Tag: villagers

  • ಕುಸಿದ ಜಾಗದಲ್ಲೇ ಭೂಮಿ ತಾಯಿಗೆ ವಿಶೇಷ ಪೂಜೆ

    ಕುಸಿದ ಜಾಗದಲ್ಲೇ ಭೂಮಿ ತಾಯಿಗೆ ವಿಶೇಷ ಪೂಜೆ

    ಬೆಳಗಾವಿ: ಜಿಲ್ಲೆಯ ಕುಳ್ಳೂರ ಗ್ರಾಮದಲ್ಲಿ ಭೂಮಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯದಿಂದ ದೇವರ ಮೊರೆ ಹೋಗಿದ್ದಾರೆ.

    ಕುಳ್ಳೂರ ಗ್ರಾಮದಲ್ಲಿ ಏಕಾಏಕಿ ಕಳೆದ ಹದಿನೈದು ದಿನಗಳಿಂದ ಕಿ.ಮೀ ಗಟ್ಟಲೆ ಭೂಮಿ ಬಾಯಿ ಬಿಡುತ್ತಿದೆ. ರಸ್ತೆ ಸೇರಿದಂತೆ ಜಮೀನುಗಳಲ್ಲಿ ಭೂಮಿ ಕುಸಿದು ಕಂದಕಗಳು ನಿರ್ಮಾಣ ಆಗುತ್ತಿದೆ. ಯಾವುದೇ ಅನಾಹುತ ಮತ್ತು ಭೂ ಕುಸಿತವಾಗದಿರಲಿ ಎಂದು ಕುಸಿದ ಜಾಗದಲ್ಲೇ ಗ್ರಾಮಸ್ಥರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ಈ ಗ್ರಾಮದ ಹೊರವಲಯದಲ್ಲಿನ ಜಮೀನಿನಲ್ಲಿರುವ ಭೂಮಿ ದೊಡ್ಡ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಕುಳ್ಳೂರನಿಂದ ಬಿಚಗುತ್ತಿ ತಿಮ್ಮಾಪುರ್ ಸೇರಿ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ಕೂಡ ಭೂಮಿ ಕುಸಿದಿದ್ದು ಸುರಂಗದಂತಾಗಿ ಇಲ್ಲಿ ಮಾರ್ಪಟ್ಟಿದೆ. ಈ ಕಾರಣಕ್ಕೆ ರಸ್ತೆಯಲ್ಲಿ ಕಲ್ಲಿಟ್ಟು ಎಚ್ಚರಿಕೆ ಬೋರ್ಡ್ ಕೂಡ ಹಾಕಿ ಜನರನ್ನ ಆ ಕಡೆ ಓಡಾಡದಂತೆ ಸ್ಥಳೀಯರು ನೋಡಿಕೊಳ್ಳುತ್ತಿದ್ದಾರೆ.

    ಆರು ತಿಂಗಳ ಹಿಂದೆಯೇ ಸ್ವಲ್ಪ ಪ್ರಮಾಣದಲ್ಲಿ ಬಿರುಕು ಬಿಟ್ಟಿದ್ದ ಭೂಮಿ ಈಗ ಏಕಾಏಕಿ ಕುಸಿಯುತ್ತಿರುವುದರಿಂದ ಗ್ರಾಮಸ್ಥರು ಆ ಕಡೆ ಸುಳಿಯುವುದನ್ನೇ ಬಿಟ್ಟಿದ್ದಾರೆ. ಸುಮಾರು ಎರಡು ಕಿ.ಮೀ ನಷ್ಟು ಭೂಮಿ ಕುಸಿದಿದ್ದು ನಿತ್ಯವೂ ಇದರ ಪ್ರಮಾಣ ಹೆಚ್ಚಾಗುತ್ತಾ ಹೋಗುತ್ತಿದೆ. ಈ ಕುರಿತು ರಾಮದುರ್ಗ ತಹಶೀಲ್ದಾರರ ಗಮನಕ್ಕೆ ತಂದರೆ ಅದು ನನಗೆ ಸಂಬಂಧ ಇಲ್ಲ. ಬೇಕಾದರೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಹೇಳಿ ಎಂದು ಹಾರಿಕೆಯ ಉತ್ತರ ನೀಡುತ್ತಿದ್ದಾರೆ.

  • ಅನುಮಾನಸ್ಪದವಾಗಿ ಅಡ್ಡಾಡುತ್ತಿದ್ದ ಯುವಕರಿಗೆ ಗ್ರಾಮಸ್ಥರಿಂದ ಥಳಿತ

    ಅನುಮಾನಸ್ಪದವಾಗಿ ಅಡ್ಡಾಡುತ್ತಿದ್ದ ಯುವಕರಿಗೆ ಗ್ರಾಮಸ್ಥರಿಂದ ಥಳಿತ

    ಚಿಕ್ಕಬಳ್ಳಾಪುರ: ಗ್ರಾಮದಲ್ಲಿ ಅನುಮಾನಸ್ಪದವಾಗಿ ಅಡ್ಡಾಡುತ್ತಿದ್ದ ಮೂವರು ಯುವಕರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಹಳೇಪೇರೇಸಂದ್ರ ಗ್ರಾಮದಲ್ಲಿ ನಡೆದಿದೆ.

