Tag: village

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರಾಂಪುರ ಗ್ರಾಮಕ್ಕೆ ತೆರಳಿ ರಸ್ತೆ ಪರಿಶೀಲಿಸಿದ ದಾವಣಗೆರೆ ಡಿಸಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರಾಂಪುರ ಗ್ರಾಮಕ್ಕೆ ತೆರಳಿ ರಸ್ತೆ ಪರಿಶೀಲಿಸಿದ ದಾವಣಗೆರೆ ಡಿಸಿ

    – 2 ತಿಂಗಳೊಳಗೆ ರಸ್ತೆ, ಕೆಲವೇ ದಿನದಲ್ಲಿ ಬಸ್ ವ್ಯವಸ್ಥೆ
    – ನಿನ್ನ ಮದುವೆಯನ್ನೂ ಮಾಡಿಸ್ತೇನೆಂದು ಬಿಂದುಗೆ ಭರವಸೆ

    ದಾವಣಗೆರೆ: ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಹೆಚ್ ರಾಂಪುರ ಗ್ರಾಮದ ಸಮಸ್ಯೆಯನ್ನು ಕಂಡು ಬೇಸತ್ತು ಪ್ರಧಾನಿ, ಮುಖ್ಯಮಂತ್ರಿಗೆ ಪತ್ರ ಬರೆದು ನಮ್ಮ ಊರಿನ ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಬಿಂದು ಕುರಿತು ಪಬ್ಲಿಕ್‍ಟಿವಿ ವರದಿ ಬಳಿಕ ದಾವಣಗೆರೆ ಡಿಸಿ ಮಹಾಂತೇಶ್ ಬೀಳಗಿ ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಬಳಿಕ ಬಿಂದುಗೆ ಕರೆ ಮಾಡಿ 2 ತಿಂಗಳೊಳಗೆ ರಸ್ತೆ, ಕೆಲವೇ ದಿನದಲ್ಲಿ ಬಸ್ ವ್ಯವಸ್ಥೆಯೂ ಆಗಲಿದೆ. ಜೊತೆಗೆ ನಿನ್ನ ಮದುವೆಯನ್ನೂ ನಾನೇ ಮಾಡಿಸುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ.

    ರಾಂಪುರ ದಾವಣಗೆರೆ ಜಿಲ್ಲಾ ಕೇಂದ್ರದಿಂದ ಕೇವಲ 30 ಕಿಲೋ ಮೀಟರ್ ದೂರವಿದ್ದರೆ, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 6 ಕಿಲೋ ಮೀಟರ್ ದೂರವಷ್ಟೇ ಇದೆ. ಆದರೂ ಈ ಊರು ಇಂದಿಗೂ ಮೂಲಭೂತ ಸೌಕರ್ಯದಿಂದ ವಂಚಿತಗೊಂಡಿದೆ. ಈ ಊರಲ್ಲಿ ಯುವತಿಯರು ಶಾಲಾ-ಕಾಲೇಜ್‍ಗೆ ಹೋಗಬೇಕೆಂದರೆ ನಡೆದುಕೊಂಡೆ ಹೋಗಬೇಕು. ಮಳೆಗಾಲದಲ್ಲಿ ಮಣ್ಣಿನ ರಸ್ತೆಯಲ್ಲಿ ನಡೆದು ಶಾಲಾ-ಕಾಲೇಜಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಸ್ವಾತಂತ್ರ್ಯ ಬಂದು 7 ದಶಕಗಳಾದರೂ ಈ ಗ್ರಾಮಕ್ಕೆ ಇನ್ನೂ ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲ. ಬಸ್ ಇಲ್ಲದ ಕಾರಣ ಗ್ರಾಮದಲ್ಲಿ ಎಷ್ಟೋ ಯುವತಿಯರು ವಿದ್ಯಾಭ್ಯಾಸವನ್ನೇ ಮೊಟುಕುಗೊಳಿಸಿದ್ದಾರೆ. ಇದರಿಂದ ಬಾಲ್ಯ ವಿವಾಹ ಕೂಡ ಹೆಚ್ಚಾಗುತ್ತಿವೆ. ವಿಪರ್ಯಾಸವೆಂದರೆ ಓದುವ ಆಸೆಯಿದ್ದರೂ ಸರಿಯಾದ ಬಸ್ ವ್ಯವಸ್ಥೆ ಇಲ್ಲ ಎಂಬ ಕಾರಣ ಮಹಿಳೆಯರು ಮನೆಯಲ್ಲೇ ಕೂರುವಂತಾಗಿದೆ. ಇದರಿಂದ ಈ ಊರಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿಲ್ಲ ಎಂದು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂಬುದರ ಕುರಿತು ಪಬ್ಲಿಕ್ ಟಿವಿ ವಿಸ್ತೃತ ವರದಿ ಬಿತ್ತರಿಸಿತು. ಇದನ್ನೂ ಓದಿ: ಊರಿನ ರಸ್ತೆ ಆಗುವರೆಗೂ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ ಯುವತಿ

