Tag: villagers

  • ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

    ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

    ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತವಾಗಿದ್ದು, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ಸಂಭವಿಸಿದೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಒಂದು ಬೈಕ್, ಎರಡು ಕಾರು ಹಾಗೂ ಒಂದು ಜೀಪ್‍ನ ನಡುವೆ ಅಪಘಾತ ಸಂಭವಿಸಿ, ಐವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸರ್ವಿಸ್ ರಸ್ತೆ ಇಲ್ಲದಿರುವುದೇ ಈ ಸರಣಿ ಅಪಘಾತಕ್ಕೆ ಕಾರಣಕ್ಕೆ ಎಂದು ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಎರಡು ಮಾರ್ಗಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಎರಡು ಮಾರ್ಗಗಳು ಸಂಪೂರ್ಣ ಸ್ತಬ್ಧವಾಗಿ ಐದಾರು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಬಳಿಕ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಶುರುವಾಗಿ, ಸರ್ವಿಸ್ ರಸ್ತೆ ಮಾಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಫಿನಾಡಲ್ಲಿ ಕೇಳಿ ಬಂತು ಚುನಾವಣೆ ಬಹಿಷ್ಕಾರದ ಕೂಗು

    ಕಾಫಿನಾಡಲ್ಲಿ ಕೇಳಿ ಬಂತು ಚುನಾವಣೆ ಬಹಿಷ್ಕಾರದ ಕೂಗು

    ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಫಿನಾಡಲ್ಲಿ ಬಹಿಷ್ಕಾರದ ಕೂಗು ಕೇಳಿಬಂದಿದೆ. ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಸಾರ್ವಜನಿಕರು ಈ ಬಾರಿ ಮತ ಹಾಕಲ್ಲ ಎಂದು ಚುನಾವಣೆಯನ್ನು ಬಹಿಷ್ಕಾರಿಸಿದ್ದಾರೆ.

    ಹೌದು, ಚಿಕ್ಕಮಗಳೂರಿನ ಕಳಸ, ಮೊದಲಮನೆ ಹಾಗೂ ಬಾಳೆಹೊಳೆ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸಿದ್ದಾರೆ. ಅಲ್ಲದೆ ಈ ಬಾರಿ ಮತದಾನ ಮಾಡಲ್ಲ ಎಂಬ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಚುನಾವಣಾ ಬಹಿಷ್ಕಾರದ ಫೋಟೋ ಫುಲ್ ವೈರಲ್ ಆಗಿದೆ.

    ನಮಗಾಗಿ ಕೆಲಸ ಮಾಡದವರಿಗೆ ನಾವು ಯಾಕೆ ಮತದಾನ ಮಾಡಬೇಕು? ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳಿಗೆ ಮತದಾರರ ಮೇಲೆ ಪ್ರೀತಿ ಬರುತ್ತೆ. ಬಳಿಕ ಅಧಿಕಾರ ಬಂದಮೇಲೆ ಜನರನ್ನು ಮರೆತು ಬಿಡುತ್ತಾರೆ. ಆದರಿಂದ ಈ ಬಾರಿ ಮತ ಹಾಕಲ್ಲ ಎಂದು ಗ್ರಾಮಸ್ಥರು ಸಿಡಿದೆದ್ದಿದ್ದಾರೆ.

    ಈ ಗ್ರಾಮಗಳಲ್ಲಿ ಸರಿಯಾದ ರಸ್ತೆ ವ್ಯವಸ್ಥೆಯಿಲ್ಲ. ಕೆಲವು ಕಡೆ ಹೊಳೆಗಳು ಇರುವ ಸ್ಥಳಗಳಲ್ಲಿ ಸೇತುವೆಗಳಿಲ್ಲ. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಆದರಿಂದ ಚುನಾವಣೆ ನಡೆಯುವ ಒಳಗೆ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿದರೆ ಮತ ಹಾಕುತ್ತೇವೆ. ಎಲ್ಲವಾದರೆ ಮತ ಹಾಕಲ್ಲ ಎಂದು ಜನಪ್ರತಿನಿಧಿಗಳಿಗೆ ಜನರು ಎಚ್ಚರಿಗೆ ನೀಡಿದ್ದಾರೆ.

    ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾದ 2 ದಿನದಲ್ಲಿ ಮತ ಬಹಿಷ್ಕಾರಕ್ಕೆ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಾರಿ ಮತದಾನದಿಂದ ದೂರ ಉಳಿಯಲು ಜನರು ತೀರ್ಮಾನಿಸಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮದ ಮುಂಭಾಗದಲ್ಲಿ ಬಹಿಷ್ಕಾರದ ಬ್ಯಾನರ್ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಬಹಿಷ್ಕರಿಸಿದ ಗ್ರಾಮಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಮತದಾರರು ಇದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಂಚೆ ಕಚೇರಿ ಸಿಬ್ಬಂದಿ ಒಳ ಜಗಳಕ್ಕೆ ಕಸವಾಯ್ತು ಸಾಲಮನ್ನಾ ಪತ್ರ, ಆಧಾರ್ ಕಾರ್ಡ್

    ಅಂಚೆ ಕಚೇರಿ ಸಿಬ್ಬಂದಿ ಒಳ ಜಗಳಕ್ಕೆ ಕಸವಾಯ್ತು ಸಾಲಮನ್ನಾ ಪತ್ರ, ಆಧಾರ್ ಕಾರ್ಡ್

    ಬೆಂಗಳೂರು: ಆಧಾರ್ ಕಾರ್ಡ್ ಎಂಬುದು ಭಾರತೀಯ ಪ್ರತಿಯೊಬ್ಬ ಪ್ರಜೆಯ ಸಾಮಾನ್ಯ ಹಕ್ಕು, ಇಂತಹ ಆಧಾರ್ ಕಾರ್ಡ್ ಜನರ ಕೈ ಸೇರುವ ಬದಲು ಕಸದ ತೊಟ್ಟಿ ಸೇರಿದ ಘಟನೆ ಬೆಂಗಳೂರು ಹೊರವಲಯ ಮಂಡೂರು ಗ್ರಾಮದಲ್ಲಿ ನಡೆದಿದೆ.

    ಮಂಡೂರಿನ ಅಂಚೆ ಕಚೇರಿ ಸಿಬ್ಬಂದಿಯ ಒಳ ಜಗಳದಿಂದ ಆಧಾರ್ ಕಾರ್ಡ್ ಜೊತೆಗೆ ರಾಜ್ಯ ಸರ್ಕಾರದಿಂದ ರೈತರಿಗೆ ನೀಡಿದ್ದ ಸಾಲಮನ್ನಾ ಪತ್ರಗಳು ಕಸದ ಬುಟ್ಟಿಗೆ ಸೇರಿದೆ. ರಾಜ್ಯ ಸರ್ಕಾರ ರೈತರಿಗೆ ಸಾಲಮನ್ನಾ ಪತ್ರಗಳನ್ನು ಅಂಚೆ ಮುಖಾಂತರ ಕಳುಹಿಸಿತ್ತು. ಆದ್ರೆ ಅಂಚೆ ಸಿಬ್ಬಂದಿಗಳ ಎಡವಟ್ಟು ಕೆಲಸದಿಂದ ರೈತರಿಗೆ ಅನ್ಯಾನವಾಗಿದೆ. ಜೊತೆಗೆ ಆಧಾರ್ ಗೆ ನೊಂದಣಿಯಾದವರ ಕಾರ್ಡ್ ಗಳು ಕೂಡ ಸೇರಬೇಕಾದವರಿಗೆ ತಲುಪದೇ ಕಸದ ಬುಟ್ಟಿ ಸೇರಿದೆ.