    ನಾಲ್ವರು ಯುವಕರು ಗ್ರಾಮದ ಸುತ್ತಮುತ್ತ ಅನುಮಾನಸ್ಪದವಾಗಿ ಓಡಾಡುತ್ತಿದ್ದನ್ನು ಕಂಡ ಗ್ರಾಮಸ್ಥರು ಯುವಕರನ್ನು ಪ್ರಶ್ನೆ ಮಾಡಿದ್ದಾರೆ. ಆದರೆ ಗ್ರಾಮಸ್ಥರ ಪ್ರಶ್ನೆಗಳಿಗೆ ಸಮಪರ್ಕವಾಗಿ ಉತ್ತರಿಸದ ಯುವಕರ ಮೇಲೆ ಮತ್ತಷ್ಟು ಅನುಮಾನಗೊಂಡ ಗ್ರಾಮಸ್ಥರು ನಾಲ್ವರು ಯುವಕರಲ್ಲಿ ಮೂವರನ್ನು ಹಿಡಿದುಕೊಂಡಿದ್ದಾರೆ.

    ನಾಲ್ವರಲ್ಲಿ ಓರ್ವ ಪರಾರಿಯಾಗಿದ್ದು, ಉಳಿದವರನ್ನು ಥಳಿಸಿ ಪೇರೇಸಂದ್ರ ಹೊರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ತಾವು ಖಾಸಗಿ ಎಂಟರ್ ಪ್ರೈಸರ್ಸ್ ಫೈನಾನ್ಸ್ ವ್ಯವಹಾರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಇದನ್ನು ನಂಬಲು ಒಪ್ಪದ ಗ್ರಾಮಸ್ಥರು ಮೂವರು ಯುವಕರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಈ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಬೆಳಗಾವಿ ಏಕಾಏಕಿ ಕಿ.ಮೀ ಗಟ್ಟಲೇ ಬಾಯಿ ಬಿಟ್ಟ ಭೂಮಿ – ಗ್ರಾಮಸ್ಥರಲ್ಲಿ ಆತಂಕ

    ಬೆಳಗಾವಿ ಏಕಾಏಕಿ ಕಿ.ಮೀ ಗಟ್ಟಲೇ ಬಾಯಿ ಬಿಟ್ಟ ಭೂಮಿ – ಗ್ರಾಮಸ್ಥರಲ್ಲಿ ಆತಂಕ

    ಬೆಳಗಾವಿ: ಜಿಲ್ಲೆಯಲ್ಲೊಂದು ಭಯಾನಕ ಘಟನೆ ನಡೆದಿದ್ದು ಏಕಾಏಕಿ ಕಿ.ಮೀ ಗಟ್ಟಲೇ ಭೂಮಿ ಬಾಯಿ ಬಿಡುತ್ತಿದೆ. ಭೂಮಿ ಬಾಯಿ ಬಿಡುತ್ತಿರುವ ದೃಶ್ಯ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಕಂಡು ಬಂದಿದೆ. ಈ ದೃಶ್ಯ ನೋಡಿದ ಇಲ್ಲಿನ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ಈ ಗ್ರಾಮದ ಹೊರವಲಯದಲ್ಲಿನ ಜಮೀನಿನಲ್ಲಿರುವ ಭೂಮಿ ದೊಡ್ಡ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಕುಳ್ಳುರ್ ನಿಂದ ಬಿಚಗುತ್ತಿ ತಿಮ್ಮಾಪುರ್ ಸೇರಿ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ಕೂಡ ಭೂಮಿ ಕುಸಿದಿದ್ದು ಸುರಂಗದಂತಾಗಿ ಇಲ್ಲಿ ಮಾರ್ಪಟ್ಟಿದೆ. ಈ ಕಾರಣಕ್ಕೆ ರಸ್ತೆಯಲ್ಲಿ ಕಲ್ಲಿಟ್ಟು ಎಚ್ಚರಿಕೆ ಬೋರ್ಡ್ ಕೂಡ ಹಾಕಿ ಜನರನ್ನ ಆ ಕಡೆ ಓಡಾಡದಂತೆ ಸ್ಥಳೀಯರು ನೋಡಿಕೊಳ್ಳುತ್ತಿದ್ದಾರೆ.

