Tag: villagers

  • ಗ್ರಾಮಸ್ಥರಿಗೆ 2ಲಕ್ಷ ಆಮಿಷ- ರೊಚ್ಚಿಗೆದ್ದವರ ಲಕ್ಷ್ಯ ತಪ್ಪಿಸಲು ಭಾರತ ಮಾತೆಗೆ ಜೈ ಅಂತ ಕಾರು ಏರಿ ಹೊರಟೇ ಬಿಟ್ಟ ಸಂತೋಷ್ ಲಾಡ್!

    ಗ್ರಾಮಸ್ಥರಿಗೆ 2ಲಕ್ಷ ಆಮಿಷ- ರೊಚ್ಚಿಗೆದ್ದವರ ಲಕ್ಷ್ಯ ತಪ್ಪಿಸಲು ಭಾರತ ಮಾತೆಗೆ ಜೈ ಅಂತ ಕಾರು ಏರಿ ಹೊರಟೇ ಬಿಟ್ಟ ಸಂತೋಷ್ ಲಾಡ್!

    ಧಾರವಾಡ: ಚುನಾವಣಾ ಪ್ರಚಾರಕ್ಕೆಂದು ಕಲಘಟಗಿ ತಾಲೂಕಿನ ಸಲಕಿನಕೊಪ್ಪ ಗ್ರಾಮಕ್ಕೆ ತೆರಳಿದ್ದ ವೇಳೆ ಸಾರ್ವಜನಿಕರೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಘೇರಾವ್ ಹಾಕಿದ ಘಟನೆ ನಡೆದಿದೆ.


    ಅಭಿವೃದ್ಧಿ ಕಾರ್ಯ ಮಾಡದ ಸಂತೋಷ್ ಲಾಡ್ ಅವರನ್ನು ಸಾರ್ವಜನಿಕರು ಲೆಫ್ಟ್ ರೈಟ್ ತರಾಟೆಗೆ ತೆಗೆದುಕೊಂಡಿದ್ದಾರೆ. 10 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗರಡಿ ಮನೆ ವಿಚಾರವಾಗಿ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದಲ್ಲಿ ನಡೆದ ಕೆಲ ಅಭಿವೃದ್ಧಿ ಕಾಮಗಾರಿಗಳೂ ಕಳಪೆಯಾಗಿದ್ದು, ಗ್ರಾಮಸ್ಥರ ಪ್ರಶ್ನೆಗೆ ಲಾಡ್ ಕಂಗಾಲಾಗಿದ್ದಾರೆ. ಈ ವೇಳೆ ಲಾಡ್ ಅವರು ಗ್ರಾಮಸ್ಥರಿಗೆ ಎರಡು ಲಕ್ಷ ರೂಪಾಯಿಯ ಆಮಿಷ ಒಡ್ಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ರಾಜಾರೋಷವಾಗಿ ಆಮಿಷ ಒಡ್ಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಲಾಡ್ ಅವರನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡರು. ಇದರಿಂದ ಕಕ್ಕಾಬಿಕ್ಕಿಯಾದ ಕಾರ್ಮಿಕ ಸಚಿವ ಜನರ ಲಕ್ಷ್ಯ ತಪ್ಪಿಸಲು ಭಾರತ ಮಾತೆಗೆ ಜೈ ಎಂದು ಕಾರು ಏರಿ ಅಲ್ಲಿಂದ ಕಾಲ್ಕಿತ್ತರು.

  • ಊರಿನ ಅಭಿವೃದ್ಧಿಗೆ ಏನ್ ಮಾಡಿದ್ದೀರಾ.. ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಗ್ರಾಮಸ್ಥರ ಮೇಲೆ ಹಲ್ಲೆ!

    ಊರಿನ ಅಭಿವೃದ್ಧಿಗೆ ಏನ್ ಮಾಡಿದ್ದೀರಾ.. ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಗ್ರಾಮಸ್ಥರ ಮೇಲೆ ಹಲ್ಲೆ!

    ಚಾಮರಾಜನಗರ: ಮತ ಕೇಳಲು ಬಂದ ಕಾಂಗ್ರೆಸ್ ಅಭ್ಯರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಚಾಮರಾಜನಗರದ ಜಿಲ್ಲೆಯ ಹನೂರು ಕ್ಷೇತ್ರದ ಕೌದಳ್ಳಿಯಲ್ಲಿ ನಡೆದಿದೆ.

    ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಬೆಂಬಲಿಗರು ಗ್ರಾಮಕ್ಕೆ ಮತ ಕೇಳಲು ಬಂದಿದ್ದರು. ಈ ವೇಳೆ ಗ್ರಾಮಸ್ಥರು, ಅಭಿವೃದ್ಧಿ ಮಾಡದೇ ಮತ ಕೇಳಲು ಬಂದಿದ್ದೀರಾ ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಕುಪಿತಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

    ಚುನಾವಣೆ ಬಂದಾಗ ಮಾತ್ರ ಬರ್ತೀರಾ ಬೇರೆ ದಿನ ಎಲ್ಲಿಗೆ ಹೋಗಿರುತ್ತೀರಾ. ಗ್ರಾಮದ ಅಭಿವೃದ್ಧಿಗೆ ಏನು ಮಾಡಿದ್ದೀರಾ? ನಾವು ಯಾಕೆ ಮತ ಹಾಕಬೇಕು? ಅಂತ ಗ್ರಾಮಸ್ಥರು ಶಾಸಕನ ಬೆಂಬಲಿಗರಿಗೆ ಪ್ರಶ್ನೆ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಹೋದಲ್ಲೆಲ್ಲಾ ಪ್ರಶ್ನೆಗಳನ್ನು ಕೇಳುವ ಮೂಲಕ ಗ್ರಾಮ ಪ್ರವೇಶಿಸಲು ಬಿಡಲಿಲ್ಲ. ಇದರಿಂದ ಕುಪಿತಗೊಂಡ ಶಾಸಕನ ಬೆಂಬಲಿಗರು ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಗ್ರಾಮಸ್ಥರು ಬೆಂಬಲಿಗರ ಕಾರಿನ ಮೇಲೆ ಕಲ್ಲು ಎಸೆಯುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

  • 10 ವರ್ಷ ಆಯ್ತು, ಗ್ರಾಮದಲ್ಲಿ ಏನೂ ಆಗಿಲ್ಲ- ಪ್ರಚಾರಕ್ಕೆ ಬಂದ ಸಚಿವರನ್ನ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    10 ವರ್ಷ ಆಯ್ತು, ಗ್ರಾಮದಲ್ಲಿ ಏನೂ ಆಗಿಲ್ಲ- ಪ್ರಚಾರಕ್ಕೆ ಬಂದ ಸಚಿವರನ್ನ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಹಾಸನ: 10 ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಆದರೆ ಈಗ ಮತ ಪ್ರಚಾರಕ್ಕೆ ನೀವು ಬಂದಿದ್ದೀರ ಎಂದು ಸಚಿವ ಎ.ಮಂಜು ಅವರಿಗೆ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

    ಸಚಿವ ಎ.ಮಂಜು ಅರಕಲಗೂಡು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಕೂಡ ಅವರಿಗೆ ಕ್ಷೇತ್ರದ ಟಿಕೆಟ್ ಸಿಕ್ಕಿದ್ದು, ಚುನಾವಣೆ ಪ್ರಚಾರಕ್ಕಾಗಿ ಕಳೆದ ರಾತ್ರಿ ಗ್ರಾಮಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಕೃಷಿ ಜಮೀನು ನೀಡುವಲ್ಲಿ ನಮಗೆ ಕಡೆಗಣಿಸಿದ್ದೀರಿ, ಈಗ ವೋಟು ಕೇಳೋದಕ್ಕೆ ಬಂದಿದ್ದೀರ ಎಂದು ಗ್ರಾಮಸ್ಥರು ತರಾಟೆ ತೆಗೆದುಕೊಂಡರು.

