್ತು. ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಅವರು ತೀವ್ರವಾಗಿ ಗಾಯ ಮಾಡಿಕೊಂಡಿದ್ದರು. ಈ ಅವಘಡ (Avaghada) ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇದನ್ನೂ ಓದಿ:ಶಾನುಭೋಗರ ಮಗಳಾದ ನಟ ಪ್ರಜ್ವಲ್ ಪತ್ನಿ ರಾಗಿಣಿ ಪ್ರಜ್ವಲ್

    ಪೃಥ್ವಿ ರಾಜ್ ಸುಕುಮಾರನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಆಸ್ಪತ್ರೆಗೂ ಧಾವಿಸಿದ್ದರು. ಪೃಥ್ವಿರಾಜ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ತಿಳಿಸಿರುವುದಾಗಿ ಅಭಿಮಾನಿಗಳಿಗೆ ಹೇಳಲಾಗಿತ್ತು.

    ಆತಂಕಗೊಂಡ ಅಭಿಮಾನಿಗಳಿಗಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ‘ನೋವಿನ ವಿರುದ್ಧ ಹೋರಾಡಿ, ಗೆದ್ದು ಮತ್ತೆ ನಾನು ಬರುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಹಲವು ತಿಂಗಳ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುವೆ’ ಎಂದಿದ್ದಾರೆ ಪೃಥ್ವಿರಾಜ್.

    ಬಹು ನಿರೀಕ್ಷಿತ ಮಲಯಾಳಂನ ವಿಲಾಯತ್ ಬುದ್ದ (Vilayat Buddha) ಸಿನಿಮಾದ ಸಾಹಸ ಪ್ರಧಾನ ದೃಶ್ಯವನ್ನು ಚಿತ್ರೀಕರಣ ಮಾಡುತ್ತಿದ್ದರು ನಿರ್ದೇಶಕರು ಈ ವೇಳೆ ಬಸ್ ನಿಂದ ಪೃಥ್ವಿರಾಜ್ ಜಾರಿ ಬಿದ್ದಿದ್ದಾರೆ. ಆಗ ಅವರ ಕಾಲಿಗೆ ಬಲವಾಗಿಯೇ ಏಟಾಗಿದೆ. ಶಸ್ತ್ರ ಚಿಕಿತ್ಸೆಯ (Surgery) ನಂತರ ಕೆಲ ವಾರಗಳ ಕಾಲ ಅವರು ವಿಶ್ರಾಂತಿ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಚಿತ್ರೀಕರಣಕ್ಕೆ ಬ್ರೇಕ್ ಬೀಳಲಿದೆ.

     

    ಪೃಥ್ವಿರಾಜ್ ಸುಕುಮಾರನ್ ಗೂ ಕನ್ನಡ ಚಿತ್ರೋದ್ಯಮಕ್ಕೂ ಸಾಕಷ್ಟು ನಂಟಿದೆ. ಹೊಂಬಾಳೆ ಬ್ಯಾನರ್ಸ್ ನಲ್ಲಿ ಇವರೊಂದು ಸಿನಿಮಾವೊಂದನ್ನು ನಿರ್ದೇಶನ ಹಾಗೂ ನಟನೆ ಮಾಡಬೇಕಿದೆ. ಸಲಾರ್ ಸಿನಿಮಾದಲ್ಲೂ ಇವರು ಮಹತ್ವದ ಪಾತ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೂಟಿಂಗ್ ವೇಳೆ ಅವಘಡ : ಶಸ್ತ್ರ ಚಿಕಿತ್ಸೆ ನಂತರ ಭಾವನಾತ್ಮಕ ಪತ್ರ ಬರೆದ ನಟ

    ಶೂಟಿಂಗ್ ವೇಳೆ ಅವಘಡ : ಶಸ್ತ್ರ ಚಿಕಿತ್ಸೆ ನಂತರ ಭಾವನಾತ್ಮಕ ಪತ್ರ ಬರೆದ ನಟ

    ಲಯಾಳಂನ (Malayalam) ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಶೂಟಿಂಗ್ ವೇಳೆ ಕಾಲಿಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ತೀವ್ರ ಗಾಯ ಮಾಡಿಕೊಂಡಿದ್ದರು. ಈ ಅವಘಡ (Avaghada) ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

    ಪೃಥ್ವಿ ರಾಜ್ ಸುಕುಮಾರನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಆಸ್ಪತ್ರೆಗೂ ಧಾವಿಸಿದ್ದರು. ಇದೀಗ ಪೃಥ್ವಿರಾಜ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ತಿಳಿಸಿದ್ದಾರೆ.