    ಆರು ತಿಂಗಳ ಹಿಂದೆಯೇ ಸ್ವಲ್ಪ ಪ್ರಮಾಣದಲ್ಲಿ ಬಿರುಕು ಬಿಟ್ಟಿದ್ದ ಭೂಮಿ ಈಗ ಏಕಾಏಕಿ ಕುಸಿಯುತ್ತಿರುವುದರಿಂದ ಗ್ರಾಮಸ್ಥರು ಆ ಕಡೆ ಸುಳಿಯುವುದನ್ನೇ ಬಿಟ್ಟಿದ್ದಾರೆ. ಸುಮಾರು ಎರಡು ಕಿ.ಮೀ ನಷ್ಟು ಭೂಮಿ ಕುಸಿದಿದ್ದು ನಿತ್ಯವೂ ಇದರ ಪ್ರಮಾಣ ಹೆಚ್ಚಾಗುತ್ತಾ ಹೋಗುತ್ತಿದೆ. ಈ ಕುರಿತು ರಾಮದುರ್ಗ ತಹಶೀಲ್ದಾರರ ಗಮನಕ್ಕೆ ತಂದರೆ ಅದು ನನಗೆ ಸಂಬಂಧ ಇಲ್ಲ. ಬೇಕಾದರೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಹೇಳಿ ಎಂದು ಹಾರಿಕೆಯ ಉತ್ತರ ಕೊಡುತ್ತಿದ್ದಾರೆ.

    ಇತ್ತ ಇಪ್ಪತ್ತರಿಂದ ಮೂವತ್ತು ಅಡಿಯಷ್ಟು ಭೂಮಿ ಕೆಳಭಾಗದಲ್ಲಿ ಕುಸಿದಿದ್ದು ಪ್ರಳಯದ ಆತಂಕ ಇಲ್ಲಿ ಸೃಷ್ಟಿಯಾಗಿದೆ. ಕೆಲವರು ದೇವರ ಮೊರೆ ಹೋದರೆ ಮತ್ತೆ ಕೆಲವರು ಭೂವಿಜ್ಞಾನಿಗಳ ಮೊರೆ ಹೋಗಿ ಭೂ ಕುಸಿತದ ಕಾರಣ ಹುಡುಕುತ್ತಿದ್ದಾರೆ. ಆದರೆ ಇಷ್ಟೆಲ್ಲಾ ಆದರೂ ಕೂಡ ಅಧಿಕಾರಿಗಳು ಮಾತ್ರ ಇಲ್ಲಿ ಬಾರದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

  • ರಾಮದೇವರ ಬೆಟ್ಟದಲ್ಲಿ ಎರಡು ಕರಡಿ ಪ್ರತ್ಯಕ್ಷ – ಜನರಲ್ಲಿ ಆತಂಕ

    ರಾಮದೇವರ ಬೆಟ್ಟದಲ್ಲಿ ಎರಡು ಕರಡಿ ಪ್ರತ್ಯಕ್ಷ – ಜನರಲ್ಲಿ ಆತಂಕ

    ಬೆಂಗಳೂರು: ರಾಮದೇವರ ಬೆಟ್ಟದಲ್ಲಿ ಕರಡಿ ಮತ್ತು ಕರಡಿ ಮರಿ ಕಾಣಿಸಿದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಗ್ರಾಮದ ಬಳಿ ಇರುವಂತಹ ರಾಮದೇವರ ಬೆಟ್ಟದಲ್ಲಿ ಎರಡು ಕರಡಿಗಳು ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿದೆ. ಕರಡಿಗಳನ್ನು ಕಂಡ ರಾಯರಪಾಳ್ಯ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

    ಕರಡಿಗಳನ್ನು ಹಿಡಿಯಲು ಅರಣ್ಯಧಿಕಾರಿಗಳು ವಿಫಲರಾಗಿದ್ದು, ಬೋನ್‍ಗಳನ್ನು ನೀಡಲು ಗ್ರಾಮಸ್ಥರ ಸಹಕಾರವೇ ಬಯಸುತ್ತಾರೆ ಎಂದು ಗ್ರಾಮಸ್ಥರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದಷ್ಟೂ ಬೇಗ ಕರಡಿಗಳನ್ನು ಹಿಡಿಯಬೇಕೆಂದು ಗ್ರಾಮದವರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

    ಈ ಘಟನೆ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಮಳೆಯಾದ್ರೆ ಕೆರೆಯಾಗುತ್ತೆ ಗ್ರಾಮದ ಮುಖ್ಯರಸ್ತೆ

    ಮಳೆಯಾದ್ರೆ ಕೆರೆಯಾಗುತ್ತೆ ಗ್ರಾಮದ ಮುಖ್ಯರಸ್ತೆ

    ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಮೆದೆಕೆರೆನಹಳ್ಳಿ ಗ್ರಾಮದಲ್ಲಿ ಮಳೆಯಾದರೆ ಮುಖ್ಯರಸ್ತೆಯೇ ಕೆರೆಯಾಗಿ ಮಾರ್ಪಾಡು ಆಗುತ್ತದೆ. ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಗ್ರಾಮದಲ್ಲಿ ಮಳೆಯಾದರೆ ಸಾಕು ಇಲ್ಲಿನ ಮುಖ್ಯ ರಸ್ತೆ ಕೆರೆಯಾಗಿ ಮಾರ್ಪಾಡು ಆಗುತ್ತಿದ್ದು, ಶಾಲಾ ಮಕ್ಕಳು ಶಾಲೆಗೆ ಹೋಗಬೇಕು ಅಂದರೆ ಹರಸಾಹಸ ಪಡುವಂತಹ ಸ್ಥಿತಿ ಉಂಟಾಗಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಮಳೆ ನೀರು ಸುವ್ಯವಸ್ಥಿತವಾಗಿ ಹೋಗಲು ಚರಂಡಿ ವ್ಯವಸ್ಥೆ ಮಾಡಿದರೆ ನೀರು ನಿಲ್ಲುವ ಪ್ರಶ್ನೆಯೇ ಇರುವುದಿಲ್ಲ. ಆದರೆ ಸುವ್ಯವಸ್ಥಿತವಾದ ಕಾಮಗಾರಿ ಮಾಡದೇ ಇದ್ದುದರಿಂದ ಗ್ರಾಮದ ಪ್ರಮುಖ ರಸ್ತೆಯೇ ಕೆರೆಯಾಗಿ ಮಾರ್ಪಡು ಆಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಗ್ರಾಮದಲ್ಲಿ ಪಿಎಸ್‍ಐ ವಾಸ್ತವ್ಯ – ಜನರಿಂದ ಪ್ರಶಂಸೆ

