Tag: Vinai Kumar Saxena

  • ದೆಹಲಿ ಬಳಿಕ ಕರ್ನಾಟಕದಲ್ಲೂ ಆಪ್ `ಟಿಕೆಟ್ ಫಾರ್ ಸೇಲ್’ – ಸುಕೇಶ್ ಚಂದ್ರಶೇಖರ್ ಗಂಭೀರ ಆರೋಪ

    ದೆಹಲಿ ಬಳಿಕ ಕರ್ನಾಟಕದಲ್ಲೂ ಆಪ್ `ಟಿಕೆಟ್ ಫಾರ್ ಸೇಲ್’ – ಸುಕೇಶ್ ಚಂದ್ರಶೇಖರ್ ಗಂಭೀರ ಆರೋಪ

    ನವದೆಹಲಿ: ದೆಹಲಿ ನಗರಪಾಲಿಕೆ ಚುನಾವಣೆಯಲ್ಲಿ (MCD Election) ಟಿಕೆಟ್ ಮಾರಾಟ ಮಾಡಿರುವ ಆರೋಪದ ಬೆನ್ನಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ (Karnataka Election 2023) ಟಿಕೆಟ್ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ.

    200 ಕೋಟಿ ಸುಲಿಗೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಕರ್ನಾಟಕ ಮೂಲದ ಸುಕೇಶ್ ಚಂದ್ರಶೇಖರ್ (Sukesh Chandrasekhar) ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾನೆ. ಇದನ್ನೂ ಓದಿ: ʼಸರ್‌ʼ, ʼಮೇಡಂʼ ಅನ್ನುವಂತಿಲ್ಲ.. ʼಟೀಚರ್‌ʼ ಎನ್ನಬೇಕು – ಕೇರಳ ಮಕ್ಕಳ ಹಕ್ಕುಗಳ ಆಯೋಗ

    ಈ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ ಕುಮಾರ್ ಸಕ್ಸೇನಾಗೆ (Vinai Kumar Saxena) ಪತ್ರ ಬರೆದಿದ್ದು, ತನ್ನ ವಕೀಲರ ಮೂಲಕ ಪತ್ರ ರವಾನಿಸಿರುವ ಸುಕೇಶ್, ಆಮ್ ಅದ್ಮಿ ಸರ್ಕಾರದಲ್ಲಿನ ಭ್ರಷ್ಟಾಚಾರದ ಸಾಕ್ಷ್ಯಗಳನ್ನು ನನ್ನ ಬಳಿ ಇವೆ. ಅವುಗಳನ್ನು ವಾಪಸ್ ನೀಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹಾಗೂ ತಿಹಾರ್ ಜೈಲಿನಲ್ಲಿರುವ ಸಚಿವ ಸತ್ಯೇಂದ್ರ ಜೈನ್ ಜೈಲು ಅಧಿಕಾರಿಗಳ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ಡಿಸೆಂಬರ್ 31 ರಂದು ಜೈಲು ಅಧಿಕಾರಿ ರಾಜ್‌ಕುಮಾರ್ ಮೂಲಕ ಆಮಿಷವೊಡ್ಡಲಾಗಿದ್ದು, ಸರ್ಕಾರದ ವಿರುದ್ಧದ ಸಾಕ್ಷ್ಯಗಳನ್ನು ನೀಡಿದ್ದಲ್ಲಿ ಅದರ ಬದಲಾಗಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಪ್ (AAP) ಟಿಕೆಟ್ ಮಾರಾಟಕ್ಕೆ ಜವಬ್ದಾರಿ ನೀಡಲಾಗುವುದು ಮತ್ತು ಪಂಜಾಬ್ ನಲ್ಲಿ ಮರುಳು ಗಣಿಗಾರಿಕೆಗೆ ಗುತ್ತಿಗೆ ನೀಡುವ ಭರವಸೆ ನೀಡಲಾಗಿದೆ. ಒಂದು ವೇಳೆ ಇದಕ್ಕೆ ಒಪ್ಪಿಗೆ ನೀಡದಿದ್ದಲ್ಲಿ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಬ್ಲಾಕ್‌ಮೇಲ್ ಸಹ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾನೆ.

    ದೆಹಲಿ ಕಾರ್ಪೊರೇಷನ್ ಚುನಾವಣೆ ವೇಳೆಯೂ ಆಪ್ ಅಭ್ಯರ್ಥಿಗಳಿಗೆ ಟಿಕೆಟ್ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿಲಾಗಿತ್ತು. ರಹಸ್ಯ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ಬಿಜೆಪಿ ನಾಯಕರು ಟಿಕೆಟ್ ಫಾರ್ ಸೇಲ್ ಎಂದು ಅರವಿಂದ್ ಕೇಜ್ರಿವಾಲ್ ಅವರನ್ನ ಕುಟುಕಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ – 10 ದಿನದಲ್ಲಿ 163 ಕೋಟಿ ವಾಪಸ್ ಕೊಡಿ AAPಗೆ ನೋಟಿಸ್

    ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ – 10 ದಿನದಲ್ಲಿ 163 ಕೋಟಿ ವಾಪಸ್ ಕೊಡಿ AAPಗೆ ನೋಟಿಸ್

    ನವದೆಹಲಿ: ಸರ್ಕಾರಿ ಜಾಹೀರಾತು ಪ್ರಸಾರ ಮಾಡುವ ನೆಪದಲ್ಲಿ ರಾಜಕೀಯ ಜಾಹೀರಾತುಗಳನ್ನ (Political Advertisements) ಪ್ರಸಾರ ಮಾಡಲು ಆಮ್ ಆದ್ಮಿ ಪಕ್ಷವು (AAP) 163.62 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದೆ. ಆ ಮೊತ್ತವನ್ನು ಹಿಂದಿರುಗಿಸುವಂತೆ ದೆಹಲಿ ಸರ್ಕಾರ (Delhi Government) ನೋಟಿಸ್ ಜಾರಿಗೊಳಿಸಿದೆ.

    ದೆಹಲಿ ಆಡಳಿತ ಪಕ್ಷವು 10 ದಿನಗಳಲ್ಲಿ ಈ ಮೊತ್ತ ಪಾವತಿಸುವಂತೆ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (DIP) ನೋಟಿಸ್‌ನಲ್ಲಿ ತಾಕೀತು ಮಾಡಿದೆ. 163,61,88,265 ರೂ. ಮೊತ್ತ ಠೇವಣಿ ಇಡುವ ಮೂಲಕ ಹಣ ಮರುಪಾವತಿಸಲು ಅಂತಿಮ ಅವಕಾಶ ನೀಡಿದೆ. ಇದನ್ನೂ ಓದಿ: ಕುಡಿದ ನಶೆಯಲ್ಲಿ ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ

    ಒಂದು ವೇಳೆ ಎಎಪಿ ಸಂಚಾಲಕರು ಠೇವಣಿ ಇಡಲು ವಿಫಲವಾದಲ್ಲಿ ಕಾನೂನಿನ ಅನ್ವಯ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಜೊತೆಗೆ ನಿರ್ದಿಷ್ಟ ಕಾಲಮಿತಿಯಲ್ಲೇ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್‌ ಅನುಮತಿ

    ದೆಹಲಿ ರಾಜ್ಯಪಾಲ ವಿನಯ್ ಕುಮಾರ್ ಸಕ್ಸೇನಾ (Vinai Kumar Saxena), ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಎಎಪಿ ಪಕ್ಷವು ಸರ್ಕಾರಿ ಜಾಹೀರಾತುಗಳ ಸೋಗಿನಲ್ಲಿ ರಾಜಕೀಯ ಜಾಹೀರಾತುಗಳನ್ನ ಪ್ರಚಾರ ಮಾಡ್ತಿದೆ ಎಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.

    ಆದ್ರೆ ಎಎಪಿ ಈ ರೀತಿಯ ಆದೇಶಗಳನ್ನು ಹೊರಡಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ. ರಾಜ್ಯಪಾಲರ ನಿರ್ದೇಶನಗಳು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ

    CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ

    ದೆಹಲಿ: ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ (Sukesh Chandrashekhar) ನನ್ನ ಮೇಲೆ ಜೈಲಿನಲ್ಲಿ CRPF ಹಲ್ಲೆ ನಡೆಸಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾಗೆ (Lieutenant Governor Vinai Kumar Saxena) ಪತ್ರ ಬರೆದು ಎಎಪಿ (AAP) ಸಚಿವರ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾನೆ.