    ಈ ಸಂದರ್ಭದಲ್ಲಿ ಸಮರ್ಥನೆಗೆ ಮುಂದಾದ ಸಚಿವರ ಮಾತನ್ನು ಗ್ರಾಮಸ್ಥರು ಕೇಳಲಿಲ್ಲ, ರಸ್ತೆ ಅಭಿವೃದ್ಧಿ ಮಾಡಿದ್ದೇನೆ ಅದೂ ಇದೂ ಅನ್ನುವುದಕ್ಕೆ ಮುಂದಾದ್ರು. ಆದರೆ ಗ್ರಾಮಸ್ಥರು ಮಾತ್ರ ಅವರ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸಚಿವರೊಂದಿಗೆ ಇದ್ದ ಬೆಂಬಲಿಗರು ಸಹ ವಾದಿಸಲು ಮುಂದಾದ್ದರು. ಆದರೂ ಸಹ ಪ್ರಯೋಜನ ಆಗಲಿಲ್ಲ. ಗ್ರಾಮಸ್ಥರ ಆಕ್ರೋಶವನ್ನು ಕಂಡು ವಿಧಿಯಿಲ್ಲದೇ ಸಚಿವರು ಅಲ್ಲಿಂದ ವಾಪಸಾದ್ರು.

    ಎ. ಮಂಜು ಅರಕಲಗೂಡು ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ವಿರುದ್ಧ ಜಯ ಸಾಧಿಸಿದ್ರು. 2008 ಮತ್ತು 1999ರ ಚುನಾವಣೆಗಳಲ್ಲಿ ಜಯ ಸಾಧಿಸಿದ್ದರು.

    https://www.youtube.com/watch?v=-0eW63YGmCo

  • ಜೆಡಿಎಸ್ ಪರ ಪ್ರಚಾರ ಮಾಡಲು ಬಂದಿದ್ದ ಮಾಜಿ ಸಚಿವರನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು!

    ಜೆಡಿಎಸ್ ಪರ ಪ್ರಚಾರ ಮಾಡಲು ಬಂದಿದ್ದ ಮಾಜಿ ಸಚಿವರನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು!

    ಮಂಡ್ಯ: ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಚಿವ ವಿಶ್ವನಾಥ್ ಅವರಿಗೆ ಪ್ರಚಾರ ಮಾಡುವುದಕ್ಕೆ ಅಡ್ಡಿ ಪಡಿಸಿ ಗ್ರಾಮದಿಂದ ವಾಪಸ್ ಕಳುಹಿಸಿರುವ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 12 ರಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಅನ್ನದಾನಿ ಪರವಾಗಿ ಪ್ರಚಾರ ಕೈಗೊಂಡಿದ್ದ ಹೆಚ್ ವಿಶ್ವನಾಥ್, ತಾಲೂಕಿನ ಮಂಚನಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನು ಅಡ್ಡ ಹಾಕಿದ ಗ್ರಾಮಸ್ಥರು, ಗ್ರಾಮದ ಒಳಗಡೆ ಬರಲು ಬಿಡದೆ ವಾಪಸ್ ಕಳುಹಿಸಿದ್ದಾರೆ.

    ಆದ್ರೆ ವಿಶ್ವನಾಥ್ ಅವರನ್ನು ಯಾವ ಕಾರಣಕ್ಕೆ ಪ್ರಚಾರ ಮಾಡಲು ಬಿಡದೆ ವಾಪಸ್ ಕಳುಹಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರ ಮಾತಿಗೆ ಮರು ಮಾತನಾಡದ ಹೆಚ್ ವಿಶ್ವನಾಥ್ ಅಲ್ಲಿಂದ ಕಾರ್ ಹತ್ತಿ ವಾಪಸ್ ಹೋಗಿದ್ದಾರೆ ಎನ್ನಲಾಗಿದೆ.

    ವಿಶ್ವನಾಥ್ ಕಾರ್ ಹತ್ತುತ್ತಿದ್ದಂತೆ ಶಾಸಕ ನರೇಂದ್ರಸ್ವಾಮಿ ಪರವಾಗಿ ಕೆಲವು ಯುವಕರು ಘೋಷಣೆ ಕೂಗುತ್ತಾರೆ. ಇದನ್ನ ನೋಡಿದ ಅಭ್ಯರ್ಥಿ ಅನ್ನದಾನಿ ಬೆಂಬಲಿಗರೂ ಸಹ ಹೆಚ್ ವಿಶ್ವನಾಥ್ ಗೆ ಜೈ ಕಾರ ಹಾಕುತ್ತಾರೆ. ಈ ನಡುವೆ ಸ್ಥಳದಲ್ಲಿದ್ದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಈಗ ಈ ವಿಡಿಯೋ ವಾಟ್ಸಪ್ ಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗ ಲಭಿಸಿದೆ.