    ಗ್ರಾಮದಲ್ಲಿ ಪಿಎಸ್‍ಐ ವಾಸ್ತವ್ಯ – ಜನರಿಂದ ಪ್ರಶಂಸೆ

    ಹಾಸನ: ಮುಖ್ಯಮಂತ್ರಿ ಅವರಂತೆ ಹಾಸನ ಜಿಲ್ಲಾಧಿಕಾರಿ ಅರಸೀಕೆರೆ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಗಮನ ಸೆಳೆದರು. ಇದೀಗ ಚನ್ನರಾಯಪಟ್ಟಣ ನಗರ ಪಿಎಸ್‍ಐಯೊಬ್ಬರು ಗ್ರಾಮದಲ್ಲಿ ವಾಸ್ತವ್ಯ ಹೂಡಿ ಪ್ರಶಂಸೆ ಗಳಿಸಿದ್ದಾರೆ.

    ಚನ್ನರಾಯಪಟ್ಟಣ ತಾಲೂಕಿನ ಗುಳಸಿಂದ ಗ್ರಾಮ ಪಟ್ಟಣದ ಹೊರವಲಯದಲ್ಲಿದ್ದು ನಗರ ಠಾಣೆ ಪಿಎಸ್‍ಐ ಮಂಜುನಾಥ್ ತಮ್ಮ ಸಿಬ್ಬಂದಿಯೊಂದಿಗೆ ವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ವಿಚಾರಿಸಿದ್ದಾರೆ.

    ಗ್ರಾಮದ ದೇವಸ್ಥಾನದ ಬಳಿ ಗ್ರಾಮ ಸಭೆ ನಡೆಸಿದ ನಂತರ ಮಂಜುನಾಥ್ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಅಥವಾ ಸಹಾಯಕ್ಕಾಗಿ ಬರಲು ಸಾರ್ವಜನಿಕರು ಹಿಂಜರಿಯಬಾರದು ಎಂದು ಮನವಿ ಮಾಡಿದ ಸಬ್ ಇನ್ಸ್ ಪೆಕ್ಟರ್ ತಿಂಗಳಲ್ಲಿ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವುದು ನಿಯಮವಾಗಿದೆ ಎಂದು ತಿಳಿಸಿದರು.

    ಈ ಬಗ್ಗೆ ಮಾತನಾಡಿ ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಅವರು, ಕೆಲವು ಜನರು ಪೊಲೀಸ್ ಠಾಣೆಗೆ ಹೋಗಲು ಸ್ವಲ್ಪ ಮುಜುಗರ ಮಾಡಿಕೊಳ್ಳುತ್ತಾರೆ. ಇದೇ ವಿಚಾರವಾಗಿ ಯಡಿಯೂರಿನಲ್ಲಿ ಡಬಲ್ ಮರ್ಡರ್ ಆಗಿತ್ತು. ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಈಗ ಆತ ಬಂಧನದಲ್ಲಿ ಇದ್ದಾನೆ. ಈಗಲು ಕೆಲವರಿಗೆ ಪೊಲೀಸ್ ಠಾಣೆ ಎಂದರೆ ಸಂಕೋಚ ಹಾಗೂ ಭಯದ ವಾತಾವರಣ ಇದೆ. ಹಾಗಾಗಿ ನಾವು ಪ್ರತಿ ಹಳ್ಳಿ-ಹಳ್ಳಿಗೆ ಬೀಟ್ ಸೇವೆ ಮಾಡುತ್ತಿದ್ದೇವೆ ಎಂದರು.