    ಕಚೇರಿಗೆ ಬಂದ ಪೋಸ್ಟ್ ಗಳನ್ನು ಜನರಿಗೆ ತಲುಪಿಸದೇ ಕಸದ ತೊಟ್ಟಿಗೆ ಎಸೆದಿದ್ದ ವಿಷಯ ಗ್ರಾಮಸ್ಥರಿಗೆ ತಿಳಿದಿದೆ. ಬಳಿಕ ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಸದಸ್ಯ ಕೆಂಪರಾಜು ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಅಂಚೆ ಕಚೇರಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ಕಸದ ತೊಟ್ಟಿಗೆ ಎಸೆದಿರುವ ಆಧಾರ್ ಕಾರ್ಡ್ ಹಾಗೂ ಸರ್ಕಾರದಿಂದ ರೈತರಿಗೆ ನೀಡಿರುವ ಸವಲತ್ತು ಪತ್ರಗಳನ್ನು ಅವರ ಮನೆಬಾಗಲಿಗೆ ತಲುಪಿಸುವಂತೆ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    ಹಾಸನ: ಹಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಸೋಮವಾರ ರಾತ್ರಿ ಬೋನಿಗೆ ಬಿದ್ದಿದೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿ ಬನವಾಸೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ ಭಯ ಹುಟ್ಟಿಸಿತ್ತು.

    ಬಸವಾಸೆ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆಯೊಂದರ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಚಿರತೆ ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರು ಸಾಕಿದ್ದ ಕರು, ಕುರಿಮರಿಗಳನ್ನು ತಿಂದು ಪರಾರಿಯಾಗುತ್ತಿತ್ತು. ಆದರಿಂದ ಈ ಭಾಗದ ಜನರು ಚಿರತೆ ಯಾವಾಗ ಬಂದು ಇನ್ನೇನು ಮಾಡುತ್ತೋ ಅಂತ ಭಯದಿಂದ ಜೀವನ ಮಾಡುತ್ತಿದ್ದರು. ಚಿರತೆ ಕಾಟಕ್ಕೆ ಜನರು ಮನೆಗಳಿಂದ ಹೊರಬರಲು ಹೆದರುತ್ತಿದ್ದರು.

    ಚಿರತೆನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಬೋನನ್ನು ಇಟ್ಟಿದ್ದರು. ಆಹಾರ ಅರಸಿ ರಾತ್ರಿ ಮತ್ತೆ ಗ್ರಾಮಕ್ಕೆ ಬಂದ ಚಿರತೆ ಬೋನಿಗೆ ಬಿದ್ದಿದೆ. ಇದನ್ನು ಕಂಡು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಹಾರ ಪದಾರ್ಥ ಅಕ್ರಮ ಸಾಗಾಟ- ಪ್ರಾಂಶುಪಾಲ ಸೇರಿ ಮೂವರು ಪೊಲೀಸರ ವಶಕ್ಕೆ

    ಆಹಾರ ಪದಾರ್ಥ ಅಕ್ರಮ ಸಾಗಾಟ- ಪ್ರಾಂಶುಪಾಲ ಸೇರಿ ಮೂವರು ಪೊಲೀಸರ ವಶಕ್ಕೆ

    ಕೋಲಾರ: ವಸತಿ ಶಾಲೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಾಂಶುಪಾಲರು ಗ್ರಾಮಸ್ಥರಿಗೆ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಡರಾತ್ರಿ ನಡೆದಿದೆ.