    ಪಬ್ಲಿಕ್ ಟಿವಿ ವರದಿ ನೋಡಿ ರಾಮನಗರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಗ್ರಾಮದ ಹೊರವಲರದಲ್ಲಿ ಕಾರು ನಿಲ್ಲಿಸಿ, ನಡೆದುಕೊಂಡು ಬಂದು ರಸ್ತೆ ಪರಿಶೀಲನೆ ನಡೆಸಿದರು. ಇದೇ ವೇಳೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಹೋಬಳಿಯ ರಾಮಪುರ ಗ್ರಾಮಕ್ಕೆ ಆಗಮಿಸಿ ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಯುವತಿ ಬಿಂದುಗೆ ಕರೆ ಮಾಡಿದ ಮಹಾಂತೇಶ್ ಬೀಳಗಿ, ಕೆಲವೇ ದಿನಗಳಲ್ಲಿ ಬಸ್ ವ್ಯವಸ್ಥೆ ಮಾಡಲಾಗುವುದು. ಎರಡು ತಿಂಗಳೊಳಗೆ ರಸ್ತೆ ಕೂಡ ಆಗುತ್ತದೆ. ಜೊತೆಗೆ ನಾನೇ ಮುಂದೆ ನಿಂತು ನಿನ್ನ ಮದುವೆಯನ್ನು ಕೂಡ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡು ಖುಷಿಪಟ್ಟ ಯುವತಿ ಬಿಂದು, ಪಬ್ಲಿಕ್ ಟಿವಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಮೂರೂವರೆ ತಿಂಗಳ ಬಳಿಕ ಕೊರೊನಾ ಗೆದ್ದ ವೈದ್ಯ- ಡಾಕ್ಟರ್ ಕಣ್ಣೀರ ಕಥೆ ಓದಿ

  • ಊರಿನ ರಸ್ತೆ ಆಗುವರೆಗೂ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ ಯುವತಿ

    ಊರಿನ ರಸ್ತೆ ಆಗುವರೆಗೂ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ ಯುವತಿ

    ದಾವಣಗೆರೆ: ಸ್ವಾತಂತ್ರ್ಯ ಬಂದು 7 ದಶಕಗಳೇ ಕಳೆದಿವೆ, ಅದರೂ ಕೂಡ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಹೆಚ್ ರಾಮಪುರ ಗ್ರಾಮಕ್ಕೆ ಇಂದಿಗೂ ಸರ್ಕಾರಿ ಬಸ್ ವ್ಯವಸ್ಥೆ ಇಲ್ಲ. ಹೀಗೆ ಹಲವಾರು ಸಮಸ್ಯೆಯನ್ನು ಕಂಡು ಬೇಸತ್ತ ಈ ಗ್ರಾಮದ ಯುವತಿಯೊಬ್ಬಳು ದಿಟ್ಟತನ ಪ್ರದರ್ಶನ ಮಾಡಿದ್ದು, ಪ್ರಧಾನಿ, ಮುಖ್ಯಮಂತ್ರಿಗೆ ಪತ್ರ ಬರೆದು ನಮ್ಮ ಊರಿನ ರಸ್ತೆ ಆಗುವವರೆಗೂ ನಾನು ಮದುವೆಯಾಗುವುದಿಲ್ಲ ಎಂದು ಶಪತ ಮಾಡಿದ್ದಾಳೆ.

    ರಾಂಪುರ ಜಿಲ್ಲಾ ಕೇಂದ್ರದಿಂದ ಕೇವಲ 30 ಕಿಲೋ ಮೀಟರ್ ದೂರವಿದ್ದರೆ, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 6 ಕಿಲೋ ಮೀಟರ್ ದೂರವಷ್ಟೇ ಇದೆ. ಆದರೂ ಈ ಊರು ಇಂದಿಗೂ ಮೂಲಭೂತ ಸೌಕರ್ಯದಿಂದ ವಂಚಿತಗೊಂಡಿದೆ. ಈ ಊರಲ್ಲಿ ಯುವತಿಯರು ಶಾಲಾ-ಕಾಲೇಜ್‍ಗೆ ಹೋಗಬೇಕೆಂದರೆ ನಡೆದುಕೊಂಡೆ ಹೋಗಬೇಕು. ಮಳೆಗಾಲದಲ್ಲಿ ಮಣ್ಣಿನ ರಸ್ತೆಯಲ್ಲಿ ನಡೆದು ಶಾಲಾ-ಕಾಲೇಜ್‍ಗೆ ತೆರಳಬೇಕಾದ ಪರಿಸ್ಥಿತಿ ಇದೆ. ಸ್ವಾತಂತ್ರ್ಯ ಬಂದು 7 ದಶಕಗಳಾದರೂ ಈ ಗ್ರಾಮಕ್ಕೆ ಇನ್ನೂ ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲ. ಬಸ್ ಇಲ್ಲದ ಕಾರಣ ಗ್ರಾಮದಲ್ಲಿ ಎಷ್ಟೋ ಯುವತಿಯರು ವಿದ್ಯಾಭ್ಯಾಸವನ್ನೇ ಮೊಟುಕುಗೊಳಿಸಿದ್ದಾರೆ. ಇದರಿಂದ ಬಾಲ್ಯ ವಿವಾಹ ಕೂಡ ಹೆಚ್ಚಾಗುತ್ತಿವೆ. ವಿಪರ್ಯಾಸವೆಂದರೆ ಓದುವ ಆಸೆಯಿದ್ದರು ಸರಿಯಾದ ಬಸ್ ವ್ಯವಸ್ಥೆ ಇಲ್ಲ ಎಂಬ ಕಾರಣ ಮಹಿಳೆಯರು ಮನೆಯಲ್ಲೇ ಕೂರುವಂತಾಗಿದೆ. ಇದರಿಂದ ಈ ಊರಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿಲ್ಲ ಎಂದು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಕೆರೆಯಲ್ಲಿ ಪತ್ತೆ