  • ಕಳ್ಳತನ ಮಾಡಿದ್ದ ದನಗಳನ್ನ ಸಾಗಿಸುತ್ತಿದ್ದ ಕಾರುಗಳನ್ನು ಪುಡಿಪುಡಿ ಮಾಡಿದ ಗ್ರಾಮಸ್ಥರು

    ಕಳ್ಳತನ ಮಾಡಿದ್ದ ದನಗಳನ್ನ ಸಾಗಿಸುತ್ತಿದ್ದ ಕಾರುಗಳನ್ನು ಪುಡಿಪುಡಿ ಮಾಡಿದ ಗ್ರಾಮಸ್ಥರು

    ಶಿವಮೊಗ್ಗ: ದನಗಳನ್ನು ಕದ್ದು ಸಾಗಿಸುತ್ತಿದ್ದ ಮೂರು ಕಾರುಗಳನ್ನು ಗ್ರಾಮಸ್ಥರು ಪುಡಿಪುಡಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬ್ಯಾಕೋಡು ಬಳಿ ನಡೆದಿದೆ.

    ರಸ್ತೆ ಬದಿ ಮೇಯುತ್ತಿದ್ದ ಐದು ದನಗಳನ್ನು ಇನ್ನೋವಾ, ಝೈಲೋ ಕಾರುಗಳಲ್ಲಿ ತುಂಬಿಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಹಾರಿಗೆ ಗ್ರಾಮದ ಬಳಿ ಕಾರನ್ನು ತಡೆದಿದ್ದಾರೆ. ಆಕ್ರೋಶಗೊಂಡಿದ್ದ ಗ್ರಾಮಸ್ಥರು ಎರಡೂ ಕಾರುಗಳನ್ನು ಪುಡಿಪುಡಿ ಮಾಡಿದ್ದಾರೆ.

    ಗ್ರಾಮಸ್ಥರ ಆಕ್ರೋಶಕ್ಕೆ ಬೆದರಿದ ದನಗಳ್ಳರು ತಕ್ಷಣವೇ ದನಗಳು ಇದ್ದ ಕಾರನ್ನು ಬಿಟ್ಟು ಹಿಂದಿನಿಂದ ಬಂದ ಇನ್ನೊಂದು ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಇವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಹಾಗೂ ಗ್ರಾಮಸ್ಥರು ಈ ತಂಡವನ್ನು ಕೊಲ್ಲೂರು ಬಳಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಪ್ರಕರಣ ದಾಖಲಿಸದೆ ಆರೋಪಿಗಳನ್ನು ಬಿಟ್ಟು ಕಳಿಸುತ್ತಾರೆ ಎಂಬ ಗುಮಾನಿಯಿಂದ ರಾತ್ರಿ ಬ್ಯಾಕೋಡು ಪೊಲೀಸ್ ಔಟ್ ಪೋಸ್ಟ್ ಬಳಿ ಸುತ್ತಮುತ್ತಲ ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ನಂತರ ಆರೋಪಿಗಳನ್ನು ಕಾರ್ಗಲ್ ಠಾಣೆಗೆ ಕರೆದೊಯ್ದು, ಪ್ರಕರಣ ದಾಖಲಿಸಲಾಗಿದೆ.