    ವಸತಿ ಶಾಲೆಯ ಪ್ರಾಂಶುಪಾಲರು ಅಕ್ರಮವಾಗಿ ಆಹಾರ ಪದಾರ್ಥಗಳನ್ನು ಸಾಗಿಸುತ್ತಿದ್ದರು. ಪದಾರ್ಥಗಳನ್ನು ಟೆಂಪೊಗೆ ಲೋಡ್ ಮಾಡಿ ಕಳಿಸುವ ವೇಳೆ ಪ್ರಾಂಶುಪಾಲ ಮಂಜುನಾಥ್ ಸೇರಿದಂತೆ ಇಬ್ಬರು ಗ್ರಾಮಸ್ಥರ ಕೈಗೆ ಸಾಕ್ಷಿ ಸಮೇತ ಸಿಕ್ಕಿ ಬಿದ್ದಿದ್ದಾರೆ. ಪ್ರಾಂಶುಪಾಲರು ಸೇರಿ ಮೂವರನ್ನು ಗ್ರಾಮಸ್ಥರು ಹಿಡಿದು ಕೂಡಿ ಹಾಕಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಹಲವು ದಿನಗಳಿಂದ ವಿದ್ಯಾರ್ಥಿಗಳಿಗೆ ಬರುತ್ತಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿತ್ತು. ಆದ್ರೆ ಶುಕ್ರವಾರ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ವಸತಿ ಶಾಲೆ ಮೇಲೆ ಗ್ರಾಮಸ್ಥರು ದಾಳಿ ಮಾಡಿದಾಗ ಅಕ್ರಮ ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳನ್ನು ಮಾಸ್ತಿ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೋನಿಗೆ ಬಿತ್ತು ಜನರ ನಿದ್ದೆಗೆಡಿಸಿದ್ದ ಚಿರತೆ!

    ಬೋನಿಗೆ ಬಿತ್ತು ಜನರ ನಿದ್ದೆಗೆಡಿಸಿದ್ದ ಚಿರತೆ!

    ಕೋಲಾರ: ಹಲವು ದಿನಗಳಿಂದ ಜನರ ನಿದ್ದೆಗೆಡಿಸಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಜಿಲ್ಲೆಯ ಮಾಲೂರು ತಾಲೂಕಿನ ಉಳ್ಳೇರಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದಿದೆ.

    ಹೌದು. ಉಳ್ಳೇರಹಲ್ಲಿ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಅವರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮದ ಸಮೀಪವಿರುವ ಬೆಟ್ಟದ ತಪ್ಪಲಿನಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಹಲವು ತಿಂಗಳಿಂದ ಚಿರತೆ ಈ ಭಾಗದ ಜನರ ನಿದ್ದೆಗೆಡಿಸಿತ್ತು. ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ಎರಡು ಕುರಿಗಳನ್ನು ಚಿರತೆ ಕೊಂದು ಹಾಕಿತ್ತು.

    ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆಹಿಡಿಯಲು ಮುಂದಾಗಿದ್ದರು. ಸದ್ಯ ಇಂದು ಚಿರತೆ ಬೋನಿಗೆ ಬಿದ್ದಿದ್ದು, ಬೆಟ್ಟದಲ್ಲಿ ಇನ್ನೂ ಎರಡು ಚಿರತೆಗಳಿವೆ ಎಂದು ಶಂಕಿಸಲಾಗಿದೆ. ಆದ್ದರಿಂದ ಇನ್ನೆರಡೂ ಚಿರತೆಗಳನ್ನು ಹಿಡಿದು ಬೇರೆಡೆಗೆ ಬಿಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

    ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟುಬರಲು ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ಧಾರವಾಡ: ಹೈವೋಲ್ಟೇಜ್ ವಿದ್ಯುತ್ ಹರಿದ ಪರಿಣಾಮ ಗ್ರಾಮದ ಹಲವು ಮನೆಗಳ ಎಲೆಕ್ಟ್ರಾನಿಕ್ಸ್ ಉಪಕರಣಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಕ್ಯಾರಕೊಪ್ಪ ಗ್ರಾಮದಲ್ಲಿ ಬುಧವಾರ ತಡರಾತ್ರಿ ಹೈವೋಲ್ಟೇಜ್ ವಿದ್ಯುತ್‍ನಿಂದ ಹಲವು ಮನೆಗಳ ಟಿವಿ, ಫ್ರಿಡ್ಜ್, ಚಾರ್ಜ್ ಹಾಕಿದ್ದ ಮೊಬೈಲ್ ಫೋನ್‍ಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹೋಗಿದೆ. ಸುಮಾರು 8 ಮನೆಗಳಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹಾಳಾಗಿದೆ. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಬೆಳ್ಳಂಬೆಳಗ್ಗೆ ಗ್ರಾಮದ ಬಿಲ್ ಕಲೆಕ್ಟರ್‍ಗೆ ಕರೆ ಮಾಡಿ ಅವಘಡದ ಬಗ್ಗೆ ತಿಳಿದ್ದಾರೆ. ಅಲ್ಲದೆ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ.