    ಈ ಎಲ್ಲಾ ಸಮಸ್ಯೆಗಳನ್ನ ಗ್ರಾಮದ ಬಿಂದು ಎಂಬ ಯುವತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಪತ್ರ ಬರೆದಿದ್ದಾರೆ. ತಮ್ಮ ಗ್ರಾಮದ ಸಮಸ್ಯೆ ಬಗೆಹರಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದು, ಅಲ್ಲದೆ ಗ್ರಾಮಕ್ಕೆ ರಸ್ತೆ ಆಗುವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾಳೆ.

    ರಾಜಕಾರಣಿಗಳು ಚುನಾವಣೆ ಮಾತ್ರ ಬರುತ್ತಾರೆ ನಂತರ ಯಾರು ಬರಲ್ಲ ಎಂದು ಅಳಲು ತೋಡಿಕೊಂಡಿರುವ ಗ್ರಾಮಸ್ಥರು, ಮಕ್ಕಳನ್ನ ಹೆಚ್ಚು ಓದಿಸಬೇಕೆಂದು ಆಸೆ ಇದೆ ಆದರೆ, ಬಸ್ ಹಾಗೂ ರಸ್ತೆ ವ್ಯವಸ್ಥೆ ಇಲ್ಲ ಎಂಬ ಕಾರಣ ವಿದ್ಯಾಭ್ಯಾಸವನ್ನು ಮೊಟುಕುಗೊಳಿಸಬೇಕಾದ ಅನಿವಾರ್ಯವಿದೆ ಮೊಬೈಲ್ ಟವರ್, ಸರಿಯಾದ ರಸ್ತೆ, ಬಸ್ ವ್ಯವಸ್ಥೆ ಇದಲ್ಲದೆ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಪಡೆಯಲು 12 ಕಿಲೋಮೀಟರ್ ಹೋಗಿ ಬರಬೇಕಾದ ಪರಿಸ್ಥಿತಿ ಇದೆ. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ ಈ ಊರಿಗೆ ಬೇರೆ ಗ್ರಾಮದಿಂದ ಯಾರು ಕೂಡ ಹುಡುಗರಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ, ಹಾಗೂ ಇಲ್ಲಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗುತ್ತಿಲ್ಲ. ಅಷ್ಟರ ಮಟ್ಟಿಗೆ ಇಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಗ್ರಾಮದ ಜನರು ತೊಂದರೆ ಅನುಭವಿಸುತ್ತಿದ್ದಾರೆ.

    ಬಿಂದು ತಮ್ಮ ಊರಿನ ಸಮಸ್ಯೆಗಳ ಬಗ್ಗೆ ಪ್ರಧಾನಿ ಹಾಗೂ ಸಿಎಂಗೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನಡುವೆ ಸಿಎಂ ಕೂಡ ಅವರ ಪತ್ರಕ್ಕೆ ಸ್ಪಂದಿಸಿದ್ದು ರಸ್ತೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಅಧಿಕೃತ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿದ ಬುಡಕಟ್ಟು ಜನಾಂಗದ ನಾಲ್ವರು

  • ಗದಗ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ

    ಗದಗ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ

    ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಇಂದು ರಾತ್ರಿ 8:25 ರ ಸುಮಾರಿಗೆ ಲಘು ಭೂಕಂಪನವಾಗಿದೆ.