  • ವಿಡಿಯೋ: ಅನಕೊಂಡಾಗೆ ಬಲಿಯಾಗ್ತಿದ್ದ ನಾಯಿಯನ್ನ ರಕ್ಷಣೆ ಮಾಡಿದ ಗ್ರಾಮಸ್ಥರು

    ವಿಡಿಯೋ: ಅನಕೊಂಡಾಗೆ ಬಲಿಯಾಗ್ತಿದ್ದ ನಾಯಿಯನ್ನ ರಕ್ಷಣೆ ಮಾಡಿದ ಗ್ರಾಮಸ್ಥರು

    ಬ್ರೆಜಿಲಿಯಾ: ಅನಕೊಂಡಾ ಹಾವಿಗೆ ಆಹಾರವಾಗಿಬಿಡುತ್ತಿದ್ದ ನಾಯಿಯನ್ನ ಗ್ರಾಮಸ್ಥರು ರಕ್ಷಣೆ ಮಾಡಿರುವ ಘಟನೆ ಬ್ರೆಜಿಲ್‍ನಲ್ಲಿ ನಡೆದಿದ್ದು, ಇದರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ವಿಡಿಯೋದ ಆರಂಭದಲ್ಲಿ ನದಿ ತೀರದಲ್ಲಿ ನಾಯಿಯನ್ನ ಸುತ್ತುವರಿದಿದ್ದ ದೈತ್ಯ ಅನಕೊಂಡಾವನ್ನ ಕಾಣಬಹುದು. ನಂತರ ಇಬ್ಬರು ಅಲ್ಲಿಗೆ ಬಂದು ಹಾವಿನ ಬಾಲ ಹಿಡಿದು ನೀರಿನಿಂದ ಹೊರಗೆಳೆದು ಹುಲ್ಲಿಗೆ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಮತ್ತೊಬ್ಬ ವ್ಯಕ್ತಿ ಸೇರ್ಪಡೆಗೊಂಡು ಎಲ್ಲರೂ ಸೇರಿ ನಾಯಿಯನ್ನ ಹಾವಿನ ಹಿಡಿತದಿಂದ ಬಿಡಿಸಲು ಯತ್ನಿಸಿದ್ದಾರೆ.

    ಅವರಲ್ಲೊಬ್ಬ ವ್ಯಕ್ತಿ ಕೋಲಿನಿಂದ ಹಾವಿಗೆ ಹೊಡೆದಿದ್ದು, ಎರಡು ಮೂರು ಏಟು ತಿಂದ ಬಳಿಕ ಹಾವಿನ ಹಿಡಿತ ಸಡಿಲವಾಗಿ, ನಾಯಿ ಅದರಿಂದ ಬಿಡಿಸಿಕೊಂಡು ಬಂದು ಹಾವಿನ ಕಡೆ ಬೊಗಳಲು ಶುರು ಮಾಡಿದೆ.

    ಆಂಡ್ರೀವ್ ಬರೋ ಎಂಬವರು ಇದರ ವಿಡಿಯೋವನ್ನ ಹಂಚಿಕೊಂಡಿದ್ದಾರೆ. ನಾಯಿ ಜಮೀನಿನಿಂದ ಕಾಣೆಯಾಗಿತ್ತು. ಅದಕ್ಕಾಗಿ ಹುಡುಕಾಟ ನಡೆಸಿದಾಗ ಅನಕೊಂಡಾಗೆ ಆಹಾರವಾಗಿಬಿಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಅವರು ಹೇಳಿದ್ದಾರೆ.

    ನಂತರ ಗ್ರಮಸ್ಥರು ಕೂಡಲೇ ಕಾರ್ಯಪ್ರವೃತ್ತರಾಗಿ ಅನಕೊಂಡಾದಿಂದ ಇನ್ನೇನು ಕೊಲ್ಲಲ್ಪಡುತ್ತಿದ್ದ ನಾಯಿಯ ರಕ್ಷಣೆಗೆ ಮುಂದಾದರು ಎಂದು ತಿಳಿಸಿದ್ದಾರೆ.

    https://www.youtube.com/watch?v=3x7qvzKIc7g

  • ಚಿಕ್ಕಬಳ್ಳಾಪುರದಲ್ಲಿ 1.2 ತೀವ್ರತೆಯ ಭೂಕಂಪನ- ಮನೆಯಲ್ಲಿನ ಪಾತ್ರೆಗಳು ಚೆಲ್ಲಾಪಿಲ್ಲಿ

    ಚಿಕ್ಕಬಳ್ಳಾಪುರದಲ್ಲಿ 1.2 ತೀವ್ರತೆಯ ಭೂಕಂಪನ- ಮನೆಯಲ್ಲಿನ ಪಾತ್ರೆಗಳು ಚೆಲ್ಲಾಪಿಲ್ಲಿ

    ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹಲವು ಹಳ್ಳಿಗಳಲ್ಲಿ ಭೂಕಂಪನವಾಗಿದೆ.

    ಆಂಧ್ರದ ಗಡಿಗೆ ಹೊಂದಿಕೊಂಡಿರುವ ಐವಾರಪಲ್ಲಿ, ಲಘು ಮದ್ದೇಪಲ್ಲಿ, ಚಿಕ್ಕ ತಿಮ್ಮನಹಳ್ಳಿ, ಪಾಕು ಪಟ್ಲಪಲ್ಲಿ ಸೇರಿದಂತೆ ತುಮಕೇಪಲ್ಲಿ ಹಾಗೂ ಹತ್ತು ಹಲವು ಹಳ್ಳಿಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ.