    ಗ್ರಾಮಸ್ಥರ ಒತ್ತಾಯದ ಮೇಲೆ ಸ್ಥಳಕ್ಕೆ ಬಂದ ಬಿಲ್ ಕಲೆಕ್ಟರ್ ನನ್ನು ತರಾಟೆಗೆ ತೆರೆದುಕೊಂಡು, ನಂತರ ಮೇಲಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಿನ್ನನ್ನು ಬಿಡಲ್ಲ ಎಂದು ಗ್ರಾಮ ಪಂಚಾಯ್ತಿಯಲ್ಲಿದ್ದ ಕೋಣೆಯಲ್ಲಿ ಗ್ರಾಮಸ್ಥರು ಕೂಡಿ ಹಾಕಿದ್ದಾರೆ. ಹಾಗೆಯೇ ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳೆಯನ್ನು ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ!

    ಮಹಿಳೆಯನ್ನು ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ!

    ರಾಂಚಿ: ಮಾಟಗಾತಿ ಎಂದು ತಿಳಿದು ಗ್ರಾಮಸ್ಥರು ಮಹಿಳೆಯ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್‍ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

    50 ವರ್ಷದ ಮಹಿಳೆ ಮಾಟಗಾತಿ ಎಂದು ಆರೋಪಿಸಿ ಮಹೇಶ್ ಲಿತಿ ಗ್ರಾಮದ ನಿವಾಸಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು 7 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

    ಸೋನಲಾಲ್ ಕಿಶ್ಕು ಎನ್ನುವರು ಭಾನುವಾರ ಬೆಳಗ್ಗೆ ರಾಜಕೀಯದ ರ್ಯಾಲಿಯಲ್ಲಿ ಭಾಗವಹಿಸಿದ್ದರು. ರ್ಯಾಲಿ ಮುಗಿಸಿ ಹಿಂದಿರುಗುವಾಗ ಸೋನಲಾಲ್ ಬಸ್ಸಿನ ಸೀಟ್‍ನಲ್ಲೇ ಪ್ರಾಣ ಬಿಟ್ಟಿದ್ದಾನೆ. ಸೋನಲಾಲ್ ಕಾಯಿಲೆಯಿಂದ ಮೃತಪಟ್ಟಿದ್ದನು. ಆದರೆ ಆತ ಮಾಟಮಂತ್ರದಿಂದ ಮೃತಪಟ್ಟಿದ್ದಾನೆ. ಮೃತನ ಹಿರಿಯ ಸಹೋದರನ ಪತ್ನಿ ಮಾಟಮಂತ್ರ ಮಾಡಿ ಈ ಕೆಲಸ ಮಾಡಿದ್ದಾಳೆಂದು ಗ್ರಾಮಸ್ಥರು ಆರೋಪಿಸಿ ಆಕೆಯ ಮಗಳು ಹಾಗೂ ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಎಸ್‍ಐ ಸಂತೋಷ್ ಕುಮಾರ್ ಹೇಳಿದ್ದಾರೆ.