    ನಮ್ಮ ಪೊಲೀಸ್ ಇಲಾಖೆಯಲ್ಲಿ ಫ್ರೆಂಡ್ಲಿ ಪೊಲೀಸಿಂಗ್ ಇದೆ. ನಾವು ಏಕೆ ಮುಕ್ತವಾಗಿ ಫೋನ್ ನಂಬರ್ ಕೊಡುತ್ತೇವೆ ಎಂದರೆ ನಿಮಗೆ ಸಂಕೋಚ ಇದ್ದು, ಠಾಣೆಗೆ ಬರುವುದಕ್ಕೆ ಆಗಲಿಲ್ಲ ಎಂದರೂ ಕರೆ ಮೂಲಕ ನಿಮ್ಮ ಸಮಸ್ಯೆ ಹೇಳಿಕೊಂಡರೆ, ನಾವು ಬೀಟ್ ಸರ್ವಿಸ್‍ನಲ್ಲಿರುವ ಅಧಿಕಾರಿಯನ್ನು ಕಳುಹಿಸುತ್ತೇವೆ. ಪೊಲೀಸ್ ಠಾಣೆಗೆ ಹೋದರೆ ಕೆಟ್ಟವರಾಗುತ್ತೇವೆ ಎಂದುಕೊಳ್ಳುತ್ತಾರೆ. ಪೊಲೀಸ್ ಠಾಣೆಯಲ್ಲಿ ಇರುವವರೆಲ್ಲ ಕೆಟ್ಟವರಲ್ಲ. ನಾವು ನಿಮ್ಮವರೆ. ನಮಗೂ ಅಕ್ಕ-ತಂಗಿ ಇದ್ದಾರೆ. ಪೊಲೀಸ್ ಠಾಣೆಗೆ ಬರಲು ಸಂಕೋಚ ಪಡೆದುಕೊಳ್ಳಬೇಡಿ ಎಂದು ಮಂಜುನಾಥ್ ಮನವಿ ಮಾಡಿದರು.

  • ತಳಿರು ತೋರಣ, ಶಾಮಿಯಾನ ಹಾಕಿ ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ

    ತಳಿರು ತೋರಣ, ಶಾಮಿಯಾನ ಹಾಕಿ ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ

    ಬೆಳಗಾವಿ: ಮಳೆ ಬರಲಿ ಎಂದು ಕೆಲ ಜನ ದೇವರ ಮೊರೆ ಹೋದರೆ, ಇನ್ನೂ ಕೆಲವರು ವಿಶಿಷ್ಟವಾಗಿ ಕಪ್ಪೆ ಮದುವೆ, ಕತ್ತೆಗಳ ಮದುವೆ ಮಾಡಿಸಿ ಮಳೆರಾಯನ ಬರುವಿಕೆಗೆ ಕಾಯುತ್ತಿದ್ದಾರೆ.

    ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಸ್ಥರು ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.

    ಶಾಮಿಯಾನ ಹಾಕಿ ತಳಿರು ತೋರಣದ ಅಲಂಕಾರ ಮಾಡಿ ಮದುಮಗ-ಮದುವಣಗಿತ್ತಿಯರಂತೆ ಕತ್ತೆಗಳನ್ನು ಸಿಂಗರಿಸಿ ಮದುವೆ ಮಾಡಿಸಿದ್ದಾರೆ. ಕತ್ತೆಗಳಿಗೆ ಬಾಸಿಂಗ ಕಟ್ಟಿ, ಆರತಿ ಬೆಳಗಿ ಮಂತ್ರಘೋಷಗಳ ಜೊತೆಗೆ, ವಾದ್ಯಮೇಳ ತರಿಸಿ ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿ ಮಳೆ ಬರಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ.

    ಮದುವೆಗೆ ಬಂದವರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಿದ್ದು ವಿಶೇಷವಾಗಿತ್ತು. ಈ ಹಿಂದೆಯೂ ಇದೇ ರೀತಿಯ ಬರಗಾಲ ಬಂದಾಗ ಕತ್ತೆಗಳ ಮದುವೆ ಮಾಡಿಸಿದ್ದಕ್ಕೆ ಮಳೆ ಬಂದಿತ್ತು. ಆದರಂತೆ ಈ ಬಾರಿಯೂ ಕೊಟ್ಟಲಗಿ ಗ್ರಾಮಸ್ಥರು ಹಳೆಯ ಸಂಪ್ರದಾಯ ಮುಂದುವರಿಸಿ ಕತ್ತೆಗಳ ಮದುವೆ ಮಾಡಿಸಿದ್ದಾರೆ.

  • ಭಾಗ್ಯಲಕ್ಷ್ಮಿ ಬಾಂಡ್‍ಗೆ 5 ಸಾವಿರ ಲಂಚ – ಅಂಗನವಾಡಿ ಕಾರ್ಯಕರ್ತೆಗೆ ಗ್ರಾಮಸ್ಥರಿಂದ ತರಾಟೆ

    ಭಾಗ್ಯಲಕ್ಷ್ಮಿ ಬಾಂಡ್‍ಗೆ 5 ಸಾವಿರ ಲಂಚ – ಅಂಗನವಾಡಿ ಕಾರ್ಯಕರ್ತೆಗೆ ಗ್ರಾಮಸ್ಥರಿಂದ ತರಾಟೆ

    ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯ ಬೇಜವಾಬ್ದಾರಿ ನಡತೆಗೆ ಬೇಸತ್ತ ಗ್ರಾಮಸ್ಥರು ಆಕೆಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಬ್ಲೂಡು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಅವರ ಮೇಲೆ ಗ್ರಾಮಸ್ಥರು ಆರೋಪ ಮಾಡಿದ್ದು, ಮಕ್ಕಳಿಗೆ ಸರ್ಕಾರದಿಂದ ವಿತರಣೆಯಾಗುವ ಆಹಾರ ಪದಾರ್ಥಗಳನ್ನ ಸರಿಯಾದ ಪ್ರಮಾಣದಲ್ಲಿ ವಿತರಣೆ ಮಾಡುತ್ತಿಲ್ಲ. ಅಲ್ಲದೆ ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಕರ್ತವ್ಯಕ್ಕೂ ಸರಿಯಾಗಿ ಹಾಜರಾಗುವುದಿಲ್ಲ ಎಂದು ದೂರಿದ್ದಾರೆ.

    ಹೆಣ್ಣು ಮಗು ಜನಿಸಿದ್ರೆ ಭಾಗ್ಯಲಕ್ಷ್ಮಿ ಬಾಂಡ್ ಅನ್ನು ಅಂಗನವಾಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ. ಆದರೆ ಇದರಲ್ಲಿಯೂ ಸಾಕಷ್ಟು ಅವವ್ಯಹಾರ ನಡೆಯುತ್ತಿದೆ ಎಂದು ವೆಂಕಟಲಕ್ಷಮ್ಮ ವಿರುದ್ಧ ದೂರಿದ್ದಾರೆ. ಭಾಗ್ಯಲಕ್ಷ್ಮಿ ಬಾಂಡ್ ಮಾಡಿಸಲು 5 ಸಾವಿರ ಹಣಕ್ಕಾಗಿ ಪೀಡಿಸುವುದಲ್ಲದೆ, ಮಕ್ಕಳ ಹಾಜರಾತಿ ಸರ್ಕಾರಕ್ಕೆ ಹೆಚ್ಚುವರಿಯಾಗಿ ತೋರಿಸಿ ಹೆಚ್ಚಿನ ಪದಾರ್ಥಗಳನ್ನು ಹಾಗೂ ಸೌಲಭ್ಯಗಳು ಪಡೆಯುತ್ತಿದ್ದಾರೆ. ಆಹಾರ ಪದಾರ್ಥಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಸದ್ಯ ಅಂಗನವಾಡಿ ಕಾರ್ಯಕರ್ತೆಯನ್ನು ಈ ಬಗ್ಗೆ ಪ್ರಶ್ನಿಸಿದಾಗ ನಾನು ಯಾವುದೇ ಮೋಸ ಮಾಡಿಲ್ಲ. ಇದೆಲ್ಲ ಸುಳ್ಳು ಸುದ್ದಿ ಬೇಕಾದ್ರೆ ಇದುವರೆಗೂ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಮಾಡಿದವರನ್ನು ಕೇಳಿ ಎಂದು ತನ್ನ ಮೇಲೆ ಇದ್ದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

    ಒಟ್ಟಾರೆಯಾಗಿ ಈ ಗ್ರಾಮದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರದ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದು, ಇದರಲ್ಲಿ ಯಾರದ್ದು ತಪ್ಪು ಸರಿ ಎಂಬುದನ್ನು ಮಾತ್ರ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಮಕ್ಕಳಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಬೇಕಾಗಿದೆ.

  • ಕೊಪ್ಪಳದಲ್ಲಿ ಮಳೆಯ ಅಬ್ಬರಕ್ಕೆ ರಸ್ತೆ ಸಂಪರ್ಕ ಕಡಿತ

    ಕೊಪ್ಪಳದಲ್ಲಿ ಮಳೆಯ ಅಬ್ಬರಕ್ಕೆ ರಸ್ತೆ ಸಂಪರ್ಕ ಕಡಿತ

    ಕೊಪ್ಪಳ: ನಗರದಲ್ಲಿ ಕಳೆದ ಮೂರನಾಲ್ಕು ದಿನಗಳಿಂದ ಸುರಿದ ಮಳೆಗೆ ಜಿಲ್ಲೆಯ ಹಲವು ಕಡೆ ಹಳ್ಳಕೊಳ್ಳಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಸೋಮವಾರ ನಡೆದ ಒಂದು ಘಟನೆ ನೋಡುಗರನ್ನು ಮೈಜುಮ್ ಎನ್ನಿಸುತ್ತದೆ.

    ಕೊಪ್ಪಳ ಜಿಲ್ಲೆಯ ಕೂಕುನೂರು ತಾಲೂಕಿನ ಸಿದ್ನೆಕೊಪ್ಪ ಮತ್ತು ಸೋಂಪುರು ಗ್ರಾಮಗಳ ನಡುವೆ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಸತತವಾಗಿ ಸುರಿದ ಮಳೆಗೆ ಹಳ್ಳ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಮುಂಜಾನೆ ಶಾಲೆಗೆ ಹೋಗಿದ್ದ ಗ್ರಾಮದ ವಿದ್ಯಾರ್ಥಿಗಳು ವಾಪಸ್ ಬರುವಷ್ಟರಲ್ಲಿ ಹಳ್ಳ ತುಂಬಿ ರಸ್ತೆ ಮೇಲೆ ನೀರು ರಭಸವಾಗಿ ಹರಿಯೋಕೆ ಪ್ರಾರಂಭವಾಗಿದೆ.