    ಭೂಮಿ 2 ಕ್ಷಣ ಕಂಪಿಸಿದಾಗ ಗ್ರಾಮಸ್ಥರು ಭಯದಿಂದ ಹೊರಗಡೆ ಓಡಿ ಬಂದಿದ್ದಾರೆ. ಸುಮಾರು 5 ರಿಂದ 10 ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದೆ. ಇದನ್ನೂ ಓದಿ: ಜನರು ಮಾತೃಭಾಷೆಯೊಂದಿಗೆ ಹಿಂದಿಯನ್ನೂ ಕಲಿಯಬೇಕು: ಅಮಿತ್ ಶಾ

    ಮನೆಯ ಪಾತ್ರೆ ಕೆಲವು ವಸ್ತುಗಳು ಕೆಳಗೆ ಬಿದ್ದಿವೆ. ಜನತೆ ಮೊದಲು ಗಣಪತಿ ವಿಸರ್ಜನೆಯ ಪಟಾಕಿಯ ಸದ್ದು ಎಂದು ತಿಳಿದಿದ್ದರು. ಆದರೆ ಗ್ರಾಮದ ಬಹುತೇಕ ಕಡೆಗಿನ ಜನರು ಹೊರಗಡೆ ಬಂದು ಅನುಭವ ಹಂಚಿಕೊಂಡಾಗಲೆ ಇದು ಭೂಕಂಪನ ಎಂದು ತಿಳಿದಿದೆ. ಇದರಿಂದ ಗ್ರಾಮಸ್ಥರು ಭಯ ಭೀತಗೊಂಡಿದ್ದಾರೆ.

  • ಒಂದೇ ಗ್ರಾಮದ 51 ಜನರಿಗೆ ಕೊರೊನಾ ಪಾಸಿಟಿವ್- ಗ್ರಾಮಸ್ಥರಲ್ಲಿ ಆತಂಕ

    ಒಂದೇ ಗ್ರಾಮದ 51 ಜನರಿಗೆ ಕೊರೊನಾ ಪಾಸಿಟಿವ್- ಗ್ರಾಮಸ್ಥರಲ್ಲಿ ಆತಂಕ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಕೇಸ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದರೂ, ಇಲ್ಲೊಂದು ಗ್ರಾಮದಲ್ಲಿ 51 ಜನರಿಗೆ ಕೋವಿಡ್ ಸೋಂಕು ವಕ್ಕರಿಸಿದೆ. ಈ ಮೂಲಕ ಇಡೀ ಗ್ರಾಮ ಸೀಲ್ ಡೌನ್ ಆಗುವಂತಾಗಿದೆ.

    ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹರದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜನಗೇರಿಯಲ್ಲಿ 25 ಕ್ಕೂ ಹೆಚ್ಚು ಕುಟುಂಬಗಳ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಷ್ಟಕ್ಕೂ ಕಾಫಿತೋಟ ಬಿಟ್ಟು ಎಲ್ಲೂ ಹೊರ ಹೋಗದೆ, ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಜನರಿಗೆ ಸೋಂಕು ಹರಡಿರುವುದೇ ಅಚ್ಚರಿಯ ವಿಷಯವಾಗಿದೆ. ಆದರೆ ಬೆಟ್ಟಗೇರಿ ಕಾಫಿ ಎಸ್ಟೇಟ್ ನಲ್ಲಿರುವ ಬಿಜನಮೊಟ್ಟೆ ಬ್ರಾಂಚಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಹರಡಿತ್ತು. ಮಡಿಕೇರಿಯ ಕಾಲೇಜಿಗೆ ಹೋಗುತ್ತಿದ್ದವರಿಗೆ ಮೊದಲು ಸೋಂಕು ಕಂಡುಬಂದಿತ್ತು. ಬಳಿಕ ಬಿಜನಮೊಟ್ಟೆ ಎಸ್ಟೇಟ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದ 15 ಮಂದಿಗೆ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಇವರೆಲ್ಲರಿಗೂ ಸೋಂಕಿನ ಲಕ್ಷಣಗಳಿದ್ದರೂ ಇತ್ತೀಚೆಗೆ ಗ್ರಾಮದಲ್ಲಿ ಮೃತಪಟ್ಟಿದ್ದ ವೃದ್ದರೊಬ್ಬರ ಸಾವಿಗೆ ಹೋಗಿದ್ದಾರೆ. ಇದರಿಂದಾಗಿ ಗ್ರಾಮದ 51 ಜನರಿಗೆ ಸೋಂಕು ವ್ಯಾಪಿಸಿದೆ. ಇದನ್ನೂ ಓದಿ: ಮದುವೆ ಆಹ್ವಾನ ಪತ್ರ ನೀಡಲು ಬಂದ ಮದುಮಗ ಸೇರಿದ್ದು ಮಸಣಕ್ಕೆ

    ವಿದ್ಯಾರ್ಥಿಗಳಿಗೆ ಮೊದಲು ಪಾಸಿಟಿವ್ ಬಂದ ಪರಿಣಾಮವಾಗಿ ಅನುಮಾನಗೊಂಡು ಅಂಜನಗೇರಿಯ 300 ಕ್ಕೂ ಹೆಚ್ಚು ಜನರಿಗೆ ಕೋವಿಡ್ ತಪಾಸಣೆ ಮಾಡಿದ್ದಾರೆ. ಈ ವೇಳೆ 51 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಗ್ರಾಮವನ್ನೇ ಸೀಲ್ ಡೌನ್ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದ ಸೋಂಕಿತರೆಲ್ಲರೂ ಆರೋಗ್ಯವಾಗಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಅಭಿಮನ್ಯು ಟೀಂಗೆ ಹೊಸ ಮೆಂಬರ್ ಎಂಟ್ರಿ- ಅಶ್ವತ್ಥಾಮ ಭವಿಷ್ಯದ ಕ್ಯಾಪ್ಟನ್!

  • ಹಾಸನದಲ್ಲಿ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಒಂಟಿ ಸಲಗ

    ಹಾಸನದಲ್ಲಿ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಒಂಟಿ ಸಲಗ

    ಹಾಸನ: ಒಂಟಿ ಸಲಗವೊಂದು ಬೆಳ್ಳಂಬೆಳಗ್ಗೆ ಗ್ರಾಮದೊಳಗೆ ಪ್ರವೇಶಿ, ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಬ್ಬಿನಗದ್ದೆ ಗ್ರಾಮದಲ್ಲಿ ನಡೆದಿದೆ.

    ಬೆಳ್ಳಂ ಬೆಳಗ್ಗೆ ಗ್ರಾಮದೊಳಕ್ಕೆ ಎಂಟ್ರಿಕೊಟ್ಟ ಒಂಟಿ ಸಲಗ, ಪ್ರಮುಖ ಬೀದಿಯಲ್ಲಿ ಸಂಚಾರ ನಡೆಸಿದೆ. ಒಂಟಿ ಸಲಗದ ಓಡಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬೃಹದಾಕಾರದ ಆನೆಯನ್ನು ನೋಡುತ್ತಿದ್ದಂತೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಕಂಗಾಲಾಗಿದ್ದಾರೆ. ಗ್ರಾಮಸ್ಥರು ಸಲಗದ ವೀಡಿಯೋ ಮಾಡಿದ್ದು, ವೈರಲ್ ಆಗಿದೆ. ಇದನ್ನೂ ಓದಿ: ಕೋಟೆನಾಡಲ್ಲಿ ತಡರಾತ್ರಿ ಅಶೋಕ್ ಸಿಟಿರೌಂಡ್ಸ್

    ಒಂಟಿ ಸಲಗ ಪದೇ ಪದೇ ಗ್ರಾಮದೊಳಗೆ ಪ್ರವೇಶಿಸುತ್ತದೆ. ಹಲವೆಡೆ ಬೆಳೆ ಕೂಡ ನಾಶವಾಗಿದೆ. ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಗ್ರಾಮೀಣ ಭಾಗದ ಜನರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು: ಸವದಿ

    ಗ್ರಾಮೀಣ ಭಾಗದ ಜನರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು: ಸವದಿ

    ಚಿಕ್ಕೋಡಿ: ಸರ್ಕಾರ ಗ್ರಾಮೀಣ ಭಾಗಗಳಲ್ಲಿ ಸ್ಥಾಪಿಸಿರುವ ಗ್ರಂಥಾಲಯಗಳ ಸದುಪಯೋಗವನ್ನು ಪ್ರತಿಯೊಂದು ಗ್ರಾಮದ ಜನರು ಪಡೆದುಕೊಳ್ಳಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಂಥಾಲಯಗಳಿಗೆ ಸಾರ್ವಜನಿಕ ಗ್ರಂಥಾಲಯದ ಮೂಲಕ ಬಂದಿರುವ ಪುಸ್ತಕಗಳನ್ನು ಹಂಚಿಕೆ ಮಾಡಿ ಮಾತನಾಡಿದ ಅವರು, ಗ್ರಂಥಾಲಯ ಎಂದರೆ ಇಡೀ ವಿಶ್ವವೇ ಇದ್ದ ಹಾಗೆ ದೇಶದ ಇತಿಹಾಸ, ಒಳ್ಳೆಯ ವಿಚಾರ, ಪರಿಸರ, ಜ್ಞಾನ, ಜಗತ್ತು, ಇತಿಹಾಸ ಪರಂಪರೆಯನ್ನು ಪುಸ್ತಕ ಕಲಿಸುತ್ತದೆ ಎಲ್ಲರೂ ಓದುವುದನ್ನು ಹವ್ಯಾಸ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಇದನ್ನೂ ಓದಿ: ರಮೇಶ್ ಕುಮಾರ್ ವಿರುದ್ಧ ಜೆ.ಪಿ ನಗರ ಎಎಸ್‍ಐ ಗರಂ

    ಪುಸ್ತಕ ಓದುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿ ಇರುತ್ತಾರೆ. ಸರ್ಕಾರ ಹಲವಾರು ಯೋಜನೆಗಳನ್ನು ಗ್ರಾಮಗಳಿಗೆ ಒದಗಿಸಿದೆ, ಆ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು. ಇನ್ನೂ ಉಳಿದ ಗ್ರಾಮ ಪಂಚಾಯತ್‍ಗಳಿಗೆ ಸರ್ಕಾರದಿಂದ ಗ್ರಂಥಾಲಯ ಸ್ಥಾಪನೆ ಕಾರ್ಯ ಆಗುತ್ತಿದೆ ಎಂದರು.

    ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ, ಉಪ ತಹಶೀಲ್ದಾರ್ ಮಹಾದೇವ ಬಿರಾದಾರ್, ಡಿವೈಎಸ್‍ಪಿ ಅಲೀಶ್, ಕಂದಾಯ ನಿರೀಕ್ಷಿಕ ಎಂ.ಎಂ ಮಿರ್ಜಿ, ಕುಮಾರ್ ಹಾಡಕರ, ಉದ್ಯಮಿ ಸಂತೋಷ್ ಸಾವಡಕರ ಸೇರಿದಂತೆ ಹಲವರು ಉಪಸ್ಥಿರಿದ್ದರು. ಇದನ್ನೂ ಓದಿ: ಕೆಂಗೇರಿ ಮೆಟ್ರೋ ವೇದಿಕೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಕನ್ನಡ ಮಾಯ

  • ಭಾರೀ ಮಳೆ- ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

    ಭಾರೀ ಮಳೆ- ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

    ವಿಜಯಪುರ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ಹಳ್ಳದಲ್ಲಿ ಯುವಕ ಕೊಚ್ಚಿ ಹೋದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನೇಗಿನಾಳ-ಮುಳ್ಳಾಳ ಡೋಣಿ ಹಳ್ಳದಲ್ಲಿ ನಡೆದಿದೆ.

    ಮಂಜುನಾಥ ಪಾಟೀಲ್ (23) ಹಳ್ಳದಲ್ಲಿ ಕೊಚ್ಚಿ ಹೋದ ಯುವಕ. ಬೈಕ್ ಮೇಲೆ ಹಳ್ಳ ದಾಟಲು ಮುಂದಾದಾಗ ಕೊಚ್ಚಿ ಹೋಗಿದ್ದಾನೆ. ರಾತ್ರಿ ಉಕ್ಕಿ ಹರಿಯುತ್ತಿದ್ದ ನೇಗಿನಾಳ-ಮುಳ್ಳಾಳ ಡೋಣಿ ಹಳ್ಳ ದಾಟಲು ಯುವಕರ ಯತ್ನಿಸಿದ್ದಾನೆ. ಇದನ್ನೂ ಓದಿ: ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ

    ಹಳ್ಳದ ನೀರನ ರಭಸಕ್ಕೆ ಬೈಕ್ ಕೊಚ್ಚಿ ಹೋಗಿದೆ. ಬೈಕ್ ಮೇಲಿದ್ದ ಮಂಜುನಾಥ ಸಹ ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ, ಮನಗೂಳಿ ಪೊಲೀಸರು ಭೇಟಿ ನೀಡಿ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

  • ನಾಯಿ ಮರಿ ಹೊತ್ತೊಯ್ದ ಚಿರತೆ- ಗ್ರಾಮಸ್ಥರಲ್ಲಿ ಆತಂಕ

    ನಾಯಿ ಮರಿ ಹೊತ್ತೊಯ್ದ ಚಿರತೆ- ಗ್ರಾಮಸ್ಥರಲ್ಲಿ ಆತಂಕ

    ನೆಲಮಂಗಲ: ಚಿರತೆಯೊಂದು ಹೊಂಚುಹಾಕು ಹಾಕಿ ನಾಯಿ ಮರಿಯನ್ನು ಹೊತ್ತೊಯ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಂಟನಕುರ್ಚಿ ಗ್ರಾಮದಲ್ಲಿ ನಡೆದಿದೆ.

    ಮಂಟನಕುರ್ಚಿ ಗ್ರಾಮದ ಮಂಜುನಾಥ್ ಎಂಬುವವರ ತೋಟದ ಮನೆಯ ಮುಂದೆ ಕಾಣಿಸಿಕೊಂಡಿರುವ ಚಿರತೆ ಮನೆಯ ಬಾಗಿಲ ಮುಂದೆ ಮಲಗಿದ್ದ ಎರಡು ನಾಯಿ ಮರಿಗಳಲ್ಲಿ ಒಂದು ಮರಿಯನ್ನು ಸಂಚು ಹಾಕಿ ಕ್ಷಣ ಮಾತ್ರದಲ್ಲಿ ಹೊತ್ತೋಯ್ದಿದೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ

    ಚಿರತೆಯ ಚಲನವಲಗಳು ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ನೆಲಮಂಗಲ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳ ಭೇಟಿ ವೇಳೆ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿ ಆತಂಕ ವ್ಯಕ್ತಪಡಿಸಿದ್ದು ಚಿರತೆ ಸೆರೆಗೆ ಬೋನ್ ಇಡಲು ಮನವಿ ಮಾಡಿದ್ದಾರೆ.