    ಎರಡು ಬಾರಿ 5-6 ಸೆಕೆಂಡ್‍ಗಳ ಕಾಲ ಭೂಮಿ ಕಂಪಿಸಿದ್ದು, ಮನೆಗಳಲ್ಲಿನ ಪಾತ್ರೆ ಸಾಮಾನುಗಳು ಕೆಳಗೆ ಬಿದ್ದಿವೆ. ಈ ವೇಳೆ ಕರ್ಕಶ ಶಬ್ಧ ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ರಾತ್ರಿಯಿಡೀ ಗ್ರಾಮಸ್ಥರು ಭಯದಲ್ಲೇ ಕಾಲ ಕಳೆದು ನಿದ್ದೆಗೆಟ್ಟಿದ್ದಾರೆ.

    ಭೂಮಿ ನಡುಗಿದ ಅನುಭವದಿಂದಾಗಿ ರಸ್ತೆ ಬದಿಯಲ್ಲಿಯೇ ಜನ ಕಾಲ ಕಳೆದಿದ್ದಾರೆ. ಆದರೆ ಭೂಕಂಪನದಿಂದ ಯಾವುದೇ ಅವಘಡ ಸಂಭವಿಸಿಲ್ಲ. ಭೂಕಂಪನವಾದ ಗ್ರಾಮಗಳಿಗೆ ತಹಶೀಲ್ದಾರ್ ಮಹಮದ್ ಅಸ್ಲಾಂ ಹಾಗೂ ಬಾಗೇಪಲ್ಲಿ ವೃತ್ತ ನಿರೀಕ್ಷಕ ಗೋವಿಂದರಾಜು ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.

    ಭೂಕಂಪನ ಆಗಿರುವುದು ಅಧಿಕೃತವಾಗಿ ದೃಢಪಟ್ಟಿದೆ. ರೆಕ್ಟರ್ ಮಾಪನದಲ್ಲಿ ಪರಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಇದರ ಪ್ರಮಾಣ 1.2 ರಷ್ಟು ತೀವ್ರತೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ತಹಶೀಲ್ದಾರ್ ಮಹಮದ್ ಅಸ್ಲಾಂ ಸ್ಪಷ್ಟಪಡಿಸಿದ್ದಾರೆ.

  • ಬೈಕಿಗೆ ಹೆಚ್ಚು ಸದ್ದು ಬರೋ ಸೈಲೆನ್ಸರ್- ಪ್ರಶ್ನಿಸಿದ್ದಕ್ಕೆ ಸ್ನೇಹಿತರ ಜೊತೆ ದಾಂಧಲೆ ನಡೆಸಲು ಹೋಗಿ ಗ್ರಾಮಸ್ಥರಿಂದ ಥಳಿಸಿಕೊಂಡ ಯುವಕ

    ಬೈಕಿಗೆ ಹೆಚ್ಚು ಸದ್ದು ಬರೋ ಸೈಲೆನ್ಸರ್- ಪ್ರಶ್ನಿಸಿದ್ದಕ್ಕೆ ಸ್ನೇಹಿತರ ಜೊತೆ ದಾಂಧಲೆ ನಡೆಸಲು ಹೋಗಿ ಗ್ರಾಮಸ್ಥರಿಂದ ಥಳಿಸಿಕೊಂಡ ಯುವಕ