    ನೀರಿನ ಹರಿವು ರಭಸದಿಂದ ಇರುವ ಕಾರಣ ಬಸ್ ಡ್ರೈವರ್ ಬಸ್ ದಾಟಿಸುವ ದುಸ್ಸಾಹಸಕ್ಕೆ ಕೈ ಹಾಕಿಲ್ಲ. ಆದರೆ ಗ್ರಾಮದ ಜನರು ಮಾತ್ರ ರಭಸವಾಗಿ ಹರಿಯುತ್ತಿರುವ ನೀರಿನ ಮಧ್ಯೆಯೇ ವಿದ್ಯಾರ್ಥಿಗಳನ್ನು ಆ ಕಡೆ ದಂಡೆಯಿಂದ ಈ ಕಡೆಗೆ ಕರೆ ತಂದಿದ್ದಾರೆ. ಅದೃಷ್ಟವಶಾತ್ ದಾಟುವಾಗ ಯಾವುದೇ ಅವಘಡ ಸಂಭವಿಸಿಲ್ಲ.

    ಒಂಚೂರು ಆಯ ತಪ್ಪಿದ್ರು ಅನಾಹುತ ಆಗುತ್ತಿತ್ತು. ಎಲ್ಲರೂ ಆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದರು. ಇದು ಸಿದ್ನೆಕೊಪ್ಪ ಮತ್ತು ಸೋಂಪುರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ಪ್ರಮುಖ ರಸ್ತೆ ಆಗಿರುವುದರಿಂದ ವಿಧಿ ಇಲ್ಲದೆ ಇಲ್ಲಿನ ಗ್ರಾಮಸ್ಥರು ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಕಾಗಿದೆ.

    ಇಲ್ಲಿ ಒಂದು ಸೇತುವೆ ನಿರ್ಮಿಸಲು ಸಾಕಷ್ಟು ಸಾರಿ ಗ್ರಾಮಸ್ಥರು ಮನವಿ ಸಲ್ಲಿಸಿದರು ಇದುವರೆಗೂ ಯಾರು ಕ್ಯಾರೆ ಎಂದಿಲ್ಲ. ಏನಾದರೂ ಅಪಘಾತ ಸಂಭವಿಸುವ ಮೊದಲೇ ನಮ್ಮೂರಿಗೆ ಒಂದು ಮೇಲ್ಸೆತುವೆ ನಿರ್ಮಿಸಿಕೊಡಿ ಎಂದು ಎರಡು ಗ್ರಾಮದ ಜನರ ಒತ್ತಾಸೆಯಾಗಿದೆ.

  • ಬೆತ್ತದಿಂದ ತಾವೇ ತೂಗು ಸೇತುವೆ ನಿರ್ಮಿಸಿ ಸಂಚರಿಸ್ತಿದ್ದಾರೆ ಗ್ರಾಮಸ್ಥರು

    ಬೆತ್ತದಿಂದ ತಾವೇ ತೂಗು ಸೇತುವೆ ನಿರ್ಮಿಸಿ ಸಂಚರಿಸ್ತಿದ್ದಾರೆ ಗ್ರಾಮಸ್ಥರು

    – ಪ್ರೇಕ್ಷಣೀಯ ಸ್ಥಳಗಳಿರುವ ಊರು

    ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯ್ತಿಯ ಗ್ರಾಮವೊಂದರಲ್ಲಿ ಹೊಳೆ ದಾಟಲು ಜನರು ತಾವೇ ಬೆತ್ತದಿಂದ ತೂಗು ಸೇತುವೆಯನ್ನು ನಿರ್ಮಿಸಿ ಬಳಸುತ್ತಿದ್ದಾರೆ.

    ಜಾಗಟ ಗ್ರಾಮದ ಜನರು ಹೊಳೆ ದಾಟಲು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕು. ಈ ಗ್ರಾಮದಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿದ್ದು, ಗ್ರಾಮಸ್ಥರ ಪ್ರಮುಖ ಆದಾಯದ ಮೂಲ ಕೃಷಿ ಆಗಿದೆ. ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಇಲ್ಲಿಯೇ ವಾಸವಿದ್ದಾರೆ. ಗ್ರಾಮದ ಪಕ್ಕದಲ್ಲಿಯೇ ಕುಮಾರಧಾರ ಹೊಳೆ ಹರಿಯುತ್ತದೆ.