    215 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ನಡುವಿನ ಪ್ರಕರಣಕ್ಕೆ ನಾನಾ ರೀತಿಯ ತಿರುವುಗಳು ಸಿಗುತ್ತಿವೆ. ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಬರೆದಿರುವ ಪತ್ರದಲ್ಲಿ, ಜೈಲು ಆಡಳಿತದಿಂದ ನಿರಂತರ ಬೆದರಿಕೆ ಮತ್ತು ಒತ್ತಡ ಹಾಕಲಾಗುತ್ತಿದೆ. ಎಎಪಿ ನಾಯಕರ ವಿರುದ್ಧ ನೀಡಿರುವ ಕೇಸ್‌ ವಾಪಸ್‌ ತೆಗೆದುಕೊಳ್ಳುವಂತೆ ಒತ್ತಡವಿದೆ. ಜೈಲಿನಲ್ಲಿ ನನ್ನ ಮೇಲೆ ಹಲ್ಲೆ ನಡೆದಿದೆ. ಪಂಜಾಬ್ ಮತ್ತು ಗೋವಾ ಚುನಾವಣೆ ಸಂದರ್ಭದಲ್ಲಿ ಹಣ ನೀಡುವಂತೆ ಆಮ್ ಆದ್ಮಿ ಪಕ್ಷದ ಸತ್ಯೇಂದರ್ ಜೈನ್ (Satyendar Jain) ನನ್ನನ್ನು ಕೇಳಿದ್ದರು. ಹೀಗಾಗಿ ಕಾನೂನಿನಂತೆ ನಡೆಯಲು ನಿರ್ಧರಿಸಿದ್ದೇನೆ. ಯಾರ ಸಹಾಯವನ್ನು ಪಡೆಯುವುದಿಲ್ಲ. ನನ್ನ ಕೇಸ್ ನಿರ್ವಹಿಸುವ ಸಾಮರ್ಥ್ಯ ನನಗಿದ್ದು ಅಮಾಯಕ ಎಂದು ಸಾಬೀತುಪಡಿಸುತ್ತೇನೆ. ನನ್ನ ಕೇಸ್‍ಗೆ ಸಂಬಂಧಿಸಿದ ಎಲ್ಲಾ ಮೂಲಗಳನ್ನು ಹೊಂದಿದ್ದೇನೆ. ಯಾರ ಸಹಾಯವೂ ಬೇಡ ಎಂದು ಮಾಂಡೊಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ತಿಳಿಸಿದ್ದಾನೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್‍ಗೆ ಮತ್ತೆ ಆಘಾತ – ಝಲೋದ್ ಭವೇಶ್ ಕಟಾರಾ ರಾಜೀನಾಮೆ

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಸತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿದ ಹಲವು ವೈಯಕ್ತಿಕ ವಿಚಾರಗಳು ನನಗೆ ಗೊತ್ತು ಎಂದು ಬೆದರಿಕೆ ಹಾಕಿರುವ ಚಂದ್ರಶೇಖರ್, ನಾನು ಅವರ ವೈಯಕ್ತಿಕ ವಿಚಾರಗಳನ್ನು ಬಿಚ್ಚಿಟ್ಟರೆ ದೇಶವನ್ನೇ ಅಲುಗಾಡಿಸುವಂತಹ ಸ್ಫೋಟಕ ಸತ್ಯವದು. ಕೇಜ್ರಿವಾಲ್ ಅವರೇ, ನೀವು ಮತ್ತು ನಿಮ್ಮ ಸಹಚರರು ಹೇಳುತ್ತಿರುವಂತೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಂದೆ ತಾನು ಪ್ರಸ್ತಾಪಿಸಿರುವ ಯಾವುದೇ ವಿಷಯ ಸುಳ್ಳಾದರೆ ತಾನು ನೇಣಿಗೇರಲು ಸಿದ್ಧನಿದ್ದೇನೆ. ಆದರೆ, ಒಂದು ವೇಳೆ ದೂರು ಸಾಬೀತಾದರೆ, ನೀವು ರಾಜೀನಾಮೆ ನೀಡುತ್ತೀರಾ? ರಾಜಕೀಯದಿಂದ ನಿವೃತ್ತಿ ಹೊಂದುವಿರಾ ಎಂದು ಪ್ರಶ್ನೆ ಹಾಕಿದ್ದಾನೆ. ಇದನ್ನೂ ಓದಿ: ಜಾಕ್ವೆಲಿನ್‌ಗೆ ಕಿಸ್ ಮಾಡುತ್ತಿರುವ ಸುಕೇಶ್ ಚಂದ್ರಶೇಖರ್ – ರೋಮ್ಯಾಂಟಿಕ್ ಫೋಟೋ ವೈರಲ್

    ಗೋವಾ ಮತ್ತು ಪಂಜಾಬ್ ಚುನಾವಣೆಗಾಗಿ ಸತ್ಯೇಂದರ್ ಜೈನ್ ನನ್ನ ಬಳಿ ಹಣ ಕೇಳಿದರು. ಜೈಲಿನ ಸಿಬ್ಬಂದಿ ಮೂಲಕ ನಿರಂತರ ಒತ್ತಡ, ಬೆದರಿಕೆಗಳಿತ್ತು. ಪಂಜಾಬ್ ಮತ್ತು ಗೋವಾ ಚುನಾವಣೆಯ ಸಂದರ್ಭದಲ್ಲಿ ನಾನು ತನಿಖೆಗೆ ಒಳಪಡುತ್ತಿದ್ದರೂ ಧೈರ್ಯದಿಂದ ಹಣ ನೀಡುವಂತೆ ಜೈನ್ ನನ್ನನ್ನು ಕೇಳಿದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಆರೋಪವನ್ನು ಎಎಪಿ ತಿರಸ್ಕರಿಸಿದ್ದು, ಸುಳ್ಳು ಹೇಳುತ್ತಿದ್ದಾನೆ ಎಂದು ಪ್ರತ್ಯಾರೋಪ ಮಾಡಿದೆ.

    Live Tv
    [brid partner=56869869 player=32851 video=960834 autoplay=true]