    ಬೆಂಗಳೂರು: ಬೈಕ್ ಗೆ ಹೆಚ್ಚು ಸದ್ದು ಬರುವಂತಹ ಸೈಲೆನ್ಸರ್ ಹಾಕಿಕೊಂಡಿದ್ದ ಯುವಕರನ್ನು ಗ್ರಾಮಸ್ಥರು ಪ್ರಶ್ನಿಸಿದ್ದಕ್ಕೆ ಅಕ್ರೋಶಗೊಂಡ ಯುವಕ ತನ್ನ ಸ್ನೇಹಿತರನ್ನು ಕರೆತಂದು ದಾಂಧಲೆ ನಡೆಸಲು ಹೋಗಿ ಗ್ರಾಮಸ್ಥರಿಂದ ಹಿಗ್ಗಾಮುಗ್ಗ ಥಳಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬೆಟ್ಟೆನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಯಲಹಂಕದ ಶೇಷಾದ್ರಿಪುರಂ ಕಾಲೇಜಿನಲ್ಲಿ ಓದುತ್ತಿದ್ದವರುವ ಹರೀಶ್ ಮತ್ತು ಹೇಮಂತ್ ಎಂಬ ಯುವಕರು ತಮ್ಮ ಬೈಕ್ ಗೆ ಹೆಚ್ಚು ಶಬ್ದ ಬರುವ ಸೈಲೆನ್ಸರ್ ಅಳವಡಿಸಿಕೊಂಡು ಬಂದು ಗ್ರಾಮದಲ್ಲಿ ಸುತ್ತಾಡುವಾಗ ಗ್ರಾಮಸ್ಥರು ಬೈದು ಕಳುಹಿಸಿದ್ದರು. ಇದ್ರಿಂದ ಅಕ್ರೋಶಗೊಂಡ ಹರೀಶ್ ಹಾಗೂ ಹೇಮಂತ್, ತಮ್ಮ ಕಾಲೇಜಿನ 20 ಯುವಕರೊಂದಿಗೆ ಬೆಟ್ಟೇನಹಳ್ಳಿ ಗ್ರಾಮಕ್ಕೆ ತೆರಳಿ ವಿಕೆಟ್, ಬ್ಯಾಟ್, ಲಾಂಗ್ ತೆಗೆದುಕೊಂಡು ಗಲಾಟೆ ಮಾಡಲು ಮುಂದಾಗಿದ್ದರು.

    ಈ ವೇಳೆ ಗ್ರಾಮಸ್ಥರು ಇಬ್ಬರು ಯುವಕರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹರೀಶ್ ಮತ್ತು ಹೇಮಂತ್ ನ ತಂದೆ ಹಾಗೂ ಅಜ್ಜನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

  • ನೀವು ಬೇಡ, ನಿಮ್ಮ ಎಂಜಿನಿಯರ್ ಮಗಳು ಬೇಕು – ಮೈ ಮೇಲೆ ದೇವರು ಬಂದಿದೆ ಎಂದು ಡೋಂಗಿ ಬಾಬಾನ ಡ್ರಾಮಾ

    ನೀವು ಬೇಡ, ನಿಮ್ಮ ಎಂಜಿನಿಯರ್ ಮಗಳು ಬೇಕು – ಮೈ ಮೇಲೆ ದೇವರು ಬಂದಿದೆ ಎಂದು ಡೋಂಗಿ ಬಾಬಾನ ಡ್ರಾಮಾ

    ಚಿತ್ರದುರ್ಗ: ನನ್ನ ಮೇಲೆ ದೇವರು ಬಂದಿದ್ದಾನೆ. ನಿಮ್ಮ ಎಂಜಿನಿಯರ್ ಮಗಳನ್ನು ಕೇಳುತ್ತೆ ಎಂದು ಹೇಳಿದ ಡೋಂಗಿ ಬಾಬಾನಿಗೆ ಜನರು ಥಳಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಂಚೀಪುರ ಗ್ರಾಮದಲ್ಲಿ ನಡೆದಿದೆ.

    ಕಂಚೀಪುರ ಗ್ರಾಮದ ಲೋಕೇಶ್ ಥಳಿತಕ್ಕೊಳಗಾದ ಡೋಂಗಿ ದೇವಮಾನವ. ಅರಸೀಕೆರೆ ನಿವಾಸಿ ಟೀಚರ್ ದಂಪತಿಗೆ ದೇವಮಾನವನಿಂದ ಕಿರುಕುಳದ ಆರೋಪ ಕೇಳಿಬಂದಿದ್ದು, ಸದ್ಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನನ್ನ ಮೇಲೆ ಬರುವ ದೇವರು ಎಂಜಿನಿಯರ್ ಹುಡುಗಿಯರನ್ನೇ ಕೇಳುತ್ತೆ. ನೀವು ನಿಮ್ಮ ಮಗಳನ್ನು ಕೊಡಲಿಲ್ಲ ಎಂದರೆ ನಿಮಗೆ ತೊಂದರೆ ಆಗುತ್ತದೆ ಎಂದು ಡೋಂಗಿ ಬಾಬಾ ಡೈಲಾಗ್ ಹೊಡೆದಿದ್ದಾನೆ. ಪೂಜೆ ಮಾಡಿಕೊಡುವ ನೆಪದಲ್ಲಿ ಶಿಕ್ಷಕ ದಂಪತಿಗೆ ತನ್ನ ಮಗಳನ್ನು ಕೊಡುವಂತೆ ದೇವರು ಒತ್ತಾಯ ಮಾಡ್ತಾನೆ ಎಂದು ಹೇಳಿದ್ದಾನೆ.