    ಹೊಳೆಯ ಮತ್ತೊಂದು ಬದಿಯಲ್ಲಿ ಗ್ರಾಮಸ್ಥರ ಹೊಲ ಗದ್ದೆ ತೋಟಗಳಿವೆ. ಎರಡು ಕುಟುಂಬಗಳು ಹೊಳೆಯ ಮತ್ತೊಂದು ಬದಿಯಲ್ಲಿಯೇ ವಾಸವಿದ್ದಾರೆ. ಆದರೆ ಇವರಿಗೆಲ್ಲ ಹೊಳೆ ದಾಟುವುದು ಒಂದು ದೊಡ್ಡ ಸಹಾಸ. ಬೇಸಿಗೆಯಲ್ಲಿ ನೀರು ಕೊಂಚ ಕಡಿಮೆ ಇದ್ದು ಅಲ್ಲಿಂದ ಹೇಗೋ ದಾಟುತ್ತಾರೆ. ಆದರೆ ಒಂದು ಅಡಿಗಿಂತ ಹೆಚ್ಚು ನೀರು ಬಂದರೂ ಸಹ ಹೊಳೆ ದಾಟುವುದು ಜೀವಕ್ಕೆ ಅಪಾಯ ತರುತ್ತದೆ. ಹಲವಾರು ವರ್ಷಗಳಿಂದ ಇಲ್ಲಿಯ ಜನರು ತಮ್ಮ ಗದ್ದೆ, ಹೊಲಗಳಿಗೆ ತೆರಳಲು ತಾವೇ ಸ್ವತಃ ಸೇತುವೆ ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ.

    ಕಾಡಿಗೆ ಹೋಗಿ ಕಾಡು ಪ್ರಾಣಿಗಳಿಂದ ತಪ್ಪಿಸಿಕೊಂಡು ವಿಶೇಷವಾದ ಬೆತ್ತವನ್ನು ತೆಗೆದುಕೊಂಡು ಬಂದು ಈ ಸೇತುವೆ ನಿರ್ಮಿಸುತ್ತಾರೆ. ವರ್ಷಕ್ಕೆ ಎರಡು ಬಾರಿ ಈ ರೀತಿಯಲ್ಲಿ ಗ್ರಾಮಸ್ಥರೇ ತಮ್ಮ ಸೇತುವೆಯನ್ನು ನಿರ್ಮಿಸಿಕೊಳ್ಳುತ್ತಾರೆ. ವಿಶಿಷ್ಟವಾದ ಬೆತ್ತವನ್ನು ತೆಗೆದುಕೊಂಡು ಬಂದು ಸರ್ಕಾರದ ಯಾವುದೇ ಸಹಾಯ ಇಲ್ಲದೆ ತಾವೇ ಸೇತುವೆಯನ್ನು ನಿರ್ಮಿಸುತ್ತಾರೆ. ಮಕ್ಕಳು, ವೃದ್ಧರು ಸೇರಿದಂತೆ ಪ್ರತಿಯೊಬ್ಬರು ಈ ತೂಗು ಸೇತುವೆಯಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಹೊಳೆ ದಾಟುತ್ತಾರೆ. ಅಷ್ಟಕ್ಕೂ ಇಲ್ಲಿ ಸೇತುವೆ ನಿರ್ಮಾಣ ಮಾಡಿದಲ್ಲಿ ಸಾಕಷ್ಟು ಪ್ರಯೋಜನಗಳಿದ್ದರೂ ಕೂಡ ಇದರ ಬಗ್ಗೆ ಗಮನ ಹರಿಸದೆ ಇರಲು ಕಾರಣ ತಿಳಿಯುತ್ತಿಲ್ಲ.

    ಹಾಸನದಿಂದ ಸುಬ್ರಮಣ್ಯ ತೆರಳುವ ಪ್ರಯಾಣಿಕರಿಗೆ ಇಲ್ಲಿ ಸೇತುವೆ ನಿರ್ಮಾಣ ಮಾಡಿದಲ್ಲಿ 30 ಕಿ.ಮೀ ಸಂಚಾರ ತಪ್ಪುತ್ತದೆ. ಜೊತೆಗೆ ಹೊಂಗಡಹಳ್ಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯವರು ಹೊಳೆಯ ಆ ಬದಿಯಲ್ಲಿದ್ದು ಅವರು 35 ಕಿ.ಮೀ ಬಳಸಿ ಪಂಚಾಯ್ತಿಗೆ ಬರುವುದು ಕೂಡ ತಪ್ಪಲಿದೆ. ಸಾವಿರಾರು ಮಂದಿಗೆ ಇದರ ಪ್ರಯೋಜನ ಸಿಗಲಿದೆ. ಆದರೂ ಕೂಡ ಸರ್ಕಾರ ಇಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಆಕೆ ಕೈಗೊಂಡಿಲ್ಲ ಎಂಬ ಪ್ರಶ್ನೆ ಹುಟ್ಟಿದೆ. ಹೊಂಗಡಹಳ್ಳ-ಸಕಲೇಶಪುರ ತಾಲೂಕಿನ ಕೊನೆಯ ಗ್ರಾಮ ಪಂಚಾಯ್ತಿ. ಇಲ್ಲಿ ಮೂಕನ ಮನೆ ಫಾಲ್ಸ್, ಕಾಗಿನೆರೆ ಪ್ರಕೃತಿ ಸೌಂದರ್ಯ ತಾಣ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ಇರುವ ಜಾಗವಾಗಿದ್ದು, ಸರ್ಕಾರ ಈ ಭಾಗವನ್ನು ಪ್ರವಾಸಿ ತಾಣವಾಗಿಯೂ ಕೂಡ ಅಭಿವೃದ್ಧಿ ಮಾಡಬಹುದು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]