Tag: villagers

  • ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

    ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

    ಹುಬ್ಬಳ್ಳಿ: ಚುನಾವಣಾ ಸಮಯದಲ್ಲಿ ಸೌಲಭ್ಯ ಕೊಟ್ಟು ಬಳಿಕ ನಿಲ್ಲಿಸಿದ ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮ ಪಂಚಾಯಿತಿ ಕಚೇರಿಗೆ (Gram Panchayat Office) ಮುತ್ತಿಗೆ ಹಾಕಿದ ಗ್ರಾಮಸ್ಥರು, ಸಿಬ್ಬಂದಿಯನ್ನು ಕೂಡಿಹಾಕಿ ಬೀಗ ಜಡಿದಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಜಗದೀಶ್ವರ ನಗರದಲ್ಲಿ ಕಳೆದ 6 ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕ ಇರಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ನಿವಾಸಿಗಳು ಮನವಿ ಮಾಡಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

    ಅಧಿಕಾರಿಗಳು ಚುನಾವಣಾ ಸಮಯದಲ್ಲಿ ತಾತ್ಕಾಲಿಕವಾಗಿ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಿ, ಚುನಾವಣೆ ಬಳಿಕ ಮತ್ತೆ ಎಲ್ಲಾ ಸೌಲಭ್ಯವನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

  • ಸಚಿವೆ ಶಶಿಕಲಾ ಜೊಲ್ಲೆಗೆ ಗ್ರಾಮಸ್ಥರಿಂದ ಕ್ಲಾಸ್

    ಸಚಿವೆ ಶಶಿಕಲಾ ಜೊಲ್ಲೆಗೆ ಗ್ರಾಮಸ್ಥರಿಂದ ಕ್ಲಾಸ್

    ಚಿಕ್ಕೋಡಿ: ಚುನಾವಣಾ (Election) ಪ್ರಚಾರಕ್ಕೆ ತೆರಳಿದ್ದ ಸಚಿವೆ ಶಶಿಕಲಾ ಜೊಲ್ಲೆಯನ್ನು(Shashikala Jolle) ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ದಲಿತ ಕಾಲೋನಿಗೆ (Dalit Colony) ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಇಷ್ಟು ದಿನಗಳ ಕಾಲ ನಮ್ಮೂರಿನತ್ತ ಮುಖ ಮಾಡಿಲ್ಲ. ಚುನಾವಣೆ ಬರುತ್ತಿದ್ದಂತೆ ನಮ್ಮೂರಿಗೆ ಭೇಟಿ ನೀಡುತ್ತಿದ್ದೀರಿ. ನಮ್ಮ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ. ದಲಿತರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಹೀಗಾಗಿ ನೀವು ನಮ್ಮೂರಿಗೆ ಬರುವುದು ಬೇಡ ಎಂದು ಗ್ರಾಮಸ್ಥರು (Villagers) ಸಚಿವೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಡೋದು ಹರಿಕಥೆ, ತಿನ್ನೋದು ಬದನೇಕಾಯಿ – ಅಂಥವರಿಗೆ ಕೋಲಾರದ ಜನ ಮರುಳಾಗ್ಬೇಡಿ: HDK 

    ಘಟನೆಯಿಂದ ಗಲಿಬಿಲಿಗೊಂಡ ಸಚಿವರು ಜನರನ್ನು ಸಮಾಧಾನ ಪಡಿಸಲು ಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದನ್ನೂ ಓದಿ: ಮೋದಿ ಇಡೀ ವಿಶ್ವಕ್ಕೆ ಹುಲಿ: ಈಶ್ವರಪ್ಪ

  • ಪೂಜೆ ವಿಷಯಕ್ಕೆ ಗಲಾಟೆ – ದೇವಾಲಯದಲ್ಲೇ ಗ್ರಾಮಸ್ಥರಿಂದ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

    ಪೂಜೆ ವಿಷಯಕ್ಕೆ ಗಲಾಟೆ – ದೇವಾಲಯದಲ್ಲೇ ಗ್ರಾಮಸ್ಥರಿಂದ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

    ಹುಬ್ಬಳ್ಳಿ: ಪೂಜೆ ವಿಷಯಕ್ಕೆ ಗಲಾಟೆ ನಡೆದು ದೇವಸ್ಥಾನದಲ್ಲಿಯೇ (Temple) ಗ್ರಾಮಸ್ಥರು (Villagers) ಅರ್ಚಕನನ್ನು (Priest) ಥಳಿಸಿದ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

    ಹುಬ್ಬಳ್ಳಿ (Hubballi) ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಮತ್ತು ಗ್ರಾಮಸ್ಥರ ನಡುವೆ ಪೂಜೆಯ ವಿಚಾರವಾಗಿ ಗಲಾಟೆ ನಡೆದಿದೆ. ಗ್ರಾಮದ ಪ್ರಕಾಶ್ ಕುಂದಗೋಳಮಠ ಬಸವಣ್ಣ ದೇವಸ್ಥಾನದ ಅರ್ಚಕರಾಗಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಅರ್ಚಕನ ನಡವಳಿಕೆಯಲ್ಲಿ ಬದಲಾವಣೆಯಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟು ಹೊಸ ಅರ್ಚಕರ ನೇಮಕಕ್ಕೆ ಚಿಂತನೆ ನಡೆಸಿದ್ದರು.