    ದೇವಮಾನವ ಎಂದು ಮರ್ಯಾದೆ ಕೊಟ್ಟು ಮನೆ ಒಳಗೆ ಸೇರಿಸಿದ್ದರೆ ಮಗಳನ್ನೇ ಕೇಳಿದ್ದನ್ನು ನೋಡಿದ ಗ್ರಾಮಸ್ಥರು ಆಕ್ರೋಶಗೊಂಡು ಡೋಂಗಿ ಬಾಬಾನನ್ನು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

  • ಕೈಗೆಟುಕುವ ರೀತಿಯಲ್ಲಿ ಜೋತು ಬಿದ್ದ ವಿದ್ಯುತ್ ತಂತಿ- ಆತಂಕದಲ್ಲಿ ಗ್ರಾಮಸ್ಥರು

    ಕೈಗೆಟುಕುವ ರೀತಿಯಲ್ಲಿ ಜೋತು ಬಿದ್ದ ವಿದ್ಯುತ್ ತಂತಿ- ಆತಂಕದಲ್ಲಿ ಗ್ರಾಮಸ್ಥರು

    ಬೆಂಗಳೂರು: ನಗರದ ಹೊರವಲಯದ ನೆಲಮಂಗಲ ನಿವಾಸಿಗಳು ಪ್ರತಿನಿತ್ಯ ಜೀವ ಕೈಯಲ್ಲಿ ಹಿಡಿದು ಪರಿತಪಿಸುವಂತಾಗಿದೆ.

    ತಾಲೂಕಿನ ಚಿಕ್ಕಮಾರನಹಳ್ಳಿ ಗ್ರಾಮದಲ್ಲಿ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ತಂತಿ, ಕಳೆದ ಒಂದು ವರ್ಷದಿಂದ ಕೈಗೆಟುಕುವ ರೀತಿಯಲ್ಲಿ ಜೋತು ಬಿದ್ದಿದೆ. ಮನೆಯ ಮುಂಭಾಗದಲ್ಲೇ ವಿದ್ಯುತ್ ತಂತಿ ಹಾಯ್ದು ಹೋಗಿದ್ದು, ರೈತರು ತಮ್ಮ ಮನೆಯಿಂದ ಜಮೀನಿಗೆ ಹೋಗಬೇಕಾದರೆ ಇದರ ಕೆಳ ಭಾಗದಲ್ಲೇ ಹೋಗಬೇಕಾಗಿದೆ.

    ಈಗಾಗಲೇ ಇಲ್ಲಿನ ರೈತರು ಹಾಗೂ ಗ್ರಾಮಸ್ಥರು ವಿದ್ಯುತ್ ತಂತಿ ತಗುಲಿ ಅನೇಕ ಬಾರಿ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾರೆ. ವಿದ್ಯುತ್ ತಂತಿಗಳ ದುರಸ್ಥಿ ಕಾರ್ಯ ಮಾಡುವಂತೆ, ನೆಲಮಂಗಲ ಬೆಸ್ಕಾಂ ಕಚೇರಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ.

    ಇನ್ನು ಈ ವಿಚಾರದಲ್ಲಿ ಲೈನ್ ಮ್ಯಾನ್‍ಗಳಿಗೆ ತಿಳಿಸಿದರೆ ಬಾಯಿಗೆ ಬಂದ ಹಾಗೆ ಹಣ ಕೇಳುತಿದ್ದು, ಹಣ ಕೊಡಲಾಗದೇ ಇತ್ತ ಭಯದಲ್ಲಿ ಇಡೀ ಗ್ರಾಮವೇ ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ಪ್ರತಿನಿತ್ಯ ಹಿಡಿ ಶಾಪ ಹಾಕುತ್ತಿದ್ದಾರೆ.