  • ಗಡಿಕೇಶ್ವಾರದಲ್ಲಿ ಕಂಪಿಸಿದ ಭೂಮಿ

    ಗಡಿಕೇಶ್ವಾರದಲ್ಲಿ ಕಂಪಿಸಿದ ಭೂಮಿ

    ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಭೂಮಿಯಿಂದ ಭಾರೀ ಸದ್ದು ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

    ಇಂದು ಬೆಳಿಗ್ಗೆ 9:53ರ ಸುಮಾರಿಗೆ ಭೂಮಿಯಿಂದ ಭಾರೀ ವಿಚಿತ್ರ ರೀತಿಯಲ್ಲಿ ಸದ್ದು ಕೇಳಿಬಂದಿದೆ. ಇದು ಇಂದು ಮಾತ್ರ ಅಲ್ಲ ಗ್ರಾಮದಲ್ಲಿ ಈ ಹಿಂದೆ ಅನೇಕ ಬಾರಿ ಮೇಲಿಂದ ಮೇಲೆ ಭೂಮಿಯಿಂದ ಈ ರೀತಿಯ ಸದ್ದು ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ಭೂಕಂಪನದ ಅನುಭವ ಆದಂತಾಗಿದೆ. ಶಬ್ಧ ಬರಲು ಮೂಲ ಕಾರಣ ಏನು ಎನ್ನುವುದರ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕಿದೆ. ಇದನ್ನೂ ಓದಿ: ಕಲಬುರಗಿ ಕೋಟೆ ವೀಕ್ಷಿಸಿದ ನಿರಾಣಿ

    ಕಳೆದ ಐದು ವರ್ಷಗಳಿಂದ ಈ ಗ್ರಾಮದಲ್ಲಿ ಭೂಮಿಯಿಂದ ಕಂಪಿಸುವ ಶಬ್ದ ಅನೇಕ ಬಾರಿ ಕೇಳಿ ಬಂದ ಪರಿಣಾಮ, ಇಲ್ಲಿ ರಿಕ್ಟರ್ ಮಾಪನ ಸಹ ಕೆಲ ವರ್ಷಗಳ ಹಿಂದೆ ಅಳವಡಿಸಿದ್ದರು. ಆದರೆ ರಿಕ್ಟರ್ ಮಾಪನದಲ್ಲಿ ಇಲ್ಲಿಯವರೆಗೆ ಭೂಕಂಪದ ಬಗ್ಗೆ ಯಾವುದೇ ದಾಖಲಾಗಿಲ್ಲ. ಹೀಗಾಗಿ ಇದು ವಿಜ್ಞಾನಿಗಳಿಗೆ ದೊಡ್ಡ ತಲೆ ನೋವಾಗಿದೆ. ಇದನ್ನೂ ಓದಿ: ವಧು, ವರರಿಗೆ ಪೆಟ್ರೋಲ್ ಗಿಫ್ಟ್ ಕೊಟ್ಟ ಹಾಸ್ಯ ನಟ

  • ಮಂಗಗಳ ಹಾವಳಿಗೆ ತತ್ತರಿಸಿದ ರಾಯಚೂರಿನ ಗ್ರಾಮ – ಮನೆಗೆ ಬೀಗ ಹಾಕಿಕೊಂಡು ಕುಳಿತ ಜನ

    ಮಂಗಗಳ ಹಾವಳಿಗೆ ತತ್ತರಿಸಿದ ರಾಯಚೂರಿನ ಗ್ರಾಮ – ಮನೆಗೆ ಬೀಗ ಹಾಕಿಕೊಂಡು ಕುಳಿತ ಜನ

    ರಾಯಚೂರು: ತಾಲೂಕಿನ ಪಲವಲದೊಡ್ಡಿ ಗ್ರಾಮದ ರಸ್ತೆಗಳಲ್ಲಿ ಮನುಷ್ಯರು ಕಾಣದಿದ್ದರೂ ಕೋತಿಗಳು ಮಾತ್ರ ಕಣ್ಣಿಗೆ ಬಿದ್ದೇ ಬೀಳುತ್ತಿದ್ದು, ಜನ ಮಂಗಗಳ ಹಾವಳಿಗೆ ತತ್ತರಿಸಿ ಹೋಗಿದ್ದಾರೆ. ಕೋತಿಗಳಿಗೆ ಹೆದರಿ ಜನ ಮನೆ ಬಾಗಿಲು ಹಾಕಿಕೊಂಡು ಕುಳಿತಿದ್ದಾರೆ. ಕಳೆದ ಒಂದು ತಿಂಗಳಿಂದ ಅದೆಲ್ಲಿಂದಲೋ ಬಂದ ಕೋತಿಗಳು ಗ್ರಾಮಸ್ಥರನ್ನೇ ಊರು ಬಿಡುವಂತೆ ಮಾಡುತ್ತಿವೆ. ರಾಯಚೂರಿನ ಈ ಊರಲ್ಲಿ ಮನೆಗೊಂದು ಕೋತಿ ಇವೆ.