    ಗ್ರಾಮಸ್ಥರ ಈ ನಿರ್ಧಾರಕ್ಕೆ ಪ್ರಕಾಶ್ ಒಪ್ಪಿಗೆ ನೀಡಿರಲಿಲ್ಲ. ಈ ವಿಚಾರಕ್ಕೆ ದೇವಸ್ಥಾನ ಆವರಣದಲ್ಲಿ ಗಲಾಟೆ ಆರಂಭವಾಗಿ, ಜಗಳ ತಾರಕಕ್ಕೇರಿ ಅರ್ಚಕ ಪ್ರಕಾಶ್‌ಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತಮ್ಮ ತಂದೆಯನ್ನು ಬಿಡಿಸಲು ಮುಂದಾದ ಅರ್ಚಕನ ಮಗನಿಗೂ ಗ್ರಾಮಸ್ಥರು ಥಳಿಸಿದ್ದಾರೆ. ಇದನ್ನೂ ಓದಿ: 10 ವರ್ಷದ ಫೀಸ್ ಕಟ್ಟೋಕೆ ಶಾಲೆಗಳಿಂದ ಆಫರ್ – ನಯಾ ಪ್ಲ್ಯಾನ್‍ಗೆ ಪೋಷಕರು ಕಂಗಾಲು

    ಗ್ರಾಮಸ್ಥರು ಅರ್ಚಕನ ಮೇಲೆ ನಡೆಸಿರುವ ಹಲ್ಲೆಯನ್ನು ನೆರೆದಿದ್ದವರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿದ್ಯುತ್ ಸಂಪರ್ಕವನ್ನೇ ನೀಡದೇ 60,000 ಬಿಲ್ – ಉ.ಪ್ರದೇಶದ ಶಾಮ್ಲಿ ಜಿಲ್ಲೆಯ 12 ಗ್ರಾಮಸ್ಥರಿಗೆ ಶಾಕ್

    ವಿದ್ಯುತ್ ಸಂಪರ್ಕವನ್ನೇ ನೀಡದೇ 60,000 ಬಿಲ್ – ಉ.ಪ್ರದೇಶದ ಶಾಮ್ಲಿ ಜಿಲ್ಲೆಯ 12 ಗ್ರಾಮಸ್ಥರಿಗೆ ಶಾಕ್

    ಶಾಮ್ಲಿ: ವಿದ್ಯುತ್ ಸಂಪರ್ಕವನ್ನೇ ನೀಡದೇ 12 ಗ್ರಾಮಗಳಲ್ಲಿರುವ ಮನೆಗಳಿಗೆ 30,000 – 60,000 ರೂಪಾಯಿ ಬಿಲ್ ನೀಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶಾಮ್ಲಿ (Shamli) ಜಿಲ್ಲೆಯಲ್ಲಿ ನಡೆದಿದೆ. ಬಿಲ್ ಕಂಡು ಗ್ರಾಮಸ್ಥರು ಆಘಾತಗೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಶಾಮ್ಲಿ ಜಿಲ್ಲೆಯ ಖೋಕ್ಸಾ, ಅಲಾವುದ್ದೀನ್‍ಪುರ, ದುದ್ಲಿ, ಡೇರಾ ಭಾಗೀರಥ್, ನಯಾ ಗಾಂವ್ ಸೇರಿ ಹಲವು ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ಈ ಗ್ರಾಮಗಳಲ್ಲಿ ಬವಾರಿಯಾ ಬುಡಕಟ್ಟು ಜನಾಂಗದವರು ವಾಸವಾಗಿದ್ದಾರೆ. ಪ್ರತಿ ಗ್ರಾಮದಲ್ಲಿ 250- 300 ಮಂದಿ ವಾಸವಾಗಿದ್ದಾರೆ. ಇದನ್ನೂ ಓದಿ: 36 ಸೇತುವೆಗಳು ಸಂಚಾರಕ್ಕೆ ಅನರ್ಹ – ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಸರ್ಕಾರ

    ಕಳೆದ ಕೆಲವು ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಮೀಟರ್‌ಗಳನ್ನು ಉಚಿತವಾಗಿ ನೀಡುವುದಾಗಿ ವಿದ್ಯುತ್ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದರು. ಬಳಿಕ ಮನೆಗಳಿಗೆ ವಿದ್ಯುತ್ ಮೀಟರ್‌ಗಳನ್ನು ಅಳವಡಿಸಿದ್ದರು. ನಂತರ ವಿದ್ಯುತ್ ಸಂಪರ್ಕವನ್ನೇ ನೀಡದೇ ಈಗ ಬಿಲ್‍ಗಳನ್ನು ನೀಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ವೈರಲ್ ವೀಡಿಯೋದಲ್ಲಿರೋದು ಫಿಸಿಯೋಥೆರಪಿಸ್ಟ್ ಅಲ್ಲ, ರೇಪಿಸ್ಟ್: ಬಿಜೆಪಿ

    ನಾವು ವಿದ್ಯುತ್ ಇಲ್ಲದೇ ಜೀವನ ನಡೆಸಿದ್ದೇವೆ, ನಾವು ಯಾಕೆ ಬಿಲ್ ಪಾವತಿಸಬೇಕು ಎಂದು ಸ್ಥಳೀಯ ಆಡಳಿತವನ್ನು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮಾಂಚಲ್ ವಿದ್ಯುತ್ ವಿತ್ರನ್ ನಿಗಮ್ ಲಿಮಿಟೆಡ್‍ನ ಸೂಪರಿಂಟೆಂಡಿಂಗ್ ಎಂಜಿನಿಯರ್ ರಾಮ್ ಕುಮಾರ್ ಜನರು ಬಿಲ್ ಪಡೆದಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಲ್ಲರ ಕೈನಲ್ಲೂ ದೊಣ್ಣೆ ಇತ್ತು – ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿ ಹೊಡೆದರು: ಎಂ.ಪಿ ಕುಮಾರಸ್ವಾಮಿ