    ಹಲ್ಲೆ ಮಾಡಿದ ಬಳಿಕ ಗ್ರಾಮಸ್ಥರು ಮಹಿಳೆಯನ್ನು ಬೆತ್ತಲೆಗೊಳಿಸಿ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಮಹಿಳೆ ಹಾಗೂ ಆಕೆಯ ಮಗಳನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಗೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೀವಜಲಕ್ಕಾಗಿ ನೀರೆಯರ ಪರದಾಟ..!- ಕಿ.ಮೀಗಟ್ಟಲೆ ಗುಡ್ಡ ಹತ್ತಿ ನೀರು ತರುತ್ತಾರೆ ಗ್ರಾಮಸ್ಥರು

    ಜೀವಜಲಕ್ಕಾಗಿ ನೀರೆಯರ ಪರದಾಟ..!- ಕಿ.ಮೀಗಟ್ಟಲೆ ಗುಡ್ಡ ಹತ್ತಿ ನೀರು ತರುತ್ತಾರೆ ಗ್ರಾಮಸ್ಥರು

    ಬೆಳಗಾವಿ: ತಲೆಯ ಮೇಲೊಂದು, ಸೊಂಟದ ಮೇಲೊಂದು ಕೊಡ ಹೊತ್ತು ಕಿಲೋಮೀಟರ್ ಗಟ್ಟಲೆ ಗುಡ್ಡ ಹತ್ತಿ ಇಳೀದು ನೀರು ತರುವ ತುಂಬು ಗರ್ಭಿಣಿ, ಶಾಲಾ ಮಕ್ಕಳು ಹಾಗೂ ಮಹಿಳೆಯರು ಪರದಾಟ ನಡೆಸುತ್ತಿರೋ ಮನಕಲಕುವ ದೃಶ್ಯ ಜಿಲ್ಲೆಯ ರಾಮದುರ್ಗ ತಾಲೂಕಿನ ಬುದ್ನಿಖುರ್ದ ಗ್ರಾಮದಲ್ಲಿ ಕಂಡುಬಂದಿದೆ.

    ಹೌದು. ಹಲವು ವರ್ಷಗಳಿಂದಲೂ ಬುದ್ನಿಖುರ್ದ ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ. ಆದ್ರೆ ಈ ಸಮಸ್ಯೆಯನ್ನು ಮಾತ್ರ ಯಾರಿಂದಲೂ ಬಗೆಹರಿಸಲು ಸಾಧ್ಯವಾಗಿಲ್ಲ. ಈ ಗ್ರಾಮದಲ್ಲಿರೋ ಒಂದು ಬೋರ್ ವೆಲ್ ನೀರಿನಿಂದಲೇ ಇಡೀ ಗ್ರಾಮದ ಜನ ನೀರು ಕುಡಿಯುತ್ತಿದ್ದಾರೆ. ಸುಮಾರು ಐದು ಸಾವಿರ ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ನೀರು ಹೊತ್ತು ತರುವುದೇ ಒಂದು ದೊಡ್ಡ ಕೆಲಸವಾಗಿಬಿಟ್ಟಿದೆ. ನಿತ್ಯವೂ ಎರಡು ಕಿ.ಮೀ ನಡೆದುಕೊಂಡು ಹೋಗಿಯೇ ನೀರು ತರುವ ಸ್ಥಿತಿ ಇಲ್ಲಿದೆ. ಒಂದೆಡೆ ಪುರುಷರು ಕೂಲಿ ಮಾಡಲು ಹೋದರೆ, ಮತ್ತೊಂದೆಡೆ ಮಹಿಳೆಯರು ಹಾಗೂ ಮಕ್ಕಳು ನೀರು ತುಂಬುವ ಕೆಲಸ ಮಾಡುತ್ತಾರೆ.