    ಪಲವಲದೊಡ್ಡಿ ಗ್ರಾಮದಲ್ಲಿ ಸುಮಾರು 150 ಮನೆಗಳಿವೆ. ಅಂದಾಜು ಅಷ್ಟೇ ಪ್ರಮಾಣದ ಕೋತಿಗಳು ಗ್ರಾಮದಲ್ಲಿದ್ದು ಗ್ರಾಮಸ್ಥರನ್ನ ರಸ್ತೆಯಲ್ಲಿ ನಿರಾತಂಕವಾಗಿ ಓಡಾಡದಂತೆ ಮಾಡಿವೆ. ಮನೆ ಬಾಗಿಲು ತೆರೆದಿಟ್ಟರೆ ಮನೆಯೊಳಗೆ ನುಗ್ಗಿ ಸಿಕ್ಕ ವಸ್ತುಗಳನ್ನು ಹೊತ್ತೊಯ್ಯುತ್ತವೆ. ಮಕ್ಕಳು ಆಟವಾಡುತ್ತಿದ್ದರೆ ಕೈಯಲ್ಲಿದ್ದ ವಸ್ತುಗಳನ್ನ ಕಸಿದುಕೊಂಡು ಹೋಗುತ್ತವೆ. ಮಕ್ಕಳು ವಸ್ತು ಕೊಡದೆ ಗಲಾಟೆ ಮಾಡಿದರೆ ಪರಚಿ ಹೆದರಿಸುತ್ತವೆ. ಹೀಗಾಗಿ ಗ್ರಾಮದಲ್ಲಿ ವಯೋವೃದ್ದರು, ಮಕ್ಕಳು ಓಡಾಡದಂತಾಗಿದೆ. ಒಂದು ತಿಂಗಳ ಹಿಂದೆ ಗ್ರಾಮದಲ್ಲಿ ಒಂದೂ ಮಂಗ ಇರಲಿಲ್ಲ. ಏಕಾಏಕಿ ವಾನರ ಸೈನ್ಯ ಗ್ರಾಮಕ್ಕೆ ಲಗ್ಗೆ ಇಟ್ಟಿದೆ. ಯಾರೋ ಈ ಎಲ್ಲಾ ಕೋತಿಗಳನ್ನ ಬಿಟ್ಟು ಹೋಗಿರಬೇಕು ಅಂತ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

    ಗ್ರಾಮ ಪಂಚಾಯತಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕೇವಲ ಪರಿಶೀಲನೆ ಮಾಡಿ ಹೋಗಿರುವ ಅಧಿಕಾರಿಗಳು ಮಂಗಗಳನ್ನ ಹಿಡಿಯುವ ಕೆಲಸಕ್ಕೆ ಮುಂದಾಗಿಲ್ಲ. ಗ್ರಾಮದಲ್ಲಿ ಸುಮಾರು ಜನರಿಗೆ ಕಚ್ಚಿರುವ ಕೋತಿಗಳು, ಜನರ ನೆಮ್ಮದಿಯನ್ನೆ ಕೆಡಿಸಿವೆ. ಕೋತಿಗಳ ಕಾಟಕ್ಕೆ ಜನರೇ ಗ್ರಾಮವನ್ನ ಬಿಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ರಾಯಚೂರು ನಗರಸಭೆಯಿಂದ ರಿಮ್ಸ್‌ಗೆ 2ಡಿ ಎಕೋ ಯಂತ್ರ ದೇಣಿಗೆ

    ಒಟ್ನಲ್ಲಿ, ಎಲ್ಲಿಂದಲೋ ಬಂದು ಸೇರಿರುವ ಅತಿಥಿಗಳು ಇಡೀ ಊರನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿವೆ. ದಿನ ಬೆಳಕು ಹರಿಯುವುದರೊಳಗೆ ಏನಾದರೊಂದು ಅವಾಂತರವಾಗಿರುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು, ಕೋತಿಗಳನ್ನ ಹಿಡಿದು ಸ್ಥಳಾಂತರಿಸಬೇಕಿದೆ. ಇದನ್ನೂ ಓದಿ: ಮಾಸ್ಕ್ ಧರಿಸದೇ ಜನರ ಓಡಾಟ- ದಾಂಡೇಲಿಯಲ್ಲಿ 1,02,800 ರೂ. ದಂಡ ವಸೂಲಿ