    ಎಲ್ಲರ ಕೈನಲ್ಲೂ ದೊಣ್ಣೆ ಇತ್ತು – ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿ ಹೊಡೆದರು: ಎಂ.ಪಿ ಕುಮಾರಸ್ವಾಮಿ

    ಚಿಕ್ಕಮಗಳೂರು: ನಿನ್ನೆ ರಾತ್ರಿ ಬಟ್ಟೆ ಹರಿದ ಸ್ಥಿತಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ (M.P Kumaraswamy) ತಮ್ಮ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆದಿದೆ, ಕಳ್ಳ ಹುಚ್ಚು ನಾಯಿಯಂತೆ ನನ್ನನು ಅಟ್ಟಾಡಿಸಿ ಚಪ್ಪಲಿಯಲ್ಲಿ ಹೊಡೆದ್ರು ಎಂದು ಆರೋಪಿಸಿದ್ರು. ಆದ್ರೆ ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಪೊಲೀಸರು ಘಟನಾ ಸ್ಥಳದಿಂದ ಶಾಸಕರನ್ನು ಕರೆದೊಯ್ಯುವ ವೇಳೆ, ಅವರ ಮೈಮೇಲಿನ ಬಟ್ಟೆಗಳು ಹರಿದ ಸ್ಥಿತಿಯಲ್ಲಿ ಕಂಡುಬಂದಿರಲಿಲ್ಲ. ಈ ಬಗ್ಗೆ ಇಂದು ಸ್ಪಷ್ಟನೆ ನೀಡಿದ ಎಂ.ಪಿ ಕುಮಾರಸ್ವಾಮಿ, ಆಗ ವೈಟ್ ಬನಿಯನ್ ಇತ್ತು ಅದಕ್ಕೆ ಹರಿದಿದ್ದು ಸರಿಯಾಗಿ ಕ್ಯಾಮೆರಾದಲ್ಲಿ ದಾಖಲಾಗಿಲ್ಲ ಅಂದಿದ್ದಾರೆ. ಆದ್ರೆ, ಶರ್ಟ್ ಹರಿದಿರೋ ವೀಡಿಯೋದಲ್ಲಿಯೂ ಅವರು ಬನಿಯನ್ ಧರಿಸಿರೋದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಆದ್ರೂ, ಎಂಪಿ ಕುಮಾರಸ್ವಾಮಿ, ನನ್ನನ್ನು ಚಪ್ಪಲಿಯಿಂದ ಹೊಡೆದ್ರು. ಕಳ್ಳ ಹುಚ್ಚುನಾಯಿಯಂತೆ ನನ್ನನ್ನು ಅಟ್ಟಾಡಿಸಿ ಚಪ್ಪಲಿಯಲ್ಲಿ ಹೊಡೆದ್ರು. ಇದು ಆನೆ ದಾಳಿಯಲ್ಲ. ರಾಜಕೀಯ ದಾಳಿ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತದೇಹ ನೋಡಲು ಬಂದ ಶಾಸಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ

    ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿದರು ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ಕಲ್ಲು ಹೊಡೆದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ. ಬನಿಯನ್ ಇತ್ತು ಬಟ್ಟೆ ಹರಿದದ್ದು ಕಾಣಲಿಲ್ಲ. ಬನಿಯನ್ ತೆಗೆದರೆ ಹರಿದದ್ದು ಕಾಣುತ್ತೆ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ? ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ. ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ವ್ಯವಸ್ಥಿತ ಹಲ್ಲೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ವರಿಷ್ಠರಿಗೆ ದೂರು ಕೊಡೋದಾಗಿ ಹೇಳಿದ್ದಾರೆ. ಆದ್ರೆ ತಮ್ಮ ಮೇಲಿನ ದಾಳಿ ಬಗ್ಗೆ ಎಂ.ಪಿ ಕುಮಾರಸ್ವಾಮಿ ಪೊಲೀಸರಿಗೆ ದೂರು ಕೂಡ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದನ್ನೂ ಓದಿ: ಕಾಫಿನಾಡಿನ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಯುವಕನ ವಿರುದ್ಧ ಯುವತಿ ದೂರು

    Live Tv
    [brid partner=56869869 player=32851 video=960834 autoplay=true]

  • ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್‌ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧಿ!

    ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್‌ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧಿ!

    ಚಾಮರಾಜನಗರ: ದಲಿತ ಮಹಿಳೆ (Dalit Woman) ತೊಂಬೆ (ಟ್ಯಾಂಕ್‌) ನೀರು (Water) ಕುಡಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತೊಂಬೆಯ ನೀರು ಖಾಲಿ ಮಾಡಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ವೀರಶೈವ ಬೀದಿಯಲ್ಲಿ ದಲಿತ ಮಹಿಳೆಯೊಬ್ಬರು ರಸ್ತೆ ಬದಿ ಇದ್ದ ತೊಂಬೆಯಲ್ಲಿ ನೀರು ಕುಡಿದಿದ್ದರು. ಈ ಕಾರಣಕ್ಕೆ ನೀರನ್ನು ಖಾಲಿ ಮಾಡಿ, ತೊಂಬೆಗೆ ಗೋಮೂತ್ರ ಸಿಂಪಡಿಸಿ ಸ್ವಚ್ಛ ಮಾಡಿದ್ದಾರೆ ಎಂದು ಬರೆದು ಪೋಸ್ಟ್‌ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ದೂರು ನೀಡಿದರೂ ಕ್ರಮ ಕೈಗೊಳ್ಳದ ಇನ್ಸ್‌ಪೆಕ್ಟರ್‌ ನಾಸಿರ್ ಹುಸೇನ್

    ವೀಡಿಯೋ ವೈರಲ್ ಆಗುತ್ತಿದ್ದಂತೆ ಈ ಘಟನೆಯ ಕುರಿತಾಗಿ ಪರಿಶೀಲನೆ ನಡೆಸಲು ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯ ಗ್ರಾಮಕ್ಕೆ RI ಮತ್ತು VA ಅವರನ್ನು ಕಳುಹಿಸಿ ವರದಿ ತರಿಸಿಕೊಂಡ ತಹಶೀಲ್ದಾರ್, ನಾಳೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಅಧಿಕಾರಿಗಳು ಕೊಟ್ಟ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಘಟನೆ ನಿಜವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಎಫ್‍ಐಆರ್ (FIR) ದಾಖಲು ಮಾಡಲಾಗುತ್ತದೆ ಎಂದು ಚಾಮರಾಜನಗರ ತಹಶೀಲ್ದಾರ್ ಬಸವರಾಜ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದುವೆಗೆ ಯೋಧರನ್ನು ಆಹ್ವಾನಿಸಿದ ಜೋಡಿ – ಕರೆಯೋಲೆ ಕಂಡು ಖುಷಿ ಪಟ್ಟ ಇಂಡಿಯನ್ ಆರ್ಮಿ

    Live Tv
    [brid partner=56869869 player=32851 video=960834 autoplay=true]

  • ಶೀಲ ಶಂಕಿಸಿ ಪತ್ನಿ, 6 ವರ್ಷ ಮಗುವಿಗೆ ಚಾಕು ಇರಿದು ಕೊಲೆಗೆ ಯತ್ನ

    ಶೀಲ ಶಂಕಿಸಿ ಪತ್ನಿ, 6 ವರ್ಷ ಮಗುವಿಗೆ ಚಾಕು ಇರಿದು ಕೊಲೆಗೆ ಯತ್ನ

    ಗದಗ: ಪತ್ನಿಯ ಶೀಲಶಂಕಿಸಿ ಪತಿಯೇ ಆಕೆ ಹಾಗೂ 6 ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಡೋಣಿತಾಂಡ ದಲ್ಲಿ ನಡೆದಿದೆ.

    ಕಳೆದ 10 ವರ್ಷದ ಹಿಂದೆ ಕಬಲಾಯತಕಟ್ಟಿ ನಿವಾಸಿ ಮುರಳಿ ಪೂಜಾರ ಹಾಗೂ ಡೋಣಿತಾಂಡ ಸಕ್ಕುಬಾಯಿಗೆ ಮದುವೆಯಾಗಿತ್ತು. ದಂಪತಿ ಗೋವಾದಲ್ಲಿ (Goa) ಕೂಲಿಕೆಲಸ ಮಾಡುತ್ತಿದ್ದರು. ಇವರಿಗೆ ಮೂವರು ಮುದ್ದಾದ ಮಕ್ಕಳಿದ್ದಾರೆ. ಆದರೆ ಇತ್ತೀಚಿಗೆ ಪತ್ನಿ ಸಕ್ಕುಬಾಯಿ ಶೀಲ ಶಂಕಿಸಿ ಪತಿ ಮುರಳಿ ಪೂಜಾರ ಕಿರುಕುಳ ನೀಡುತ್ತಿದ್ದ. ಕೆಲಸಕ್ಕೆ ಹೋದರೆ ಹಿಂಬಾಲಿಸುವುದು, ಅನುಮಾನ ಪಡುವುದು, ಸ್ವಲ್ಪ ತಡವಾಗಿ ಬಂದರೆ ಮನಬಂದಂತೆ ಹಲ್ಲೆ ಮಾಡುತ್ತಿದ್ದ. ಅಷ್ಟೇ ಅಲ್ಲದೇ, ಸ್ನಾನ ಮಾಡುವ ನೀರಲ್ಲಿ ಆ್ಯಸಿಡ್ ಬೆರೆಸಿದ್ದನಂತೆ. ಸ್ನಾನ ಮಾಡುವಾಗ ಸಕ್ಕುಬಾಯಿಗೆ ಮೈಯಲ್ಲಾ ಊರಿ, ಊರಿ ಕಾಣಿಸಿಕೊಂಡಿತಂತೆ. ಹೀಗೆ ಗಂಡನ ಅನೇಕ ಚಿತ್ರಹಿಂಸೆಗೆ ಬೇಸತ್ತು, 3 ದಿನದ ಹಿಂದೆ ತವರು ಮನೆ ಡೋಣಿ ತಾಂಡಾಗೆ ಸಕ್ಕುಬಾಯಿ ಬಂದಿದ್ದಳು. ಮುರಳಿ ಕೂಡ ಗುರುವಾರ ರಾತ್ರಿ ಮಾವನ ಮನೆಗೆ ಬಂದಿದ್ದನು. ಕುಟುಂಬಸ್ಥರು, ಸಮಾಜ ಮುಖಂಡರು ಸೇರಿ ಬೆಳಗ್ಗೆ ರಾಜಿಸಂಧಾನ ಮಾಡುವುದಾಗಿ ಹೇಳಿದ್ದರಂತೆ. ಆದರೆ ಅಷ್ಟೋತ್ತಿಗೆ ಬೆಳಗಿನ ಜಾವ ಮನೆಗೆ ನುಗ್ಗಿ ಚಾಕುವಿನಿಂದ ಸಕ್ಕುಬಾಯಿ ಹಾಗೂ 6 ವರ್ಷದ ಗಂಡು ಮಗು ಶಿವಂ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ.

    ಹೆಂಡತಿ ಮೇಲೆ ಅನುಮಾನಗೊಂಡು ಇಂತಹ ಕೃತ್ಯಕ್ಕೆ ಮುಂದಾಗಿದ್ದಾನೆ. ಮನೆಯಲ್ಲಿ ಎಲ್ಲಂದರಲ್ಲಿ ರಕ್ತಮಡುಗಟ್ಟಿದೆ. ಬಿಡಿಸಲು ಹೋದ ತಂದೆ ಬಟ್ಟೆಗಳು ರಕ್ತವಾಗಿವೆ. ತಂದೆ, ತಾಯಿ, ಇಬ್ಬರು ಮೊಮ್ಮಕ್ಕಳು ಹಾಗೂ ಓರ್ವ ಮಗ ಇನ್ನೊಂದು ರೂಮ್‍ನಲ್ಲಿ ಹಾಗೂ ಹೊರಗಡೆ ಮಲಗಿದ್ದೇವು. ಗಲಾಟೆ, ಅಳುವ ಶಬ್ಧ ಕೇಳಿ ಹೊರಗಿಂದ ಬಂದು ಬಿಡಿಸಿಕೊಳ್ಳಲು ಮುಂದಾದೆವು. ಸ್ವಲ್ಪ ತಡವಾಗಿದ್ದರೆ ಮಗಳು ಹಾಗೂ ಮೊಮ್ಮಗುವಿನ ಹೆಣ ಉರುಳುತ್ತಿತ್ತು ಸಕ್ಕುಬಾಯಿ ಪೋಷಕರು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ಹೋಲಿಸೋದು ಬೇಡ – ಅಮಿತ್ ಶಾ

    ಚಾಕು ಇರಿತದಿಂದ ಸಕ್ಕುಬಾಯಿ ಕಣ್ಣು, ಕೈ, ಎದೆ ಹಾಗೂ ಬೆಣ್ಣು ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಈ ವೇಳೆ 6 ವರ್ಷ ಗಂಡು ಮಗು ಶಿವಂ ಗೂ ಸಹ ಕೈ, ಕಾಲಗೆ ಚಾಕುವಿನಿಂದ ಚುಚ್ಚಿದ್ದಾನೆ. ಅಷ್ಟರಲ್ಲಿ ಚಿರಾಟ, ನರಳಾಟ ಕೇಳಿ ಕುಟುಂಬಸ್ಥರು ಹಾಗೂ ಸ್ಥಳಿಗೆ ಆಗಮಿಸಿ ಆರೋಪಿ ಮುರಳಿ ಹಿಡದಿದ್ದಾರೆ. ಎಸ್ಕೇಪ್ ಆಗುತ್ತಿದ್ದ ಕಿರಾತಕನನ್ನು ಹಿಡಿದು ಸ್ಥಳೀಯರೇ ಧರ್ಮದೇಟು ನೀಡಿ ಕಟ್ಟಿಹಾಕಿದ್ದಾರೆ. ನಂತರ ಆರೋಪಿಯನ್ನು ಮುಂಡರಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಗಾಯಾಳು ತಾಯಿ ಹಾಗೂ ಮಗು ಗದಗ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಜಿಲ್ಲೆಯಲ್ಲಿ ಚಾಕು ಇರಿತ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಬೇಕು. ಇವನು ಮಾಡಿರುವ ಕೆಟ್ಟ ಕೃತ್ಯಕ್ಕೆ ಇಲ್ಲೆ ಸುಟ್ಟು ಹಾಕಬೇಕು ಎಂದುಕೊಂಡಿದ್ದೆವು. ಕಾನೂನಿಗೆ ಗೌರವಿಸಿ  ಪೊಲೀಸರಿಗೆ ಒಪ್ಪಿಸಿದ್ದೇವೆ. ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನಾಯಕರೇ ಅಲ್ಲ – ರಾಜ್ಯಕ್ಕೆ ಒಬ್ಬರೇ ಮಾಸ್ ಲೀಡರ್ ಅದು BSY: ವರ್ತೂರು ಪ್ರಕಾಶ್ ವಾಗ್ದಾಳಿ

    Live Tv
    [brid partner=56869869 player=32851 video=960834 autoplay=true]

  • ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

    ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

    ಬೀದರ್: ಕಳ್ಳರನ್ನು ಹಿಡಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಬಹುಮಾನ ಹಾಗೂ ಸನ್ಮಾನ ಮಾಡುವುದಾಗಿ ಗ್ರಾಮ ಪಂಚಾಯಿತಿಯೊಂದು ಘೋಷಿಸಿದೆ. ದಸರಾ ಸೇರಿದಂತೆ ಪಮುಖ ಹಬ್ಬಗಳು ಬಂದಾಗ ಕಳ್ಳರು ಉದ್ದೇಶ ಪೂರ್ವಕವಾಗಿ ಮಾಡುತ್ತಿರುವ ಕೃತ್ಯ ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದೆ. ಹೀಗಾಗಿ ಕಳ್ಳರನ್ನು ಹಿಡಿದು ಕೊಟ್ಟವರಿಗೆ ಬಹುಮಾನ ಹಾಗೂ ಸನ್ಮಾನ ಎಂಬ ವಿಚಿತ್ರ ಘೋಷಣೆ ಮಾಡಿದೆ.

    ಒಂದು ಕಡೆ ಕುಡಿಯುವ ನೀರಿನ ಘಟಕದ ಸಂಪರ್ಕಿಸುವ ವಿದ್ಯುತ್ ಸಂಪರ್ಕ ಕಟ್ ಮಾಡಿದ್ದರೆ, ಮೊತ್ತೊಂದೆಡೆ ಪದೇ, ಪದೇ ವಿದ್ಯುತ್ ಸಂಪರ್ಕದ ವೈರ್ ಅನ್ನು ಕಳ್ಳರು ಕಟ್ ಮಾಡಿದ್ದಾರೆ. ರಾಜ್ಯದಲ್ಲೇ ಇದು ವಿಚಿತ್ರ ಘಟನೆಯಾಗಿದ್ದರೂ ಸತ್ಯವಾಗಿದೆ. ಇದನ್ನೂ ಓದಿ: ದೇಶಾದ್ಯಂತ ಹವಾ ಸೃಷ್ಟಿಸಿದ ಸಂಸ್ಕೃತದಲ್ಲಿನ ಕ್ರಿಕೆಟ್ ಕಾಮೆಂಟರಿ- ಪ್ರಧಾನಿ ಮೋದಿ ಭಾರೀ ಮೆಚ್ಚುಗೆ

    ಹೌದು, ಬೀದರ್ ತಾಲೂಕಿನ ಚಿಕ್ಕಪೇಟೆ ಗ್ರಾಮಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ವಿದ್ಯುತ್ ವೈರ್‍ನ್ನು ಕಿಡಿಗೇಡಿಗಳು ಉದೇಶಪೂರ್ವಕವಾಗಿ ಪದೇ, ಪದೇ ಕಟ್ ಮಾಡುತ್ತಿದ್ದಾರೆ. ಯಾರೋ ಕಿಡಿಗೇಡಿ ಕಳ್ಳರು ಉದ್ದೇಶ ಪೂರ್ವಕವಾಗಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ವಿದ್ಯುತ್ ವೈರ್ ಕಟ್ ಮಾಡುತ್ತಿರುವುದರಿಂದ ಕೃತಕವಾಗಿ ಗ್ರಾಮದಲ್ಲಿ ನೀರಿನ ಸಮಸ್ಯೆಗೆ ಕಾರಣವಾಗುತ್ತಿದೆ. ಪದೇ ಪದೇ ಈ ರೀತಿ ಕಿಡಿಗೇಡಿಗಳು ಮಾಡುತ್ತಿರುವುದರಿಂದ ಬೇಸತ್ತ ಮರಕಲ್ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಕಳ್ಳರನ್ನು ಹಿಡಿದುಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.

    ರಾತ್ರೋರಾತ್ರಿ ವಿದ್ಯುತ್ ವೈರ್ ಕಟ್ ಮಾಡಿ ಕಳ್ಳತನ ಮಾಡುತ್ತಿರುವ ಕಳ್ಳರನ್ನು ಸಾರ್ವಜನರಿಗೆ ಹಿಡಿದು ಕೊಟ್ಟರೆ ಗ್ರಾಮ ಪಂಚಾಯಿತಿಯಿಂದ 1 ಸಾವಿರ ಹಾಗೂ ಗ್ರಾಮಸ್ಥರಿಂದ 2 ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇದೇ ಮೊಲದ ಬಾರಿಗೆ ಕಳ್ಳರನ್ನು ಹಿಡಿಯಲು ಗ್ರಾಪಂ ಹಾಗೂ ಗ್ರಾಮಸ್ಥರು ಬಹುಮಾನ ಘೋಷಣೆ ಮಾಡಿದ ವಿಚಾರ ಭಾರೀ ಸದ್ದು ಮಾಡುತ್ತಿದೆ. ಹಬ್ಬದ ದಿನಗಳಲ್ಲಿ ಯಾರೋ ಕಿಡಿಗೇಡಿಗಳು ಹಲವು ತಿಂಗಳಿಂದ ಪದೇ ಪದೇ ಉದ್ದೇಶ ಪೂರ್ವಕವಾಗಿ ಕಳ್ಳತನ ಮಾಡುತ್ತಿದ್ದಾರೆ. ಹೀಗಾಗಿ ಬೇಸತ್ತು ನಾವು ಸಾರ್ವಜನಿಕರ ಸಹಾಯದಿಂದ ಕಳ್ಳರನ್ನು ಹಿಡಿಯಲು ಬಹುಮಾನ ಹಾಗೂ ಸನ್ಮಾನ ಘೋಷಣೆ ಮಾಡಿದ್ದೇವೆ ಎಂದು ಗ್ರಾಮ ಪಂಚಾಯತಿ ಪಿಡಿಓ ಹೇಳಿದ್ದಾರೆ.

    ಕಿಡಿಗೇಡಿ ಕಳ್ಳರು ಕೇವಲ 10 ತಿಂಗಳಲ್ಲಿ ಬರೋಬ್ಬರಿ 6 ರಿಂದ 7 ಬಾರಿ ಕುಡಿಯುವ ನೀರಿನ ವಿದ್ಯುತ್ ಸಂಪರ್ಕದ ವೈರ್ ಅನ್ನು ಕಟ್ ಮಾಡಿದ್ದಾರೆ. ಪ್ರತಿ ಬಾರಿ ವಿದ್ಯೂತ್ ವೈರ್ ಕಟ್ ಮಾಡಿದಾಗ ಅದನ್ನು ದುರಸ್ಥಿ ಮಾಡಲು ಗ್ರಾ.ಪಂ.ಯಿಂದ 15 ರಿಂದ 20 ಸಾವಿರ ಹಣ ಖರ್ಚಾಗುತ್ತಿದೆ. ಜೊತೆಗೆ ಹಬ್ಬದ ದಿನಗಳಲ್ಲಿ ಚಿಕ್ಕಪೇಟೆ ಗ್ರಾಮಕ್ಕೆ ನೀರಿನ ಸಮಸ್ಯೆಯಾಗಿ ಅಧಿಕಾರಿಗಳಿಗೆ ಹಿಡಿಶಾಪ ಹಾಕತ್ತಾರೆ. ಹೀಗಾಗೀ ಕಿಡಿಗೇಡಿ ಕಳ್ಳರಿಂದ ಬೇಸತ್ತ ಗ್ರಾ.ಪಂ. ಅಧಿಕಾರಿಗಳು ಹಾಗೂ ಗ್ರಾಮಸ್ಥರು ಈ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಲೇ ಹಲವು ಬಾರಿ ಬೀದರ್ ಗ್ರಾಮೀಣ ಠಾಣೆ ಹಾಗೂ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲು ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಜೊತೆಗೆ ಅಗ್ಗದ ವೈರ್ ಕಟ್ ಮಾಡಿ ಗ್ರಾಮಸ್ಥರಿಗೆ ತೊಂದರೆ ಕೊಡುತ್ತಾ ಗ್ರಾಪಂಗೆ ಕೆಟ್ಟ ಹೆಸರು ತರಲು ಕಿಡಿಗೇಡಿಗಳು ಈ ರೀತಿ ಮಾಡುತ್ತಿದ್ದಾರೆ.

    ಉದ್ದೇಶಪೂರ್ವಕವಾಗಿ ಕಳ್ಳತನ ಮಾಡುವ ವ್ಯಕ್ತಿಗಳನ್ನು ಹುಡುಕಿ ಕೊಟ್ಟವರಿಗೆ ಬಹುಮಾನ, ಸನ್ಮಾನ ಹಾಗೂ ಅಂಥವರ ಹೆಸರನ್ನು ಗೌಪ್ಯವಾಗಿ ಹಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಪಂಯವರು ಒಂದು ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ. ಆದರೆ ನಾವು 2 ಸಾವಿರ ಬಹುಮಾನ ಘೋಷಣೆ ಮಾಡುತ್ತೇವೆ. ರಾಜಕೀಯ ದುರುದ್ದೇಶದಿಂದ ಈ ರೀತಿ ಕೆಲವು ಕಿಡಿಗೇಡಿಗಳು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ. ಇದನ್ನೂ ಓದಿ: ಎಲ್ಲರೂ ಉದ್ಯೋಗದ ಹಿಂದೆ ಓಡುತ್ತಿದ್ದಾರೆ, ಎಷ್ಟು ಜನರಿಗೆ ಉದ್ಯೋಗ ನೀಡಲು ಸಾಧ್ಯ: ಮೋಹನ್ ಭಾಗವತ್ ಪ್ರಶ್ನೆ

    ದಸರಾ ಹಬ್ಬ ಸೇರಿದಂತೆ ಪ್ರಮುಖ ಹಬ್ಬಗಳಲ್ಲಿ ಉದ್ದೇಶಪೂರ್ವಕವಾಗಿ ವೈರ್ ಕಟ್ ಮಾಡಿ ಗ್ರಾಮಸ್ಥರನ್ನು ಸಮಸ್ಯೆಗೆ ದುಡುತ್ತಿರುವುದು ಬೇಸರದ ಸಂಗತಿಯಾಗಿದೆ. ಇದಕ್ಕೆ ಬೇಸತ್ತು ಕಳ್ಳರನ್ನ ಹಿಡಿದುಕೊಟ್ಟ ಸಾರ್ವಜನಿಕರಿಗೆ ಗ್ರಾಪಂ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಬಹುಮಾನ ಹಾಗೂ ಸನ್ಮಾನ ಘೋಷಣೆ ಮಾಡಿದ್ದು ಡಿಫರೆಂಟ್ ಐಡಿಯಾವಾಗಿದೆ. ಬಹುಮಾನ ಘೋಷಣೆ ಬೆನ್ನಲ್ಲೆ ಸಾರ್ವಜನಿಕರು ಕಳ್ಳರಿಗಾಗಿ ಬಲೆ ಬಿಸಿ ಸಮಸ್ಯೆಗೆ ಬ್ರೇಕ್ ಹಾಕತ್ತಾರಾ ಎಂದು ನಾವು ನೀವು ಕಾದೂ ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಕಲಬುರಗಿಯಲ್ಲಿ ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿತ

    ಕಲಬುರಗಿಯಲ್ಲಿ ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿತ

    ಕಲಬುರಗಿ: ದಿನೇ ದಿನೇ ಮಕ್ಕಳ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ ಎಂಬುವುದು ಸತ್ಯ. ಆದರೆ ಈ ನಡುವೆ ಉತ್ತರ ಕರ್ನಾಟಕದಲ್ಲಿ (Uttar Karnataka) ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಶಂಕೆ ವ್ಯಕ್ತವಾದವರ ಮೇಲೆ ಹಲ್ಲೆ ನಡೆಸಲಾಗಿದೆ. ಹೌದು, ಮಕ್ಕಳ ಕಳ್ಳರೆಂದು (Child Thieves) ಭಾವಿಸಿ ಇಬ್ಬರು ಮಹಿಳೆಯರಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ.

    ತೆಲಂಗಾಣದ (Telangana) ಕೊತ್ಲಾಪುರ ಗ್ರಾಮದಿಂದ ಪೋಲಕಪಳ್ಳಿ ಗ್ರಾಮಕ್ಕೆ ಮಹಿಳೆಯರಿಬ್ಬರು ಆಗಮಿಸಿದ್ದರು. ಈ ವೇಳೆ ಇವರನ್ನೇ ಕಳ್ಳಿಯರು ಎಂದು ಭಾವಿಸಿದ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಳಿಕ ಚಿಂಚೋಳಿ ಪೊಲೀಸರಿಗೆ (Chincholi Police) ಮಹಿಳೆಯರನ್ನು ಒಪ್ಪಿಸಿದ್ದರು.  ಇದನ್ನೂ ಓದಿ: ಚೆಕ್ ಬೌನ್ಸ್ ಪ್ರಕರಣ – ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜಾಮೀನು ರಹಿತ ವಾರೆಂಟ್

    ನಂತರ ಈ ಸಂಬಂಧ ವಿಚಾರಣೆ ನಡೆಸಿದ ಪೊಲೀಸರಿಗೆ ಥಳಿತಕ್ಕೊಳಗಾದ ಇಬ್ಬರು ಮಹಿಳೆಯರು ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕಿಸೆಯಲ್ಲಿ ಸಿಕ್ತು ಕಾಂಡೋಮ್‌ನ ರಶೀದಿ- ಮಹಿಳಾ ಪೇದೆಯಿಂದ ಗೆಳೆಯನಿಗೇ ಶೂಟೌಟ್

    Live Tv
    [brid partner=56869869 player=32851 video=960834 autoplay=true]

  • ಪಾಳು ಬಾವಿಗೆ ಎಸೆದಿದ್ದ ಹಸುಗೂಸಿಗೆ ಹಾಲುಣಿಸಿ ವಾತ್ಸಲ್ಯ ಮೆರೆದ ಗ್ರಾಮದ ಮಹಿಳೆ

    ಪಾಳು ಬಾವಿಗೆ ಎಸೆದಿದ್ದ ಹಸುಗೂಸಿಗೆ ಹಾಲುಣಿಸಿ ವಾತ್ಸಲ್ಯ ಮೆರೆದ ಗ್ರಾಮದ ಮಹಿಳೆ

    ಮಂಡ್ಯ: ಆಗ ತಾನೇ ಜನಿಸಿದ ಹಸುಗೂಸನ್ನು ಕ್ರೂರಿ ತಾಯಿಯೊಬ್ಬಳು ಪಾಳು ಬಾವಿಗೆ ಎಸೆದು ಹೋಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಅಡಿ ಆಳ ಇರುವ ಪಾಳು ಬಾವಿಗೆ ಗಂಡು ಮಗವನ್ನು ಹೆತ್ತ ತಾಯಿಯೇ ಎಸೆದಿದ್ದಾಳೆ. ಈ ಮಧ್ಯೆ ತೋಟಕ್ಕೆ ಹೋಗುತ್ತಿದ್ದ ರೈತ ಮಹಿಳೆಯೊಬ್ಬರು ಬಾವಿಯಲ್ಲಿ ಮಗು ಅಳುತ್ತಿರುವ ಶಬ್ಧ ಕೇಳಿ ಇಣುಕಿ ನೋಡಿದಾಗ ಮಗು ಇರುವುದನ್ನು ನೋಡಿದ್ದಾರೆ. ನಂತರ ಕೂಡಲೇ ಈ ವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

    ಬಳಿಕ ಬಾವಿಯ ಹತ್ತಿರ ಬಂದ ಊರಿನ ಜನರು ಮಗು ಹಾವಿನ ಪಕ್ಕ ಮಲಗಿದ್ದರೂ ಮೃತ್ಯುವನ್ನು ಗೆದ್ದಿರುವುದನ್ನು ಕಂಡು ಬೆಚ್ಚಿಬೆರಗಾಗಿದ್ದಾರೆ. ನಂತರ ಬಾವಿಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಇದೇ ವೇಳೆ ಗ್ರಾಮದ ಮಹಿಳೆಯೊಬ್ಬರು ಎದೆ ಹಾಲುಣಿಸಿ ಮಾನವೀಯತೆ ಮೆರೆದರೆ, ಇತರ ಮಹಿಳೆಯರು ಮಗುವಿಗೆ ಆರೈಕೆ ಮಾಡಿದ್ದಾರೆ. ಕೊನೆಗೆ ಈ ಬಗ್ಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಮಾಹಿತಿ ನೀಡಿದ್ದು ನಂತರ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಇದನ್ನೂ ಓದಿ: ಕ್ಯಾಂಟರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ – ಗಾಯಗೊಂಡ ಗರ್ಭಿಣಿ ಸ್ಥಿತಿ ಗಂಭೀರ

    Live Tv
    [brid partner=56869869 player=32851 video=960834 autoplay=true]