    ವಿಪರ್ಯಾಸ ಅಂದ್ರೆ ಗರ್ಭಿಣಿ ಮಹಿಳೆಯರು ಕೂಡ ಎರಡು ಕಿ.ಮೀ ನಡೆದುಕೊಂಡು ಹೋಗಿ ನೀರು ತರುತ್ತಾರೆ. ರಸ್ತೆಗಳು ಕೂಡ ಸರಿಯಿಲ್ಲದ ಕಾರಣ ಈ ಗ್ರಾಮದಲ್ಲಿ ಒಂದು ಕಿ.ಮೀ ನಷ್ಟು ಗುಡ್ಡವನ್ನ ಹತ್ತಿ ನೀರು ತರುವುದರಿಂದ ಮಹಿಳೆಯರು ಹೊಟ್ಟೆನೋವು ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಗರ್ಭಿಣಿ ಮಹಿಳೆಯರು ಕೆಲವೊಮ್ಮೆ ಬಿದ್ದು ಆಸ್ಪತ್ರೆಗಳಲ್ಲಿ ದಾಖಲಾದ ಪ್ರಕರಣಗಳು ಕೂಡ ನಡೆದಿದೆ.

    ಈ ಗ್ರಾಮದಲ್ಲಿ ನೀರಿನ ಸಮಸ್ಯೆ ಎಷ್ಟರ ಮಟ್ಟಿಗೆ ಇದೆ ಅಂದರೆ, ಪುಟ್ಟ ಪುಟ್ಟ ಮಕ್ಕಳು ಕೂಡ ನೀರಿಗಾಗಿ ಕೆಲವೊಮ್ಮೆ ಶಾಲೆಯನ್ನ ಬಿಟ್ಟು ನೀರು ತುಂಬುತ್ತಾರೆ. ಇತ್ತ ನೀರಿನ ಸಮಸ್ಯೆ ಇದ್ದುದರಿಂದ ದನಕರುಗಳನ್ನ ಸಾಕುವುದನ್ನು ಕೂಡ ಗ್ರಾಮಸ್ಥರು ಬಹುತೇಕವಾಗಿ ನಿಲ್ಲಿಸಿದ್ದಾರೆ. ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಗ್ರಾಮದ ಎಲ್ಲಾ ಜನರು ನಿತ್ಯವೂ ಕಿ.ಮೀ ಗಟ್ಟಲೇ ನಡೆದುಕೊಂಡು ಹೋಗಿ ನೀರು ತರುವ ಸ್ಥಿತಿ ಇದ್ದು, ಇದನ್ನ ಪರಿಹರಿಸಿ ಎಂದು ಹಲವು ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಗೆ ಮನವಿ ಮಾಡಿಕೊಂಡ್ರೂ ಯಾವುದೇ ಪ್ರಯೋಜನ ಆಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರಂತೂ ಬರೀ ಚುನಾವಣೆ ಬಂದಾಗ ಮಾತ್ರ ಗ್ರಾಮಕ್ಕೆ ಬರ್ತಾರೆ ಚುನಾವಣೆ ಮುಗಿದ ಮೇಲೆ ಇತ್ತ ಸುಳಿಯುವುದೇ ಇಲ್ಲ. ಹೀಗಾಗಿ ಈ ಬಾರಿ ವೋಟ್ ಕೇಳೊಕೆ ಬಂದರೇ ಅವರನ್ನ ಸುಮ್ಮನೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಯಾವುದೇ ಪ್ರಯೋಜನ ಆಗ್ತಿಲ್ಲ. ವಿದ್ಯುತ್ ಕಡಿತಗೊಂಡರೇ ಕೆಲವೊಮ್ಮೆ ಕೆರೆ ನೀರು ಕುಡಿದು ಕಾಯಿಲೆಯಿಂದ ಗ್ರಾಮಸ್ಥರು ಬಳಲುತ್ತಿದ್ದಾರೆ. ಸದ್ಯ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲ್ಲೆ ಜನನಾಯಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಮತ ಕೇಳಲು ಹೋಗುವ ಮುಖಂಡರಿಗೆ ಸರಿಯಾಗಿ ಉತ್ತರಿಸಲು ಜನರು ತಯಾರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಾಡಾನೆ ಕಾಲ್ತುಳಿತಕ್ಕೆ ವೃದ್ಧೆ ಸಾವು..!- ಹೆದ್ದಾರಿ ತಡೆದು ಗ್ರಾಮಸ್ಥರ ಆಕ್ರೋಶ