    ಆತಂಕಗೊಂಡ ಅಭಿಮಾನಿಗಳಿಗಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ‘ನೋವಿನ ವಿರುದ್ಧ ಹೋರಾಡಿ, ಗೆದ್ದು ಮತ್ತೆ ನಾನು ಬರುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಹಲವು ತಿಂಗಳ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುವೆ’ ಎಂದಿದ್ದಾರೆ ಪೃಥ್ವಿರಾಜ್. ಇದನ್ನೂ ಓದಿ:ವರಾಹಿ ಯಾತ್ರೆಯಲ್ಲಿ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು

    ಬಹು ನಿರೀಕ್ಷಿತ ಮಲಯಾಳಂನ ವಿಲಾಯತ್ ಬುದ್ದ (Vilayat Buddha) ಸಿನಿಮಾದ ಸಾಹಸ ಪ್ರಧಾನ ದೃಶ್ಯವನ್ನು ಚಿತ್ರೀಕರಣ ಮಾಡುತ್ತಿದ್ದರು ನಿರ್ದೇಶಕರು ಈ ವೇಳೆ ಬಸ್ ನಿಂದ ಪೃಥ್ವಿರಾಜ್ ಜಾರಿ ಬಿದ್ದಿದ್ದಾರೆ. ಆಗ ಅವರ ಕಾಲಿಗೆ ಬಲವಾಗಿಯೇ ಏಟಾಗಿದೆ. ಶಸ್ತ್ರ ಚಿಕಿತ್ಸೆಯ (Surgery) ನಂತರ ಕೆಲ ವಾರಗಳ ಕಾಲ ಅವರು ವಿಶ್ರಾಂತಿ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಚಿತ್ರೀಕರಣಕ್ಕೆ ಬ್ರೇಕ್ ಬೀಳಲಿದೆ.

    ಪೃಥ್ವಿರಾಜ್ ಸುಕುಮಾರನ್ ಗೂ ಕನ್ನಡ ಚಿತ್ರೋದ್ಯಮಕ್ಕೂ ಸಾಕಷ್ಟು ನಂಟಿದೆ. ಹೊಂಬಾಳೆ ಬ್ಯಾನರ್ಸ್ ನಲ್ಲಿ ಇವರೊಂದು ಸಿನಿಮಾವೊಂದನ್ನು ನಿರ್ದೇಶನ ಹಾಗೂ ನಟನೆ ಮಾಡಬೇಕಿದೆ. ಸಲಾರ್ ಸಿನಿಮಾದಲ್ಲೂ ಇವರು ಮಹತ್ವದ ಪಾತ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಶೂಟಿಂಗ್ ವೇಳೆ ನಟ ಪೃಥ್ವಿರಾಜ್‌ಗೆ ಗಂಭೀರ ಗಾಯ: ಇಂದು ಸರ್ಜರಿ

    ಶೂಟಿಂಗ್ ವೇಳೆ ನಟ ಪೃಥ್ವಿರಾಜ್‌ಗೆ ಗಂಭೀರ ಗಾಯ: ಇಂದು ಸರ್ಜರಿ

    ಲಯಾಳಂನ (Malayalam) ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ನಿನ್ನ ನಡೆದ ಶೂಟಿಂಗ್ ವೇಳೆ ಕಾಲಿಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಈ ಅವಘಡ (Avaghada) ನಡೆದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಶಸ್ತ್ರ ಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

    ಬಹು ನಿರೀಕ್ಷಿತ ಮಲಯಾಳಂನ ವಿಲಾಯತ್ ಬುದ್ದ (Vilayat Buddha) ಸಿನಿಮಾದ ಸಾಹಸ ಪ್ರಧಾನ ದೃಶ್ಯವನ್ನು ಚಿತ್ರೀಕರಣ ಮಾಡುತ್ತಿದ್ದರು ನಿರ್ದೇಶಕರು ಈ ವೇಳೆ ಕಾಲಿಗೆ ಬಲವಾಗಿಯೇ ಏಟಾಗಿತ್ತು. ಶಸ್ತ್ರ ಚಿಕಿತ್ಸೆಯ (Surgery) ನಂತರ ಕೆಲ ವಾರಗಳ ಕಾಲ ಅವರು ವಿಶ್ರಾಂತಿ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಚಿತ್ರೀಕರಣಕ್ಕೆ ಬ್ರೇಕ್ ಬೀಳಲಿದೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

    ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ಹರಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು. ನಟನ ಆರೋಗ್ಯದ ಕುರಿತಾಗಿ ಅಪ್ ಡೇಟ್ ಪಡೆಯಲು ಕಾದಿದ್ದರು. ಆತಂಕ ಪಡುವಂಥದ್ದು ಏನೂ ಆಗಿಲ್ಲ. ಸಣ್ಣದೊಂದು ಸರ್ಜರಿ ಮಾಡಬೇಕಿದೆ ಎಂದು ವೈದ್ಯರು ಹೇಳಿದ ಬಳಿಕವೇ ಅಭಿಮಾನಿಗಳು ಅಲ್ಲಿಂದ ಹೊರಟಿದ್ದಾರೆ.

     

    ಪೃಥ್ವಿರಾಜ್ ಸುಕುಮಾರನ್ ಗೂ ಕನ್ನಡ ಚಿತ್ರೋದ್ಯಮಕ್ಕೂ ಸಾಕಷ್ಟು ನಂಟಿದೆ. ಹೊಂಬಾಳೆ ಬ್ಯಾನರ್ಸ್ ನಲ್ಲಿ ಇವರೊಂದು ಸಿನಿಮಾವೊಂದನ್ನು ನಿರ್ದೇಶನ ಹಾಗೂ ನಟನೆ ಮಾಡಬೇಕಿದೆ. ಸಲಾರ್ ಸಿನಿಮಾದಲ್ಲೂ ಇವರು ಮಹತ್ವದ ಪಾತ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.