    ಕಾಡಾನೆ ಕಾಲ್ತುಳಿತಕ್ಕೆ ವೃದ್ಧೆ ಸಾವು..!- ಹೆದ್ದಾರಿ ತಡೆದು ಗ್ರಾಮಸ್ಥರ ಆಕ್ರೋಶ

    ಚಾಮರಾಜನಗರ: ಬಹಿರ್ದೆಸೆಗೆಂದು ತೆರೆಳಿದ್ದ ವೃದ್ಧೆ ಮನೆಗೆ ಮರಳುವಾಗ ದಾರಿ ಮಧ್ಯೆ ಆನೆ ತುಳಿದು ಆಕೆ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮಹಂತಾಳಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಮಹಂತಾಳಪುರ ಗ್ರಾಮದ ನಿವಾಸಿ ಶಿವಮ್ಮ(65) ಆನೆ ದಾಳಿಗೆ ಬಲಿಯಾದ ವೃದ್ಧೆ. ಮಹಾಂತಾಳಪುರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಕಾಡಾನೆಗಳನ್ನು ಓಡಿಸುವ ವೇಳೆ ಬಹಿರ್ದೆಸೆಗೆಂದು ತೆರೆಳಿದ್ದ ಗ್ರಾಮದ ಶಿವಮ್ಮ ಎಂಬ ವೃದ್ಧೆಯನ್ನು ಕಾಡಾನೆಗಳು ತುಳಿದು ಸಾಯಿಸಿವೆ. ಮೂರು ಕಾಡಾನೆಗಳು ಮೂರು ದಿನಗಳಿಂದ ಈ ಭಾಗದಲ್ಲಿ ಬೀಡು ಬಿಟ್ಟಿವೆ. ಆದರೆ ಅವುಗಳನ್ನು ಸಮರ್ಪಕ ರೀತಿಯಲ್ಲಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದ್ದೆ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಅಷ್ಟೇ ಅಲ್ಲದೆ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ತಡೆ ನಡೆಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಹಿಂದೆ ಯಳಂದೂರು ಸುತ್ತಮುತ್ತ ಕಾಣಿಸಿಕೊಂಡಿದ್ದ ಈ ಕಾಡಾನೆಗಳು ನಿನ್ನೆ ಮಹಾಂತಾಳಪುರದ ಕಡೆಗೆ ಬಂದು ಇಲ್ಲಿನ ಜಾಲಿಮುಳ್ಳಿನ ಪೊದೆಯಲ್ಲಿ ಬೀಡು ಬಿಟ್ಟಿದ್ದವು. ಗ್ರಾಮಸ್ಥರ ಕೂಗಾಟ ಅರಚಾಟದಿಂದ ಗಾಬರಿಯಾಗಿದ್ದ ಈ ಕಾಡಾನೆಗಳನ್ನು ಅರಣ್ಯ ಸಿಬ್ಬಂದಿ ನಿನ್ನೆ ಸಂಜೆ ಓಡಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಈ ಸಂದರ್ಭದಲ್ಲಿ ಗ್ರಾಮದ ಕೆರೆಯ ಬಳಿ ವೃದ್ಧೆ ಶಿವಮ್ಮ ಮೇಲೆ ಕಾಡಾನೆಗಳು ದಾಳಿ ನಡೆಸಿ ಹೋಗಿವೆ.

    ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದ ಕೆರೆಯ ಬಳಿ ಶಿವಮ್ಮ ಅವರ ಶವ ಪತ್ತೆಯಾಗಿದೆ. ಘಟನೆ ನಡೆದು ಸಾಕಷ್ಟು ಸಮಯವಾದರೂ ಅರಣ್ಯಾಧಿಕಾರಿಗಳು ಇತ್ತ ತಲೆ ಹಾಕದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಎಚ್ಚೆತ್ತ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ವೃದ್ಧೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv